Tag: ರಷ್ಯಾ

  • ನಮ್ಮ ಮಗನನ್ನು ನೋಡ್ಬೇಕು ಅನಿಸುತ್ತಿದೆ- ಉಕ್ರೇನ್‍ನಲ್ಲಿ ಸಿಲುಕಿರುವ ಮಗನನ್ನು ನೆನೆದು ಕಣ್ಣೀರಾಕಿದ ತಂದೆ

    ನಮ್ಮ ಮಗನನ್ನು ನೋಡ್ಬೇಕು ಅನಿಸುತ್ತಿದೆ- ಉಕ್ರೇನ್‍ನಲ್ಲಿ ಸಿಲುಕಿರುವ ಮಗನನ್ನು ನೆನೆದು ಕಣ್ಣೀರಾಕಿದ ತಂದೆ

    ಬೀದರ್: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು ಉಕ್ತಯನಲ್ಲಿ ಸಿಲುಕಿರುವ ಕನ್ನಡಿಗರು ಯಾವಾಗ ಏನಾಗುತ್ತೋ ಎಂಬ ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಅದರಲ್ಲೂ ಗಡಿ ಜಿಲ್ಲೆ ಬೀದರ್ ನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು ಅವರ ಪೋಷಕರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

    ಮಕ್ಕಳಿಂದ ಪೋಷಕರು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದು ಸದ್ಯ ಪರಿಸ್ಥಿತಿ ಬಗ್ಗೆ ಪೋಷಕರು ಆಂತಕಗೊಂಡಿದ್ದಾರೆ. ಉಕ್ರೇನ್ ನೆಲ ಮಹಡಿಯಲ್ಲಿ ನಮ್ಮ ಮಕ್ಕಳು ವಾಸವಾಗಿದ್ದು, ಸದ್ಯ ಪರಿಸ್ಥಿತಿ ತಿಳಿಯಾಗಿದೆ. ಆದಷ್ಟು ಬೇಗ ಸರ್ಕಾರ ನಮ್ಮ ಮಗನನ್ನು ಭಾರತಕ್ಕೆ ಕರೆದುಕೊಂಡು ಬಂದ್ರೆ ಒಳ್ಳೆಯದು, ಯಾಕೆಂದರೆ ನಮ್ಮ ಮಕ್ಕಳನ್ನು ನೋಡಬೇಕು ಅನಿಸುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಇತ್ತ ಉಕ್ರೇನ್ ನಲ್ಲಿ ಸಿಲುಕಿರುವ ವೈದ್ಯಕೀಯ ವಿದ್ಯಾರ್ಥಿನಿ ಜೊತೆ ಬಸವಕಲ್ಯಾಣ ತಹಶೀಲ್ದಾರ್ ವೀಡಿಯೋ ಕಾಲ್ ಮೂಲಕ ಮಾತನಾಡಿ ಅತ್ಮಸ್ಥೈರ್ಯ ತುಂಬಿದ್ದಾರೆ. ಬಸವಕಲ್ಯಾಣ ತಾಲೂಕಿನಲ್ಲಿ ನಾರಾಯಣಪೂರ್ ಗ್ರಾಮದ ವೈಷ್ಣವಿ ವಿಷ್ಣುರೆಡ್ಡಿ ಮನೆಗೆ ಭೇಟಿ ನೀಡಿದ ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗಾರ ವೈಷ್ಣವಿ ಜೊತೆ ವೀಡಿಯೋ ಕಾಲ್ ನಲ್ಲಿ ಮಾತನಾಡಿದ್ರು. ಇದನ್ನೂ ಓದಿ: ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ವೀಡಿಯೋ ಕಾಲ್ ಮಾಡಿದ ತಹಶೀಲ್ದಾರ್ ಗೆ ಉಕ್ರೇನ್ ನಲ್ಲಿರುವ ಸದ್ಯದ ಪರಿಸ್ಥಿತಿ ಬಗ್ಗೆ ವೈದ್ಯಕೀಯ ವಿದ್ಯಾರ್ಥಿನಿ ವೈಷ್ಣವಿ ವಿವರಣೆ ನೀಡಿದರು. ನೀವು ಒಂಥರಾ ಯೋಧರಿದ್ದಂತೆ, ಯಾವುದಕ್ಕೂ ಭಯಪಡೆಬೇಡಿ, ತಾಯ್ನಾಡಿಗೆ ನಿಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬರುತ್ತೆವೆ, ಯಾವ ಸಮಯದಲ್ಲಿ ಬೇಕಾದ್ರು ನನ್ನ ನಂಬರ್ ಗೆ ಫೋನ್ ಮಾಡಬಹುದು ಎಂದು ಹೇಳುವ ಮೂಲಕ ತಹಶೀಲ್ದಾರ್ ಧೈರ್ಯ ತುಂಬಿದ್ದಾರೆ.

  • Russia-Ukraine War: ಉಕ್ರೇನ್ ಜೊತೆ ಮಾತುಕತೆಗೆ ಒಪ್ಪಿದ ರಷ್ಯಾ

    Russia-Ukraine War: ಉಕ್ರೇನ್ ಜೊತೆ ಮಾತುಕತೆಗೆ ಒಪ್ಪಿದ ರಷ್ಯಾ

    ಮಾಸ್ಕೋ: ರಷ್ಯಾ ಉಕ್ರೇನ್ ನಡುವಿನ ಯುದ್ಧಕ್ಕೆ ಇತರ ರಾಷ್ಟ್ರಗಳ ವಿರೋಧದ ಬೆನ್ನಲ್ಲೆ ರಷ್ಯಾ ಉಕ್ರೇನ್ ಜೊತೆಗೆ ಮಾತುಕತೆಗೆ ನಾವು ಸಿದ್ಧ ಎಂದು ತಿಳಿಸಿದೆ ಎಂದು ಮೂಲಗಳಿಂದ ವರದಿಯಾಗಿದೆ.

    ಉಕ್ರೇನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ನಾವು ಸಿದ್ಧ, ಮಾತುಕತೆಗೆ ನಿಯೋಗ ಕಳುಹಿಸಲಿ ಎಂದು ರಷ್ಯಾ ತಿಳಿಸಿದೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಉಕ್ರೇನ್ ಸೇನೆಯು ಹೋರಾಟವನ್ನು ನಿಲ್ಲಿಸಿದ ನಂತರ ಮಾತುಕತೆಗೆ ನಾವು ಬರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ರಷ್ಯಾ ದಾಳಿ ನಡೆಸುತ್ತಿದ್ದಂತೆ ಉಕ್ರೇನ್ ಕೂಡ ಭಾರಿ ಪ್ರತಿರೋಧ ಒಡ್ಡಿದೆ. ಈಗಾಗಲೇ 1,000ಕ್ಕೂ ಹೆಚ್ಚು ರಷ್ಯಾ ಸೈನಿಕರನ್ನು ಹೊಡೆದುರುಳಿಸಿದೆ ಎಂದು ಉಕ್ರೇನ್ ತಿಳಿಸಿದೆ. ರಷ್ಯಾ ಸೇನೆ ತನ್ನ ದಾಳಿಯನ್ನು ಇನ್ನಷ್ಟು ಚುರುಕುಗೊಳಿಸಿದ್ದು ಉಕ್ರೇನ್ ರಾಜಧಾನಿ ಕೀವ್‍ನಿಂದ 7 ಕೀ.ಮೀ. ದೂರದಲ್ಲಿ ರಷ್ಯಾ ಸೇನೆ ಕೆಲವೇ ಗಂಟೆಗಳಲ್ಲಿ ಕೀವ್ ವಶಪಡಿಸಿಕೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ರಷ್ಯಾ, ಉಕ್ರೇನ್ ಮೇಲೆ ಕಳೆದ 40 ನಿಮಿಷಗಳಲ್ಲಿ ಕೀವ್‍ನಲ್ಲಿ ಅತಿ ಹೆಚ್ಚಿನ ದಾಳಿ ನಡೆಸಿದ್ದು, 40 ನಿಮಿಷ ಅಂತರದಲ್ಲಿ ಮೂರು ಡಜನ್‍ಗೂ ಅಧಿಕ ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಬಗ್ಗೆ ಯುಎಸ್ ಸೆನೆಟರ್ ರೂಬಿಯೊರಿಂದ ಮಾಹಿತಿ ಹೊರಬಿದ್ದಿದೆ. ಇತ್ತ ಖಾರ್ಕಿವ್ ಸಿಟಿಯಲ್ಲಿ ಮತ್ತೆ ಬಾಂಬ್ ಬ್ಲಾಸ್ಟ್ ಆರಂಭವಾಗಿದೆ. ಸೈರನ್ ಹಾಕಿ ಜನರನ್ನು ಅಂಡರ್ ಗ್ರೌಂಡ್‍ಗೆ ಹೋಗುವಂತೆ ಸೇನೆ ಕರೆ ನೀಡುತ್ತಿದೆ. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

  • Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಕೀವ್: ಉಕ್ರೇನ್‍ನಲ್ಲಿ ಭಾರತೀಯರನ್ನು ಪಾರುಮಾಡುವ ಸಾಹಸಗಳು ನಡೆಯುತ್ತಿವೆ. ರಷ್ಯಾ- ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ಇಲ್ಲಿಯವರೆಗೆ ತಮ್ಮ ಜೀವ ಉಳಿಸಿಕೊಳ್ಳಲು ಮೆಟ್ರೋ ಸುರಂಗಗಳಲ್ಲಿ ಅಡಗಿ ಕುಳಿತಿದ್ದರು. ಇದೀಗ ಅಡಗಿ ಕುಳಿತಿದ್ದ 240 ವಿದ್ಯಾರ್ಥಿಗಳನ್ನು 4 ಬಸ್‍ಗಳಲ್ಲಿ ಉಕ್ರೇನ್-ರೊಮೇನಿಯಾ ಗಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಭಾಗವಾಗಿ 1 ಸಾವಿರಕ್ಕೂ ಹೆಚ್ಚು ಜನರನ್ನು ಭಾರತಕ್ಕೆ ಏರ್‌ಲಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಎಲ್ಲಾ ನಾಗರಿಕ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದರಿಂದ ನೇರವಾಗಿ ಉಕ್ರೇನ್‍ನಿಂದ ಭಾರತಕ್ಕೆ ಮರಳಿ ಬರುವುದು ಅಸಾಧ್ಯವಾಗಿದೆ. ಹೀಗಾಗಿ ಭಾರತೀಯರನ್ನು ಕರೆತರಲು ಮೊದಲು ಅವರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿಂದ 13 ಕಿ.ಮೀ ನಡಿಗೆಯ ಮೂಲಕ ಏರ್‌ಲಿಫ್ಟ್ ಮಾಡಲಾಗುವ ಜಾಗದವರೆಗೆ ಹೋಗಬೇಕಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ರೊಮೇನಿಯಾ ಸರ್ಕಾರದೊಂದಿಗೆ ಭಾರತೀಯ ವಿದೇಶಾಂಗ ಇಲಾಖೆ ಸತತ ಸಂಪರ್ಕದಲ್ಲಿದೆ. ಏರ್ ಇಂಡಿಯಾ ವತಿಯಿಂದ 2 ವಿಮಾನಗಳನ್ನು ಈಗಾಗಲೇ ಕಳುಹಿಸಲಾಗಿದೆ. ಸದ್ಯ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿರುವ ಬಸ್ಸುಗಳು ರೊಮೇನಿಯಾ ತಲುಪಲು 800 ಕಿ.ಮೀ ಪ್ರಯಾಣಿಸಬೇಕಿದೆ. ಮೊದಲ ಹಂತದ ಸ್ಥಳಾಂತರ ಮುಕ್ತಾಯವಾಗಲು ಶನಿವಾರ ಮಧ್ಯಾಹ್ನದವರೆಗೂ ಸಮಯ ತಗುಲಬಹುದು ಎಂದು ವರದಿಗಳು ತಿಳಿಸಿವೆ.

  • ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಪರಿಣಾಮ ಆಗ ತಾನೇ ಹುಟ್ಟಿದ ಮಕ್ಕಳು ಕೂಡ ಭಯ ಪಡುವಂತಹ ಪರಿಸ್ಥಿತಿ ಬಂದಿದೆ. ಉಕ್ರೇನ್‍ನಲ್ಲಿ ಹಾಲುಗಲ್ಲದ ಕಂದಮ್ಮಗಳನ್ನು ಹಿಡಿದುಕೊಂಡು ತಾಯಂದಿರುವ ಪ್ರಾಣ ಭಯದಿಂದ ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ದೃಶ್ಯ ಕರುಳು ಹಿಂಡುವಂತಿದೆ.

    ರಾತ್ರೋರಾತ್ರಿ ರಷ್ಯಾ ನಡೆಸಿದ ಬಾಂಬ್, ಕ್ಷಿಪಣಿ ದಾಳಿಯಿಂದ ಉಕ್ರೇನ್ ದೇಶ ತತ್ತರಿಸಿ ಹೋಗಿದೆ. ಮೊದಲು ಸೈನಿಕ ಸ್ಥಾವರಗಳನ್ನು ಟಾರ್ಗೆಟ್ ಮಾಡಿದ್ದ ರಷ್ಯಾ ಸೇನೆ ಇದೀಗ ಜನವಸತಿ ಪ್ರದೇಶಗಳ ಮೇಲೆಯೂ ದಾಳಿ ನಡೆಸುತ್ತಿದೆ. ಭಾರೀ ಸಂಖ್ಯೆಯಲ್ಲಿ ಕಟ್ಟಡಗಳು ನಾಶವಾಗಿವೆ. ನೂರಾರು ಸೈನಿಕರು, ಜನಸಾಮಾನ್ಯರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಭೀಕರ ಶಬ್ಧದ ನಡುವೆ ಪ್ರಾಣ ಉಳಿಸಿಕೊಳ್ಳಲು ಸುರಕ್ಷಿತ ಪ್ರದೇಶಗಳಿಗೆ ಜನ ಓಡುತ್ತಿದ್ದಾರೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಕೆಲವರು ನಗರಗಳನ್ನು ಬಿಟ್ಟು ದೇಶದ ಗಡಿಯತ್ತ ತೆರಳುತ್ತಿದ್ದಾರೆ. ಮತ್ತೆ ಕೆಲವರು ಮೆಟ್ರೋ ಸುರಂಗಗಳಲ್ಲಿ, ಮನೆಗಳ ನೆಲಮಹಡಿಗಳಲ್ಲಿ ಅಡಗಿ ಕುಳಿತಿದ್ದಾರೆ. ಅದರಲ್ಲೂ ಹುಟ್ಟಿದ ಮೊದಲ ದಿನವೇ ಹಸುಕೂಸುಗಳನ್ನು ಹಿಡಿದುಕೊಂಡು ತಾಯಂದಿರು ನೆಲಮಹಡಿಯಲ್ಲಿ ಬಂಧಿಯಾಗಿರುವುದು ಆತಂಕ ಮೂಡಿಸಿದೆ. ಈಗ ತಾನೆ ಜಗತ್ತಿಗೆ ಕಾಲಿಟ್ಟ ಪುಟ್ಟ ಕಂದಮ್ಮಗಳ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    https://twitter.com/incrediblind/status/1497069811288797186

    ಇತ್ತ ರಷ್ಯಾ ದಾಳಿಗೆ ಉಕ್ರೇನ್ ಸೇನೆ ಕೂಡ ತಿರುಗೇಟು ನೀಡಲು ಪ್ರಯತ್ನಿಸುತ್ತಿದೆ. ರಷ್ಯಾದ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿದೆ. ಆದರೆ ಆ ವಿಮಾನ ಕೀವ್‍ನ ಎರಡು ಕಟ್ಟಡಗಳ ಮೇಲೆ ಬಿದ್ದು ಎರಡು ಕಡೆಯೂ ಸಾವು ನೋವು ಉಂಟಾಗಿದೆ. ರಷ್ಯಾದ ಕೆಲವು ಸೈನಿಕರನ್ನು ವಶಕ್ಕೆ ಕೂಡ ಪಡೆದಿದೆ. ರಷ್ಯಾದ 1000ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

     

  • ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ ರಾಜಧಾನಿ ಬುಕಾರೆಸ್ಟ್‍ಗೆ 2 ವಿಮಾನಗಳನ್ನು ಕಳುಹಿಸಲು ಯೋಜಿಸಿದೆ.

    ಉಕ್ರೇನ್‍ನ ವಾಯುಪ್ರದೇಶವನ್ನು ಗುರುವಾರ ಮುಚ್ಚಲಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿ ಭಾರತಿಯ ಪ್ರಯಾಣಿಕರು ಮಾತ್ರವಲ್ಲದೇ ಇತರ ದೇಶದ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಪ್ರಯಾಣಿಕರು ರಸ್ತೆಯ ಮೂಲಕ ಉಕ್ರೇನ್-ರೊಮೇನಿಯಾ ಗಡಿ ತಲುಪಿದರೆ, ಅಲ್ಲಿಂದ ಭಾರತ ಸರ್ಕಾರ ಅಧಿಕಾರಿಗಳು ಅವರನ್ನು ಬುಕಾರೆಸ್ಟ್‍ಗೆ ಕರೆದೊಯ್ಯಲಿದ್ದಾರೆ. ಬಳಿಕ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿಸುವಂತೆ ಏರ್ ಇಂಡಿಯಾ ಯೋಜಿಸಿದೆ. ಶನಿವಾರ 2 ಏರ್ ಇಂಡಿಯಾ ವಿಮಾನಗಳು ಬುಕಾರೆಸ್ಟ್‍ನಿಂದ ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 20 ಸಾವಿರ ಭಾರತೀಯರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ.

    ಉಕ್ರೇನ್ ರಾಜಧಾನಿ ಕೀವ್‍ನಿಂದ ರೊಮೇನಿಯಾ ಗಡಿಗೆ ಸುಮಾರು 600 ಕಿ.ಮೀ ದೂರ ಇದೆ. ರಸ್ತೆ ಮಾರ್ಗವಾಗಿ ಕೀವ್‍ನಿಂದ ರೊಮೇನಿಯಾ ಗಡಿ ತಲುಪಲು 8 ರಿಂದ 11 ಗಂಟೆ ತಗುಲಬಹುದು. ಉಕ್ರೇನ್-ರೊಮೇನಿಯಾ ಗಡಿಯಿಂದ ಬುಕಾರೆಸ್ಟ್ 500 ಕಿ.ಮೀ ಅಂತರದಲ್ಲಿದೆ. ಇದರ ಪ್ರಯಾಣಕ್ಕೆ ಸುಮಾರು 7 ರಿಂದ 9 ಗಂಟೆ ತಗುಲಬಹುದು. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಈಗಾಗಲೇ ಉಕ್ರೇನ್‍ನಲ್ಲಿ ರಷ್ಯಾ ಬಾಂಬುಗಳ ಸುರಿಮಳೆ ಹರಿಸಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ದೇಶಗಳು ರಷ್ಯಾಗೆ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರೂ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ.

  • ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ವಾಷಿಂಗ್ಟನ್: ನಾವು ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ತಿಳಿಸಿದ್ದಾರೆ.

    ಉಕ್ರೇನ್ ಸೇನೆಯು ದಾಳಿಯನ್ನು ನಿಲ್ಲಿಸಿದ ನಂತರ, ನಾವು ಅವರ ಜೊತೆ ಮಾತುಕತೆಗೆ ಸಿದ್ಧರಿದ್ದೇವೆ. ಈ ವೇಳೆ ಪುಟಿನ್ ಅವರು ಸಶಸ್ತ್ರೀಕರಣದ ಕುರಿತು ಮಾತುಕತೆ ನಡೆಸಲು ಸಿದ್ಧರಾಗಿದ್ದಾರೆ ಎಂದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. ಇದನ್ನೂ ಓದಿ:  ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಹಿನ್ನೆಲೆ, ಖಾರ್ಕಿವ್ ಸಿಟಿಯಲ್ಲಿ ಮತ್ತೆ ಬಾಂಬ್ ಬ್ಲಾಸ್ಟ್ ಆರಂಭವಾಗಿದೆ. ಈ ಹಿನ್ನೆಲೆ ಸೈರನ್ ಹಾಕಿ ಜನರನ್ನ ಅಂಡರ್ ಗ್ರೌಂಡ್ ಹೋಗುವಂತೆ ಮಾಹಿತಿ ನೀಡಲಾಗಿದೆ. ಹೀಗಾಗಿ ಜನರು ಸೈರನ್ ಸೌಂಡ್ ಕೇಳಿ ಮತ್ತೆ ಅಂಡರ್ ಗ್ರೌಂಡ್ ಗೆ ವಾಪಸ್ ಆಗಿದ್ದಾರೆ.

    ಉಕ್ರೇನ್ ನ ಕೈವ್ ಭಾಗದಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಕಳೆದ 40 ನಿಮಿಷಗಳಲ್ಲಿ ಕೈವ್‍ನಲ್ಲಿ ಅತಿ ಹೆಚ್ಚಿನ ದಾಳಿ ನಡೆಯುದೆ. 40 ನಿಮಿಷ ಅಂತರದಲ್ಲಿ ಮೂರು ಡಜನ್ಗೂ ಅಧಿಕ ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಬಗ್ಗೆ ಯುಎಸ್ ಸೆನೆಟರ್ ರೂಬಿಯೊರಿಂದ ಮಾಹಿತಿ ಸಿಕ್ಕಿದೆ.

    ಇಂದು ರೊಮೇನಿಯಾದ ಬುಕಾರೆಸ್ಟ್ ಗೆ ಎರಡು ವಿಮಾನಗಳು, ನಾಳೆ ಹಂಗೇರಿಯ ಬುಡಾಪೆಸ್ಟ್ ಗೆ ಒಂದು ವಿಮಾನ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಭಾರತ ಸರ್ಕಾರ ಕೂಡ ವಿಶೇಷ ವಿಮಾನಗಳನ್ನು ಕಳುಹಿಸಲಿದೆ ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

  • Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ಸಿಕ್ಕ ಸಿಕ್ಕಲ್ಲಿ ರಕ್ತಪಾತ ಆರಂಭಿಸಿದೆ. ಉಕ್ರೇನ್ ಸೈನಿಕರ ಯೂನಿಫಾರ್ಮ್ ಧರಿಸಿ ರಷ್ಯಾದ ಮಿಲಿಟರಿ ಪಡೆ ಕೀವ್‍ನತ್ತ ಎಂಟ್ರಿ ಕೊಟ್ಟಿರುವ ಬಗ್ಗೆ ವರದಿಯಾಗಿದೆ.

    ರಷ್ಯಾದ ಮಿಲಿಟರಿ ಪಡೆಯ ಸೈನಿಕರು ಉಕ್ರೇನ್ ಸೈನ್ಯವನ್ನು ಹೊಳುವ ಯೂನಿಫಾರ್ಮ್ ಧರಿಸಿ ರಷ್ಯಾದ ಕೀವ್‍ಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಉಕ್ರೇನ್ ಮಿಲಿಟರಿ ಪಡೆ ಉಕ್ರೇನ್ ಸೈನಿಕರನ್ನು ವಶಕ್ಕೆ ಪಡೆದು ಮಿಲಿಟರಿ ವಾಹನವನ್ನು ವಶಕ್ಕೆ ಪಡೆದಿದೆ ಎಂದು ಉಕ್ರೇನ್‍ನ ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಕ್ಷಣ ಕ್ಷಣಕ್ಕೂ ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಳಿಸುತ್ತಿದ್ದು, ಸಿಕ್ಕ ಸಿಕ್ಕಲ್ಲಿ ಉಕ್ರೇನ್ ಯೋಧರ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರು ಬರಲಾರಂಭಿಸಿದ್ದಾರೆ. ಉಕ್ರೇನ್‍ನ ಕೀವ್‍ನತ್ತ ರಷ್ಯಾದ ಯುದ್ಧ ಬಂಕರ್‌ಗಳು ಸೇನಾ ವಾಹನದಲ್ಲಿ ಪ್ರವೇಶಿಸುತ್ತಿದ್ದು, ಉಕ್ರೇನ್ ಸೈನಿಕರು ಮತ್ತು ರಷ್ಯಾ ಸೈನಿಕರ ಮಧ್ಯೆ ಗುಂಡಿನ ದಾಳಿ ಕೂಡ ನಡೆಯುತ್ತಿದೆ. ಈಗಾಗಲೇ ಉಕ್ರೇನ್‍ನ ಕಾಖೋವ್ಕಾದ ಜಲವಿದ್ಯುತ್ ಸ್ಥಾವರವನ್ನು ರಷ್ಯಾ ಸೇನೆ ವಶಕ್ಕೆ ಪಡೆದುಕೊಂಡು ರಷ್ಯಾ ಧ್ವಜವನ್ನು ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿದೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಈಗಾಗಲೇ ಯುರೋಪ್ ಸೇರಿದಂತೆ ಹಲವು ದೇಶಗಳಿಂದ ವಿರೋಧ ವ್ಯಕ್ತವಾಗಿದೆ. ಈ ನಡುವೆ ಉಕ್ರೇನ್ ಮೇಲೆ ಸೈನ್ಯ ದಾಳಿ ನಡೆಸಿರುವ ರಷ್ಯಾ ಕೈವಾದಲ್ಲಿ ವಾಯು ನೆಲೆ ವಶಪಡಿಸಿಕೊಂಡಿದ್ದು, ಕೈವಾ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಸಾಧ್ಯತೆ ಇದೆ. ಈ ನಡುವೆ ಉಕ್ರೇನ್‍ಗೆ ಹಲವು ದೇಶಗಳಿಂದ ನೆರವು ಘೋಷಣೆ ಸಾಧ್ಯತೆ ಇದ್ದು, ಉಕ್ರೇನ್‍ಗೆ ಇತರ ದೇಶಗಳಿಂದ ಸೇನಾ ಬೆಂಬಲ ಘೋಷಣೆಯಾದರೇ ಯುದ್ಧ ಮತ್ತೊಂದು ಸ್ವರೂಪ ಪಡೆಯಲಿದೆ.  ಇದನ್ನೂ ಓದಿ: ಉಕ್ರೇನ್ ಪವರ್ ಪ್ಲಾಂಟ್‍ನಲ್ಲಿ ರಷ್ಯಾದ ಧ್ವಜ ಹಾರಿಸಿದ ಮಿಲಿಟರಿ ಪಡೆ

  • ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಕೀವ್: ರಷ್ಯಾ ಉಕ್ರೇನ್ ಮೇಲೆ ಎರಗಿ ಬಾಂಬುಗಳ ಸುರುಮಳೆಗೈದಿದೆ. ಮಿಲಿಟರಿ ನೆಲೆ ನಾಶವಾಗಿ ನೂರಾರು ಸೈನಿಕರು ಈಗಾಗಲೇ ಹತರಾಗಿದ್ದಾರೆ. ಅದೆಷ್ಟೋ ಸೈನಿಕರು ಇನ್ನೂ ತಮ್ಮ ಉಸಿರನ್ನು ಬಿಗಿ ಹಿಡಿದು ದೇಶದ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ.

    ಮುಂದೊಂದು ದಿನದ ಬದುಕಿರುತ್ತೇವೋ ಇಲ್ಲವೋ ಎಂದು ಭಾವುಕನಾಗಿ ಯೋಧನೊಬ್ಬ ತನ್ನ ತಂದೆ ತಾಯಿಗೆ ಸಂದೇಶವನ್ನು ಕಳುಹಿಸಿರುವ ವೀಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ನೋಡಿದರೆ ಎಂಥವರ ಕರುಳು ಕೂಡ ಚುರುಕ್ ಅನ್ನದೇ ಇರಲಾರದು. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    13 ಸೆಕೆಂಡುಗಳ ವೀಡಿಯೋದಲ್ಲಿ ಉಕ್ರೇನ್ ಸೈನಿಕ ತನ್ನ ತಂದೆ-ತಾಯಿಗೆ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಭಾವುಕನಾಗಿ ಹೇಳುವುದನ್ನು ನೋಡಬಹುದಾಗಿದೆ. ಯೋಧನ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕೂಡ ಯೋಧನ ಸ್ಥಿತಿಗೆ ಮರುಗಿದ್ದಾರೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಯೋಧನಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ವಯಸ್ಸು ಯಾವುದೇ ಇರಲಿ. ಯಾರೊಬ್ಬರಿಗೂ ಇಂತಹ ಸ್ಥಿತಿ ಬರಬಾರದು ಎಂದು ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:  ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ವೀಡಿಯೋ ಮಾಡಿರುವ ಯೋಧ ಯಾರು ಏನು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಆದರೆ ವಿಶ್ವದಾದ್ಯಂತ ನೆಟ್ಟಿಗರು ಅವರ ಸ್ಥಿತಿಗೆ ದುಃಖ ವ್ಯಕ್ತಪಡಿಸಿದ್ದಾರೆ.

  • ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಕೀವ್: ದಾಳಿ ನಡೆಸುತ್ತಾ ಉಕ್ರೇನ್‌ ಗಡಿ ದಾಟಿ ಒಳಪ್ರವೇಶಿಸಿದ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ ಹಾಕಿದ್ದಾರೆ. ರಷ್ಯಾ ಸೈನಿಕನೆದುರು ಧೈರ್ಯವಾಗಿ ನಿಂತ ಉಕ್ರೇನ್‌ ಮಹಿಳೆ, ನಿಮ್ಮ ದೇಶಕ್ಕೆ ವಾಪಸ್‌ ಹೋಗಿ ಎಂದು ಕೂಗಾಡಿದ್ದಾರೆ.

    ಉಕ್ರೇನ್‌ ಗಡಿ ಪ್ರವೇಶಿಸಿದ ಶಸಸ್ತ್ರಧಾರಿ ಸೈನಿಕನ ವಿರುದ್ಧ ಮಹಿಳೆ ಕೂಗಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ವೀಡಿಯೋದಲ್ಲಿರುವ ಮಹಿಳೆಯನ್ನು ʼನಿರ್ಭಯಾʼ ಎಂದು ಕರೆಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ಗಡಿ ಪ್ರವೇಶಿಸಿದ ಸೈನಿಕನಿಗೆ, ನೀನು ಯಾರು ಎಂದು ಮಹಿಳೆ ಪ್ರಶ್ನಿಸಿದ್ದಾರೆ. ಅದಕ್ಕೆ ಸೈನಿಕ, ನಾವು ಇಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ದಯವಿಟ್ಟು ನೀವು ಇಲ್ಲಿಂದ ಹೊರಡಿ ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡು ಮಾತನಾಡಿರುವ ಮಹಿಳೆ, ನೀವಿಲ್ಲಿ ಏನು ಮಾಡುತ್ತಿದ್ದೀರಾ? ನೀವ್ಯಾರು ನಮಗೆ ಬೇಡ ಎಂದು ಗರಂ ಆಗಿದ್ದಾರೆ.

    ಮಿಷನ್‌ ಗನ್‌ ಹಿಡಿದಿದ್ದ ಸೈನಿಕ ಮಹಿಳೆಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾನೆ. ಅದಕ್ಕೆ ಸುಮ್ಮನಾಗದ ಮಹಿಳೆ, ನೀನೊಬ್ಬ ಆಕ್ರಮಣಕಾರಿ, ನೀನು ಸರ್ವಾಧಿಕಾರಿ. ಶಸಸ್ತ್ರಗಳನ್ನು ಹಿಡಿದುಕೊಂಡು ನಮ್ಮ ದೇಶದಲ್ಲಿ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಈ ಸೂರ್ಯಕಾಂತಿ ಬೀಜಗಳನ್ನು ತೆಗೆದುಕೊಳ್ಳಿ. ಅವನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ. ನೀವೆಲ್ಲ ಇಲ್ಲಿ ಮಲಗಿದಾಗ ಕನಿಷ್ಠ ಪಕ್ಷ ಸೂರ್ಯಕಾಂತಿಯಾದರೂ ಬೆಳೆಯುತ್ತದೆ ಎಂದು ಸೈನಿಕನ ವಿರುದ್ಧ ಮಹಿಳೆ ಮಾರ್ಮಿಕವಾಗಿ ನುಡಿದಿದ್ದಾರೆ. ಸೂರ್ಯಕಾಂತಿ ಹೂ ಉಕ್ರೇನ್‌ ದೇಶದ ರಾಷ್ಟ್ರೀಯ ಹೂ ಆಗಿದೆ.

    ಈ ವೀಡಿಯೋವನ್ನು ಅಲ್ಲೇ ಓಡಾಡುತ್ತಿದ್ದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ನಂತರ ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಗುರುವಾರ ಬೆಳಗ್ಗೆ ಉಕ್ರೇನ್‌ ಮೇಲೆ ಯುದ್ಧವನ್ನು ಘೋಷಿಸಿದರು. ದಾಳಿಯಿಂದಾಗಿ ಉಕ್ರೇನ್‌ನಲ್ಲಿ ಈವರೆಗೆ 137 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ರಷ್ಯಾ ದಾಳಿಗೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ರಷ್ಯಾ ತನ್ನ ಕಾರ್ಯಾಚರಣೆ ಮುಂದುವರಿಸಿದೆ.

  • ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ವಾಷಿಂಗ್ಟನ್: ರಷ್ಯಾ ಉಕ್ರೇನ್ ವಿರುದ್ಧ ನಿನ್ನೆಯಿಂದ ದಾಳಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಷ್ಯಾ ಸರ್ಕಾರದ ವಿರುದ್ಧ ವಿಶ್ವದಾದ್ಯಂತ ಟೆಕ್ಕಿಗಳು `ಸೈಬರ್ ವಾರ್’ ಘೋಷಣೆ ಮಾಡಿದ್ದಾರೆ.

    ಅನಾನಿಮಸ್ ಹ್ಯಾಕಿಂಗ್ ಗ್ರೂಪ್, ರಷ್ಯಾ ಸರ್ಕಾರದ ವಿರುದ್ಧ ಸೈಬರ್ ವಾರ್ ಮಾಡುವುದಾಗಿ ನಿನ್ನೆ ರಾತ್ರಿ ಘೋಷಿಸಿದೆ. ಬ್ರಿಟನ್‍ನಲ್ಲಿ ಪ್ರಸಾರವಾಗುವ ಕ್ರೆಮ್ಲಿನ್ ಬೆಂಬಲಿತ ಟಿವಿ ಚಾನೆಲ್ RT ವೆವ್‍ ಸೆಟ್ ಅನ್ನು ಹ್ಯಾಕ್ ಮಾಡಿದೆ. ಸಂಬಂಧಪಟ್ಟವರು ವೆವ್‍ ಸೆಟ್ ಪ್ರವೇಶಿಸಲು ಪ್ರಯತ್ನಿಸಿದಾಗ, ಇನ್‍ಆಕ್ಷೆಸಬಲ್ ಆಗಿದೆ. ಅಲ್ಲದೇ ವೆವ್‍ ಸೆಟ್ ಎರರ್ ಎಂದು ತೋರಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    Hacking Collective Anonymous Declares 'Cyber War' Against Vladimir Putin's Government

    ಪುಟಿನ್ ಸರ್ಕಾರದ ವಿರುದ್ಧ ‘ಅನಾನಿಮಸ್’ ಸೈಬರ್ ವಾರ್ ಘೋಷಣೆ ಮಾಡಿದ್ದು, ರಷ್ಯಾದ ಪ್ರಚಾರ ಕೇಂದ್ರ RT ನ್ಯೂಸ್ ವೆವ್‍ ಸೆಟ್ ತೆಗೆದುಕೊಳ್ಳಲಾಗಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ. ‘ಅನಾನಿಮಸ್’ ಈ ಹಿಂದೆ ಕು ಕ್ಲುಕ್ಸ್ ಕ್ಲಾನ್ ಮತ್ತು ಇಸ್ಲಾಮಿಕ್ ಉಗ್ರಗಾಮಿಗಳ ಗುಂಪಿಗೆ ಸೇರಿದವರನ್ನು ಗುರಿಯಾಗಿಸಿಕೊಂಡಿದ್ದಾರೆ.

    ಸೋಶಿಯಲ್ ಮೀಡಿಯಾದಲ್ಲಿ ಜನರು ಈ ಕುರಿತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನೆಟ್ಟಿಗರೊಬ್ಬರು, ಥ್ಯಾಂಕ್ಸ್ `ಅನಾನಿಮಸ್’, ಅವರ ಹಣಕಾಸು ಬರಿದಾಗುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀವು ಅದ್ಭುತ, ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಥ್ಯಾಂಕ್ಸ್, ಲವ್ ಯೂ, ಇದು ನಿಜವಾಗಿಯೂ ಖುಷಿಯಾದ ವಿಷಯ ಎಂದು ಹೇಳಿದ್ದಾರೆ.

    ಪ್ರಸ್ತುತ ಈ ಹ್ಯಾಕರ್ಸ್ ‘ಅನಾನಿಮಸ್’ ಎಂದು ಹೆಸರಿಟ್ಟುಕೊಂಡಿದ್ದಾರೆ. ಅವರನ್ನು ಗೈ ಫಾಕ್ಸ್ ಮುಖವಾಡಗಳಿಂದ ಗುರುತಿಸಲಾಗುತ್ತದೆ. ಕಳೆದ ವರ್ಷ ಜುಲೈನಲ್ಲಿ, ಟೆಸ್ಲಾ ಸಂಸ್ಥಾಪಕ ಎಲೋನ್ ಮಸ್ಕ್ ಅವರಿಗೂ ಹ್ಯಾಕರ್‍ಗಳು ಎಚ್ಚರಿಕೆ ನೀಡಿದ್ದರು. ಕ್ರಿಪ್ಟೋಕರೆನ್ಸಿ ಮಾರುಕಟ್ಟೆಗಳ ಮೇಲೆ ಹೆಚ್ಚಿನ ಅಧಿಕಾರವನ್ನು ಹೊಂದಿದ್ದೇವೆ ಎಂಬ ಮಸ್ಕ್ ಹೇಳಿಕೆಯನ್ನು ಗುರಿಯಾಗಿಸಿಕೊಂಡು ಅನಾನಿಮಸ್ ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ಸೈಬರ್ ಯುದ್ಧ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ರಷ್ಯಾವನ್ನು ವ್ಯವಸ್ಥಿತ ಹ್ಯಾಕಿಂಗ್ ಪ್ರಯತ್ನಗಳಿಗೆ ಒಳಪಡಿಸುವ ನಿರೀಕ್ಷೆಯನ್ನು ಹುಟ್ಟುಹಾಕಲಾಗಿದೆ.