Tag: ರಷ್ಯಾ

  • ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ಕೈವ್: ರಷ್ಯಾ ಮಿಲಿಟರಿಯಲ್ಲಿ ( Russian Army) ಸೇವೆ ಸಲ್ಲಿಸುತ್ತಿದ್ದ ಭಾರತ ಮೂಲದ ಸೈನಿಕ ಉಕ್ರೇನ್ (Ukraine) ಮುಂದೆ ಶರಣಾಗಿದ್ದಾರೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನಿಯನ್ ಮಿಲಿಟರಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೋವನ್ನು ಬಿಡುಗಡೆ ಮಾಡಿದೆ.

    ಗುಜರಾತ್‌ನ (Gujarat) 22 ವರ್ಷದ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಉಕ್ರೇನ್ ಪಡೆ ಮುಂದೆ ಶರಣಾದ ಸೈನಿಕ. ಈ ವಿಷಯದ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದುವರೆಗೆ ಉಕ್ರೇನ್ ಅಧಿಕಾರಿಗಳಿಂದ ಯಾವುದೇ ಔಪಚಾರಿಕ ಮಾಹಿತಿ ಬಂದಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಹುಸೇನ್ ಹೆಚ್ಚಿನ ಅಧ್ಯಯನಕ್ಕೆಂದು ರಷ್ಯಾಗೆ ಹೋಗಿದ್ದರು. ಅಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ಶಿಕ್ಷೆಯನ್ನು ವಿಧಿಸಲಾಯಿತು. ಜೈಲು ಶಿಕ್ಷೆ ತಪ್ಪಿಸಲು ರಷ್ಯಾದ ಮಿಲಿಟರಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವನ್ನು ಹುಸೇನ್‌ಗೆ ನೀಡಲಾಯಿತು. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    ನನಗೆ ಜೈಲಿನಲ್ಲಿರಲು ಇಷ್ಟವಿರಲಿಲ್ಲ, ಆದ್ದರಿಂದ ನಾನು ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ನಾನು ಅಲ್ಲಿಂದ ಹೊರಬರಲು ಬಯಸಿದ್ದೆ ಎಂದು ಹುಸೇನ್ ಹೇಳಿದ್ದಾರೆ. ಕೇವಲ 16 ದಿನಗಳ ತರಬೇತಿಯ ನಂತರ, ನನ್ನನ್ನು ಅಕ್ಟೋಬರ್ 1 ರಂದು ಮೂರು ದಿನಗಳ ಕಾಲ ನಡೆದ ಮೊದಲ ಯುದ್ಧ ಕಾರ್ಯಾಚರಣೆಗೆ ಕಳುಹಿಸಲಾಯಿತು. ತಮ್ಮ ಕಮಾಂಡರ್ ಜೊತೆಗಿನ ಘರ್ಷಣೆಯ ನಂತರ ಉಕ್ರೇನ್ ಸೇನೆ ಮುಂದೆ ಶರಣಾಗಲು ನಿರ್ಧರಿಸಿದೆ ಎಂದು ಹುಸೇನ್ ವೀಡಿಯೋದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

  • ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ: ಅಮೆರಿಕ ಟ್ಯಾರಿಫ್‌ಗೆ ಪುಟಿನ್‌ ಟಾಂಗ್‌

    ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ: ಅಮೆರಿಕ ಟ್ಯಾರಿಫ್‌ಗೆ ಪುಟಿನ್‌ ಟಾಂಗ್‌

    ಮಾಸ್ಕೋ: ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಟೀಕಿಸಿದ್ದಾರೆ.

    ಭಾರತ (India) ಎಂದಿಗೂ ಅಂತಹ ಬೇಡಿಕೆಗಳಿಗೆ ಮಣಿಯುವುದಿಲ್ಲ. ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಪುಟಿನ್ ಹೇಳಿದ್ದಾರೆ. ಸೋಚಿಯಲ್ಲಿ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ರಷ್ಯಾದ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರನ್ನು ಸಮತೋಲಿತ ಮತ್ತು ಬುದ್ಧಿವಂತ ನಾಯಕ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌

    ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು ಬದಲಾಗುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಭಾರತದಂತಹ ದೇಶದ ಜನರು ನನ್ನನ್ನು ನಂಬಿರಿ. ರಾಜಕೀಯ ನಾಯಕತ್ವವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಯಾರ ಮುಂದೆಯೂ ಯಾವುದೇ ಅವಮಾನವನ್ನು ಎಂದಿಗೂ ಸಹಿಸಲ್ಲ. ನನಗೆ ಪ್ರಧಾನಿ ಮೋದಿ ಗೊತ್ತು. ಅವರು ಸ್ವತಃ ಈ ರೀತಿಯ ಯಾವುದೇ ಕ್ರಮಗಳನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ. ಅಮೆರಿಕದ ದಂಡನಾತ್ಮಕ ಸುಂಕಗಳಿಂದಾಗಿ ಭಾರತ ಎದುರಿಸುತ್ತಿರುವ ನಷ್ಟಗಳನ್ನು ರಷ್ಯಾದಿಂದ ಕಚ್ಚಾ ತೈಲ ಆಮದುಗಳಿಂದ ಸಮತೋಲನಗೊಳಿಸಲಾಗುತ್ತದೆ. ಜೊತೆಗೆ ಅದು ಸಾರ್ವಭೌಮ ರಾಷ್ಟ್ರವಾಗಿ ಪ್ರತಿಷ್ಠೆಯನ್ನು ಪಡೆಯುತ್ತದೆ ಎಂದು ಪುಟಿನ್‌ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಎರಡು ವಾರಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ, ಉಕ್ರೇನ್ ಯುದ್ಧಕ್ಕೆ ಚೀನಾ ಮತ್ತು ಭಾರತ ಪ್ರಾಥಮಿಕ ನಿಧಿದಾರರು ಎಂದು ಕರೆದಿದ್ದರು. ರಷ್ಯಾದ ತೈಲವನ್ನು ಖರೀದಿಸುವುದನ್ನು ಮುಂದುವರೆಸುವ ಮೂಲಕ ಅವರು ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಹಣಕಾಸು ಒದಗಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ಶಿಕ್ಷೆಯಾಗಿ ಅಮೆರಿಕ, ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದ್ದು, ಆಗಸ್ಟ್‌ನಲ್ಲಿ ಭಾರತದ ರಫ್ತಿನ ಮೇಲಿನ ಒಟ್ಟು ತೆರಿಗೆಯನ್ನು ಶೇ. 50 ಕ್ಕೆ ಹೆಚ್ಚಿಸಿದೆ.

  • ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

    ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

    – ತೈಲ ಖರಿದಿ ಕೊಲ್ಲುವವರಿಗೆ ಫಂಡಿಂಗ್‌ ಮಾಡಿದಂತೆ ಎಂದ ಕ್ರಿಸ್‌ ರೈಟ್‌

    ವಾಷಿಂಗ್ಟನ್‌: ನಾನು ಭಾರತದ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿರುವ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ (Chris Wright೦, ಭಾರತವು ರಷ್ಯಾದ ತೈಲ (Russian Oil) ಖರೀದಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡುತ್ತಾ, ಭಾರತದ ಜೊತೆಗೆ ಇಂಧನ, ವ್ಯಾಪಾರದಂತಹ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ (S Jaishankar0 ಅವರೊಂದೊಗೆ ಚರ್ಚಿಸಿದ್ದೇನೆ. ಆದ್ರೆ ಅವರು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿರುತ್ತಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಅಮೆರಿಕದ H-1B ವೀಸಾ ಹೊಡೆತ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಸ್ವಾಗತ

    ನಾವು ಭಾರತದ ಜೊತೆಗೆ ಉಜ್ವಲ ಭವಿಷ್ಯವನ್ನು ಎದುರು ನೋಡುತ್ತಿದ್ದೇವೆ. ಆದ್ರೆ ಉಕ್ರೇನ್‌ ಸಂಘರ್ಷದಲ್ಲಿ ರಷ್ಯಾ ಜೊತೆಗಿನ ಹೊಂದಾಣಿಕೆಯನ್ನು ಅವರು ಕೈಬಿಡಬೇಕು ಕ್ರಿಸ್‌ ರೈಟ್‌ ತಿಳಿಸಿದ್ರು. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಯುದ್ಧ ಕೊನೆಗೊಳ್ಳುವುದನ್ನ ಹೊರತುಪಡಿಸಿ ಬೇರೇನನ್ನೂ ಬಯಸುವುದಿಲ್ಲ. ಯುರೋಪ್‌ ರಾಷ್ಟ್ರಗಳು ಈಗಾಗಲೇ ಯುದ್ಧ ನಿಲ್ಲಿಸೋದಕ್ಕಾಗಿ ರಷ್ಯಾದ ಮೇಲೆ ಒತ್ತಡ ಹೇರಲು ಎಲ್ಲಾ ಮಾರ್ಗಗಳನ್ನ ಹುಡುಕುತ್ತಿವೆ. ಭಾರತ ತೈಲ ಖರೀದಿ ನಿಲ್ಲಿಸಿದ್ರೆ ಸಂಘರ್ಷ ನಿಲ್ಲಿಸಲು ಹೆಚ್ಚು ಪ್ರಯೋಜನವಾಗುತ್ತದೆ. ಭಾರತದ ಜೊತೆಗೆ, ಇಂಧನ ಮತ್ತು ಮುಕ್ತ ವ್ಯಾಪಾರ ಸಹಕಾರದ ವಿಷಯದಲ್ಲಿ ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: PublicTV Explainer: ಭಾರತದ ಯುವ ಪ್ರತಿಭೆಗಳಿಗೆ ಅಮೆರಿಕ ವೀಸಾ ತಡೆಗೋಡೆ?; ಏನಿದು H-1B ವೀಸಾ ಹೊಸ ರೂಲ್ಸ್‌?

    ಇನ್ನೂ ಭಾರತವು ನಿರಂತರವಾಗಿ ತೈಲ ಖರೀದಿಸುತ್ತಿರುವ ಬಗ್ಗೆ ಮಾತನಾಡಿದ ಕ್ರಿಸ್‌ ರೈಟ್‌, ಭಾರತವು ರಷ್ಯಾದ ತೈಲ ಖರೀದಿ ಮಾಡುವ ಅಗತ್ಯವಿಲ್ಲ. ಏಕೆಂದ್ರೆ ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ತೈಲ ಖರೀದಿ ಮಾಡುವುದು, ಪ್ರತಿವಾರ ಸಾವಿರಾರು ಜನರನ್ನು ಕೊಲ್ಲುವ ವ್ಯಕ್ತಿಗೆ ಹಣ ನೀಡಿದಂತಾಗುತ್ತಿದೆ. ಅಮೆರಿಕ ಭಾರತವನ್ನು ಶಿಕ್ಷಿಸಲು ಬಯಸುವುದಿಲ್ಲ, ಬದಲಾಗಿ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಹಾಗಾಗಿ ರಷ್ಯಾದ ತೈಲ ಖರೀದಿ ನಿಲ್ಲಿಸಬೇಕು. ಅಮೆರಿಕ ಬಳಿ ಮಾರಾಟ ಮಾಡಲು ತೈಲ ಇದೆ. ಭಾರತ ನಮ್ಮ ಸಂಬಂಧವನ್ನು ಬಯಸಿದ್ರೆ, ರಷ್ಯಾದ ತೈಲ ಖರೀದಿ ನಿಲ್ಲಿಸಲಿ ಎಂದು ಮನವಿ ಮಾಡಿದ್ದಾರೆ.

  • ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ವಾಷಿಂಗ್ಟನ್‌: ರಷ್ಯಾದ ಆರ್ಥಿಕ ಪ್ರಾಬಲ್ಯವನ್ನು ದುರ್ಬಲಗೊಳಿಸಲು ಚೀನಾದ (China) ಮೇಲೆ 50 ರಿಂದ 100% ರಷ್ಟು ಸುಂಕಗಳನ್ನು ವಿಧಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ನ್ಯಾಟೋಗೆ ಕರೆ ನೀಡಿದ್ದಾರೆ.

    ಶನಿವಾರ ಟ್ರಂಪ್ ನ್ಯಾಟೋ ರಾಷ್ಟ್ರಗಳಿಗೆ ಪತ್ರವೊಂದನ್ನು ಬರೆದಿದ್ದು, ರಷ್ಯಾದ (Russia) ತೈಲ ಖರೀದಿಯನ್ನು ನಿಲ್ಲಿಸುವಂತೆ ಮತ್ತು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ಎಲ್ಲಾ ನ್ಯಾಟೋ ರಾಷ್ಟ್ರಗಳು ಒಪ್ಪಿಕೊಂಡು ಅದೇ ರೀತಿ ಮಾಡಲು ಪ್ರಾರಂಭಿಸಿದಾಗ ಮತ್ತು ಎಲ್ಲಾ ನ್ಯಾಟೋ ರಾಷ್ಟ್ರಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದಾಗ, ನಾನು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸಲು ಸಿದ್ಧನಿದ್ದೇನೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ರಷ್ಯಾ ಮತ್ತು ಉಕ್ರೇನ್ ಜೊತೆಗಿನ ಯುದ್ಧ ಮುಗಿದ ನಂತರ ಚೀನಾದ ಮೇಲಿನ 50 ರಿಂದ 100% ಸುಂಕಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬಹುದು. ಆದರೆ, ಈಗ ವಿಧಿಸಬಹುದಾದ ಸುಂಕವು ಯುದ್ಧವನ್ನು ಕೊನೆಗೊಳಿಸುವಲ್ಲಿ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ಟ್ರಂಪ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: 50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು: ಟ್ರಂಪ್‌

    ಚೀನಾ ಮತ್ತು ಭಾರತದ ನಂತರ NATO ಸದಸ್ಯ ಟರ್ಕಿ, ರಷ್ಯಾದ ತೈಲದ ಮೂರನೇ ಅತಿದೊಡ್ಡ ಖರೀದಿದಾರರಾಗಿದ್ದಾರೆ. ಇಂಧನ ಮತ್ತು ಶುದ್ಧ ಗಾಳಿಯ ಸಂಶೋಧನಾ ಕೇಂದ್ರದ ಪ್ರಕಾರ, ರಷ್ಯಾದ ತೈಲ ಖರೀದಿಯಲ್ಲಿ ತೊಡಗಿರುವ 32 ರಾಷ್ಟ್ರಗಳ ಮೈತ್ರಿಕೂಟದ ಇತರ ಸದಸ್ಯರಲ್ಲಿ ಹಂಗೇರಿ ಮತ್ತು ಸ್ಲೋವಾಕಿಯಾ ಸೇರಿವೆ.

    ಉಕ್ರೇನ್‌ನಲ್ಲಿನ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಪ್ರಗತಿ ಸಾಧಿಸದಿದ್ದರೆ ರಷ್ಯಾ ಮೇಲೆ ನಿರ್ಬಂಧಗಳು ಮತ್ತು ಅದರ ತೈಲವನ್ನು ಖರೀದಿಸುವ ಪ್ರಮುಖ ಖರೀದಿದಾರರಾದ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ದ್ವಿತೀಯ ನಿರ್ಬಂಧಗಳನ್ನು ವಿಧಿಸುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು.

    ಕಳೆದ ತಿಂಗಳು, ಅಮೆರಿಕದ ಅಧ್ಯಕ್ಷರು ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುತ್ತಿರುವುದನ್ನು ಉಲ್ಲೇಖಿಸಿ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ಸುಂಕವನ್ನು ವಿಧಿಸಿದ್ದರು. ಆದರೆ, ಚೀನಾ ವಿರುದ್ಧ ಅಂತಹ ಕ್ರಮವನ್ನು ತೆಗೆದುಕೊಂಡಿಲ್ಲ.

  • ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ

    ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ

    ಮಾಸ್ಕೋ: ರಷ್ಯಾದ ಕರಾವಳಿಯಲ್ಲಿ (Russian East Coast) ಶನಿವಾರ (ಇಂದು) 7.4 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ದೃಢಪಡಿಸಿದೆ.

    ಒಂದು ತಿಂಗಳ ಹಿಂದೆಯಷ್ಟೇ 8.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿ, ಸುನಾಮಿಯೂ (Tsunami) ಅಪ್ಪಳಿಸಿತ್ತು. ಇದೀಗ ಮತ್ತೆ ಪ್ರಬಲ ಭೂಕಂಪ ಸಂಭವಿಸಿತ್ತು. ಸುನಾಮಿ ಆತಂಕ ಉಂಟಾಗಿದೆ.

    ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯ ಬಳಿ ಭೂಕಂಪ ಸಂಭವಿಸಿದೆ. 10 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ

    ತಕ್ಷಣಕ್ಕೆ ಸಾವು ನೋವಿನ ವರದಿಗಳು ಕಂಡುಬಂದಿಲ್ಲ. ಸುನಾಮಿ ಆತಂಕ ಎದುರಾಗಿದ್ದು, ಅಧಿಕಾರಿಗಳು ತಕ್ಷಣದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಸುನಾಮಿ ಎಂದರೇನು? ಭೂಕಂಪಕ್ಕೂ ಇದಕ್ಕೂ ಏನು ಸಂಬಂಧ?

  • ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    – ಮಿಲಿಟರಿ ಉದ್ಯೋಗದ ಆಮಿಷವೊಡ್ಡಿ ಯುದ್ಧಕ್ಕೆ ನಿಯೋಜನೆ

    ನವದೆಹಲಿ: ಉಕ್ರೇನ್‌ (Ukraine) ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದ್ರೆ ಇದು ತುಂಬಾ ಅಪಾಯಕಾರಿ ಕೋರ್ಸ್‌ ಎಂದು ವಿದೇಶಾಂಗ ಸಚಿವಾಲಯ (Ministry of External Affairs) ಹೇಳಿದೆ.

    ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ (Russian Army) ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ. ಇದೀಗ ಮತ್ತೆ ಭಾರತೀಯರಿಗೆ (Indians) ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ರಷ್ಯಾ ಪರ ಹೋರಾಡ್ತಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ

    ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ (Russia) ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇವೆ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ಹೇಳಿದೆ.

    ಮುಂದುವರಿದು.. ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯ ಪ್ರಜೆಗಳು ದೂರವಿರಿ, ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಏಕೆಂದ್ರೆ ಇದು ತುಂಬಾ ಅಪಾಯಕಾರಿಯಾದ ಕೋರ್ಸ್‌ ಎಂದು ಎಚ್ಚರಿಸಿದೆ. ಇದನ್ನೂ ಓದಿ: ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ 20 ಭಾರತೀಯರು – ವಾಪಸ್‌ ಕರೆತರಲು ಹರಸಾಹಸ

    Russia-UkraineWar

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದಲ್ಲಿ ನೆಲೆಸಿರುವ ಇಬ್ಬರು ಭಾರತೀಯರು ಆರೋಪಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಉದ್ಯೋಗದ ಆಮಿಷವೊಡ್ಡಿ ನಮ್ಮನ್ನು ರಷ್ಯಾಕ್ಕೆ ಕರೆತಂದು ಉಕ್ರೇನ್‌ ವಿರುದ್ಧ ಯುದ್ಧದಲ್ಲಿ ಹೋರಾಡಲು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದರು.

    ವರದಿಗಳ ಪ್ರಕಾರ, ಇಬ್ಬರು ನೇಮಕಾತಿದಾರರು ಕಳೆದ 6 ತಿಂಗಳ ಹಿಂದೆ ವಿದ್ಯಾರ್ಥಿ ಅಥವಾ ಸಂದರ್ಶಕ ವೀಸಾದಲ್ಲಿ ರಷ್ಯಾಕ್ಕೆ ಪ್ರಯಾಣಿಸಿದ್ದರು. ಉದ್ಯೋಗ ಕೊಡಿಸುವುದಾಗಿ ಹೇಳಿ ಭರವಸೆ ನೀಡಿದ ಏಜೆಂಟ್ ತಮ್ಮನ್ನು ಯುದ್ಧಭೂಮಿಗೆ ಕಳುಹಿಸಿದ್ದಾರೆ ಅಂತ ಹೇಳಿಕೊಂಡಿದ್ದರು. ಇದನ್ನೂ ಓದಿ: ಪುಟಿನ್ ಜೊತೆ ಮೋದಿ ಚರ್ಚೆ – ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು

    Stranded at warzone 4 Indians seek rescue after being duped into joining Wagner Group

    ಸೇನೆಯಲ್ಲಿ ಸಿಲುಕಿದ್ದ ಕಲಬುರಗಿ ಯುವಕ
    ಕಳೆದ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಜಮ್ಮು ಮತ್ತು ಕಾಶ್ಮೀರದ ಯುವಕ, ತೆಲಂಗಾಣದ 22 ವರ್ಷದ ಯುವಕ ಮತ್ತು ಕಲಬುರಗಿಯ ಮೂವರು ವ್ಯಾಗ್ನರ್‌ ಪಡೆಯಲ್ಲಿ ಕೆಲಸ ಮಾಡುತ್ತಿದ್ದು ರಷ್ಯಾ ಗಡಿಯಲ್ಲಿ ಸಿಲುಕಿದ್ದರು. ನಮ್ಮನ್ನು ನಕಲಿ ಸೇನಾ ಉದ್ಯೋಗ ದಂಧೆಯಿಂದ ತಕ್ಷಣವೇ ರಕ್ಷಿಸಬೇಕು ಎಂದು ಮೊರೆಯಿಟ್ಟಿದ್ದರು. ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮೊಹಮ್ಮದ್ ಸುಫಿಯಾನ್ ತನ್ನ ಕುಟುಂಬಕ್ಕೆ ಕಳುಹಿಸಿದ ವಿಡಿಯೋದಲ್ಲಿ ದಯವಿಟ್ಟು ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದ್ದರು.

    ನಾವು ಹೈಟೆಕ್ ವಂಚನೆಗೆ ಬಲಿಯಾಗಿದ್ದೇವೆ. ನಮ್ಮ ಇಚ್ಛೆಗೆ ವಿರುದ್ಧವಾಗಿ ಉಕ್ರೇನ್‌ನೊಂದಿಗೆ ರಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸಲಾಗುತ್ತಿದೆ. ಸೇನೆಯ ಭದ್ರತಾ ಸಹಾಯಕ ಕೆಲಸದ ಭರವಸೆಯೊಂದಿಗೆ ನಾವು ಕಳೆದ ವರ್ಷದ ಡಿಸೆಂಬರ್‌ನಲ್ಲಿ ರಷ್ಯಾಕ್ಕೆ ಬಂದಿದ್ದೇವೆ. ನಂತರ ನಾವು ವಂಚನೆಗೆ ಒಳಗಾದ ವಿಚಾರ ತಿಳಿಯಿತು ಎಂದು ಹೇಳಿಕೊಂಡಿದ್ದರು.

  • ಉಕ್ರೇನ್‌ ಕೌಂಟರ್‌ ಅಟ್ಯಾಕ್‌ – ರಷ್ಯಾದ ಆಯಿಲ್‌ ಪೈಪ್‌ಲೈನ್‌ ಮೇಲೆ ದಾಳಿ

    ಉಕ್ರೇನ್‌ ಕೌಂಟರ್‌ ಅಟ್ಯಾಕ್‌ – ರಷ್ಯಾದ ಆಯಿಲ್‌ ಪೈಪ್‌ಲೈನ್‌ ಮೇಲೆ ದಾಳಿ

    – 800ಕ್ಕೂ ಹೆಚ್ಚು ಡ್ರೋನ್‌, 13 ಮಿಸೈಲ್‌ಗಳಿಂದ ದಾಳಿ ನಡೆಸಿದ್ದ ರಷ್ಯಾ ವಿರುದ್ಧ ಪ್ರತಿದಾಳಿ

    ಕೈವ್‌/ಮಾಸ್ಕೋ: ಒಂದು ದಿನದ ಹಿಂದೆಯಷ್ಟೇ ರಷ್ಯಾ ನಡೆಸಿದ ಭೀಕರ ವಾಯುದಾಳಿಗೆ ಉಕ್ರೇನ್‌ ಪ್ರತಿದಾಳಿ (Ukraine Attacks) ನಡೆಸಿದೆ.

    ರಷ್ಯಾದ (Russia) ಬ್ರಿಯಾನ್ಸ್ಕ್‌ ಪ್ರದೇಶದಲ್ಲಿನ ಡ್ರುಜ್ಬಾ ತೈಲ ಪೈಪ್‌ಲೈನ್‌ ಮೇಲೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಉಕ್ರೇನ್‌ ಡ್ರೋನ್ ಪಡೆಗಳ ಕಮಾಂಡರ್ ರಾಬರ್ಟ್ ಬ್ರೋವ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜೀನಾಮೆ ಘೋಷಿಸಿದ ಜಪಾನ್‌ ಪ್ರಧಾನಿ ಶಿಗೇರು ಇಶಿಬಾ

    ಒಂದು ದಿನದ ಹಿಂದಷ್ಟೇ ರಷ್ಯಾ-ಉಕ್ರೇನ್‌ (Russia Ukraine) ಮೇಲೆ ಭೀಕರ ವಾಯುದಾಳಿ ನಡೆಸಿತ್ತು. ಬರೋಬ್ಬರಿ 800 ಡ್ರೋನ್‌, 4 ಖಂಡಾಂತರ ಕ್ಷಿಪಣಿ ಸೇರಿದಂತೆ 13 ಮಿಸೈಲ್‌ಗಳಿಂದ ದಾಳಿ ನಡೆಸಿತ್ತು. ಇದರಿಂದ ಕೈವ್‌ನ ಪೆಚೆರ್ಸ್ಕಿ ಆಡಳಿತ ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಮಿಲಿಟರಿ ಆಡಳಿತದ ಮುಖ್ಯಸ್ಥ ತಿಮರ್ ಟ್ಕಾಚೆಂಕೊ ಭಾನುವಾರ ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ಮತ್ತೊಮ್ಮೆ ಇಂಡೋ-ಚೀನಾ ಭಾಯಿ ಭಾಯಿ- ಭಾರತಕ್ಕೆ ಚೀನಾ ಯಾಕೆ ಬೇಕು?

    ಅಲ್ಲದೇ ರಷ್ಯಾದ ದಾಳಿಯಿಂದ ಸರ್ಕಾರಿ ಕಟ್ಟಡಗಳು ಹಾನಿಗೆ ಒಳಗಾಗಿರುವುದು ಇದೇ ಮೊದಲು ಎಂದೂ ಅವರು ಹೇಳಿದ್ದಾರೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಕೂಡ ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಷ್ಯಾ 800ಕ್ಕೂ ಹೆಚ್ಚು ಡ್ರೋನ್‌ಗಳು 13 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

    ಇದೇ ವೇಳೆ ದೇಶದ ಗುಪ್ತಚರ ಅಧಿಕಾರಿಗಳು ಹಾಗೂ ರಷ್ಯಾ ವಿರುದ್ಧದ ಯುದ್ಧದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಸೈನಿಕರ ಸೇವೆಯನ್ನು‌ ಸ್ಮರಿಸಿದ್ದಾರೆ. ಪ್ರತಿದಿನ, ನಮ್ಮ ಜನರು ಸಾಧ್ಯವಾದಷ್ಟು ಹೆಚ್ಚಿನ ಸೇವೆ ಮಾಡುತ್ತಿದ್ದಾರೆ. ಶತ್ರುಗಳ ದೌರ್ಬಲ್ಯ ಕಂಡುಕೊಂಡು, ಪ್ರತಿದಾಳಿ ನಡೆಸುತ್ತಿದ್ದಾರೆ. ಒಂದೆಡೆ ನಮ್ಮ ದೇಶವನ್ನು ಬಲಪಡಿಸುತ್ತಾ, ಮತ್ತೊಂದು ಕಡೆ ಆಕ್ರಮಣಕಾರರನ್ನ ದುರ್ಬಲಗೊಳಿಸುತ್ತಿದ್ದಾರೆ. ನಿಮ್ಮ ಧೈರ್ಯ, ಸಾಹಸ, ದೇಶ ಭಕ್ತಿಗೆ ಧನ್ಯವಾದಗಳು ಎಂದು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

    ಇನ್ನೂ ರಷ್ಯಾದ ದಾಳಿಯಿಂದ ಕೈವ್‌ನಲ್ಲಿ ಒಂದು ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ಹಲವು ಕಟ್ಟಡಗಳು ಹಾನಿಗೆ ಒಳಗಾಗಿದ್ದು, ಇದರಲ್ಲಿ ಸರ್ಕಾರಿ ಕಟ್ಟಡಗಳೂ ಸೇರಿವೆ ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

  • ನಾವು ಭಾರತ, ರಷ್ಯಾವನ್ನು ಚೀನಾಗೆ ಬಿಟ್ಟು ಕೊಟ್ಟಿದ್ದೇವೆ: ಟ್ರಂಪ್‌

    ನಾವು ಭಾರತ, ರಷ್ಯಾವನ್ನು ಚೀನಾಗೆ ಬಿಟ್ಟು ಕೊಟ್ಟಿದ್ದೇವೆ: ಟ್ರಂಪ್‌

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಮತ್ತೆ ಭಾರತ, ಚೀನಾ, ರಷ್ಯಾವನ್ನು ಕೆಣಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಾಂಘೈ ಸಹಕಾರ ಒಕ್ಕೂಟದಲ್ಲಿ (SCO) ಈ ಮೂರು ದೇಶಗಳ ನಾಯಕರು ಭಾಗಿಯಾಗಿದ್ದನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಮೊದಲ ಭಾರಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಾವು ಭಾರತ (India)  ಮತ್ತು ರಷ್ಯಾವನ್ನು (Russia)  ಚೀನಾಗೆ (China) ಬಿಟ್ಟು ಕೊಟ್ಟಿದ್ದೇವೆ. ಎರಡು ದೇಶಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲದೇ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡೆದುಕೊಂಡು ಹೋಗುತ್ತಿರುವ ಫೋಟೋವನ್ನು ಅಪ್ಲೋಡ್‌ ಮಾಡಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ಜೊತೆಗಿನ ಟ್ರಂಪ್‌ ವೈಯಕ್ತಿಕ ಬಾಂಧವ್ಯ ಈಗ ಇಲ್ಲ: ಅಮೆರಿಕ ಮಾಜಿ ಅಧಿಕಾರಿ

    ಟಿಯಾಂಜಿನ್‌ನಲ್ಲಿ ನಡೆದ ಶಾಂಗೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಮೂರು ದೇಶಗಳ ನಾಯಕರು ಒಟ್ಟಿಗೆ ಕಾಣಿಸಿಕೊಂಡ ಕೆಲವು ದಿನಗಳ ನಂತರ, ಡೊನಾಲ್ಡ್ ಟ್ರಂಪ್ ಶುಕ್ರವಾರ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಕುಸಿದಿದೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಪುಟಿನ್‌ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ

    ಚೀನಾದ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮೂವರು ನಾಯಕರ ಭೇಟಿ ವಿಶ್ವಕ್ಕೆ ಒಂದು ಸಂದೇಶವನ್ನು ಕಳುಹಿಸಿದೆ. ಟ್ರಂಪ್‌ ಸುಂಕ ಸಮರದ ವಿರುದ್ಧ ಹೋರಾಡಲು ಮೂವರು ನಾಯಕರು ಒಂದಾಗಿದ್ದಾರೆ ಎಂದು ಬಣ್ಣಿಸಲಾಗುತ್ತಿದೆ.

    ಮೊದಲ ಅವಧಿ ಚುನಾವಣೆಯ ಸಂದರ್ಭದಲ್ಲಿ ರಷ್ಯಾ ಸಹಾಯದಿಂದ ಟ್ರಂಪ್‌ ಗೆದ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎರಡನೇ ಬಾರಿ ಟ್ರಂಪ್‌ ಚುನಾವಣೆಗೆ ನಿಂತಾಗ ಅಮೆರಿಕದಲ್ಲಿ ಹೌಡಿ ಮೋಡಿ ಹೆಸರಿನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಮೋದಿ (Narendra Modi) ಟ್ರಂಪ್‌ ಪರ ಮಾತನಾಡಿದ್ದರು. ಆದರೆ ಟ್ರಂಪ್‌ ಎರಡನೇ ಅವಧಿಯಲ್ಲಿ ಭಾರೀ ತೆರಿಗೆ ವಿಧಿಸಿ ಪುಟಿನ್‌ ಮತ್ತು ಮೋದಿ ವಿರುದ್ಧವೇ ಮಾತನಾಡಿ ಸಂಬಂಧವನ್ನು ಹಾಳು ಮಾಡಿಕೊಂಡಿದ್ದಾರೆ.

  • ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    – ಮತ್ತಷ್ಟು ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಗೆ ಭಾರತ ನಿರ್ಧಾರ

    ಮಾಸ್ಕೋ: ಅಮೆರಿಕ ಸುಂಕ ಸಮರದ ನಡುವೆಯೂ ಹೆಚ್ಚಿನ S-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ (S-400 Air Defence Systems) ರಷ್ಯಾ, ಭಾರತ ಮಾತುಕತೆ ನಡೆಸುತ್ತಿವೆ ಎಂದು ವರದಿಯಾಗಿದೆ. ಇದು ಭಾರತ ಮತ್ತು ರಷ್ಯಾ (India – Russia) ನಡುವಿನ ಸಂಬಂಧ ಬಲಗೊಳ್ಳುತ್ತಿರುವುದಕ್ಕೆ ಉದಾಹರಣೆಯಾಗಿದೆ.

    S-400 ವಾಯು ರಕ್ಷಣಾ ವ್ಯವಸ್ಥೆಗಳ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಮತ್ತು ಭಾರತ ಮಾತುಕತೆ ನಡೆಸುತ್ತಿವೆ. ಭಾರತ ಈಗಾಗಲೇ ಎಸ್‌-400 (ಸುದರ್ಶನ ಚಕ್ರ) ಹೊಂದಿದ್ದರೂ ಇದರ ಪೂರೈಕೆ ಇನ್ನಷ್ಟು ಹೆಚ್ಚಿಸಲು ಮಾತುಕತೆ ನಡೆಯುತ್ತಿದೆ ಎಂದು ರಷ್ಯಾ ಮಿಲಿಟರಿ ವಿಭಾಗದ ಹಿರಿಯ ಅಧಿಕಾರಿ ಡಿಮಿಟ್ರಿ ಶುಗಾಯೆವ್‌ ತಿಳಿಸಿದ್ದಾರೆ.

    2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ (China) ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ ಎಂದು ವರದಿಗಳು ತಿಳಿಸಿವೆ.

    ಆಪರೇಷನ್‌ ಸಿಂಧೂರದಲ್ಲಿ ಯಶಸ್ವಿ ಕಾರ್ಯಾಚರಣೆ
    ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನು ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿತ್ತು. ಪಾಕ್‌ ಕೂಡ ಭಾರತಕ್ಕೆ ನೀಡಿರುವ ವಾಯು ರಕ್ಷಣಾ ವ್ಯವಸ್ಥೆಯನ್ನ ತಮಗೆ ಕೊಡುವಂತೆ ಮನವಿ ಮಾಡಿಕೊಂಡಿತ್ತು.

    ಸುದರ್ಶನ ಚಕ್ರ ವಿಶೇಷತೆ ಏನು?
    IAF ಸೇವೆಯಲ್ಲಿ ಸುದರ್ಶನ ಚಕ್ರ ಎಂದು ಕರೆಯಲ್ಪಡುವ S-400 ಟ್ರಯಂಫ್, ವಿಶ್ವದ ಅತ್ಯಂತ ಮುಂದುವರಿದ ದೀರ್ಘ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾಗಿದೆ. ರಷ್ಯಾ ನಿರ್ಮಿತ ಮತ್ತು ಭಾರತದ ಕಾರ್ಯತಂತ್ರದ ವಾಯು ರಕ್ಷಣಾ ಕಮಾಂಡ್‌ಗೆ ಇದು ಸಂಯೋಜಿಸಲ್ಪಟ್ಟದೆ. ರಹಸ್ಯ ವಿಮಾನಗಳು, ಕ್ರೂಸ್ ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಯುದ್ಧತಂತ್ರದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಾಯುಗಾಮಿ ಬೆದರಿಕೆಗಳನ್ನು ಪತ್ತೆಹಚ್ಚುವ ಮತ್ತು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಏಕಕಾಲಕ್ಕೆ 80 ಗುರಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಇದಕ್ಕಿದೆ.

    ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಗೆ ನಿರ್ಧಾರ
    ಇನ್ನೂ ಟ್ರಂಪ್‌ ಸುಂಕದ ಬೆದರಿಕೆಗೆ ಡೋಂಟ್‌ ಕೇರ್‌ ಎಂದಿರುವ ಭಾರತ, ರಷ್ಯಾದಿಂದ ಇನ್ನಷ್ಟು ರಿಯಾಯಿತಿ ದರದಲ್ಲಿ‌ ಹೆಚ್ಚಿನ ಪ್ರಮಾಣದ ಕಚ್ಚಾತೈಲ ಖರೀದಿಗೆ ನಿರ್ಧರಿಸಿದೆ. ಇದರಿಂದ ಭಾರತಕ್ಕೆ ಹೆಚ್ಚಿನ ಉಳಿತಾಯ ಆಗಲಿದೆ ಎಂದು ತಿಳಿದುಬಂದಿದೆ.

  • ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    ನವದೆಹಲಿ: ಟ್ಯಾರಿಫ್‌ (Tariff) ವಿಚಾರವಾಗಿ ಅಮೆರಿಕದ (US) ಮುನಿಸಿನ ನಡುವೆ ಭಾರತಕ್ಕೆ (India) ಹೆಚ್ಚಿನ ರಿಯಾಯಿತಿಯಲ್ಲಿ ತೈಲ ಪೂರೈಸಲು ರಷ್ಯಾ ಮುಂದಾಗಿದೆ.

    ಅಮೆರಿಕದ ಸುಂಕದ ಹೊರೆಯನ್ನು ಭಾರತ ಇನ್ನೂ ಎದುರಿಸುತ್ತಿದೆ. ಇದನ್ನು ಮನಗಂಡಿರುವ ರಷ್ಯಾದ (Russia) ತೈಲ ಬೆಲೆ ಭಾರತಕ್ಕೆ ಪ್ರತಿ ಬ್ಯಾರಲ್‌ಗೆ 3 ರಿಂದ 4 ಡಾಲರ್‌ ನಷ್ಟು ಕಡಿಮೆಯಾಗಿದೆ. ಸೆಪ್ಟೆಂಬರ್ ಅಂತ್ಯ ಮತ್ತು ಅಕ್ಟೋಬರ್‌ನಲ್ಲಿ ಲೋಡ್ ಆಗುವ ಸರಕುಗಳಿಗೆ ರಷ್ಯಾದ ಉರಲ್ ದರ್ಜೆಯ ಬೆಲೆಯನ್ನು ಕಡಿಮೆಗೆ ನೀಡಲಾಗುತ್ತಿದೆ. ಇದನ್ನೂ ಓದಿ: ಭಾರತ ಈಗ ಸುಂಕ ಕಡಿಮೆ ಮಾಡೋಕೆ ಮುಂದಾಗಿದೆ – ಭಾರತದ ಜೊತೆಗಿನ ಸಂಬಂಧವನ್ನ ವಿಪತ್ತು ಎಂದ ಟ್ರಂಪ್‌

    ರಷ್ಯಾದ ತೈಲವನ್ನು ಖರೀದಿಸಿ ಉಕ್ರೇನ್ ಯುದ್ಧಕ್ಕೆ ಉತ್ತೇಜನ ನೀಡಿದ್ದಕ್ಕಾಗಿ ಶಿಕ್ಷಿಸಲು ಟ್ರಂಪ್ ಆಡಳಿತ ಕಳೆದ ವಾರ ಭಾರತದ ಮೇಲಿನ ಸುಂಕವನ್ನು ಶೇ.50 ಕ್ಕೆ ದ್ವಿಗುಣಗೊಳಿಸಿತು. 2022 ರಲ್ಲಿ, ರಷ್ಯಾ-ಉಕ್ರೇನ್ ಯುದ್ಧದ ಆರಂಭದಲ್ಲಿ ಭಾರತವು ರಷ್ಯಾದ ಕಚ್ಚಾ ತೈಲದ ಪ್ರಮುಖ ಆಮದುದಾರನಾಗಿತ್ತು. ಇದೀಗ ಅಮೆರಿಕದಿಂದ ಪದೇ ಪದೇ ಟೀಕೆಗೊಳಗಾದ ನಂತರ, ಭಾರತವು ಸಂಬಂಧದಲ್ಲಿ ರಷ್ಯಾ ಮತ್ತು ಚೀನಾಗೆ ಮತ್ತಷ್ಟು ಹತ್ತಿರವಾಗಿದೆ.

    ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಮತ್ತು ಭಾರತ ವಿಶೇಷ ಸಂಬಂಧವನ್ನು ಹಂಚಿಕೊಳ್ಳುತ್ತವೆ ಎಂದು ಹೇಳಿದ್ದರು. ಅದೇ ರೀತಿ ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸಹ ಭೇಟಿಯಾದರು. ಎರಡೂ ದೇಶಗಳು ಪ್ರತಿಸ್ಪರ್ಧಿಗಳಲ್ಲ, ಪಾಲುದಾರರಾಗಲು ಪ್ರತಿಜ್ಞೆ ಮಾಡಿವೆ. ಇದನ್ನೂ ಓದಿ: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

    ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು ಭಾರತವು ರಷ್ಯಾದ ತೈಲವನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಖರೀದಿಸುತ್ತಿತ್ತು. ಈಗ ಏನಾಯಿತು? ರಷ್ಯಾದ ಸಂಸ್ಕರಣಾಗಾರರು ರಿಯಾಯಿತಿಗಳನ್ನು ನೀಡುತ್ತಾರೆ. ಭಾರತ ಅದನ್ನು ಸಂಸ್ಕರಿಸುತ್ತದೆ. ನಂತರ ಯುರೋಪ್, ಆಫ್ರಿಕಾ ಮತ್ತು ಏಷ್ಯಾಕ್ಕೆ ಪ್ರೀಮಿಯಂನಲ್ಲಿ ಮಾರಾಟ ಮಾಡುತ್ತದೆ. ಇದು ರಷ್ಯಾದ ಯುದ್ಧ ತಂತ್ರವನ್ನು ಉತ್ತೇಜಿಸಿದಂತಿದೆ ಎಂದು ಶ್ವೇತಭವನದ ಸಲಹೆಗಾರ ಪೀಟರ್ ನವರೊ ಭಾರತದ ವಿರುದ್ಧ ಕಟುವಾದ ಟೀಕೆಯನ್ನು ಮಾಡಿದ್ದರು.