Tag: ರಷ್ಯಾ ಉಕ್ರೇನ್‌

  • 3ನೇ ಮಹಾಯುದ್ಧ ಎದುರಿಸೋಕೆ ಸಿದ್ಧರಾಗಿ.. ಆಹಾರ, ಔಷಧ ಸಂಗ್ರಹಿಸಿ ಇಟ್ಕೊಳ್ಳಿ – ಜನರಿಗೆ ಸ್ವೀಡನ್, ಫಿನ್‌ಲ್ಯಾಂಡ್ ಕರೆ

    3ನೇ ಮಹಾಯುದ್ಧ ಎದುರಿಸೋಕೆ ಸಿದ್ಧರಾಗಿ.. ಆಹಾರ, ಔಷಧ ಸಂಗ್ರಹಿಸಿ ಇಟ್ಕೊಳ್ಳಿ – ಜನರಿಗೆ ಸ್ವೀಡನ್, ಫಿನ್‌ಲ್ಯಾಂಡ್ ಕರೆ

    – ‘ಬಿಕ್ಕಟ್ಟು ಅಥ್ವಾ ಯುದ್ಧ ಆದ್ರೆ’; 32 ಪುಟಗಳ ಕಿರುಪುಸ್ತಕ ರಿಲೀಸ್
    – ಜನರಿಗೆ ಲಕ್ಷ ಲಕ್ಷ ಪ್ರತಿ ಹಂಚುತ್ತಿರುವ ಪುಸ್ತಕದಲ್ಲೇನಿದೆ?

    ವಿಶ್ವದಲ್ಲಿ ಮೂರನೇ ಮಹಾಯುದ್ಧ (World War 3) ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಒಂದೆಡೆ ರಷ್ಯಾ-ಉಕ್ರೇನ್ ಯುದ್ಧ ಮತ್ತೊಂದೆಡೆ ಇಸ್ರೇಲ್-ಇರಾನ್ ಸಂಘರ್ಷ ನಡೆಯುತ್ತಿದೆ. ದಿನೇ ದಿನೇ ಯುದ್ದೋನ್ಮಾದ ಹೆಚ್ಚುತ್ತಿದೆ. ಒಬ್ಬರ ಮೇಲೊಬ್ಬರು ಹಗೆಯ ಶಸ್ತಾçಸ್ತçಗಳನ್ನು ಪ್ರಯೋಗಿಸುತ್ತಿದ್ದಾರೆ. ಪರಮಾಣು ಯುದ್ಧವಾದರೆ ಏನಾಗುತ್ತದೆಯೋ ಎಂಬ ಆತಂಕ ಜಗತ್ತಿನ ರಾಷ್ಟ್ರಗಳಲ್ಲಿ ಮನೆಮಾಡಿದೆ. 3ನೇ ಮಹಾಯುದ್ಧ ಊಹಿಸುವುದು ಬಲು ಕಷ್ಟ. ಜಗತ್ತಿನಲ್ಲಿ ಗತಿಸಿದ ಎರಡು ಮಹಾಯುದ್ಧಗಳಿಂದ ಸತ್ತವರ ಸಂಖ್ಯೆ ಅದೆಷ್ಟೋ. ದಶಕಗಳ ಹಿಂದೆ ಅಣುಬಾಂಬ್ ದಾಳಿಗೆ ತುತ್ತಾದ ನಗರಗಳು ಈಗಲೂ ಅದರ ಪರಿಣಾಮ ಎದುರಿಸುತ್ತಿವೆ. ಲಕ್ಷಾಂತರ ಜನರ ಮಾರಣಹೋಮ, ಬದುಕಿದವರ ಡೋಲಾಯಮಾನ ಸ್ಥಿತಿ, ಬಿಕ್ಕಟ್ಟುಗಳ ಸರಮಾಲೆ, ಅಸ್ತಿತ್ವದ ಪ್ರಶ್ನೆ ಎಲ್ಲವೂ ಕಾಡುತ್ತದೆ. ಮಾನವಪ್ರೇರಿತ ದುರಂತಗಳು ಜಗತ್ತನ್ನು ವಿನಾಶದ ಅಂಚಿಗೆ ನೂಕುತ್ತವೆ. ಈಗ ಮತ್ತದೇ ಯುದ್ಧದ ಕಾರ್ಮೋಡದ ಭೀತಿ ಆವರಿಸಿದೆ.

    ರಷ್ಯಾ-ಉಕ್ರೇನ್ ಯುದ್ಧ ಭರ್ತಿ 1,000 ದಿನ ಪೂರೈಸಿದೆ. ಈ ಹೊತ್ತಿನಲ್ಲಿ, ಅಮೆರಿಕ ನಿರ್ಮಿತ ದೀರ್ಘ ಶ್ರೇಣಿಯ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು ಉಕ್ರೇನ್‌ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕರೆ ನೀಡಿದರು. ಅದರಂತೆ ರಷ್ಯಾ ಮೇಲೆ ಉಕ್ರೇನ್ ಕ್ಷಿಪಣಿಗಳನ್ನು ಪ್ರಯೋಗಿಸಿತು. ಇತ್ತ ಪರಮಾಣು ದಾಳಿಗಳಿಗೆ ಇದ್ದ ಬಿಗಿ ನಿಯಮಗಳನ್ನು ಸಡಿಲಗೊಳಿಸುವ ನೀತಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ. ಮತ್ತೊಂದು ಕಡೆ ಇಸ್ರೇಲ್-ಇರಾನ್ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಎಲ್ಲಾ ಬೆಳವಣಿಗೆಗಳು 3ನೇ ಮಹಾಯುದ್ಧ ಸಾಧ್ಯತೆಯ ಆತಂಕ ಮೂಡಿಸಿವೆ. ಇದರ ನಡುವೆ ಅದಾಗಲೇ ಕೆಲವು ರಾಷ್ಟçಗಳು ಯುದ್ಧದ ಪರಿಣಾಮಗಳನ್ನು ಮೆಟ್ಟಿ ನಿಲ್ಲಲು ತಮ್ಮ ನಾಗರಿಕರಿಗೆ ಎಚ್ಚರಿಕೆ ಕರೆ ನೀಡಿವೆ. ಯುದ್ಧ ನಡೆದು ಬಿಕ್ಕಟ್ಟು ತಲೆದೋರಿದರೆ ಅದನ್ನು ಹೇಗೆ ಎದುರಿಸಬೇಕು ಎಂದು ಜನರಿಗೆ ಮಾರ್ಗದರ್ಶನ ನೀಡುತ್ತಿವೆ. ಹೆಚ್ಚಿದ ಭದ್ರತಾ ಬೆದರಿಕೆಗಳು ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಮಧ್ಯೆ ಸ್ವೀಡನ್ ಮತ್ತು ಫಿನ್‌ಲ್ಯಾಂಡ್ ತಮ್ಮ ನಾಗರಿಕರನ್ನು ಯುದ್ಧದಿಂದಾಗುವ ಸಂಭಾವ್ಯ ಬಿಕ್ಕಟ್ಟುಗಳಿಗೆ ಸಿದ್ಧರಾಗುವಂತೆ ಸೂಚಿಸಿದೆ.

    ಬಿಕ್ಕಟ್ಟು ಅಥವಾ ಯುದ್ಧ ಆದ್ರೆ?
    ಸ್ವೀಡನ್‌ನ (Sweden) ಮಾಜಿ ಸೇನಾ ಮುಖ್ಯಸ್ಥ ಮೈಕೆಲ್ ಬೈಡೆನ್ ಈಚೆಗೆ ಒಂದು ಕರೆ ನೀಡಿದ್ದರು. ‘ಸ್ವೀಡನ್ ಜನತೆ ಮಾನಸಿಕವಾಗಿ ಯುದ್ಧಕ್ಕೆ ಸಿದ್ಧರಾಗಬೇಕು’ ಎಂದು ಹೇಳಿದ್ದರು. ಇದನ್ನು ಸರ್ಕಾರ ಅಭಿಯಾನವಾಗಿ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ, ಸ್ವೀಡನ್ ಮತ್ತು ಫಿನ್‌ಲ್ಯಾಂಡ್ ದೇಶಗಳು ‘ಬಿಕ್ಕಟ್ಟು ಅಥವಾ ಯುದ್ಧ ನಡೆದರೆ’ ಎಂಬ ಶೀರ್ಷಿಕೆಯ ಕಿರುಪುಸ್ತಕವನ್ನು ಹೊರತಂದಿದೆ. ಅದನ್ನು ತಮ್ಮ ನಾಗರಿಕರಿಗೆ ಲಕ್ಷ ಲಕ್ಷ ಪ್ರತಿಗಳನ್ನಾಗಿ ಮುದ್ರಿಸಿ ಹಂಚುತ್ತಿದೆ. ಸುಮಾರು 32 ಪುಟಗಳ ಈ ಕಿರುಪುಸ್ತಕವು ಯುದ್ಧದಂತಹ ಬಿಕ್ಕಟ್ಟಿನ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಮುನೆಚ್ಚರಿಕೆಯಾಗಿ ಏನೇನು ಕ್ರಮಕೈಗೊಳ್ಳಬೇಕು ಎಂಬುದರ ಸಾರವನ್ನು ಒಳಗೊಂಡಿದೆ. ನಿಜಕ್ಕೂ ಅದರಲ್ಲಿರುವ ಅಂಶಗಳು ಕುತೂಹಲಕರಿಯಾಗಿವೆ.

    ಸ್ವೀಡನ್ ಬಿಕ್ಕಟ್ಟಿನ ಬುಕ್‌ಲೆಟ್ ಲಕ್ಷ ಲಕ್ಷ ಹಂಚಿಕೆ
    ಸ್ವೀಡಿಷ್ ಸಿವಿಲ್ ಕಾಂಟಿಎಜೆನ್ಸಿಸ್ ಏಜೆನ್ಸಿ (ಎಂಎಸ್‌ಬಿ), ‘ಬಿಕ್ಕಟ್ಟು ಅಥವಾ ಯುದ್ಧ ಬಂದರೆ’ ಶೀರ್ಷಿಕೆಯ ಬಿಕ್ಕಟ್ಟಿನ ಸನ್ನದ್ಧತೆಯ ಕಿರುಪುಸ್ತಕದ ಆವೃತ್ತಿಯನ್ನು ಐದು ದಶಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿತರಿಸಲು ಪ್ರಾರಂಭಿಸಿದೆ. ಸ್ವೀಡನ್ 2ನೇ ಮಹಾಯುದ್ಧದಲ್ಲಿ ಇದೇ ರೀತಿ ತನ್ನ ನಾಗರಿಕರಿಗಾಗಿ ಐದು ಬಾರಿ ಕರಪತ್ರಗಳನ್ನು ಹಂಚಿತ್ತು. ಅದನ್ನು ನವೀಕರಿಸಿ ಕಿರುಪುಸ್ತಕ ಬಿಡುಗಡೆ ಮಾಡಿದೆ. ವಿಶ್ವ ಸಮರ 3 ರ ಜೊತೆಗೆ ಎದುರಾಗಬಹುದಾದ ಸೈಬರ್ ದಾಳಿಗಳು, ಭಯೋತ್ಪಾದನೆ ಮತ್ತು ಹವಾಮಾನ ವೈಪರಿತ್ಯದಂತಹ ಸಮಕಾಲೀನ ಸಮಸ್ಯೆಗಳಿಗೆ ಸಜ್ಜಾಗಲು ಕಿರುಪುಸ್ತಕದಲ್ಲಿ ತಿಳಿಸಲಾಗಿದೆ. ಎಂಎಸ್‌ಬಿ ನಿರ್ದೇಶಕ ಮೈಕೆಲ್ ಫ್ರಿಸೆಲ್ ಅವರು ಪುಸ್ತಕದಲ್ಲಿ ವಿವರ ನೀಡಿದ್ದಾರೆ. ‘ಭದ್ರತಾ ಪರಿಸ್ಥಿತಿಯು ಗಂಭೀರವಾಗಿದೆ. ನಾವೆಲ್ಲರೂ ವಿವಿಧ ಬಿಕ್ಕಟ್ಟುಗಳು ಮತ್ತು ಅಂತಿಮವಾಗಿ ಯುದ್ಧವನ್ನು ಎದುರಿಸಲು ನಮ್ಮ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸಬೇಕಾಗಿದೆ’ ಎಂದು ಕರೆ ನೀಡಿದ್ದಾರೆ.

    ಕಿರುಪುಸ್ತಕದಲ್ಲಿ ಏನಿದೆ?
    ನೀರು, ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸುವುದು, ವಿದ್ಯುತ್ ಮತ್ತು ಸಂವಹನ ಕಡಿತಕ್ಕೆ ಈಗಲಿಂದಲೇ ತಯಾರಿ ಮಾಡುವುದು, ಬಿಕ್ಕಟ್ಟಿನ ಸಮಯದಲ್ಲಿ ಆತಂಕವನ್ನು ನಿಭಾಯಿಸುವುದು, ಶಿಶುಗಳಿಗಾಗಿ ಆಹಾರ ಮತ್ತು ಔಷಧಿಗಳನ್ನು ಸಂರಕ್ಷಿಸುವುದು, ತುರ್ತು ಸಂದರ್ಭಗಳಲ್ಲಿ ಸಾಕುಪ್ರಾಣಿಗಳ ಆರೈಕೆಯನ್ನು ಖಾತ್ರಿಪಡಿಸುವುದು ಮುಂತಾದ ಪ್ರಾಯೋಗಿಕ ಸಲಹೆಯನ್ನು ಕಿರುಪುಸ್ತಕ ನೀಡಿದೆ. ಜೊತೆಗೆ, ರಾಷ್ಟ್ರೀಯ ಏಕತೆ ಮತ್ತು ಪ್ರತಿರೋಧವನ್ನು ಸಹ ಒತ್ತಿಹೇಳುತ್ತದೆ. ‘ಸ್ವೀಡನ್ ಅನ್ನು ಇನ್ನೊಂದು ದೇಶವು ಆಕ್ರಮಣ ಮಾಡಿದರೆ, ನಾವು ಎಂದಿಗೂ ಬಿಟ್ಟುಕೊಡುವುದಿಲ್ಲ. ಪ್ರತಿರೋಧ ಇರುವುದಿಲ್ಲ ಎಂದುಕೊಳ್ಳುವ ಮಾಹಿತಿಯು ಸುಳ್ಳು’ ಎಂದು ಸ್ಪಷ್ಟಪಡಿಸಲಾಗಿದೆ.

    ಸುಲಭವಾಗಿ ಬೇಯಿಸಬಹುದಾದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಿ. ದೇಹಕ್ಕೆ ಅಗತ್ಯ ಪೋಷಕಾಂಶ ನೀಡುವ ತಿನಿಸುಗಳು ಮತ್ತು ಔಷಧಿಗಳನ್ನು ಶೇಖರಿಸಿಕೊಳ್ಳಿ. ಯುದ್ಧ ನಡೆದರೆ ಕನಿಷ್ಠ ಮೂರು ದಿನಗಳ ವರೆಗೆ ನಿಮ್ಮ ಅಗತ್ಯಗಳನ್ನು ನೀವೇ ಪೂರೈಸಿಕೊಳ್ಳುವಷ್ಟು ಈಗಲಿಂದಲೇ ಸಿದ್ಧತೆ ಮಾಡಿಕೊಳ್ಳಿ. ಪರಮಾಣು ದಾಳಿಗಳಿಂದ ಆಹಾರ, ವಿದ್ಯುತ್, ಮೂಲಸೌಕರ್ಯ ಬಿಕ್ಕಟ್ಟುಗಳು ಎದುರಾಗಬಹುದು. ಆದ್ದರಿಂದ ಆಹಾರ ಸಂರಕ್ಷಣೆಗೆ ಒತ್ತು ಕೊಡಿ. ದೀರ್ಘ ಕಾಲದ ವಿದ್ಯುತ್ ಕಡಿತದಂತಹ ಸಮಸ್ಯೆ ನಿಭಾಯಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಿ. ಜಾನುವಾರುಗಳ ರಕ್ಷಣೆಗೂ ಆದ್ಯತೆ ನೀಡಿ. ನಿಮ್ಮ ಮಕ್ಕಳನ್ನು ಯುದ್ಧದ ಸನ್ನಿವೇಶಗಳಿಗೆ ಭಯಪಡೆದಂತೆ ಮಾನಸಿಕವಾಗಿ ಸಿದ್ಧಗೊಳಿಸಿ. ಹಿರಿಯ ನಾಗರಿಕರು, ದುರ್ಬಲ ಜನರಿಗಾಗಿ ಕಾಳಜಿ ಕ್ರಮಗಳನ್ನು ವಹಿಸಿ ಎಂದು ಸಲಹೆಗಳನ್ನು ನೀಡಲಾಗಿದೆ.

    ವಿವಿಧ ಭಾಷೆ, ಡಿಜಿಟಲ್‌ನಲ್ಲೂ ಪುಸ್ತಕ ಲಭ್ಯ
    ಹೆಚ್ಚಿನ ಜನರನ್ನು ತಲುಪುವ ಉದ್ದೇಶದಿಂದ ಅರೇಬಿಕ್, ಪಾರ್ಸಿ ಮತ್ತು ಉಕ್ರೇನಿಯನ್ ಸೇರಿದಂತೆ ಬಹು ಭಾಷೆಗಳಲ್ಲಿ ಡಿಜಿಟಲ್ ರೂಪದಲ್ಲಿ ಪುಸ್ತಕ ಲಭ್ಯವಿದೆ. ಹೆಚ್ಚಿನ ಸಂಖ್ಯೆಯ ಜನರು ಡಿಜಿಟಲ್ ಆವೃತ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ಪುಸ್ತಕ ಬಿಡುಗಡೆಯಾಗಿದ್ದು, ಇದುವರೆಗೂ ಡಿಜಿಟಲ್‌ನಲ್ಲೇ 55,000 ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

    ಫಿನ್‌ಲ್ಯಾಂಡ್‌ನಿಂದಲೂ ಪುಸ್ತಕ ಬಿಡುಗಡೆ
    ರಷ್ಯಾ ಜೊತೆಗೆ 830 ಮೈಲಿಯಷ್ಟು ಗಡಿಯನ್ನು ಫಿನ್‌ಲ್ಯಾಂಡ್ ಹಂಚಿಕೊಂಡಿದೆ. ಆದ್ದರಿಂದ ಸಹಜವಾಗಿ ದೇಶವು ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದೆ. ಉಕ್ರೇನ್‌ನ ಮೇಲೆ ಮಾಸ್ಕೋದ ಆಕ್ರಮಣದ ನಂತರ, ಫಿನ್‌ಲ್ಯಾಂಡ್ 200 ಕಿಲೋಮೀಟರ್ ಗಡಿ ಬೇಲಿಯನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಿತು. ಗಡಿಯುದ್ದಕ್ಕೂ 10 ಅಡಿ ಎತ್ತರ ಮತ್ತು ಮುಳ್ಳುತಂತಿ ಬೇಲಿ ಹಾಕಲು ಮುಂದಾಗಿದೆ. ಇದು 2026 ರ ವೇಳೆಗೆ ಪೂರ್ಣಗೊಳ್ಳಲಿದೆ. ಯುದ್ಧದ ಭೀಕರ ಸನ್ನಿವೇಶಗಳನ್ನು ನಿಭಾಯಿಸಲು ಫಿನ್‌ಲ್ಯಾಂಡ್ ಕೂಡ ಕರೆ ನೀಡಿ ಪುಸ್ತಕ ಹೊರತಂದಿದೆ. ಫಿನ್‌ಲ್ಯಾಂಡ್‌ನ ಆಂತರಿಕ ಸಚಿವಾಲಯವು, ದೀರ್ಘಾವಧಿಯ ವಿದ್ಯುತ್ ಕಡಿತ, ದೂರಸಂಪರ್ಕ ಅಡೆತಡೆಗಳು ಮತ್ತು ಮಿಲಿಟರಿ ಸಂಘರ್ಷಗಳನ್ನು ನಿಭಾಯಿಸಲು ಈಗಲಿಂದಲೇ ತಯಾರಾಗುವಂತೆ ತನ್ನ ನಾಗರಿಕರಿಗೆ ಸಲಹೆ ನೀಡಿದೆ.

    ನ್ಯಾಟೊ ಸೇರಿದ ಸ್ವೀಡನ್, ಫಿನ್‌ಲ್ಯಾಂಡ್
    2022ರಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಸ್ವೀಡನ್ ಮತ್ತು ಫಿನ್‌ಲ್ಯಾಂಡ್ ಎರಡೂ ನ್ಯಾಟೋಗೆ ಸೇರಿಕೊಂಡವು. ತಮ್ಮ ದೀರ್ಘಕಾಲದ ತಟಸ್ಥ ನೀತಿಗಳನ್ನು ತ್ಯಜಿಸಿದವು. ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆ ಈ ದೇಶಗಳು ತಮ್ಮ ರಕ್ಷಣಾ ಕ್ರಮಗಳನ್ನು ಹೆಚ್ಚಿಸಿವೆ. ಈ ಬದಲಾವಣೆಯು ಒಕ್ಕೂಟದೊಳಗೆ ಸಾಮೂಹಿಕ ರಕ್ಷಣೆ ಮತ್ತು ಬಿಕ್ಕಟ್ಟಿನ ಸಿದ್ಧತೆಗೆ ಕರೆ ನೀಡಲು ಪ್ರಮುಖ ಕಾರಣವಾಗಿದೆ. ಯೂರೋಪ್ ಎದುರಿಸುತ್ತಿರುವ ಭದ್ರತಾ ಸವಾಲುಗಳನ್ನು ಸ್ವೀಡಿಷ್ ಎಂಎಸ್‌ಬಿಯ ಹೇಳಿಕೆಯಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ. ‘ಇತ್ತೀಚಿನ ವರ್ಷಗಳಲ್ಲಿ ಪ್ರಪಂಚದ ಸ್ಥಿತಿಯು ತೀವ್ರವಾಗಿ ಹದಗೆಟ್ಟಿದೆ. ನಮ್ಮ ಆಸುಪಾಸಿನಲ್ಲಿ ಯುದ್ಧ ನಡೆಯುತ್ತಿದೆ. ಹವಾಮಾನ ವೈಪರಿತ್ಯಗಳು ಸಾಮಾನ್ಯವಾಗುತ್ತಿವೆ. ನಮ್ಮನ್ನು ದುರ್ಬಲಗೊಳಿಸಲು ಭಯೋತ್ಪಾದಕ ಬೆದರಿಕೆಗಳು, ಸೈಬರ್ ದಾಳಿಗಳು ಹೆಚ್ಚುತ್ತಿವೆ’ ತಿಳಿಸಿದೆ.

    ರಷ್ಯಾ-ಉಕ್ರೇನ್ ಯುದ್ಧವು ಅನೇಕ ಯುರೋಪಿಯನ್ ರಾಷ್ಟ್ರಗಳು ತಮ್ಮ ರಕ್ಷಣಾ ಕಾರ್ಯತಂತ್ರಗಳನ್ನು ಮರುಮೌಲ್ಯಮಾಪನ ಮಾಡಲು ಪ್ರೇರೇಪಿಸಿದೆ. ಸ್ವೀಡನ್ ಮತ್ತು ಫಿನ್‌ಲ್ಯಾಂಡ್ (Finland) ದೇಶಗಳು ತಮ್ಮ ಮಿಲಿಟರಿ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿವೆ. ನ್ಯಾಟೋ ಒಕ್ಕೂಟದ 32 ಸದಸ್ಯ ರಾಷ್ಟ್ರಗಳ ಪೈಕಿ 23 ದೇಶಗಳು ತಮ್ಮ ಜಿಡಿಪಿಯ 2 ಪ್ರತಿಶತದಷ್ಟನ್ನು ಮಿಲಿಟರಿಗಾಗಿ ಖರ್ಚು ಮಾಡುವ ನಿರ್ಣಯ ಕೈಗೊಂಡಿವೆ. ಇತ್ತ ಒಕ್ಕೂಟದ ಭಾಗವಾಗಿರುವ ಸ್ವೀಡನ್, ಫಿನ್‌ಲ್ಯಾಂಡ್ ದೇಶಗಳು ಸಾಮಾಜಿಕ ಸ್ಥಿತಿಸ್ಥಾಪಕತ್ವಕ್ಕಾಗಿ ಸಮಗ್ರ ಸಾರ್ವಜನಿಕ ಜಾಗೃತಿ ಉಪಕ್ರಮಗಳನ್ನು ಪರಿಚಯಿಸಿವೆ. ಪರಮಾಣು, ಜೈವಿಕ ಅಥವಾ ರಾಸಾಯನಿಕ ದಾಳಿಗಳಂತಹ ಭೀಕರ ಸನ್ನಿವೇಶಗಳನ್ನು ಎದುರಿಸಲು ಸಿದ್ಧರಾಗಬೇಕೆಂದು ಸೂಚಿಸಿವೆ.

    ರಷ್ಯಾ-ಉಕ್ರೇನ್ ಯುದ್ಧ
    ಉಕ್ರೇನ್ ನ್ಯಾಟೋ ಒಕ್ಕೂಟ ಸೇರುವುದನ್ನು ವಿರೋಧಿಸಿದ ರಷ್ಯಾ ಯುದ್ಧ ಘೋಷಿಸಿತು. 2022ರ ಫೆಬ್ರವರಿ 4 ರಂದು ಉಕ್ರೇನ್ ಮೇಲೆ ದಾಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶ ಹೊರಡಿಸಿದರು. ಎರಡು ದೇಶಗಳ ನಡುವಿನ ಯುದ್ಧದಿಂದ ಇದುವರೆಗೂ ಲಕ್ಷಾಂತರ ಸಾವುನೋವುಗಳಾಗಿವೆ. ರಷ್ಯಾದಲ್ಲೇ 6,96,410 ಸೈನಿಕರು ಮೃತಪಟ್ಟಿದ್ದಾರೆ. ರಷ್ಯಾ ಆಕ್ರಮಣದಿಂದ ಉಕ್ರೇನ್‌ನಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದೆ.

    ಇಸ್ರೇಲ್-ಹಮಾಸ್ ಯುದ್ಧ
    2023ರ ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ದಾಳಿ ನಡೆಸಿ ಹಲವು ನಾಗರಿಕರ ಹತ್ಯೆಗೆ ಕಾರಣರಾದರು. 200 ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿರಿಸಿಕೊಂಡರು. ಇದಕ್ಕೆ ಪ್ರತಿಯಾಗಿ ಹಮಾಸ್ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿತು. ಪರಿಣಾಮವಾಗಿ ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಜನರ ಸಾವುನೋವಾಯಿತು. ಹಮಾಸ್ ಜೊತೆಗೆ ಹಿಜ್ಬುಲ್ಲಾ ಗುಂಪು ಕೈಜೋಡಿಸಿದ್ದು ಸಂಘರ್ಷ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಳ್ಳಲು ಕಾರಣವಾಗಿದೆ. ಈ ನಡುವೆ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿಯನ್ನು ನಡೆಸಿದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

  • ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಕೈವ್‌: ಉಕ್ರೇನ್‌ ವಿರುದ್ಧ ಮತ್ತೆ ರಷ್ಯಾದ (Russia) ಅಟ್ಟಹಾಸ ಮುಂದುವರಿದಿದೆ. ಉಕ್ರೇನ್‌ನ (Kyiv) ಕೈವ್‌ ಮೇಲೆ ರಷ್ಯಾ ಸೇನೆ ಭೀಕರ ದಾಳಿ ನಡೆಸಿದ್ದು, ಕ್ಷಿಪಣಿ, ಡ್ರೋನ್‌ಗಳ ಸುರಿಮಳೆಯನ್ನೇ ಸುರಿಸಿದೆ.

    ಸೋಮವಾರ ಬೆಳಗ್ಗಿನ ಜಾವ ಉಕ್ರೇನ್‌ (Ukraine) ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳು ಹಾಗೂ 100ಕ್ಕೂ ಹೆಚ್ಚು ಅಟ್ಯಾಕಿಂಗ್‌ ಡ್ರೋ‌ನ್‌ಗಳಿಂದ ದಾಳಿ ನಡೆಸಿದೆ. ದಾಳಿಯಲ್ಲಿ ಉಕ್ರೇನ್‌ನ ಕನಿಷ್ಠ 5 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ರಾಷ್ಟ್ರವ್ಯಾಪಿ ಇಂಧನ ಸೌಲಭ್ಯಗಳನ್ನು ನಾಶಪಡಿಸಿದೆ ಎಂದು ಉಕ್ರೇನ್‌ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಆರಂಭಗೊಂಡು ಸುಮಾರು ಎರಡೂ ವರೆ ವರ್ಷ ಆಗಿದೆ. ಕನಿಷ್ಠ 10 ಪ್ರದೇಶಗಳಲ್ಲಿ ರಷ್ಯಾ, ಉಕ್ರೇನಿನ ಮೂಲ ಸೌಕರ್ಯಗಳನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿದೆ. ವಿದ್ಯುತ್‌ ಸೇರಿದಂತೆ ಇತರೇ ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಾ ಬಂದಿದೆ. ಕಳೆದ ಮಾರ್ಚ್‌ನಲ್ಲೂ ರಷ್ಯಾವು ಉಕ್ರೇನಿನ ಪವರ್‌ ಗ್ರಿಡ್‌ ಮೇಲೆ ರಷ್ಯಾ ಹೆಚ್ಚಾಗಿ ದಾಳಿ ನಡೆಸಿತು. ಇದರಿಂದ ಕೈವ್‌ ಒಳಗೊಂಡಂತೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್‌ ಹಾಗೂ ನೀರಿನ ಸೌಲಭ್ಯ ಕಡಿತಗೊಂಡಿದೆ ಎಂದು ವರದಿಯಾಗಿದೆ.

    ಅದರಲ್ಲೂ ಸೋಮವಾರ ಬೆಳಗ್ಗೆ ರಷ್ಯಾ ನಡೆಸಿದ್ದ ಡ್ರೋನ್‌ ಹಾಗೂ ಕ್ಷಿಪಣಿ ದಾಳಿ ಅತ್ಯಂತ ಭೀಕರವಾದದ್ದು, ಉಕ್ರೇನ್‌ನ ಪೂರ್ವ ಭಾಗದಲ್ಲಿ ಸ್ಥಿರವಾಗಿ ಮುಂದೆ ಸಾಗುತ್ತಿರುವ ರಷ್ಯಾ ಸೇನೆ ಹೊಸ ನೆಲೆಗಳನ್ನು ಗುರುತಿಸಿ ದಾಳಿ ನಡೆಸಿದೆ. ಇದು ಅತಿದೊಡ್ಡ ಸಂಯೋಜಿತ ದಾಳಿಗಳಲ್ಲಿ ಒಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜ.22ರ ಅಯೋಧ್ಯೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ವೆಚ್ಚ

    ಈ ಬಗ್ಗೆ ಉಕ್ರೇನ್‌ ಅಧ್ಯಕ್ಷ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಹ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ಅಮೆರಿಕ, ಬ್ರಿಟನ್, ಫ್ರಾನ್ಸ್ ಮತ್ತು ಇತರ ಪಾಲುದಾರರಿಂದ ಭಯೋತ್ಪಾದನೆಗೆ ಕಡಿವಾಣ ಹಾಕುವ ಹೊಂದಿರುವುದಾಗಿ ಝೆಲೆನ್ಸ್ಕಿ ತಿಳಿಸಿದ್ದಾರೆ. ಇನ್ನೂ ಉಕ್ರೇನ್‌ ಪ್ರಧಾನಿ ಡೆನಿಸ್ ಶ್ಮಿಹಾಲ್ ಪ್ರಕಾರ, 15 ಪ್ರದೇಶಗಳು ಹಾನಿಗೊಳಗಾಗಿವೆ. ಇಂಧನ ವಲಯವು ಹೆಚ್ಚು ಹಾನಿಗೀಡಾಗಿದೆ ಎಂದು ರಷ್ಯಾ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

  • ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯನ ಸಾವು – ಮರುದಿನವೇ ಸಿಬಿಐ ಮಹತ್ವದ ಕಾರ್ಯಾಚರಣೆ

    – ಮಾನವ ಕಳ್ಳಸಾಗಣೆಯ ಬೃಹತ್‌ ಜಾಲ ಭೇದಿಸಿದ ಸಿಬಿಐ
    – 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಾಏಕಿ ದಾಳಿ

    ನವದೆಹಲಿ: ವಂಚನೆಗೊಳಗಾಗಿ ರಷ್ಯಾ ಸೇನೆಯಲ್ಲಿ (Russia Army) ಸಿಲುಕಿದ್ದ ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ ಒಂದು ದಿನದ ನಂತರ ಸಿಬಿಐ (CBI) ಮಹತ್ವದ ಕಾರ್ಯಾಚರಣೆ ನಡೆಸಿದೆ. ದೇಶಾದ್ಯಂತ ಸುಮಾರು 7 ಪ್ರಮುಖ ನಗರಗಳಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಭಾರತೀಯರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೆಚ್ಚಿನ ವೇತನ ನೀಡುವ ಆಸೆ ತೋರಿಸಿ, ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನೆಪದಲ್ಲಿ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಏಜೆಂಟರಿಗೆ (Human Trafficking Agents) ಸಂಬಂಧಿಸಿದ 7 ಮಹಾನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ತಿರುವನಂತಪುರಂ, ಅಂಬಾಲಾ, ಚಂಡೀಗಢ ಮತ್ತು ಮಧುರೈನಲ್ಲಿ ದಾಳಿ ನಡೆಸಿದೆ. ಸಿಬಿಐ ಪ್ರಕರಣದಲ್ಲಿ ದುಬೈ ಮೂಲದ ಯೂಟ್ಯೂಬ್‌ ಬ್ಲಾಗರ್‌ ಫೈಸಲ್ ಖಾನ್ ಅಲಿಯಾಸ್ ಬಾಬಾ (Faisal Khan alias Baba) ಹೆಸರೂ ದಾಖಲಾಗಿದೆ. ಇದನ್ನೂ ಓದಿ: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

    ಕಳ್ಳಸಾಗಣೆ ಮಾಡುತ್ತಿದ್ದದ್ದು ಹೇಗೆ?
    ಭದ್ರತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕ ಕೆಲಸಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಅದಕ್ಕಾಗಿ ಹೆಚ್ಚಿನ ವೇತನ ನೀಡುವುದಾಗಿ ಯುವಕರಿಗೆ ಆಮಿಷ ನೀಡುತ್ತಿದ್ದರು. ನಂತರ ಅವರನ್ನು ರಷ್ಯಾ ಸೇನೆಗೆ ತಳ್ಳಿದ್ದು, ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಿದ್ದರು. ತಮ್ಮ ಮನೆ ಮಕ್ಕಳು ನಾಪತ್ತೆಯಾದ ಬಗ್ಗೆ ಅನೇಕ ಕುಟುಂಬಗಳು ಮಾಧ್ಯಮಗಳೊಂದಿಗೆ ತಮ್ಮ ಸಂಕಷ್ಟ ಹೇಳಿಕೊಂಡಿವೆ. ಈ ವೇಳೆ ಪದೇ ಪದೇ ಫೈಸಲ್ ಖಾನ್ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಈಗಾಗಲೇ ರಷ್ಯಾ ಸೇನೆಯಲ್ಲಿ ಒಂದು ಡಜನ್‌ಗೂ ಹೆಚ್ಚು ಭಾರತೀಯ ಯುವಕರು ಸಿಲುಕಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕರೆತರಲು ಭಾರತೀಯ ರಾಯಭಾರ ಕಚೇರಿ ರಷ್ಯಾದ ರಕ್ಷಣಾ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೃತ್ಯದಲ್ಲಿ ದೆಹಲಿ, ಮುಂಬೈ, ಚಂಡೀಗಢ ಮೂಲದ ಖಾಸಗಿ ಕಂಪನಿಗಳು ಭಾಗಿಯಾಗಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

  • ರಷ್ಯಾ-ಉಕ್ರೇನ್‌ ಯುದ್ಧ ವಿಚಾರದಲ್ಲಿ ಭಾರತದ ನಿಲುವಿಗೆ ನಮ್ಮ ಸಹಮತ ಇದೆ: ರಾಹುಲ್‌ ಗಾಂಧಿ

    ರಷ್ಯಾ-ಉಕ್ರೇನ್‌ ಯುದ್ಧ ವಿಚಾರದಲ್ಲಿ ಭಾರತದ ನಿಲುವಿಗೆ ನಮ್ಮ ಸಹಮತ ಇದೆ: ರಾಹುಲ್‌ ಗಾಂಧಿ

    ಬ್ರಸೆಲ್ಸ್: ಉಕ್ರೇನ್‌ (Ukraine) ಮೇಲೆ ರಷ್ಯಾ (Russia) ಯುದ್ಧ ನಡೆಸುತ್ತಿರುವ ವಿಚಾರದಲ್ಲಿ ಭಾರತದ (India) ನಿಲುವನ್ನು ವಿಪಕ್ಷಗಳ ಒಕ್ಕೂಟ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

    ರಾಹುಲ್‌ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ (Congress) ಆಯೋಜಿಸಿರುವ ಯೂರೋಪ್‌ ಪ್ರವಾಸದಲ್ಲಿದ್ದಾರೆ. ಬ್ರಸೆಲ್ಸ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಷ್ಯಾ-ಉಕ್ರೇನ್‌ ಸಂಘರ್ಷದ ವಿಚಾರದಲ್ಲಿ ಭಾರತದ ಪ್ರಸ್ತುತ ನಿಲುವನ್ನು ಪ್ರತಿಪಕ್ಷಗಳು ಸಂಪೂರ್ಣವಾಗಿ ಒಪ್ಪುತ್ತವೆ ಎಂದು ನಾನು ಭಾವಿಸುತ್ತೇನೆ. ನಾವು ರಷ್ಯಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ವಿರೋಧ ಪಕ್ಷವು ಸರ್ಕಾರಕ್ಕಿಂತ ಭಿನ್ನವಾದ ಅಭಿಪ್ರಾಯ ಹೊಂದಿರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಾಲಿಯಲ್ಲಿ ಪ್ರಯಾಣಿಕ ಬೋಟ್, ಸೇನಾ ನೆಲೆಯ ಮೇಲೆ ಉಗ್ರರ ದಾಳಿ – 64 ಮಂದಿ ಸಾವು

    ಜಿ20 ಶೃಂಗಸಭೆಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡ ರಾಹುಲ್ ಗಾಂಧಿ, ಇದರಲ್ಲಿ ವಿರೋಧಾಭಾಸವೇನು? ಅವರು ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದಿರಲು ನಿರ್ಧರಿಸಿದ್ದಾರೆ. ಭಾರತದ ಜನಸಂಖ್ಯೆಯ ಶೇಕಡಾ 60 ರಷ್ಟು ನಾಯಕರನ್ನು ಅವರು ಗೌರವಿಸುವುದಿಲ್ಲ ಎಂದು ಅದು ನಿಮಗೆ ಹೇಳುತ್ತದೆ ಎಂದು ತಿಳಿಸಿದ್ದಾರೆ.

    ಸಂಘರ್ಷದ ಶೀಘ್ರ ಪರಿಹಾರಕ್ಕಾಗಿ ರಷ್ಯಾ ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವಿದೆ ಎಂಬುದು ಭಾರತದ ನಿಲುವಾಗಿದೆ. ಇದನ್ನೂ ಓದಿ: ಉಕ್ರೇನ್‌ನ ಆಕ್ರಮಿತ ಪ್ರದೇಶಗಳಲ್ಲಿ ರಷ್ಯಾ ಚುನಾವಣೆ ನಡೆಸುತ್ತಿದೆ: ಅಮೆರಿಕ ರಾಜ್ಯ ಕಾರ್ಯದರ್ಶಿ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಕ್ರೇನ್ ಮೇಲೆ ಏಕಕಾಲಕ್ಕೆ 120 ಕ್ಷಿಪಣಿಗಳ ದಾಳಿ ನಡೆಸಿದ ರಷ್ಯಾ

    ಉಕ್ರೇನ್ ಮೇಲೆ ಏಕಕಾಲಕ್ಕೆ 120 ಕ್ಷಿಪಣಿಗಳ ದಾಳಿ ನಡೆಸಿದ ರಷ್ಯಾ

    ಕೀವ್: ಉಕ್ರೇನ್ (Ukraine) ಮೇಲೆ ರಷ್ಯಾ (Russia) ತನ್ನ ದಾಳಿ ಮುಂದುವರಿಸಿದೆ. ಇಂದು ಏಕಕಾಲದಲ್ಲಿ 120 ಕ್ಷಿಪಣಿಗಳಿಂದ (Missiles) ಉಕ್ರೇನ್‍ನ ಕೀವ್ ನಗರದ ಮೇಲೆ ರಷ್ಯಾ ದಾಳಿ ನಡೆಸಿದೆ.

    ದಾಳಿಯಲ್ಲಿ ಹದಿಹರೆಯದ ಮೂವರು ಮಕ್ಕಳಿಗೆ ಗಾಯಗಳಾಗಿದೆ. ಕೀವ್ ಮತ್ತು ಖಾರ್ಕಿವ್ ಪಟ್ಟಣಗಳ ಮೇಲೆ ದಾಳಿ ನಡೆಸಿರುವ ಕ್ಷಿಪಣಿಗಳು ಹಲವು ಕಟ್ಟಡಗಳ ಮೇಲೆ ಬಿದ್ದಿದೆ. ಪರಿಣಾಮ ಪಶ್ಚಿಮ ವಲಯದ ನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗುಡ್‌ನ್ಯೂಸ್- ಫೆಬ್ರವರಿಯಿಂದ ಚೀತಾ ಪ್ರವಾಸೋದ್ಯಮ ಸಾಧ್ಯತೆ

     

    ರಷ್ಯಾ ವಾಯು ಮತ್ತು ಜಲ ಮಾರ್ಗಗಳ ಮೂಲಕ ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ಜನ ಎಚ್ಚರಿಕೆಯಿಂದ ಇರಬೇಕೆಂದು ಉಕ್ರೇನ್ ಸೈನ್ಯ ಎಚ್ಚರಿಸಿದೆ. ಈಗಾಗಲೇ ದಾಳಿ ಇನ್ನಷ್ಟು ನಡೆಯುವ ಸಾಧ್ಯತೆ ಇರುವುದರಿಂದಾಗಿ ವಿದ್ಯುತ್ ಕಡಿತಗೊಳಿಸಲಾಗಿದೆ. ಜನ ತಮಗೆ ಬೇಕಾದಷ್ಟು ನೀರನ್ನು ತುಂಬಿಟ್ಟುಕೊಳ್ಳಿ ಎಂದು ಸೂಚಿಸಿದೆ. ಈಗಾಗಲೇ ಸೈನ್ಯ ದಾಳಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಸುತ್ತಿದೆ. ಯಾರು ಕೂಡ ಮನೆಯಿಂದ ಹೊರಬರಬೇಡಿ ಮನೆಯಲ್ಲೇ ಇರಿ ಎಂದು ಸೂಚಿಸಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯ ಭೀಕರ ಹತ್ಯೆ – ಶಿರಚ್ಛೇದಿಸಿ, ಚರ್ಮ ಸುಲಿದ್ರು

    https://twitter.com/Ali_Salyar/status/1608405537070419968

    2022ರ ಫೆಬ್ರವರಿ 24ರಂದು ರಷ್ಯಾ, ಉಕ್ರೇನ್ ಮೇಲೆ ಯುದ್ಧ ಸಾರಿತ್ತು. 10 ತಿಂಗಳುಗಳಿಂದ ರಷ್ಯಾ ನಿರಂತರವಾಗಿ ಉಕ್ರೇನ್ ಮೇಲೆ ದಾಳಿ ನಡೆಸುತ್ತಿದೆ. ಆದರೆ ಯುದ್ಧ ಆರಂಭಗೊಂಡಾಗ ಇದ್ದಂತಹ ತೀವ್ರತೆ ಇದೀಗ ಇಳಿಕೆ ಕಂಡಿದ್ದು, ಈಗಾಗಲೇ ಸಾಕಷ್ಟು ಸಾವು-ನೋವುಗಳಾಗಿವೆ. ಉಕ್ರೇನ್ ರಷ್ಯಾದ ಕ್ರಿಮಿಯಾ ಸೇತುವೆಯನ್ನು (Crimean Bridge) ಧ್ವಂಸಗೊಳಿಸಿದ ನಂತರ ಪ್ರತೀಕಾರವಾಗಿ ರಷ್ಯಾ ದಾಳಿ ಮತ್ತಷ್ಟು ತೀವ್ರಗೊಳಿಸಿದೆ. ಈ ನಡುವೆ  ರಷ್ಯಾ ಯದ್ಧ ಕೊನೆಗೊಳಿಸಲು ಮಾತುಕತೆಗೆ ಬರುವುದಾಗಿ ಉಕ್ರೇನ್‍ಗೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

    ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

    ಬರ್ಲಿನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾರೂ ಕೂಡ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬರ್ಲಿನ್‍ನಲ್ಲಿ ತಿಳಿಸಿದ್ದಾರೆ.

    ಈ ಯುದ್ಧದಲ್ಲಿ ಯಾರು ವಿಜೇತರಾಗಿರುವುದಿಲ್ಲ ಮತ್ತು ಇದರಿಂದಾಗಿ ಎಲ್ಲರೂ ನಷ್ಟವನ್ನು ಅನುಭವಿಸಿರುತ್ತಾರೆ. ಆದ್ದರಿಂದ ನಾವು ಶಾಂತಿ ಪರವಾಗಿದ್ದೇವೆ ಎಂದು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಸಭೆಯ ನಂತರ ಹೇಳಿದ್ದಾರೆ.

    ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಾಗುತ್ತಿದೆ. ಇದು ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಬೆಳವಣಿಗೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಗಂಭೀರ ವಿಚಾರವಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    60ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಫೆಬ್ರವರಿ 24ರಂದು ರಷ್ಯಾ, ಉಕ್ರೇನ್ ಮೇಲೆ ದಾಳಿಯನ್ನು ಆರಂಭಿಸಿದ್ದರಿಂದ ಸಾವಿರಾರು ನಾಗರಿಕರು ಸಾವನ್ನಪ್ಪಿದರು ಮತ್ತು ಲಕ್ಷಾಂತರ ಮಂದಿ ಸ್ಥಳಾಂತರಗೊಂಡರು. ಉಕ್ರೇನ್‍ನಲ್ಲಿ ಆರ್ಥಿಕ ಬಿಕ್ಕಟ್ಟು ಆರಂಭವಾದಗಲಿಂದಲೂ, ನಾವು ತಕ್ಷಣ ಕದನ ವಿರಾಮಕ್ಕೆ ಕರೆ ನೀಡಿದ್ದೆವು. ವಿವಾದವನ್ನು ಪರಿಹರಿಸಲು ಮಾತುಕತೆಯೇ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

    ಪ್ರಧಾನಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ 3 ವಿದೇಶಗಳ ಪ್ರವಾಸ ಕೈಗೊಂಡಿದ್ದಾರೆ. ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರ ಆಮಂತ್ರಣದ ಮೇರೆಗೆ ಮೋದಿ ಮೇ. 2 ರಂದು ಬರ್ಲಿನ್‍ಗೆ ಭೇಟಿ ನೀಡಿದ್ದಾರೆ. ಅಲ್ಲಿ 6 ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಮೋದಿ ಸಹ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಅಲ್ಲದೇ ವಾಣಿಜ್ಯ ದುಂಡುಮೇಜಿನ ಸಭೆಯಲ್ಲಿ ಕೈಗಾರಿಕಾ ಸಹಕಾರದ ಮೂಲಕ ಕೋವಿಡ್ ನಂತರದ ಸಮಯದಲ್ಲಿ ಉಭಯ ದೇಶಗಳ ಆರ್ಥಿಕತೆಯ ಪುನಶ್ಚೇತನದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

  • ರಷ್ಯಾ-ಉಕ್ರೇನ್ ವಾರ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೈನಿಕ

    ರಷ್ಯಾ-ಉಕ್ರೇನ್ ವಾರ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೈನಿಕ

    ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವೆ ಸಂಘರ್ಷ ಆರಂಭವಾಗಿ 11 ದಿನಗಳು ಕಳೆದಿದೆ. ಈ ಬಿಕ್ಕಟ್ಟಿನ ಪರಿಸ್ಥಿತಿ ನಡುವೆ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಪ್ರಾದೇಶಿಕ ರಕ್ಷಣೆಯ 112 ಬ್ರಿಗೇಡ್‍ನ ಲೆಸ್ಯಾ ಮತ್ತು ವ್ಯಾಲೆರಿ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಇವರಿಬ್ಬರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.  ಇದನ್ನೂ ಓದಿ: ನಿಮ್ಮ ಎವ್ರಿಡೇ ಮೇಕಪ್ ಕಿಟ್‌ನಲ್ಲಿರಲಿ ಈ ವಸ್ತುಗಳು

    ಕೀವಿ ಎಂಬ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಪೋಸ್ಟ್ ಮಾಡಲಾಗಿದ್ದು, ಕ್ಯಾಪ್ಷನ್‍ನಲ್ಲಿ ಇಂದು ಪ್ರಾದೇಶಿಕ ರಕ್ಷಣೆಯ 112 ಬ್ರಿಗೇಡ್‍ನ ಉಕ್ರೇನ್ ರಷ್ಯಾ ಯುದ್ಧದ ಪ್ರದೇಶದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಲೆಸ್ಯಾ ಮತ್ತು ವ್ಯಾಲೆರಿ ವಿವಾಹವಾದರು ಎಂದು ಬರೆಯಲಾಗಿದೆ.

    ಈ ಮುನ್ನ ಕೆಲವು ದಿನಗಳ ಹಿಂದೆ ಇದೇ ರೀತಿ ಕ್ಲೆವೆಟ್ಸ್ ಮತ್ತು ನಟಾಲಿಯಾ ವ್ಲಾಡಿಸ್ಲೇವ್ ಎಂಬ ಮತ್ತೊಂದು ಜೋಡಿ ಉಕ್ರೇನ್‍ನ ಒಡೆಸ್ಸಾದಲ್ಲಿನ ಬಾಂಬ್ ಶೆಲ್ಟರ್​​ನಲ್ಲಿ ವಿವಾಹವಾಗಿದ್ದರು. ಈ ದಂಪತಿಯ ಮದುವೆ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಫೋಟೋದಲ್ಲಿ ವೇಳೆ ವರ ಸಮವಸ್ತ್ರ ಧರಿಸಿದ್ದರು ಮತ್ತು ವಧು ಹೂಗುಚ್ಛವನ್ನು ಹಿಡಿದುಕೊಂಡಿರುವುದನ್ನು ಕಾಣಬಹುದಾಗಿತ್ತು. ಇದನ್ನೂ ಓದಿ: ನಿಮ್ಮ ಬಜೆಟ್‌ನಲ್ಲಿ ಚಂದಕಾಣಿಸುವ ಟಿಪ್ಸ್

    ಸದ್ಯ ರಷ್ಯಾದ ಮಿಲಿಟರಿ ಉಕ್ರೇನ್‍ನ ವಿನ್ನಿಟ್ಸಿಯಾ ವಿಮಾನ ನಿಲ್ದಾಣವನ್ನು ನಾಶಪಡಿಸಿದೆ. ಅಧ್ಯಕ್ಷ ಝೆಲೆನ್ಸ್ಕಿ ಅವರು ಉಕ್ರೇನ್‍ನಲ್ಲಿ ವಿಮಾನ ಹಾರಾಟದ ಮೇಲೆ ನಿಷೇಧ ಹೇರಲು ವಿದೇಶಗಳಿಗೆ ಒತ್ತಾಯಿಸಿದ್ದಾರೆ. ಆದರೆ ಈ ಪ್ರಸ್ತಾವನೆಯನ್ನು ನ್ಯಾಟೋ ತಿರಸ್ಕರಿಸಿದೆ.

  • ಪರಮಾಣು ಘಟಕ ನಾಶಕ್ಕೆ ಉಕ್ರೇನ್‌ ಅಧ್ಯಕ್ಷರಿಂದ ರಷ್ಯಾ ಪ್ರಚೋದನೆ: ಉಕ್ರೇನ್‌ ಮಾಜಿ ಪಿಎಂ ಆರೋಪ

    ಪರಮಾಣು ಘಟಕ ನಾಶಕ್ಕೆ ಉಕ್ರೇನ್‌ ಅಧ್ಯಕ್ಷರಿಂದ ರಷ್ಯಾ ಪ್ರಚೋದನೆ: ಉಕ್ರೇನ್‌ ಮಾಜಿ ಪಿಎಂ ಆರೋಪ

    ಕೀವ್: ಪರಮಾಣು ವಿದ್ಯುತ್‌ ಸ್ಥಾವರ ನಾಶಪಡಿಸಲು ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ, ರಷ್ಯಾವನ್ನು ಪ್ರಚೋದಿಸುತ್ತಿದ್ದಾರೆ ಎಂದು ಉಕ್ರೇನ್‌ ಮಾಜಿ ಪ್ರಧಾನಿ ಮೈಕೋಲಾ ಅಜರೋವ್‌ ಗಂಭೀರ ಆರೋಪ ಮಾಡಿದ್ದಾರೆ.

    ಸಹಜವಾಗಿ ಇದು ಉದ್ದೇಶಪೂರ್ವಕ ಪ್ರಚೋದನೆಯಾಗಿದೆ. ಯೂರೋಪ್‌ನಲ್ಲಿ ಬೃಹತ್‌ ಎನಿಸಿರುವ ಪರಮಾಣು ವಿದ್ಯುತ್‌ ಸ್ಥಾವರ ಘಟಕಗಳು ಉಕ್ರೇನ್‌ನಲ್ಲಿವೆ. ವಿವೇಕಯುತರಾದ ರಷ್ಯಾ ಮತ್ತು ಉಕ್ರೇನ್‌ ಸೈನಿಕರು ಪರಮಾಣು ಸ್ಥಾವರದ ಭೂಪ್ರದೇಶದಲ್ಲಿ ಪ್ರಚೋದನಕಾರಿ ಕ್ರಮಗಳನ್ನು ಕೈಗೊಳ್ಳುವ ಧೈರ್ಯ ಮಾಡುವುದಿಲ್ಲ. ಇದೆಲ್ಲವೂ ಪೂರ್ವನಿರ್ಧರಿತವಾಗಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಮಾಡಬಹುದು: ಎನ್‍ಎಂಸಿ

    ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಅವರು ಅಮೆರಿಕ ಮತ್ತು ಬ್ರಿಟನ್‌ಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಉಕ್ರೇನ್‌ ಮೇಲೆ ವಿಮಾನ ಹಾರಾಟ ನಿಷೇಧ ವಲಯ ರಚಿಸುವಂತೆ ಒತ್ತಾಯಿಸುವ ಮೂಲಕ ಯುದ್ಧಕ್ಕೆ ಮತ್ತಷ್ಟು ಪ್ರಚೋದನೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

    ರಷ್ಯಾ ಬಾಂಬ್‌ ದಾಳಿಯನ್ನು ತಡೆಗಟ್ಟಲು ಹಾರಾಟ ನಿಷೇಧ ವಲಯ ರಚಿಸುವಂತೆ ನ್ಯಾಟೋಗೆ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ನ್ಯಾಟೋ ಒಕ್ಕೂಟ ತಿರಸ್ಕರಿಸಿತ್ತು. ಇದರಿಂದ ಮತ್ತಷ್ಟು ಸಮಸ್ಯೆ ಸೃಷ್ಟಿಯಾಗಬಹುದು ಎಂದು ನ್ಯಾಟೋ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

  • ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್‌ ಸಚಿವ ಆರೋಪ

    ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್‌ ಸಚಿವ ಆರೋಪ

    ಲಂಡನ್‌: ರಷ್ಯಾ ಸೈನಿಕರು ಯುದ್ಧದ ನಡುವೆಯೇ ಉಕ್ರೇನಿಯನ್ನರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಗಂಭೀರ ಆರೋಪ ಮಾಡಿದ್ದಾರೆ.

    ನಗರಗಳ ಮೇಲೆ ಬಾಂಬ್‌ಗಳು ಬಿದ್ದಾಗ, ಆಕ್ರಮಿತ ನಗರಗಳಲ್ಲಿ ಸೈನಿಕರು ಮಹಿಳೆಯರನ್ನು ಅತ್ಯಾಚಾರ ಮಾಡಿದಾಗ, ದುರದೃಷ್ಟವಶಾತ್ ರಷ್ಯಾದ ಸೈನಿಕರು ಉಕ್ರೇನಿಯನ್ ನಗರಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದ ಹಲವಾರು ಪ್ರಕರಣಗಳು ನಮ್ಮಲ್ಲಿವೆ. ಆದರೆ ಅಂತಾರಾಷ್ಟ್ರೀಯ ಕಾನೂನಿನ ದಕ್ಷತೆಯ ಬಗ್ಗೆ ಮಾತನಾಡುವುದು ಕಷ್ಟ ಎಂದು ಲಂಡನ್‌ನಲ್ಲಿ ಕುಲೆಬಾ ಹೇಳಿದ್ದಾರೆ. ಇದನ್ನೂ ಓದಿ: ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಈ ಯುದ್ಧವನ್ನು ಸಾಧ್ಯವಾಗಿಸಿದ ಎಲ್ಲರನ್ನೂ ನ್ಯಾಯಾಂಗದ ವ್ಯಾಪ್ತಿಗೆ ತರಲು ನನಗೆ ಲಭ್ಯವಿರುವ ಏಕೈಕ ಸಾಧನ ನಾಗರಿಕರು ಎಂದು ಕುಲೆಬಾ ಮಾತನಾಡಿದ್ದಾರೆ.

    ಉಕ್ರೇನ್‌ ವಿರುದ್ಧ ರಷ್ಯಾ ಕಳೆದ ವಾರದಿಂದ ನಿರಂತರವಾಗಿ ಯುದ್ಧವನ್ನು ನಡೆಸುತ್ತಿದೆ. ಈಗಾಗಲೇ ಹಲವು ನಗರಗಳನ್ನು ರಷ್ಯಾ ಸೇನಾ ಪಡೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು, ಸೈನಿಕರು ಮರಣವನ್ನಪ್ಪಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ನಡುವೆ ಈವರೆಗೆ ನಡೆದಿರುವ ಮಾತುಕತೆಗಳು ಸಫಲವಾಗಿಲ್ಲ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

  • ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಮಾಸ್ಕೊ: ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ವಿರೋಧಿಸಿ ರಷ್ಯಾದ ಟಿವಿ ಚಾನೆಲ್‌ವೊಂದರ ಎಲ್ಲಾ ಸಿಬ್ಬಂದಿ ನೇರ ಪ್ರಸಾರದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ʼಯುದ್ಧ ಬೇಡʼ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲರೂ ಲೈವ್‌ನಲ್ಲೇ ರಾಜೀನಾಮೆ ನೀಡಿ ಕಚೇರಿಯಿಂದ ಹೊರನಡೆದಿದ್ದಾರೆ. ಉಕ್ರೇನ್‌ ವಿರುದ್ಧದ ರಷ್ಯಾ ಯುದ್ಧವನ್ನು ಪ್ರಸಾರ ಮಾಡದಂತೆ ರಷ್ಯಾ ಅಧಿಕಾರಿಗಳು ಸ್ಥಗಿತಗೊಳಿಸಿದ್ದರಿಂದ ಸಿಬ್ಬಂದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

    ಸುದ್ದಿ ವಾಹಿನಿಯ ಸಂಸ್ಥಾಪಕ ನಟಾಲಿಯಾ ಸಿಂಡೇವಾ ಈ ಕುರಿತು ಪ್ರತಿಕ್ರಿಯಿಸಿದ್ದು, ʼಯುದ್ಧ ಬೇಡʼ ಎಂಬ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲಾ ಸಿಬ್ಬಂದಿ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಅನಿರ್ದಿಷ್ಟಾವಧಿವರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    https://twitter.com/AfricaUnitNow/status/1499552939232403456

    ಸ್ವತಂತ್ರ ಸುದ್ದಿವಾಹಿನಿಗಳನ್ನು ನಿರ್ಬಂಧಿಸುವ ಮೂಲಕ ಮತ್ತು ಉಕ್ರೇನ್ ಆಕ್ರಮಣದ ಸುದ್ದಿಯನ್ನು ರಷ್ಯನ್ನರು ಕೇಳದಂತೆ ತಡೆಯುವ ಮೂಲಕ ರಷ್ಯಾವು ʼಮಾಧ್ಯಮ ಸ್ವಾತಂತ್ರ್ಯ ಮತ್ತು ಸತ್ಯದ ಮೇಲೆ ಯುದ್ಧʼ ಪ್ರಾರಂಭಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಬುಧವಾರ ಆರೋಪಿಸಿತ್ತು. ಇದನ್ನೂ ಓದಿ: ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ರಷ್ಯಾದ ನಾಗರಿಕರು ಮಾಹಿತಿ ಮತ್ತು ಅಭಿಪ್ರಾಯಗಳನ್ನು ಪಡೆಯಲು ಅವಲಂಬಿಸಿರುವ ಟ್ವಿಟ್ಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ವೇದಿಕೆಗಳನ್ನು ಸಹ ರಷ್ಯಾ ಸರ್ಕಾರ ತಡೆಯುತ್ತಿದೆ ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.