Tag: ರವಿ ಶ್ರೀವತ್ಸಾ

  • ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ- ಬಹಿರಂಗವಾಗಿ ಕ್ಷಮೆ ಕೇಳಿದ ಸಂಜನಾ: ವಿಡಿಯೋ ನೋಡಿ

    ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ- ಬಹಿರಂಗವಾಗಿ ಕ್ಷಮೆ ಕೇಳಿದ ಸಂಜನಾ: ವಿಡಿಯೋ ನೋಡಿ

    ಬೆಂಗಳೂರು: ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

    ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕ್ಷಮೆ ಕೇಳಿದ್ದಾರೆ.

    ಸಂಜನಾ ಹೇಳಿದ್ದೇನು?
    ನಾನು ನನ್ನ ಅನುಭವ ಹಾಗೂ ಜೀವನದಲ್ಲಿ ನಡೆದ ಸತ್ಯವನ್ನೇ ಹೇಳಿಕೊಂಡಿದ್ದೇನೆ. ಅಲ್ಲದೇ ಗಂಡ-ಹೆಂಡತಿ ಚಿತ್ರದ ವೇಳ ಆದಂತಹ ಅನುಭವಗಳನ್ನು ಹೇಳಿಕೊಳ್ಳಲು ನನಗೆ ಆಗ ಸಾಧ್ಯವಾಗಿರಲಿಲ್ಲ. ಅಲ್ಲದೇ ನಾನು ಆಹ ಚಿಕ್ಕವಳಿದ್ದೆ. ಈ ಎಲ್ಲಾ ವಿಷಯವನ್ನು ಮೀಟೂ ಅಭಿಯಾನದ ಮೂಲಕ ಹಂಚಿಕೊಂಡಿದ್ದೆ. ಇದರಿಂದಾಗಿ ಚಿತ್ರದ ನಿರ್ದೇಶಕ ಹಾಗೂ ನಿರ್ದೇಶಕರ ಸಂಘದವರಿಗೆ ನೋವುಂಟಾಗಿದೆ.

    ನನ್ನ ಉದ್ದೇಶ ಯಾರ ಹೆಸರು ಹಾಗೂ ಜೀವನವನ್ನು ಹಾಳು ಮಾಡಬೇಕೆಂದು ಇರಲಿಲ್ಲ. ಹೀಗಾಗಿ ನಾನು ಕಲಾವಿದರ ಸಂಘದ ಹಿರಿಯರಾದ ನಟ ಅಂಬರೀಶ್, ದೊಡ್ಡಣ್ಣ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರ ಮಾತಿಗೆ ಬೆಲೆಕೊಟ್ಟು, ಗಂಡ-ಹೆಂಡತಿ ನಿರ್ದೇಶಕರು ಹಾಗೂ ಚಿತ್ರತಂಡ ಮತ್ತು ನಿರ್ದೇಶಕರ ಸಂಘದ ಎಲ್ಲರಿಗೂ ಕ್ಷಮೆಯನ್ನು ಕೋರುತ್ತೇನೆ. ಈ ಘಟನೆಯನ್ನು ಮುಂದುವರಿಸಿಕೊಂಡು ಹೋಗಲು ಇಷ್ಟಪಡುವುದಿಲ್ಲ. ಹೀಗಾಗಿ ಎಲ್ಲರ ಬಳಿ ನಾನು ಕ್ಷಮೆ ಕೇಳುತ್ತೇನೆ.

