Tag: ರಷ್ಯಾ

  • ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ಮಾಸ್ಕೋ: ಆಪಲ್ ಕಂಪನಿ ರಷ್ಯಾದಲ್ಲಿ ಐಫೋನ್, ಐಪ್ಯಾಡ್, ಮ್ಯಾಕ್ ಹಾಗೂ ಇತರ ಹಾರ್ಡ್‍ವೇರ್ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸಿದೆ.

    ವಾರದ ಹಿಂದೆ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲು ಪ್ರಾರಂಭಿಸಿದಾಗಿನಿಂದ ಹಲವು ಕಂಪನಿಗಳು ಒಂದೊಂದಾಗಿಯೇ ರಷ್ಯಾದ ಕೈ ಬಿಡುತ್ತಿವೆ. ಆಪಲ್ ಹಿಂದೆ ರಷ್ಯಾದಲ್ಲಿ ಆಪಲ್ ಪೇಯನ್ನು ಸ್ಥಗಿತಗೊಳಿಸಿತ್ತು. ರಷ್ಯಾದ ಹೊರಗಿನ ದೇಶಗಳಲ್ಲಿ ಸ್ಪುಟ್ನಿಕ್ ಹಾಗೂ ಆರ್‌ಟಿ ನ್ಯೂಸ್‍ಗಳಂತಹ ಅಪ್ಲಿಕೇಶನ್‍ಗಳನ್ನೂ ಆಪ್ ಸ್ಟೋರ್‌ನಿಂದ ತೆಗೆದು ಹಾಕಲಾಗಿತ್ತು. ಇದೀಗ ಲೈವ್ ಟ್ರಾಫಿಕ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಪರೋಕ್ಷವಾಗಿ ಉಕ್ರೇನ್‍ಗೆ ಬೆಂಬಲ ನೀಡುತ್ತಿದೆ. ಇದನ್ನೂ ಓದಿ: IGTV ಯನ್ನು ಮುಚ್ಚಲಿದೆ ಇನ್‍ಸ್ಟಾಗ್ರಾಮ್

    ಆಪಲ್ ರಷ್ಯಾದಲ್ಲಿ ಎಲ್ಲಾ ಆನ್‍ಲೈನ್ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದೆ. ಆಪಲ್‍ನ ರಷ್ಯನ್ ವೆಬ್‍ಸೈಟ್ ಕಾರ್ಯನಿರ್ವಹಿಸುತ್ತಿದ್ದರೂ ಆನ್‍ಲೈನ್ ಸ್ಟೋರ್ ಅನ್ನು ರಷ್ಯಾದಲ್ಲಿ ಮುಚ್ಚಲಾಗಿದೆ ಎಂದು ಆಪಲ್ ತಿಳಿಸಿದೆ. ಇದನ್ನೂ ಓದಿ: ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ಆಪಲ್ ಕಳೆದ ವಾರದಿಂದ ರಷ್ಯಾಗೆ ರಫ್ತುಗಳನ್ನು ನಿಲ್ಲಿಸಿದೆ. ಉಕ್ರೇನ್ ಮೇಲೆ ನಡೆಯುತ್ತಿರುವ ದಾಳಿಗೆ ವಿರೋಧವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆಪಲ್ ತಿಳಿಸಿದೆ. ಆಪಲ್ ಮಾತ್ರವಲ್ಲದೇ ಗೂಗಲ್, ಮೆಟಾ, ಹಾಗೂ ನೆಟ್‍ಫ್ಲಿಕ್ಸ್ ನಂತಹ ದೈತ್ಯ ಟೆಕ್ ಕಂಪನಿಗಳು ರಷ್ಯಾದಲ್ಲಿ ತಮ್ಮ ಉತ್ಪನ್ನಗಳಿಗೆ ವಿವಿಧ ರೀತಿಯ ನಿರ್ಬಂಧಗಳನ್ನು ಹೇರಿವೆ.

  • ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

    ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

    ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಹಾವೇರಿ ಮೂಲದ ನವೀನ್ ಭಾವಚಿತ್ರಕ್ಕೆ ಜನ ಹೂ ಹಾಕಿ ಪೂಜೆ ಸಲ್ಲಿಸುತ್ತಿದ್ದಾರೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರೋ ನವೀನ್ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮಗನನ್ನ ಕಳೆದುಕೊಂಡು ದಿಕ್ಕು ತೋಚದಂತೆ ತಂದೆ ಕುಳಿತಿದ್ದಾರೆ. ಇನ್ನೊಂದೆಡೆ ಸಂಬಂಧಿಕರು ಮನೆಗೆ ಧಾವಿಸುತ್ತಿದ್ದಾರೆ. ಅಲ್ಲದೆ ಮನೆಯ ಮುಂದೆ ನವೀನ್ ಫೊಟೋ ಇಡಲಾಗಿದ್ದು, ಅದಕ್ಕೆ ಹೂ ಹಾಕಿ, ಶ್ರದ್ಧಾಂಜಲಿ ಸಲ್ಲಿಸಿ, ಫೋಟೋಗೆ ಕೈಮುಗಿದು ನಮಸ್ಕರಿಸುತ್ತಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ನವೀನ್ ತಂದೆ ಶೇಖರಗೌಡ, ನಿನ್ನೆ ಪ್ರಧಾನಿಗಳು ಮಾಜಿ ಸಿಎಂ, ಹಾಲಿ ಸಿಎಂ ಎಲ್ಲರೂ ನಮ್ಮ ಜೊತೆ ಮಾತಾಡಿದ್ದಾರೆ. ಜೀವಂತವಾಗಿ ದೇಶಕ್ಕೆ ನನ್ನ ಮಗ ಬರಲಿಲ್ಲ. ಸಾವಿರಾರು ವಿದ್ಯಾರ್ಥಿಗಳನ್ನು ಸೇಫ್ ಆಗಿ ಕರೆ ತನ್ನಿ ಅಂತ ನಾನು ಮೋದಿಯವರಿಗೆ ರಿಕ್ವೆಸ್ಟ್ ಮಾಡಿದ್ದೀನಿ. ನಿನ್ನೆ ಸಾಕಷ್ಟು ಅಧಿಕಾರಿಗಳು, ಮುಖಂಡರು ಬಂದು ಮಾತಾಡಿದ್ದಾರೆ ಎಂದರು. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ಉಕ್ರೇನ್ ನಲ್ಲಿ ಬಂಕರ್ ನಲ್ಲಿ ಉಳಿದ ವಿದ್ಯಾರ್ಥಿಗಳು ಬರೋಕೆ ಹೆದರ್ತಾ ಇದ್ದಾರೆ. ಮಗನನ್ನು ಯಾವಾಗ ಕರೆಸ್ತೀರಿ ಅಂದಾಗ ಮೊದಲು ಎಲ್ಲರೂ ಕೇವಲ ಆಶ್ವಾಸನೆ ಕೊಡುತ್ತಿದ್ದರು. ಅವನು ಬರೋದು ಯಾರಿಂದ ತಪ್ಪಿತು, ಯಾರಿಂದ ಆಯ್ತು ಅಂತ ನಂಗೆ ಗೊತ್ತಾಗಲಿಲ್ಲ. ಪೋಲೆಂಡ್, ರೋಮೇನಿಯಾ ಮೂಲಕ ಅವನು ಬರಬೇಕಿತ್ತು. ಜೀವ ರಕ್ಷಣೆಗೆ ಅಂತ ಬಹಳ ಪ್ರಯತ್ನ ಮಾಡಿದ್ರು ನನ್ನ ಮಗ. ಬಂಕರ್ ನಲ್ಲಿ ಇದ್ರೂ ಕಷ್ಟ, ಹೊರ ಬಂದ್ರೂ ಕಷ್ಟ ಅಂತ ಅವರು ಒದ್ದಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಯುದ್ಧ ಆಗೋದು ಸುಳ್ಳು, ಧೈರ್ಯವಾಗಿರಿ ಅಂತ ಕಾಲೇಜಿನವರು ಹೇಳಿದ್ರಂತೆ. ಹೀಗಾಗಿ ಯುದ್ಧ ಆಗಲ್ಲ ಅನ್ನೋ ವಿಶ್ವಾಸದಲ್ಲಿ ಎಲ್ಲರೂ ಇದ್ದರು. ಇಲ್ಲಿನ ರಾಜಕೀಯ, ರಿಸರ್ವೇಶನ್, ಶಿಕ್ಷಣ ಪದ್ಧತಿ ಸರಿ ಇಲ್ಲದ ಕಾರಣ ನಮ್ಮ ಮಗ ಇಲ್ಲಿ ಓದೋಕೆ ಆಗಲಿಲ್ಲ ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

  • ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ನವೀನ್ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ

    ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ದದಲ್ಲಿ ಸಾವನ್ನಪ್ಪಿದ ಕನ್ನಡಿಗ ನವೀನ್ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ. ಆದರೆ ನಮ್ಮ ಮೊದಲ ಆದ್ಯತೆ ಅವರ ಮೃತದೇಹವನ್ನು ತರಿಸುವುದಾಗಿದೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಕುಟುಂಬ ಕೂಡಾ ದುಃಖದಲ್ಲಿ ಇದೆ. ಶವ ತರಿಸಿಕೊಡುವಂತೆ ಅವರು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನವೀನ್ ಶವ ಬಂದ ನಂತರ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.

    ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಡ್ರೆಸ್ ಹೋಲುವ ಫೋಟೋವನ್ನು ಅವರ ಸ್ನೇಹಿತರು ಕಳಿಸಿದ್ದಾರೆ. ಈ ಬಗ್ಗೆ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಮಾತನಾಡುತ್ತೇನೆ. ಮೃತದೇಹವನ್ನು ತೆಗೆದುಕೊಂಡು ಬರಲು ಎಲ್ಲಾ ಪ್ರಯತ್ನವನ್ನು ನಡೆಸುತ್ತಿದ್ದೇವೆ ಎಂದರು.

    ಕನ್ನಡಿಗರು ವಾಪಸ್ ತರಲು ವೇಗ ಕೊಡುತ್ತೇವೆ. 2-3 ದಿನಗಳಲ್ಲಿ 26 ವಿಮಾನಗಳು ಬರಲಿವೆ. ಇದರಲ್ಲಿ ಕನ್ನಡಿಗರನ್ನು ಶೀಘ್ರವಾಗಿ ಕರೆಸಲು ಕ್ರಮ ತೆಗೆದುಕೊಳ್ಳುತ್ತೇವೆ. ಯುದ್ಧ ನಡೆಯುತ್ತಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ಭಾರತ ಸರ್ಕಾರ ಪ್ಲ್ಯಾನ್ ಮಾಡಿ ವಾರ್ ಝೋನ್‍ನಿಂದ ಬೇರೆ ಬೇರೆ ಕಡೆ ಕರೆಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ನವೀನ್ ಸ್ನೇಹಿತರ ಆರೋಗ್ಯ ವಿಚಾರವಾಗಿ ಮಾತನಾಡಿದ ಅವರು, ಒಂದು ಮಾಹಿತಿ ನವೀನ್ ಜೊತೆ ಇದ್ದರು ಅಂತ ಇದೆ. ಇನ್ನೊಂದು ಮಾಹಿತಿ ಇರಲಿಲ್ಲ ಅಂತ ಇದೆ. ಇಂದು ಸಂಪೂರ್ಣ ಮಾಹಿತಿ ಈ ಬಗ್ಗೆ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಕಾಂಗ್ರೆಸ್ ಟೀಕೆ ವಿಚಾರವಾಗಿ ಮಾತನಾಡಿ, ವಾರ್ ಝೋನ್ ಇರುವಾಗ ಕಾಂಗ್ರೆಸ್ ರಾಜಕಾರಣ ಮಾಡುತ್ತಾರೆ ಎಂದರೆ ಎಷ್ಟು ಕೆಳಗೆ ಇಳಿದ್ದಿದ್ದಾರೆ ಅಂತ ಗೊತ್ತಾಗುತ್ತದೆ. ಕಾಂಗ್ರೆಸ್ ಇದ್ದಾಗ ಎಷ್ಟೋ ಯುದ್ಧ ಆಗಿತ್ತು. ಆದರೆ ಅವರು ಒಬ್ಬರನ್ನು ಕರೆದುಕೊಂಡು ಬಂದಿಲ್ಲ. ಆದರೆ ಈಗ ಟೀಕೆ ಮಾಡುತ್ತಿದ್ದಾರೆ. ಮೋದಿ ಸರ್ಕಾರ ನಿರಂತರ ಪ್ರಕ್ರಿಯೆ ಮಾಡುತ್ತಿದೆ. 2-3 ದಿನಗಳಲ್ಲಿ 26 ವಿಮಾನಗಳು ಬರುತ್ತಿದೆ. ಆದರೆ ಕಾಂಗ್ರೆಸ್ ರಾಜಕೀಯ ಮಾತ್ರ ಮುಖ್ಯವಾಗಿದೆ. ಇದು ಕಾಂಗ್ರೆಸ್ ಎಷ್ಟು ಕೆಳಗೆ ಇಳಿದಿದೆ ಅಂತ ತೋರಿಸುತ್ತದೆ ಎಂದು ಕಿಡಿಕಾರಿದರು.

  • ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

    ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

    ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಅಲ್ಲಿ ವಾಸವಾಗಿರುವ ಜನರ ಪರಿಸ್ಥಿತಿ ಹದಗೆಟ್ಟಿದೆ. ಉಕ್ರೇನ್ ಸೈನ್ಯವನ್ನು ಗುರಿಯಾಗಿಸಿ ರಷ್ಯಾ ಪಡೆಗಳು ದಾಳಿ ನಡೆಸಲು ಮುಂದಾಗಿದ್ದರು. ಆದರೆ ಈಗ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಸಾರ್ವಜನಿಕರು ವಾಸಿಸುವ ವಸತಿ ಪ್ರದೇಶಗಳನ್ನೂ ಗುರಿಯಾಗಿಸಿಕೊಂಡಿದ್ದಾರೆ. ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆಯನ್ನು ಹಾಕಲಾಗಿದ್ದು, ಕೂಡಲೇ ಆ ಕಟ್ಟಡಗಳ ತೊರೆಯುವಂತೆ ಜನತೆಗೆ ಅಧಿಕಾರಿಗಳ ಸೂಚನೆ ನೀಡಿದ್ದಾರೆ.

    ಉಕ್ರೇನ್‍ನಲ್ಲಿ ವಸತಿ ಪ್ರದೇಶಗಳಲ್ಲಿ ಕೆಲವು ಕೆಂಪು ಗುರುತುಗಳು ಕಾಣುತ್ತಿದೆ. ದಾಳಿಗಳನ್ನು ನಡೆಸಲು ರಷ್ಯಾದ ಪಡೆಗಳು ಈ ಚಿಹ್ನೆಗಳನ್ನು ಬಳಸಿದವು ಎಂದು ಕೆಲವರು ಹೇಳುತ್ತಿದ್ದಾರೆ. ಹೀಗಾಗಿ ಕಟ್ಟಡದ ಮೇಲ್ಭಾಗದಲ್ಲಿ x ಚಿಹ್ನೆಗಳ ಆಕಾರದಲ್ಲಿ ಗುರುತುಗಳು ಕಾಣುತ್ತಿದೆ. ಅದರಲ್ಲೂ ಅವು ಕೆಂಪು ಬಣ್ಣದಲ್ಲಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಈ ಚಿಹ್ನೆಗಳನ್ನ ಯಾರು ಬರೆದರು ಎಂಬುದು ಅನಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಕೆಂಪು ಬಣ್ಣದ ಚಿಹ್ನೆಗಳು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿರುವುದರಿಂದ ಉಕ್ರೇನಿಯನ್ ಅಧಿಕಾರಿಗಳು ಗಾಬರಿಗೊಂಡಿದ್ದಾರೆ. ವಸತಿ ಗೃಹಗಳ ಮೇಲ್ಭಾಗದಲ್ಲಿ ಕೆಂಪು ಗುರುತುಗಳಿದ್ದರೆ, ಕಟ್ಟಡದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸಲು ಆದೇಶಿಸಲಾಗಿದೆ. ಉಕ್ರೇನ್ ಅಧಿಕಾರಿಗಳು ತಮ್ಮ ಕಟ್ಟಡಗಳನ್ನು ಕೂಡಲೆ ಪರಿಶೀಲಿಸುವಂತೆ ಮತ್ತು x ಗುರುತು ಕಂಡು ಬಂದರೆ ಆ ಕಟ್ಟಡವನ್ನ ತೊರೆಯುವಂತೆ ತಿಳಿಸಿದ್ದೇವೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

  • ಬೈಡನ್ ಭಾಷಣದ ನಂತರ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆದ ಇರಾನಿಯನ್

