Tag: ರವೀಂದ್ರ ಶ್ರೀಕಂಠಯ್ಯ

  • ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ

    – ಅಂಬರೀಶ್ ಕಾಲದಲ್ಲಿಯೇ ಅಕ್ರಮ ಗಣಿಗಾರಿಕೆ ನಡೆದಿರೋದು

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನಟೋರಿಯಸ್, ಅವರು ಸಂಸದ ಸ್ಥಾನಕ್ಕೆ ಆರ್ಹರಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಅವರು ತಮ್ಮ ಕ್ರಿಮಿನಲ್ ಮೈಂಡ್ ಅನ್ನು ಚಿತ್ರರಂಗದಲ್ಲಿ ಬಳಸಲಿ. ರಾಜಕಾರಣಕ್ಕೆ ಕ್ರಿಮಿನಲ್ ಮೈಂಡ್ ಅಪ್ಲೇ ಮಾಡಬೇಡಿ. ಸುಮಲತಾ ಅವರು ಡ್ಯಾಂ ಬಿರುಕು ಬಿಟ್ಟಿದೆ ಅಂತಾ ನೂರು ಬಾರಿ ಹೇಳಿ ಆಣೆಕಟ್ಟಿಗೆ ದೃಷ್ಟಿಯಾಗಿಸಿದ್ದಾರೆ. ಎಂಪಿಯವರ ಕೆಟ್ಟು ಕಣ್ಣು ನಮ್ಮ ಆಣೆಕಟ್ಟೆಗೆ ತಾಗಿದೆ. ಹಾಗಾಗಿ ಡ್ಯಾಂನಲ್ಲಿ ಪೂಜೆ ಮಾಡಿಸೋದಕ್ಕೆ ಹೇಳಿದ್ದೇನೆ ಎಂದು ವ್ಯಂಗ್ಯ ಮಾಡಿದರು.

    1995-2008ರಲ್ಲಿ ಅಂಬರೀಶ್ ಸಂಸದರಾಗಿದ್ದಾಗಲೇ ಮಂಡ್ಯ ಹಂಗರಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿತ್ತು. ಈಗ ಅದೇ ಅಂಬರೀಶ್ ಅವರ ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡ್ತಾ ಇದ್ದೀರಾ? ನೀವು ಮೊದಲು ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಿ. ನಿನ್ನೆ ನೋಡಿದ ಹಳ್ಳ-ಕೊಳ್ಳಗಳೆಲ್ಲ ಅಂಬರೀಶ್ ಅವರ ಕಾಲದಲ್ಲಿ ಆಗಿರೋದು. ಹಂಗರಹಳ್ಳಿಯಲ್ಲಿ 2007ರ ಹಿಂದೆ ಅಕ್ರಮ ಗಣಿಗಾರಿಕೆ ನಡೆದಿದೆ. ಅಂಬರೀಶ್ ಅವರ ಕಾಲದಲ್ಲಿಯೇ ಅಕ್ರಮ ದಾಳಿ ನಡೆದಿರೋದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸಂಸದರ ಎಲ್ಲ ಡೀಲ್ ಗಳ ಸಾಕ್ಷಿಗಳು ನಮ್ಮ ಬಳಿಯಲ್ಲಿದ್ದು, ಸಮಯ ಬಂದಾಗ ಬಿಡುಗಡೆ ಮಾಡೋದಾಗಿ ಹೇಳಿದರು.

    ಅದು ಸಂಸದರ ವ್ಯಕ್ತಿತ್ವವನ್ನು ತೋರಿಸುತ್ತೆ:
    ಈ ಹಿಂದೆ ಸುನಂದಾ ಜಯರಾಂನಂತಹ ರೈತ ಮಹಿಳೆಯರು ಅಹೋರಾತ್ರಿ ಧರಣಿ ಮಾಡಿ ಆಣೆಕಟ್ಟು ಕಾಪಾಡಿಕೊಂಡಿದ್ದರು. ಆ ರೀತಿ ರೈತ ಭಾಷೆಯಲ್ಲಿ ಕುಮಾರಣ್ಣ ಮಾತಾನಾಡಿದ್ರೆ, ಇವರೇ ಬೇರೆ ವ್ಯಾಖ್ಯಾನಿಸಿಕೊಂಡಿದ್ದಾರೆ. ಸಂಸದರು ಇಷ್ಟು ನೀಚಮಟ್ಟದಲ್ಲಿ ಅರ್ಥೈಸಿಕೊಂಡಿರುವ ಕಲ್ಪನೆ ಕುಮಾರಣ್ಣನಿಗೆ ಇರಲಿಲ್ಲ. ಅವರೇ ಬೇರೆ ಅರ್ಥೈಸಿಕೊಂಡು ಮಾತಾಡ್ತಿರೋದು ಅದು ಸಂಸದರ ವ್ಯಕ್ತಿತ್ವವನ್ನು ತೋರಿಸುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಆಣೆಕಟ್ಟಿನ 20 ಕಿ.ಮೀ.ವ್ಯಾಪ್ತಿಯಲ್ಲಿ ಮೈನಿಂಗ್ ಮಾಡಬಾರದು ಅಂತ ಕುಮಾರಸ್ವಾಮಿ ಅವರು ಕಾನೂನು ಮಾಡಿದ್ದರು. ಆದ್ರೆ ನಿನ್ನೆ ಸಂಸದರು 30 ಕಿಲೋ ಮೀಟರ್ ದೂರದಲ್ಲಿರುವ ಗಣಿಗಾರಿಕೆಗಳಿಗೆ ಭೇಟಿ ನೀಡಿದ್ದಾರೆ. ಮೊದಲು 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಅಕ್ರಮ ಗಣಿಗಾರಿಕೆ ಬಂದು ನೋಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ನಾನು ನಮ್ಮ ಬಳಿ ರಾಜಕೀಯದಲ್ಲಿ ಪ್ರಜ್ವಲ್, ನಿಖಿಲ್ ಎಂಬ ಮಿಸೈಲ್ ಇವೆ ಅಂತಾ ಹೇಳಿದ್ದೆ. ಆದ್ರೆ ಅದನ್ನು ನೀವು ನಿಮ್ಮ ನಟೋರಿಯಸ್ ಬುದ್ಧಿ ಮೂಲಕ ತಿರುಚಿದ್ದಿರಿ. ನೀವು ಸಂಸದ ಸ್ಥಾನಕ್ಕೆ ಅರ್ಹರಲ್ಲ. ನೀವು ಬೆಂಗಳೂರಿನ ಹೋಟೆಲ್ ಗೆ ನಿಮ್ಮ ಇಬ್ಬರು ಬೆಂಬಲಿಗರನ್ನು ಯಾವ ಡೀಲ್ ಕಳಿಸಿದ್ರಿ ಎಂಬ ಸಾಕ್ಷಿ ನಮ್ಮ ಬಳಿ ಇದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

     

  • ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    – ದಾಳಿ ಹೆಸರಲ್ಲಿ ದುಡ್ಡು ವಸೂಲಿಗೆ ಹೋಗಿರ್ಬೇಕು, ಹೆಚ್‍ಡಿಕೆ ಕಿಡಿ

    ಮಂಡ್ಯ: ಕನ್ನಂಬಾಡಿ ಅಣೆಕಟ್ಟು ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವಿನ ನೇರ ಸಂಘರ್ಷ ಇನ್ನಷ್ಟು ತೀವ್ರಗೊಂಡಿದೆ. ಅಕ್ರಮ ಕಲ್ಲುಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಸುಮಲತಾ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದಾರೆ. ಆದ್ರೆ ಸಂಸದೆ ಬೇಬಿ ಬೆಟ್ಟಕ್ಕೆ ಭೇಟಿ ನೀಡಲಿಲ್ಲ. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಇನ್ನು ಶ್ರೀರಂಗಪಟ್ಟಣದಲ್ಲಿ ಸಂಸದೆ ಕಾರಿಗೆ ಮುತ್ತಿಗೆ ಹಾಕಿದ ಶಾಸಕರ ಬೆಂಬಲಿಗರು ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಇನ್ನು ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ತಮ್ಮನ್ನು ಭ್ರಷ್ಟಾಚಾರದ ರಾಯಭಾರಿ, ಡೀಲ್ ಮಾಸ್ಟರ್, ಚೈಲ್ಡಿಶ್ ಎಂದು ಕರೆದಿರುವ ಸುಮಲತಾಗೆ ಕುಮಾರಸ್ವಾಮಿ ‘ಗಣಿ ಮಾಲೀಕರಿಂದ ಹಣ ವಸೂಲಿಗೆ ಹೋಗಿರಬಹುದು’ ತಿರುಗೇಟು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಭವಿಷ್ಯದ ಬಗ್ಗೆ ಮಾತಾಡಲು ಸುಮಲತಾ ಏನು ಜ್ಯೋತಿಷಿನಾ ಎಂದು ಮಾಜಿ ಪ್ರಧಾನಿ ದೇವೇಗೌಡರು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

  • ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ಗೊತ್ತಿಲ್ಲ: ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ

    ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ಗೊತ್ತಿಲ್ಲ: ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ

    – ಹೊಸದಾಗಿ ಸಿಡಿ ಬಿಟ್ರೆ ನೋಡ್ತೀನಿ

    ಮಂಡ್ಯ: ಎಲ್ಲೆಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದೆಯೋ ಗೊತ್ತಿಲ್ಲ. ಯಾಕೆ ಪಾಪ ಈ ರೀತಿ ತಪ್ಪು ಮಾಡಿಕೊಳ್ತಾರೋ ಎಂದು ಜೆಡಿಎಸ್ ಶಾಸಕ ರವಿಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.

    ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಾಹದೇವಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆಗೆ ಹೋಗಿದ್ದವರೆಲ್ಲ ಕೋರ್ಟ್ ಮೊರೆ ಹೋಗಿದ್ದಾರೆ. ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಕೊರ್ಟ್ ತಡೆ ಹೋಗಿರುವುದು ಬಹಳ ಹಾಸ್ಯ ಕಾಣ್ತಿದೆ ಎಂದರು.

    ಸಿಡಿ ನೀವು ನೋಡಿದಾಗೇ ನಾನು ನೋಡಿದ್ದೀನಿ. ಅದಕ್ಕಿಂತ ಜಾಸ್ತಿ ಏನೂ ನನಗೆ ಗೊತ್ತಿಲ್ಲ. ಎಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆದಿದ್ಯೋ ನನಗೆ ಗೊತ್ತಿಲ್ಲ. ಯಾಕೇ ಪಾಪ ಈ ತರ ತಪ್ಪು ಮಾಡ್ಕೋಳ್ತಾರೋ. ನಾವು ಬಂದಿರುವುದು ಸಮಾಜ ಸೇವೆ ಮಾಡುವುದಕ್ಕೆ. ದೇವರು ಕೊಟ್ಟ ಅವಕಾಶದಲ್ಲಿ ಜನಗಳ ಸೇವೆ ಮಾಡಬೇಕು. ಜನ ಪ್ರತಿನಿಧಿಗಳು ಕೋರ್ಟ್ ಗೆ ಹೋಗಿ ತಡೆ ತರುವಂತ ಪರಿಸ್ಥಿತಿಯನ್ನ ಮಾಡ್ಕೋಳ್ಳಬಾರದು. ಇದು ರಾಜಕೀಯ ಕ್ಷೇತ್ರದಲ್ಲಿ ತಲೆ ತಗ್ಗಿಸುವಂತ ವಿಚಾರ ಇದು. ನೀವು ನೋಡಿರುವಾಗೆ ನಾನು ನೋಡಿದ್ದು, ಅಷ್ಟೇ ಹೊಸದಾಗಿ ಬಿಟ್ಟರೆ ನೋಡ್ತೇನೆ ಎಂದು ಹೇಳಿದರು.

    ಮಾಜಿ ಸಚಿವ ಸೆಕ್ಸ್ ಸಿಡಿ ಹೊರ ಬಂದು ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತಿದ್ದಂತೆಯೇ ಇತ್ತ 6 ಮಮದಿ ಸಚಿವರು ಕೋರ್ಟ್ ಮೊರೆ ಹೊಗಿದ್ದಾರೆ. ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬುದು ಮತ್ತಷ್ಟು ಕುತೂಹಲ ಹುಟ್ಟಿಸಿದೆ.

  • ಕೊರೊನಾ ನಡುವೆಯೂ ಹಾಲಿ-ಮಾಜಿ ಶಾಸಕರ ಬೆಂಬಲಿಗರ ಗುದ್ದಾಟ

    ಕೊರೊನಾ ನಡುವೆಯೂ ಹಾಲಿ-ಮಾಜಿ ಶಾಸಕರ ಬೆಂಬಲಿಗರ ಗುದ್ದಾಟ

    ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸದ ನಡುವೆಯೂ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

    ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‍ನ ವಾಣಿಜ್ಯ ಮಳಿಗೆಗಳ ಉದ್ಘಾಟನೆ ವೇಳೆ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ಮಧ್ಯೆ ಗುದ್ದಾಟ ನಡೆದಿದೆ.

    ಉದ್ಘಾಟನೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯರನ್ನ ಆಹ್ವಾನಿಸದೆ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರನ್ನ ಆಹ್ವಾನಿಸಿದ್ದಕ್ಕೆ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರು ಬೆಂಬಲಿಗರ ನಡುವೆ ವಾಗ್ವಾದ ಮತ್ತು ಮಾತಿನ ಚಕಮಕಿ ನಡೆದಿದೆ.

    ಅಲ್ಲದೇ ಕೈ ಕೈ ಮಿಲಾಯಿಸುವ ಹಂತಕ್ಕೆ ಬೆಂಬಲಿಗರು ಹೋಗಿದ್ದರು. ಇದರಿಂದ ಕೊರೊನಾ ಅಟ್ಟಹಾಸದ ನಡುವೆಯೂ ಮಾಸ್ಕ್, ಸಾಮಾಜಿಕ ಅಂತರವೂ ಇಲ್ಲದೆ ಬೆಂಬಲಿಗರು ವಾಗ್ವಾದ ಮಾಡಿದ್ದಾರೆ ಎಂದು ತಿಳಿದುಬಂದಿದೆ.

  • ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ – ಬಿಜೆಪಿಗೆ ಶಾಸಕರ ಜಂಪ್?

    ಮಂಡ್ಯ: ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮೂಲಕ ಖಾತೆ ತೆರೆದಿದ್ದ ಬಿಜೆಪಿ ಸದ್ಯ ಜಿಲ್ಲೆಯಲ್ಲಿ ಭದ್ರ ಬುನಾದಿ ನಿರ್ಮಿಸುವತ್ತ ಸಾಗಿದೆ. ಬಿಜೆಪಿ ಇದೀಗ ಜಿಲ್ಲೆಯ ಮತ್ತೆರಡು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಮುಂದಾದಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಾಸಕರಾದ ನಾಗಮಂಗಲದ ಸುರೇಶ್‍ಗೌಡ ಹಾಗೂ ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳ ಕುರಿತ ಚರ್ಚೆ ಜಿಲ್ಲೆಯಲ್ಲಿ ದಟ್ಟವಾಗಿ ಕಾಣುತ್ತಿದೆ.

    ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಸಂಪೂರ್ಣವಾಗಿ ಬಿಜೆಪಿ ಕೋಟೆಯನ್ನಾಗಿ ಮಾಡಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಪರಿಣಾಮ ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆದರೂ ಮತ್ತೊಂದು ಆಪರೇಷನ್ ಕಮಲ ಮಾಡಲು ಮಾತುಕತೆ ನಡೆಯುತ್ತಿದೆ ಎಂಬ ಮಾತು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ. ಜೆಡಿಎಸ್‍ನ ಶಾಸಕರಾಗಿರುವ ಸುರೇಶ್‍ಗೌಡ ಮತ್ತು ರವೀಂದ್ರ ಶ್ರೀಕಂಠಯ್ಯ ಇಬ್ಬರು ಕೂಡ ಜೆಡಿಎಸ್‍ಗೆ ಗುಡ್ ಬಾಯ್ ಹೇಳಿ ಬಿಜೆಪಿ ಬಾವುಟ ಹಿಡಿಯಲು ಮನಸ್ಸು ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

    ಕೆ.ಆರ್.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌಡ ಅವರ ಗೆಲುವು ನೋಡಿರುವ ಜೆಡಿಎಸ್ ಶಾಸಕರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಇದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಂತೆ ಕಾಣುತ್ತಿದೆ. ಹೀಗಾಗಿ ಬಿಜೆಪಿಗೆ ಸೇರಿ ತಮ್ಮ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಆಪರೇಷನ್ ಕಮಲ ಆದ ವೇಳೆಯೂ ಈ ಇಬ್ಬರೂ ಬಿಜೆಪಿಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕಾರಣಾಂತರಗಳಿಂದ ಈ ಇಬ್ಬರೂ ಬಿಜೆಪಿಗೆ ಹೋಗಲಿಲ್ಲ, ಈಗ ಖಂಡಿತವಾಗಿಯೂ ಹೋಗುತ್ತಾರೆ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಇಬ್ಬರು ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಮನಸ್ಸು ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಬಳಿಕ 2ನೇ ಆಪರೇಷನ್‍ಗೆ ಕೈ ಹಾಕುವ ಸಾಧ್ಯತೆ ಹೆಚ್ಚಿವೆ.

    ಈ ಕುರಿತು ಬಿಜೆಪಿ ಸೇರುವ ಬಗ್ಗೆ ಮಾತನಾಡಿದ್ದ ಸುರೇಶ್ ಗೌಡ ಅವರು ಈ ಸುದ್ದಿಯನ್ನು ಅಲ್ಲಗೆಳೆದಿದ್ದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೊಂದಿಗೂ ಸ್ನೇಹದಿಂದ ಇರುವುದಾಗಿ ಹೇಳಿದ್ದರು. ನನಗೆ ಆಫರ್ ಬಂದಿತ್ತು ಎಂದಷ್ಟೇ ನಾನು ಹೇಳಿದ್ದೇನೆ. ಆದರೆ ಪಕ್ಷ ಬಿಡುವುದಿಲ್ಲ, ಮೈತ್ರಿ ಸರ್ಕಾರ ಬಿದ್ದು ಹೋದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಅನಿಸುತ್ತಿತ್ತು. ಆದರೆ ಇದೀಗ ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಎಂದನಿಸುತ್ತಿದೆ ಎಂದು ಸುರೇಶ್ ಗೌಡ ಹೇಳಿದ್ದರು. ಆದರೆ ಕೆಲ ದಿನಗಳ ಹಿಂದೆಯಷ್ಟೇ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬಿಎಸ್‍ವೈ ಅವರ ಕಾಲಿಗೆ ಸುರೇಶ್ ಗೌಡ ಅವರು ನಮಸ್ಕರಿಸಿ ಅಚ್ಚರಿ ಮೂಡಿಸಿದ್ದರು.

    ಜೆಡಿಎಸ್ ಸೇರ್ಪಡೆಯಾಗುವ ಸುದ್ದಿ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ರವೀಂದ್ರ ಶ್ರೀಕಂಠಯ್ಯ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಎಚ್‍ಡಿಕೆ ಅವರ ನೇತ್ರತ್ವದಲ್ಲಿ ಗೆದ್ದು ಬಂದಿದ್ದೇನೆ. ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನ ಕೊನೆಯಾಗುವ ಅವಧಿಯವರೆಗೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಕುಮಾರಸ್ವಾಮಿ ಅವರ ಮನಸ್ಸಿಗೆ ನೋವುಂಟು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಡಿಕೆಶಿಗೆ ಸಾರಥಿಯಾದ ಜೆಡಿಎಸ್ ಶಾಸಕ

    ಡಿಕೆಶಿಗೆ ಸಾರಥಿಯಾದ ಜೆಡಿಎಸ್ ಶಾಸಕ

    ಮಂಡ್ಯ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸದ್ಯ ಟೆಂಪಲ್ ರನ್ ಮಾಡುತ್ತಿದ್ದು, ಇಂದು ಮಂಡ್ಯ ಜಿಲ್ಲೆಯಲ್ಲಿನ ದೇಗುಲ ದರ್ಶನಕ್ಕೆ ಬಂದಿದ್ದ ಡಿಕೆಶಿ ಅವರಿಗೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಸಾರಥಿಯಾಗಿದ್ದರು.

    ಹೌದು, ರವೀಂದ್ರ ಅವರು ತಮ್ಮ ಕಾರಿನಲ್ಲೇ ಡಿಕೆಶಿ ಅವರಿಗೆ ದೇಗುಲ ಯಾತ್ರೆ ಮಾಡಿಸಿ ಸಾರಥಿಯಾಗಿದ್ದಾರೆ. ಅದರಲ್ಲೂ ಸ್ವತಃ ತಾವೇ ಕಾರು ಚಾಲನೆ ಮಾಡಿ, ಕನಕಪುರ ಬಂಡೆಗೆ ದೇಗುಲ ದರ್ಶನ ಮಾಡಿಸಿರುವುದು ವಿಶೇಷವಾಗಿತ್ತು. ಶ್ರೀರಂಗನಾಥ ದೇಗುಲ, ಟಿಪ್ಪು ಮಡಿದ ಸ್ಥಳ, ನಿಮಿಷಾಂಭ ದೇವಿ ದೇವಸ್ಥಾನ ಹೀಗೆ ವಿವಿಧ ಸ್ಥಳಗಳಲ್ಲಿ ಕಾಂಗ್ರೆಸ್ ನಾಯಕನಿಗೆ ಜೆಡಿಎಸ್ ಶಾಸಕ ಸಾಥ್ ನೀಡಿದರು. ಇದನ್ನೂ ಓದಿ:‘ನಿಮ್ಮ ಕತ್ತನ್ನೇ ಹೊಡಿತೀನಿ’ – ಖಡ್ಗ ತೋರಿಸಿ ಅಭಿಮಾನಿಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ

    ಜೆಡಿಎಸ್ ಸ್ವಾಗತ, ಬೆಂಬಲ ನೀಡಿದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾವು ಮತ್ತು ಜೆಡಿಎಸ್ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ಜೆಡಿಎಸ್ ಮತ್ತು ನಮ್ಮ ಪ್ರೀತಿ ವೈಯಕ್ತಿಕ ವಿಚಾರ. ಪಕ್ಷದ ಸಿದ್ದಾಂತಗಳನ್ನು ಇಬ್ಬರೂ ಒಪ್ಪಿಕೊಳ್ಳುತ್ತೇವೆ. ಜಾತ್ಯಾತೀತ ತತ್ವದ ಬಗ್ಗೆ ಒಪ್ಪಿಕೊಳ್ಳುತ್ತೇವೆ. ನಾವು ಒಟ್ಟಿಗೆ ಕೆಲಸ ಮಾಡಬೇಕಿದೆ. ರಾಜಕೀಯವಾಗಿ ನಮ್ಮ ಇಬ್ಬರ ಪಕ್ಷದಲ್ಲಿ ಬೇಕಾದಷ್ಟು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಕಾರ್ಯಕರ್ತರು ಪ್ರೀತಿ ಮಾಡವಾಗ ನಾವು ಇಲ್ಲ ಎಂದು ಹೇಳಲು ಆಗುವುದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಹೋಗುವ ಕೆಲಸ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಇದನ್ನೂ ಓದಿ:ಡಿಕೆಶಿ ಜೊತೆ ಜಿಟಿಡಿ ಚಾಮುಂಡಿ ದರ್ಶನ- ದೇವೇಗೌಡ್ರನ್ನು ನೋಡ್ತಿದ್ದಂತೆ ಎಸ್ಕೇಪ್

    ಶ್ರೀರಂಗಪಟ್ಟಣದಲ್ಲಿ ಟಿಪ್ಪು ಮಡಿದ ಸ್ಥಳಕ್ಕೆ ಭೇಟಿ ಕೊಟ್ಟ ಡಿಕೆಶಿ ಅವರನ್ನು ಸ್ಥಳೀಯ ಮುಸ್ಲಿಂ ಮುಖಂಡರು ಪೇಟ, ಕತ್ತಿ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಡಿಕೆಶಿ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳು ಗಲಾಟೆ ಮಾಡುತ್ತಿದ್ದರು. ಆಗ ಡಿಕೆಶಿ ಸುಮ್ಮನಿರಿ ಎಂದು ಮನವಿ ಮಾಡಿದರು. ಆದರೂ ಅವರ ಹಿಂದೆ ನಿಂತಿದ್ದ ಅಭಿಮಾನಿಗಳು ಡಿಕೆಶಿಯನ್ನು ನೋಡಲು ಗಲಾಟೆ ಮಾಡುತ್ತಿದ್ದರು. ಹೀಗಾಗಿ ‘ಏಯ್ ಸುಮ್ನಿರಿ, ಹಿಂಗೇ ಮಾತಾಡ್ತಿದ್ರೆ ನಿಮ್ಮ ಕತ್ತನ್ನೇ ಹೊಡಿತೀನಿ’ ಎಂದು ಕೈಯಲ್ಲಿದ್ದ ಖಡ್ಗ ತೋರಿಸಿ ತಮಾಷೆ ಮಾಡಿದರು.

  • ಅನುಕಂಪ, ಮೋದಿ ಅಲೆಯಿಂದ ಸುಮಲತಾ ಗೆದ್ದಿದ್ದಾರೆ ಹೊರತು ಕೈ ಬೆಂಬಲದಿಂದಲ್ಲ – ರವೀಂದ್ರ ಶ್ರೀಕಂಠಯ್ಯ

    ಅನುಕಂಪ, ಮೋದಿ ಅಲೆಯಿಂದ ಸುಮಲತಾ ಗೆದ್ದಿದ್ದಾರೆ ಹೊರತು ಕೈ ಬೆಂಬಲದಿಂದಲ್ಲ – ರವೀಂದ್ರ ಶ್ರೀಕಂಠಯ್ಯ

    ಮಂಡ್ಯ: ಈ ಬಾರಿಯ ಚುನಾವಣೆಯಲ್ಲಿ ಅಂಬರೀಶ್ ಸಾವಿನ ಅನುಕಂಪ, ಮೋದಿ ಸರ್ಕಾರದ ಬೆಂಬಲದಿಂದ ಸುಮಲತಾ ಗೆದ್ದಿದ್ದಾರೆ. ಅದನ್ನು ಬಿಟ್ಟರೆ ಕಾಂಗ್ರೆಸ್ಸಿಗರ ಬೆಂಬಲದಿಂದ ಸುಮಲತಾ ಗೆದ್ದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ.

    ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ನಮಗೂ ಮಂಡ್ಯದಲ್ಲಿ ರಕ್ಷಣೆ ಇಲ್ಲ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ಟಾಂಗ್ ನೀಡಿದ ರವೀಂದ್ರ ಅವರು, ಹಾಗೆ ಯಾರಾದರೂ ಹೊಡೆಯಲು ಬಂದರೆ ನನಗೆ ತಿಳಿಸಲಿ ನಾನು ಭದ್ರತೆ ಕೊಡಿಸುತ್ತೇನೆ. ಅಗಲೇ ಮೂರು ಗನ್ ಮ್ಯಾನ್‍ಗಳು ಅವರ ಜೊತೆ ಇದ್ದಾರೆ ಬೇಕಾದರೆ ಇನ್ನೂ ಇಬ್ಬರನ್ನು ಕಳಿಸುತ್ತೇನೆ ಎಂದು ಹೇಳಿದರು.

    ಕೇಂದ್ರಕ್ಕೆ ಸಂಬಂಧಿಸಿದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ ರಾಜ್ಯ ಚುನಾವಣೆಯಲ್ಲಿ ಮತದಾರರು ಮೈತ್ರಿ ಸರ್ಕಾರದ ಪರ ಇದ್ದಾರೆ ಎನ್ನುವುದು ಸಾಬೀತಾಗಿದೆ. ಮೋದಿ ಪ್ರಭಾವಿ ವ್ಯಕ್ತಿ ಅವರ ನೇತೃತ್ವದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲಕ್ಕೆ ಕೈ ಹಾಕಲ್ಲ ಎಂದುಕೊಂಡಿದ್ದೇನೆ. ಆಪರೇಷನ್ ಕಮಲ ಸತ್ಯಕ್ಕೆ ದೂರವಾದ ವಿಚಾರ ಆಪರೇಷನ್ ಕಮಲದ ಟೇಬಲ್ ತೆಗೆಯಲಾಗಿದೆ, ಲೈಟ್ ಆಫ್ ಆಗಿದೆ ಎಂದು ಟೀಕೆ ಮಾಡಿದರು.

    ನಾನು ಜೆಡಿಎಸ್ ಶಾಸಕ ನನ್ನ ನಿಲುವು ಪಕ್ಷದ ಪರ ಹಾಗೂ ದೇವೇಗೌಡ ಮತ್ತು ಕುಮಾರಸ್ವಾಮಿ ಪರ ಇರುತ್ತದೆ. ಶ್ರೀರಂಗಪಟ್ಟಣ ಪುರಸಭೆ ಫಲಿತಾಂಶ ಜೆಡಿಎಸ್ ಪರ ಬಂದಿರೋದು ಸಂತಸ ತಂದಿದೆ. ರಾಜ್ಯದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸಲು ಸ್ಥಳೀಯ ಸಂಸ್ಥೆ ಜೆಡಿಎಸ್ ಪರ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

  • ನೂತನ ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು

    ನೂತನ ಸಂಸದೆ ಸುಮಲತಾಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಸವಾಲು

    ಮಂಡ್ಯ: ಸಕ್ಕರೆ ನಾಡಿನ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಮೊದಲ ಸವಾಲು ಎದುರಾಗಿದೆ. ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ರೈತರ ಬೆಳೆಗಳಿಗೆ ನೀರು ಬಿಡಿಸುವ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ.

