Tag: ರವೀಂದ್ರ ಶ್ರೀಕಂಠಯ್ಯ

  • ಸಂಸದರಾಗಿ ಏನು ಮಾಡಬೇಕೆಂಬ ಜವಾಬ್ದಾರಿ ಇಲ್ಲ – ಸಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

    ಸಂಸದರಾಗಿ ಏನು ಮಾಡಬೇಕೆಂಬ ಜವಾಬ್ದಾರಿ ಇಲ್ಲ – ಸಮಲತಾ ವಿರುದ್ಧ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

    ಮಂಡ್ಯ: ಸಂಸದರಾಗಿ ನಿಮಗೆ ಏನು ಮಾಡಬೇಕು ಎಂಬ ಜವಾಬ್ದಾರಿ ಇಲ್ಲ ಎಂದು ಸಂಸದೆ ಸಮಲತಾ ಅಂಬರೀಶ್ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

    ಶಾಸಕರ ಕೆಲಸವನ್ನು ನಾನೇ ಮಾಡುತ್ತಿದ್ದೇನೆ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಶ್ರೀರಂಗಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಸಂಸದರಾಗಿ ಏನು ಮಾಡಬೇಕು ಎಂಬ ಜವಬ್ದಾರಿಯ ಅರಿವಿಲ್ಲ. ಶಾಸಕರಿಗೆ ಸಂಸದರಿಗೆ ಸಾಮಾನ್ಯವಾಗಿ ಅನುದಾನ ಬರುತ್ತದೆ. ಅದನ್ನು ಬಿಟ್ಟು ಬೇರೆ ಮಂಡ್ಯಕ್ಕೆ ಹೊಸದಾಗಿ ಯಾವ ಅನುದಾನ ತಂದಿದ್ದೀರಾ ಮೊದಲು ಹೇಳಿ. ನಾನು ಅನುದಾನ ತಂದಿದ್ದೇನೆ. ಬೇಕು ಅಂದರೆ ಲೆಕ್ಕ ಕೊಡುತ್ತೇನೆ. ಆದರೆ ನೀವೇನು ಅನುದಾನ ತಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

    ರೈಲ್ವೆ ಯೋಜನೆಗೆ ದಕ್ಷಿಣ ಭಾರತಕ್ಕೆ 55 ಕೋಟಿ ಬಿಡುಗಡೆಯಾಗಿದೆ. ಉತ್ತರ ಭಾರತಕ್ಕೆ 13 ಸಾವಿರ ಕೋಟಿ ಬಿಡುಗಡೆಯಾಗಿದೆ. ಸಂಸದರಾಗಿ ನೀವು ಏನು ಮಾಡುತ್ತಿದ್ದೀರಾ? ಇವರಿಗೆ ಇವರ ಜವಾಬ್ದಾರಿಯ ಅರಿವಿಲ್ಲ. ಕೆ.ಆರ್. ನಗರದಲ್ಲಿ ಸ್ಟೇಟ್ ಫಂಡ್ ಕಾಮಗಾರಿಗೆ ಪೂಜೆ ಮಾಡುವುಕ್ಕೆ ಹೋಗುತ್ತಾರೆ. ಅದರಲ್ಲೂ ಎಂಎಲ್‍ಎ ಬಿಟ್ಟು ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಮಂಡ್ಯ ಜಿಲ್ಲೆಗೆ ಸಂಸದರು ಏನು ಕೊಡುಗೆ ಕೊಡುತ್ತಾರೆ ಅಂತ ಜನ ಕಾಯುತ್ತಿದ್ದಾರೆ. ಮುಂದಿನ ಚುನಾವಣೆಗೆ ಜನರು ಉತ್ತರ ಕೊಡುತ್ತಾರೆ. ಈಗ ಭ್ರಮ ಲೋಕದಲ್ಲಿ ಇರುವಂತೆ ಕಾಣುತ್ತಾರೆ. ಮಂಡ್ಯ ಜಿಲ್ಲೆಗೆ ಏನಾದರೂ ಅಭಿವೃದ್ಧಿ ಮಾಡಿ. ಸಮುದಾಯ ಭವನಕ್ಕೆ ಕೊಟ್ಟಿದ್ದೇನೆ ಅಂತಾರೆ. ಯಾರೇ ಮೆಂಬರ್ ಆದರೂ ಎಂಪಿ ಫಂಡ್ ಬರುತ್ತದೆ.ಸಚಿವರಿಗೆ ಲೆಟರ್ ಕೊಟ್ಟು ಫೇಸ್ ಬುಕ್ ವಾಟ್ಸ್ ಆಫ್‍ನಲ್ಲಿ ಫೋಟೋ ಹಾಕಿಸಿಕೊಳ್ಳುತ್ತಾರೆ. ಅದನ್ನು ಬಿಟ್ಟು ಏನಾದರೂ ಹೊಸ ಯೋಜನೆ ತಂದಿದ್ದೇನೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲಿ ಎಂದಿದ್ದಾರೆ.

