Tag: ರಷ್ಯಾ

  • ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ

    ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ

    ಮಾಸ್ಕೋ: ಕಮ್ಚಟ್ಕಾ ದ್ವೀಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಬೆನ್ನಲ್ಲೇ ರಷ್ಯಾದ (Russia) ತೀರ ಪ್ರದೇಶಗಳಲ್ಲಿ ಭಾರೀ ಎತ್ತರದ ಅಲೆಗಳು ಕಾಣಲು ಆರಂಭಿಸಿದೆ.

    ಬಂದರು ಪ್ರದೇಶ ಸೆವೆರೊ-ಕುರಿಲ್ಸ್ಕ್‌ಗೆ (Severo-Kurilsk) ಸುನಾಮಿ (Tsunami ) ಅಲೆಗಳು ಅಪ್ಪಳಿಸುತ್ತಿರುವ ವೈಮಾನಿಕ ದೃಶ್ಯಾವಳಿಗಳನ್ನು ರಷ್ಯನ್ ಅಕಾಡೆಮಿ ಆಫ್ ಸೈನ್ಸಸ್‌ ಬಿಡುಗಡೆ ಮಾಡಿದೆ.  ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ 8.8 ತೀವ್ರತೆಯ ಭಾರೀ ಭೂಕಂಪ – ಅಮೆರಿಕ, ಜಪಾನ್‌ಗೆ ಸುನಾಮಿ ಎಚ್ಚರಿಕೆ

     

    ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್‌ ನಿಂದ ಸುಮಾರು 136 ಕಿಲೋಮೀಟರ್ ದೂರದ 19 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇದು 1952ರ ಬಳಿಕ ಸಂಭವಿಸಿದ ಅತೀ ಪ್ರಬಲ ಭೂಕಂಪವಾಗಿದೆ. ಅಮೆರಿಕದ ಅಲಾಸ್ಕಾದ ಭಾಗಗಳು ಹಾಗೂ ಜಪಾನ್‌ಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

    ಬಂದರು ಪಟ್ಟಣವಾಗಿರುವ ಸೆವೆರೊ-ಕುರಿಲ್ಸ್ಕ್‌ ಕೆಲ ಭಾಗಗಳು ಈಗ ಸಮದ್ರ ನೀರಿನಲ್ಲಿ ಮುಳುಗಡೆಯಾಗಿದ್ದು, ಸುಮಾರು 2,000 ಜನರನ್ನು ಸ್ಥಳಾಂತರ ಮಾಡಲಾಗಿದೆ. ಸುನಾಮಿ ಪೀಡಿತ ಪ್ರದೇಶಗಳಲ್ಲಿ ಜನರು ಸಮುದ್ರಕ್ಕೆ ತೆರಳದಂತೆ  ಧ್ವನಿವರ್ಧಕದ ಮೂಲಕ ಪ್ರಕಟಣೆಯನ್ನು ಹೊರಡಿಸಲಾಗಿದೆ.

  • ರಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    ರಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    – ಕೇವಲ 1 ಗಂಟೆಯಲ್ಲಿ 5 ಬಾರಿ ಪ್ರಬಲ ಭೂಕಂಪ

    ಮಾಸ್ಕೋ: ಒಂದು ಗಂಟೆ ಅವಧಿಯಲ್ಲಿ 5 ಪ್ರಬಲ ಭೂಕಂಪಗಳು ಸಂಭವಿಸಿದ ಪರಿಣಾಮ, ಹವಾಯಿಯ (Hawaii) ರಷ್ಯಾಕ್ಕೆ (Russia) ಸುನಾಮಿ ಎಚ್ಚರಿಕೆ ನೀಡಲಾಗಿದೆ.

    ಯುಎಸ್ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರವು, ರಷ್ಯಾದ ದೂರದ ಪೂರ್ವದ ಕಮ್ಚಟ್ಕಾದ ಪೂರ್ವ ಕರಾವಳಿಯಲ್ಲಿ ಭಾನುವಾರ ರಷ್ಯಾ ಮತ್ತು ಹವಾಯಿಯ ಕೆಲವು ಭಾಗಗಳಿಗೆ ಸುನಾಮಿ (Tsunami) ಎಚ್ಚರಿಕೆ ನೀಡಿದೆ. ಭೂಕಂಪಗಳು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿವೆ. ಇದನ್ನೂ ಓದಿ: 20 ವರ್ಷ ಕೋಮಾದಲ್ಲಿದ್ದ ಸೌದಿ ರಾಜಕುಮಾರ `ಸ್ಲೀಪಿಂಗ್ ಪ್ರಿನ್ಸ್’ ನಿಧನ

    ಜರ್ಮನ್ ಸಂಶೋಧನಾ ಕೇಂದ್ರ ಜಿಯೋ ಸೈನ್ಸಸ್ (ಜಿಎಫ್‌ Z ಡ್) 6.7 ತೀವ್ರತೆಯಲ್ಲಿ ಭೂಕಂಪವಾಗಿದೆ ಎಂದು ವರದಿ ಮಾಡಿತ್ತು. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್ಸಿ) ಮತ್ತು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) 7.4 ತೀವ್ರತೆಯಲ್ಲಿ ಭೂಕಂಪವಾಗಿದೆ ಎಂದು ವರದಿ ಮಾಡಿವೆ.

    ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಈ ಪ್ರದೇಶದಲ್ಲಿ ಒಟ್ಟು ಐದು ಭೂಕಂಪಗಳು ಸಂಭವಿಸಿವೆ. ಎಲ್ಲವೂ ಸುಮಾರು 10 ಕಿಲೋಮೀಟರ್ ಆಳದಲ್ಲಿವೆ. ಇದನ್ನೂ ಓದಿ: ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

    ಎಲ್ಲೆಲ್ಲೆ ಎಷ್ಟು ತೀವ್ರತೆಯಲ್ಲಿ ಭೂಕಂಪ?
    ಮ್ಯಾಗ್ನಿಟ್ಯೂಡ್ 6.6 (ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯ 147 ಕಿಮೀ ಇ, ರಷ್ಯಾ)
    ಮ್ಯಾಗ್ನಿಟ್ಯೂಡ್ 6.7 (ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯ 151 ಕಿಮೀ ಇ, ರಷ್ಯಾ)
    ಮ್ಯಾಗ್ನಿಟ್ಯೂಡ್ 7.4 (ಪೆಟ್ರೋಪಾವ್ಲೋವ್ಸ್ಕ್-ಕಾಮ್‌ಚಾಟ್ಸ್ಕಿಯ 144 ಕಿಮೀ ಇ, ರಷ್ಯಾ)
    ಮ್ಯಾಗ್ನಿಟ್ಯೂಡ್ 6.7 (ಪೆಟ್ರೋಪಾವ್ಲೋವ್ಸ್ಕ್-ಕಾಮ್‌ಚಾಟ್ಸ್ಕಿಯ 130 ಕಿಮೀ ಇ, ರಷ್ಯಾ)
    ಮ್ಯಾಗ್ನಿಟ್ಯೂಡ್ 7 (ಪೆಟ್ರೋಪಾವ್ಲೋವ್ಸ್ಕ್-ಕಾಮ್‌ಚಾಟ್ಸ್ಕಿಯ 142 ಕಿಮೀ ಇ, ರಷ್ಯಾ)

    ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಭೂಕಂಪಗಳಿಂದ ಗಮನಾರ್ಹ ಹಾನಿ ಅಥವಾ ಸಾವುನೋವುಗಳ ಬಗ್ಗೆ ಈವರೆಗೆ ಯಾವುದೇ ವರದಿಗಳು ಬಂದಿಲ್ಲ.

  • ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ನವದೆಹಲಿ: ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂನಂತಹ ಇಂಧನ ಉತ್ಪನ್ನಗಳನ್ನ ಖರೀದಿಸುವುದನ್ನು ಮುಂದುವರಿಸಿದ್ರೆ ಶೇ.100 ರಷ್ಟು ದ್ವಿತೀಯ ಸುಂಕ ವಿಧಿಸುವ ಸಾಧ್ಯತೆಯಿದೆ ಎಂಬ ನ್ಯಾಟೋ ಮುಖ್ಯಸ್ಥ ಮಾರ್ಕ್ ರುಟ್ಟೆ ಅವರ ಬೆದರಿಕೆಯನ್ನು ಭಾರತ ತಳ್ಳಿಹಾಕಿದೆ. ಜೊತೆಗೆ ದೇಶದ ಇಂಧನ ಅಗತ್ಯತೆಗಳನ್ನು ಭದ್ರಪಡಿಸಿಕೊಳ್ಳುವ ಕಡೆಗೆ ಆದ್ಯತೆ ನೀಡಿರುವುದಾಗಿಯೂ ತಿಳಿಸಿದೆ.

    ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂ ನಂತಹ ಇಂಧನ ಉತ್ಪನ್ನಗಳನ್ನ ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ 500% ಸುಂಕ (Tariff) ವಿಧಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ 100% ದ್ವಿತೀಯ ಸುಂಕ ವಿಧಿಸುವುದಾಗಿ ರುಟ್ಟೆ ಬೆದರಿಕೆಹಾಕಿದ್ದರು.

    ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಪ್ರತಿಕ್ರಿಯಿಸಿದ್ದಾರೆ. ತೈಲ ಪೂರೈಕೆಯ ಅಗತ್ಯತೆಗಳನ್ನು ಭದ್ರಪಡಿಸಿಕೊಳ್ಳುವುದು ರಾಷ್ಟ್ರ ರಾಜಧಾನಿಗೆ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರಲ್ಲದೇ ದ್ವಿಮುಖ ಮಾನದಂಡ ಅಳವಡಿಸಿಕೊಳ್ಳದಂತೆಯೂ ಎಚ್ಚರಿಕೆ ನೀಡಿದ್ದಾರೆ. ಮಾರುಕಟ್ಟೆಗಳಲ್ಲಿ ಏನು ಲಭ್ಯವಾಗುತ್ತಿದೆ, ಜಾಗತಿಕ ಪರಿಸ್ಥಿತಿ ಹೇಗಿದೆ? ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈ ವಿಷಯದ ಕುರಿತು ಅನೇಕ ವರದಿಗಳನ್ನು ನಾವು ನೋಡಿದ್ದೇವೆ. ಅಂತಾರಾಷ್ಟ್ರೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿಯೂ ಗಮನಿಸಿದ್ದೇವೆ. ನಮ್ಮ ಜನಕ್ಕೆ ಬೇಕಾದ ಇಂಧನದ ಅಗತ್ಯತೆಗಳನ್ನ ಭದ್ರಪಡಿಸಿಕೊಳ್ಳುವುದು ಪ್ರಮುಖ ಆದ್ಯತೆಯಾಗಿದೆ. ಜಾಗತಿಕ ಪರಿಸ್ಥಿತಿಗಳು ನಮ್ಮನ್ನ ಗೈಡ್‌ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

    ರುಟ್ಟೆ ಹೇಳಿದ್ದೇನು?
    50 ದಿನಗಳಲ್ಲಿ ಶಾಂತಿ ಒಪ್ಪಂದದ ಹೊರತು ರಷ್ಯಾದಿಂದ ರಫ್ತು ಮಾಡಿಕೊಳ್ಳುವ ದೇಶಗಳ ಮೇಲೆ ಶೇ. 100ರಷ್ಟು ದ್ವಿತೀಯ ಸುಂಕದ ಬೆದರಿಕೆಯನ್ನು ಟ್ರಂಪ್ ಹಾಕಿದ್ದರು. 2022 ರಲ್ಲಿ ಉಕ್ರೇನ್‌ ವಿರುದ್ಧ ಯುದ್ಧ ಪ್ರಾರಂಭವಾದಾಗಿನಿಂದ ರಷ್ಯಾದ ಪ್ರಮುಖ ವ್ಯಾಪಾರ ಪಾಲುದಾರನಾದ ಭಾರತ, ಬ್ರೆಜಿಲ್ ಮತ್ತು ಚೀನಾಗಳಿಗೆ ರುಟ್ಟೆ ಎಚ್ಚರಿಕೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿ, ಚೀನಾ, ಭಾರತ ಮತ್ತು ಬ್ರೆಜಿಲ್ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಇದರಿಂದ ನಿಮಗೆ ತೀವ್ರ ತೊಂದರೆಯಾಗಬಹುದು. ವ್ಲಾಡಿಮಿರ್ ಪುಟಿನ್ ಅವರಿಗೆ ಫೋನ್ ಮಾಡಿ, ಉಕ್ರೇನ್ ವಿರುದ್ಧದ ಶಾಂತಿ ಮಾತುಕತೆಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಹೇಳಿ, ಇಲ್ಲದಿದ್ದರೆ ಇದು ಬ್ರೆಜಿಲ್, ಭಾರತ ಮತ್ತು ಚೀನಾದ ಮೇಲೆ ತೀವ್ರ ಪರಿಣಾಮವನ್ನುಂಟು ಮಾಡಲಿದೆ ಎಂದು ಹೇಳಿದ್ದರು.

  • ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್‌ – ಭಾರತ, ಚೀನಾಗೆ ನ್ಯಾಟೊ ಎಚ್ಚರಿಕೆ

    ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ರೆ ಹುಷಾರ್‌ – ಭಾರತ, ಚೀನಾಗೆ ನ್ಯಾಟೊ ಎಚ್ಚರಿಕೆ

    – ರಷ್ಯಾದಿಂದ ತೈಲು ಖರೀದಿಸಿದ್ರೆ ಆರ್ಥಿಕ ನಿರ್ಬಂಧ ಹಾಕ್ತೀವಿ
    – ಶಾಂತಿ ಮಾತುಕತೆಗೆ ಒತ್ತಾಯಿಸಿ ಅಂತ ಭಾರತ, ಚೀನಾಗೆ ಒತ್ತಡ

    ಬ್ರಸೆಲ್ಸ್: ರಷ್ಯಾದೊಂದಿಗೆ (Russia) ವ್ಯವಹಾರ ಮುಂದುವರಿಸಿದರೆ ತೀವ್ರ ಆರ್ಥಿಕ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತ, ಚೀನಾ, ಬ್ರೆಜಿಲ್‌ ದೇಶಗಳಿಗೆ ನ್ಯಾಟೊ (Nato) ಪ್ರಧಾನ ಕಾರ್ಯದರ್ಶಿ ಮಾರ್ಕ್‌ ರುಟ್ಟೆ (Mark Rutte) ಎಚ್ಚರಿಕೆ ನೀಡಿದ್ದಾರೆ.

    ಬುಧವಾರ ಅಮೆರಿಕದ (America) ಸೆನೆಟರ್‌ಗಳನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರುಟ್ಟೆ, ಭಾರತ, ಚೀನಾ, ಬ್ರೆಜಿಲ್‌ ನಾಯಕರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಶಾಂತಿ ಮಾತುಕತೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಡ ಹೇರಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!

    ಚೀನಾ ಹಾಗೂ ಬ್ರೆಜಿಲ್‌ ಅಧ್ಯಕ್ಷ, ಭಾರತದ ಪ್ರಧಾನಿ ಅವರು, ರಷ್ಯಾದೊಂದಿಗೆ ವ್ಯಾಪಾರ ಮುಂದುವರಿಸಿದ್ದಾರೆ. ತೈಲ ಮತ್ತು ಅನಿಲ ಖರೀದಿಸುವುದನ್ನು ಮುಂದುವರಿಸುವುದಾದರೆ, ಉಕ್ರೇನ್‌ ಜೊತೆ ಶಾಂತಿ ಮಾತುಕತೆಗೆ ಒತ್ತಡ ಹಾಕಿ. ಇಲ್ಲದಿದ್ದರೆ, ನಾವು 100 ಪ್ರತಿಶತ ದ್ವಿತೀಯ ನಿರ್ಬಂಧಗಳನ್ನು ವಿಧಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.

    ಶಾಂತಿ ಮಾತುಕತೆಗೆ ಬದ್ಧರಾಗುವಂತೆ ಪುಟಿನ್‌ಗೆ ನೇರವಾಗಿ ಒತ್ತಾಯಿಸುವಂತೆ ರುಟ್ಟೆ ಮೂರು ರಾಷ್ಟ್ರಗಳ ನಾಯಕರಿಗೆ ಕರೆ ನೀಡಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರಿಗೆ ಫೋನ್ ಕರೆ ಮಾಡಿ ಶಾಂತಿ ಮಾತುಕತೆಗಳ ಬಗ್ಗೆ ಗಂಭೀರವಾಗಿ ಯೋಚಿಸಬೇಕು ತಿಳಿಸಿ. ಇಲ್ಲದಿದ್ದರೆ ಇದು ಬ್ರೆಜಿಲ್, ಭಾರತ ಮತ್ತು ಚೀನಾದ ಮೇಲೆ ಭಾರಿ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಹೊಸ ಮಿಲಿಟರಿ ಬೆಂಬಲವನ್ನು ಘೋಷಿಸಿದ್ದಾರೆ. ಅಲ್ಲದೇ, ರಷ್ಯಾ ಮತ್ತು ಅದರ ವ್ಯಾಪಾರ ಪಾಲುದಾರರ ಮೇಲೆ ವ್ಯಾಪಕ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅದರ ಬೆನ್ನಲ್ಲೇ ನ್ಯಾಟೋ ಅಧ್ಯಕ್ಷರು ಅದೇ ಮಾದರಿಯಲ್ಲಿ ನಿರ್ಬಂಧ ಹಾಕುವುದಾಗಿ ಬೆದರಿಸಿದ್ದಾರೆ.

    ಡೊನಾಲ್ಡ್ ಟ್ರಂಪ್, ರಷ್ಯಾದ ರಫ್ತುಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಸಿದ್ದಾರೆ. 50 ದಿನಗಳಲ್ಲಿ ಉಕ್ರೇನ್ ಜೊತೆ ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ರಷ್ಯಾದ ತೈಲ ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ ದ್ವಿತೀಯ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಅಭಿವೃದ್ಧಿಗೆ ನೆರವು ನೀಡಿ: ಎಸ್‌ಸಿಒ ಸಭೆಯಲ್ಲಿ ಜೈಶಂಕರ್‌ ಒತ್ತಾಯ

  • ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    ಕೀವ್: ರಷ್ಯಾ ವಿರುದ್ಧದ ಯುದ್ಧದ ನಡುವೆ ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ ನೀಡಿದ್ದಾರೆ.

    ಉಕ್ರೇನ್ ಮೇಲಿನ ಯುದ್ಧ 50 ದಿನಗಳಲ್ಲಿ ಪರಿಹರಿಸದಿದ್ದರೆ, ಮಾಸ್ಕೋದ ಉಳಿದ ವ್ಯಾಪಾರ ಪಾಲುದಾರರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

    ಉಕ್ರೇನಿಯನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಹೇಳಿದ್ದಾರೆ. ಈ ವಾರದ ಕೊನೆಯಲ್ಲಿ ನಡೆಯಲಿರುವ ಪ್ರಮುಖ ಸರ್ಕಾರಿ ಪುನರ್ರಚನೆಗೆ ಇದು ನಾಂದಿ ಹಾಡಿದೆ.

    ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್‌ನ ನಾಯಕತ್ವದ ತಂಡದಲ್ಲಿ ವ್ಯಾಪಕವಾದ ಬದಲಾವಣೆಯನ್ನು ಪ್ರಸ್ತಾಪಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ. ಶ್ಮಿಹಾಲ್ ಅವರ ನಂತರ ಪ್ರಧಾನಿಯಾಗಿ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಆರ್ಥಿಕ ಸಚಿವೆ ಯೂಲಿಯಾ ಸ್ವೈರಿಡೆಂಕೊ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

    2020ರ ಮಾರ್ಚ್ನಲ್ಲಿ ಪ್ರಧಾನಿ ಹುದ್ದೆಯನ್ನು ಶ್ಮಿಹಾಲ್ ಅಲಂಕರಿಸಿದ್ದರು. 1991 ರಲ್ಲಿ ದೇಶದ ಸ್ವಾತಂತ್ರ‍್ಯದ ನಂತರ ಉಕ್ರೇನ್‌ನಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

  • ರಷ್ಯಾದಿಂದ ತೈಲ ಖರೀದಿಸೋ ದೇಶಗಳ ಮೇಲೆ 500% ಸುಂಕ – ಭಾರತ, ಚೀನಾಗೆ ಟ್ರಂಪ್‌ ಶಾಕ್‌?

    ರಷ್ಯಾದಿಂದ ತೈಲ ಖರೀದಿಸೋ ದೇಶಗಳ ಮೇಲೆ 500% ಸುಂಕ – ಭಾರತ, ಚೀನಾಗೆ ಟ್ರಂಪ್‌ ಶಾಕ್‌?

    ವಾಷಿಂಗ್ಟನ್‌: ರಷ್ಯಾದಿಂದ ತೈಲ, ಅನಿಲ ಅಥವಾ ಯುರೇನಿಯಂನಂತಹ ಇಂಧನ ಉತ್ಪನ್ನಗಳನ್ನು ಖರೀದಿಸುವುದನ್ನು ಮುಂದುವರಿಸುವ ದೇಶಗಳ ಮೇಲೆ 500% ಸುಂಕ (Tariff) ವಿಧಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಗಂಭೀರವಾಗಿ ಪರಿಗಣಿಸಿದ್ದಾರೆ.

    ಒಂದು ವೇಳೆ ಇದನ್ನು ಜಾರಿಗೊಳಿಸಿದರೆ, ಭಾರತ ಮತ್ತು ಚೀನಾದಂತಹ ಪ್ರಮುಖ ಆಮದುದಾರರನ್ನು ನೇರವಾಗಿ ಟಾರ್ಗೆಟ್‌ ಮಾಡಿದಂತಾಗುತ್ತದೆ. ರಷ್ಯಾದ ಇಂಧನ ಆದಾಯವನ್ನು ಕುಂಠಿತಗೊಳಿಸುವುದು ಮತ್ತು ಉಕ್ರೇನ್‌ನಲ್ಲಿನ ಸಂಘರ್ಷವನ್ನು ಕೊನೆಗೊಳಿಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಒತ್ತಡ ಹೇರುವ ಉದ್ದೇಶ ಇದಾಗಿದೆ. ಇದನ್ನೂ ಓದಿ: ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್‌

    ಸೆನೆಟರ್ ಲಿಂಡ್ಸೆ ಗ್ರಹಾಂ ಅವರಂತಹ ಪ್ರಭಾವಿ ವ್ಯಕ್ತಿಗಳು ಈ ಪ್ರಸ್ತಾಪವನ್ನು ಬೆಂಬಲಿಸಿದ್ದಾರೆ. ‘ನೀವು ರಷ್ಯಾದಿಂದ ಇಂಧನವನ್ನು ಖರೀದಿಸುತ್ತಿದ್ದರೆ ಮತ್ತು ಉಕ್ರೇನ್‌ಗೆ ಸಹಾಯ ಮಾಡದಿದ್ದರೆ, ಅಮೆರಿಕದಲ್ಲಿರುವ ನಿಮ್ಮ ಸರಕುಗಳಿಗೆ 500% ಸುಂಕ ವಿಧಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದರು.

    ಒಂದು ವೇಳೆ ಈ ನಿರ್ಣಯ ಅಂಗೀಕಾರವಾದರೆ, ಜಾಗತಿಕ ನಿರ್ಬಂಧಗಳ ಸಮಯದಲ್ಲಿ ರಷ್ಯಾದ ತೈಲ ಮತ್ತು ಅನಿಲದ ಆಮದನ್ನು ಹೆಚ್ಚಿಸಿರುವ ಭಾರತ ಮತ್ತು ಚೀನಾದಂತಹ ದೇಶಗಳು, ಅಮೆರಿಕದ ಮಾರುಕಟ್ಟೆಗೆ ಪ್ರವೇಶಿಸುವ ತಮ್ಮ ಉತ್ಪನ್ನಗಳ ಮೇಲೆ 500% ವರೆಗಿನ ಅಭೂತಪೂರ್ವ ಸುಂಕವನ್ನು ಎದುರಿಸಬೇಕಾಗುತ್ತದೆ. ಈ ಕ್ರಮವು ವ್ಯಾಪಾರ ಸಂಬಂಧಗಳಲ್ಲಿ, ವಿಶೇಷವಾಗಿ ಪ್ರಮುಖ ಕಾರ್ಯತಂತ್ರದ ಪಾಲುದಾರ ಭಾರತದೊಂದಿಗೆ ಉದ್ವಿಗ್ನತೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?

    ಈಚೆಗೆ 14 ದೇಶಗಳ ಮೇಲೆ ಹೊಸ ಸುಂಕ ವಿಧಿಸಿ ಟ್ರಂಪ್‌ ಆದೇಶ ಹೊರಡಿಸಿದ್ದರು. ರಷ್ಯಾದ ಇಂಧನ ಆಮದುದಾರರ ಮೇಲಿನ 500% ತೆರಿಗೆ ಸೇರಿದಂತೆ ಹೊಸ ಸುಂಕಗಳು 2025ರ ಆಗಸ್ಟ್‌ 1ರಿಂದ ಜಾರಿಗೆ ಬರಲಿವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

  • Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    ಕಾರವಾರ: ಹಿಂದೂ ಧರ್ಮದ ಧಾರ್ಮಿಕತೆಗೆ ವಾಲಿದ ರಷ್ಯಾ (Russia) ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.

    ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು. ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು. ಸಿಪಿಐ ಶ್ರೀಧರ್ ನೇತ್ರತ್ವದ ತಂಡ ಈ ಭಾಗದಲ್ಲಿ ಗುಡ್ಡ ಕುಸಿತವಾದ್ದರಿಂದ ಗಸ್ತು ತಿರುಗುವಾಗ ಗುಹೆಯಲ್ಲಿ ಯಾರೋ ವಾಸವಾಗಿರುವುದನ್ನು ಪತ್ತೆ ಮಾಡಿ ವಿದೇಶಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

    ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದ್ದು ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

  • Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

    Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

    ನವದೆಹಲಿ: ಇರಾನ್ ಮೇಲೆ ಇಸ್ರೇಲ್ (Iran-Israel War) ನಡೆಸಿದ ದಾಳಿಯಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಭಾರತವು ಜೂನ್‌ನಲ್ಲಿ ರಷ್ಯಾದ (Russia) ತೈಲ ಖರೀದಿಯನ್ನು ಹೆಚ್ಚಿಸಿದೆ. ಸೌದಿ ಅರೇಬಿಯಾ ಮತ್ತು ಇರಾಕ್‌ನಂತಹ ಮಧ್ಯಪ್ರಾಚ್ಯ ಪೂರೈಕೆದಾರರಿಂದ ಒಟ್ಟು ಪ್ರಮಾಣಕ್ಕಿಂತ ಹೆಚ್ಚಿನ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ.

    ಜೂನ್ 13 ರಂದು ಮೊದಲು ಇರಾನಿನ ಪರಮಾಣು ತಾಣಗಳ ಮೇಲೆ ದಾಳಿ ಮಾಡಿದ ಇಸ್ರೇಲ್‌ಗೆ ನೇರ ಬೆಂಬಲ ನೀಡಿರುವ ಅಮೆರಿಕ (US), ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

    ಜೂನ್‌ನಲ್ಲಿ, ಭಾರತೀಯ ಸಂಸ್ಕರಣಾಗಾರಗಳು ದಿನಕ್ಕೆ 2-2.2 ಮಿಲಿಯನ್ ಬ್ಯಾರೆಲ್ ರಷ್ಯಾದ ತೈಲವನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚಿನದ್ದಾಗಲಿದೆ. ಇರಾಕ್, ಸೌದಿ ಅರೇಬಿಯಾ, ಯುಎಇ ಮತ್ತು ಕುವೈತ್‌ನಿಂದ ಖರೀದಿಸಿದ ಒಟ್ಟು ಪ್ರಮಾಣಕ್ಕಿಂತ ಹೆಚ್ಚಾಗಿದೆ ಎಂದು ಜಾಗತಿಕ ವ್ಯಾಪಾರ ವಿಶ್ಲೇಷಣಾ ಸಂಸ್ಥೆ ಕೆಪ್ಲರ್‌ ತಿಳಿಸಿದ್ದಾರೆ.

    ಮೇ ತಿಂಗಳಲ್ಲಿ ರಷ್ಯಾದಿಂದ ಭಾರತದ (India) ತೈಲ ಆಮದು ದಿನಕ್ಕೆ 1.96 ಮಿಲಿಯನ್ ಬ್ಯಾರೆಲ್‌ಗಳಷ್ಟಿತ್ತು (bpd). ಇದಲ್ಲದೆ, ಜೂನ್‌ನಲ್ಲಿ ಅಮೆರಿಕದಿಂದ ಆಮದು ದಿನಕ್ಕೆ 4.39 ಲಕ್ಷ ಬ್ಯಾರೆಲ್‌ಗೆ ಏರಿದೆ. ಇದು ಹಿಂದಿನ ತಿಂಗಳಲ್ಲಿ ಖರೀದಿಸಲಾದ 2.80 ಲಕ್ಷ ಬ್ಯಾರೆಲ್‌ಗಳಿಂದ ಭಾರಿ ಜಿಗಿತವಾಗಿದೆ. ಇದನ್ನೂ ಓದಿ: America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

    ಜೂನ್‌ನಲ್ಲಿ ಮಧ್ಯಪ್ರಾಚ್ಯದಿಂದ ಆಮದು ಮಾಡಿಕೊಳ್ಳುವ ಅಂದಾಜುಗಳು ದಿನಕ್ಕೆ ಸುಮಾರು 2 ಮಿಲಿಯನ್ ಬ್ಯಾರೆಲ್‌ಗಳಷ್ಟಿದ್ದು, ಮೇ ತಿಂಗಳ ಖರೀದಿಗಿಂತ ಕಡಿಮೆಯಾಗಿದೆ ಎಂದು ಕೆಪ್ಲರ್ ತಿಳಿಸಿದೆ.

    ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದು ಮತ್ತು ಬಳಕೆಯ ರಾಷ್ಟ್ರವಾಗಿದೆ. ಇದು ಸುಮಾರು 5.1 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಿದೆ. ಇದನ್ನು ಸಂಸ್ಕರಣಾಗಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನಂತಹ ಇಂಧನಗಳಾಗಿ ಪರಿವರ್ತಿಸಲಾಗುತ್ತದೆ. ಇದನ್ನೂ ಓದಿ: ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

    2022ರ ಫೆಬ್ರವರಿಯಲ್ಲಿ ಉಕ್ರೇನ್ ಆಕ್ರಮಣದ ನಂತರ ಭಾರತವು ಹೆಚ್ಚಿನ ಪ್ರಮಾಣದ ರಷ್ಯಾದ ತೈಲವನ್ನು ಆಮದು ಮಾಡಿಕೊಳ್ಳಲು ಪ್ರಾರಂಭಿಸಿತು. ದೇಶವು ಸಾಂಪ್ರದಾಯಿಕವಾಗಿ ಮಧ್ಯಪ್ರಾಚ್ಯ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಪಾಶ್ಚಿಮಾತ್ಯ ನಿರ್ಬಂಧಗಳು ಮತ್ತು ಕೆಲವು ಯುರೋಪಿಯನ್ ದೇಶಗಳು ಖರೀದಿಗಳನ್ನು ತಿರಸ್ಕರಿಸಿದ್ದರಿಂದ ಇತರ ಅಂತರರಾಷ್ಟ್ರೀಯ ಮಾನದಂಡಗಳಿಗೆ ಹೋಲಿಸಿದರೆ, ತೈಲವು ಗಮನಾರ್ಹ ರಿಯಾಯಿತಿಯಲ್ಲಿ ಲಭ್ಯವಿದ್ದ ಕಾರಣ ರಷ್ಯಾದ ಆಮದು ಹೆಚ್ಚಾಗಿದೆ.

  • ದೊಡ್ಡಣ್ಣನ ಎಂಟ್ರಿಯಿಂದ 3ನೇ ಮಹಾಯುದ್ಧದ ಆತಂಕ – ಇರಾನ್ ಬೆಂಬಲಕ್ಕೆ ನಿಂತ ರಷ್ಯಾ

    ದೊಡ್ಡಣ್ಣನ ಎಂಟ್ರಿಯಿಂದ 3ನೇ ಮಹಾಯುದ್ಧದ ಆತಂಕ – ಇರಾನ್ ಬೆಂಬಲಕ್ಕೆ ನಿಂತ ರಷ್ಯಾ

    ಟೆಹ್ರಾನ್/ಟೆಲ್ ಅವೀವ್: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವಿನ ಯುದ್ಧದ ಭೀಕರತೆ ಹೆಚ್ಚಾಗುತ್ತಲೇ ಇದೆ. ಈ ಮಧ್ಯೆ ಅಮೆರಿಕದ (America) ಎಂಟ್ರಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದ್ದು, ಮೂರನೇ ಮಹಾಯುದ್ಧಕ್ಕೆ ನಾಂದಿಯಾಗುತ್ತಾ ಎನ್ನುವಂತಾಗಿದೆ.

    ಇರಾನ್-ಇಸ್ರೇಲ್ ನಡುವಿನ ಯುದ್ಧದ ಸ್ವರೂಪ ಸದ್ಯಕ್ಕೆ ಬದಲಾಗುವಂತಿಲ್ಲ. ಎರಡು ದೇಶಗಳ ನಡುವಿನ ದಾಳಿ, ಪ್ರತಿದಾಳಿಗಳ ಭೀಕರತೆ ಹೆಚ್ಚಾಗುತ್ತಲೇ ಇದೆ. ಯಾವುದೇ ಕಾರಣಕ್ಕೂ ಎರಡು ರಾಷ್ಟ್ರಗಳು ಹಿಂದೆ ಸರಿಯಲ್ಲ ಎಂದು ಪಟ್ಟು ಹಿಡಿದಿವೆ. ಇದೆಲ್ಲದರ ನಡುವೆ ಅಮೆರಿಕದ ನಡೆ ಮತ್ತಷ್ಟು ಟೆನ್ಷನ್‌ಗೆ ಕಾರಣವಾಗಿದೆ.ಇದನ್ನೂ ಓದಿ: ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

    ಇಷ್ಟು ದಿನ ಇಸ್ರೇಲ್ ಬೆನ್ನಿಗೆ ನಿಂತು ಬಲ ನೀಡಿದ್ದ ಅಮೆರಿಕ, ಈಗ ಒಂದು ಹೆಜ್ಜೆ ಮುಂದೆ ಬಂದು ನೇರವಾಗಿಯೇ ಇರಾನ್‌ಗೆ ಹೋರಾಟದ ಎಚ್ಚರಿಕೆ ನೀಡಿದೆ. ಇದು ಮೂರನೇ ಮಹಾಯುದ್ಧಕ್ಕೆ ನಾಂದಿಯಾಗುತ್ತಾ ಎನ್ನುವ ಟೆನ್ಷನ್ ಹೆಚ್ಚಿಸಿದೆ. ಈ ಮಧ್ಯೆ ಟ್ರಂಪ್‌ನ ಆ ಒಂದು ಹೇಳಿಕೆ ಮೂರನೇ ಮಹಾಯುದ್ಧ ಶುರುವಾದರೂ ಅಚ್ಚರಿಪಡಬೇಕಿಲ್ಲ ಎನ್ನುವ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

    ಇರಾನ್‌ಗೆ ಎರಡು ದಿನದ ಹಿಂದಷ್ಟೇ ಟ್ರಂಪ್ ನೇರ ಎಚ್ಚರಿಕೆ ನೀಡುವ ಮೂಲಕ ಹಿಂದೆ ಸರಿಯುವಂತೆ ಹೇಳಿದ್ದರು. ಆದರೆ ಇದಕ್ಕೆ ಬಗ್ಗದ ಇರಾನ್ ಸರ್ವೋಚ್ಛ ನಾಯಕ ಖಮೇನಿ ನೀವು ಕೂಡ ನಿಮ್ಮ ಪಾಡಿಗೆ ಸೈಲೆಂಟ್ ಆಗಿದ್ರೆ ಒಳ್ಳೆಯದು, ಇಲ್ಲದಿದ್ದರೆ ಅಮೆರಿಕ ಕೂಡ ಪರಿಣಾಮ ಎದುರಿಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದೆ. ಅದಾದ ಬೆನ್ನಲ್ಲೇ ನಿನ್ನೆ ಮತ್ತೆ ಇರಾನ್ ವಿರುದ್ಧ ಟ್ರಂಪ್ ಗುಡುಗಿದರು. ತಾವು ಕೂಡ ಇರಾನ್ ವಿರುದ್ಧ ಸಮರಕ್ಕಿಳಿಯುವ ಮುನ್ಸೂಚನೆ ನೀಡಿದರು. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ಟ್ರಂಪ್ ಬಳಿ ಕೇಳಿದಾಗ ಯಾವುದೇ ಷರತ್ತುಗಳಿಲ್ಲದೆ ಇರಾನ್ ತನ್ನ ಪರಮಾಣು ಯೋಜನೆಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ವಾರ್ನಿಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: Rain Alert | ಕರ್ನಾಟಕದ ಕರಾವಳಿಯಲ್ಲಿ ಜೂನ್‌ 26ರ ವರೆಗೂ ಭಾರೀ ಮಳೆ

    ಟ್ರಂಪ್ ಹೇಳಿಕೆ ಬೆನ್ನಲ್ಲೇ ಅಮೆರಿಕವು ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಮಿಲಿಟರಿ ಪಡೆಗಳನ್ನು ಸ್ಥಳಾಂತರಿಸುತ್ತಿದೆ. ಮೂರನೇ ನೌಕಾ ವಿಧ್ವಂಸಕ ನೌಕೆ ಪೂರ್ವ ಮೆಡಿಟರೇನಿಯನ್ ಸಮುದ್ರವನ್ನು ಪ್ರವೇಶಿಸಿದೆ. ಮತ್ತೊಂದು ವಿಮಾನವಾಹನ ನೌಕೆ ಗುಂಪು ಅರೇಬಿಯನ್ ಸಮುದ್ರಕ್ಕೆ ತೆರಳುತ್ತಿದೆ ಎನ್ನಲಾಗ್ತಿದೆ. ಇದು ಕೇವಲ ರಕ್ಷಣಾತ್ಮಕ ಕ್ರಮವಾಗಿದೆ ಎಂಬ ಚರ್ಚೆ ಇದೆ. ಇರಾನ್ ಇಸ್ರೇಲ್ ಮೇಲೆ ಬಹುದೊಡ್ಡ ದಾಳಿ ನಡೆಸಿದರೆ ಅಮೆರಿಕ ರಣರಂಗಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ

    ಅಮೆರಿಕದ ಎಚ್ಚರಿಕೆ ನಡುವೆ ಈಗ, ರಷ್ಯಾ (Russia) ಕೂಡ ಎಂಟ್ರಿ ಕೊಟ್ಟಿದ್ದು, ಅಮೆರಿಕಾಕ್ಕೆ ಸೈಲೆಂಟಾಗಿರುವಂತೆ ವಾರ್ನಿಂಗ್ ಕೊಟ್ಟಿದೆ. ಈ ಮೂಲಕ ಆಯಾ ದೇಶಗಳ ಪರ ಒಂದೊಂದೆ ದೇಶಗಳು ಎಂಟ್ರಿ ಆರಂಭವಾದಂತಿದ್ದು, ಒಂದೊಮ್ಮೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಇಡೀ ಪ್ರಪಂಚ ಮತ್ತೆ ಮತ್ತೊಂದು ಮಹಾಯುದ್ಧದ ಭೀಕರತೆಗೆ ಸಿಲುಕಲಿದೆ.ಇದನ್ನೂ ಓದಿ: ಇಂದಿನಿಂದ ಭಾರತ-ಇಂಗ್ಲೆಂಡ್‌ ಟೆಸ್ಟ್‌ – ಗಿಲ್‌ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ

  • ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಇಸ್ತಾನ್‌ಬುಲ್‌: ಯುದ್ಧಪೀಡಿತ ರಷ್ಯಾ-ಉಕ್ರೇನ್‌ ನಡುವೆ 2022ರ ಬಳಿಕ 2ನೇ ಸುತ್ತಿನ ಶಾಂತಿ ಮಾತುಕತೆ ಸೋಮವಾರ ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌ನಲ್ಲಿ ನಡೆಯಿತು. ಸಭೆಯು ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಶುರುವಾದ್ರೂ ಒಂದು ಗಂಟೆಗೆ ಮಾತುಕತೆ ಮುಕ್ತಾಯಗೊಂಡಿತು. ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಕಂಡುಬಂದಿತು.

    ಸಭೆಯ ಆರಂಭದಲ್ಲೇ ಉಕ್ರೇನ್‌ ನಡೆಸಿದ ಡ್ರೋನ್‌ ದಾಳಿ ವಿಚಾರ ಬಲವಾಗಿ ವಿರೋಧಿಸಿದ ರಷ್ಯಾ ಪ್ರತಿನಿಧಿಗಳು, ಉಕ್ರೇನ್‌ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರದ ದಾಳಿಗೆ ತಿರುಗೇಟು ನೀಡುವ ಶಕ್ತಿ ನಮಗೂ ಇದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

    ರಷ್ಯಾ ಮೇಲೆ ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯೇ ಎಲ್ಲದಕ್ಕೂ ಕಾರಣ. ರಷ್ಯಾ ಪ್ರತಿನಿಧಿಗಳು ಉಕ್ರೇನ್‌ನ ಈ ದಾಳಿಯನ್ನು ಬಲವಾಗಿ ವಿರೋಧಿಸಿ, ಷರತ್ತುರಹಿತ ಕದನ ವಿರಾಮ ಮಾತುಕತೆಯನ್ನ ತಿರಸ್ಕರಿಸಿದರು. ʻಆಪರೇಷನ್ ಸ್ಪೈಡರ್ಸ್ ವೆಬ್ʼ ಎಂದು ಹೆಸರಿಸಲಾದ ಈ ರಹಸ್ಯ ಕಾರ್ಯಾಚರಣೆಯಲ್ಲಿ, ಉಕ್ರೇನ್ ಒಂದೂವರೆ ವರ್ಷದಿಂದ ಯೋಜನೆ ರೂಪಿಸಿತ್ತು. ಹೀಗಾಗಿ ಇಸ್ತಾನ್‌ಬುಲ್‌ನಲ್ಲಿ ನಡೆದ ಉಕ್ರೇನ್‌ನೊಂದಿಗಿನ ಶಾಂತಿ ಮಾತುಕತೆಯ ಸಮಯದಲ್ಲಿ ರಷ್ಯಾ ಬೇಷರತ್‌ ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದೆ ಎಂದು ಕೈವ್ ಸಂಧಾನಕಾರರು ತಿಳಿಸಿದ್ದಾರೆ.

    ಸೇನಾ ದಾಳಿಯ ವಿಚಾರವಾಗಿ ಉಭಯ ದೇಶಗಳ ಪ್ರತಿನಿಧಿಗಳ ನಡುವಿನ ವಾಗ್ವಾದದಿಂದ ಸಭೆ ಅಪೂರ್ಣಗೊಂಡಿತು. ‘ಕದನ ವಿರಾಮ ಸಂಬಂಧ ಉಭಯ ದೇಶದ ಪ್ರತಿನಿಧಿಗಳ ನಡುವೆ ಮಾತುಕತೆ ನಡೆದಿದೆ. ಸಂಘರ್ಷ ಪರಿಸ್ಥಿತಿಯ ಬಗ್ಗೆ ಮೌಲ್ಯಮಾಪನ ಮಾಡಲಾಗಿದೆ. ಯುದ್ಧ ಕೈದಿಗಳ ಹಸ್ತಾಂತರದ ಬಗ್ಗೆಯೂ ಚರ್ಚಿಸಲಾಗಿದೆ. ಆದರೆ, ಸಂಘರ್ಷ ಕೊನೆಗೊಳಿಸುವ ವಿಷಯವಾಗಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ಟರ್ಕಿ ವಿದೇಶಾಂಗ ಸಚಿವ ಹಕನ್‌ ಫಿಡಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    ಚರ್ಚೆ ವೇಳೆ ರಷ್ಯಾ ಪ್ರತಿನಿಧಿ ಮೆಡಿನ್ಸ್ಕಿ ಅವರು, ಯುದ್ಧದಲ್ಲಿ ಕೊಲಲ್ಪಟ್ಟ 6,000 ಉಕ್ರೇನಿಯನ್ ಸೈನಿಕರ ಶವಗಳನ್ನ ಹಿಂದಿರುಗಿಸುವುದಾಗಿ ತಿಳಿಸಿದರು. ಹಾಗಾಗಿ 2-3 ದಿನಗಳ ಸೀಮಿತ ಕದನ ವಿರಾಮ ಪ್ರಸ್ತಾಪಿಸಲಾಗಿದೆ. ಇದು ಸೈನಿಕರ ಮೃತದೇಹಗಳನ್ನು ಹಸ್ತಾಂತರಿಸುವ ಉದ್ದೇಶ ಮಾತ್ರ ಹೊಂದಿದೆ ಎಂದು ತಿಳಿಸಿದರು.

    ಪರಸ್ಪರ 1,000 ಯುದ್ಧ ಕೈದಿಗಳ ವಿನಿಮಯ ಒಪ್ಪಂದ
    ಉಕ್ರೇನ್‌ ಮತ್ತು ರಷ್ಯಾ ನಡುವೆ ತಲಾ 1,000 ಯುದ್ಧ ಕೈದಿಗಳ ವಿನಿಮಯದ ಕುರಿತು ರಷ್ಯಾ ಮತ್ತು ಉಕ್ರೇನ್ ಒಪ್ಪಂದಕ್ಕೆ ಬಂದಿವೆ. ಮುಂದುವರಿದು… ಯುದ್ಧ ಕೈದಿಗಳ ವಿನಿಮಯಕ್ಕಾಗಿ ಶಾಶ್ವತ ಸಮಿತಿ ರಚನೆಯ ಕುರಿತು ಒಪ್ಪಂದಕ್ಕೆ ಬರಲಾಗಿದೆ. ಇದರಿಂದ ಭವಿಷ್ಯದಲ್ಲಿ ಯುದ್ಧ ಕೈದಿಗಳ ಪ್ರಕ್ರಿಯೆಯನ್ನು ತ್ವರಿತವಾಗಿ ಮತ್ತು ಸರಾಗವಾಗಿ ಪೂರ್ಣಗೊಳಿಸಬಹುದು ಎಂದು ರಷ್ಯಾ ಪ್ರತಿನಿಧಿ ತಿಳಿಸಿದ್ರು.

    ಅಲ್ಲದೇ, ಕ್ರೈಮಿಯಾ, ಡಾನ್‌ಬಾಸ್, ಖೆರ್ಸನ್ ಮತ್ತು ಜಪೊರೊಝೈಗಳನ್ನು ರಷ್ಯಾದ ಪ್ರದೇಶವೆಂದು ಅಂತಾರಾಷ್ಟ್ರೀಯವಾಗಿ ಗುರುತಿಸಬೇಕೆಂದು ಒತ್ತಾಯಿಸಿ ರಷ್ಯಾ ಉಕ್ರೇನ್‌ಗೆ ಶಾಂತಿ ಜ್ಞಾಪಕ ಪತ್ರವನ್ನ ಪ್ರಸ್ತಾಪಿಸಿದೆ ಎಂದು ತಿಳಿದುಬಂದಿದೆ. ಈ ನಡುವೆ ಎರಡೂ ದೇಶಗಳು ಹೊಸ ಕೈದಿಗಳ ವಿನಿಮಯಕ್ಕಾಗಿ ಒಪ್ಪಿಕೊಂಡಿರುವುದಾಗಿ ಹೇಳಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