Tag: ರಷ್ಯಾ

  • ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು

    ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು

    ಧಾರವಾಡ: ಉಕ್ರೇನ್‍ನಲ್ಲಿ ಧಾರವಾಡದ ಮತ್ತೋರ್ವ ವಿದ್ಯಾರ್ಥಿನಿ ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗದೇ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

    ಮೆಹಬೂಬ ನಗರದ ಫೌಜಿಯಾ ಮುಲ್ಲಾ ಉಕ್ರೇನ್‍ದಲ್ಲಿ ಸಿಲುಕಿದ ವಿದ್ಯಾರ್ಥಿನಿ. ಧಾರವಾಡದಲ್ಲಿ ಇರುವ ಈ ವಿದ್ಯಾರ್ಥಿನಿಯ ಕುಟುಂಬದವರು ಸತತವಾಗಿ ವಿದ್ಯಾರ್ಥಿನಿಗೆ ಸಂಪರ್ಕ ಮಾಡುತ್ತಿದ್ದಾರೆ. ಆದರೆ ಸಂಪರ್ಕಕ್ಕೆ ಸಿಗುತ್ತಿಲ್ಲ. ನಿನ್ನೆ ಕರೆ ಮಾಡಿದ್ದ ಫೌಜಿಯಾ, ಆರಾಮಾಗಿ ಇದ್ದೇವೆ. ರಾಯಭಾರಿ ಕಚೇರಿ ಸಂಪರ್ಕದಲ್ಲಿದ್ದೇವೆ ಎಂದಿದ್ದಳು.

    ರಾಯಭಾರ ಕಚೇರಿ ನಿನ್ನೆ ಬೇರೆ ಕಡೆ ಸ್ಥಳಾಂತರ ಮಾಡುವುದಾಗಿ ಹೇಳಿತ್ತು. ಆದರೆ ಫೌಜಿಯಾ ನಿನ್ನೆ ಸಂಜೆ ಮಾಡಿದ್ದ ಕರೆಯೇ ಕೊನೆಯದಾಗಿರುವುದರಿಂದ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಫೌಜಿಯಾ ತಂದೆ ಮಹಮ್ಮದ್ ಇಸಾಕ್ ಅವರು, ನಮ್ಮ ಮಕ್ಕಳು ಸುರಕ್ಷಿತವಾಗಿ ಮನೆಗೆ ಬಂದರೆ ಸಾಕು, ನಮ್ಮ ರಾಜ್ಯದ ಅನೇಕರು ಫೌಜಿಯಾ ಅವಳ ಜೊತೆಯಲ್ಲಿದ್ದಾರಂತೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ: ಐಫೆಲ್‌ ಟವರ್‌ನಲ್ಲಿ ಉಕ್ರೇನ್‌ ರಾಷ್ಟ್ರೀಯ ವರ್ಣ ಬೆಳಗಿಸಿ ಫ್ರಾನ್ಸ್‌ ಅಭಯ

    ಟರ್ನಾಪಿಲ್ ನಗರದಲ್ಲಿ ಸಿಲುಕಿರುವ ಯುವತಿ ಬಳಿ 8 ದಿನಕ್ಕೆ ಆಗುವಷ್ಟು ಆಹಾರ ಇದೆ ಎಂದು ಮಾಹಿತಿ ನೀಡಿದ ಅವರು, ಡಿಸೆಂಬರ್‍ಲ್ಲಿ ಅವಳು ಉಕ್ರೇನ್‍ಗೆ ಹೋಗಿದ್ದಳು. ವಾಪಸ್ ಬರಲು ಕತಾರ ಏರಲೈನ್ಸ್‍ಗೆ ಟಿಕೆಟ್ ಸಹ ಬುಕ್ ಮಾಡಿದ್ದಳು ಎಂದು ಹೇಳಿದರು. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

  • ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ  ಹೇರಿದ ಫೇಸ್‍ಬುಕ್

    ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ ಹೇರಿದ ಫೇಸ್‍ಬುಕ್

    ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ. ಇದರ ನಡವಲ್ಲೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಣ ಸಂಪಾದಿಸುವ ರಷ್ಯಾದ ಮಾಧ್ಯಮಗಳಿಗೆ ಫೇಸ್‍ಬುಕ್ ನಿರ್ಬಂಧ ವಿಧಿಸಿದೆ.

    ನಿನ್ನೆ ರಷ್ಯಾದ ನಾಲ್ಕು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆಗಳು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ವಿಚಾರದ ಸ್ವತಂತ್ರ ಫ್ಯಾಕ್ಟ್ ಚೆಕ್ ಮತ್ತು ಲೇಬಲ್ ಹಾಕುವುದನ್ನು ನಿಲ್ಲಿಸುವಂತೆ ರಷ್ಯಾದ ಅಧಿಕಾರಿಗಳು ನಮಗೆ ಆದೇಶಿಸಿದರು. ಅದನ್ನು ನಾವು ನಿರಾಕರಿಸಿದ್ದೇವೆ ಎಂದು ಫೇಸ್‍ಬುಕ್‍ನ ಮಾತೃ ಸಂಸ್ಥೆ ಮೆಟಾದ ನಿಕ್ ಕ್ಲೆಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ನಾವು ಈಗ ರಷ್ಯಾದ ಮಾಧ್ಯಮಗಳು ವಿಶ್ವದ ಯಾವುದೇ ಭಾಗದಲ್ಲಿ ನಮ್ಮ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ಪ್ರಕಟಿಸುವುದು ಅಥವಾ ಹಣ ಗಳಿಸುವುದನ್ನು ನಿಷೇಧಿಸುತ್ತಿದ್ದೇವೆ. ಫೇಸ್‍ಬುಕ್ ರಷ್ಯಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳಿಗೆ ಲೇಬಲ್ ಹಾಕುವುದನ್ನು ಮುಂದುವರಿಸುತ್ತದೆ ಎಂದು ಫೇಸ್‍ಬುಕ್‍ನ ಭದ್ರತಾ ನೀತಿ ವಿಭಾಗ ಮುಖ್ಯಸ್ಥ ನಥಾನಿಯಲ್ ಗ್ಲೀಚರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನೆಲೆಗಟ್ಟಿನಲ್ಲಿ ಸಾಮಾಜಿಕ ಮಾಧ್ಯಮ ನೆಟ್‍ವರ್ಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಕೆಲವೊಮ್ಮೆ ತಪ್ಪುದಾರಿಗೆಳೆಯುವ ಮಾಹಿತಿ ಕೂಡ ಕಂಡುಬರುತ್ತಿದೆ. ದಶಕಗಳಲ್ಲಿ ತಲೆದೋರಿರುವ ಯುರೋಪಿನ ಅತಿದೊಡ್ಡ ಭೌಗೋಳಿಕ ರಾಜಕೀಯ ಬಿಕ್ಕಟ್ಟನ್ನು ಗುರುತಿಸುವತ್ತ ತ್ವರಿತವಾಗಿ ಬೆಳವಣಿಗೆ ಕಾಣುತ್ತಿರುವ ಸಂಘರ್ಷದ ನೈಜ-ಸಮಯದ ಮೇಲ್ವಿಚಾರಣೆ ಕೂಡ ಮಾಡುತ್ತಿವೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ರಷ್ಯಾದ ನಾಗರಿಕರ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಫೇಸ್‍ಬುಕ್ ಬಳಕೆಯನ್ನು ಸೀಮಿತಗೊಳಿಸಲಾಗುತ್ತಿದೆ. ಉಕ್ರೇನ್‍ನಲ್ಲಿ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಪರಿಸ್ಥಿತಿಯನ್ನು ಅವಲೋಕಿಸಲು ಫೇಸ್‍ಬುಕ್ ವಿಶೇಷ ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಿದೆ ಎಂದು ಗ್ಲೀಚರ್ ಹೇಳಿದ್ದಾರೆ. ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ

    ಉಕ್ರೇನ್ ರಾಜಧಾನಿ ಕಿವ್‍ನಲ್ಲಿ ಇಂಟರ್‌ನೆಟ್‌ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಮೂರನೇ ದಿನವಾಗಿದೆ. ಇದು ಯುದ್ಧದಿಂದಾಗ ಪರಿಣಾಮವೋ, ಸೈಬರ್ ಸಮಸ್ಯೆಯೋ, ಬೇಕಂತಲೇ ಆಗಿದ್ದೋ ಎಂಬುದು ಇನ್ನೂ ಗೊತ್ತಾಗಿಲ್ಲ.

  • ಉಕ್ರೇನ್‍ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್

    ಉಕ್ರೇನ್‍ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್

    ಕೀವ್‌: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತನ್ನ ಹಿಡಿತವನ್ನು ಬಲಗೊಳಿಸುತ್ತಿದೆ. ಇಂದು ಉಕ್ರೇನ್‍ನ ಬಹುಮಹಡಿ ಕಟ್ಟಡ ಒಂದಕ್ಕೆ ಕ್ಷಿಪಣಿ ದಾಳಿ ನಡೆಸಿ ನಾಶ ಪಡಿಸಿದೆ.

    ಉಕ್ರೇನ್‍ನ ಕೀವ್‌ ನಗರದಲ್ಲಿರುವ ಜನ ವಸತಿ ಇದ್ದ ಬಹುಮಹಡಿ ಕಟ್ಟಡಕ್ಕೆ ರಷ್ಯಾದ ಮಿಲಿಟರಿ ಪಡೆ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ಕಟ್ಟಡಕ್ಕೆ ದೊಡ್ಡ ಮಟ್ಟದ ಹಾನಿಯಾಗಿದೆ. 6A ಲೋಬೊನವ್ಸ್ಕಿ ಅವೆನ್ಯೂ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದ್ದಂತೆ ಕಟ್ಟಡದ ಒಂದು ಭಾಗ ದ್ವಂಸವಾಗಿದ್ದು, ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ದಾಳಿ ಬಳಿಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಉಕ್ರೇನ್ ಸಚಿವಾಲಯದ ಅಧಿಕಾರಿ, ಕ್ಷಿಪಣಿ ದಾಳಿಯಿಂದ ಕಟ್ಟಡಕ್ಕೆ ಹಾನಿಯಾಗಿದೆ. ಕಟ್ಟಡದ ನೆಲಮಹಡಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಕಟ್ಟಡದಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಿ ಸ್ಥಳಾಂತರಿಸಲಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಈ ಮೊದಲು ಕೈವಾದ ಜುಲಿಯಾನಿ ವಿಮಾನ ನಿಲ್ದಾಣದ ಪಕ್ಕ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಈಗಾಗಲೇ ಉಕ್ರೇನ್‍ನ ಹಲವು ಪ್ರದೇಶಗಳನ್ನು ರಷ್ಯಾ ಮಿಲಿಟರಿ ಪಡೆ ಸುತ್ತುವರಿದಿದ್ದು, ಅಲ್ಲಲ್ಲಿ ಬಾಂಬ್‍ಗಳ ದಾಳಿ ನಡೆಯುತ್ತಿದೆ.

  • ಉಕ್ರೇನ್‍ನಲ್ಲಿ ಊಟಕ್ಕಾಗಿ ಭಾರತೀಯರ ಪರದಾಟ, ಕುಡಿಯಲೂ ಸಿಗ್ತಿಲ್ಲ ನೀರು..!

    ಉಕ್ರೇನ್‍ನಲ್ಲಿ ಊಟಕ್ಕಾಗಿ ಭಾರತೀಯರ ಪರದಾಟ, ಕುಡಿಯಲೂ ಸಿಗ್ತಿಲ್ಲ ನೀರು..!

    ಹುಬ್ಬಳ್ಳಿ: ಉಕ್ರೇನ್‍ನಲ್ಲಿ ಊಟಕ್ಕಾಗಿ ಭಾರತೀಯರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಕುಡಿಯಲು ನೀರು ಕೂಡ ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಕನ್ನಡಿಗರು ಕಣ್ಣೀರು ಹಾಕುತ್ತಾ ಕೈಮುಗಿದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಉಕ್ರೇನ್ ನಲ್ಲಿ ಸಿಲುಕಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನಾಝಿಲಾ ಅವರ ತಾಯಿ ನೂರ್ ಜಹಾನ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಮಗಳ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ್ದಾರೆ. ಸರ್ಕಾರ ಆದಷ್ಟು ಬೇಗ ನಮ್ಮ ಮಕ್ಕಳನ್ನ ಸುರಕ್ಷಿತವಾಗಿ ಕರೆತರಲಿ ಎಂದು ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ


    ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಇದೇ 9 ರಂದು ಹುಬ್ಬಳ್ಳಿಯ ಶಾಂತಿನಗರದ ನಿವಾಸಿ ನಾಝಿಲಾ ಉಕ್ರೇನ್‍ಗೆ ತೆರಳಿದ್ದರು. ಅಲ್ಲಿಗೆ ತೆರಳಿದ ಬಳಿಕ ನಾಝಿಲಾ ಅವರು ಕುಟುಂಬದ ಜೊತೆಗೆ ಕಳೆದೆರಡು ದಿನಗಳಿಂದ ಸಂಪರ್ಕದಲ್ಲಿದ್ದರು. ಆದರೆ ನಿನ್ನೆ 2 ಗಂಟೆಯಿಂದ ಸಂಪರ್ಕ ಕಡಿತಗೊಂಡಿದ್ದು, ಇದರಿಂದಾಗಿ ಕುಟುಂಬಕ್ಕೆ ದಿಕ್ಕು ದೋಚದಂತಾಗಿದೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ಉಕ್ರೇನ್‍ನಲ್ಲಿ ಇಂಟರ್ನೆಟ್ ಸಮಸ್ಯೆಯಿಂದ ಸಂಪರ್ಕ ಕಡಿತವಾಗಿದೆ. ಹೀಗಾಗಿ ಮಗಳ ಜೊತೆಗೆ ಸಂಪರ್ಕ ಸಿಗದ ಕಾರಣ ಕುಟುಂಬ ಆತಂಕಕ್ಕೀಡಾಗಿದೆ.

  • ನಿಮ್ಮೊಂದಿಗೆ ನಾವಿದ್ದೇವೆ: ಐಫೆಲ್‌ ಟವರ್‌ನಲ್ಲಿ ಉಕ್ರೇನ್‌ ರಾಷ್ಟ್ರೀಯ ವರ್ಣ ಬೆಳಗಿಸಿ ಫ್ರಾನ್ಸ್‌ ಅಭಯ

    ನಿಮ್ಮೊಂದಿಗೆ ನಾವಿದ್ದೇವೆ: ಐಫೆಲ್‌ ಟವರ್‌ನಲ್ಲಿ ಉಕ್ರೇನ್‌ ರಾಷ್ಟ್ರೀಯ ವರ್ಣ ಬೆಳಗಿಸಿ ಫ್ರಾನ್ಸ್‌ ಅಭಯ

    ಪ್ಯಾರಿಸ್: ಉಕ್ರೇನ್‌ ಮೇಲೆ ಆಕ್ರಮಣ ನಡೆಸುತ್ತಿರುವ ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಪಾಶ್ಚಾತ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಪ್ಯಾರಿಸ್‌ನಲ್ಲಿರುವ ಐಫೆಲ್‌ ಟವರ್‌ನಲ್ಲಿ ಉಕ್ರೇನ್‌ ರಾಷ್ಟ್ರೀಯ ವರ್ಣವನ್ನು ವಿದ್ಯುತ್‌ ದೀಪಾಲಂಕಾರದಿಂದ ಬೆಳಗಿಸುವ ಮೂಲಕ ರಷ್ಯಾ ಯುದ್ಧವನ್ನು ಫ್ರಾನ್ಸ್‌ ವಿರೋಧಿಸಿದೆ.

    ಪ್ಯಾರಿಸ್‌ ಮೇಯರ್‌ ಆನ್ನೆ ಹಿಡಾಲ್ಗೊ ಅವರ ಕೋರಿಕೆಯ ಮೇರೆಗೆ ಐಫೆಲ್‌ ಟವರ್‌ ಶುಕ್ರವಾರ ಉಕ್ರೇನ್‌ನ ರಾಷ್ಟ್ರೀಯ ನೀಲಿ ಮತ್ತು ಹಳದಿ ಬಣ್ಣಗಳಲ್ಲಿ ಬೆಳಗಿತು. ರಷ್ಯಾದ ದಾಳಿಯ ಹಿನ್ನೆಲೆಯಲ್ಲಿ ಉಕ್ರೇನ್‌ ಜನರೊಂದಿಗೆ ಒಗ್ಗಟ್ಟನ್ನು ಸೂಚಿಸುವ ಸಂಕೇತ ಇದು ಎಂದು ಮೇಯರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ರಷ್ಯಾ ಸೇನಾ ಪಡೆ ಈಗಾಗಲೇ ಉಕ್ರೇನ್‌ ರಾಜಧಾನಿ ಕೀವ್‌ ಪ್ರವೇಶಿಸಿದ್ದು, ಗಗನಚುಂಬಿ ಕಟ್ಟಡಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯಿಂದಾಗಿ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಎಲ್ಲರೂ ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.

    ಉಕ್ರೇನ್‌ ಮಿಲಿಟರಿ ಮೇಲೆ ನಿಯಂತ್ರಣ ಸಾಧಿಸಲು ಈ ಯುದ್ಧ ನಡೆಸಲಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ತಿಳಿಸಿದ್ದಾರೆ. ಆದರೆ ಪುಟಿನ್‌ ನಿರ್ಧಾರಕ್ಕೆ ಅಮೆರಿಕ ಸೇರಿ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್‌ ತಾರೆ ಮನವಿ

    ಉಕ್ರೇನ್‌ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಫ್ರೆಂಚ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌ ಇಬ್ಬರೊಂದಿಗೂ ಮಾತುಕತೆ ನಡೆಸಿದ್ದಾರೆ.

  • ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ಕೀವ್‌: ರಷ್ಯಾ ದಾಳಿಗೆ ಉಕ್ರೇನ್ ತತ್ತರಗೊಂಡಿದ್ದು, ಬಾಂಬ್ ದಾಳಿ ವೇಳೆ ತಂದೆ-ತಾಯಿಯನ್ನು ಕಳೆದುಕೊಂಡ ಬಾಲಕನೊಬ್ಬನ ಆಕ್ರಂದನ ನಡು ಬೀದಿಯಲ್ಲೇ ಮುಗಿಲು ಮುಟ್ಟಿರುವ ಮನಕಲಕುವ ವೀಡಿಯೋವೊಂದು ವೈರಲ್ ಆಗಿದೆ.

    ರಷ್ಯಾ ಉಕ್ರೇನ್ ಮೇಲೆ ಎಲ್ಲಾ ಕಡೆ ದಾಳಿ ನಡೆಸುತ್ತಿದೆ. ಜನವಸತಿ ಪ್ರದೇಶದ ಮೇಲೆ ಫೈಟರ್ ಜೆಟ್‍ಗಳ ಬಾಂಬ್ ದಾಳಿಯಾಗುತ್ತಿದೆ. ಜನರು ತಮ್ಮ ಬಂಧು ಬಳಗವನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ. ಬಾಂಬ್ ಸ್ಫೋಟದಲ್ಲಿ ಧೈರ್ಯ ತುಂಬುತ್ತಿದ್ದ ಪೋಷಕರನ್ನೇ ಕಳೆದುಕೊಂಡ ಬಾಲಕ ಗೋಳಾಟ ನಡೆಸುತ್ತಿದ್ದಾನೆ. ಆದರೆ ಅಲ್ಲಿರುವವರ್ಯಾರು ಆತನನ್ನು ಸಮಾಧಾನ ಪಡಿಸಲು ಜನರಿಲ್ಲದ ಪರಿಸ್ಥಿತಿಯಲ್ಲದ ಸ್ಥಿತಿಯಲ್ಲಿದ್ದಾರೆ. ಜನರು ಯಾವಾಗ ಎಲ್ಲಿ ಬಾಂಬ್ ದಾಳಿ ಉಂಟಾಗುತ್ತದೆ ಎನ್ನುವ ಭೀತಿಯಲ್ಲಿದ್ದಾರೆ.

    ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್‍ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್‍ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ಕೀವ್ ತೊರೆಯುವಂತೆ ಅಮೆರಿಕ ಝೆಲೆನ್‍ಸ್ಕಿಗೆ ಸಲಹೆ ನೀಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

  • ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ನವದೆಹಲಿ: ಯುದ್ಧ ಭೂಮಿ ಉಕ್ರೇನ್‌ನ ಬಂಕರ್‌ಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ತುರ್ತಾಗಿ ಅಲ್ಲಿಂದ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮನವಿ ಮಾಡಿದ್ದಾರೆ.

    ರಷ್ಯಾ ಯುದ್ಧ ಘೋಷಣೆಯಿಂದಾಗಿ ಉಕ್ರೇನ್‌ನ ಬಂಕ್‌ಗಳಲ್ಲಿ ತೊಂದರೆಗೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರಾಣ ಭೀತಿಯ ದೃಶ್ಯಗಳು ಆತಂಕಕಾರಿಯಾಗಿವೆ. ಭಾರೀ ದಾಳಿಗೆ ಒಳಗಾಗಿರುವ ಪೂರ್ವ ಉಕ್ರೇನ್‌ನಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವವರ ಕುಟುಂಬದ ಸದಸ್ಯರ ಆತಂಕದ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಎಲ್ಲರ ತುರ್ತು ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಮನವಿ ಮಾಡಿದ್ದಾರೆ.

    https://twitter.com/RahulGandhi/status/1497417864155832320

    ಬೆಂಗಳೂರಿನ ಮೇಘಾ ಎಂಬ ವಿದ್ಯಾರ್ಥಿನಿ ವೀಡಿಯೋವೊಂದನ್ನು ಶೇರ್‌ ಮಾಡಿದ್ದರು. ಭಾರತದ ನಾನಾ ಭಾಗಗಳ ಪ್ರಜೆಗಳು ಉಕ್ರೇನ್‌ನ ಬಂಕರ್‌ನಲ್ಲಿ ಸಿಲುಕಿದ್ದೇವೆ. ತಿನ್ನಲು ಅನ್ನವಿಲ್ಲ, ಕುಡಿಯಲು ನೀರಿಲ್ಲ. ನಮಗೆ ಸಹಾಯ ಬೇಕಾಗಿದೆ. ಸಹಾಯ ಮಾಡಲು ಯಾರೂ ಮುಂದಾಗುತ್ತಿಲ್ಲ. ನಮ್ಮನ್ನು ಕರೆದೊಯ್ಯಲು ಯಾವುದೇ ವಿಶೇಷ ವಿಮಾನ ಇಲ್ಲ. ಬಂಕರ್‌ಗಳಲ್ಲಿ ಇರುವುದು ತುಂಬಾ ಕಷ್ಟಕರವಾಗಿದೆ. ದಯಮಾಡಿ ನಮಗೆ ಸಹಾಯ ಒದಗಿಸಿ ಎಂದು ಅಂಗಲಾಚುತ್ತಿರುವ ವೀಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್‌ ತಾರೆ ಮನವಿ

    ಯುದ್ಧಪೀಡಿತ ಉಕ್ರೇನ್‌ನಲ್ಲಿ ಭಾರತದ ಸಾವಿರಾರು ಮಂದಿ ಸಿಲುಕಿಕೊಂಡಿದ್ದಾರೆ. 15,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರನ್ನು ಕರೆತರಲು ಏರ್‌ ಇಂಡಿಯಾ ಕಾರ್ಯಾಚರಣೆ ನಡೆಸುತ್ತಿದೆ. ನಾವು ತಿಳಿಸುವವರೆಗೂ ಯಾರು ಕೂಡ ದೇಶದ ಗಡಿ ಭಾಗಗಳಿಗೆ ಹೋಗಬೇಡಿ. ನೀವಿರುವ ಸ್ಥಳದಲ್ಲೇ ಇರಿ ಎಂದು ಭಾರತದ ರಾಯಭಾರಿ ಕಚೇರಿ ಸೂಚನೆ ನೀಡಿದೆ.

  • ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್‌ ತಾರೆ ಮನವಿ

    ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್‌ ತಾರೆ ಮನವಿ

    ಮಾಸ್ಕೋ: ಉಕ್ರೇನ್‌ ಮೇಲಿನ ರಷ್ಯಾ ಮಿಲಿಟರಿ ದಾಳಿಗೆ ರಷ್ಯನ್ನರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ರಷ್ಯಾದ ಅನೇಕ ಕಡೆಗಳಲ್ಲಿ ಯುದ್ಧ ವಿರೋಧಿಸಿ ಪ್ರತಿಭಟನೆ ನಡೆಯುತ್ತಿವೆ. ಅಂತೆಯೇ ಉಕ್ರೇನ್‌ ಮೇಲಿನ ಯುದ್ಧವನ್ನು ಖಂಡಿಸಿ ರಷ್ಯಾದ ಟೆನಿಸ್‌ ತಾರೆ ಆಂಡ್ರೆ ರುಬ್ಲೆವ್‌ ಸಂದೇಶವೊಂದನ್ನು ನೀಡಿದ್ದಾರೆ.

    ರಷ್ಯಾದ ಟೆನಿಸ್‌ ತಾರೆ ಆಂಡ್ರೆ ರುಬ್ಲೆವ್‌ ಅವರು ಶುಕ್ರವಾರ ನಡೆದ ದುಬೈ ಟೆನಿಸ್‌ ಚಾಂಪಿಯನ್‌ಶಿಪ್‌ ಸೆಮಿ-ಫೈನಲ್‌ ಪಂದ್ಯ ವಿಜೇತರಾಗಿದ್ದಾರೆ. ಈ ವೇಳೆ ʼಯುದ್ಧ ಬೇಡʼ ಎಂದು ತನ್ನ ದೇಶಕ್ಕೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ

    ʼದಯವಿಟ್ಟು ಯುದ್ಧ ಬೇಡʼ ಎಂದು ಹೇಳಿರುವ ಆಂಡ್ರೆ, ಉಕ್ರೇನ್‌ನಲ್ಲಿ ತನ್ನ ರಾಷ್ಟ್ರದ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ತಮ್ಮ ಭಾವನೆಗಳನ್ನು ಸ್ಪಷ್ಟಪಡಿಸಿದ್ದಾರೆ. ಆಂಡ್ರೆ ತನ್ನ ನಿಲುವನ್ನು ಛಾಯಾಗ್ರಾಹಕರೊಬ್ಬರು ಹಿಡಿದಿದ್ದ ಕ್ಯಾಮೆರಾದ ಲೆನ್ಸ್‌ ಮೇಲೆ ಬರೆದಿದ್ದಾರೆ. ಈ ವೀಡಿಯೋವನ್ನು ಕೆನಡಾ ಸ್ಫೋರ್ಟ್ಸ್‌ ಲೀಡರ್‌ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದೆ.

    ಆಂಡ್ರೆ ರುಬ್ಲೆವ್‌ ಶುಕ್ರವಾರ ಸೆಮಿ-ಫೈನಲ್‌ ಪಂದ್ಯದಲ್ಲಿ ಹಬರ್ಟ್‌ ಹರ್ಕಾಜ್‌ ವಿರುದ್ಧ 3-6, 7-5, 7-6 (7/5) ಅಂತರದಲ್ಲಿ ಜಯಗಳಿಸಿದ್ದಾರೆ. ನಂತರ ದುಬೈನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಮತ್ತು ಏಕತೆಯನ್ನು ನಂಬಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಉಕ್ರೇನ್‌ ಮೇಲಿನ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ, ರುಬ್ಲೆವ್‌ ಎರಡೂ ರಾಷ್ಟ್ರಗಳ ಧ್ವಜಗಳ ಬಣ್ಣಗಳನ್ನು ಒಳಗೊಂಡಿರುವ ಫೀಚರ್‌ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

  • ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಕೀವ್: ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷ ವಿಶ್ವದಲ್ಲಿಯೇ ಭಾರಿ ಆತಂಕವನ್ನುಂಟು ಮಾಡಿದೆ. ಈ ಆತಂಕದ ನಡುವೆಯೇ ಹೊಸ ಜೀವನದ ಕನಸುಗಳನ್ನು ಹೊತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ ಇದೀಗ ದೇಶ ಸೇವೆಗಾಗಿ ಗನ್ ಹಿಡಿದಿದೆ.

    ಕೀವ್ ಸಿಟಿ ಕೌನ್ಸಿಲ್‍ನ ಡೆಪ್ಯೂಟಿ ಆಗಿರುವ 21 ವರ್ಷದ ಅರಿವಾ, ಸಾಫ್ಟ್ವೇರ್‌ ಎಂಜಿನಿಯರ್ ಆಗಿರುವ ಫರ್ಸಿನ್ ಅವರನ್ನು ವಿವಾಹವಾಗಿದ್ದಾರೆ. ಉಕ್ರೇನ್ ರಾಜಧಾನಿ ಕೀವ್‍ನ ಕಲ್ಯಾಣ ಮಂಟಪವೊಂದರಲ್ಲಿ  ಈ ಜೋಡಿ, ನಿನ್ನೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಆದರೆ ಇಂದು ದೇಶ ಸೇವೆಗೆ ಗನ್‌ ಹಿಡಿದು ಹೋರಾಡುತ್ತಿದ್ದಾರೆ.

    ಯಾರಿನಾ ಅರಿವಾ ಮತ್ತು ಆಕೆಯ ಸಂಗಾತಿ ಸ್ವ್ಯಾಟೋಸ್ಲಾವ್ ಫರ್ಸಿನ್ ಮೇ ತಿಂಗಳಲ್ಲಿ ಉಕ್ರೇನ್ ರಾಜಧಾನಿ ಕೀವ್‍ನಲ್ಲಿರುವ ರೆಸ್ಟೋರೆಂಟ್‍ವೊಂದರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿರುವ ಪರಿಣಾಮ ಅವರು ತಮ್ಮ ಯೋಜನೆಯನ್ನು ಬದಲಾಯಿಸಿಕೊಳ್ಳಬೇಕಾಯಿತು. ಯುದ್ಧದ ನಡುವೆಯೇ ಅವರು ಅವಸರದಲ್ಲಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ರಷ್ಯಾ ಆಕ್ರಮಣದಿಂದಾಗಿ ಉಕ್ರೇನ್ ಯುದ್ಧದ ನೆಲೆಯಾಗಿ ಮಾರ್ಪಟ್ಟಿದೆ. ಎಲ್ಲೆಡೆ ಗುಂಡು, ಕ್ಷಿಪಣಿ, ಬಾಂಬ್‍ಗಳ ಸದ್ದು ಕೇಳುತ್ತಿದೆ. ಜನ ಪ್ರಾಣಭೀತಿಯಲ್ಲಿ ಸಮಯ ಕಳೆಯುತ್ತಿದ್ದಾರೆ. ಎಷ್ಟೋ ಮಂದಿ ವಿದೇಶಿಗರು ತಮ್ಮ ತವರುಗಳಿಗೆ ಕಾಲ್ಕಿತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲೂ ಜೋಡಿಯೊಂದು ನಿರಾತಂಕವಾಗಿ ಮದುವೆ ಸಮಾರಂಭ ಏರ್ಪಡಿಸಿದ್ದು ಎಲ್ಲೆಡೆ ಚರ್ಚೆಯಾಗುತ್ತಿದೆ. ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಕಣ್ಣಲ್ಲಿ ನೀರು ತರಿಸುತ್ತಿದೆ 80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ!

    ರಷ್ಯಾ ಪಡೆಗಳು ಈಗಾಗಲೇ ಉಕ್ರೇನ್ ದೇಶದಲ್ಲಿ ಕಾಣಿಸಿಕೊಂಡಿವೆ. ಉಕ್ರೇನ್‍ನಲ್ಲಿ ಈಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಭವಿಷ್ಯ ಹೇಗಿರುತ್ತದೋ ಗೊತ್ತಿಲ್ಲ. ನಾವಿಬ್ಬರು ಈಗಲೇ ಮದುವೆಯಾಗೋಣ ಎಂದು ಯಾರಿನಾ ಅರಿವಾ ಮತ್ತು ಸ್ವ್ಯಾಟೋಸ್ಲಾವ್ ಫರ್ಸಿನ್ ಜೋಡಿ ನಿರ್ಧರಿಸಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಉಕ್ರೇನ್ ನಗರಗಳಿಂದ ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ರಸ್ತೆಗಳು ಮತ್ತು ಸುರಂಗ ಮಾರ್ಗಗಳಲ್ಲಿ ಜನರು ಉಸಿರುಗಟ್ಟಿ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶಗಳು ಈ ಜೋಡಿ ತರಾತುರಿಯಲ್ಲಿ ಮದುವೆಯಾಗಲು ಕಾರಣವಾಯಿತು.

    ಈ ಸಂದರ್ಭ ತುಂಬಾ ಭಯಾನಕವಾಗಿದೆ. ಆದರೂ ಪ್ರತಿಯೊಬ್ಬರ ಬದುಕಿನಲ್ಲೂ ಇದು ಸಂತೋಷದ ಕ್ಷಣ. ನಾವು ಹೊರಗೆ ಹೋದರೆ ಗುಂಡು ಸೈರನ್ ಶಬ್ದಗಳನ್ನು ಕೇಳುತ್ತೇವೆ. ನಮ್ಮ ಭೂಮಿಗಾಗಿ ಹೋರಾಡುವ ಕ್ಷಣವಿದು. ಈ ಸಂದರ್ಭದಲ್ಲಿ ನಾವು ಸಾಯಲೂಬಹುದು. ಅದೆಲ್ಲಕ್ಕಿಂತ ಮೊದಲು ನಾವು ಒಟ್ಟಿಗೆ ಇರಲು ಬಯಸಿದ್ದೇವೆ ಎಂದು ಅರಿವಾ ಪ್ರತಿಕ್ರಿಯಿಸಿದ್ದಾರೆ.

  • ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ

    ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು – ಅಮೆರಿಕ ಆಫರ್ ತಿರಸ್ಕರಿಸಿದ ಉಕ್ರೇನ್ ಅಧ್ಯಕ್ಷ

    ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ತೀವ್ರಗೊಳ್ಳುತ್ತಿದ್ದು, ಇದೀಗ ಅಮೆರಿಕ ನೀಡಿರುವ ಆಫರ್ ಅನ್ನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ತಿರಸ್ಕರಿಸಿದ್ದಾರೆ. ನನಗೆ ಸ್ಥಳಾಂತರ ಬೇಡ. ಇಲ್ಲೇ ಇದ್ದು ಹೋರಾಟ ಮಾಡುತ್ತೇನೆ ಎಂದು ವೀರಾವೇಶದ ಮಾತುಗಳನ್ನು ಆಡಿದ್ದಾರೆ.

    ಕೀವ್ ತೊರೆಯುವಂತೆ ಅಮೆರಿಕ ಝೆಲೆನ್‍ಸ್ಕಿಗೆ ಸಲಹೆ ನಿಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಹಿಂದೆ ಟ್ವೀಟ್ ಮಾಡಿದ್ದ ಅವರು, ರಷ್ಯಾದ ಪಡೆಗಳು ರಾತ್ರಿ ಸಮಯದಲ್ಲಿ ರಾಜಧಾನಿ ಕೀವ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನಾನು ಬಹಿರಂಗವಾಗಿ ಹೇಳಬೇಕಾಗಿದೆ. ಈ ರಾತ್ರಿ, ಹಗಲಿಗಿಂತಲೂ ಹೆಚ್ಚು ಕಷ್ಟಕರವಾಗಿರುತ್ತದೆ. ನಮ್ಮ ರಾಜ್ಯದ ಅನೇಕ ನಗರಗಳು ದಾಳಿಗೆ ಒಳಗಾಗಿವೆ ಎಂದಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ: ಉಕ್ರೇನ್‌, ರಷ್ಯಾಗೆ ತಾಲಿಬಾನ್‌ ಸಲಹೆ

    ಕೀವ್‍ನಲ್ಲಿ ವಿಶೇಷ ಗಮನ ಹರಿಸಿದ್ದೇವೆ. ನಾವು ರಾಜಧಾನಿಯನ್ನು ಕಳೆದುಕೊಳ್ಳುವುದಿಲ್ಲ. ನಾನು ನಮ್ಮ ರಕ್ಷಕರೊಂದಿಗೆ ಎಲ್ಲಾ ಪ್ರದೇಶಗಳಿಗೂ ಹೋಗುತ್ತಿದ್ದೇನೆ. ಈ ರಾತ್ರಿ ಶತ್ರುಗಳು ಅಮಾನವೀಯ ರೀತಿಯಲ್ಲಿ ನಮ್ಮನ್ನು ಹತ್ತಿಕ್ಕಲು ಎಲ್ಲಾ ಶಕ್ತಿಗಳನ್ನು ಬಳಸುತ್ತಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್ ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್ ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ.