Tag: ರವಿ ಶಂಕರ್

  • ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ರವಿಶಂಕರ್

    ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ರವಿಶಂಕರ್

    – ಸುದೀಪ್, ಗಣೇಶ್, ಸೃಜನ್‍ಗೆ ಧನ್ಯವಾದ

    ಬೆಂಗಳೂರು: ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿ ಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಸೋಂಕು ಹೆಚ್ಚುತ್ತಿದೆ. ಮಹಾಮಾರಿ ಕೊರೊನಾ ಬೆಂಗಳೂರಿನಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದೆ. ಹೊಸ ಹೊಸ ಏರಿಯಾಗಳಿಗೆ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡಿಕೊಳ್ಳುತ್ತಿದೆ. ಈಗ ನಟ ರವಿ ಶಂಕರ್ ಅವರ ಮನೆಯ ಎದುರಿನ ಮನೆಯವರಿಗೆ ಕೊರೊನಾ ಬಂದಿದೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ರವಿ ಶಂಕರ್, ನನ್ನ ಅಪಾರ್ಟ್‍ಮೆಂಟ್‍ನಲ್ಲಿ ನನ್ನ ಎದುರು ಮನೆಗೆ ವಕ್ಕರಿಸಿತು ಕೊರೊನಾ. ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು. ಕ್ವಾರಂಟೈನ್ ಮಾಡಿದ್ದಾರೆ ಬಾಗಿಲನ್ನು 14 ದಿನ ತೆರೆಯುವಂತಿಲ್ಲ. ಸುದೀಪ, ಗಣಪ, ಸೃಜಾನ, ಮಕ್ಕಳನ್ನು ಕರೆದುಕೊಂಡು ನಮ್ಮನೆಗೆ ಬಾ ಅಂದರು. ಗೆಳೆತನ ಎಂದರೆ ಇದೆ ಅಲ್ಲವೆ. ನಮ್ಮ ಬಗ್ಗೆ ವಿಚಾರಿಸಿದ ಸಂತೋಷ್ ಆನಂದ್, ರಘುರಾಮ್, ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರವಾಗಿ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ವಿಜಯಲಕ್ಷ್ಮಿ, ನನಗೆ ಕೊರೊನಾ ಸೋಂಕು ಇಲ್ಲ. ಇದು ಸುಳ್ಳು ಸುದ್ದಿ, ನಾನು ಚೆನ್ನಾಗಿದ್ದೇನೆ. ನೀವು ಮನೆಯಲ್ಲಿ ಕ್ಷೇಮವಾಗಿ ಇರಿ ಎಂದು ಗಾಪಿಪ್‍ಗಳಿಗೆ ತೆರೆ ಎಳೆದಿದ್ದರು.

    ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹಿಡಿತಕ್ಕೆ ಬರುತ್ತಿಲ್ಲ. ದಿನೇ ದಿನೇ ಸಾವಿನ ಸಂಖ್ಯೆ ಜಾಸ್ತಿಯಾಗುತ್ತದೆ. ಈ ನಡುವೆ ಬೆಂಗಳೂರನ್ನು ಲಾಕ್‍ಡೌನ್ ಮಾಡಬೇಕು ಎಂಬ ಮಾತುಗಳು ಮುನ್ನೆಲೆಗೆ ಬರುತ್ತಿವೆ. ಆದರೆ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಇಂದು ಇರುವ ಕ್ಯಾಬೆನೆಟ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.

  • ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ‘ತ್ರಿ’ ಬ್ರದರ್ಸ್ ಸಂಗಮ

    ಮೊದಲ ಬಾರಿಗೆ ಒಂದೇ ಸಿನಿಮಾದಲ್ಲಿ ‘ತ್ರಿ’ ಬ್ರದರ್ಸ್ ಸಂಗಮ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇದೇ ಮೊದಲ ಬಾರಿಗೆ ಮೂವರು ಸಹೋದರರು ಒಂದೇ ಸಿನಿಮಾ ಅಭಿನಯಿಸುತ್ತಿದ್ದು, ಕಮಾಲ್ ಮಾಡಲು ಬರುತ್ತಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಮೂವರು ಸಹೋದರರಿದ್ದು, ಇದುವರೆಗೂ ಒಂದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಡೈಲಾಗ್ ಕಿಂಗ್ ಸಾಯಿ ಕುಮಾರ್, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಡೈರೆಕ್ಟರ್ ಕಮ್ ಆ್ಯಕ್ಟರ್ ಅಯ್ಯಪ್ಪ ಪಿ ಶರ್ಮ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

    ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಭರಾಟೆ’ ಸಿನಿಮಾದಲ್ಲಿ ಈ ಮೂವರು ಸಹೋದರರು ಅಭಿನಯಿಸುತ್ತಿದ್ದಾರೆ. ಭರಾಟೆ ಸಿನಿಮಾದ ಮುಖ್ಯ ಪಾತ್ರದಲ್ಲಿ ರವಿ ಶಂಕರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಾಯಿಕುಮಾರ್ ಹಾಗೂ ಅಯ್ಯಪ್ಪ ಕೂಡ ಇಬ್ಬರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ರವಿ ಶಂಕರ್ ಹಾಗೂ ಅಯ್ಯಪ್ಪ ಇಬ್ಬರ ಶೂಟಿಂಗ್ ಸಿನಿಮಾದಲ್ಲಿ ಸಂಪೂರ್ಣಗೊಂಡಿದೆ. ಇನ್ನೂ ನಟ ಸಾಯಿ ಕುಮಾರ್ ಪಾತ್ರದ ಸಿನಿಮಾ ಚಿತ್ರೀಕರಣ ನಡೆಯಬೇಕಿದೆ.

    ಮೂವರು ಸಹೋದರರು ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಬೇರೆ ಭಾಷೆಯಲ್ಲೂ ಅಭಿನಯಿಸಿದ್ದಾರೆ. ಅಯ್ಯಪ್ಪ ಅವರು ಇತ್ತೀಚೆಗೆ ಬಿಡುಗಡೆಯಾದ ನಟ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಭರಾಟೆ ಸಿನಿಮಾ ‘ಬಹದ್ದೂರ್’ ಸಿನಿಮಾದ ನಿರ್ದೇಶಕ ಚೇತನ್ ಕಾಂಬಿನೇಷನ್‍ನಲ್ಲಿ ಮೂಡಿ ಬರುತ್ತಿದೆ. ಈಗಾಗಲೇ ಸಿನಿಮಾದಲ್ಲಿ ನಟ ಶ್ರೀಮುರಳಿ ಪೋಸ್ಟರ್ ಮತ್ತು ಟೀಸರ್ ಬಿಡುಗಡೆ ಮಾಡಿದ್ದು, ಡೈಲಾಗ್ ಮೂಲಕವೇ ಸಾಕಷ್ಟು ಸದ್ದು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv