Tag: ರವಿಶಂಕರ್

  • ರೇಣುಕಾಸ್ವಾಮಿ ಕೊಲೆ ಪ್ರಕರಣ – A8 ಆರೋಪಿ ರವಿಶಂಕರ್ ಬಿಡುಗಡೆ

    ರೇಣುಕಾಸ್ವಾಮಿ ಕೊಲೆ ಪ್ರಕರಣ – A8 ಆರೋಪಿ ರವಿಶಂಕರ್ ಬಿಡುಗಡೆ

    ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ಎ8 ಆರೋಪಿ ರವಿಶಂಕರ್ (Ravishankar) ಕೊನೆಗೂ ತುಮಕೂರು ಜೈಲಿನಿಂದ (Tumakuru Central Jail) ಬಿಡುಗಡೆಯಾಗಿದ್ದಾನೆ.

    ಚಿತ್ರದುರ್ಗ (Chitradurga) ಮೂಲದ ರವಿಶಂಕರ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ8 ಆರೋಪಿಯಾಗಿ ತುಮಕೂರು ಜೈಲು ಸೇರಿದ್ದ. ಬೇಲ್ ಸಿಕ್ಕಿ 15 ದಿನಗಳ ಬಳಿಕ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಇದನ್ನೂ ಓದಿ: Madhya Pradesh| ಹುಲಿಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳ ನಿಗೂಢ ಸಾವು

    ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸಿ 57ನೇ ಸಿಸಿಹೆಚ್ ನ್ಯಾಯಾಲಯ ಆರೋಪಿ ರವಿಶಂಕರ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ 2 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯನ್ನೂ ನ್ಯಾಯಾಲಯ ಕೇಳಿತ್ತು. ಇದನ್ನೂ ಓದಿ: ಜೈಲಿನಿಂದ ದರ್ಶನ್‌ ರಿಲೀಸ್‌ ಬೆನ್ನಲ್ಲೇ ಎಮೋಷನಲ್‌ ಪೋಸ್ಟ್‌ ಹಂಚಿಕೊಂಡ ಪುತ್ರ ವಿನೀಶ್

  • ರೇಣುಕಾಸ್ವಾಮಿ ಕೊಲೆ ಪ್ರಕರಣ – ಬೇಲ್ ಸಿಕ್ಕರೂ ಆರೋಪಿ ರವಿಶಂಕರ್‌ಗೆ ಇಲ್ಲ ಬಿಡುಗಡೆ ಭಾಗ್ಯ

    ರೇಣುಕಾಸ್ವಾಮಿ ಕೊಲೆ ಪ್ರಕರಣ – ಬೇಲ್ ಸಿಕ್ಕರೂ ಆರೋಪಿ ರವಿಶಂಕರ್‌ಗೆ ಇಲ್ಲ ಬಿಡುಗಡೆ ಭಾಗ್ಯ

    ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎ8 ಆರೋಪಿಯಾಗಿ ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ರವಿಶಂಕರ್‌ಗೆ ಜಾಮೀನು (Bail) ಮಂಜೂರಾಗಿ 6 ದಿನ ಕಳೆದರೂ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

    ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸಿ 57ನೇ ಸಿಸಿಹೆಚ್ ನ್ಯಾಯಾಲಯ ಕಳೆದ ಸೋಮವಾರ ಆರೋಪಿ ರವಿಶಂಕರ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 2 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯನ್ನೂ ನ್ಯಾಯಾಲಯ ಕೇಳಿದೆ. ಆದರೆ ಶ್ಯೂರಿಟಿದಾರರು ಸಿಗದೇ ರವಿಶಂಕರ್ ಕುಟುಂಬ ಪರದಾಡುತ್ತಿದೆ. ಇದನ್ನೂ ಓದಿ: ಇಸ್ರೇಲ್‌ ಅಧ್ಯಕ್ಷ ನೆತನ್ಯಾಹು ನಿವಾಸದ ಮೇಲೆ ಹಿಜ್ಬುಲ್ಲಾ ಡ್ರೋನ್‌ ದಾಳಿ

    ಇಂದು ಬಹುತೇಕ ಶ್ಯೂರಿಟಿ ಪ್ರಕ್ರಿಯೆ ಮುಗಿಯುವ ಸಾಧ್ಯತೆಯಿದ್ದು, ಪ್ರಕ್ರಿಯೆ ಮುಗಿದ ಬಳಿಕ ತುಮಕೂರು ಜೈಲಾಧಿಕಾರಿಗೆ ಮೇಲ್ ಮೂಲಕ ಜಾಮೀನು ಪ್ರತಿ ತಲುಪಲಿದೆ. ಜಾಮೀನು ಪ್ರತಿ ಜೈಲಾಧಿಕಾರಿಗೆ ತಲುಪಿದ ಬಳಿಕ ಆರೋಪಿ ರವಿಶಂಕರ್ ಬಿಡುಗಡೆಯಾಗುವ ಸಾಧ್ಯತೆಯಿದೆ. ಬಹುತೇಕ ಇಂದು (ಶನಿವಾರ) ಸಂಜೆ ಒಳಗೆ ಆರೋಪಿ ರವಿಶಂಕರ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಡಾ ಫೈಲ್‌ಗಳನ್ನು ಸುಟ್ಟು ಹಾಕಿರುವ ಬೈರತಿ ಸುರೇಶ್‌ರನ್ನು ಕೂಡಲೇ ಬಂಧಿಸಿ – ಶೋಭಾ ಕರಂದ್ಲಾಜೆ

  • ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ರ್ಮುಗ ರವಿಶಂಕರ್ ‘(Ravishankar) ಸುಬ್ರಹ್ಮಣ್ಯ’ (Subrahmanya) ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ ‘ಸುಬ್ರಹ್ಮಣ್ಯ’ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ. ಯೂಟ್ಯೂಬ್ ನಲ್ಲಿ ಬಿಡುಗಡೆಗೂ ಮೊದಲೇ ದುಬೈನಲ್ಲಿ ನಡೆದ ಸೈಮಾದಲ್ಲಿ ‘ಸುಬ್ರಹ್ಮಣ್ಯ’ನ ಮೊದಲ ತುಣುಕನ್ನು ರಿಲೀಸ್ ಮಾಡಲಾಯಿತು.

    ಇಂದು ಎಸ್ ಜಿ ಮೂವೀಸ್ ಯೂಟ್ಯೂಬ್ ನಲ್ಲಿ ಸುಬ್ರಹ್ಮಣ ಗ್ಲಿಂಪ್ಸ್ ಬಿಡುಗಡೆಯಾಗಿದೆ. 3 ನಿಮಿಷ 14 ಸೆಕೆಂಡ್ ಇರುವ ಝಲಕ್ ಮೈನವಿರೇಳಿಸುವಂತಿದೆ. ವಿಷಪೂರಿತ ಹಾವುಗಳಿಂದ ತುಂಬಿದ ಬಾವಿಗೆ ಅದ್ವೈ ಹಗ್ಗದ ಮೂಲಕ ಎಂಟ್ರಿ ಕೊಡುತ್ತಾರೆ. ಆ ಬಾವಿಯಲ್ಲಿರುವ ಪುರಾತನ ಪುಸ್ತಕವನ್ನು ಎತ್ತಿಕೊಂಡು ಹೊರ ಬರ್ತಾರೆ. ಎಲ್ಲಾ ಹಾವುಗಳು ಅವನನ್ನು ಬೆನ್ನಟ್ಟುವುದರೊಂದಿಗೆ ಓಡಲು ಪ್ರಾರಂಭಿಸುತ್ತಾರೆ. ಅದ್ವೈ ಸ್ಟೈಲೀಶ್ ಲುಕ್ ನಲ್ಲಿ ನೋಡುಗರಿಗೆ ಇಷ್ಟವಾಗ್ತಾರೆ. ಕೊನೆಯ ಕೆಲ ಸೆಕೆಂಡ್ ಗಳು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ವಿಷ್ಯುವಲ್ಸ್ ಟ್ರೀಟ್ ಹಾಗೂ ಗ್ರಾಫಿಕ್ಸ್ ವರ್ಕ್ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

    ಸುಬ್ರಹ್ಮಣ ಗ್ಲಿಂಪ್ಸ್ ಅರವತ್ತಕ್ಕೂ ಹೆಚ್ಚು VFX ತಂತ್ರಜ್ಞನರು ಕಳೆದ ನಾಲ್ಕು ತಿಂಗಳಿನಿಂದ ದುಡಿದಿದ್ದಾರೆ.  ‘ಸುಬ್ರಹ್ಮಣ್ಯ’ದ ಕ್ರಿಯೇಟಿವ್ ನಿರ್ಮಾಪಕ ಮತ್ತು ವಿಎಫ್‌ಎಕ್ಸ್ ಮೇಲ್ವಿಚಾರಕ ನಿಖಿಲ್ ಕೋಡೂರು ನೇತೃತ್ವದಲ್ಲಿ, ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಪ್ರಸಿದ್ಧ ಸ್ಟುಡಿಯೋಗಳಲ್ಲಿ VFX ಕೆಲಸ ನಡೆದಿದೆ. ‘ಸುಬ್ರಹ್ಮಣ್ಯ’ ಸಿನಿಮಾ ಸೋಶಿಯೋ-ಫ್ಯಾಂಟಸಿ ಶೈಲಿಯ ಸಿನಿಮಾ. ಜೊತೆ ಅಡ್ವೆಂಚರ್ ಎಲಿಮೆಂಟ್ಸ್‌ ಕೂಡ ಈ ಸಿನಿಮಾದಲ್ಲಿದೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ‘ಕೆಜಿಎಫ್’ ಹಾಗೂ ‘ಸಲಾರ್’ ಸಿನಿಮಾಗೆ ಸಂಗೀತ ನೀಡಿರುವ ರವಿ ಬಸ್ರೂರು ಈ ಸಿನಿಮಾಗೆ ಟ್ಯೂನ್ ಹಾಕುತ್ತಿದ್ದಾರೆ. ವಿಘ್ನೇಶ್ ರಾಜ್ ಕ್ಯಾಮರಾ ವರ್ಕ್ ಇದ್ದರೆ, ವಿಜಯ್ ಎಂ. ಕುಮಾರ್ ಎಡಿಟಿಂಗ್ ಮಾಡುತ್ತಿದ್ದಾರೆ. ಮಗನಿಗಾಗಿ ಎರಡು ದಶಕಗಳ ಬಳಿಕ ಡೈರೆಕ್ಟರ್ಕ್ಯಾಪ್ಧರಿಸಿರೋ ರವಿಶಂಕರ್ ಚಿತ್ರರಂಗಕ್ಕೆ ಹೀರೋ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಕೊಡುತ್ತಿದ್ದಾರೆ.

  • ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ (Subrahmanya) ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

    ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

  • ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ವಿಲನ್ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ: ಪ್ರೀ ಲುಕ್ ಅನಾವರಣ

    ಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ (Ravi Shankar) ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿವರೆಗೂ ಸುಬ್ರಹ್ಮಣ್ಯ ಸಿನಿಮಾದ ಬಗ್ಗೆ ಸಣ್ಣ ಅಪ್ ಡೇಟ್ ಕೂಡ ಸಿಕ್ಕಿರಲಿಲ್ಲ. ಈಗ ಚಿತ್ರತಂಡದ ಹೊಸ ಸಮಾಚಾರ ರಿವೀಲ್ ಮಾಡಿದೆ.

    ಸುಬ್ರಹ್ಮಣ್ಯ ಸಿನಿಮಾದ 60% ಭಾಗದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸ ಮುಂಬೈನ ಶಾರುಖ್ ಒಡೆತನದ ರೆಡ್ ಚಿಲ್ಲೀಸ್ ಸ್ಟುಡಿಯೋದಲ್ಲಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ VFX ಮತ್ತು CGI ಕೆಲಸಗಳು ನಡೆಯುತ್ತಿವೆ. ಪ್ರೀಮಿಯಂ ಲಾರ್ಜ್ ಫಾರ್ಮ್ಯಾಟ್ ಮತ್ತು ಐಮ್ಯಾಕ್ಸ್ ಥಿಯೇಟರ್‌ಗಳಲ್ಲಿ ಅದ್ಭುತ ಫೀಲ್ ಕೊಡುವ ರೀತಿಯಲ್ಲಿ ಸುಬ್ರಹ್ಮಣ್ಯ ಸಿನಿಮಾವನ್ನು ಕಟ್ಟಿಕೊಡಲಾಗುತ್ತಿದೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಚಿತ್ರತಂಡ ಶೀಘ್ರದಲ್ಲೇ ಅನಾವರಣಗೊಳಿಸಲು ಮುಂದಾಗಿದೆ. ಈ ಪೋಸ್ಟರ್ ಮೂಲಕ ಸುಬ್ರಹ್ಮಣ್ಯ ಪ್ರಪಂಚವನ್ನು ಚಿತ್ರತಂಡ ಪರಿಚಯಸಲು ಹೊರಟಿದೆ. ಸೋಷಿಯೋ ಫ್ಯಾಂಟಸಿ ಅಡ್ವೆಂಚರ್ಸ್ ಸಿನಿಮಾವನ್ನು ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಸಲಾರ್ ಮತ್ತು ಕೆಜಿಎಫ್ ಸರಣಿ ಸಿನಿಮಾಗಳ ಸಂಗೀತ ನೀಡಿರುವ ರವಿ ಬಸ್ರೂರ್ ಈ ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ಸುಬ್ರಹ್ಮಣ್ಯ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಗೂ ಮುನ್ನ ಚಿತ್ರತಂಡ ಪ್ರೀ ಲುಕ್ ಅನಾವರಣ ಮಾಡಲಾಗಿದೆ. ಪಾಳು ಬಿದ್ದಿರುವ ದೇಗುಲದ ಮುಂದೆ ನಾಯಕ ಅದ್ವೆ ಕೈಯಲ್ಲಿ ಪಂಜು ಹಿಡಿದು ಬ್ಯಾಕ್ ಪೋಸ್ ಕೊಟ್ಟಿರುವ ಪ್ರೀ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬಹಳ ಕುತೂಹಲ ಹೆಚ್ಚಿಸುವ ಪ್ರೀ ಲುಕ್ ಫಸ್ಟ್ ಲುಕ್ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ವಿಘ್ನೇಶ್ ರಾಜ್ ಕ್ಯಾಮೆರಾ ಹಿಡಿದಿದ್ದು, ವಿಜಯ್ ಎಂ ಕುಮಾರ್ ಸಂಕಲನ ಸುಬ್ರಹ್ಮಣ್ಯ ಸಿನಿಮಾಕ್ಕಿದೆ.. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಬಾರಿಗೆ ಪಿ.ರವಿಶಂಕರ್ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ಈಗ 20 ವರ್ಷದ ಬಳಿಕ ಮಗ ಅದ್ವೆಗಾಗಿ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

  • ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ನಟ ರವಿಶಂಕರ್

    ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಧ್ಯಾಹ್ನದ ಮನರಂಜನೆಯಾಗಿ ಆರಂಭವಾದ ‘ಸುವರ್ಣ ಗೃಹಮಂತ್ರಿ’ ಎಂಬ ಹೊಸ ಬಗೆಯ ರಿಯಾಲಿಟಿ ಶೋ ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇದೀಗ ಮತ್ತಷ್ಟು ಮೆರುಗು ನೀಡಲು ಇದೇ ಮೊದಲ ಬಾರಿಗೆ ಸುವರ್ಣ ವಾಹಿನಿಯ ಮೂಲಕ ಖ್ಯಾತ ನಟ ರವಿಶಂಕರ್ ಕಿರುತೆರೆಗೆ ಪದಾರ್ಪಣೆ ಮಾಡಿದ್ದಾರೆ. ಇನ್ಮುಂದೆ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ನಟ ರವಿಶಂಕರ್ (Ravi Shankar)  ಹೊರಲಿದ್ದಾರೆ. ವರ್ಷಗಳ ಬಳಿಕ ನಟ ರವಿ ಶಂಕರ್ ಅವರನ್ನು ಗೃಹಮಂತ್ರಿ ಪ್ರೋಮೋದಲ್ಲಿ ನೋಡಿದ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ವ್ಯಕ್ತ ಪಡಿಸಿದ್ದು, ‘ಸುವರ್ಣ ಗೃಹಮಂತ್ರಿ’ಯ ಸಂಚಿಕೆಯಲ್ಲಿ ರವಿಶಂಕರ್ ರವರ ನಿರೂಪಣೆಯನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ.

    ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡೋ ಗೃಹಿಣಿಯರನ್ನು, ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ, ಮನೆ ಮಂದಿಯನ್ನು ಅವ್ರು ಎಷ್ಟೇ ಚೆನ್ನಾಗಿ ನೋಡ್ಕೊಂಡ್ರು ‘ಥ್ಯಾಂಕ್ ಯು’ ಅಂತನೂ ಹೇಳಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡ್ತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರಿಗೆ ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜೊತೆ ರೇಷ್ಮೆ ಜೊತೆ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ “ಸುವರ್ಣ ಗೃಹಮಂತ್ರಿ” ಕಾರ್ಯಕ್ರಮದ ಶೈಲಿಯಾಗಿದೆ.

     

    ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಇನ್ಮುಂದೆ ನಟ ರವಿಶಂಕರ್ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ಕೊಟ್ಟು ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ. ಇದೇ ಸೋಮವಾರದಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ಈ ಸಂಚಿಕೆಗಳು ಪ್ರಸಾರವಾಗಲಿವೆ.

  • ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

    ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

    ಮೈಸೂರು: ನನಗೆ ಕೆಆರ್ ನಗರದ ಸಂತ್ರಸ್ತೆ ಗೊತ್ತಿಲ್ಲ. ಆಕೆಯ ಜೊತೆ ನಾನು ಮಾತನಾಡಿಲ್ಲ. ದೂರನ್ನೂ ಕೊಡಿಸಿಲ್ಲ ಎಂದು ಕೆಆರ್ ನಗರದ (KR Nagar) ಶಾಸಕ ರವಿಶಂಕರ್ (D Ravishankar) ಅವರು ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್ ಆರೋಪವನ್ನು ಅಲ್ಲಗೆಳೆದಿದ್ದಾರೆ.

    ರೇವಣ್ಣ (HD Revanna) ಬಂಧನದಲ್ಲಿ ಕೆಆರ್ ನಗರ ಶಾಸಕ ರವಿಶಂಕರ್ ಕೈವಾಡವಿದೆ ಎಂಬ ಲಿಂಗೇಶ್ ಆರೋಪದ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಕಂಪ್ಲೆಂಟ್ ಕೊಟ್ಟಿದ್ದು ನಾನು ಎಂಬ ಆರೋಪ ಸತ್ಯಕ್ಕೆ ದೂರವಾದ ಮಾತು. ಇದರಲ್ಲಿ ಯಾರೋ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡುವ ಸಲುವಾಗಿ ಪತ್ರಿಕಾಗೋಷ್ಠಿ ಕರೆದಿದ್ದೇನೆ. ನನ್ನ ಹೆಸರನ್ನು ತಂದಿದ್ದಕ್ಕೆ ನಾನು ಮಾನನಷ್ಟ ಮೊಕದ್ದಮೆಯನ್ನು ಹಾಕುತ್ತೇನೆ ಎಂದರು. ಇದನ್ನೂ ಓದಿ: ದೆಹಲಿ ಬಳಿಕ ಅಹಮದಾಬಾದ್ ಶಾಲೆಗಳಿಗೂ ಬಾಂಬ್ ಬೆದರಿಕೆ

    ಕೆಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿರುವ ಕಾರಣ ನನ್ನ ಹೆಸರನ್ನು ಎಳೆಯುತ್ತಿದ್ದಾರೆ. ಮಹಿಳೆ ಮತ್ತು ಆಕೆಯ ಮಗ ನನ್ನ ಸಂಪರ್ಕದಲ್ಲಿಲ್ಲ. ದೂರು ಕೊಡುವ ಸಂದರ್ಭದಲ್ಲಿ ನಾನು ಚಿಕ್ಕೋಡಿಯ ನಿಪ್ಪಾಣಿಯಲ್ಲಿದ್ದೆ. ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ನನ್ನ ಹೆಸರು ಹಾಳು ಮಾಡುವ ನಿಟ್ಟಿನಲ್ಲಿ ಈ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ನಾನು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ವತಿಯಿಂದ ನಮಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದರು. ನಾನು ಇಲ್ಲಿ ಚುನಾವಣೆ ಮುಗಿದ ಮೇಲೆ ಅಲ್ಲಿಗೆ ಹೋಗಿದ್ದೆ. ನಾನು ಅಲ್ಲಿ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೆ. ಇದಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಜೊತೆಗೆ ಆ ಹುಡುಗನ ವಿಚಾರ ಅಥವಾ ಅವರ ತಾಯಿಯ ವಿಚಾರ ಯಾವುದೂ ನನ್ನ ಗಮನಕ್ಕೆ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಅವರಿಲ್ಲ. ನನಗೆ ಅದರ ಬಗ್ಗೆ ಅರಿವೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಬಿ.ವಿ ಶ್ರೀನಿವಾಸ್

  • ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಶಾಸಕ ರವಿಶಂಕರ್‌ ಷಡ್ಯಂತ್ರದಿಂದ ರೇವಣ್ಣ ಅರೆಸ್ಟ್‌: ಹಾಸನ ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌

    ಹಾಸನ: ಕೆಆರ್‌ ನಗರದ ಕಾಂಗ್ರೆಸ್‌ ಶಾಸಕ ಡಾ. ರವಿಶಂಕರ್‌ (RaviShankar) ಅವರ ಚಿತಾವಣೆಯಿಂದ ಹೆಚ್‌ಡಿ ರೇವಣ್ಣ (HD Revanna) ಮೇಲೆ ಅಪಹರಣ ಪ್ರಕರಣ (Kidnap Case) ದಾಖಲಾದ ಬಳಿಕ ಬಂಧನ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್‌ ಗಂಭೀರ ಆರೋಪ ಮಾಡಿದ್ದಾರೆ.

    ಹಾಸನದಲ್ಲಿ ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ,ಮಾಜಿ ಶಾಸಕ ಲಿಂಗೇಶ್‌ ಮತ್ತು ಶ್ರವಣಬೆಳಗೊಳ ಶಾಸಕ  ಸಿ.ಎನ್.ಬಾಲಕೃಷ್ಣ ಅವರು ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದರು. ಇದನ್ನೂ ಓದಿ: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?

     

    ವಿಶೇಷ ತನಿಖಾ ತಂಡವನ್ನು (SIT) ಸರ್ಕಾರ ರಚನೆ ಮಾಡಿದ ದಿನವೇ ಒಂದು ಪ್ರಕರಣ ದಾಖಲಾಗುತ್ತದೆ. ಈ ಪ್ರಕರಣದಲ್ಲಿ ಏನು ಇಲ್ಲ. ಸುಲಭವಾಗಿ ಜಾಮೀನು (Bail) ಸಿಗುತ್ತದೆ ಎಂಬ ಕಾರಣಕ್ಕೆ ಮೇ 2 ರಂದು ಕೆ.ಆರ್‌ನಗರ ಶಾಸಕರು ಷಡ್ಯಂತ್ರ ಮಾಡಿ ರೇವಣ್ಣ ಮೇಲೆ ಅಪಹರಣ ಕೇಸ್‌ ಕೊಟ್ಟಿದ್ದಾರೆ. ಈ ಪ್ರಕರಣದ ನಂತರ ಎಸ್‌ಐಟಿ ಬಂಧಿಸಿದೆ ಎಂದು ಲಿಂಗೇಶ್‌ ದೂರಿದರು.

    ಸಿ.ಎನ್.ಬಾಲಕೃಷ್ಣ ಮಾತನಾಡಿ, ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಹಿಂದೆ ಯಾರಿದ್ದಾರೆ? ಆತನ ಜೊತೆ ಟೇಬಲ್‌ ಸಭೆ ಮಾಡಿದವರು ಯಾರು? ರಾಜ್ಯ ಮಟ್ಟದಲ್ಲಿ ದೊಡ್ಡ ನಾಯಕರು ಚರ್ಚೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆದು ಸತ್ಯಾಂಶ ಆದಷ್ಟು ಬೇಗ ಹೊರಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು – ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

     

    ಪೆನ್ ಡ್ರೈವ್‌ ವಿಚಾರವನ್ನು ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ರೇವಣ್ಣ ಅವರು ಎಲ್ಲಿಯೂ ಅಡಗಿ ಕುಳಿತ್ತಿಲ್ಲ. ಕೇಸ್ ದಾಖಲಾದಾಗಿನಿಂದ ಅವರು ಕ್ಷೇತ್ರದಲ್ಲಿ ಇದ್ದಾರೆ. ರೇವಣ್ಣ ಅವರನ್ನು ಬಂಧನ ಮಾಡುವ ಅವಶ್ಯಕತೆ ಇರಲಿಲ್ಲ. ಅವರು ಹಿರಿಯ ನಾಯಕರು, ಮಾಜಿ ಸಚಿವರಾಗಿರುವ ಕಾರಣ ವಿಚಾರಣೆಗೆ ಕರೆಯಬಹುದಿತ್ತು. ಅವರು ಎಲ್ಲಾ ರೀತಿಯ ತನಿಖೆಗೆ ಸಹಕಾರ ಮಾಡುತ್ತಿದ್ದು ರೇವಣ್ಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

     

  • ಕ್ರೇಜಿಸ್ಟಾರ್ ಪುತ್ರನ ಜೊತೆ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡ ಅದಿತಿ ಪ್ರಭುದೇವ್

    ಕ್ರೇಜಿಸ್ಟಾರ್ ಪುತ್ರನ ಜೊತೆ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡ ಅದಿತಿ ಪ್ರಭುದೇವ್

    ನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್‌ ಯು ಅಭಿ’ (Love You Abhi) ಎಂಬ ಕನ್ನಡ ವೆಬ್‌ ಸಿರೀಸ್‌ (Web Series) ಮೇ 19ರಂದು ‘JioCinema’ದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. ಕಾಳಿ ವೇಲಾಯುಧಂ ನಿರ್ಮಾಣ ಮಾಡಿ ನಿರ್ದೇಶಿಸಿರುವ ‘JioCinema’ ಒರಿಜಿನಲ್‌ ವೆಬ್‌ ಸಿರೀಸ್‌ನಲ್ಲಿ ಅದಿತಿ ಪ್ರಭುದೇವ (Aditi Prabhudev), ವಿಕ್ರಮ್‌ ರವಿಚಂದ್ರನ್‌ ಮತ್ತು ರವಿಶಂಕರ್‍ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

    ಎಲ್ಲರೊಳಗೊಬ್ಬ ಶಿವ

    ಹಿರಿಯ ನಟ ರವಿಚಂದ್ರನ್‌ ಅವರ ಪುತ್ರ ವಿಕ್ರಮ್‌ ರವಿಚಂದ್ರನ್ (Vikram Ravichandran) ಅವರಿಗೂ ಇದು ಮೊದಲ ವೆಬ್‌ ಸಿರೀಸ್‌. ತಮ್ಮ ಪಾತ್ರದ ಕುರಿತು ತುಂಬ ಉತ್ಸಾಹದಿಂದ ವಿವರಿಸುತ್ತಾರೆ ವಿಕ್ರಮ್. ‘ಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ. ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ ನ್ಯಾಯೋಚಿತವೇ’ ಎಂಬ ಮಾತಿದೆ. ಆದರೆ ಶಿವ ಮತ್ತು ಅವನ ಬದುಕಿನ ವಿಷಯಕ್ಕೆ ಬಂದಾಗ, ಅವನ ಪ್ರೇಮದಲ್ಲಿಯೂ, ಬದುಕಿನಲ್ಲಿ ಹೋರಾಟದಲ್ಲಿಯೂ ನ್ಯಾಯೋಚಿತವಾಗಿದ್ದು ನಡೆಯುವುದೇ ಇಲ್ಲ’. ಎಂದು ತಮ್ಮ ಪಾತ್ರದ ಕುರಿತು ವಿವರಿಸುತ್ತಾರೆ ಶಿವನ ಪಾತ್ರಕ್ಕೆ ಜೀವ ತುಂಬಿದ ವಿಕ್ರಮ್ ರವಿಚಂದ್ರನ್.

    ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅದಿತಿ ಪ್ರಭುದೇವ ‘ಲವ್‌ ಯು ಅಭಿ’ಯ ಮೂಲಕ ವೆಬ್‌ ಸಿರೀಸ್‌ ಜಗತ್ತಿಗೂ ಜಿಗಿದಿದ್ದಾರೆ. ಇವರಿಬ್ಬರ ಕ್ಯೂಟ್‌ ಕಾಂಬಿನೇಷನ್‌ ಜೊತೆ ಖ್ಯಾತ ನಟ ರವಿಶಂಕರ್‍ ಅವರ ಅಬ್ಬರದ ಭರ್ಜರಿ ಮಸಾಲೆಯೂ ಇದೆ. ಪೊಲೀಸ್‌ ಅಧಿಕಾರಿಯಾಗಿ ರವಿಶಂಕರ್‍ ಅವರ ಆರ್ಭಟವನ್ನು ನೋಡಿಯೇ ಸವಿಯಬೇಕು. ಇದನ್ನೂ ಓದಿ:’ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಕನ್ನಡ ಫಸ್ಟ್ ಲುಕ್ ಗೆ ಶಿವಣ್ಣ ವಾಯ್ಸ್

    ‘ಎಲ್ಲ ಕಲಾವಿದರೂ ತಮ್ಮದೇ ಆದ ರಿದಮ್ ನಲ್ಲಿ, ಮನೋಭಾವದಲ್ಲಿ ನಟಿಸುತ್ತ ಹೋಗುತ್ತಿರುತ್ತೇವೆ. ಕಲಾವಿದರ ಜರ್ನಿ ಹಾಗೆಯೇ ಇರುತ್ತದೆ. ಒಂದೊಂದ್ಸಲ ಅದು ಬ್ರೇಕ್ ಆಗಬೇಕಾಗುತ್ತದೆ. ಅಭಿ ನನ್ನ ನಟನಾಪಯಣವನ್ನು ಹಾಗೆ ಬ್ರೇಕ್ ಮಾಡಿದಂಥ ಪಾತ್ರ. ನನ್ನ ಇಡೀ ವ್ಯಕ್ತಿತ್ವಕ್ಕೇ ಚಾಲೆಂಜ್ ಮಾಡಿದಂಥ ಪಾತ್ರ. ಆ ಪಾತ್ರದಲ್ಲಿ ನಟಿಸುತ್ತ ನನ್ನ ವ್ಯಕ್ತಿತ್ವದಲ್ಲೂ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೀನಿ. ಐ ಲವ್ ಅಭಿ. ಬಹುಶಃ ತುಂಬ ಜನರಿಗೆ ಅಭಿ ಇಷ್ಟ ಆಗ್ತಾಳೆ’ ಎಂದು ತುಂಬ ವಿಶ್ವಾಸದಿಂದ ಹೇಳುತ್ತಾರೆ ಅದಿತಿ ಪ್ರಭುದೇವ.

    ಪ್ರೇಮ, ವಿರಹ, ಕೊಲೆ, ತನಿಖೆ ಹೀಗೆ ನೋಡುಗರನ್ನು ಕುರ್ಚಿಯ ತುದಿಯಲ್ಲಿ ಕೂಡುವಂತೆ ಮಾಡಬಲ್ಲ ಎಲ್ಲ ಅಂಶಗಳೂ ಇದರಲ್ಲಿದೆ. ಒಂದು ಸಾವಿನ ಸುತ್ತ ಬೆಳೆಯುತ್ತ ಹೋಗುವ ಈ ಕಥನದಲ್ಲಿ ಮನಸ್ಸನ್ನು ಭಾವುಕಗೊಳಿಸುವ ಸನ್ನಿವೇಶಗಳಿವೆ, ದಾಂಪತ್ಯದ ಮಧುರ ಕ್ಷಣಗಳನ್ನು ಉಣಬಡಿಸುವ ದೃಶ್ಯಗಳಿವೆ, ಪ್ರೇಮದ ವ್ಯಾಮೋಹ ಮತ್ತು ಸತ್ಯದ ಹಂಬಲದ ನಡುವಿನ ಘರ್ಷಣೆಯೂ ಇದೆ. ಅನುಮಾನ, ವಂಚನೆ, ಮುಗ್ಧ ಪ್ರೇಮ, ಒಳ್ಳೆಯತನ, ಸ್ವಾರ್ಥ, ಪ್ರಾಮಾಣಿಕತೆ ಎಲ್ಲ ಗುಣಗಳೂ ಸೇರಿ ರೂಪುಗೊಂಡ ಅಪರೂಪದ ರಸಪಾಕ ‘ಲವ್‌ ಯು ಅಭಿ’. ಮೂವತ್ತು ನಿಮಿಷಗಳ ಏಳು ಎಪಿಸೋಡ್‌ಗಳಲ್ಲಿ ಅಭಿಯ ಬದುಕಿನ ಕಥೆಯನ್ನು ಹೇಳಲಾಗಿದೆ.

    ಕನ್ನಡ ದೃಶ್ಯಮಾಧ್ಯಮ ಲೋಕಕ್ಕೆ ಹೊಸ ಫ್ಲೇವರ್ ಪರಿಚಯಿಸಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್ ಕಥೆಯಲ್ಲಿ ಹೊಸ ಉತ್ಸಾಹದ ನಟರ ಜೊತೆಗೆ ವಿನಯಾ ಪ್ರಸಾದ್, ರಚಿತಾ ಮಹಾಲಕ್ಷ್ಮಿ, ಅಶೋಕ್ ಶರ್ಮ, ಶ್ರೀನಾಥ್, ಅಂಬಿಕಾ, ಶ್ರೀನಿವಾಸ ಮೂರ್ತಿ, ಸುಂದರ್‍ರಾಜ್‌ ಹೀಗೆ ಅನುಭವಿ ಕಲಾವಿದರ ದಂಡೂ ಇದೆ.

    ‘ಲವ್‌ ಯು ಅಭಿ’ಗೆ ಅರುಣ್ ಬ್ರಹ್ಮ ಅವರ ಕ್ಯಾಮೆರಾ ಚಳಕವಿದ್ದು, ಪ್ರದಿಪ್‌ ರಾಘವ್ ಸಂಕಲನ ಮಾಡಿದ್ದಾರೆ. ನಿಜಿಲ್‌ ದಿನಕರ್‍ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ನಿರ್ವಹಿಸಿದ್ದಾರೆ. ಅಭಿಲಾಷ್‌ ಗೌಡ ಮತ್ತು ಜಿ.ವಿ. ಸತೀಶ್‌ ಕುಮಾರ್ ಜಂಟಿಯಾಗಿ ಮಾತುಗಳನ್ನು ಪೋಣಿಸಿದ್ದಾರೆ.

  • ಭೈರಾದೇವಿಯಾಗಿ ಬರಲಿದ್ದಾರೆ ರಾಧಿಕಾ ಕುಮಾರಸ್ವಾಮಿ

    ಭೈರಾದೇವಿಯಾಗಿ ಬರಲಿದ್ದಾರೆ ರಾಧಿಕಾ ಕುಮಾರಸ್ವಾಮಿ

    ಸೋಷಿಯಲ್ ಮೀಡಿಯಾದಲ್ಲಿ ಆಗೊಂದು ಈಗೊಂದು ವಿಡಿಯೋ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy), ಈ ಬಾರಿ ಪೂರ್ಣಪ್ರಮಾಣದಲ್ಲಿ ಅದರಲ್ಲೂ ಥಿಯೇಟರ್ ನಲ್ಲೇ ಅಭಿಮಾನಿಗಳ ಜೊತೆ ಮುಖಾಮುಖಿ ಆಗಲು ಸಿದ್ಧತೆ ನಡೆಸಿದ್ದಾರೆ. ರಾಧಿಕಾ ನಟನೆಯ ಭೈರಾದೇವಿ (Bhairadevi) ಸಿನಿಮಾ ಸಂಪೂರ್ಣ ಚಿತ್ರೀಕರಣ ಮುಗಿಸಿಕೊಂಡಿದ್ದು, ಶೂಟಿಂಗ್ ನಂತರದ ಕೆಲಸಗಳು ನಡೆಯುತ್ತಿವೆ.

    ಈ ಸಿನಿಮಾದಲ್ಲಿ ರಾಧಿಕಾ ವಿಶೇಷ ಪಾತ್ರವನ್ನು ನಿರ್ವಹಿಸಿದ್ದಾರೆ. ಭೈರಾದೇವಿಯಾಗಿ ಅವರು ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರಂತೆ. ಅದೊಂದು ವಿಶೇಷ ಅವತಾರದ ಪಾತ್ರವಾಗಿದ್ದರಿಂದ ಅವರ ವೃತ್ತಿ ಜೀವನದ ಮಹತ್ವದ ಪಾತ್ರ ಇದಾಗಿದೆಯಂತೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ವಿಭಿನ್ನವಾಗಿದೆ. ಭೈರಾದೇವಿಯಾಗಿ ರಾಧಿಕಾ ಕಾಣಿಸಿಕೊಳ್ಳುತ್ತಿದ್ದರೆ, ಅಘೋರಿ ಪಾತ್ರದಲ್ಲಿ ಖಳನಟ ರವಿಶಂಕರ್ (Ravishankar) ಅಭಿನಯಿಸಿದ್ದಾರೆ. ರಾಧಿಕಾ ಅವರ ಗುರುವಿನ ಪಾತ್ರ ಅದಾಗಿದೆಯಂತೆ. ಅಲ್ಲದೇ, ಪೊಲೀಸ್ ಆಫೀಸರ್ ಪಾತ್ರದಲ್ಲಿ ರಮೇಶ್ ಅರವಿಂದ್ (Ramesh Aravind) ಇರುವುದು ಮತ್ತೊಂದು ವಿಶೇಷ. ಮೊನ್ನೆಯಷ್ಟೇ ಸಿನಿಮಾ ಟೀಸರ್ ಕೂಡ ರಿಲೀಸ್ ಮಾಡಿದೆ ಚಿತ್ರತಂಡ.

    ರಾಧಿಕಾ ಪಂಡಿತ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡದೇ ಇದ್ದರೂ, ಆಗೊಂದು ಈಗೊಂದು ಸಿನಿಮಾ ಮಾಡುವ ಮೂಲಕ ಸಿನಿಮಾ ರಂಗದಲ್ಲಿ ತಮ್ಮ ಇರುವಿಕೆಯನ್ನು ತೋರ್ಪಡಿಸುತ್ತಿದ್ದಾರೆ. ನಟಿಯಾಗಿ, ನಿರ್ಮಾಪಕಿಯಾಗಿ ರಾಧಿಕಾ ಗುರುತಿಸಿಕೊಂಡಿದ್ದರೂ, ರೆಗ್ಯುಲರ್ ಆಗಿ ಸಿನಿಮಾ ಮಾಡಲಿ ಎನ್ನುವುದು ಅವರ ಅಭಿಮಾನಿಗಳ ಆಸೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k