Tag: ರವಿ ಚೆನ್ನಣ್ಣನವರ್

  • ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್

    ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್

    ಬೆಂಗಳೂರು: ಹವಾ ಮಾಡ್ತೀವಿ, ರೌಡಿಸಂ ಮಾಡ್ತೀವಿ, ಹೆಸರು ಮಾಡ್ತೀವಿ, ನಂದೆ ಹವಾ ಇರ್ಬೇಕು ಎಂದು ಓಡಾಡುತ್ತಿದ್ದವರಿಗೆ ಆನೇಕಲ್ ಉಪ ವಿಭಾಗದ ಪೊಲೀಸರು ಚಳಿ ಬಿಡಿಸಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಆನೇಕಲ್ ಉಪವಿಭಾಗದ ಏಳು ಠಾಣೆಯ ಪೋಲಿಸರು ಭಾನುವಾರ ಸ್ಪೆಷಲ್ ಡ್ರೈವ್ ಮಾಡಿ ರೌಡಿ ಶೀಟರ್ಸ್ ಗಳ ಮನೆಗಳಿಗೆ ತೆರಳಿ ರೈಡ್ ಮಾಡಿ ಸುಮಾರು ನೂರಕ್ಕು ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿದ್ದಾರೆ. ಇಂದು ಎಸ್‍ಪಿ ರವಿ.ಡಿ.ಚೆನ್ನಣ್ಣನವರ್ ನೇತೃತ್ವದಲ್ಲಿ ಎಲ್ಲ ಠಾಣೆಯ ರೌಡಿಗಳನ್ನು ಒಂದೆಡೆ ಕರೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಇನ್ನೇನು ಹಬ್ಬ, ಬಿಬಿಎಂಪಿ ಚುನಾವಣೆ ಮತ್ತು ಪಂಚಾಯಿತಿ ಎಲೆಕ್ಷನ್ ಬರುತ್ತಿವೆ. ಈ ವೇಳೆ ಯಾರೂ ಬಾಲ ಬಿಚ್ಚಬಾರದು, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಆನೇಕಲ್ ಠಾಣೆಯ ಮುಂಭಾಗದಲ್ಲಿ ಎಲ್ಲ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಕೆಲವರು ನಾನು ಅಲ್ಲಿ ಹವಾ ಇಟ್ಟಿದ್ದೇನೆ ಎಂದು ಪೊಲೀಸರಿಗೆ ಬೆದರಿಕೆ ಒಡ್ಡಿರುವ ಘಟನೆಗಳು ನಡೆದಿದ್ದು, ಇದೆಲ್ಲ ಇನ್ನು ಮುಂದೆ ನಡೆದರೆ ನಿಮ್ಮ ಬಾಲ ಕಟ್ ಮಾಡಬೇಕಾಗುತ್ತದೆ ರವಿ ಚೆನ್ನಣ್ಣನವರ್ ವಾರ್ನ್ ಮಾಡಿದ್ದಾರೆ.

    ಇತ್ತೀಚೆಗೆ ಹೆಚ್ಚು ಸಕ್ರಿಯರಾಗಿದ್ದ ಕೆಲ ರೌಡಿ ಶೀಟರ್ ಗಳು ಇದೆಲ್ಲ ಬಿಟ್ಟು, ತಮ್ಮ ಪಾಡಿಗೆ ತಾವಿದ್ದರೆ ಒಳ್ಳೆಯದು. ರೌಡಿಸಂ ಅಂತ ಹೋದ್ರೆ ಅವರಿಗೆ ದೊಡ್ಡ ಶಾಸ್ತಿಯಾಗುತ್ತದೆ. ಸುಮ್ಮನಿದ್ದರೆ ಸರಿ ಇಲ್ಲವಾದಲ್ಲಿ ಊರು ಬಿಡಿಸಬೇಕಾಗುತ್ತದೆ, ಗೂಂಡಾ ಕಾಯ್ದೆ ಹಾಕಬೇಕಾಗುತ್ತದೆ ಎಂದಿದ್ದಾರೆ.

  • ಹೊಸ ವರ್ಷಾಚರಣೆಗೆ ಎಸ್‍ಪಿ ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    ಹೊಸ ವರ್ಷಾಚರಣೆಗೆ ಎಸ್‍ಪಿ ರವಿ ಚನ್ನಣ್ಣನವರ್ ಖಡಕ್ ವಾರ್ನಿಂಗ್

    ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಸಂಬಂಧ ನಂದಿಬೆಟ್ಟದ ತಪ್ಪಲಿನ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಸೇರಿದಂತೆ ಅಂಗಡಿ ಮಾಲೀಕರ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಚನ್ನಣ್ಣನವರ್ ಸಭೆ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಕಾರಹಳ್ಳಿ ಕ್ರಾಸ್‍ನ ಹೋಟೆಲಿನಲ್ಲಿ ಮಾಲೀಕರ ಜೊತೆ ಸಭೆ ನಡೆಸಿದ ಎಸ್‍ಪಿ ರವಿ ಚನ್ನಣ್ಣನವರ್, ನಂದಿಬೆಟ್ಟದ ತಪ್ಪಲಿನಲ್ಲಿ ಅಕ್ರಮ ಚಟುವಟಿಕೆಗಳು, ಅಕ್ರಮ ಮದ್ಯ ಮಾರಾಟ ನಡೆಯುತ್ತದೆ. ಇಲ್ಲಿ ಹುಕ್ಕಾ ಬಾರ್ ಗಳಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎನ್ನುವ ಜನಾಭಿಪ್ರಾಯ ಇದೆ. ಈ ಭಾಗದಲ್ಲಿ ವರದಿಯಾದ ಅಪರಾಧ ಪ್ರಕರಣಗಳಿಂದ ನನಗೂ ಕೂಡ ಹಾಗೆ ಅನಿಸಿದೆ. ಹೀಗಾಗಿ ಹೊಸ ವರ್ಷದ ಅಂಗವಾಗಿ ನಂದಿಬೆಟ್ಟದ ತಪ್ಪಲಿನಲ್ಲಿನ ರೆಸಾರ್ಟ್, ರೆಸ್ಟೋರೆಂಟ್, ಹೋಟೆಲ್, ಅಂಗಡಿ ಮಾಲೀಕರು ಕಾನೂನು ರೀತಿ ಹೊಸ ವರ್ಷಾಚರಣೆ ಮಾಡಬೇಕೇ ಹೊರತು ಕಾನೂನು ನಿಯಮಗಳನ್ನ ಮೀರಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದರು.

    ಯಾವುದೇ ಕಾರಣಕ್ಕೂ ಅನುಮತಿ ಪಡೆಯದೇ ಮದ್ಯ ಮಾರಾಟ ಮಾಡಿ, ಪಾರ್ಟಿಗಳನ್ನ ಆಯೋಜನೆ ಮಾಡಿ, ಡಿಜೆಗಳನ್ನ ಹಾಕಿ, ಟೆಂಟ್‍ಗಳನ್ನ ಹಾಕಿ ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಂದಹಾಗೆ ಮದ್ಯ ಮಾರಾಟಕ್ಕೆ ಅನುಮತಿ ಪಡೆದವರಿಗೆ ಅಷ್ಟೇ ಅವಕಾಶವಿದೆ. ಅದು ರಾತ್ರಿ ಪೂರ್ತಿ ಇರೋದಿಲ್ಲ. ಡಿಜೆಗೆ ಅನುಮತಿಯನ್ನ ನೀಡುವುದಿಲ್ಲ. ಡಿಜೆ ಮಾಡುವುದು ಕಾನೂನುಬಾಹಿರ. ಆದರೆ ಕೌಟುಂಬಿಕ ಸಭ್ಯ ಜನರು ಬಂದು ಊಟ ಮಾಡಿ ಮನರಂಜನೆ ಪಡೆಯಲು ನಮ್ಮದೂ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದರು.

    ಈಗಾಗಲೇ ಸ್ಥಳೀಯ ಹೆಗ್ಗಡಹಳ್ಳಿ ಹಾಗೂ ಕಾರಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷರುಗಳಿಂದ ನಂದಿಬೆಟ್ಟದ ತಪ್ಪಲಿನಲ್ಲಿ ಹಾಗೂ ವಿಶೇಷವಾಗಿ ಹ್ಯಾಂಗ್ ಔಟ್ ಕೆಫೆ, ಗ್ರೌಂಡ್ ಜಿರೋ, ಮಿಸ್ಟ್ ಫ್ಯಾಕ್ಟರಿ, ಹಿಲ್ ಡ್ರೈವ್ ಕೆಫೆಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎನ್ನುವ ದೂರುಗಳ ಕೇಳಿಬಂದಿವೆ. ಹೀಗಾಗಿ ಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಬಾಹಿರ ಕೃತ್ಯಗಳನ್ನ ನಡೆಸಿದರೆ ಕೇಸ್ ದಾಖಲಿಸಲಾಗುವುದು ಎಂದು ರವಿ ಚನ್ನಣ್ಣನವರ್ ಎಚ್ಚರಿಕೆ ನೀಡಿದರು.

    ಸಿಎಲ್ 5 ಅನುಮತಿ ಪಡೆದರೆ ನಿಗದಿತ ಸಮಯದವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇರುತ್ತೆ ಆದರೆ ಅದರ ಹೆಸರಲ್ಲಿ ದೊಡ್ಡ ಮಟ್ಟದ ಇವೆಂಟ್‍ಗಳನ್ನ ನಡೆಸುವಂತಿಲ್ಲ, ಜಿಲ್ಲಾಡಳಿತದಿಂದ ಅನುವತಿ ಪಡೆದು ನಡೆಸಿದರೂ ಸಹ ಪಾರ್ಟಿಗೆ ಬಂದು ಹೋದವರ ಸಂಪೂರ್ಣ ಮಾಹಿತಿ, ವಿಳಾಸ ಸಮೇತ ಮೊಬೈಲ್ ನಂಬರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕೊಡಬೇಕಾಗುತ್ತದೆ. ಅಲ್ಲದೆ ಕಡ್ಡಾಯವಾಗಿ ಸಿಸಿಟಿವಿ ಆಳವಡಿಕೆ ಮಾಡಬೇಕು. ಹೀಗೆ 21 ನಿಯಮಗಳನ್ನ ಒಪ್ಪಿದರೆ ಮಾತ್ರ ನಿಮಗೆ ಪಾರ್ಟಿ ಇವೆಂಟ್ ಆಯೋಜನೆ ಮಾಡಲು ಅನುಮತಿ ಸಿಗುತ್ತದೆ. ಈಗಾಗಲೇ ಕೆಲವರು ಅನುಮತಿ ಕೇಳಿದ್ದು, ಸದ್ಯ ಯಾರಿಗೂ ಅನುಮತಿ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

  • ರವಿ ಚೆನ್ನಣ್ಣನವರ್ ಅಭಿಮಾನಿಗಳಿಂದ ಬೇಸತ್ತ ಡಿಸಿಪಿ

    ರವಿ ಚೆನ್ನಣ್ಣನವರ್ ಅಭಿಮಾನಿಗಳಿಂದ ಬೇಸತ್ತ ಡಿಸಿಪಿ

    ಬೆಂಗಳೂರು: ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಅವರು ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಚೆನ್ನಣ್ಣನವರ್ ಅಭಿಮಾನಿಗಳಿಂದ ಬೇಸತ್ತು ಹೋಗಿದ್ದಾರೆ.

    ಈ ಹಿಂದೆ ರವಿ ಚೆನ್ನಣ್ಣನವರ್ ಅವರು ಪಶ್ಚಿಮ ವಿಭಾಗದ ಡಿಸಿಪಿ ಆಗಿದ್ದರು. ಈ ವೇಳೆ ಅವರಿಗೆ ಇಲಾಖೆಯಿಂದ ಫೋನ್ ನಂಬರ್ ನೀಡಲಾಗಿತ್ತು. ಈಗ ಡಿಸಿಪಿ ಆಗಿರುವ ರಮೇಶ್ ಬಾನೋತ್ ಗೆ ರವಿ ಚನ್ನಣ್ಣನವರ್ ವರ್ಗಾವಣೆ ನಂತರ ಆ ನಂಬರ್ ನೀಡಲಾಗಿತ್ತು.

    ರಮೇಶ್ ಬಾನೋತ್ ಅವರಿಗೆ ನೀಡಿದ ಈ ನಂಬರ್ ಗೆ ನಿತ್ಯ ನೂರಾರು ಕರೆಗಳು ಬರುತ್ತಿದ್ದವು. ರವಿ ಚೆನ್ನಣ್ಣನವರ್ ಎಂದು ಕೇಳಿಕೊಂಡು ಅವರ ಅಭಿಮಾನಿಗಳು ನಿತ್ಯ ನೂರಾರು ಕರೆಗಳು ಮಾಡುತ್ತಿದ್ದರು. ಹೀಗಾಗಿ ರಮೇಶ್ ಬಾನೋತ್ ನಂಬರ್ ಚೇಂಜ್ ಮಾಡಿದ್ದಾರೆ.

  • ಬೆಂಗ್ಳೂರಲ್ಲಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ರೌಡಿಗಳಿಗೆ ನಡುಕ ಹುಟ್ಟಿಸಿದ ರವಿ ಚೆನ್ನಣ್ಣನವರ್

    ಬೆಂಗ್ಳೂರಲ್ಲಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ರೌಡಿಗಳಿಗೆ ನಡುಕ ಹುಟ್ಟಿಸಿದ ರವಿ ಚೆನ್ನಣ್ಣನವರ್

    ಬೆಂಗಳೂರು: ರವಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ 2 ವಾರಗಳಲ್ಲೇ ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕ್ತಿದ್ದಾರೆ.

    ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗ್ಗೆಯಿಂದ ರಾತ್ರಿ 2 ಗಂಟೆವರೆಗೆ ಸಿಟಿ ರೌಂಡ್ಸ್‍ನಲ್ಲಿ ಒಬ್ಬೊಂಟಿಗರಾಗಿ ಗಸ್ತು ನಡೆಸ್ತಿದ್ದಾರೆ. ಬ್ಯಾಟರಾಯನಪುರ, ಜ್ಞಾನಭಾರತಿ, ಕೆಂಗೇರಿ, ಕಾಮಾಕ್ಷಿಪಾಳ್ಯ ಇತರೆ ಸ್ಟೇಷನ್‍ಗಳ ವ್ಯಾಪ್ತಿಯಲ್ಲಿ ರೌಡಿಗಳನ್ನು ಕರೆಸಿ ವಾರ್ನಿಂಗ್ ಕೊಟ್ಟಿರುವ ಚೆನ್ನಣ್ಣನವರ್, ರೌಡಿಗಳಿಗೆ ನಡುಕ ಹುಟ್ಟಿಸಿದ್ದಾರೆ.

     

    ನಗರದಲ್ಲೆಡೆ ವೇಶ್ಯಾವಾಟಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದ್ದು, ಸಿಟಿಯಲ್ಲಿ ಡಬಲ್ ಮೀಟರ್ ಕೇಳೋ ಆಟೋ ಚಾಲಕರಿಗೂ ಕರೆಸಿ ಬುದ್ಧಿ ಹೇಳಿದ್ದಾರೆ. ಅಲ್ಲದೇ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ ಕರ್ತವ್ಯ ಪಾಲನೆಯಲ್ಲಿ ತೊಡಗಿಕೊಳ್ಳುವಂತೆ ಮುನ್ನಡೆಸುತ್ತಿದ್ದಾರೆ.

    ಕ್ಲೀನ್ ಮೆಜೆಸ್ಟಿಕ್ ಮಾಡಲು ಪಣ ತೊಟ್ಟಿರುವ ರವಿ ಚೆನ್ನಣ್ಣನವರ್ ಕರುನಾಡ ಸಿಂಗಂ ಆಗಿದ್ದಾರೆ ಎಂದು ಜನ ಹೇಳ್ತಿದ್ದಾರೆ.