    ಬೈಡನ್ ಭಾಷಣದ ನಂತರ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆದ ಇರಾನಿಯನ್

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾ ದಾಳಿ ವಿರುದ್ಧ ಉಕ್ರೇನ್ ಅವರನ್ನು ಬೆಂಬಲಿಸಿ ಮಾತನಾಡುವಾಗ ಉಕ್ರೇನ್‍ನ ಜನರನ್ನು ತಪ್ಪಾಗಿ ಇರಾನ್‍ನ ಜನರು ಎಂದು ಉಲ್ಲೇಖಿಸಿದ್ದರು. ಇದೀಗ ಇದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

    ಪುಟಿನ್ ಕೀವ್‍ನ್ನು ಟ್ಯಾಂಕ್‍ಗಳೊಂದಿಗೆ ಸುತ್ತಬಹುದು. ಆದರೆ ಅವರು ಎಂದಿಗೂ ಇರಾನ್ ಜನರ ಮನಸನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಬೈಡನ್ ಅವರು ಹೇಳಿದ್ದರು. ಇದು ರಷ್ಯಾದ ಆಕ್ರಮಣದ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸುವ ಭಾಷಣವಾಗಿತ್ತು.

    ಈ ಹೇಳಿಕೆಯಲ್ಲಿ ಉಕ್ರೇನ್‍ನ ಜನ ಎನ್ನುವ ಬದಲು ಇರಾನ್‍ನ ಜನರೆಂದು ಉಲ್ಲೇಖಿಸಿದ್ದು, ತಕ್ಷಣವೇ ಟ್ವಿಟ್ಟರ್‌ನಲ್ಲಿ ಟ್ರೇಂಡಿಂಗ್ ಆಗಿದೆ. ಟ್ವಿಟ್ಟರ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣದಲ್ಲಿ ಇರಾನಿಯನ್ ಹ್ಯಾಶ್‍ಟ್ಯಾಗ್ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಬೈಡನ್ ಭಾಷಣ ಮಾಡುವಾಗ ಇದೇ ಮೊದಲ ಬಾರಿಗೆ ಎಡವಟ್ಟು ಮಾಡಿಕೊಂಡಿಲ್ಲ. ಈ ರೀತಿ ಹಲವು ಬಾರಿ ಆಗಿದೆ. ಕಳೆದ ವರ್ಷ ಅವರು ತಮ್ಮ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೆ ಹ್ಯಾರಿಸ್ ಎಂದು ತಪ್ಪಾಗಿ ಕರೆದಿದ್ದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

  • ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಕೀವ್: ಪುಟ್ಟ ರಾಷ್ಟ್ರ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ.

    ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಸದ್ಯ ಖಾರ್ಕಿವ್ ನಲ್ಲಿ ನವೀನ್ ಮೃತದೇಹ ಇದ್ದು, ಇಂದು ಭಾರತಕ್ಕೆ ಸಾಗಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಪಾರ್ಥಿವ ಶರೀರ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ. ಅಧಿಕಾರಿಗಳ ಹಂತದಲ್ಲಿ ಮಾತುಕತೆ ಈಗಾಗಲೇ ನಡೆದಿದ್ದು, ಖಾರ್ಕಿವ್ ನಿಂದ ಇಂದು ಗಡಿಗೆ ರಸ್ತೆ ಮಾರ್ಗವಾಗಿ ಮೃತ ದೇಹ ಸಾಗಿಸುವ ಸಾಧ್ಯತೆ ಇದೆ.‌ ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ರವಾನಿಸಲು ಚಿಂತನೆ ನಡೆಸಲಾಗಿದ್ದು, ದೆಹಲಿ ಮೂಲಕ ರಾಜ್ಯ ಸರ್ಕಾರಕ್ಕೆ ಒಪ್ಪಿಸಲು ಯೋಜನೆ ರೂಪಿಸಲಾಗಿದೆ.

    ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕೀವ್‍ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಈ ಬಗ್ಗೆ, ಖಾರ್ಕೀವ್‍ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ ಎಲ್ಲರಿಗೂ ಊಟ ತರಲು ಬಂಕರ್‍ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು.

  • ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಉಕ್ರೇನ್ ಮೇಲೆ ರಷ್ಯಾ ಸೈನಿಕರು ದಾಳಿ ಮಾಡುತ್ತಿದ್ದು, ಅಲ್ಲಿ ಸಿಲುಕಿರುವ ಭಾರತೀಯರು ಆತಂಕ ಹೊರಹಾಕುತ್ತಿದ್ದಾರೆ. ಆದಷ್ಟು ಬೇಗ ನಮ್ಮನ್ನು ತಾಯ್ನಾಡಿಗೆ ಕರೆಸಿಕೊಳ್ಳಿ ಎಂದು ಕಣ್ಣೀರಾಕುತ್ತಿದ್ದಾರೆ.

    ಇತ್ತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರ, 4 ಕೇಂದ್ರ ಸಚಿವರನ್ನು ನಿಯೋಜಿಸಿ ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಕಳುಹಿಸಿದೆ. ಅದರಂತೆ ಸಚಿವರು ಈಗಾಗಲೇ ಅಲ್ಲಿಗೆ ತೆರಳಿದ್ದು, ಆ ದೇಶದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಿಕೊಡುವ ಜವಾಬ್ದಾರಿ ನೀಡಲಾಗಿದೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾದ ಬುಕಾರೆಸ್ಟ್ ತಲುಪಿದ್ದಾರೆ. ಬುಧವಾರ ಅಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಸಿಂಧಿಯಾ ಮಕ್ಕಳೊಂದಿಗೆ ನೆಲದ ಮೇಲೆ ಕುಳಿತು, ಚಿಂತೆ ಮಾಡಬೇಡಿ, ನಾನು ಎಲ್ಲರನ್ನು ಮನೆಗೆ ಕಳುಹಿಸುತ್ತೇನೆ ಎಂದು ಧೈರ್ಯ ಹೇಳಿದರು. ಇದನ್ನೂ ಓದಿ: ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಧಿಯಾ, ಇಲ್ಲಿರುವ ಭಾರತೀಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ದಾಳಿಯಿಂದ ತತ್ತರಿಸಿರುವ ಜನರಿಗೆ ಧೈರ್ಯ ತುಂಬಲಾಗಿದೆ. ಇವರನ್ನು ತಕ್ಷಣವೇ ಇಲ್ಲಿಂದ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಇತ್ತ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಹಂಗೇರಿಯಲ್ಲಿ, ಕಿರಣ್ ರಿಜಿಜು ಸ್ಲೋವಾಕಿಯಾದಲ್ಲಿ, ವಿಕೆ ಸಿಂಗ್ ಪೋಲೆಂಡ್‍ನಲ್ಲಿ ಭಾರತೀಯರ ತೆರವು ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್ ನೆರೆಯ ನಾಲ್ಕು ದೇಶಗಳಿಂದ ಮೂರು ದಿನಗಳಲ್ಲಿ ಸುಮಾರು 5000 ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ಪ್ಲ್ಯಾನ್ ಮಾಡಲಾಗುತ್ತಿದೆ. ಆಪರೇಷನ್ ಗಂಗಾ ಮಿಷನ್ ಗೆ ಸಿ 17 ವಿಮಾನ ಬಳಕೆ ಮಾಡಲಾಗುತ್ತಿದೆ. ಇಂದೇ ಎರಡು ದೇಶಗಳಿಗೆ ಸಿ 17 ವಿಮಾನ ತೆರಳು ಸಾಧ್ಯತೆ ಇದ್ದು, ಮುಂದಿನ 3-4 ದಿನಗಳಲ್ಲಿ ಬೃಹತ್ ಕಾರ್ಯಚರಣೆ ನಡೆಯಲಿದೆ. ಕಳೆದ ಆರು ದಿನಗಳಲ್ಲಿ ಕೇವಲ ಎರಡು ಸಾವಿರ ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದ್ದು, ನವೀನ್ ಸಾವಿನ ಬೆನ್ನಲೆ ತುರ್ತು ಕಾರ್ಯಚರಣೆಗೆ ವಿದೇಶಾಂಗ ಇಲಾಖೆ ಇಳಿದಿದೆ.

  • ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ವಾಷಿಂಗ್ಟನ್: ರಷ್ಯಾಕ್ಕೆ ವಾಯುಮಾರ್ಗವನ್ನು ಮುಚ್ಚಿದ ಅಮೆರಿಕ, ಪುಟಿನ್ ಅವರ ಕ್ರಮಗಳು ಪೂರ್ವಯೋಜಿತವಾಗಿದ್ದು, ಅಪ್ರಚೋದಿತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿಕಾರಿದರು.

    ಮಾಧ್ಯಮಗಳ ಜೊತೆ ಮಾತನಾಡುತ್ತಾ ಉಕ್ರೇನ್‍ನ ಮೇಲೆ ಕೈಗೊಂಡ ಪುಟಿನ್‍ನ ಕ್ರಮಗಳನ್ನು ಖಂಡಿಸಿದರು. ಪುಟಿನ್ ಪಶ್ಚಿಮ ಹಾಗೂ ನ್ಯಾಟೋ ಒಕ್ಕೂಟಗಳು ಇದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದುಕೊಂಡಿದ್ದರು. ಆದರೆ ಅವರು ಅಂದುಕೊಂಡಿರುವುದು ತಪ್ಪು. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ ಎಂದು ತಿಳಿಸಿದರು.

    ಪುಟಿನ್ ಯುದ್ಧಭೂಮಿಯಲ್ಲಿ ಲಾಭವನ್ನು ಗಳಿಸಬಹುದು. ಆದರೆ ಭವಿಷ್ಯದಲ್ಲಿ ಅವರು ಹೆಚ್ಚಿನ ಬೆಲೆಯನ್ನು ತೆರಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸಿ: ರಾಹುಲ್ ಗಾಂಧಿ

    ತಮ್ಮ ದೇಶವು ಯುಎಸ್ ಮಿತ್ರರಾಷ್ಟ್ರಗಳೊಂದಿಗೆ ನ್ಯಾಟೋ ಪ್ರದೇಶಗಳನ್ನು ರಕ್ಷಿಸುತ್ತದೆ. ಅಮೆರಿಕ ಹಾಗೂ ನಮ್ಮ ಮಿತ್ರ ರಾಷ್ಟ್ರಗಳು ಒಗ್ಗಟ್ಟಿನ ಬಲದಿಂದ ನ್ಯಾಟೋ ಪ್ರದೇಶದ ಪ್ರತೀ ಇಂಚನ್ನು ರಕ್ಷಿಸುತ್ತಿದೆ. ಉಕ್ರೇನ್‍ನವರು ಧೈರ್ಯದಿಂದ ಹೋರಾಡುತ್ತಿದ್ದಾರೆ ಎಂದರು.

    ಉಕ್ರೇನ್ ನೆಲದಲ್ಲಿ ಅಮೆರಿಕದ ಪಡೆಗಳು ರಷ್ಯಾದೊಂದಿಗೆ ತೊಡಗಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮ್ಮ ಪಡೆಗಳು ಉಕ್ರೇನ್‍ಗಾಗಿ ಹೋರಾಡುತ್ತಿಲ್ಲ. ಆದರೆ ನಮ್ಮ ನ್ಯಾಟೋ ಮಿತ್ರರಾಷ್ಟ್ರಗಳನ್ನು ರಕ್ಷಿಸಲು ಮತ್ತು ಪುಟಿನ್ ಪಶ್ಚಿಮಕ್ಕೆ ಚಲಿಸುವುದನ್ನು ತಡೆಯಲು ಪೋಲೆಂಡ್, ರೊಮೇನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಎಸ್ಟೋನಿಯಾ ಸೇರಿದಂತೆ ನ್ಯಾಟೋ ದೇಶಗಳನ್ನು ರಕ್ಷಿಸಲು ಸಿದ್ಧಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಉಕ್ರೇನ್‍ಗೆ ಮುಂದಿನ ಕೆಲವು ದಿನಗಳು, ವಾರಗಳು ಮತ್ತು ತಿಂಗಳುಗಳು ಕಠಿಣವಾಗಿರುತ್ತವೆ. ಪುಟಿನ್ ಕೈವ್ ಅನ್ನು ಟ್ಯಾಂಕ್‍ಗಳೊಂದಿಗೆ ಸುತ್ತಬಹುದು. ಆದರೆ ಅವರು ಎಂದಿಗೂ ಉಕ್ರೇನಿನ ಜನರನ್ನು ಗೆಲ್ಲಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ

  • ಉಕ್ರೇನ್‍ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸಿ: ರಾಹುಲ್ ಗಾಂಧಿ

    ಉಕ್ರೇನ್‍ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸಿ: ರಾಹುಲ್ ಗಾಂಧಿ

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿದ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದರು.

    ಟ್ವೀಟ್ ಮಾಡಿ, ಉಕ್ರೇನ್‍ನ ಖಾರ್ಕಿವ್‍ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿ ನವೀನ್‍ಗೆ ಸಂತಾಪ ಸೂಚಿಸಿದರು. ಭಾರತೀಯ ವಿದ್ಯಾರ್ಥಿ ನವೀನ್ ಉಕ್ರೇನ್‍ನಲ್ಲಿ ಸಾವನ್ನಪ್ಪಿರುವುದು ದುರಂತವಾಗಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಭಾರತ ಸರ್ಕಾರ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ಕಾರ್ಯತಂತ್ರ ರೂಪಿಸಿ. ಪ್ರತಿ ನಿಮಿಷವೂ ಅಮೂಲ್ಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಜ್ಞಾನಗೌಡರ ಕುಟುಂಬ ಹಾಗೂ ಸ್ನೇಹಿತರಿಗೆ ಕಾಂಗ್ರೆಸ್ ಸಂತಾಪ ಸೂಚಿಸಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರವನ್ನು ತ್ವರಿತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಇದನ್ನೂ ಓದಿ: ಸ್ಮಾರ್ಟ್‍ಫೋನ್, ಟ್ಯಾಬ್ ವಿತರಿಸಲು ಎಸ್‍ಪಿಯಿಂದ ತಡೆ: ಯೋಗಿ ಕಿಡಿ

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ವಿದ್ಯಾರ್ಥಿಯ ಸಾವಿಗೆ ಸಂತಾಪ ಸೂಚಿಸಿದ್ದು, ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಆದಷ್ಟು ಬೇಗ ವಾಪಸ್ ಕರೆತರುವಂತೆ ಸರ್ಕಾರವನ್ನು ಕೋರಿದ್ದಾರೆ.

    ಉಕ್ರೇನ್‍ನಲ್ಲಿ ಹಾವೇರಿ ಮೂಲದ ನವೀನ್ ಮೃತಪಟ್ಟಿದ್ದಾರೆ. 4ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಒಂದು ವಾರದಿಂದ ಬಂಕರ್‌ನಲ್ಲಿದ್ದರು. ಆದರೆ ನಿನ್ನೆ ರೈಲ್ವೆ ಸ್ಟೇಷನ್ ಮೂಲಕ ಹೊರಗೆ ಬಂದಿದ್ದಾನೆ. ಏರ್‌ಸ್ಟ್ರೈಕ್ ವೇಳೆ ಶೆಲ್ ಬಡಿದು ಅವರು ಸಾವನ್ನಪ್ಪಿದ್ದಾರೆ. ನವೀನ್ ಜೊತೆಗೆ ಅವರ ಊರಿನವರೇ ಇನ್ನಿಬ್ಬರು ಸ್ನೇಹಿತರಿದ್ದರು. ಅದರಲ್ಲಿ ಚಳ್ಳಗೆರೆಯ ಓರ್ವನಿಗೆ ಗಾಯವಾಗಿದೆ. ಇನ್ನೊಬ್ಬರಿಗೆ ಅದೃಷ್ಟವಶಾತ್ ಏನೂ ಆಗಿಲ್ಲ. ವಿದೇಶಾಂಗ ಇಲಾಖೆ ನವೀನ್ ಸಾವನ್ನು ದೃಢಪಡಿಸಿತ್ತು. ಇದನ್ನೂ ಓದಿ: ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

  • ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ

    ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ

    ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ. ಆದರೆ ನನ್ನ ತಮ್ಮ ಬರಲೇ ಇಲ್ಲ ಎಮದು ಮೃತ ನವೀನ್ ಸಹೋದರ ಹರ್ಷ ಭಾವುಕರಾದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕಡೆ ಅಪ್ಪ ಅಮ್ಮನನ್ನು ಸಮಾಧಾನ ಮಾಡಬೇಕು. ಮನೆಯಲ್ಲಿ ನಾನೇ ಹಿರಿಯ ಮಗ ಅವರ ಮುಂದೆ ನಾನು ಅತ್ತರೆ ನನಗೆ ನೋವು ತಡೆಯಲು ಆಗುತ್ತಿಲ್ಲ ಎಂದು ಗದ್ಗದಿತರಾದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕೀವ್‍ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

    ಈ ಬಗ್ಗೆ, ಖಾರ್ಕೀವ್‍ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ ಎಲ್ಲರಿಗೂ ಊಟ ತರಲು ಬಂಕರ್‍ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು.