Tag: ರವಿತೇಜ

  • ‘ಮಿಸ್ಟರ್ ಬಚ್ಚನ್’ ಸೋತಿದ್ದಕ್ಕೆ 4 ಕೋಟಿ ಸಂಭಾವನೆ ಹಿಂದಿರುಗಿಸಿದ ರವಿತೇಜ

    ‘ಮಿಸ್ಟರ್ ಬಚ್ಚನ್’ ಸೋತಿದ್ದಕ್ಕೆ 4 ಕೋಟಿ ಸಂಭಾವನೆ ಹಿಂದಿರುಗಿಸಿದ ರವಿತೇಜ

    ಮಾಸ್ ಮಹಾರಾಜ ರವಿತೇಜ (Ravi Teja)  ನಟನೆಯ ‘ಮಿಸ್ಟರ್ ಬಚ್ಚನ್’ (Mr. Bachchan) ಸಿನಿಮಾ ಥಿಯೇಟರ್‌ನಲ್ಲಿ ಮಕಾಡೆ ಮಲಗಿದೆ. ಇದರಿಂದ ನಿರ್ಮಾಪಕರಿಗೂ ಭಾರೀ ನಷ್ಟವಾದ ಹಿನ್ನೆಲೆ 4 ಕೋಟಿ ರೂ. ಸಂಭಾವನೆಯನ್ನು ರವಿತೇಜ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ:ಠಾಣೆಯಲ್ಲಿ ಕೊಲೆ ಆರೋಪಿ ಪವಿತ್ರಾಗೌಡ ಕಣ್ಣೀರು – ಫೋಟೋ ರಿವೀಲ್

    ರವಿತೇಜ ನಟನೆಯ ‘ಮಿಸ್ಟರ್ ಬಚ್ಚನ್’ ಚಿತ್ರವನ್ನು ಹರೀಶ್ ಶಂಕರ್ ನಿದೇಶನ ಮಾಡಿದ್ದು, ಆ.15ರಂದು ಚಿತ್ರಮಂದಿರಕ್ಕೆ ಲಗ್ಗೆ ಇಟ್ಟಿತ್ತು. 85 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರ ಅರ್ಧ ಭಾಗದಷ್ಟು ಕಲೆಕ್ಷನ್ ಮಾಡೋದ್ರಲ್ಲಿ ಸೋತಿದೆ. ಇದರಿಂದ ನಿರ್ಮಾಣ ಸಂಸ್ಥೆ ನಷ್ಟ ಅನುಭವಿಸಿದೆ. ಈ ಹಿನ್ನೆಲೆ ತಾವು ಪಡೆದುಕೊಂಡ ಸಂಭಾವನೆಯಲ್ಲಿ 4 ಕೋಟಿ ರೂ. ನಟ ರವಿತೇಜ ಹಿಂದಿರುಗಿಸಿದ್ರೆ, ಇತ್ತ ನಿರ್ದೇಶಕ ಹರೀಶ್ ಕೂಡ 2 ಕೋಟಿ ರೂ.ವನ್ನು ನಿರ್ಮಾಪಕರಿಗೆ ನೀಡಿದ್ದಾರೆ.

    ಸಿನಿಮಾ ಸೋಲಿನ ಹೊರೆಯನ್ನು ನಿರ್ಮಾಪಕರಿಗೆ ಕಮ್ಮಿ ಮಾಡಲು ರವಿತೇಜ ಮತ್ತು ನಿರ್ದೇಶಕ ಹರೀಶ್ ಸಂಭಾವನೆಯನ್ನು ಹಿಂದಿರುಗಿಸುವ ಮೂಲಕ ಸಾಥ್ ನೀಡಿದ್ದಾರೆ. ಇದೀಗ ಇಬ್ಬರ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಅಂದಹಾಗೆ, ರಾಮ್ ಪೋತಿನೇನಿ ನಟನೆಯ `ಇಸ್ಮಾರ್ಟ್ ಶಂಕರ್’ ಮುಂದೆ ‘ಮಿಸ್ಟರ್ ಬಚ್ಚನ್’ ಚಿತ್ರ ಆ.15ರಂದು ರಿಲೀಸ್ ಆಗಿತ್ತು. ರವಿತೇಜಗೆ ನಾಯಕಿಯಾಗಿ ಭಾಗ್ಯಶ್ರೀ ನಟಿಸಿದ್ದರು. ಇದು ಬಾಲಿವುಡ್‌ನ ‘ರೈಡ್’ ಸಿನಿಮಾದ ರಿಮೇಕ್ ಆಗಿದೆ.

  • ಶೂಟಿಂಗ್ ಸೆಟ್‌ನಲ್ಲಿ ಅವಘಡ- ರವಿತೇಜಗೆ ಕೈಗೆ ಗಾಯ

    ಶೂಟಿಂಗ್ ಸೆಟ್‌ನಲ್ಲಿ ಅವಘಡ- ರವಿತೇಜಗೆ ಕೈಗೆ ಗಾಯ

    ತೆಲುಗಿನ ನಟ ರವಿತೇಜಗೆ (Ravi Teja) ಶೂಟಿಂಗ್ ಸೆಟ್‌ನಲ್ಲಿ ಬಲಗೈಗೆ ಗಾಯವಾದ ಹಿನ್ನೆಲೆ ನಿನ್ನೆ (ಆ.23) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸೂಕ್ತ ಚಿಕಿತ್ಸೆಯ ಬಳಿಕ ನಟ ಡಿಸ್ಚಾರ್ಜ್‌ ಆಗಿದ್ದಾರೆ. ತಾವು ಆರೋಗ್ಯವಾಗಿ ಇರೋದಾಗಿ ಎಂದು ರವಿತೇಜ ಸೋಶಿಯಲ್‌ ಮೀಡಿಯಾದಲ್ಲಿ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ:ಹುಟ್ಟೂರಿನಲ್ಲಿ ಮೀನಿಗೆ ಗಾಳ ಹಾಕುತ್ತಿರುವ ರಿಷಬ್‌ ಶೆಟ್ಟಿ ಫೋಟೋ ವೈರಲ್

    ಶಸ್ತ್ರಚಿಕಿತ್ಸೆಯ ನಂತರ ಯಶಸ್ವಿಯಾಗಿ ಡಿಸ್ಚಾರ್ಜ್ ಆಗಿದ್ದು, ಉತ್ತಮ ಸ್ಥಿತಿಯಲ್ಲಿದೆ. ನಿಮ್ಮೆಲ್ಲರ ಆತ್ಮೀಯ ಆಶೀರ್ವಾದ ಮತ್ತು ಬೆಂಬಲಕ್ಕೆ ಕೃತಜ್ಞತೆಗಳು. ಶೀಘ್ರದಲ್ಲೇ ಸೆಟ್‌ಗೆ ಮರಳಲು ಉತ್ಸುಕನಾಗಿದ್ದೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ರವಿತೇಜ ತಿಳಿಸಿದ್ದಾರೆ.

    ಅಂದಹಾಗೆ, ನಿನ್ನೆ (ಆ.23) ಗಾಯವಾಗಿದ್ರೂ ಲೆಕ್ಕಿಸದೇ ಶೂಟಿಂಗ್‌ನಲ್ಲಿ ರವಿತೇಜ ಭಾಗಿಯಾದರು. ಬಳಿಕ ಬಲಗೈಗೆ ಬಿದ್ದ ಪೆಟ್ಟಿನ ನೋವು ಹೆಚ್ಚಾದ ಹಿನ್ನೆಲೆ ರವಿತೇಜರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕೈಗೆ ಶಸ್ತ್ರಚಿಕಿತ್ಸೆ ಮಾಡಿದ ನಂತರ 6 ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ರವಿತೇಜಗೆ ವೈದ್ಯರು ಸೂಚಿಸಿದ್ದಾರೆ. ಸದ್ಯ ನಟನ ಹೆಲ್ತ್ ಅಪ್‌ಡೇಟ್ ತಿಳಿದು ಅಭಿಮಾನಿಗಳು ನಿರಾಳವಾಗಿದ್ದಾರೆ.

  • ರವಿತೇಜಗೆ ಶ್ರೀಲೀಲಾ ಹೀರೋಯಿನ್- ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ

    ರವಿತೇಜಗೆ ಶ್ರೀಲೀಲಾ ಹೀರೋಯಿನ್- ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ

    ನ್ನಡದ ನಟಿ ಶ್ರೀಲೀಲಾ (Sreeleela) ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಗ್ಯಾಪ್‌ನ ನಂತರ ಮತ್ತೆ ನಟಿಸಲು ‘ಕಿಸ್‌’ ನಟಿ ಸಜ್ಜಾಗಿದ್ದಾರೆ. ಇದೀಗ ರವಿತೇಜ (Ravi Teja) ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿದ್ದಾರೆ. ಈಗ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಜರುಗಿದೆ.

    ‘ಧಮಾಕ’ ನಂತರ ಮತ್ತೆ ಸ್ಟಾರ್ ನಟ ರವಿತೇಜಗೆ ಶ್ರೀಲೀಲಾ ಜೋಡಿಯಾಗಿದ್ದಾರೆ. ಮತ್ತೊಂದು ಹೊಸ ಪ್ರೇಮಕಥೆಯಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಪೂಜೆ ಮಾಡುವ ಮೂಲಕ ಸಿನಿಮಾಗೆ ರವಿತೇಜ ಟೀಮ್ ಚಾಲನೆ ನೀಡಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ರವಿತೇಜ ಜೊತೆ ಶ್ರೀಲೀಲಾ ಕೂಡ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಯಾರು?

    ಜೂನ್ 11ರಿಂದಲೇ ರವಿತೇಜ 75ನೇ (Raviteja 75th) ಸಿನಿಮಾದ ಶೂಟಿಂಗ್ ಶುರುವಾಗಿದ್ದು, ಮುಂದಿನ ವರ್ಷ ಸಂಕ್ರಾಂತಿಗೆ ಸಿನಿಮಾ ರಿಲೀಸ್ ಆಗಲಿದೆ.

    ಅಂದಹಾಗೆ, ತೆಲುಗಿನ ರವಿತೇಜ ಪ್ರಾಜೆಕ್ಟ್ ಜೊತೆಗೆ ಬಾಲಿವುಡ್‌ಗೂ ನಟಿ ಎಂಟ್ರಿ ಕೊಡ್ತಿದ್ದಾರೆ. ಸೈಫ್ ಅಲಿ ಖಾನ್ ಪುತ್ರನಿಗೆ ಶ್ರೀಲೀಲಾ ನಾಯಕಿಯಾಗಿದ್ದಾರೆ.

  • ತೆಲುಗಿನಲ್ಲಿ ಮತ್ತೆ ಶ್ರೀಲೀಲಾ ಧಮಾಕ- ಸ್ಟಾರ್ ನಟನಿಗೆ ‘ಕಿಸ್’ ಬೆಡಗಿ ಜೋಡಿ

    ತೆಲುಗಿನಲ್ಲಿ ಮತ್ತೆ ಶ್ರೀಲೀಲಾ ಧಮಾಕ- ಸ್ಟಾರ್ ನಟನಿಗೆ ‘ಕಿಸ್’ ಬೆಡಗಿ ಜೋಡಿ

    ಬೆಂಗಳೂರಿನ ಬೆಡಗಿ ಶ್ರೀಲೀಲಾ (Sreeleela) ಈಗ ಸೆಕೆಂಡ್ ಇನ್ಸಿಂಗ್ಸ್ ಶುರು ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳು ಮಕಾಡೆ ಮಲಗಿದ ಬೆನ್ನಲ್ಲೇ ನಟಿ ಸೈಲೆಂಟ್ ಆಗಿದ್ದರು. ಈಗ ಮತ್ತೆ ನಟಿ ಸ್ಟಾರ್ ನಟನಿಗೆ ನಾಯಕಿಯಾಗುವ ಮೂಲಕ ಫ್ಯಾನ್ಸ್‌ಗೆ ಶ್ರೀಲೀಲಾ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ‘ಪೆಳ್ಳಿ ಸಂದಡಿ’ ಚಿತ್ರದಿಂದ ತೆಲುಗಿನಲ್ಲಿ ಸಿನಿಮಾ ಕೆರಿಯರ್ ಶುರು ಮಾಡಿದ ಶ್ರೀಲೀಲಾ. ‘ಧಮಾಕ’ (Dhamaka) ಚಿತ್ರದ ಮೂಲಕ ಸಕ್ಸಸ್ ಕಂಡರು. ರವಿತೇಜ (Raviteja) ಮತ್ತು ಕಿಸ್ ನಟಿಯ ಜೋಡಿ ಅಭಿಮಾನಿಗಳಿಗೆ ಹಿಡಿಸಿತ್ತು. ಈಗ ಇದೇ ಜೋಡಿ 2ನೇ ಬಾರಿ ಒಂದಾಗುತ್ತಿದ್ದಾರೆ. ಇದನ್ನೂ ಓದಿ:ಮಲಯಾಳಂ ಖ್ಯಾತ ನಿರ್ದೇಶಕನ ವಿರುದ್ಧ ಅತ್ಯಾಚಾರ ದೂರು ದಾಖಲು

    ಹೊಸ ಸಿನಿಮಾಗಾಗಿ ರವಿತೇಜ ಜೊತೆ ನಟಿ ಕೈಜೋಡಿಸಿದ್ದಾರೆ. ಗೋಪಿಚಂದ್ ಮಲಿನೇನಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಶ್ರೀಲೀಲಾ ಕೂಡ ಕಥೆ ಕೇಳಿ ಓಕೆ ಎಂದಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ.

    ‘ಗುಂಟೂರು ಖಾರಂ’ ಸಿನಿಮಾ ಬಳಿಕ ನಟಿ ಓದಿನತ್ತ ಗಮನ ನೀಡಿದ್ದರು. ಈಗ ಗ್ಯಾಪ್‌ ನ ನಂತರ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಮತ್ತೆ ಯಶಸ್ಸು ನಟಿ ಪಾಲಾಗುತ್ತಾ ಕಾದುನೋಡಬೇಕಿದೆ.

  • ರವಿತೇಜ ನಟನೆಯ ‘ಈಗಲ್’ ಚಿತ್ರದ ಟೀಸರ್ ರಿಲೀಸ್

    ರವಿತೇಜ ನಟನೆಯ ‘ಈಗಲ್’ ಚಿತ್ರದ ಟೀಸರ್ ರಿಲೀಸ್

    ಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಛಾಯಾಗ್ರಹಕರಾಗಿದ್ದ ಕಾರ್ತಿಕ್ ಕಟ್ಟಿಮನೆ ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳ್ತಿರುವ ‘ಈಗಲ್’ ಸಿನಿಮಾದ ಸಣ್ಣ ಗ್ಲಿಂಪ್ಸ್ ಭಾರೀ ಸದ್ದು ಮಾಡಿತ್ತು. ಇದೀಗ ಈಗಲ್ ಟೀಸರ್ ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡ್ತಿದೆ.

    ಫಸ್ಟ್ ಗ್ಲಿಂಪ್ಸ್ ನಲ್ಲಿ ರವಿತೇಜ ಮುಖವನ್ನು ರಿವೀಲ್ ಮಾಡದೇ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಚಿತ್ರತಂಡ ಕುತೂಹಲಕ್ಕೆ ಬ್ರೇಕ್ ಹಾಕಿದೆ. ಮಾಸ್ ಡೈಲಾಗ್ ಹೊಡೆಯುತ್ತಾ ರಗಡ್ ಲುಕ್ ನಲ್ಲಿ ಮಾಸ್ ಮಹಾರಾಜ ಎಂಟ್ರಿ ಕೊಟ್ಟಿದ್ದು, ಅನುಪಮಾ ಪರಮೇಶ್ವರನ್, ನವದೀಪ್, ಮಧುಬಾಲ, ಕಾವ್ಯ ಥಾಪರ್ ಟೀಸರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

    ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈಗಲ್ ಸಿನಿಮಾಗೆ ಕಾರ್ತಿಕ್ ಗಟ್ಟಿಮನ್ನಿ ನಿರ್ದೇಶನದ ಜೊತೆಗೆ ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ‌. ಮಣಿಬಾಬು ಕರಣಂ ಸಂಭಾಷಣೆ, ದಾವ್ಜಂಡ್ ಟ್ಯೂನ್ ಚಿತ್ರಕ್ಕಿದೆ. ಹೈದ್ರಾಬಾದ್ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2024ರ ಜನವರಿ 13 ಸಂಕ್ರಾಂತಿ ಹಬ್ಬ ಸಿನಿಮಾ ತೆರೆಗೆ ಬರಲಿದೆ.

  • ಶ್ರೀಲೀಲಾ ಔಟ್‌, ರವಿತೇಜಗೆ ರಶ್ಮಿಕಾ ಮಂದಣ್ಣ ನಾಯಕಿ

    ಶ್ರೀಲೀಲಾ ಔಟ್‌, ರವಿತೇಜಗೆ ರಶ್ಮಿಕಾ ಮಂದಣ್ಣ ನಾಯಕಿ

    ಟಾಲಿವುಡ್‌ನಲ್ಲಿ (Tollywood) ತೆಲುಗು ನಟಿಮಣಿಯರಿಗಿಂತ ಕನ್ನಡದ ನಟಿಯರ ದರ್ಬಾರ್ ಜೋರಾಗಿದೆ. ಅದರಲ್ಲೂ ರಶ್ಮಿಕಾ ಮಂದಣ್ಣ(Rashmika Mandanna), ಶ್ರೀಲೀಲಾ ನಡುವೆ ಸಖತ್ ಪೈಪೋಟಿಯಿದೆ. ಇದೀಗ ಶ್ರೀಲೀಲಾ (Sreeleela) ನಾಯಕಿಯಾಗಬೇಕಿದ್ದ ಚಿತ್ರಕ್ಕೆ ರಶ್ಮಿಕಾ ಆಯ್ಕೆಯಾಗಿದ್ದಾರೆ. ಶ್ರೀಲೀಲಾ ಬದಲು ರಶ್ಮಿಕಾ ಮಂದಣ್ಣಗೆ ಚಿತ್ರತಂಡ ಮಣೆ ಹಾಕಿದೆ.

    ಮಾಸ್ ಮಹರಾಜ ರವಿತೇಜ ನಟನೆಯ ಹೊಸ ಸಿನಿಮಾಗೆ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡ್ತಿದ್ದಾರೆ. ಈ ಚಿತ್ರಕ್ಕೆ ಮೊದಲು ಆಯ್ಕೆಯಾಗಿದ್ದು, ಶ್ರೀಲೀಲಾ. ಈ ಹಿಂದೆ ಧಮಾಕಾ ಚಿತ್ರದಲ್ಲಿ ರವಿತೇಜಗೆ (Ravi Teja) ನಾಯಕಿಯಾಗಿ ಶ್ರೀಲೀಲಾ ಗಮನ ಸೆಳೆದಿದ್ದರು. ಹಾಗಾಗಿ ಈ ಸಿನಿಮಾಗೂ ಇದೇ ಜೋಡಿಯನ್ನೇ ಮತ್ತೆ ಒಂದಾಗಲಿದೆ ಎನ್ನಲಾಗಿತ್ತು. ಆದರೆ ಈಗ ಶ್ರೀಲೀಲಾ ಬದಲು ರಶ್ಮಿಕಾ ಮಂದಣ್ಣಗೆ ಆ ಚಾನ್ಸ್ ಸಿಕ್ಕಿದೆ. ಇದನ್ನೂ ಓದಿ:ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಬಳುಕುವ ಬಳ್ಳಿಯಂತೆ ಮಿಂಚಿದ ಶ್ರೀಲೀಲಾ

    ಹೊಸ ಸಿನಿಮಾಗೆ ಹೊಸ ಜೋಡಿ ಇರಲಿ. ರವಿತೇಜ (Ravi Teja) ಜೊತೆ ರಶ್ಮಿಕಾ ನಟಿಸಿದ್ರೆ ಚೆಂದ ಎಂದೆನಿಸಿ ಪುಷ್ಪ ಬ್ಯೂಟಿಯನ್ನ ತಂಡ ಫೈನಲ್ ಮಾಡಿದೆ. ನಟಿಯ ಸಂಭಾವನೆ ಎಷ್ಟೇ ದುಬಾರಿ ಆದರೂ ಓಕೆ ಎಂದು ತಂಡ ನಿರ್ಧರಿಸಿದೆ. ಈ ಚಿತ್ರದ ಕಥೆ ಕೇಳಿ ಶ್ರೀವಲ್ಲಿ ಕೂಡ ಓಕೆ ಎಂದಿದ್ದಾರಂತೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.

    ಈ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ವರಲಕ್ಷ್ಮಿ ಶರತ್ ಕುಮಾರ್ ಕೂಡ ನಟಿಸುತ್ತಿದ್ದಾರೆ. ಸದ್ಯ ರವಿ ತೇಜ, ರಶ್ಮಿಕಾ, ಗೋಪಿಚಂದ್ ಮಲಿನೇನಿ ಕಾಂಬೋದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾ ಮೂಡಿ ಬರಲಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೈಗರ್ ನಾಗೇಶ್ವರ್ ರಾವ್ ಅಂಗಳಕ್ಕೆ ಅನುಪಮ್ ಖೇರ್ ಎಂಟ್ರಿ

    ಟೈಗರ್ ನಾಗೇಶ್ವರ್ ರಾವ್ ಅಂಗಳಕ್ಕೆ ಅನುಪಮ್ ಖೇರ್ ಎಂಟ್ರಿ

    ತೆಲುಗಿನ ಮಾಸ್ ಮಹಾರಾಜ ರವಿತೇಜ (Raviteja) ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ‘ಟೈಗರ್ ನಾಗೇಶ್ವರ್ ರಾವ್’ (Tiger Nageshwar Rao) ಅಂಗಳಕ್ಕೆ ಬಾಲಿವುಡ್ ದಿಗ್ಗಜ ಅನುಪಮ್ ಖೇರ್ ಎಂಟ್ರಿಯಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಅನುಪಮ್ ಖೇರ್ (Anupam Kher) ಅವರ ಪಾತ್ರ ಹಾಗೂ ಲುಕ್ (First Look) ಪರಿಚಯಿಸಿದೆ. ಗುಪ್ತಚರ ಇಲಾಖೆಯ ಅಧಿಕಾರಿ ರಾಘವೇಂದ್ರ ರಜಪುತ್ ಪಾತ್ರದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದು, ಇದೇ 17ರಿಂದ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದಾರೆ.

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

    ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರವಿತೇಜ ಹೊಸ ಸಿನಿಮಾಗೆ ‘ಈಗಲ್’ ಟೈಟಲ್ ಫಿಕ್ಸ್

    ರವಿತೇಜ ಹೊಸ ಸಿನಿಮಾಗೆ ‘ಈಗಲ್’ ಟೈಟಲ್ ಫಿಕ್ಸ್

    ತೆಲುಗಿನ ಮಾಸ್ ಮಹಾರಾಜ ರವಿತೇಜ (Raviteja)  ನಟನೆಯ,‌ ಪೀಪಲ್ ಮೀಡಿಯಾ ಫ್ಯಾಕ್ಟರಿ ನಡಿ ಟಿಜೆ ವಿಶ್ವ ಪ್ರಸಾದ್‌ ‌ನಿರ್ಮಾಣದ ಧಮಾಕ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ರವಿತೇಜ ಸಿನಿಕರಿಯರ್ ನ‌ ಬಿಗೆಸ್ಟ್ ಹಿಟ್ ಎನಿಸಿಕೊಂಡಿತ್ತು. ಧಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿದ್ದಾರೆ.

    ಛಾಯಾಗ್ರಹಕರಾಗಿದ್ದ ಕಾರ್ತಿಕ್ ಕಟ್ಟಿಮನೆ (Karthik Kattimane) ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳಿರುವ ಸಿನಿಮಾಗೆ ‘ಈಗಲ್’ (Eagle) ಎಂಬ ಕ್ಯಾಚಿ ಟೈಟಲ್ (Title) ಇಡಲಾಗಿದೆ. ಸಣ್ಣ ಗ್ಲಿಂಪ್ಸ್ ಮೂಲಕ ಈಗಲ್ ಲೋಕವನ್ನು ಪರಿಚಯ ಮಾಡಿಕೊಡಲಾಗಿದೆ. ರವಿತೇಜ ಮೋಸ್ಟ್ ವಾಂಟೆಡ್‌ ಪೇಂಟರ್ ಆಗಿ, ಹತ್ತಿ ಕೃಷಿನಾಗಿ, ನಾನಾ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾಗಶಃ ಮಾತ್ರ ಅವರ ಮುಖವನ್ನು ಚಿತ್ರತಂಡ ತೋರಿಸಿ ಸಸ್ಪೆನ್ಸ್ ಕಾಯ್ದುಕೊಂಡಿದೆ.

    ಅನುಪಮಾ ಪರಮೇಶ್ವರನ್ (Anupama Parameswaran), ನವದೀಪ್, ಮಧುಬಾಲ, ಕಾವ್ಯ ಥಾಪರ್ ಟೈಟಲ್ ಝಲಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.  ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ಈಗಲ್ ಸಿನಿಮಾಗೆ ಕಾರ್ತಿಕ್ ಗಟ್ಟಿಮನ್ನಿ ನಿರ್ದೇಶನದ ಜೊತೆಗೆ ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ‌. ಮಣಿಬಾಬು ಕರಣಂ ಸಂಭಾಷಣೆ, ದಾವ್ಜಂಡ್ ಟ್ಯೂನ್ ಚಿತ್ರಕ್ಕಿದೆ. ಹೈದ್ರಾಬಾದ್ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, 2024ರ ಸಂಕ್ರಾಂತಿ ಹಬ್ಬ ಸಿನಿಮಾ ತೆರೆಗೆ ಬರಲಿದೆ.

  • ರಾಜಮುಂಡ್ರಿಯ ಹ್ಯಾವ್ಲಾಕ್ ಸೇತುವೆ ಮೇಲೆ ರವಿತೇಜ್ ಸಿನಿಮಾದ ಫಸ್ಟ್ ಲುಕ್ ಲಾಂಚ್

    ರಾಜಮುಂಡ್ರಿಯ ಹ್ಯಾವ್ಲಾಕ್ ಸೇತುವೆ ಮೇಲೆ ರವಿತೇಜ್ ಸಿನಿಮಾದ ಫಸ್ಟ್ ಲುಕ್ ಲಾಂಚ್

    ತೆಲುಗಿನ ಮಾಸ್ ಮಹಾರಾಜ ರವಿತೇಜ (Raviteja)  ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ (Tiger Nageshwar Rao). ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ (Rajahmundry) ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ (Havelock) ಸೇತುವೆ ಮೇಲೆ ಇಂದು ಫಸ್ಟ್ ಲುಕ್ (First Look) ಪೋಸ್ಟರ್ ಅನಾವರಣ ಮಾಡಲಾಗಿದೆ.

    ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ ಲುಕ್,  ಗಾಯವಾದ ಮುಖ, ಮಾಸ್ ಅವತಾರದಲ್ಲಿ ಮಾಸ್ ಮಹಾರಾಜ ಧಗಧಗಿಸಿದ್ದಾರೆ. ಪಂಚ ಭಾಷೆಯಲ್ಲಿ ರಿಲೀಸ್ ಆಗಿರುವ ಕನ್ನಡದ ಫಸ್ಟ್ ಲುಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿಯಾಗಿದ್ದಾರೆ. ಭಾರತದ ಕುಖ್ಯಾತ ಕಳ್ಳ ಎನಿಸಿಕೊಂಡಿರುವ ಟೈಗರ್ ನಾಗೇಶ್ವರ್ ರಾವ್ ಪ್ರಪಂಚವನ್ನು ಶಿವಣ್ಣ ಪರಿಚಯಿಸಿದ್ದಾರೆ. ಇದನ್ನೂ ಓದಿ:ಹೃದಯಾಘಾತದಿಂದ ಫೇಮಸ್ ನಟ ನಿತೇಶ್ ಪಾಂಡೆ ನಿಧನ

    ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ವೆಂಕಟೇಶ್ ದಗ್ಗುಭಾಟಿ, ಬಾಲಿವುಡ್ ನಲ್ಲಿ ಜಾನ್ ಅಬ್ರಾಂ, ತಮಿಳಿನಲ್ಲಿ ಕಾರ್ತಿ ಹಾಗೂ ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ಗೆ ಧ್ವನಿಯಾಗಿದ್ದಾರೆ. ಜಿಂಕೆಯನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ..ಹುಲಿಗಳನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ ಎಂಬ ಪವರ್ ಫುಲ್ ಡೈಲಾಗ್ ಮೂಲಕ ರವಿತೇಜ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

    ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

  • ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ (Raviteja)ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ (Release) ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ (Tiger Nageswara Rao) ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ.

    ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.