    ನೀವು ಗೆದ್ದಿದ್ದು ಅಂಬರೀಶ್ ಹೆಂಡತಿ, ಅಂಬರೀಶ್ ಅವರು ಅಕಾಲಿಕವಾಗಿ ಮರಣಹೊಂದಿದರು ಎನ್ನುವ ಗೌರವಾರ್ಥದಲ್ಲಿ ಜನರು ಗೆಲ್ಲಿಸಿದ್ದಾರೆ. ಇದು ಎಲ್ಲಾ ಟೈಂನಲ್ಲಿಯೂ ನಡೆಯುವುದಿಲ್ಲ. ಅಂಬರೀಶ್ ಅವರು 25 ವರ್ಷ ಎಂಪಿಯಾಗಿ ಅನುಭವಿಸಿದ್ದಾರೆ. ಆದರೆ ಮಂಡ್ಯ ಇದ್ದಂತೆಯೇ ಇದೆ. ಆದರೆ ಪಕ್ಕದಲ್ಲಿರುವ ಹಾಸನ ಜಿಲ್ಲೆ ಅಭಿವೃದ್ಧಿಯಾಗಿದೆ. ಈಗಲಾದರೂ ಹೆಚ್ಚೆತ್ತು ಹೋರಾಟ ಮಾಡಿ ವಿಶೇಷ ಅನುದಾನ ತೆಗೆದುಕೊಂಡು ಬನ್ನಿ. ಜನರಿಗೆ ಗೊಂದಲ ಸೃಷ್ಟಿ ಮಾಡಿ. ಮುಗ್ದ ಜನರು ಹೊಡೆದಾಡುವಂತೆ ಮಾಡಬೇಡಿ ಎಂದು ಹರಿಹಾಯ್ದಿದ್ದಾರೆ.

  • ವಿವಾದವನ್ನು ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹದ ಕೆಲಸ: ರವೀಂದ್ರ ಶ್ರೀಕಂಠಯ್ಯ

    ವಿವಾದವನ್ನು ರಾಜಕೀಯ ಬಳಸಿಕೊಂಡ್ರೆ ದೇಶದ್ರೋಹದ ಕೆಲಸ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಹಿಜಬ್ ಹಾಗೂ ಕೇಸರಿ ಶಾಲು ವಿವಾದವನ್ನು ರಾಜಕೀಯವಾಗಿ ಬಳಸಿಕೊಂಡರೆ ಅದು ದೇಶದ್ರೋಹದ ಕೆಲಸವಾಗುತ್ತದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಮವಸ್ತ್ರವನ್ನು ಕಡ್ಡಾಯಗೊಳಿಸಿದೆ. ಎಲ್ಲರೂ ಅದನ್ನು ಧರಿಸಿ ಬರಬೇಕು ಜೊತೆಗೆ ಎಲ್ಲಾ ಧರ್ಮದವರು ಅದನ್ನು ಪಾಲಿಸಿಬೇಕಾಗುತ್ತದೆ. ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯನ್ನು ಯಾರದರೂ ಹಾಳು ಮಾಡಲು ಪ್ರಯತ್ನಪಟ್ಟರೆ ಅದು ದೇಶದ್ರೋಹಕ್ಕೆ ಸಮವಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದದ ಪ್ರಚೋದನಕಾರಿ ವೀಡಿಯೋ ಹರಿಬಿಟ್ಟ ಕಿಡಿಗೇಡಿಗಳು: ಪ್ರಕರಣ ದಾಖಲು

    ಹಿಜಬ್ ಹಾಗೂ ಕೇಸರಿ ಶಾಲು ವಿವಾದವನ್ನು ಯಾವುದೇ ಧರ್ಮದವರು, ಯಾವುದೇ ರಾಜಕೀಯ ಪಕ್ಷದವರು ಬಳಸಿಕೊಂಡರೆ ದೇಶದ್ರೋಹವಾಗುತ್ತದೆ. ಅತಿ ಹೆಚ್ಚು ಜನಸಂಖ್ಯೆ ಇರುವಂತಹ ದೇಶ ಮುಂದೆ ಬರುತ್ತಿದೆ ಎನ್ನುವುದಾದರೆ ಅದು ಮಕ್ಕಳ ಶಿಕ್ಷಣದಿಂದ ಮಾತ್ರವಾಗಿದೆ. ದೇಶಕ್ಕೆ ಮಾರಕವಾಗದಂತೆ ಸರ್ಕಾರದ ನಿಯಮ ಪಾಲಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ:  ಮಕ್ಕಳ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟರೆ ಹೇಗೆ: ಸಭಾಪತಿ ಹೊರಟ್ಟಿ

  • ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ ಕೋವಿಡ್ ಕೇರ್ ಸೆಂಟರ್ ವಿಚಾರಕ್ಕೆ ಶಾಸಕ, ಸಚಿವರ ಮಧ್ಯೆ ಜಟಾಪಟಿ

    ಮಂಡ್ಯ: ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಭೂತ ಸೌಕರ್ಯದ ವಿಚಾರಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಚಿವ ನಾರಾಯಣಗೌಡ ನಡುವೆ ಜಟಾಪಟಿ ನಡೆದಿದೆ.

    ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಕೊರೊನಾ ವಿಚಾರಕ್ಕೆ ಸಂಬಂಧಿಸಿ ಸಚಿವರ ವಿರುದ್ಧ ವಾಗ್ದಾಳಿ ನಡಸಿದ್ದರು. ಇದಕ್ಕೆ ತಿರಗೇಟು ನೀಡಿದ ಸಚಿವ ನಾರಾಯಣಗೌಡ ಅವರು, ಒಬ್ಬ ಶಾಸಕನಾಗಿ ಏನೇನು ಕೆಲಸ ಮಾಡಬೇಕು ಎಂದು ಟ್ರೈನಿಂಗ್ ತೆಗೆದುಕೊಳ್ಳಲಿ. ನಾನು 3 ಬಾರಿ ಗೆದ್ದಿದ್ದೀನಿ ಎಂದರೆ 15 ವರ್ಷದ ಅನುಭವ ಇದೆ. ಅನುಭವನೂ ಕೌಂಟ್ ಆಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕೋವಿಡ್ ಹಣ ಲೂಟಿ ಮಾಡಿದರೇ ಅದಕ್ಕೆ ಸಾಕ್ಷಿ ಕೊಡಿ. ನನ್ನ ಬಗ್ಗೆ ಟೀಕೆ ಮಾಡಿದರೆ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಬೇಕಾಗುತ್ತದೆ. ನನ್ನ ಮೇಲೆ ಕೊಚ್ಚೆ ಹಾರಿಸಿದರೆ ನಿಮ್ಮ ಮೇಲಿನ ಆರೋಪದ ಬಗ್ಗೆ ಮಾತಾಡುತ್ತೇನೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಖಡಕ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

    ನಿನ್ನೆ ಸುದ್ದಿಗಾರರೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ನಾರಾಯಣಗೌರ ಮನೆಯಲ್ಲಿ 50 ಮಂದಿ ಒಂದೇ ಬಾತ್ ರೂಂ ಬಳಸುತ್ತಾರಾ?. ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ವೈಫಲ್ಯ ಎದ್ದು ಕಾಣುತ್ತಿದೆ. ಸಚಿವ ನಾರಾಯಣ ಗೌಡರು 3 ಬಾರಿ ಶಾಸಕರಾಗಿದ್ದಾರೆ. ಆದರೆ ಅರ್ಹತೆ ಮೇಲೆ ಗೆಲ್ಲುವುದು ಬೇರೆ, ಅದೃಷ್ಟದ ಮೇಲೆ ರಾಜಕಾರಣ ಮಾಡೋದೇ ಬೇರೆಯಾಗಿದೆ. ಅವರು ಮೇಲ್ಮನೆಯಲ್ಲಿ ಸಚಿವರ ಯೋಗ್ಯತೆ ಹರಾಜು ಹಾಕಿದ್ದಾರೆ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಮರ್ಯಾದೆ ತೆಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

  • ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ: ರವೀಂದ್ರ ಶ್ರೀಕಂಠಯ್ಯ

    ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಮಂಡ್ಯ ಜಿಲ್ಲಾಡಳಿತದ ವಿರುದ್ಧ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಂ ಶಕ್ತಿಯ ಯಾತ್ರೆಗೆ ಹೋದ 112 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದೆ. ಅವರಿಗೆ ಮೂಲಭೂತ ಸೌಕರ್ಯ ಒದಗಿಸಿಲ್ಲ. ಅನಾಗರಿಕ ನಡುವಳಿಕೆಯಂತೆ ಜಿಲ್ಲಾಡಳಿತ ನಡೆದುಕೊಳ್ಳುತ್ತಿದೆ. ಡಿಸಿಗೆ ಕರೆ ಮಾಡಿದರೆ, ಬೇಜಾವಬ್ದಾರಿತನದ ಉತ್ತರ ಕೊಡುತ್ತಿದ್ದಾರೆ. ಮಂಡ್ಯದಲ್ಲಿ ಜಿಲ್ಲಾಡಳಿತ ಇಷ್ಟರ ಮಟ್ಟಿಗೆ ಕೆಟ್ಟಿದೆ ಎನ್ನುವ ಅರಿವು ನನಗೆ ಇರಲಿಲ್ಲ. ಅಧಿಕಾರಿಗಳ ಜೊತೆ ಸಭೆ ಮಾಡಿಕೊಂಡು ಕುಳಿತ್ತಿದ್ದಾರೆ, ಅವರಿಗೆ ಬಡವರ ಕಷ್ಟ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‍ನವ್ರು ರೈಲು, ಬಸ್ ಯಾವುದಲ್ಲಾದ್ರೂ ಹೋಗ್ಲಿ, ಆದ್ರೆ ಸಂದರ್ಭ ನೋಡಿ ಪ್ರತಿಭಟನೆ ಮಾಡ್ಲಿ: ಸುಧಾಕರ್

    ಈಗಾಗಲೇ ಚೀಫ್ ಸೆಕ್ರೆಟರಿ ಜೊತೆ ಕರೆ ಮಾಡಿ ಮಾತನಾಡಿದ್ದೇನೆ. ಶ್ರೀರಂಗಪಟ್ಟಣದ ಜಿಲ್ಲಾಡಳಿತ ಅವ್ಯವಸ್ಥೆಯಿಂದ ಕೂಡಿದೆ, ಸರ್ಕಾರ ಇದರ ಕಡೆಗೆ ಗಮನ ಹರಿಸುತ್ತಿಲ್ಲ. ಈ ಅನಾಹುತಕ್ಕೆ ಸರ್ಕಾರವೇ ಕಾರಣವಾಗುತ್ತೆ. ಶ್ರೀರಂಗಪಟ್ಟಣದಿಂದ ನೂರಾರು ಬಸ್‍ಗಳು ಓಂ ಶಕ್ತಿಗೆ ಹೊಗುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತಡೆಯುವ ಕೆಲಸ ಮಾಡುತ್ತಿಲ್ಲ. ಯಾತ್ರೆಯಿಂದ ಬಂದವರನ್ನ ಡೈವರ್ಟ್ ಮಾಡಿ, ಟೆಸ್ಟ್ ಮಾಡಿ ಕ್ವಾರಂಟೈನ್ ಮಾಡಲು ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: ಕಟೀಲ್, ಸಿದ್ದರಾಮಯ್ಯಗೆ ಕಂಟಕವಾಗ್ತಾರೆ: ಕೋಟ ಶ್ರೀನಿವಾಸ ಪೂಜಾರಿ

    ಜಿಲ್ಲಾಡಳಿತ ಒಟ್ಟಾರೆ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿದೆ. ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ದೊಡ್ಡ ಹೋರಾಟ ಪ್ರಾರಂಭವಾಗುತ್ತೆ. ನೆಪಕ್ಕೆ ಮಾತ್ರ ಕೋವಿಡ್ ಹೆಸರು ತೆಗೆದುಕೊಳ್ಳುದ್ದಾರಯೇ? ಅಥವಾ ಜನರನ್ನು ಬದುಕಿಸಬೇಕು ಅಂತಾ ಮಾಡುತ್ತಿದ್ದಾರೆ ಅನ್ನೊದು ಗೊತ್ತಾಗುತ್ತಿಲ್ಲ ಎಂದು ಜಿಲ್ಲಾಡಳಿತ ವಿರುದ್ಧ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

  • ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್

    ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್

    ಮಂಡ್ಯ: ಜನರ ಬಳಿ ಸುಲಿಗೆ ಮಾಡಿಕೊಂಡು ನಿಂತಿದ್ದೀರಾ, ಸಂಬಳ ತಗೊಳ್ತೀರಾ ನಿಮಗೆ ಮಾನ ಮರ್ಯಾದೆ ಇಲ್ವಾ ಎಂದು ಸರ್ವೆ ಇಲಾಖೆ ಅಧಿಕಾರಿಗಳನ್ನು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸರ್ವೆ ಇಲಾಖೆಯಲ್ಲಿ ಜಮೀನು ಸ್ಕೆಚ್ ಇತರೆ ವಿಷಯಗಳಿಗೆ ತಿಂಗಳಗಟ್ಟಲೆ ಅಲೆಸುವ ಬಗ್ಗೆ ಅಧಿಕಾರಿಗಳ ವಿರುದ್ಧ ರವೀಂದ್ರ ಶ್ರೀಕಂಠಯ್ಯಗೆ ಹಲವು ದಿನಗಳಿಂದ ದೂರು ಕೇಳಿಬಂದಿತ್ತು. ಹೀಗಾಗಿ ರೈತರು ನೀಡಿದ ದೂರಿನ ಬಳಿಕ ಪರಿಶೀಲನೆಗೆ ರವೀಂದ್ರ ಶ್ರೀಕಂಠಯ್ಯ ಇಲಾಖೆಯ ಕಚೇರಿಗೆ ತೆರಳಿದ್ದರು. ಈ ವೇಳೆ ಜನರಿಗೆ ದಾಖಲಾತಿ ನೀಡದೆ ಶಿಥಿಲಗೊಂಡಿವೆ ಎಂದು ಸಿಬ್ಬಂದಿಯೊಬ್ಬರು ಉತ್ತರಿಸುತ್ತಿದ್ದ ಶಾಕರಿಗೆ ಉತ್ತರ ನೀಡುತ್ತಾರೆ. ಇದನ್ನೂ ಓದಿ:  ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

    ಉತ್ತರ ನೀಡಿದ ಸರ್ವೆ ಇಲಾಖೆ ಮೇಲ್ವಿಚಾರಕ ಸುರೇಶ್‍ಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್ ತೆಗೆದುಳ್ಳುತ್ತಾರೆ. ಸಂಬಳ ತಗೊಳ್ತೀರಾ ನಿಮಗೆ ಮಾನ ಮರ್ಯಾದೆ ಇಲ್ವ, ದಾಖಲೆಗಳನ್ನ ನೀವು ಕಳೆದುಕೊಂಡು ಜನರತ್ರ ಸುಲಿಗೆ ಮಾಡ್ತಿದ್ದೀರಾ. ಈ ವೇಳೆ ಸರ್ವೆ ಇಲಾಖೆ ಮೇಲಧಿಕಾರಿಗಳಿಗೂ ಫೋನ್ ಮೂಲಕ ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಜಿಲ್ಲಾ ಕೇಂದ್ರದಲ್ಲಿ ಕುಳಿತು ಝೂಮ್ ಮೀಟ್ ನಲ್ಲೇ ಕಾಲ ಕಳೆಯುತ್ತಿದ್ದೀರಾ..? ದರೋಡೆ ಮಾಡಲು ನಿಮ್ಮ ಸಿಬ್ಬಂದಿಯನ್ನ ಬಿಟ್ಟಿದ್ದೀರಾ..? ನಿಮ್ಮನ್ನ ಬೇರೆ ಕಾನೂನು ಮಾಡಿ ಅಂತಿದ್ದೀವಾ..? ಕಾನೂನು ಏನಿದೆ ಅದನ್ನೇ ಮಾಡಿ. ಸಿಬ್ಬಂದಿಯನ್ನ ದುಡ್ಡಿಗೆ ಬಿಟ್ಟು, ದಲ್ಲಾಳಿ ಮಾಡಿಕೊಂಡಿದ್ದೀರಾ ಎಂದು ಪ್ರಶ್ನೆಗಳ ಸುರಿಮಳೆಗೈದ್ರು. ಮೇಲ್ವಿಚಾರಕ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರವೀಂದ್ರ ಶ್ರೀಕಂಠಯ್ಯ ಗರಂ ಆದರು.

     

  • ನನ್ನ ಆತ್ಮಸ್ಥೈರ್ಯ ಕುಗ್ಗಿಸಲು 10 ಜನ್ಮ ಎತ್ತಿ ಬಂದ್ರೂ ಆಗಲ್ಲ: ಸುಮಲತಾ

    ನನ್ನ ಆತ್ಮಸ್ಥೈರ್ಯ ಕುಗ್ಗಿಸಲು 10 ಜನ್ಮ ಎತ್ತಿ ಬಂದ್ರೂ ಆಗಲ್ಲ: ಸುಮಲತಾ

    – ಪ್ರತಾಪ್ ಸಿಂಹ ವಿರುದ್ಧ ಸಂಸದೆ ವಾಗ್ದಾಳಿ

    ಮಂಡ್ಯ: ನನ್ನ ಆತ್ಮಸ್ಥೈರ್ಯ ಕುಗ್ಗಿಸಲು 10 ಜನ್ಮ ಎತ್ತಿ ಬಂದರೂ ಆಗಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಅವರಿಗೆ ಅಕ್ರಮ ಗಣಿಗಾರಿಕೆ ನಿಂತಾಗಿನಿಂದ ಎಲ್ಲೋ ಅವರಿಗೆ ಎಫೆಕ್ಟ್ ಆಗಿದೆ ಅನ್ನಿಸುತ್ತೆ. ಲಾಜಿಕ್ ಇಲ್ಲದ ಮಾತುಗಳನ್ನು ಅವರು ಮಾತನಾಡುತ್ತಿದ್ದಾರೆ. ನನ್ನ ಸುತ್ತ ಅಕ್ರಮ ನಡೆಯುತ್ತಿದೆ ಎಂಬ ಶಂಕೆ ಇದ್ದರೆ ಪೊಲೀಸ್‍ಗೆ ಕಂಪ್ಲೇಟ್ ಮಾಡಲಿ. ಅದನ್ನು ಎಲ್ಲಿ ಚಾಲೆಂಜ್ ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಅಲ್ಲಿ ಕೊಡುತ್ತೇನೆ ಎಂದರು.

    ಅವರಿಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಲೆಟರ್ ಮಿಸ್ ಯೂಸ್ ಆದರೆ ನನ್ನ ಗಮನಕ್ಕೆ ತರಬಹುದಿತ್ತು. ಅದನ್ನು ಬಿಟ್ಟು ಹೀಗೆಲ್ಲಾ ಮಾತನಾಡುವುದು ಸರಿಯಲ್ಲ. ಅವರ ಮಾತಿನಿಂದ ನನ್ನ ಆತ್ಮಸ್ಥೈರ್ಯ ಕುಗ್ಗಲ್ಲ. ನನ್ನ ಆತ್ಮಸ್ಥೈರ್ಯ ಕುಗ್ಗಿಸಬೇಕು ಅಂದ್ರೆ 10 ಜನ್ಮ ಎತ್ತಿ ಬಂದರೂ ಆಗಲ್ಲ. ಈ ರೀತಿಯ ಕಾಮೆಂಟ್ ಮಾಡುವವರಿಂದ ಇನ್ನಷ್ಟು ಶಕ್ತಿ ಬರುತ್ತದೆ. ಅವರ ಮಾತಿನಿಂದ ನನಗೆ ಬ್ಯಾಟರ್ ಚಾರ್ಜ್ ಮಾಡಿದಂತೆ ಆಗುತ್ತದೆ. ನನ್ನ ಮೇಲೆ ಕ್ರಿಮಿನಲ್ ಕೇಸ್ ಹಾಕುವುದು ಹಾಸ್ಯಾಸ್ಪದ ಎನ್ನಿಸುತ್ತದೆ. ಅವರ ಮಾತಿಗೆ ಏನು ಹೇಳಬೇಕು ಅಂತಾ ನನಗೆ ಗೊತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

    ಗಣಿಗಾರಿಕೆ ವಿಷಯ ಎತ್ತಿದಾಗ ಎಲ್ಲಾ ಶಾಸಕರು ದಿಶಾ ಸಭೆ ಬರುತ್ತೀರಾ. ಬೇರೆ ಸಮಸ್ಯೆ ಕುರಿತು ಮಾತನಾಡಲು ಬರುವುದಿಲ್ಲ. ಮನ್‍ಮುಲ್ ಹಗರಣದ ಬಗ್ಗೆ ಅವರು ತುಟಿ ಬಿಚ್ಚಲ್ಲ. ಶ್ರೀರಂಗಪಟ್ಟಣ ಶಾಸಕರಿಗೆ ನನ್ನ ಬಗ್ಗೆ ಮಾತನಾಡಿದರೆ ಮೈಲೇಜ್ ಸಿಗಬಹುದು. ಅದೇ ಕಾರಣಕ್ಕೆ ಅವರು ನನ್ನ ಹೆಸರನ್ನು ಮಂತ್ರದ ರೀತಿ ಹೇಳುತ್ತಿದ್ದಾರೆ. ದಿಶಾ ಸಭೆ ನಡೆಸಲು ನಿಮಗೆ ಹಕ್ಕಿಲ್ಲ ಎನ್ನುತ್ತಾರೆ. ಈ ಪ್ರಪಂಚದಲ್ಲಿ ಒಳ್ಳೆಯದಕ್ಕಿಂದ ಕೆಟ್ಟದನ್ನು ಮಾಡುವವರು ಸಿಗುತ್ತಾರೆ ಎಂದು ಅಂಬರೀಶ್ ಅವರು ಹೇಳುತ್ತಿದ್ದರು. ಕೆಟ್ಟದ್ದನ್ನು ಕೆಲವರು ಮಾಡಲಿ ನಾವು ಒಳ್ಳೆಯದು ಮಾಡೋಣ. ಹಿಂದೆ ದುಷ್ಟರನ್ನು ಸಂಹಾರ ಮಾಡಲು ದೇವತೆಗಳು ಹುಟ್ಟಿ ಬರುತ್ತಿದ್ದರು. ರಾವಣಾಸುರ ಆಗಲಿ, ಮಹಿಷಾಸುರ ಆಗಲಿ ಬೇಕಿದ್ರೆ, ಅದನ್ನು ಸಂಹಾರ ಮಾಡಲು ನಾನು ಮಹಿಷ ಮರ್ದಿನಿ ಆಗುತ್ತೇನೆ ಎಂದು ತಿಳಿಸಿದರು.

    ಜೆಡಿಎಸ್ ಅವರನ್ನು ನನ್ನ ವಿರೋಧಿಗಳು ಎಂದು ಹೇಳಲ್ಲಾ. ಇವರು ಜಿಲ್ಲೆಯ ಜನರ ವಿರೋಧಿಗಳು. ಭ್ರಷ್ಟಾಚಾರದ ವಿರುದ್ಧದ ರಾಯಬಾರಿ ಆಗಿ ಬರುವವರನ್ನು ಈ ರೀತಿ ಟಾರ್ಗೆಟ್ ಮಾಡುತ್ತಾರೆ. ಇವರು ಜನರಿಗೆ ಯಾವ ಸೇವೆ ಮಾಡುತ್ತಾರೆ. ಇಂತಹ ಜನಪ್ರತಿಗಳನ್ನು ಆಯ್ಕೆ ಮಾಡಿದ್ದಕ್ಕೆ ಜನರು ಪಶ್ಚಾತ್ತಾಪ ಪಡಬೇಕು. ಇವರಿಂದ ಯಾವಾಗ ವಿಮುಕ್ತಿ ಯಾವಗ ಸಿಗುತ್ತದೆ ಎಂದು ಜನರು ಕಾಯುತ್ತಾ ಇದ್ದಾರೆ. ಇದಕ್ಕೆ ಹೆಚ್ಚು ದಿನ ಕಾಯಬೇಕಿಲ್ಲ, ಈ ಕೆಲಸ ತುಂಬಾ ಬೇಗನೇ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

    ಮೈಸೂರಿನ ದಿಶಾ ಸಭೆಗೆ ನಾನು ಉಪಾಧ್ಯಕ್ಷೆ ಆಗುತ್ತೇನೆ. ನಾನು ಪ್ರತಾಪ್ ಸಿಂಹ ಜೊತೆ ಹೇಳಿದಾಗ, ಅವರು ತಾಲೂಕು ಮಟ್ಟದಲ್ಲಿ ಸಭೆ ಮಾಡಿ ಎಂದರು. ರಾಷ್ಟ್ರೀಯ ಹೆದ್ದಾರಿ ನನ್ನ ಯೋಜನೆ ಎಂದು ಪ್ರತಾಪ್ ಸಿಂಹ ಹೇಳುತ್ತಾರೆ. ನಾನು ಎಲ್ಲೂ ಇದು ನನ್ನ ಯೋಜನೆ ಎಂದು ಹೇಳಿಲ್ಲ. ಈ ಕಾಮಗಾರಿ ಮಂಡ್ಯ ವ್ಯಾಪ್ತಿಯಲ್ಲಿ 58 ಕಿಮೀ ನಡೆಯುತ್ತಿದೆ. ಈ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಡಿ ಎಂದು ನಾನು ಕೇಳುತ್ತಿದ್ದೇನೆ. ನನ್ನ ಜಿಲ್ಲೆಯ ಜನರಿಗೆ ಸಮಸ್ಯೆ ಕೊಟ್ಟರೆ ನಾನು ಪಶ್ನೆ ಮಾಡುವ ಅಧಿಕಾರ ಇಲ್ಲವಾ..? ಪ್ರತಾಪ್ ಇದು ಮೈಸೂರಿನ ಕಾಮಗಾರಿ ಅಂತಾರೆ. ಹಾಗಿದ್ದರೆ ಈ ಕಾಮಗಾರಿಯನ್ನು ಆಕಾಶದ ಮೇಲೆ ಕಟ್ಟಿದ್ದಾರಾ..? ಮಂಡ್ಯದ ರೈತರು ಜಮೀನು ಕೊಟ್ಟಿಲ್ವಾ..? ಅವರಿಗೆ ಸಮಸ್ಯೆ ಕೊಟ್ಟುಕೊಂಡು, ಇದು ಮೈಸೂರಿನ ಕಾಮಗಾರಿ ಎಂದರೆ. ನೀವೇನೂ ಆಕಾಶದಲ್ಲಿ ಹಾರಿ ಹೋಗುತ್ತಿಲ್ಲವಲ್ಲ. 58 ಕಿಮೀ ಮಂಡ್ಯ ಮುಖಾಂತರವೇ ಹೋಗಬೇಕು. ನೀವು ಇಲ್ಲಿಯ ಜನಕ್ಕೆ ಅನ್ಯಾಯ ಮಾಡಿ ನಮ್ಮ ಯೋಜನೆ ಅಂದರೆ ಹೇಗೆ..? ನಿಮ್ಮ ಯೋಜನೆ ಆದ್ರೆ ಸರಿಯಾಗಿ ಮಾಡಿ, ಜನರಿಗೆ ಯಾಕ್ ತೊಂದರೆ ಕೊಡುತ್ತೀರಾ..? ಮಂಡ್ಯ ಜನರನ್ನು ಲೆಕ್ಕಿಸದೇ ಇದು ಮೈಸೂರಿಗೆ ಎಂದರೆ ನಾವು ಒಪ್ಪುವುದಕ್ಕೆ ತಯಾರಿಲ್ಲ. ಮೊದಲು ಮಂಡ್ಯ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಿ. ಪ್ರತಾಪ್ ಸಿಂಹ ವ್ಯಾಪ್ತಿ ಎಲ್ಲಿದೆ, ಅವರ ಅಧಿಕಾರ ಎಲ್ಲಿದೆ ಅಲ್ಲಿಗೆ ಸೀಮಿತ ಆಗೋದನ್ನು ಕಲಿಯಬೇಕು ಎಂದರು.

  • ಸುಮಲತಾ ಅಂಬರೀಶ್ ಯಾವ ಕೆಲಸವನ್ನು ಮಾಡುತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ಅಂಬರೀಶ್ ಯಾವ ಕೆಲಸವನ್ನು ಮಾಡುತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಸಂಸದರು ಮಾಡುವ ಯಾವ ಕೆಲಸವನ್ನು ಮಾಡುತ್ತಿಲ್ಲ, ಬೇಡವಾದ ಕೆಲಸವನ್ನು ಮಾಡಿಕೊಂಡು ನಿಂತಿದ್ದಾರೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಮಾಡಬೇಕಾದ ಯಾವುದೇ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಬೇಡವಾದ ವಿಚಾರವನ್ನು ಎತ್ತಿಕೊಂಡು ಕೆಆರ್‌ಎಸ್‌ ಉಳಿಸುತ್ತೀನಿ ಎಂದು ಹೋಗಿದ್ದಾರೆ. ಕೆಆರ್‌ಎಸ್‌ ಉಳಿಸೋಕೆ ಅಳಿದು ಹೋಗಿರೋದು ಏನು? ಡ್ಯಾಂ ಏನು ಆಗಿಲ್ಲ ಸುರಕ್ಷಿತವಾಗಿ ಇದೆ. ಸಾರ್ವಜಕರಲ್ಲಿ ಅನಾವಶ್ಯಕವಾಗಿ ಗೊಂದಲ ಉಂಟುಮಾಡುತ್ತಿದ್ದಾರೆ ಎಂದಿದ್ದಾರೆ.

    ಸಂಸದರಿಂದ ಮಂಡ್ಯ ಜಿಲ್ಲೆಯಲ್ಲಿ ಹಾಹಾಕಾರ ಸೃಷ್ಟಿಯಾಗಿದೆ. ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಗಳಿಗೆ ಕಚ್ಚಾ ವಸ್ತುಗಳು ಪೂರೈಕೆ ಆಗುತ್ತಿಲ್ಲ. ಜನ ಸಾಮಾನ್ಯರಿಗೆ ಮನೆ ಕಟ್ಟಲು ಕಲ್ಲು, ಜೆಲ್ಲಿ, ಎಂ ಸ್ಯಾಂಡ್ ಸಿಗುತ್ತಿಲ್ಲ, ದುಪ್ಪಟ್ಟು ಹಣಕೊಟ್ಟು ಕೊಳ್ಳುವ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಮಾಡಬೇಕೆಂದು ಹೇಳಿದರು. ಆದರೆ ಅಧಿಕಾರಿಗಳು ರಾಜ್ಯಕ್ಕೆ ಒಂದು ಜಿಲ್ಲೆಗೆ ಒಂದು ಕಾನೂನು ಎಂಬಂತೆ ವರ್ತನೆ ಮಾಡುತ್ತಿದ್ದಾರೆ ಇದರಿಂದ ಜನರು ಆಕ್ರೋಶಗೊಂಡಿದ್ದಾರೆ ಎಂದರು.  ಇದನ್ನೂ ಓದಿ:  ಮುಳುಗಡೆಯಾಗಲಿದೆ ಮಂಗಳೂರು, ಮುಂಬೈ, ಚೆನ್ನೈ

    ಸುಮಲತಾ ಅಂಬರೀಶ್ ಅವರು ಬೇಡಾವಾದ ಕೆಲಸ ಬಿಟ್ಟು ಅವರ ಕೆಲಸವನ್ನು ಸರಿಯಾಗಿ ಮಾಡಬೇಕು. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಎಷ್ಟು ಅಂಡರ್ ಪಾಸ್ ಬೇಕು ಎಂದು ಗಡ್ಕರಿ ಅವರ ಬಳಿ ಮಾತನಾಡಲಿ. ಜಿಲ್ಲೆಯಲ್ಲಿ ಸಂಸದರ ಕೆಲಸವನ್ನು ಶಾಸಕರು ಮಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಸದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

  • ಸುಮಲತಾ ಅಂಬರೀಶ್‍ಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ಅಂಬರೀಶ್‍ಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ: ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎಲ್ಲರಿಗೂ ತೊಂದರೆ ಕೊಟ್ಟು, ಜಿಲ್ಲಾ ವ್ಯವಸ್ಥೆಯನ್ನೇ ಅಲ್ಲೋಲ- ಕಲ್ಲೋಲ ಮಾಡುತ್ತಿದ್ದಾರೆ. ಅವರಿಗೆ ಮಂಡ್ಯ ಸಂಸ್ಕೃತಿ ಗೊತ್ತಿಲ್ಲ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತೊಮ್ಮೆ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಂಡ್ಯ ತಾಲೂಕಿನ ಪೀ ಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ನೂರಾರು ವರ್ಷಗಳಿಂದ ಗಣಿಗಾರಿಕೆ ನಡೆದುಕೊಂಡು ಬಂದಿದೆ. ಇದೀಗ ಸಕ್ರಮ – ಅಕ್ರಮ ಎಲ್ಲಾ ಗಣಿಗಾರಿಕೆಗಳು ನಿಂತು ಹೋಗಿವೆ. ಇದರಿಂದ ಕಾಮಗಾರಿಗಳಿಗೆ ಮೆಟಿರಿಯಲ್‍ಗಳು ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿ ಕೆಲಸಗಳು ನಿಂತು ಹೋಗಿವೆ. ಈ ಮೂಲಕ ಸುಮಲತಾ ಅಂಬರೀಶ್ ಎಲ್ಲರಿಗೂ ತೊಂದರೆ ಕೊಟ್ಟು ಜಿಲ್ಲೆಯ ವ್ಯವಸ್ಥೆಯನ್ನು ಅಲ್ಲೋಲ-ಕಲ್ಲೋಲ ಮಾಡಿದ್ದಾರೆ.

    ಸಂಸದ ಯೋಚನೆ ತುಘಲಕ್ ಸಂಸ್ಕೃತಿ ರೀತಿಯಲ್ಲಿ ಇದೆ. ನಾವು ಮನುಷ್ಯರ ಜೊತೆ ಬದುಕುತ್ತಿದ್ದೇವೆ, ವಿಶ್ವಾಸದಿಂದ ಇರಬೇಕು. ಜಿಲ್ಲಾಡಳಿತ ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಮಾಡಬೇಕು, ಕಾನೂನು ಬದ್ಧವಾಗಿ ರಾಜಧನ ನಿಗದಿಮಾಡಿ ಕಾಮಗಾರಿಗಳಿಗೆ ಮೆಟಿರೀಯಲ್ ಸಿಗುವ ರೀತಿ ಮಾಡಬೇಕು. ಮಂತ್ರಿ ಆಗಿರುವ ನಾರಾಯಣಗೌಡರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅವರು ಕೇವಲ ಕೆಆರ್‍ಪೇಟೆ ಕ್ಷೇತ್ರವಲ್ಲದೇ ಜಿಲ್ಲೆಯ ಅಭಿವೃದ್ಧಿ ಕಡೆಯೂ ಸಹ ಗಮನವರಿಸಬೇಕು ಎಂದು ಮನವಿ ಮಾಡಿದರು.

  • ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

    ಮಂಡ್ಯ: ಸಂಸದೆ ಸುಮಲತಾ ದಾಳಿ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ದಾಳಿ ಮಾಡಿ ಬಂದ್ ಮಾಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ಕಲ್ಲು ಕ್ವಾರೆ ನಡೆಯುತ್ತಿದ್ದು, ಅಕ್ರಮ ಕ್ವಾರೆ ಪ್ರದೇಶಗಳಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಪೊಲೀಸರ ಜೊತೆ ದಾಳಿ ನಡೆಸಿ ಅಕ್ರಮ ಕ್ವಾರೆಗಳಿಗೆ ಬೀಗ ಜಡಿದಿದ್ದಾರೆ. ಇತ್ತೀಚೆಗಷ್ಟೇ ಈ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದ ಸಂಸದೆ ಸುಮಲತಾ ಅವರು ಅಕ್ರಮ ಕಲ್ಲು ಕ್ವಾರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಅಕ್ರಮ ಕಲ್ಲು ಕ್ವಾರೆಗಳ ಮೇಲೆ ದಾಳಿ ಮಾಡಿದ್ದಾರೆ. ಕಠಿಣ ಕ್ರಮಕ್ಕೆ ಮುಂದಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದರು. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆಗಿದ್ದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ. ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಸುಮಲತಾ ತಿರುಗೇಟು ನೀಡಿದ್ದರು.

    ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದ್ದರು.

  • ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಅಕ್ರಮ ಕಲ್ಲು ಗಣಿಗಾರಿಕೆಗೆ ಹೆಚ್‍ಡಿಕೆಯೇ ಪ್ರಮುಖ ರೂವಾರಿ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.

    ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‍ಎಸ್ ನೀರುಣಿಸುತ್ತಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು.

    ಕೆಆರ್‍ಎಸ್‍ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ ಎಂದು ಜಗದೀಶ್ ವಿ .ಸದಂ ಆರೋಪಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ರವರು ಮಾತನಾಡಿ ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್