    ಜಿಲ್ಲೆಯ ರೈತರ ಬೆಳೆಗಳು ಒಣಗುತ್ತಿದ್ದು, ಕೆಆರ್ ಎಸ್‍ನಿಂದ ನೀರು ಬಿಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರ ರವೀಂದ್ರ ಶ್ರೀಕಂಠಯ್ಯ, ಈ ಲೋಕಸಭಾ ಚುನಾವಣೆ ಅನುಕಂಪದ ಆಧಾರದಲ್ಲಿ ಫಲ ಪಡೆದಿದೆ. ಸುಮಲತಾ ಅವರು ಬರೀ ಪಕ್ಷೇತರ ಅಭ್ಯರ್ಥಿಯಾಗಿ ಉಳಿದಿಲ್ಲ. ಅವರು ಈಗ ನಮ್ಮ ಜಿಲ್ಲೆಯ ಸಂಸದೆಯಾಗಿರುವ ಸುಮಲತಾರನ್ನು ಅಭಿನಂದಿಸುತ್ತೇನೆ. ನಮ್ಮ ಜಿಲ್ಲೆಯ ನಾಲೆಗಳಿಗೆ ನೀರು ಹರಿಸುವ ವಿಷಯಲ್ಲಿ ನಮಗೆ ಸಪೋರ್ಟ್ ಸಿಕ್ಕಂತೆ ಆಗಿದೆ ಎಂದರು.

    ನೀರು ನಿರ್ವಹಣಾ ಮಂಡಳಿ ಕೇಂದ್ರದ ಸುಪರ್ದಿಯಲ್ಲಿದ್ದು, ಸುಮಲತಾ ಅವರು ಸಂಸದರಾಗಿರುವದರಿಂದ ಜಿಲ್ಲೆಯ ಜನರಿಗೆ ಕೇಳಿದಾಗ ನೀರು ಬಿಡಿಸಿಕೊಡುತ್ತಾರೆ. ಇದರಿಂದ ಜಿಲ್ಲೆಯ ಜನರಿಗೆ ನ್ಯಾಯ ಸಿಗಲಿದೆ. ನಮ್ಮ ಜವಾಬ್ದಾರಿಗಳನ್ನು ಸುಮಲತಾರು ಸ್ವಲ್ಪ ತೆಗೆದುಕೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ರೈತರ ಪರ, ಬಡವರ ಪರ ಇರಿ ಎಂದು ಸುಮಲತಾರನ್ನು ಕೇಳಿಕೊಳ್ಳುತ್ತೇನೆ ಎಂದು ಶಾಸಕರು ತಿಳಿಸಿದರು.

  • ಮಂಡ್ಯ ಶಾಸಕರಿಗೆ ಉತ್ತಮ ಖಾತೆ ನೀಡಿದ್ದಾರೆ – ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕರ ಟಾಂಗ್

    ಮಂಡ್ಯ ಶಾಸಕರಿಗೆ ಉತ್ತಮ ಖಾತೆ ನೀಡಿದ್ದಾರೆ – ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕರ ಟಾಂಗ್

    ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜನ ಸೇವೆ ಮಾಡಲು ಮಂಡ್ಯ ಜಿಲ್ಲೆಯ ಶಾಸಕರಿಗೆ ಎರಡು ಉತ್ತಮ ಖಾತೆ ನೀಡಿದ್ದಾರೆ ಎಂದು ಹೇಳುವ ಮೂಲಕ, ಸಣ್ಣನೀರಾವರಿ ಖಾತೆ ವಿರೋಧಿಸಿ ಸಚಿವ ಪುಟ್ಟರಾಜು ಪರ ಪ್ರತಿಭಟನೆ ಮಾಡಿದ ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಇಂದು ಶ್ರೀರಂಗಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ತಮ್ಮ ನೂತನ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಜಿಲ್ಲೆಯ ಏಳೂ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ದೇವೇಗೌಡರ ಸಂಬಂಧಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಮತ್ತು ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ನಡುವೆ ನಡೆಯುತ್ತಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಂಬಂಧಿಸಿದ ಹಗ್ಗ ಜಗ್ಗಾಟದ ಬಗ್ಗೆ ಮಾತನಾಡಿ, ಜಿಲ್ಲೆಯ ನಾಯಕರಲ್ಲಿ ಯಾವ ಗೊಂದಲವೂ ಇಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ತಿಳಿಸಿದರು.

    ಇದೇ ವೇಳೆ ಪುಟ್ಟರಾಜುಗೆ ನೀಡಿರುವ ಖಾತೆ ಒಳ್ಳೆಯ ಖಾತೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ತಾವು ಕೊಟ್ಟ ಮಾತಿನಂತೆ ಸಾಲ ಮನ್ನಾ ಮಾಡುತ್ತಾರೆ ಎಂದು ಇದೇ ಸಂದರ್ಭದಲ್ಲಿ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.