    ಸಂಜನಾ ಆರೋಪವೇನು?
    ಅಕ್ಟೋಬರ್ 7ರಂದು ಮಾಧ್ಯಮಗಳೊಂದಿಗೆ ತಮ್ಮ ಸಿನಿ ಜರ್ನಿಯಲ್ಲಿ ನಡೆದ ಹಿಂಸೆಯ ಬಗ್ಗೆ ತೆರೆದಿಟ್ಟ ಸಂಜನಾ ಗರ್ಲಾನಿ, ನನಗೂ ಚಿತ್ರರಂಗದಲ್ಲಿ ತುಂಬಾ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ನಿನ್ನ ವೃತ್ತಿ ಜೀವನ ಚೆನ್ನಾಗಿರಬೇಕು ಅಂದರೆ ಕಿಸ್ಸಿಂಗ್ ಸೀನ್ ಮಾಡು ಎಂದು ನಿರ್ದೇಶಕರು ಒತ್ತಾಯ ಮಾಡಿದ್ದರು. ಅಲ್ಲದೇ ಒಮ್ಮೆಲೇ 50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ದರು. ಬ್ಯಾಕ್ ಲೆಸ್ ಸೀನ್ ಮಾಡುವಾಗಲು ಇಂತಹದ್ದೇ ಹಿಂಸೆಯಾಗಿತ್ತು. ಚಿತ್ರೀಕರಣದ ಸಮಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇತ್ತು. ನನ್ನ ಮೇಲೆ ದಬ್ಬಾಳಿಕೆ ಮಾಡಿ ಕಿಸ್ಸಿಂಗ್ ಸೀನ್ ಗಳನ್ನು ಮಾಡಿಸಿಕೊಂಡರು. ಈ ವೇಳೆ ವಿದೇಶದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಬ್ಯಾಕಾಂಕ್ ನಿಂದ ಬಂದ ನಂತರವೂ ಬೆಂಗಳೂರಿನಲ್ಲಿ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಚಿತ್ರನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಆರೋಪ ಮಾಡಿದ್ದರು.

    ಸಂಜನಾ ಗರ್ಲಾನಿ ಆರೋಪಕ್ಕೆ ನಿರ್ದೇಶಕ ರವಿ ಶ್ರೀವತ್ಸ ನಿರ್ದೇಶಕರ ಸಂಘದ ಮೊರೆ ಹೋಗಿದ್ದರು. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವಿ.ನಾಗೇಂದ್ರ ಪ್ರಸಾದ್ ನಿರ್ದೇಶಕರಿಗೆ ಕ್ಷಮೆ ಕೋರುವಂತೆ ಸಂಜಾನಾಗೆ ಆಗ್ರಹಿಸಿದ್ದರು. ಅಲ್ಲದೇ ಈ ಬಗ್ಗೆ ಕಲಾವಿದರ ಸಂಘಕ್ಕೆ ದೂರನ್ನು ಸಹ ಕೊಟ್ಟಿದ್ದರು.

    https://www.youtube.com/watch?v=SiaVF8Wjf1c

    https://www.youtube.com/watch?v=ALJ_vOFTo5Y

    https://youtu.be/Fngx4OL8iUY

    https://youtu.be/2YYfQAOr3SM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ರು- ಸ್ಯಾಂಡಲ್‍ವುಡ್ ನಿರ್ದೇಶಕನ ವಿರುದ್ಧ ಸಂಜನಾ #Metoo ಆರೋಪ

    50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ರು- ಸ್ಯಾಂಡಲ್‍ವುಡ್ ನಿರ್ದೇಶಕನ ವಿರುದ್ಧ ಸಂಜನಾ #Metoo ಆರೋಪ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸಂಜನಾ ತಮ್ಮ ಮೊದಲ ಚಿತ್ರದ ಶೂಟಿಂಗ್ ವೇಳೆ ತಮ್ಮ ಮೇಲೆ ಉಂಟಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಿಚ್ಚಿಟ್ಟಿದ್ದು, `ಗಂಡ-ಹೆಂಡತಿ’ ಚಿತ್ರದ ನಿರ್ದೇಶಕ ರವಿ ಶ್ರೀವತ್ಸಾ ಶೂಟಿಂಗ್ ವೇಳೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

    ಮಾಧ್ಯಮಗಳೊಂದಿಗೆ ತಮ್ಮ ಸಿನಿ ಜರ್ನಿಯಲ್ಲಿ ನಡೆದ ಹಿಂಸೆಯ ಬಗ್ಗೆ ತೆರೆದಿಟ್ಟ ಅವರು, ನನಗೂ ಚಿತ್ರರಂಗದಲ್ಲಿ ತುಂಬಾ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ನಿನ್ನ ವೃತ್ತಿ ಜೀವನ ಚೆನ್ನಾಗಿರಬೇಕು ಅಂದರೆ ಕಿಸ್ಸಿಂಗ್ ಸೀನ್ ಮಾಡು ಎಂದು ನಿರ್ದೇಶಕರು ಒತ್ತಾಯ ಮಾಡಿದ್ದರು. ಅಲ್ಲದೇ ಒಮ್ಮೆಲೇ 50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ದರು. ಬ್ಯಾಕ್ ಲೆಸ್ ಸೀನ್ ಮಾಡುವಾಗಲು ಇಂತಹದ್ದೇ ಹಿಂಸೆಯಾಗಿತ್ತು. ಚಿತ್ರೀಕರಣದ ಸಮಯದಲ್ಲಿ ಭಯ ಹುಟ್ಟಿಸುವ ವಾತಾವರಣ ಇತ್ತು. ನನ್ನ ಮೇಲೆ ದಬ್ಬಾಳಿಕೆ ಮಾಡಿ ಕಿಸ್ಸಿಂಗ್ ಸೀನ್ ಗಳನ್ನು ಮಾಡಿಸಿಕೊಂಡರು. ಈ ವೇಳೆ ವಿದೇಶದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಬ್ಯಾಕಾಂಕ್ ನಿಂದ ಬಂದ ನಂತರವೂ ಬೆಂಗಳೂರಿನಲ್ಲಿ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ನಟಿ ಸಂಜನಾ ಆರೋಪಿಸಿದರು.

    ಮೀಟೂ ಕುರಿತ ಅಭಿಯನಕ್ಕೆ ತಮ್ಮ ಮನಸ್ಸಿನ ನೋವು ಹೇಳುಕೊಳ್ಳಲು ಸರಿಯಾದ ಸಮಯ ಎಂದು ಮಾತು ಮುಂದುವರಿಸಿದ ಅವರು, ಗಂಡ-ಹೆಂಡತಿ ಸಿನಿಮಾ ಮಾಡಿದಾಗ ನನಗೆ 16 ವರ್ಷ ಅಷ್ಟೇ ಆಗಿತ್ತು, ಎರಡುಕಾಲು ಲಕ್ಷ ರೂ. ಸಿಗುತ್ತೆ ಎಂದು ಸಿನಿಮಾ ಒಪ್ಪಿಕೊಂಡೆ. ನಿಮ್ಮನ್ನ ಮನೆ ಮಗಳ ತರ ನೋಡಿಕೊಳ್ಳುತ್ತೇವೆ ಹೇಳಿದ್ದ ನಿರ್ದೇಶಕರು ಬಳಿಕ ಕೆಟ್ಟದಾಗಿ ನಡೆಸಿಕೊಂಡರು. ಮೊದಲ ದಿನದ ಶೂಟಿಂಗ್ ಚೆನ್ನಾಗಿತ್ತು. ಆದರೆ ಚಿತ್ರೀಕರಣದ ಮೂರನೇ ದಿನ ಅಮ್ಮನನ್ನು ನನ್ನ ಜೊತೆ ಬರಲು ಬಿಡದೇ ಹೋಟೆಲ್‍ನಲ್ಲೇ ಬಿಟ್ಟಿದ್ದರು. ಅಲ್ಲದೇ ಅಮ್ಮನನ್ನ ಕಾರಣ ಹೇಳಿ ವಾಪಾಸ್ ಕಳಿಸಲು ಪ್ರಯತ್ನ ಮಾಡಿದ್ದರು. ಒಂದೇ ಕಿಸ್ಸಿಂಗ್ ಸೀನ್ ಅಂತ ಹೇಳಿ ಆಮೇಲೆ ಎರಡನೇ ಕಿಸ್ಸಿಂಗ್ ಸೀನ್ ಮಾಡಲು ಹೇಳಿ ಸುಮಾರು 50ಕ್ಕೂ ಹೆಚ್ಚು ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಬೇಸರ ತೋಡಿಕೊಂಡರು.

    ಸಿನಿಮಾಗೂ ಒಪ್ಪಿಕೊಳ್ಳುವ ಮೊದಲು `ಮರ್ಡರ್’ ಸಿನಿಮಾ ನೋಡಲು ಹೇಳಿದ್ದರು, ಆದರೆ ಆ ಸಿನಿಮಾ ನೋಡಿ ಬಹಳ ಬೇಜಾರಾಗಿತ್ತು. ಈ ಸಿನಿಮಾ ಮಾಡಲು ನನಗೆ ಧೈರ್ಯ ಇಲ್ಲ ಅಂತ ಹೇಳಿದ್ದೆ. ಆದರೆ ನಮ್ಮ ನೇಟಿವಿಟಿಗೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳುತ್ತೇವೆ. ಒಂದು ಕಿಸ್ ಸೀನ್ ಮಾತ್ರ ಮಾಡಬಹುದು, ಸಿನಿಮಾಗಾಗಿ ಅಷ್ಟು ಮಾಡದೇ ಇದ್ದರೆ ಹೇಗೆ? ಸಿನಿಮಾ ಕ್ಷೇತ್ರದಲ್ಲಿ ಇವೆಲ್ಲಾ ಸಾಮಾನ್ಯ ಎಂದು ಹೇಳಿದ್ದರು. ಆದರೆ ಒಂದೇ ಸೀನ್ ಎಂದು ಹೇಳಿ ಆ ವಯಸ್ಸಿಗೆ ಓಕೆ ಎಂದು ಹೇಳಿದ್ದೆ. ಬಳಿಕ ಎಲ್ಲವೂ ಬದಲಾವಣೆಯಾದವು ಎಂದು ಹಿಂದಿನ ಘಟನೆಯನ್ನು ತೆರೆದಿಟ್ಟರು.

    ಮನೆಯಲ್ಲಿಯೂ ಈ ಕುರಿತು ಹೇಳಲು ಸಾಧ್ಯವಾಗಲಿಲ್ಲ. ಏಕೆಂದರೆ ಸಿನಿಮಾ ಕ್ಷೇತ್ರಕ್ಕೆ ಬಂದಿದ್ದ ಕಾರಣ ಏನನ್ನು ಹೇಳವು ಸಾಧ್ಯವಾಗಿರಲಿಲ್ಲ. ಆದರೆ ಚಿತ್ರ ಶೂಟಿಂಗ್ ವೇಳೆ ಅಸಭ್ಯವಾಗಿ ನಡೆಸಿಕೊಂಡ ಪ್ರತಿಯೊಂದು ದೃಶ್ಯವೂ ನನಗೆ ನೆನಪಿದೆ. ಕಠಿಣ ದೃಶ್ಯಗಳಲ್ಲಿ ನಟಿಸುವ ವೇಳೆಯೂ ಸುರಕ್ಷತೆ ಇರಲಿಲ್ಲ. ಇದನ್ನು ಮಾಡದಿದ್ದರೆ ನೀನು ಸಾಯುವುದೇ ಲೇಸು ಎಂದು ಗದರಿದ್ದರು. ನಿನಗೆ ಬ್ರೇಕ್ ಸಿಕ್ಕರೆ ಮತ್ತೆ ನಮ್ಮತ್ತ ಬರಲ್ಲ, ಸಿನಿಮಾಗಾಗಿ ಎಲ್ಲವನ್ನೂ ಮಾಡಬೇಕು ಎಂದು ಹಿಂಸೆ ನೀಡಿದ್ದರು ಎಂದು ತಿಳಿಸಿದ್ದರು. ಆದರೆ ಎಲ್ಲಾ ನಿರ್ದೇಶಕರು ಹೀಗೆ ಎಂದು ಹೇಳಲ್ಲಾ. ಸಿನಿಮಾ ರಂಗ ಉತ್ತಮವಾಗಿದೆ ಎಂದರು.

    ಶಿವಕೇಶವ ಸಿನಿಮಾ ಸಂದರ್ಭದಲ್ಲಿ ಹೀಗೇ ಆಗಿತ್ತು. ತಂದೆ ಜೊತೆಯಲ್ಲಿ ಬರಲು ಸಮಸ್ಯೆ ಮಾಡಿದ್ದರು. ಪ್ರತಿ ಎರಡು ಮೂರು ಗಂಟೆ ಸಮಯಕ್ಕೆ ತಂದೆ ಯಾಕೆ ಬರುತ್ತಾರೆ. ಪಾರ್ಟಿಗೆ ಬರುವುದಿಲ್ಲವಾ, ಫೈನಾನ್ಶಿಯರ್ ಜೊತೆ ಪಾರ್ಟಿಗೆ ಬರುವುದಿಲ್ಲವಾ ಅಂತ ಕೇಳಿ ಹಿಂಸೆ ಮಾಡಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಹೆಣ್ಣು ಮಕ್ಕಳಿಗೆ ಧೈರ್ಯ ಹೇಳುವ ನಾನು ನನ್ನಲ್ಲಿ ನೋಡಿಕೊಂಡರೆ ನನ್ನ ಘಟನೆಯ ಬಗ್ಗೆಯೂ ಹೇಳಿಕೊಳ್ಳಬೇಕೆನಿಸಿದೆ. ಅದ್ದರಿಂದ ಎಲ್ಲವನ್ನೂ ಇಂದು ಹೇಳಿದ್ದೇನೆ ಎಂದು ವೃತ್ತಿ ಜೀವನದ ಕಹಿ ಘಟನೆಗಳನ್ನು ಬಿಚ್ಚಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv