Tag: ರವಿಶಂಕರ್

  • ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ಟ ಹಾಗೂ ಶಾಸಕ  ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸುವುದರೊಂದಿಗೆ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ “ಗರಡಿ” ಮನೆ ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಹಂತದ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು  ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶಸ್ ಸೂರ್ಯ, ಸೋನಾಲ್ ‍ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. “ಗರಡಿ” ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಯೋಗರಾಜ್ ಭಟ್. ಇದನ್ನೂ ಓದಿ: ದುಬೈಗೆ ಹಾರಿದ ಮಾಲಾಶ್ರೀ ಪುತ್ರಿ ರಾಧನಾ ರಾಮ್

    ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ  ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದ ಬಿ.ಸಿ.ಪಾಟೀಲ್ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ.  ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.

    ನಾಯಕಿ ಸೋನಾಲ್ ಮೊಂತೆರೊ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಟ “ಆರ್ಮುಗಂ” ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದರು. ನಟ ಸುಜಯ್ ಬೇಲೂರ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಕಲಾವಿದರಾದ ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಹಾಗೂ ಕಥೆ ಬರೆದಿರುವ  ವಿಕಾಸ್ “ಗರಡಿ” ಚಿತ್ರದ ಕುರಿತು ಮಾತನಾಡಿದರು. ನಿರ್ಮಪಕಿ ಸೃಷ್ಟಿ ಪಾಟೀಲ್ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೂ ಧನ್ಯವಾದ ತಿಳಿಸಿದರು. ನಿರ್ಮಾಪಕ ಬಿ.ಸಿ.ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಾಯಕ ಯಶಸ್ ಸೂರ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಜವಾರಿ ಭಾಷೆಯಲ್ಲಿ ರೆಡಿ ಆಯಿತು ‘ಬಯಲುಸೀಮೆ’ ಸಿನಿಮಾ

    ಭಾಷೆಯ ಗಡಿ ಎಂಬ ಎಲ್ಲೆಯನ್ನು ಮೀರಿದ್ದು ಸಿನಿಮಾ. ಅದರ ಉದ್ದೇಶ ಒಂದೇ ಮನರಂಜನೆ. ಇದೀಗ ಅದೇ ಮನರಂಜನೆ ಉದ್ದೇಶ ಇಟ್ಟುಕೊಂಡು ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ‘ಬಯಲು ಸೀಮೆ’ ಸಿನಿಮಾ ರೆಡಿಯಾಗಿದೆ.  ವರುಣ್ ಕಟ್ಟೀಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಬಯಲುಸೀಮೆ’ ಸಿನಿಮಾ ಹೆಸರೇ ಸೂಚಿಸುವಂತೆ ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ರಗಡ್ ಕಥೆ ಈ ಸಿನಿಮಾದ ಜೀವಾಳ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟವನ್ನಿಟ್ಟುಕೊಂಡು ಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ ವರುಣ್ ಕಟ್ಟೀಮನಿ. ಕಥೆಗೆ ತಕ್ಕಂತೆ ಸಾಕಷ್ಟು ಟ್ವಿಸ್ಟ್ ಟರ್ನ್ ಗಳು ಚಿತ್ರದಲ್ಲಿದ್ದು, ನೋಡುಗರನ್ನು ಥ್ರಿಲ್ ಗೊಳಿಸುವ ಕಥಾಹಂದರ ಸಿನಿಮಾದಲ್ಲಿದೆ. ಈಗಾಗಲೇ ಸಿನಿಮಾದ ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ಸೆನ್ಸಾರ್ ನಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿರುವ ಈ ಸಿನಿಮಾ ಸದ್ಯದಲ್ಲೇ ತೆರೆ ಕಾಣೋದಕ್ಕೆ ರೆಡಿಯಾಗಿದೆ.

    ವರುಣ್ ಕಟ್ಟೀಮನಿ ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ಆರ್ಮುಗಂ ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.  ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಈ ಸಿನಿಮಾ ಉತ್ತರ ಕರ್ನಾಟಕದ ಖಡಕ್ ಖಾನಾವಳಿ ಊಟ ಇದ್ದಂಗೆ. ಕಂಪ್ಲೀಟ್ ಸಿನಿಮಾ ಉತ್ತರ ಕರ್ನಾಟಕ ಸ್ಲ್ಯಾಂಗ್ ಇರುತ್ತೆ. ಎಲ್ಲಾ ಕಲಾವಿದರು ಆ ಸ್ಲ್ಯಾಂಗ್ ನಲ್ಲೇ ಡಬ್ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಪೊಲಿಟಿಕಲ್, ಕ್ರೈಂ,ಅಲ್ಲಿನ ಸಂಸ್ಕೃತಿ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಕಮರ್ಶಿಯಲ್ ಎಲಿಮೆಂಟ್ ಗಳನ್ನು ಇಟ್ಟುಕೊಂಡು ವಿಭಿನ್ನವಾಗಿ ಕಥೆಯನ್ನು ಹೇಳುವ ಪ್ರಯತ್ನ ಮಾಡಿದ್ದೇವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ವರುಣ್ ಕಟ್ಟೀಮನಿ.

    ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿ ಆರ್ ಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾವರ್ಕ್, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ದಂಡುಪಾಳ್ಯ ನಿರ್ದೇಶಕನ ಮತ್ತೊಂದು ಸಿನಿಮಾ ‘ಹುಬ್ಬಳ್ಳಿ ಡಾಬಾ’

    ದಂಡುಪಾಳ್ಯ ನಿರ್ದೇಶಕನ ಮತ್ತೊಂದು ಸಿನಿಮಾ ‘ಹುಬ್ಬಳ್ಳಿ ಡಾಬಾ’

    ಶ್ರೀನಿವಾಸರಾಜು (Srinivas Raju) ನಿರ್ದೇಶನದ, ಚರಣ್ ಅರ್ಜುನ್ ಸಂಗೀತ ನೀಡಿರುವ “ಹುಬ್ಬಳ್ಳಿ ಡಾಬಾ” (Hubli Dhaba)  ಚಿತ್ರದ ಹಾಡೊಂದು‌ ಆದಿತ್ಯ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.  ಡಾ||ವಿ.ನಾಗೇಂದ್ರಪ್ರಸಾದ್ ಈ ಹಾಡನ್ನು ಬರೆದಿದ್ದಾರೆ. ಮೋಹನ ಭೋಗರಾಜು ಹಾಡಿರುವ ಈ  ಹಾಡು ಮೆಚ್ಚುಗೆ ಪಡೆಯುತ್ತಿದೆ.  ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 4 ರಂದು ತೆರೆಗೆ ಬರಲಿದೆ.

    “ದಂಡುಪಾಳ್ಯ”, ” ಶಿವಂ” ಸೇರಿದಂತೆ ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಅವರ ನಿರ್ದೇಶನದ 10ನೇ ಚಿತ್ರವಿದು. ನಿರ್ದೇಶಕರೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. “ಹುಬ್ಬಳ್ಳಿ ಡಾಬಾ” ಚಿತ್ರ ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ನವೆಂಬರ್ 4 ರಂದು ಎರಡೂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಇದನ್ನೂ ಓದಿ:ರೂಪೇಶ್-ಸಾನ್ಯ ಲವ್‌ಸ್ಟೋರಿಯಲ್ಲಿ ಹೊಸ ಟ್ವಿಸ್ಟ್: ಗುರೂಜಿ ಸೊಸೆಯಂತೆ ಸಾನ್ಯ

    ನವೀನ್ ಚಂದ್ರ, ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ, ರವಿಶಂಕರ್ (Ravi Shankar), ರಾಜಾ ರವೀಂದರ್, ಅಯ್ಯಪ್ಪ ಶರ್ಮ, ನಾಗಾ ಬಾಬು, ಪೃಥ್ವಿ, ಪೂಜಾ ಗಾಂಧಿ (Pooja Gandhi), ರವಿ ಕಾಳೆ, ಪೆಟ್ರೋಲ್ ಪ್ರಸನ್ನ, ಡ್ಯಾನಿ ಕುಟ್ಟಪ್ಪ, ಮುನಿರಾಜು, ಜೈದೇವ್ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  ವೆಂಕಟ್ ಪ್ರಸಾದ್ ಛಾಯಾಗ್ರಹಣ, ಗ್ಯಾರಿ ಬಿ.ಹೆಚ್ ಸಂಕಲನ ಹಾಗೂ ವೆಂಕಟ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸ ಹುಡುಗರ ಸಾಹಸಕ್ಕೆ ಸಾಥ್ ನೀಡಿದ ಡಾಲಿ ಧನಂಜಯ್: ಸ್ಯಾಂಡಲ್ ವುಡ್ ಗೆ ನವ ‘ಸೂರ್ಯ’

    ಹೊಸ ಹುಡುಗರ ಸಾಹಸಕ್ಕೆ ಸಾಥ್ ನೀಡಿದ ಡಾಲಿ ಧನಂಜಯ್: ಸ್ಯಾಂಡಲ್ ವುಡ್ ಗೆ ನವ ‘ಸೂರ್ಯ’

    ನ್ನಡ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ನಟ ಬಿ.ಸುರೇಶ ಬಳಿ ಕೆಲಸ ಮಾಡಿದ ಸಾಗರ್ (Sagar), ಇದೀಗ ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪ್ರವೇಶ ಮಾಡುತ್ತಿದ್ದಾರೆ. ಇವರ ನಿರ್ದೇಶನದಲ್ಲಿ ಬರುತ್ತಿರುವ ಚಿತ್ರಕ್ಕೆ ‘ಸೂರ್ಯ’ (Surya) ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಮತ್ತೋರ್ವ ನಾಯಕ ನಟನ ಎಂಟ್ರಿ ಆಗುತ್ತಿದ್ದು, ಸೂರ್ಯ ಚಿತ್ರದ ಮೂಲಕ ಪ್ರಶಾಂತ್ (Prashant) ಚಿತ್ರ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಇಂದು ಪ್ರಶಾಂತ್ ಅವರ ಹುಟ್ಟು ಹಬ್ಬವಾಗಿದ್ದು, ಈ ದಿನದಂದು ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಡಾಲಿ ಧನಂಜಯ್ (Dhananjay) ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ತಂಡಕ್ಕೆ ಸಾಥ್ ನೀಡಿದ್ದಾರೆ.

    ನಿರ್ದೇಶಕ ಸಾಗರ್ ಈ ಹಿಂದೆ ಕಿರುತೆರೆ ಜಗತ್ತಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದು, ಇದೀಗ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಮೊದಲ ಸಿನಿಮಾದಲ್ಲೇ ಲವ್ ಸ್ಟೋರಿ ಜೊತೆಗೆ ಸಾಹಸ ಪ್ರಧಾನ ಅಂಶಗಳನ್ನು ಬೆರೆಸಿ, ಪಕ್ಕಾ ಕಮರ್ಷಿಯಲ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಶಾಂತ್ ಅವರನ್ನು ಪರಿಚಯಿಸುತ್ತಿದ್ದು, ಪ್ರಶಾಂತ್ ಕೂಡ ಪಾತ್ರಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ಪಕ್ಕಾ ತಯಾರಿಯೊಂದಿಗೆ ಸಿನಿಮಾ ಶುರು ಮಾಡಿರುವ ತಂಡ, ಈ ತಿಂಗಳು ಚಿತ್ರಕ್ಕೆ ಮುಹೂರ್ತ ಸಮಾರಂಭ ನಡೆಯುತ್ತಿದ್ದು, ಅಕ್ಟೋಬರ್ ನಿಂದ ಚಿತ್ರೀಕರಣ ಆರಂಭಿಸಲಿದೆ. ಚಿತ್ರದ ಟ್ಯಾಗ್ ಲೈನ್ ‘ದಿ ಪವರ್ ಆಫ್ ಲವ್’ ಹೇಳುವಂತೆ, ಅದ್ಭುತವಾದ ಲವ್ ಸ್ಟೋರಿಯನ್ನು ಈ ಸಿನಿಮಾದಲ್ಲಿ ಹೇಳಲಿದ್ದಾರಂತೆ ನಿರ್ದೇಶಕರು. ರವಿಶಂಕರ್ (Ravi Shankar), ಶ್ರುತಿ, ಪ್ರಮೋದ್ ಶೆಟ್ಟಿ ಸೇರಿದಂತೆ ಪ್ರತಿಭಾವಂತ ಕಲಾವಿದರ ತಂಡವೇ ಸಿನಿಮಾದಲ್ಲಿದೆ.

    ತಾಂತ್ರಿಕ ವರ್ಗವೂ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾದ ಸಿನಿಮಾಟೋಗ್ರಾಫರ್ ಭುವನ್ ಜೊತೆ ಕೆಲಸ ಮಾಡಿರುವ ಮನುರಾಜ್ ಕ್ಯಾಮೆರಾಮೆನ್ ಆಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜ್ ಬಳಿ ಕೆಲಸ ಮಾಡಿರುವ ಶ್ರೀಸಸ್ತ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿರಲಿದೆ. ನಂದಿ ಸಿನಿಮಾಸ್ ಬ್ಯಾನರ್ ಅಡಿ ಬಸವರಾಜ್ ಬೆಣ್ಣಿ (Basavaraj Benni) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್‍ವುಡ್ ನಟಿಯ ಸ್ನೇಹಿತ ವಂಚನೆ ಕೇಸಲ್ಲಿ ಅರೆಸ್ಟ್

    ಸ್ಯಾಂಡಲ್‍ವುಡ್ ನಟಿಯ ಸ್ನೇಹಿತ ವಂಚನೆ ಕೇಸಲ್ಲಿ ಅರೆಸ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಕೇಸ್ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಡ್ರಗ್ಸ್ ಕೇಸ್‍ನಲ್ಲಿ ಸಿಲುಕಿದ್ದ ಚಂದನವನದ ನಟಿಯ ಸ್ನೇಹಿತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಸಿಸಿಬಿಯಲ್ಲಿ ಡ್ರಗ್ಸ್ ಕೇಸ್‍ನಲ್ಲಿ ಬಂಧನವಾಗಿ ಸದ್ದು ಮಾಡಿದ್ದ ಸ್ಯಾಂಡಲ್‍ವುಡ್ ನಟಿಯ ಆಪ್ತ, ಆರ್‍ಟಿಒ ಎಸ್‍ಡಿಎ ರವಿಶಂಕರ್ ವಂಚನೆ ಪ್ರಕರಣದಲ್ಲಿ ಮಲ್ಲೇಶ್ವರಂ ಪೊಲೀಸರ ಅತಿಥಿಯಾಗಿದ್ದಾನೆ. ವಾಹನ ಮಾಲೀಕರ ಬಳಿ ಒಂದು ವರ್ಷದ ಟ್ಯಾಕ್ಸ್ ಪಡೆದು ಟ್ಯಾಕ್ಸ್ ಕಟ್ಟದೇ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಅಜಯ್ ಹಾಗೂ ರವಿಶಂಕರ್ ಅನ್ನು ಬಂಧಿಸಲಾಗಿದೆ.  ಇದನ್ನೂ ಓದಿ: ಸಿದ್ದರಾಮೋತ್ಸವದಲ್ಲಿ ರಾಹುಲ್ ಪಾಲ್ಗೊಳ್ತಾರೆ, `ಸರಿಯಾಗಿ ನಡ್ಕೊಳಿ’ – ಕೆಪಿಸಿಸಿಗೆ ಹೈಕಮಾಂಡ್ ವಾರ್ನಿಂಗ್

    ಆರೋಪಿಗಳಾದ ರವಿಶಂಕರ್ ಹಾಗೂ ಅಜಯ್, ಆಶಾ ಯೋಗೇಶ್ ಬಳಿ ಲೈಫ್ ಟೈಮ್ ಟ್ಯಾಕ್ಸ್ ಮಾಡಿಸಿಕೊಡುವುದಾಗಿ 1,37,529 ರೂಪಾಯಿ ಪಡೆದು ಟ್ಯಾಕ್ಸ್ ಕಟ್ಟದೆ ವಂಚಿಸಿರುತ್ತಾರೆ. ಆರೋಪಿತರ ವಂಚನೆ ಬಗ್ಗೆ ಮಹಿಳೆ ಆಶಾ ಯೋಗೇಶ್ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಇಬ್ಬರನ್ನು ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ದುಬಾರಿ ದುನಿಯಾ – ಮೀನು, ಮಾಂಸ, ಗೋಧಿ ಸೇರಿ ಎಲ್ಲವೂ ಕಾಸ್ಟ್ಲಿ

    Live Tv
    [brid partner=56869869 player=32851 video=960834 autoplay=true]

  • ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಿಕ್ಕಣ್ಣ ಇದೇ ಮೊದಲ ಬಾರಿಗೆ ಹೀರೋ ಆಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾ ಶೂಟಿಂಗ್ ಮೈಸೂರು ಸುತ್ತಮುತ್ತ ನಡೆಯುತ್ತಿದೆ. ಈ ಸಂದರ್ಭದಲ್ಲಿ ಶೂಟಿಂಗ್ ಸ್ಥಳಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಕೆಲ ಹೊತ್ತು ಕಳೆದಿದ್ದಾರೆ. ಬೈರಾಗಿ ಸಿನಿಮಾದ ಪ್ರಚಾರಕ್ಕಾಗಿ ಇಂದು ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಶಿವರಾಜ್ ಕುಮಾರ್, ಈ ಸಂದರ್ಭದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ  ದೇವಿಯ ದರ್ಶನ ಕೂಡ ಪಡೆದಿದ್ದಾರೆ.

    ಚಾಮುಂಡಿ ದರ್ಶನದ ನಂತರ ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ಸ್ಥಳಕ್ಕೆ ತೆರಳಿದ ಶಿವರಾಜ್ ಕುಮಾರ್, ಕೆಲ ಹೊತ್ತು ಸಿನಿಮಾ ತಂಡದೊಂದಿಗೆ ಕಳೆದರು. ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಕೂಡ ಶಿವಣ್ಣನಿಗೆ ಸಾಥ್ ನೀಡಿದರು. ಶೂಟಿಂಗ್ ಸ್ಥಳದಲ್ಲಿ ಚಿಕ್ಕಣ್ಣ, ರವಿಶಂಕರ್ ಸೇರಿದಂತೆ ಹಲವು ಕಲಾವಿದರು ಹಾಜರಿದ್ದರು. ಉಪಾಧ್ಯಕ್ಷ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿ, ಬೈರಾಗಿ ಟೀಮ್ ಜೊತೆ ಶಿವರಾಜ್ ಕುಮಾರ್ ಚಾಮರಾಜನಗರದತ್ತ ಹೊರಟರು. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಇಂದು ಚಾಮರಾಜನಗರದಲ್ಲಿ ಬೈರಾಗಿ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಆಯೋಜನೆಯಾಗಿದೆ. ಆ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ಡಾಲಿ, ಪೃಥ್ವಿ ಅಂಬರ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಲಿದ್ದಾರೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಕೂಡ ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಇಂದು ಸಂಜೆ ಪ್ರಿ ರಿಲೀಸ್ ಇವೆಂಟ್ ಚಾಮರಾಜನಗರದಲ್ಲಿ ನಡೆಯಲಿದೆ.

    Live Tv

  • ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೂರ್ಯ ನಾಯಕನಾಗಿ ನಟಿಸುತ್ತಿರುವ, ಸೋನಾಲ್ ಮಾಂಟೆರೊ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಅದಿತ್ಯ ಆಳ್ವಾ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ

    ಅದಿತ್ಯ ಆಳ್ವಾ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ

    ಬೆಂಗಳೂರು: ಡ್ರಗ್ಸ್ ಮಾಫಿಯಾದ ಪ್ರಮುಖ ಆರೋಪಿ ಆದಿತ್ಯ ಆಳ್ವಾ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಹೆಬ್ಬಾಳದಲ್ಲಿರುವ ಹೌಸ್ ಆಫ್ ಲೀವ್ಸ್ ಮನೆಯ ಮೇಲೆ ಇನ್‍ಸ್ಪೆಕ್ಟರ್ ಗಳಾದ ಅಂಜುಮಾಲಾ ನಾಯ್ಕ್, ಪನೀತ್ ನೇತೃತ್ವದಲ್ಲಿ ದಾಳಿ ನಡೆದಿದೆ. ಆರೋಪಿ ಆದಿತ್ಯ ಆಳ್ವಾ ಮಾಜಿ ಸಚಿವ ಜೀಬರಾಜ್ ಆಳ್ವಾ ಅವರ ಪುತ್ರನಾಗಿದ್ದಾನೆ. ನಟ ವಿವೇಕ್ ಓಬೇರಾಯ್ ಅವರ ಮೈದುನ. ಬರೋಬ್ಬರಿ ಆರು ಎಕರೆ ವಿಸ್ತೀರ್ಣದಲ್ಲಿ ಆದಿತ್ಯ ಆಳ್ವಾ ಮನೆ ಇದೆ. ಇದೇ ಮನೆಯಲ್ಲಿ ವೀಕೆಂಡ್ ಪಾರ್ಟಿಗಳು ನಡೆಯುತ್ತಿರುವ ಬಗ್ಗೆ ಆರೋಪಿ ರವಿಶಂಕರ್ ತಪ್ಪೊಪ್ಪಿಕೊಂಡಿದ್ದನು. ಸಿಸಿಬಿ ಬಂಧಿಸಿರುವ ಆರು ಆರೋಪಿಗಳು ಆದಿತ್ಯ ಆಳ್ವಾ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ತಿಳಿದು ಬಂದಿದೆ.

    ಡ್ರಗ್ಸ್ ಪ್ರಕರಣದಲ್ಲಿ ರವಿಶಂಕರ್ ಬಂಧನವಾಗುತ್ತಿದ್ದಂತೆ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಮುಂಬೈ ಅಥವಾ ದೆಹಲಿಯಲ್ಲಿರೋ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಆದಿತ್ಯ ಆಳ್ವಾ ಮನೆಯಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ರಾಜಕಾರಣಿ ಮತ್ತು ಉದ್ಯಮಿಗಳ ಮಕ್ಕಳು ಸೇರಿದಂತೆ ಹಲವು ತಾರೆಯರು ಭಾಗಿಯಾಗುತ್ತಿದ್ದಾರೆ. ಪಾರ್ಟಿಗಳಲ್ಲಿ ಡ್ರಗ್ಸ್ ಹೊಳೆ ಹರಿಯುತ್ತಿತ್ತು ಎಂದು ತಿಳಿದು ಬಂದಿದೆ.

    ಸದ್ಯ ಇಂದು ಬೆಳಗ್ಗೆ ಆದಿತ್ಯ ಆಳ್ವಾ ಮನೆಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಮೊದಲು ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಮನೆಯ ಮೇಲೆಯೂ ಸಿಸಿಬಿ ದಾಳಿ ನಡೆಸಿತ್ತು.

    ರವಿಶಂಕರ್ ಹೇಳಿದ್ದೇನು?: ಪಾರ್ಟಿಗಳಿಗೆ ಬರುತ್ತಿದ್ದ ಶ್ರೀಮಂತ ಪರಿಚತರಿಗೆ ECSTASY PILL ಮಾತ್ರೆಗಳನ್ನು ವೈಭವ್ ಜೈನ್ ಸರಬರಾಜು ಮಾಡುತ್ತಿದ್ದನು. ಆದಿತ್ಯ ಆಳ್ವಾಗೆ ಸೇರಿದ ಹೌಸ್ ಆಫ್ ಲೈಫ್ ಮಾನ್ಯತಾ ಟೆಕ್ ಪಾರ್ಕ್ ಪಕ್ಕದ ಫಾರಂ ಹೌಸ್ ಮತ್ತು ಕಿಟಿಕೊ ಕ್ಲಬ್ ಗಳಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತಿತ್ತು. ಪಾರ್ಟಿ ಆಯೋಜನೆ ಸ್ಥಳ, ಬರೋರ ಹೆಸರುಗಳನ್ನ ವಾಟ್ಸಪ್ ಮೂಲಕ ಮೊದಲೇ ತಿಳಿಸಲಾಗುತ್ತಿತ್ತು ಎಂದು ಆರೋಪಿ ರವಿಶಂಕರ್ ಹೇಳಿದ್ದನು.

  • ರಾಗಿಣಿ ಡ್ರಗ್ಸ್ ಸೇವಿಸಿರೋದಕ್ಕೆ ‘ಬಿಗ್’ ಸಾಕ್ಷ್ಯ – ಆರೋಪಿ ರವಿಶಂಕರ್ ತಪ್ಪೊಪ್ಪಿಗೆ

    ರಾಗಿಣಿ ಡ್ರಗ್ಸ್ ಸೇವಿಸಿರೋದಕ್ಕೆ ‘ಬಿಗ್’ ಸಾಕ್ಷ್ಯ – ಆರೋಪಿ ರವಿಶಂಕರ್ ತಪ್ಪೊಪ್ಪಿಗೆ

    -ರಾಗಿಣಿ ನಂಟು, ಡ್ರಗ್ಸ್ ಸೇವನೆ, ನೈಟ್ ಪಾರ್ಟಿ ಲೈಫ್ ಖುಲಂ ಖುಲ್ಲಾ

    ಬೆಂಗಳೂರು: ಚಂದನವನದ ಡ್ರಗ್ಸ್ ನಶೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಬಂಧಿತ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಪ್ಪೊಪ್ಪಿಗೆ ವೇಳೆ ರವಿಶಂಕರ್, ಡ್ರಗ್ಸ್ ನಂಟು ಮತ್ತು ರಾಗಿಣಿ ಜೊತೆಗಿನ ಒಡನಾಟದ ಎಲ್ಲ ಮಾಹಿತಿಯನ್ನ ಬಾಯಿಬಿಟ್ಟಿದ್ದಾನೆ.

    ತಪ್ಪೊಪ್ಪಿಕೊಂಡಿರುವ ರವಿಶಂಕರ್ ಡ್ರಗ್ಸ್ ದಂಧೆಯ ಕರಾಳಮುಖ ತೆರೆದಿಟ್ಟಿದ್ದಾನೆ. ತನ್ನ ಪ್ರೇಮ ವಿವಾಹ ಮುರಿದಿದ್ದು ಹೇಗೆ? ರಾಗಿಣಿ ಮತ್ತು ಡ್ರಗ್ ಪೆಡ್ಲರ್ ಗಳ ಸಂಪರ್ಕಕ್ಕೆ ಬಂದಿದ್ದೇಗೆ? ಹೀಗೆ ಪ್ರತಿಯೊಂದನ್ನು ರವಿಶಂಕರ್ ಇಂಚಿಂಚಾಗಿ ಹೇಳಿಕೊಂಡಿದ್ದಾನೆ. ಆರೋಪಿ ರವಿಶಂಕರ್ ತಪ್ಪೊಪ್ಪಿಗೆಯ ನಾಲ್ಕು ಪುಟಗಳ ಸಾಕ್ಷ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ರವಿಶಂಕರ್ ತಪ್ಪೊಪ್ಪಿಗೆ:
    2010ರಲ್ಲಿ ನಾನು ಪ್ರೇಮ ವಿವಾಹವಾಗಿದ್ದೆ, ನಮಗೆ ಎಂಟು ವರ್ಷದ ಹೆಣ್ಣು ಮಗುವಿದೆ. 2013-14ರಲ್ಲಿ ನಿರ್ಮಾಪಕ ಶಿವಪ್ರಕಾಶ್ ಮೂಲಕ ನಟಿ ರಾಗಿಣಿ ದ್ವಿವೇದಿಯ ಪರಿಚಯವಾಯ್ತು. ಶಿವಪ್ರಕಾಶ್ ಕಲ್ಲು ಕ್ವಾರಿ ಸಹ ನಡೆಸುತ್ತಿದ್ದು, ಕೌಟುಂಬಿಕ ಸ್ನೇಹಿತರಾಗಿದ್ದರು. ಶಿವಪ್ರಕಾಶ್, ರಾಗಿಣಿ ಜೊತೆ ಸೇರಿ ಬ್ರಿಗೇಡ್ ರೋಡ್ ಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಭೇಟಿಯಾಗಿ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದೆ. ರಾಗಿಣಿಗೆ ತನ್ನನ್ನು ಮದುವೆಯಾಗುವಂತೆ ಶಿವಪ್ರಕಾಶ್ ಪ್ರಪೋಸ್ ಇಟ್ಟಿದ್ದರು. ಆದ್ರೆ ರಾಗಿಣಿ ತಮಗೆ ಸಮಯಾವಕಾಶ ಬೇಕೆಂದು ಹೇಳಿ ಶಿವಪ್ರಕಾಶ್ ನಿಂದ ದೂರವಾದಾಗ ನನ್ನ ಸ್ನೇಹ ನಟಿ ಜೊತೆ ಬೆಳೆಯಿತು.

    ಪತ್ನಿಗೂ ಮತ್ತು ನನಗೂ ಮನಸ್ಥಾಪಗಳು ಉಂಟಾಗಿ ಗಲಾಟೆಗಳು ನಡೆದವು. ಆಗ ಸ್ನೇಹಿತೆ ರಾಗಿಣಿ ದ್ವಿವೇದಿ ಸಲಹೆ ಪಡೆದು 2018ರಲ್ಲಿ ಪತ್ನಿಯಿಂದ ವಿಚ್ಛೇಧನ ಪಡೆದೆ. ವೀರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದ ನಮಗೆ ಹೋಟೆಲ್ ನಲ್ಲಿ ವೈಭವ್ ಜೈನ್ ಪರಿಚಯವಾದನು. ವೈಭವ್ ಜೈನ್ ಹೋಂಸ್ಟೇ ಪಾರ್ಟಿಗಳನ್ನು ಆಯೋಜಿಸುತ್ತಿದ್ದನು. ಈ ಪಾರ್ಟಿಗಳಿಗೆ ವೈಭವ್ ಸ್ನೇಹಿತರಾದ ವಿನಯ್, ರಚನ್, ಅರುಣ್, ಪ್ರಶಾಂತ್ ರಂಕಾ ಸೇರಿದಂತೆ ಹಲವು ಶ್ರೀಮಂತರು ಬರುತ್ತಿದ್ದರು.

    ಪಾರ್ಟಿಗಳಿಗೆ ಬರುತ್ತಿದ್ದ ಶ್ರೀಮಂತ ಪರಿಚತರಿಗೆ ECSTASY PILL ಮಾತ್ರೆಗಳನ್ನು ವೈಭವ್ ಸರಬರಾಜು ಮಾಡುತ್ತಿದ್ದನು. ಆದಿತ್ಯ ಆಳ್ವಾಗೆ ಸೇರಿದ ಹೌಸ್ ಆಫ್ ಲೈಫ್ ಮಾನ್ಯತಾ ಟೆಕ್ ಪಾರ್ಕ್ ಪಕ್ಕದ ಫಾರಂ ಹೌಸ್ ಮತ್ತು ಕಿಟಿಕೊ ಕ್ಲಬ್ ಗಳಲ್ಲಿ ಪಾರ್ಟಿ ಆಯೋಜನೆ ಮಾಡಲಾಗುತ್ತಿತ್ತು. ಪಾರ್ಟಿ ಆಯೋಜನೆ ಸ್ಥಳ, ಬರೋರ ಹೆಸರುಗಳನ್ನ ವಾಟ್ಸಪ್ ಮೂಲಕ ಮೊದಲೇ ತಿಳಿಸಲಾಗುತ್ತಿತ್ತು.

    ಏರ್ ಲೈನ್ಸ್ ಹೋಟೆಲ್ ಬಳಿಯಲ್ಲಿದ್ದ ಕಬಾಬ್ ಕಾರ್ನರ್ ಹತ್ತಿರ ಸೇಂಟ್ ಮಾರ್ಕ್ಸ್  ರೋಡ್‍ನಲ್ಲಿ ವೈಭವ್ ಜೈನ್ ನನಗೆ ECSTASY PILL ಮಾತ್ರೆ ನೀಡಿದ್ದನು. ಆ ಮಾತ್ರೆ ತೆಗೆದುಕೊಂಡಿದ್ದ ವೇಳೆ ಕರೆ ಮಾಡಿದ್ದ ರಾಗಿಣಿ ಊಟಕ್ಕೆ ಕರೆದಿದ್ದರು.

    ಏರ್ ಲೈನ್ಸ್ ಹೋಟೆಲ್ ನಲ್ಲಿ ಪರಿಚತರಾಗಿದ್ದ ಪ್ರಶಾಂತ್ ರಾಜು ಅವರ ಹುಟ್ಟುಹಬ್ಬದ ಪಾರ್ಟಿಗೆ ಜೂನ್ 28ರಂದು ಯಲಹಂಕದ ನ್ಯೂ ಟೌನ್ ಬಳಿ ಇರುವ ಲೇ-ರೋಮಾಗೆ ನಾನು, ರಾಗಿಣಿ, ಪ್ರಶಾಂತ್ ರಾಜು, ಅವರ ಸ್ನೇಹಿತ ಹನುಮಂತು, ಸಂತೋಷ್, ರವಿನಾ, ಸುನಿಲ್ ಹೋಗಿದ್ದೇವು. ಆಗ ಪಕ್ಕದ ಕೊಠಡಿಯಲ್ಲಿ ವೈಭವ್ ಜೈನ್ ಮತ್ತು ಆತನ ಸಂಗಡಿಗರು ಉಳಿದುಕೊಂಡಿದ್ದರು. ನಾವು ಕೇಕ್ ಕಟ್ ಮಾಡಿದ ಬಳಿಕ ರಾತ್ರಿ 12.30ಕ್ಕೆ ವೈಭವ್ ಜೈನ್ ನನಗೆ ECSTASY PILL ಅರ್ಧ ಮಾತ್ರೆ ನೀಡಿದ. ಆ ಮಾತ್ರೆಯನ್ನ ನಾನು, ರಾಗಿಣಿ ಮತ್ತು ರವಿನಾ ಸ್ವಲ್ಪ ಸ್ವಲ್ಪ ತೆಗದುಕೊಂಡೆವು.

    ಅದೇ ದಿನ ರಾತ್ರಿ ಕನಕಪುರ ರಸ್ತೆಯಲ್ಲಿರುವ ಪ್ರಶಾಂತ್ ಸ್ನೇಹಿತರ ಕುಟುಂಬಸ್ಥರ ಹುಟ್ಟುಹಬ್ಬ ಇದ್ದಿದ್ದರಿಂದ ರಾತ್ರಿ 3.30ಕ್ಕೆ ಅವರ ರೆಸಾರ್ಟ್ ಗೆ ಹೋದೆವು. ಅಲ್ಲಿಯೇ ಎರಡಿ ದಿನ ಊಟ ಮತ್ತು ಮದ್ಯದ ಪಾರ್ಟಿಯಲ್ಲಿ ಭಾಗಿಯಾಗಿದ್ದೇವು. ನನ್ನ ಬಳಿ ಸ್ವಲ್ಪ ಉಳಿದಿದ್ದ ಡ್ರಗ್ಸ್ ಮಾತ್ರೆ ತೆಗೆದುಕೊಂಡೆ. ಪ್ರತೀಕ್ ಶೆಟ್ಟಿ ನನಗೆ ಮೂರ್ನಾಲ್ಕು ವರ್ಷಗಳಿಂದ ಪರಿಚಯ. ವೈಭವ್ ಜೈನ್ ಮತ್ತು ಶ್ರೀಗೂ ಪ್ರತೀಕ್ ಶೆಟ್ಟಿ ಪರಿಚಯಸ್ಥ. ವೈಭವ್ ಶೆಟ್ಟಿ ಮತ್ತು ಶ್ರೀ ಇಬ್ಬರು ವ್ಯಾಪಾರದಲ್ಲಿ ಪಾಲುದಾರರು. ಶ್ರೀ ನಗರದ ಹೊರ ವಲಯದಲ್ಲಿ ಮನೆಗಳನ್ನು ಹೊಂದಿದ್ದ. ಅಲ್ಲಿ ವೈಭವ್ ಜೈನ್ ಪಾರ್ಟಿ ಆಯೋಜಿಸಿ ಊಟ, ಮದ್ಯ, ಡ್ರಗ್ಸ್ ಸರಬರಾಜು ಮಾಡುತ್ತಿದ್ದನು.

    ನನ್ನ ಪಿಯುಸಿ ಗೆಳೆಯ ಅಶ್ವಿನ್ ಅಲಿಯಾಸ್ ಬೂಗಿಯ ಸ್ನೇಹಿತ ಅಭಿಸ್ವಾಮಿ ಎಂಬಾತ ನೈಜಿರಿಯಾ ವ್ಯಕ್ತಿಯ ಮೊಬೈಲ್ ನಂಬರ್ ನೀಡಿದ್ದನು. ನೈಜರಿಯನ್ ವ್ಯಕ್ತಿಯನ್ನ ಸಂಪರ್ಕಿಸಿದ್ರೆ ಪಿಲ್ಸ್ ಮತ್ತಯ ಕೋಕೇನ್ ಪೌಡರ್ ನೀಡುತ್ತಾನೆಂದು ಹೇಳಿದ್ದನು. ಪ್ರಶಾಂತ್ ರಾಜು ಗೆಳೆಯ ದೆಹಲಿಯಿಂದ ಬೆಂಗಳೂರಿಗೆ ಬಂದಾದ ಡ್ರಗ್ ಬೇಕೆಂದಾಗ ನೈಜಿರೀಯನ್ ವ್ಯಕ್ತಿಯನ್ನ ಸಂಪರ್ಕ ಮಾಡಿದ್ದೆ, ಆದ್ರೆ ಆತ ಸ್ಟಾಕ್ ಇಲ್ಲ ಅಂತ ಹೇಳಿದ್ದನು.

    ನನ್ನ ಸ್ನೇಹಿತ ಶ್ರೇಯಸ್ ಪಾಟೀಲ್, ಪಬ್ ಮಾಲೀಕನಾಗಿದ್ದು, ಆತನ ಬಿಎಂಡಬ್ಲ್ಯೂ ಕಾರ್ ಪಡೆದು ರಾಗಿಣಿ ಜೊತೆ ಊಟಕ್ಕೆ ಹೋಗುತ್ತಿದ್ದೆ. ರಾಹುಲ್ ತಾನ್ಸೆ ಸಹ ನನಗೆ ನಾಲ್ಕು ವರ್ಷಗಳಿಂದ ಚಿರಪರಿಚಿತ. ರಾಗಿಣಿ ಅವರಿಗೆ ಮೊದಲಿನಿಂದಲೂ ಶ್ರೀ ಮತ್ತು ಆತನ ಪತ್ನಿ ಸೋನಲ್ ಪರಿಚಯ. ಆಗಾಗ್ಗೆ ಅವರ ಮನೆಗೆ ಹೋಗುವುದು, ಬರೋದು ಮಾಡುತ್ತಿದ್ದರು ಎಂದು ಸಿಸಿಬಿ ಎಸಿಬಿ ಗೌತಮ್ ಮುಂದೆ ರವಿಶಂಕರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.

  • ನಾನು ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡಿದ್ವಿ- ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರವಿಶಂಕರ್

    ನಾನು ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡಿದ್ವಿ- ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರವಿಶಂಕರ್

    – ವಿಚಾರಣೆ ವೇಳೆ ಹಲವು ವಿಚಾರ ಬಹಿರಂಗ

    ಬೆಂಗಳೂರು: ನಾನು ಹಾಗೂ ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.

    ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿ ರವಿಶಂಕರ್ ಬಾಯಿಬಿಡಿಸಿದ್ದಾರೆ. ಈ ವೇಳೆ ಆತ ನಾನು ರಾಗಿಣಿ ಒಟ್ಟಿಗೆ ಡ್ರಗ್ ಸೇವನೆ ಮಾಡಿದ್ವಿ. ಒಂದು ಮಾತ್ರೆಯ ‘ಕಾಲು ಭಾಗ’ ಇಬ್ಬರು ತಗೊಂಡಿದ್ವಿ. ವೈಭವ್ ಜೈನ್ ಮೂಲಕ ಡ್ರಗ್ಸ್ ತರಿಸಿಕೊಂಡಿದ್ವಿ ಎಂಬುದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಸೆಂಟ್ ಮಾರ್ಕ್ಸ್ ರಸ್ತೆಯ ಏರ್ ಲೈನ್ಸ್ ಹೋಟೆಲ್‍ನಲ್ಲಿ ನಾನು ರಾಗಿಣಿ ಭೇಟಿಯಾಗಿದ್ವಿ. ಸೆಂಟ್ ಮಾರ್ಕ್ಸ್ ರಸ್ತೆಯ ಕಬಾಬ್ ಕಾರ್ನರ್ ಬಳಿ ಡ್ರಗ್ಸ್ ನೀಡಿದ್ದ. ಆನಂತರ ನಾವು ಅದನ್ನ ಪಡೆದುಕೊಂಡು ಊಟ ಮಾಡಿ ಹೋಗಿದ್ದೆವು. ಬಳಿಕ ನಾವು ಹೊಟೇಲ್‍ಗೆ ವಾಪಸ್ ಹೋದೆವು ಎಂಬ ಮಾಹಿತಿಯನ್ನು ರವಿಶಂಕರ್ ನೀಡಿದ್ದಾನೆ.

    ಕೊರೊನಾ ಲಾಕ್‍ಡೌನ್ ಟೈಂ ಸಮಯದಲ್ಲೂ ನಮ್ಮ ಬಿಸಿನೆಸಲ್ ನಿಲ್ಲಿಸಿರಲಿಲ್ಲ. ನಗರದಲ್ಲಿ ಎಲ್ಲಾ ಕ್ಲೋಸ್ ಆದ ಮೇಲೆ ಬೆಂಗಳೂರಿನ ಹೊರವಲಯಕ್ಕೆ ಶಿಫ್ಟ್ ಆಗಿತ್ತು. ಆ ನಂತರ ಪಾರ್ಟಿಗಳನ್ನ ನಗರದ ಹೊರವಲಯಕ್ಕೆ ಶಿಫ್ಟ್ ಮಾಡಲಾಯ್ತು. ಅಲ್ಲಿ ವಿನಯ್, ಅರುಣ್, ಚರಣ್ ಸಾಥ್ ನೀಡಿದ್ರು. ವೈಭವ್ ಅಲ್ಲಿಗೆ ಡ್ರಗ್ ಸಪ್ಲೈ ಮಾಡ್ತಾ ಇದ್ದ. ಅಲ್ಲದೆ ಸೋಷಿಯಲ್ ಮೀಡಿಯಾ ಮೂಲಕ ಶ್ರೀಮಂತರ ಮಕ್ಕಳಿಗೆ ಮೆಸೇಜ್ ಮಾಡಿ ಕೆಲ ಕೋಡ್ ವರ್ಡ್ ಗಳ ಮೂಲಕ ಕರೆಸಲಾಗ್ತಿತ್ತು. ಈ ವೇಳೆ ಜಿಮ್ಮರ್ ಪ್ರಶಾಂತ್ ರಾಂಕಾ ಆಯೋಜನೆಗೆ ಸಾಥ್ ನೀಡಿದ್ದ. ಇನ್ನೂ ಪಾರ್ಟಿ ಆಯೋಜನೆಗೆ ಪ್ರಶಾಂತ್ ರಾಜ್ ಫಾರಂ ಹೌಸ್ ವ್ಯವಸ್ಥೆ ಮಾಡ್ತಿದ್ದ. ಈ ಪಾರ್ಟಿಗಳಿಗೆ ಎಕ್ಟಸಿ ಪಿಲ್ಸ್ ಡ್ರಗ್ ಬಳಕೆ ಮಾಡಲಾಗ್ತಿತ್ತು ಎಂದು ರವಿಶಂಕರ್ ವಿವರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಆದಿತ್ಯ ಆಳ್ವಾ, ವೈಭವ್ ಪಾತ್ರವೇನು?:
    ಪ್ರಕರಣದಲ್ಲಿ ಆದಿತ್ಯ ಆಳ್ವಾ ಮತ್ತು ವೈಭವ್ ದಂಧೆ ಮಾಹಿತಿ ಏನು ಎಂಬುದರ ಬಗ್ಗೆಯೂ ಎಳೆ ಎಳೆಯಾಗಿ ರವಿಶಂಕರ್ ಬಿಚ್ಚಿಟ್ಟಿದ್ದಾನೆ. ಮಾಜಿ ಸಚಿವರ ಪುತ್ರನೊಬ್ಬ ಗೋಲ್ಡ್ ಬ್ಯುಸಿನೆಸ್ ಮ್ಯಾನ್ ವೈಭವ್‍ಗೆ ಸಾಥ್ ನೀಡಿದ್ದಾನೆ. ಹೌದು ಈ ವೈಭವ್ ಜೈನ್ ಗೆ ಸಾಥ್ ನೀಡಿದ್ದು ದಿ.ಜೀವರಾಜ್ ಆಳ್ವಾ ಪುತ್ರ ಆದಿತ್ಯಾ ಆಳ್ವಾ. ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್ ಬಳಿಯ ಜಾಗದ ವ್ಯವಸ್ಥೆ ಮಾಡಿದ್ದ. ತನ್‍ನ ಹೌಸ್ ಆಫ್ ಲಿಫ್ಟ್ ಪಕ್ಕದ ಫಾರಂ ಹೌಸ್ & ಕಿಟ್ ಕ್ಲೋಕ್ಕನ್ ನಲ್ಲಿ ಆಯೋಜನೆ ಮಾಡಿದ್ದ. ಅದಕ್ಕೆ ನಾನು ಮತ್ತೆ ರಾಗಿಣಿ ಸಾಥ್ ನೀಡಲು ಶುರು ಮಾಡಿದ್ವಿ. ನಮ್ಮ ಮೊಬೈಲ್ ನಂಬರ್ ಕಾಂಟ್ಯಾಕ್ಟ್ ಬಳಸಿಕೊಂಡ್ವಿ. ದೊಡ್ಡ ದೊಡ್ಡವರ ಮಕ್ಕಳನ್ನ ಪಾರ್ಟಿಗೆ ಕರೆಸುತ್ತಿದ್ವಿ. ಆರೋಪಿಗಳೆಲ್ಲರೂ ಒಟ್ಟಿಗೆ ಸೇರಿ ಈ ಬ್ಯುಸಿನೆಸ್ ನಡೆಸುತ್ತಿದ್ದರು.

    ಪ್ರತೀಕ್ ಶೆಟ್ಟಿ ರೋಲ್ ಬಿಚ್ಚಿಟ್ಟ ರವಿಶಂಕರ್.!
    ಪ್ರತೀಕ್ ಶೆಟ್ಟಿ 2018ರ ಬಾಣಸವಾಡಿ ಕ್ರೈಂ ನಂಬರ್ 588ರ ಆರೋಪಿ. ಅದೇ ಪ್ರಕರಣದ ಮುಂದುವರಿದ ಭಾಗವಾಗಿಯೂ ಸದ್ಯ ತನಿಖೆ ನಡೆಯುತ್ತಿದೆ. ಈ ಪ್ರತೀಕ್ ಶೆಟ್ಟಿ ರವಿಶಂಕರ್ ಹೆಂಡತಿ ತಂಗಿಯ ಬಾಯ್ ಫ್ರೆಂಡ್. ಆತ ಟೆಕ್ಕಿಯಾಗಿದ್ದು, ಆತನಿಗೆ ಚಿನ್ನದ ವ್ಯಾಪಾರಿ ವೈಭವ್ ಜೈನ್ ಬ್ಯುಸಿನೆಸ್ ಪಾರ್ಟನರ್ ಆಗಿದ್ದ. ಹೀಗಾಗಿ ಈ ಡ್ರಗ್ಸ್ ಬ್ಯುಸಿನೆಸ್ ಮಾಡಲು ಕೂಡ ಪಾರ್ಟನರ್ ಆದ. ಇವರು ಮೂರು ನಾಲ್ಕು ವರ್ಷಗಳಿಂದ ಈ ಬ್ಯುಸಿನೆಸ್ ಮಾಡ್ತಿದ್ದಾರೆ. ವೀಕ್ ಎಂಡ್ ಪಾರ್ಟಿ ಆಯೋಜನೆ ಮಾಡಿ ಹಣ ಮಾಡ್ತಿದ್ದರು. ಬಂದವರಿಗೆ, ಊಟ, ಎಣ್ಣೆ ಮತ್ತು ಮಾದಕ ಮತ್ತು ಸಪ್ಲೆ ಮಾಡ್ತಿದ್ದರಂತೆ. ಹೀಗೆ ಮಾಡಲು ಹೋಗಿ 2018 ರಲ್ಲಿ ತಗ್ಲಾಕೊಂಡು ಜೈಲಿಗೆ ಹೋಗಿದ್ದ. ಈ ವೇಳೆ ವೈಭವ್ ಜೈನ್ ಹೆಸರು ಕೇಳಿ ಬಂದಿತ್ತು. ಆಗ ಮಾಜಿ ಮಿನಿಸ್ಟರ್ ಮಗ ಅಂತ ಆದಿತ್ಯ ಆಳ್ವಾ, ವೈಭವ್ ನ ಬಚಾವ್ ಮಾಡಿದ್ನಂತೆ. ಸದ್ಯ ಆ ಕೇಸ್ ತನಿಖೆ ಈಗ ನಡೆಯುತ್ತಿದೆ.

    ಒಟ್ಟಿನಲ್ಲಿ ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸದಂತೆ ವಿಚಾರಣೆಯ ವೇಳೆ ಆರೋಪಿಗಳ ಬಣ್ಣ ಬಯಲಾಗುತ್ತಿದೆ. ಅಲ್ಲದೆ ಈ ಮಧ್ಯೆ ಆರೋಪಿಗಳ ಇತರ ಕೆಲ ಪ್ರಕರಣಗಳು ಕೂಡ ಒಂದೊಂದಾಗಿ ಹೊರಬರುತ್ತಿದ್ದು, ಮುಂದೇನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.