Tag: ರವಿಬೆಳಗೆರೆ

  • ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ: ಯೋಗರಾಜ್ ಭಟ್

    ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ: ಯೋಗರಾಜ್ ಭಟ್

    – ಇದು ಸಾವಲ್ಲ, ಅವ್ರ ಮರುಹುಟ್ಟು

    ಬೆಂಗಳೂರು: ನಿನ್ನೆ ಮೊನ್ನೆವರೆಗೂ ಫೋನ್‍ನಲ್ಲಿ ರವಿ ಬೆಳಗೆರೆಯೊಂದಿಗೆ ನನ್ನ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದೆ. ಅವರಿಗೆ ಅನಾರೋಗ್ಯ ಕಾಡುತ್ತಲೇ ಇತ್ತು. ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ ಅನ್ನಿಸುತ್ತಿದೆ ಎಂದು ನಿದೇರ್ಶಕ ಯೋಗರಾಜ್ ಭಟ್ ಸಂತಾಸ ಸೂಚಿಸಿದ್ದಾರೆ.

    ರವಿಬೆಳಗೆರೆಯ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯೋಗರಾಜ್ ಭಟ್, ಕನ್ನಡ ಅಭಿಮಾನಿಯಾಗಿ ಇದು ರವಿ ಬೆಳಗೆರೆ ಅವರ ಸಾವಲ್ಲ, ಅವರ ಹುಟ್ಟು. ಅವರ ನೆನಪು, ಬರಹಗಳೊಂದಿಗೆ ನಮ್ಮೊಂದಿಗೆ ಇದ್ದಾರೆ. ಅವರು ಸಂಗೀತ ಪ್ರಿಯರು, ನನ್ನದು ಅವರದ್ದು ಅದ್ಭುತ ಸ್ನೇಹ. ನನ್ನ ಸಿನಿಮಾ, ಹಾಡುಳ ಬಗ್ಗೆ ಸಾಕಷ್ಟು ಮಾತನಾಡುತ್ತಿದ್ದರು. ತುಂಬು ಜೀವನವನ್ನು ನಡೆಸಿದ್ದು, ಧೈರ್ಯಕ್ಕೆ ಮತ್ತೊಂದು ಹೆಸರು. ಧೀಮಂತ ಪತ್ರಕರ್ತ ಎಂದರು.

    ರವಿಬೆಳಗೆರೆ ಅವರು ನಾನು ಬಯಲುಸೀಮೆ ಶೈಲಿಯಲ್ಲಿ ಮಾತನಾಡುತ್ತಿದ್ದೆವು. ಹಿಂದಿ, ಉರ್ದು ಗೊತ್ತಿದ್ದರಿಂದ ನಮ್ಮೊಂದಿಗೆ ಈ ಬಗ್ಗೆಯೂ ಮಾತನಾಡುತ್ತಿದ್ದೆವು. ಅಷ್ಟು ದೊಡ್ಡ ಸಂಗೀತ ಅಭಿಮಾನಿಗೆ ನನ್ನ ಹಾಡು ಇಷ್ಟ ಆಗಿದ್ದು ಆನಂದದ ವಿಷಯ. ಎಲ್ಲಾ ಕಲೆಗಳನ್ನು ಮೋಹಿಸಿ ಬದುಕಿದ ಜೀವ ಅವರದ್ದು. ಕಳೆದ ವರ್ಷ ಕರಾವಳಿಯಲ್ಲಿ ನನಗೆ ಪ್ರಶಸ್ತಿಯನ್ನು ನೀಡಿದ್ದರು. ಈಗ ಹೋಗಿ ಬನ್ನಿ ಅಂತ ಅನ್ನೋದು ಬಿಟ್ಟರೆ ಬೇರೆನಿಲ್ಲ ಎಂದು ಹೇಳಿದರು.

  • ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

    ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

    ಬೆಂಗಳೂರು: ನಾನು ನಿಮ್ಮ ಜೊತೆ ಇದ್ದೀನಿ ಕಣೋ. ನೀನು ಚೆನ್ನಾಗಿ ಬೆಳೆಯಬೇಕು ಎಂದು ಹೇಳಿದ್ದರು. ಆದರೆ ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು ಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರವಿಬೆಳಗೆರೆ ರಾತ್ರಿ ಪದ್ಮನಾಭ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 12.15ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿತ್ತು. ನಾನು ಹೋಗುವಷ್ಟರಲ್ಲಿ ಆಸ್ಪತ್ರೆಗೆ ಸಾಗಿಸಲೆಂದು ತಯಾರಾಗಿದ್ದರು. ಆದರೆ ಅದಾಗಲೇ ಅವರ ಸಾವು ಕೂಡ ಆಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

    ಅವರು ನಮ್ಮ ಜೊತೆ ಇನ್ನೂ ಬಹಳ ದಿನಗಳ ಕಾಲ ಬದುಕಿರುತ್ತಿದ್ದರು ಅಂತ ಭಾವಿಸಿದ್ವಿ. ಪ್ರಾರ್ಥನಾ ಶಾಲೆ ಮತ್ತಷ್ಟು ಎತ್ತರಕ್ಕೆ ಬೆಳಸಬೇಕು ಅನ್ನೋ ಬಹುದೊಡ್ಡ ಆಸೆ ಅವರಿಗಿತ್ತು. ಅವರಿಗೆ ಡಯಾಬಿಟಿಸ್ ಇತ್ತು, ಕಾಲುಗಳ ನೋವಿತ್ತು. ಕಳೆದ ಮೂರು ದಿನಗಳ ಹಿಂದೆಯಷ್ಟೇ ನಾನು ಅವರ ಜೊತೆ ಮಾತನಾಡಿದ್ದರು. ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ದರು ಎಂದು ತಿಳಿಸಿದರು.

    ನೀನು ಚೆನ್ನಾಗಿ ಬೆಳಯಬೇಕು ಅಂತ ಕೂಡ ಹೇಳಿದ್ದರು. ಆದರೆ ಅವರ ದಿಢೀರ್ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ. ಬೆಳಗ್ಗೆ 9 ಗಂಟೆಗೆ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುತ್ತೇವೆ. ಸಂಜೆ 4 ಗಂಟೆ ಒಳಗೆ ಬನಶಕಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

    ತನ್ನ ಬರಹದಿಂದಲೇ ಸಾಕಷ್ಟು ಮಂದಿ ಅಭಿಮಾನಿಗಳನ್ನು ಹೊಂದಿದ್ದ ರವಿ ಬೆಳಗೆರೆ ಅವರು ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಯಲ್ಲಿ ಹೃದಯಾಘಾತದಿಂದ ಅಸ್ತಂಗತರಾಗಿದ್ದಾರೆ.

  • ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ನಿಂದ ಮಧ್ಯಂತರ ರಿಲೀಫ್

    ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.

    ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಮಧ್ಯಂತರ ಜಾಮೀನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.

    ಇನ್ನು ತಮ್ಮ ವಕೀಲರ ಜೊತೆ ಕೋರ್ಟ್ ಗೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ಹಾಜರಾಗಿದ್ದರು. ಇನ್ನು ಸರ್ಕಾರಿ ವಕೀಲರು ಮುಖ್ಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯಾವಕಾಶ ಕೇಳಿದ್ದಾರೆ.

    ರವಿ ಬೆಳಗೆರೆಗೆ ಆರೋಗ್ಯ ಚೆನ್ನಾಗಿದೆ. ಹಾಗಾಗಿ ಅವರಿಗೆ ಮಧ್ಯಂತರ ಜಾಮಿನು ವಿಸ್ತರಿಸಬೇಡಿ ಅಂತ ಕೋರ್ಟ್ ನಲ್ಲಿ ಸಿಸಿಬಿ ವಕೀಲರು ವಾದ ಮಂಡಿಸಿದ್ರು. ರವಿಬೆಳಗೆರೆ ಅವರ ಆರೊಗ್ಯದ ಬಗ್ಗೆ ರಿಪೋರ್ಟ್ ಗಳು ಇದ್ದಾವೆ ಹೊರತು, ಆರೋಗ್ಯ ಸರಿಯಿಲ್ಲ ಅಂತ ಇತ್ತೀಚಿನ ಯಾವುದೇ ರಿಪೋರ್ಟ್ ಅವರ ಬಳಿ ಇಲ್ಲ. ಮಧ್ಯಂತರ ಜಾಮೀನಿಗಾಗಿ ಸುಳ್ಳು ಅನಾರೋಗ್ಯದ ಸರ್ಟಿಫಿಕೇಟ್ ಗಳನ್ನು ನೀಡುತ್ತಿದ್ದಾರೆ ಅಂತ ವಕೀಲರು ವಾದಿಸಿದ್ರು.

    ರವಿಬೆಳಗೆರೆ ಮಧ್ಯಂತರ ಜಾಮೀನು ಅವಧಿಯನ್ನು ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಡಿ. 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

  • ತಂದೆಯ ಆರೋಗ್ಯದ ಬಗ್ಗೆ ಮಗಳು ಚೇತನಾ ಬೆಳಗೆರೆ ಹೇಳಿದ್ದು ಹೀಗೆ

    ತಂದೆಯ ಆರೋಗ್ಯದ ಬಗ್ಗೆ ಮಗಳು ಚೇತನಾ ಬೆಳಗೆರೆ ಹೇಳಿದ್ದು ಹೀಗೆ

    ಬೆಂಗಳೂರು: ತಂದೆ ರವಿಬೆಳಗೆರೆ ಅವರಿಗೆ ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲ ಹಂತದ ಆರೋಗ್ಯ ಪರೀಕ್ಷೆ ನಡೆದಿರುವುದಿರಂದ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ ಎಂಬುದಾಗಿ ಚೇತನಾ ಬೆಳಗೆರೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬ ಪ್ರಕರಣದ ಕುರಿತು ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಧೀಶ ಜಗದೀಶ್ ಅವರು ರವಿಬೆಳಗೆರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಆದೇಶ ನೀಡಿದ್ದಾರೆ. ಅಲ್ಲದೇ ಜೈಲಿನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂಬುದಾಗಿ ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು.

    ನಮ್ಮ ತಂದೆ ಆನಾರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದು, ಈಗಾಗಲೇ ಈ ಕುರಿತು ಚಿಕಿತ್ಸೆಯ ದಾಖಲೆಗಳನ್ನು ಕೋರ್ಟ್‍ಗೆ ಸಲ್ಲಿಸಲಾಗಿದೆ. ನ್ಯಾಯಾಲಯದ ಮೂಲಕವೇ ಈ ದಾಖಲೆಗಳನ್ನು ಸರ್ಕಾರಿ ವೈದ್ಯರಿಗೆ ಸಲ್ಲಿಸಲಾಗುತ್ತದೆ. ವೈದ್ಯರು ಸಲ್ಲಿಸುವ ವರದಿಯ ಆಧಾರ ಮೇಲೆ ನಮ್ಮ ಫ್ಯಾಮಿಲಿ ಡಾಕ್ಟರ್ ಅವರ ಮೂಲಕ ಚಿಕಿತ್ಸೆ ನೀಡಬೇಕೇ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕೇ ಎಂಬುದನ್ನು ಕಾನೂನು ನಿಯಮಗಳ ಆಧಾರ ಮೇಲೆ ನಿರ್ಧರಿಸಲಾಗುತ್ತದೆ ಎಂದರು.

    ಅನಾರೋಗ್ಯ ಸಮಸ್ಯೆ ಇರುವ ಕಾರಣ ನಮ್ಮ ತಂದೆಗೆ ಸೂಕ್ತ ಚಿಕಿತ್ಸೆ ನೀಡಲು ಮಾತ್ರ ನಾವು ಮನವಿ ಮಾಡಿದ್ವಿ. ಆದರೆ ಕೋರ್ಟ್ ಜಾಮೀನು ನೀಡುವುದು, ಬಿಡುವುದು ನಿರ್ಧರಿಸುತ್ತದೆ. ಆದರೆ ನಾವು ನಮ್ಮ ತಂದೆಯ ಆರೋಗ್ಯದ ಕುರಿತು ಚಿಂತೆಗೆ ಒಳಗಾಗಿದ್ದು, ಅವರಿಗೆ ನಿಲ್ಲಲು, ನಡೆದಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಕೋರ್ಟ್ ಮೆಡಿಕಲ್ ಚಿಕಿತ್ಸೆ ನೀಡಲು ಸಮ್ಮತಿ ನೀಡಿರುವುದಕ್ಕೆ ನಮಗೆ ಸಮಾಧಾನ ನೀಡಿದೆ ಎಂದು ತಿಳಿಸಿದರು.

    ರವಿಬೆಳಗೆರೆ ಅವರ ಕಾಲಿಗೆ ಗಾಯವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಭಾನುವಾರ ಅವರನ್ನು ವಿಲ್ ಚೇರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಗಾಯವಾಗಿದೆ. ಅವರಿಗೆ ಈಗಾಗಲೇ ಸಕ್ಕರೆ ಕಾಯಿಲೆ ಇರುವುದರಿಂದ ಅದು ಗ್ಯಾಂಗ್ರಿನ್ ಆಗಿ ತಿರುಗುವ ಸಾಧ್ಯತೆಗಳಿವೆ. ಆದ್ದರಿಂದ ಅವರನ್ನು ಹೆಚ್ಚು ಜಾಗ್ರತೆಯಿಂದ ನೋಡಿಕೊಳ್ಳಬೇಕಿದೆ. ಕೋರ್ಟ್ ಗೆ ತೆರಳುವ ವೇಳೆಯೂ ಅವರನ್ನು ನಡೆಸಿಕೊಂಡು ಹೋಗಲಾಗಿದೆ. ಇದರಿಂದ ಅವರ ದೇಹಕ್ಕೆ ಹೆಚ್ಚು ಬಳಲಿಕೆಯಾಗಿದ್ದು, ವಿಶ್ರಾಂತಿಯ ಅಗತ್ಯವಿದೆ ಎಂದರು.

    ಜಾಮೀನು ಅರ್ಜಿ ಸಲ್ಲಿಸುವ ಕುರಿತು ನಮ್ಮ ವಕೀಲರು ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದು, ಯಾವಾಗ ಸಲ್ಲಿಸುತ್ತಾರೆ ಎಂಬುವುದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.

    https://www.youtube.com/watch?v=0wDpeO8ZHxk

    https://www.youtube.com/watch?v=-Eeqo83EKnM

     

     

     

     

     

     

     

     

  • ರಾತ್ರಿ ಮಾವನನ್ನು ಭೇಟಿಯಾದ ಶ್ರೀನಗರ ಕಿಟ್ಟಿ- ಸುನಿಲ್ ಹೆಗ್ಗರವಳ್ಳಿ ಮಾತಿಗೆ ಬೇಸರ

    ರಾತ್ರಿ ಮಾವನನ್ನು ಭೇಟಿಯಾದ ಶ್ರೀನಗರ ಕಿಟ್ಟಿ- ಸುನಿಲ್ ಹೆಗ್ಗರವಳ್ಳಿ ಮಾತಿಗೆ ಬೇಸರ

    ಬೆಂಗಳೂರು: ಸಿಸಿಬಿ ಕಚೇರಿಯಲ್ಲಿದ್ದ ತಮ್ಮ ಮಾವನನ್ನು ನಟ ಶ್ರೀನಗರ ಕಿಟ್ಟಿ ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಬಳಿಕ ಮಾತನಾಡಿದ ಕಿಟ್ಟಿ, ಸುನಿಲ್ ಹೆಗ್ಗರವಳ್ಳಿ ಬಗ್ಗೆ ಮಾತನಾಡೋಕೂ ಇಷ್ಟವಿಲ್ಲ. ಅವನನ್ನು ನಾನು ನಿನ್ನೆ ಮೊನ್ನೆಯಿಂದ ನೋಡ್ತಿಲ್ಲ. ಅವನನ್ನು ಮನೆ ಮಗನಂತೆ ನೋಡಿಕೊಂಡಿದ್ದರು. ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ನನಗೆ ಕೆಲಸ ಕಲಿಸಿಕೊಟ್ಟವರು ರವಿ ಬೆಳಗೆರೆ ಅಂತ ಅವನೇ ಹೇಳಿಕೊಂಡಿದ್ದಾನೆ. ಅದರಲ್ಲೂ ಯಾರನ್ನೂ ಏಕವಚನದಲ್ಲಿ ಮಾತನಾಡೋದು ಸರಿಯಲ್ಲ. ಆದ್ರೆ ಮೊನೆನ ಅವನು ಆಡಿದ ಮಾತುಗಳು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಅಂದ್ರು.

    ತಪ್ಪು ಮಾಡದಿದ್ದಾಗ ಹೊರಗಿನವರು ಆಡೋ ಮಾತುಗಳು ಮನಸ್ಸಿಗೆ ನೋವುಂಟು ಮಾಡುತ್ತೆ. ರವಿ ಬೆಳಗೆರೆಗೆ ಬಿಪಿ ಹೆಚ್ಚಾಗಿದ್ದು ಸುಧಾರಿಸಿಕೊಳ್ತಿದ್ದಾರೆ. ನಮಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ನ್ಯಾಯ ಸಿಗುವ ವಿಶ್ವಾಸ ಇದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗೇ ಆಗುತ್ತೆ ಅಂತ ಅವರು ಹೇಳಿದ್ದರು.

    ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ವೇಳೆ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಶುಕ್ರವಾರ ಬಂಧಿಸಿತ್ತು. ಆತನ ವಿಚಾರಣೆ ವೇಳೆ ರವಿ ಬೆಳೆಗೆರೆಯವರು ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪತ್ರಕರ್ತ ರವಿ ಬೆಳಗೆರೆಯನ್ನು ಬಂಧಿಸಲಾಗಿತ್ತು.

    ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದರು ಎಂಬುದಾಗಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗೆರೆ ಬಂಧನವಾಗಿ ವಿಚಾರಣೆ ನಡೆಯುತ್ತಿತ್ತು. ಅಂತೆಯೇ ಭಾನುವಾರ ರಾತ್ರಿ ಸುಮಾರು 9.40ರ ವೇಳೆಗೆ ಮಧು ಎಂಬಾತ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ.

    ಸುನೀಲ್ ರಿಸೀವ್ ಮಾಡಿದಾಗ ಕರೆ ಮಾಡಿದ್ದ ಮಧು ಎಂಬಾತ ರವಿ ಬೆಳೆಗೆರೆಯವರಿಗೆ ಫೋನ್ ಕೊಟ್ಟಿದ್ದಾನೆ. ಈ ವೇಳೆ ಸುನೀಲ್ ಜೊತೆ ಮಾತನಾಡಿದ ರವಿ ಬೆಳಗೆರೆ, ಯಶೋಮತಿ ಜೊತೆ ಸಂಬಂಧ ಇದೆ ಅಂತಾ ಮಾಧ್ಯಮಗಳ ಮುಂದೆ ಹೇಳಿದ್ದೀಯಾ? ಅಂತಾ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಸುನೀಲ್, ನನಗೆ ಯಶೋಮತಿ ಜೊತೆ ಸಂಬಂಧವಿಲ್ಲ. ಹೀಗಿದ್ದಾಗ ನಾನ್ ಯಾಕೆ ಹಾಗೆ ಹೇಳಲಿ? ಅಂತಾ ಪ್ರಶ್ನಿಸಿದ್ದರು ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿತ್ತು.

    ನನಗೆ ಏನೇ ಆದರೂ ರವಿ ಬೆಳಗೆರೆ ಅವರೇ ಕಾರಣ. ಸಿಸಿಬಿ ಕಚೇರಿಯಿಂದ ಕರೆ ಮಾಡುವ ಮೂಲಕ ತಾನು ಏನ್ ಬೇಕಾದ್ರೂ ಮಾಡ್ತೀನಿ ಅನ್ನೋ ಮೆಸೇಜ್ ಕೊಟ್ಟಿದ್ದಾರೆ. ಯಶೋಮತಿ ನನ್ನ ಗೆಳತಿಯಷ್ಟೇ. ಎಲ್ಲರೂ ರವಿ ಬೆಳಗೆರೆಯಂತೆ ಇರಲು ಆಗುತ್ತಾ? ಅವರಿಗಾದರೂ ಹತ್ತಾರು ಮಂದಿ ಗರ್ಲ್ ಫ್ರೆಂಡ್ಸ್ ಇದ್ದಾರೆ ಅಂತಾ ಸುನಿಲ್ ಕೂಡ ಪ್ರತಿಕ್ರಿಯಿಸಿದ್ದರು.

    https://www.youtube.com/watch?v=4amfU_N3xCI

    https://www.youtube.com/watch?v=kbcTIaQVj5Q

    https://www.youtube.com/watch?v=ED0FdtDgq5U

  • ನಾನು ಯಾರಿಗೂ ಸುಪಾರಿ ನೀಡಿಲ್ಲ, ನಿಮ್ಮ ಟೈಮೂ ವೇಸ್ಟ್, ನನಗೂ ತೊಂದ್ರೆ – ಸಿಸಿಬಿ ಪೊಲೀಸರ ಬೆವರಿಳಿಸಿದ ಬೆಳಗೆರೆ

    ನಾನು ಯಾರಿಗೂ ಸುಪಾರಿ ನೀಡಿಲ್ಲ, ನಿಮ್ಮ ಟೈಮೂ ವೇಸ್ಟ್, ನನಗೂ ತೊಂದ್ರೆ – ಸಿಸಿಬಿ ಪೊಲೀಸರ ಬೆವರಿಳಿಸಿದ ಬೆಳಗೆರೆ

    ಬೆಂಗಳೂರು: ಪತ್ರಕರ್ತ ಹಾಗೂ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ ವಿಚಾರಣೆ ಬಹುತೇಕ ಪೂರ್ಣಗೊಂಡಿದೆ.

    ವಿಚಾರಣೆಯ ವೇಳೆ ಯಾವುದೇ ಹೇಳಿಕೆ ನೀಡದಿರುವ ರವಿ ಬೆಳಗೆರೆ, ಯಾವ ಸುಪಾರಿಯೂ ನಾನು ನೀಡೇ ಇಲ್ಲ. ಕುಡಿದ ಮತ್ತಿನಲ್ಲಿ ಏನೋ ಹೇಳಿರಬಹುದು. ಅದನ್ನಾ ಪರಿಗಣಿಸೋಕೆ ಸಾಧ್ಯನಾ? ಎಂದು ಹೇಳಿದ್ದಾರೆ.

    ಕುಡಿದ ಮತ್ತಿನಲ್ಲಿ ಹೇಳಿರಬಹುದು ಅದನ್ನೇ ನೀವು ಸುಪಾರಿ ಅಂತ ಇದ್ದೀರಿ. ನಾನೇನಾದರೂ ಹೊಸಬನ ಭೇಟಿ ಮಾಡಿ, ಮಾತನಾಡಿದ್ರೆ ನಿಮ್ಮ ಅನುಮಾನ ಸರಿಯಾಗಿ ಇರ್ತಿತ್ತು. ಆದ್ರೆ ನಾನು ನನ್ನ ಮಾಜಿ ಡ್ರೈವರ್ ಭೇಟಿಯಾಗಿದ್ದೆ. ಪರಿಸ್ಥಿತಿ ಒತ್ತಡಕ್ಕೆ ಸಿಕ್ಕಿ ಕೊಲೆಗಾರ ಆದ. ಕೊಲೆಗಾರನನ್ನು ಭೇಟಿ ಮಾಡಿದ್ರೆ ನಾನು ಕೊಲೆಗಾರನ ಕೊಲೆ ಮಾಡಿಸ್ತೀನಾ?. ಸುಮ್ಮನೆ ನಿಮಗೂ ಕಾಲಹರಣ ನನಗೂ ಹಿಂಸೆನ್ರಪ್ಪ ಅಂತ ಸಿಸಿಬಿ ಅಧಿಕಾರಿಗಳಿಗೆಯೇ ರವಿ ಬೆಳಗೆರೆ ಟಾಂಗ್ ನೀಡಿದ್ದಾರೆ.

    ರವಿ ಬೆಳಗೆರೆ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಈಗಾಗಲೇ ಪೊಲೀಸರು ಸಿಸಿಟಿವಿ, ಫೋನ್ ಕರೆಯನ್ನೇ ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ಅಲ್ಲದೇ ಈಗಾಗಲೇ ಸುನಿಲ್ ಹೆಗ್ಗರವಳ್ಳಿ ಹೇಳಿಕೆ ಕೂಡ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಸಿಸಿಬಿ ಮೂಲಗಳ ಮಾಹಿತಿ ನೀಡಿವೆ.

    ಎಫ್‍ಐಆರ್ ದಾಖಲು: ರವಿಬೆಳಗೆರೆ ಬಂಧನ ಪ್ರಕರಣದ ಬಳಿಕ ಹಾಯ್ ಬೆಂಗಳೂರು ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು. ಹೀಗಾಗಿ ಶನಿವಾರ ಅರಣ್ಯಾಧಿಕಾರಿಗಳು ಸಿಸಿಬಿ ಕಚೇರಿಗೆ ಆಗಮಿಸಿ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ವಶಕ್ಕೆ ಪಡೆದಿದ್ದರು. ಸದ್ಯ ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳಿಂದ ರವಿಬೆಳಗೆರೆ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.

    ಆರೋಗ್ಯದಲ್ಲಿ ಏರುಪೇರು: ರವಿಬೆಳಗೆರೆಯವರಿಗೆ ಮತ್ತೆ ಲೋ ಶುಗರ್, ಲೋ ಬಿಪಿಯಾಗಿ ಆರೋಗ್ಯದಲ್ಲಿ ಏರಪೇರಾಗಿದೆ. ಹೀಗಾಗಿ ವೈದಕೀಯ ತಪಾಸಣೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರವಿಬೆಳಗೆರೆ ಹೈಡ್ರಾಮ ಮಾಡಿದ್ದು, ಸಿಗರೇಟ್ ಬೇಕಾಂತ ಹಠ ಹಿಡಿದಿದ್ದರು. ಅಲ್ಲದೇ ಕಾರಿಗೆ ಕಾಲು ಅಡ್ಡ ಇಟ್ಟಿಕೊಂಡು ಸಿಗರೇಟ್ ಕೊಡದೆ ಇದ್ರೆ ಕಾಲು ತೆಗೆಯಲ್ಲ ಅಂತಾ ಹಠ ಮಾಡಿದ್ದಾರೆ.

    ಸಿಗರೇಟು ಕೊಡದೇ ಇದ್ದಿದ್ದಕ್ಕೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾನೂನಿನಲ್ಲಿಯೇ ಅವಕಾಶ ಇದೆ, ಕೊಡೊದಕ್ಕೆ ನಿಮಗೇನು ಅಂತ ಬೈಯ್ದಿದ್ದಾರೆ. ಮನವೊಲಿಸಲು ಹೋದ ಮಗ ಕರ್ಣನ ಮೇಲೂ ಕಿಡಿಕಾರಿದ್ದಾರೆ. ಕೊನೆಗೆ ಸಿಸಿಬಿ ಪೊಲೀಸರು ಸಿಗರೇಟು ಕೊಟ್ಟು ಸೇದಿಸಿ ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಕಾಲಿಗೆ ಗಾಯ ಆಗಿದೆ ನಿಮಗೆ ಮನುಷ್ಯತ್ವ ಇಲ್ವಾ ಅಂತ ಪೊಲೀಸರಿಗೆ ಬೆಳಗೆರೆ ತರಾಟೆ ತೆಗೆದುಕೊಂಡಿದ್ದಾರೆ.

    ಇದೇ ಸಂದರ್ಭದಲ್ಲಿ ಮಾಧ್ಯಮದವರನ್ನು ಹತ್ತಿರ ಕರೆದು ಎಷ್ಟು ದಿನ ಅಂತ ನನ್ನನ್ನೇ ಕಾಯ್ತಿರೋ ಬೇಜರಾಗೊಲ್ವಾ..? ಮತ್ತೆ ಸಿಕ್ತೀನಿ ಬಿಡ್ರೋ ಅಂತ ಹೇಳಿದ್ದಾರೆ.

    https://www.youtube.com/watch?v=Gw8qDp91QbA

    https://www.youtube.com/watch?v=7FMDBk4SZIs

    https://www.youtube.com/watch?v=BSYzOrn_xUM

  • ರವಿ ಬೆಳಗೆರೆ ಹತ್ಯೆಗೂ ನಡೆದಿತ್ತಂತೆ ಸಂಚು – ಗನ್ ಹಿಂದಿನ ರಿಯಲ್ ಕಹಾನಿ

    ರವಿ ಬೆಳಗೆರೆ ಹತ್ಯೆಗೂ ನಡೆದಿತ್ತಂತೆ ಸಂಚು – ಗನ್ ಹಿಂದಿನ ರಿಯಲ್ ಕಹಾನಿ

    ಬೆಂಗಳೂರು: ಸಹೋದ್ಯೋಗಿ, ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯನ್ನು ಕೊಲೆ ಮಾಡಲು ಸುಪಾರಿ ನೀಡಿರುವ ಆರೋಪದ ಮೇಲೆ ರವಿಬೆಳಗೆರೆ ಬಂಧನವಾಗಿದ್ದು, ಈ ಬೆನ್ನಲ್ಲೇ ರವಿಬೆಳಗೆರೆ ಹತ್ಯೆಗೂ ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ರವಿ ಹತ್ಯೆಗೆ ಸ್ವಾಮೀಜಿ ಹಾಗೂ ಸಂಪಾದಕರೊಬ್ಬರಿಂದ ಸುಪಾರಿ ನೀಡಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ತ್ಯಾಗಿ ಎಂಬವರಿಂದ ಈ ಸುಪಾರಿ ಸಂಚಿನ ಬಗ್ಗೆ ರವಿ ಬೆಳಗೆರೆಗೆ ಮಾಹಿತಿ ದೊರಕಿದ್ದು, ರೌಡಿ ಕುಳ್ಳಶಾಂತನಿಗೆ ಸುಪಾರಿ ಕೊಟ್ಟು ರವಿ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

    ಆದ್ರೆ ಆ ರೌಡಿಯನ್ನ ಗೆಳೆಯರೇ ರವಿಬೆಳೆಗೆರೆ ಮುಂದೆ ಕರೆತಂದಿದ್ರಂತೆ. ಈ ವೇಳೆ ಅವರು ರವಿ ಬೆಳಗೆರೆಯನ್ನು ಕಂಡು ಶಾಕ್ ಆಗಿದ್ರಂತೆ. ಇದೇ ಸಂದರ್ಭದಲ್ಲಿ ಸುಪಾರಿ ಕಿಲ್ಲರ್ ಹತ್ಯೆಗೆ ಡೀಲ್ ಕೊಟ್ಟಿದ್ದವರ ಮಾಹಿತಿ ನೀಡಿದ್ದನಂತೆ. ಹತ್ಯೆಗೆ ಸುಪಾರಿ ಕೊಟ್ಟ ಸ್ವಾಮೀಜಿ, ಸಂಪಾದಕರ ಹೆಸರು ಕೇಳಿ ರವಿ ಬೆಳಗೆರೆಗೆ ಶಾಕ್ ಆಗಿತ್ತಂತೆ. ಹೀಗಾಗಿ ರವಿಬೆಳಗೆರೆ ಅಂದೇ ಒಂದು ರಿವಾಲ್ವರ್ ಬೇಕೆಂದು ಡಿಸೈಡ್ ಮಾಡಿದ್ದರಂತೆ. ಈವರೆಗೆ ರವಿ ಎರಡು ಬಾರಿ ರಿವಾಲ್ವರ್ ಬಳಸಿದ್ದಾರೆ ಎಂಬ ಮಾಹಿತಿಯೊಂದು ದೊರೆತಿದೆ.

  • ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ 30 ಲಕ್ಷ ರೂ. ಸುಪಾರಿ- ಪತ್ನಿ ಸುಚಿತಾ ಪ್ರತಿಕ್ರಿಯಿಸಿದ್ದು ಹೀಗೆ

    ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ 30 ಲಕ್ಷ ರೂ. ಸುಪಾರಿ- ಪತ್ನಿ ಸುಚಿತಾ ಪ್ರತಿಕ್ರಿಯಿಸಿದ್ದು ಹೀಗೆ

    ಚಿಕ್ಕಮಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ರವಿಬೆಳಗೆರೆ ಅವರು ನೀಡಿದ ಸುಪಾರಿ ಪ್ರಕರಣ ಸಂಬಂಧ ಸುನಿಲ್ ಪತ್ನಿ ಸುಚಿತಾ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ವಿಷಯ ಕೇಳಿ ನನಗೆ ಶಾಕ್ ಆಗಿದೆ ಎಂದು ಹೇಳಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಹೆಗ್ಗರವಳ್ಳಿಯಲ್ಲಿ ಮಾತಾನಾಡಿದ ಸುಚಿತಾ, ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ನನಗೆ ವಿಷಯ ತಿಳಿಯಿತು. ನೋಡಿದ ತಕ್ಷಣ ನಮಗೆ ಭಯ ಆಯಿತು. ಅಷ್ಟೇ ಅಲ್ಲದೇ ಇದನ್ನು ಕೇಳಿ ತುಂಬಾ ನೋವಾಗುತ್ತಿದೆ. ಮಗನ ತರ ಸಾಕಿ, ಆಶ್ರಯ ಕೊಟ್ಟು ಈ ರೀತಿ ಮಾಡಿದ್ದಾರೆ. 14 ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು, ಬೇರೆಕಡೆ ಹೋಗಿಲ್ಲ. ಆದರೂ ಇಷ್ಟು ದೊಡ್ಡ ವ್ಯಕ್ತಿ ಜೊತೆಲಿದ್ದು, ಸುಪಾರಿ ಕೊಟ್ಟು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ನೋವಿನಿಂದ ಹೇಳಿದ್ದಾರೆ.

    ನಮಗೆ ಇನ್ನು ಜೀವ ಭಯ ಇದೆ. ಮುಂದೆ ಏನು ಮಾಡ್ತಾರೋ ಗೊತ್ತಿಲ್ಲ. ಸುಪಾರಿ ಕೊಟ್ಟು ಮಾಡಿದ್ದಾರೆ ಅಂದ್ರೆ ಇದನ್ನು ನಿಲ್ಲಿಸಲ್ಲ. ಆದ್ದರಿಂದ ರಾಜ್ಯ ಸರ್ಕಾರ ನಮಗೆ, ಮನೆಗೆ, ನನ್ನ ಗಂಡನಿಗೂ ರಕ್ಷಣೆ ಕೊಡಬೇಕು ಎಂದು ಕೇಳಿಕೊಂಡಿದ್ದಾರೆ.

    ಹತ್ಯೆಗೆ ಯಾವುದೇ ಸಂಬಂಧ ಇಲ್ಲ. ಯಾಕೆಂದರೆ 2013 ರಲ್ಲಿ ಅವರನ್ನು ಎಂಡಿ ಆಗಿ ಹಾಯ್ ಬೆಂಗಳೂರು ಆಫಿಸ್‍ಗೆ ತಂದ್ರು. ಇವರು ಮ್ಯಾನೇಜರ್ ಆದ್ಮೇಲೆ ಆಫಿಸ್‍ಗೆ ವಾರದಲ್ಲಿ ಎರಡು ಬಾರಿ ಹೋಗಿ ಎಲ್ಲನೂ ಫೈನಲ್ ಮಾಡುತ್ತಿದ್ದರು. ಎಂಡಿ ಆಗಿ ಎಲ್ಲರಿಗೂ ಫೋನ್ ಮಾಡಿ ವಿಷಯವನ್ನು ತಿಳಿದುಕೊಳ್ಳಬೇಕು. ಆದ್ದರಿಂದ ಫೋನ್ ಮಾಡುತ್ತಿದ್ದರು.  ಈ ವಿಚಾರವನ್ನಿಟ್ಟುಕೊಂಡು ಅಕ್ರಮ ಸಂಬಂಧ ಇದೆ ಎಂದು ಈ ರೀತಿ ಮಾಡುವುದು ತಪ್ಪು ಎಂದು ಹೇಳಿದ್ದಾರೆ.

    ಇದೇ ವೇಳೆ ಮಾತನಾಡಿದ ಸುನೀಲ್ ಹೆಗ್ಗರವಳ್ಳಿ ಸಹೋದರ ಪರಮೇಶ್, 15 ವರ್ಷ ನನ್ನ ತಮ್ಮನನ್ನ ಸಾಕಿ, ಈಗ ಕೊಲೆಗೆ ಸುಪಾರಿ ಕೊಟ್ಟಿರೋದು ನಮಗೆ ತುಂಬಾ ದುಃಖವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.

  • ಗೌರಿ ಹತ್ಯೆ ಕೇಸ್ ಮುಚ್ಚಿ ಹಾಕೋಕೆ ಸ್ಕೆಚ್- ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

    ಗೌರಿ ಹತ್ಯೆ ಕೇಸ್ ಮುಚ್ಚಿ ಹಾಕೋಕೆ ಸ್ಕೆಚ್- ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

    ಬೆಂಗಳೂರು: ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಬಂಧಿಸೋ ಮೂಲಕ ಗೌರಿ ಲಂಕೇಶ್ ಹತ್ಯೆ ಕೇಸ್‍ನಿಂದ ಜನರನ್ನು ದಿಕ್ಕು ತಪ್ಪಿಸಲು ಸರ್ಕಾರ ಯತ್ನಿಸುತ್ತಿದೆ ಅಂತಾ ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

    ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ನೇಮಕಗೊಂಡಿರುವ ಎಸ್‍ಐಟಿ ಕೆಲಸವೇ ಮಾಡುತ್ತಿಲ್ಲ. ಎಸ್‍ಐಟಿ ತಂಡ ಗಣೇಶನ ಮಾಡಿ ಅಂದ್ರೆ ಅವರ ಅಪ್ಪನನ್ನು ಮಾಡ್ತಿದೆ. ಬೆಳಗೆರೆ ಸುಪಾರಿ ಪ್ರಕರಣವನ್ನು ದೊಡ್ಡದು ಮಾಡಲು ಹೊರಟಿದೆ. ಆದ್ರೆ ಗೌರಿ ಕೇಸೇ ಬೇರೆ. ಹಂತಕರ ಬಗ್ಗೆ ಯಾವುದೇ ಸುಳಿವು ಅವರಿಗೆ ಸಿಕ್ಕಿಲ್ಲ. ಜನರ ಮನಸ್ಸನ್ನು ಬೇರೆ ಕಡೆ ತಿರುಗಿಸಲು ರವಿ ಬೆಳೆಗೆರೆ ಪ್ರಕರಣವನ್ನು ಅದಕ್ಕೆ ಲಿಂಕ್ ಮಾಡುತ್ತಿದ್ದಾರೆ. ರವಿ ಬೆಳೆಗೆರೆ ಸುಪಾರಿ ಪ್ರಕರಣ ತನಿಖೆಗೆ ಬೇರೆ ಪೊಲೀಸ್ ವಿಭಾಗಗಳಿವೆ. ಎಸ್‍ಐಟಿ ತನಗೆ ವಹಿಸಿದ ಮೂಲ ಕರ್ತವ್ಯವನ್ನೇ ಮೆರೆತು ಬೇರೆ ಮಾಡಲು ಹೊರಟಿದೆ ಅಂತ ಅಂತ ಕಿಡಿಕಾರಿದ್ರು.

    ಗೌರಿ ಹಂತಕರ ಬಗ್ಗೆ ಯಾವುದೇ ಸುಳಿವು ಅವರಿಗೆ ಸಿಕ್ಕಿಲ್ಲ. ಆದ್ರೆ ವಹಿಸಿದ ಮೂಲ ಕರ್ತವ್ಯವನ್ನು ಬಿಟ್ಟು ಬೆಳಗೆರೆ ಕೇಸ್ ಹಿಂದೆ ಬಿದ್ದಿದೆ. ಒಟ್ಟಿನಲ್ಲಿ ವಿಷಯಾಂತರ ಮಾಡಲು ಸರ್ಕಾರ ಹೊರಟಿದೆ ಅಂತಾ ಸಿಡಿಮಿಡಿಗೊಂಡಿದ್ದಾರೆ.

    ಪೊಲೀಸ್ ಇಲಾಖೆ ಯಾರ ಹಿಡಿತದಲ್ಲಿ ಇದೆ ಅನ್ನೋದೆ ಗೊತ್ತಾಗ್ತಿಲ್ಲ. ಕೆಂಪಯ್ಯ ಹಿಡಿತದಲ್ಲೇ ಪೊಲೀಸ್ ಇಲಾಖೆ ಇದೆ. ರಾಮಲಿಂಗಾರೆಡ್ಡಿ ಕೂಡ ಬೇರೆ ಗೃಹ ಸಚಿವರಂತೆ ಕೆಂಪಯ್ಯ ಕೆಳಗೆ ಕಾರ್ಯನಿರ್ವಹಿಸ್ತಿದ್ದಾರೆ. ಗೌರಿ ಹತ್ಯೆ ಹಂತಕರನ್ನ ಹಿಡಿದೇ ಬಿಡ್ತೀವಿ ಅಂತಾ ಸುಮ್ನೆ ಹೇಳ್ತಿದ್ದಾರೆ ಅಷ್ಟೇ ಅಂತ ಅವರು ಆರೋಪಿಸಿದ್ದಾರೆ.

     

  • ರವಿ ಬೆಳಗೆರೆಗೆ ಸಿಗರೇಟ್ ಕೊರತೆಯಂತೆ!

    ರವಿ ಬೆಳಗೆರೆಗೆ ಸಿಗರೇಟ್ ಕೊರತೆಯಂತೆ!

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಶುಕ್ರವಾರದಂದು ಪತ್ರಕರ್ತ ರವಿ ಬೆಳಗೆರೆ ಬಂಧಿತರಾಗಿದ್ದು, ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

    ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ರವಿ ಬೆಳಗೆರೆಯನ್ನು ಸಿಸಿಬಿ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಈ ವೇಳೆ ಬೆಳಗೆರೆಗೆ ಸಿಗರೇಟ್ ಕೊರತೆ ಉಂಟಾಗಿದೆಯಂತೆ. ಎಲ್ಲರಿಗೂ ಗೊತ್ತಿರುವ ಹಾಗೆ ಅವರಿಗೆ ಎಲ್ಲಾ ಕಡೆ ಸಿಗರೇಟ್ ಇರಲೇಬೇಕು. ಸಿಸಿಬಿ ಒಂದು ಎರಡು ಸಿಗರೇಟ್ ಪೂರೈಕೆ ಮಾಡುತ್ತಿದ್ದು, ಅವರು ಕೇಳಿದಷ್ಟು ಕೊಡುತ್ತಿಲ್ಲ ಎಂದು ಹೇಳಲಾಗ್ತಿದೆ.

    ರವಿ ಬೆಳಗೆರೆ ದಿನಕ್ಕೆ ತುಂಬಾ ಸಿಗರೇಟ್ ಸೇದುತ್ತಿದ್ದರು. ಆದರೆ ಸಿಸಿಬಿ ಒಂದು ಎರಡು ಸಿಗರೇಟ್ ಮಾತ್ರ ಕೊಡುತ್ತಿದ್ದಾರೆ. ಆದ್ದರಿಂದ ರವಿಬೆಳಗೆರೆಗೆ ಸಿಗರೇಟ್ ಕೊರತೆ ಉಂಟಾಗಿದೆ ಎಂದು ತಿಳಿದುಬಂದಿದೆ.

    https://www.youtube.com/watch?v=NVU9MGtsE60

    https://www.youtube.com/watch?v=kJ5uYUEgVeM

    https://www.youtube.com/watch?v=lgEoaxQ1l44

    https://www.youtube.com/watch?v=ucQolRekyhU