ಮಾಸ್ಕ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತನ್ನ ರಾಷ್ಟ್ರ ಧ್ವಜವನ್ನು ಉಕ್ರೇನ್ನಲ್ಲಿರುವ ಕಾಖೋವ್ಕಾ ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.
ಉಕ್ರೇನ್ನ ಕಾಖೋವ್ಕಾದಲ್ಲಿರುವ ಡ್ನೀಪರ್ ನದಿಗೆ ಅಡ್ಡಲಾಗಿ ಡ್ಯಾಮ್ ಕಟ್ಟಿ ಜಲ ವಿದ್ಯತ್ ಸ್ಥಾವರವನ್ನು ಸ್ಥಾಪಿಸಿತ್ತು. ಈ ವಿದ್ಯುತ್ ಸ್ಥಾವರದಿಂದ ಉಕ್ರೇನ್ನ ಸಾಕಷ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತಿತ್ತು. ಇದೀಗ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ಮಿಲಿಟರಿ ಪಡೆ ಪವರ್ ಪ್ಲಾಂಟ್ ವಶಪಡಿಸಿಕೊಂಡು ರಷ್ಯಾದ ರಾಷ್ಟ್ರ ಧ್ವಜವನ್ನು ಹಾರಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್ಗೆ ಉಕ್ರೇನ್ ಕರೆ!
ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಹತರಾಗಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೋದಲ್ಲಿ ಈ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಮೃತರನ್ನು ಹೀರೋಗಳು ಎಂದು ಕರೆದಿದ್ದಾರೆ. ರಷ್ಯಾ ದಾಳಿ ಪರಿಣಾಮವಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕೀವ್: ಯುದ್ಧ ವಿರೋಧಿ ಮತ್ತು ಮಾನವೀಯ ಕಾರಣಗಳಿಗಾಗಿ ಸದಾ ಮಿಡಿಯುವ ಹಾಲಿವುಡ್ ತಾರೆ, ಆಸ್ಕರ್ ಪ್ರಶಸ್ತಿ ವಿಜೇತ ಸೀನ್ ಪೆನ್ ಉಕ್ರೇನ್ನಲ್ಲಿ ನಡೆಯುತ್ತಿರುವ ರಷ್ಯಾದ ಆಕ್ರಮಣದ ಕುರಿತು ಸಾಕ್ಷ್ಯ ಚಿತ್ರ ಮಾಡಲು ಮುಂದಾಗಿದ್ದಾರೆ.
ಉಕ್ರೇನ್ನ ಸರ್ಕಾರಿ ಅಧಿಕಾರಿಗಳು ತಮ್ಮ ನೆಲದಲ್ಲಿ ನಡೆಯುತ್ತಿರುವ ಪ್ರಸ್ತುತ ಬಿಕ್ಕಟ್ಟಿನ ಕುರಿತು ಮಾತನಾಡುತ್ತಿದ್ದ ಪತ್ರಿಕಾಗೋಷ್ಠಿಯಲ್ಲೀ ಸೀನ್ ಭಾಗಿಯಾಗಿದ್ದರು. ಸಾಕ್ಷ್ಯ ಚಿತ್ರಕ್ಕೆ ಬೇಕಾದ ವಿವರಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಆಲಿಸುತ್ತಿದ್ದರು. ಈ ಸಾಕ್ಷ್ಯ ಚಿತ್ರವು ಡಾಕ್ ವೈಸ್ ವಲ್ರ್ಡ್ ನ್ಯೂಸ್ ಮತ್ತು ಎಂಡೀವರ್ ಕಂಟೆಂಟ್ನ ಸಹಯೋಗದೊಂದಿಗೆ ವೈಸ್ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಲಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್ಗೆ ಉಕ್ರೇನ್ ಕರೆ!
ಈ ಮೊದಲೇ ಸೀನ್ ಸಾಕ್ಷ್ಯ ಚಿತ್ರಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊನೆಯದಾಗಿ ನವೆಂಬರ್ 2021ರಲ್ಲಿ ಉಕ್ರೇನ್ಗೆ ಭೇಟಿ ನೀಡಿದ್ದ ಅವರು, ಈ ವೇಳೆ ಉಕ್ರೇನ್ ದೇಶದ ಮಿಲಿಟರಿ ಪ್ರತಿಷ್ಟಾನಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು ಎಂದು ವರದಿಯಾಗಿದೆ. ಅಲ್ಲದೇ, ಪೆನ್ ಅವರು ಉಕ್ರೇನಿಯನ್ ರಾಯಭಾರ ಕಚೇರಿಗೆ ಭೇಟಿ ನೀಡಿದ್ದರು. ಉಕ್ರೇನಿಯನ್ ಉಪ ಪ್ರಧಾನಿ ಐರಿನಾ ವೆರೆಶ್ಚುಕ್ ಜೊತೆಗೆ ಸ್ಥಳೀಯ ಪತ್ರಕರ್ತರು ಮತ್ತು ಉಕ್ರೇನಿಯನ್ ಮಿಲಿಟರಿಯ ಸದಸ್ಯರೊಂದಿಗೆ ಅವರು ಮಾತನಾಡಿ ಸಾಕಷ್ಟು ವಿಷಯ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಉಕ್ರೇನ್ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಉಕ್ರೇನಿಯನ್ ರಾಯಭಾರ ಕಚೇರಿಯು ಈ ಚಲನಚಿತ್ರ ನಿರ್ಮಾಪಕರನ್ನು ಶ್ಲಾಘಿಸಿ ಹೇಳಿಕೆ ನೀಡಿದ್ದು, ಉಕ್ರೇನ್ನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಘಟನೆಗಳನ್ನು ರೆಕಾರ್ಡ್ ಮಾಡಲು ಮತ್ತು ನಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಜಗತ್ತಿಗೆ ಸತ್ಯವನ್ನು ತಿಳಿಸಲು ವಿಶೇಷವಾಗಿ ಪೆನ್ ಅವರು ಕೈವ್ಗೆ ಬಂದಿದ್ದಾರೆ ಎಂದು ತಿಳಿಸಿತು. ‘ಉಕ್ರೇನ್ಗೆ ಬೆಂಬಲ ನೀಡುವವರಲ್ಲಿ ಸೀನ್ ಪೆನ್ ಕೂಡಾ ಒಬ್ಬರಾಗಿದ್ದಾರೆ. ಅವರ ಧೈರ್ಯ ಮತ್ತು ಪ್ರಾಮಾಣಿಕತೆಗೆ ನಮ್ಮ ದೇಶವು ಅವರಿಗೆ ಸದಾ ಕೃತಜ್ಞರಾಗಿರಬೇಕು’ ಎಂದು ಶ್ಲಾಘಿಸಿದೆ.
ಕೀವ್: ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಹತರಾಗಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೋದಲ್ಲಿ ಈ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಮೃತರನ್ನು ಹೀರೋಗಳು ಎಂದು ಕರೆದಿದ್ದಾರೆ. ರಷ್ಯಾ ದಾಳಿ ಪರಿಣಾಮವಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್ಗೆ ಉಕ್ರೇನ್ ಕರೆ!
ಉಕ್ರೇನ್ ಮಿಲಿಟರಿಯನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುವುದು. ಅಲ್ಲಿನ ಜನತೆಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ರಷ್ಯಾ ಹೇಳಿತ್ತು. ಆದರೆ ದೇಶದ ಪ್ರಜೆಗಳ ನೆಲೆಗಳು ಸಹ ದಾಳಿಯಿಂದ ತತ್ತರಿಸಿ ಹೋಗಿವೆ ಎಂದು ಉಕ್ರೇನಿಯನ್ ಅಧ್ಯಕ್ಷರು ಗಂಭೀರ ಆರೋಪ ಮಾಡಿದ್ದಾರೆ.
ಅವರು ಜನರನ್ನು ಕೊಲ್ಲುತ್ತಿದ್ದಾರೆ. ಶಾಂತಿಯಿಂದ ಕೂಡಿದ್ದ ನಗರಗಳನ್ನು ಮಿಲಿಟರಿ ಗುರಿಗಳಾಗಿ ಪರಿವರ್ತಿಸುತ್ತಿದ್ದಾರೆ. ಇದು ಮೋಸ, ಕ್ಷಮಿಸಲು ಅರ್ಹವಲ್ಲದ ನಡೆ ಎಂದು ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ಗೆ ಆರ್ಥಿಕ ನೆರವು ನೀಡಲು ಸಿದ್ಧ: ವಿಶ್ವ ಬ್ಯಾಂಕ್
ಒಡೆಸ್ಸಾ ಪ್ರದೇಶದ ಮಿನಿ ದ್ವೀಪದಲ್ಲಿ ಎಲ್ಲಾ ಗಡಿ ಕಾವಲುಗಾರರನ್ನು ಗುರುವಾರ ಕೊಲ್ಲಲಾಯಿತು. ದ್ವೀಪವನ್ನು ರಷ್ಯನ್ನರು ವಶಪಡಿಸಿಕೊಂಡಿದ್ದಾರೆ ಎಂದು ಉಕ್ರೇನ್ನ ಗಡಿ ಸಿಬ್ಬಂದಿ ವರದಿ ಮಾಡಿದ್ದಾರೆ ಎಂದು ವೊಲೊಡಿಮಿರ್ ತಿಳಿಸಿದ್ದಾರೆ. ಇದನ್ನೂ ಓದಿ: Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?
ನವದೆಹಲಿ: ಭಾರತೀಯರು ಸೇರಿ ವಿಶ್ವದಲ್ಲೇ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್, ರಷ್ಯಾಗೆ ಯಾಕೆ ಹೋಗುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಮಾಹಿತಿ.
ಉನ್ನತ ಶಿಕ್ಷಣ ನೀಡುವಲ್ಲಿ ಭಾರತವೂ ಖ್ಯಾತಿ ಹೊಂದಿರುವಾಗ ಸಾವಿರಾರು ವಿದ್ಯಾರ್ಥಿಗಳು ಏಕೆ ರಷ್ಯಾ ಮತ್ತು ಉಕ್ರೇನ್ಗೆ ಮೆಡಿಕಲ್ ಮಾಡಲು ಹೋಗುತ್ತಾರೆ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಬರುವುದು ಸಹಜವಾಗಿದೆ. ಇದಕ್ಕೆ ಉತ್ತರ ಇಲ್ಲಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್ಗೆ ಉಕ್ರೇನ್ ಕರೆ!
ಭಾರತದಲ್ಲಿ ಸರ್ಕಾರಿ ಕೋಟಾದಡಿ ಸೀಟು ಸಿಕ್ಕವರು ಮೆಡಿಕಲ್ ಶಿಕ್ಷಣವನ್ನು ಸುಲಭವಾಗಿ ಪಡೆಯಬಹುದು. ಒಂದು ವೇಳೆ ಸಿಗದಿದ್ದರೆ ಖಾಸಗಿ ಕಾಲೇಜು ಕೇಳಿದಷ್ಟು ಹಣ ಕಟ್ಟಿ ಓದಬೇಕಾಗುತ್ತೆ. ಆದರೆ ಎಲ್ಲ ಜನರು ಸ್ಥಿತಿವಂತರಾಗಿರುವುದಿಲ್ಲ. ಭಾರತಕ್ಕೆ ಹೋಲಿಸಿದರೆ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಶುಲ್ಕ ಬಹಳ ಕಡಿಮೆ ಇರುತ್ತೆ. ಇಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಶೇ.60 ರಿಂದ 70ರಷ್ಟು ಕಡಿಮೆ ಅಗ್ಗದಲ್ಲಿ ಶುಲ್ಕವಿರುತ್ತದೆ.
ಅಲ್ಲದೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡರೆ ಉಕ್ರೇನ್ ನಲ್ಲಿ ಸೀಟ್ ಪಡೆಯುವುದು ಸುಲಭದ ಕೆಲಸ. ಭಾರತಕ್ಕೆ ಹೋಲಿಸಿದರೆ ಉಕ್ರೇನ್ನಲ್ಲಿ ಜೀವನ ನಿರ್ವಹಣೆ ವೆಚ್ಚವೂ ಕಡಿಮೆ ಇರುತ್ತೆ. ಇದರ ಜೊತೆಗೆ ಇಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಯುನೆಸ್ಕೋ, ಯುರೋಪಿಯನ್ ದೇಶಗಳ ಮಾನ್ಯತೆ ಇದೆ.
ಉಕ್ರೇನ್ ನಲ್ಲಿ ವಿದ್ಯಾರ್ಥಿಗಳ ಜೀವನ ವೆಚ್ಚ ಅಗ್ಗವಾಗಿರುವುದರಿಂದ ಇಲ್ಲಿಗೆ ಎಷ್ಟೋ ಜನರು ಶಿಕ್ಷಣ ಪಡೆಯಲು ಬರುತ್ತಾರೆ.
ಉಕ್ರೇನ್ನಲ್ಲಿ 20,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಇದ್ದು, ಅವರನ್ನು ರಕ್ಷಿಸಲು ಭಾರತವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಸದ್ಯಕ್ಕೆ ಉಕ್ರೇನ್ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯಿಂದಾಗಿ ನವದೆಹಲಿ ಮತ್ತು ಕೀವ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಪರ್ಯಾಯ ವ್ಯವಸ್ಥೆಗಳನ್ನು ಭಾರತ ಸರ್ಕಾರ ಮಾಡುತ್ತಿದೆ. ಇದನ್ನೂ ಓದಿ: ಉಕ್ರೇನ್ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ವಾಷಿಂಗ್ಟನ್: ರಷ್ಯಾ ದಾಳಿಯಿಂದ ಮೂಲಸೌಕರ್ಯ ರಕ್ಷಿಸಿಕೊಳ್ಳಲು, ರಷ್ಯಾ ಸೈನ್ಯದ ವಿರುದ್ಧ ಸೈಬರ್ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ನಡೆಸಲು ಉಕ್ರೇನ್ ಸರ್ಕಾರವು ದೇಶದ ಭೂಗತ ಹ್ಯಾಕರ್ಗಳಿಂದ ಸ್ವಯಂಸೇವಕರನ್ನು ಕೇಳುತ್ತಿದೆ.
ರಷ್ಯಾದ ಪಡೆಗಳು ಉಕ್ರೇನ್ ನಗರಗಳ ಮೇಲೆ ದಾಳಿ ಮಾಡುತ್ತಿದ್ದಂತೆ, ಸ್ವಯಂಸೇವಕರಿಗೆ ನಿನ್ನೆ ಹ್ಯಾಕರ್ ಫೋರಮ್ಗಳಲ್ಲಿ ಕಾಣಿಸಿಕೊಳ್ಳಲು ಗೂಗಲ್ ಮೂಲಕ ತಿಳಿಸಲಾಗಿದೆ. ದಾಳಿ ಹಿನ್ನೆಲೆ ಅನೇಕ ನಿವಾಸಿಗಳು ರಾಜಧಾನಿ ಕೀವ್ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್ಗೆ ಆರ್ಥಿಕ ನೆರವು ನೀಡಲು ಸಿದ್ಧ: ವಿಶ್ವ ಬ್ಯಾಂಕ್
ಉಕ್ರೇನಿಯನ್ ಸೈಬರ್ ಸಮುದಾಯ, ನಮ್ಮ ದೇಶದ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಲು ಸಮಯವಾಗಿದೆ ಎಂದು ಉಕ್ರೇನ್ ಪೋಸ್ಟ್ ಮಾಡಿದೆ. ಹ್ಯಾಕರ್ಗಳು ಮತ್ತು ಸೈಬರ್ ಸೆಕ್ಯುರಿಟಿ ಪರಿಣಿತರನ್ನು ಗೂಗಲ್ ಡಾಕ್ಸ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಕೇಳಿದೆ.
ಕೀವ್ನಲ್ಲಿರುವ ಸೈಬರ್ ಸೆಕ್ಯುರಿಟಿ ಕಂಪನಿಯ ಸಹ-ಸಂಸ್ಥಾಪಕ ಯೆಗೊರ್ ಔಶೇವ್ ಅವರನ್ನು ನಿನ್ನೆ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಸೈಬರ್ ರಕ್ಷಣೆ ಬಗ್ಗೆ ಪೋಸ್ಟ್ ಮಾಡುವಂತೆ ಕೋರಿಕೊಂಡಿದ್ದು, ಇದನ್ನು ಬರೆದಿದ್ದಾರೆ ಎಂದು ರಾಯಿಟರ್ಸ್ಗೆ ತಿಳಿಸಿದರು. ಇದನ್ನೂ ಓದಿ: Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?
ಔಶೇವ್ ಅವರ ಸಂಸ್ಥೆಯ ಸೈಬರ್ ಯೂನಿಟ್ ಟೆಕ್ನಾಲಜೀಸ್ ನಿರ್ಣಾಯಕ ಮೂಲಸೌಕರ್ಯಗಳ ರಕ್ಷಣೆಯಲ್ಲಿ ಉಕ್ರೇನ್ ಸರ್ಕಾರದೊಂದಿಗೆ ಕೆಲಸ ಮಾಡಲು ಹೆಸರುವಾಸಿಯಾಗಿದೆ.
ವಾಷಿಂಗ್ಟನ್: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್ಗೆ ಅಗತ್ಯ ಆರ್ಥಿಕ ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ ಭರವಸೆ ನೀಡಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿರ್ಧಾರಕ್ಕೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಬ್ಯಾಂಕ್, ನಾವು ಉಕ್ರೇನ್ಗೆ ತಕ್ಷಣದ ಬೆಂಬಲವನ್ನು ಒದಗಿಸಲು ಸಿದ್ಧರಿದ್ದೇವೆ. ಹಣಕಾಸು ಹಂಚಿಕೆ ಸೇರಿದಂತೆ ಇತರೆ ಬೆಂಬಲಕ್ಕಾಗಿ ಕ್ರಮಕೈಗೊಂಡಿದ್ದೇವೆ. ಇದಕ್ಕಾಗಿ ನಮ್ಮ ಎಲ್ಲಾ ಹಣಕಾಸು ಮತ್ತು ತಾಂತ್ರಿಕ ಬೆಂಬಲ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?
ವಿಶ್ವ ಬ್ಯಾಂಕ್ ಗ್ರೂಪ್ನ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಮಾತನಾಡಿ, ಉಕ್ರೇನ್ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ ಉಂಟಾಗಿರುವ ಹಿಂಸಾಚಾರ, ಜೀವಹಾನಿಯಿಂದ ವಿಶ್ವ ಬ್ಯಾಂಕ್ ಕಳವಳಗೊಂಡಿದೆ. ನಾವು ಉಕ್ರೇನ್ನ ದೀರ್ಘಕಾಲದ ಪಾಲುದಾರರಾಗಿದ್ದೇವೆ. ಇಂತಹ ನಿರ್ಣಾಯಕ ಕ್ಷಣದಲ್ಲಿ ದೇಶದ ಜನತೆಯ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಉಕ್ರೇನ್ನಲ್ಲಿನ ವಿನಾಶಕಾರಿ ಬೆಳವಣಿಗೆಗಳು ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ಬೀರುತ್ತವೆ. ಈ ವೆಚ್ಚಗಳನ್ನು ನಿರ್ಣಯಿಸಲು ನಾವು ಐಎಂಎಫ್ನೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತೇವೆ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.
ಮಾಲ್ಪಾಸ್ ಅವರು ಶಾನಿವಾರದಂದೇ ಮ್ಯೂನಿಚ್ನಲ್ಲಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದರು. ಉಕ್ರೇನ್ ಪ್ರದೇಶದ ಜನರಿಗೆ ವಿಶ್ವ ಬ್ಯಾಂಕ್ನ ಬೆಂಬಲ ಮತ್ತು ಸಹಾಯ ಒದಗಿಸುವ ಕುರಿತು ಆಶಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
Government of India, Ministry of Civil Aviation has allowed passengers traveling from Ukraine to travel by transit under India- Qatar bilateral air bubble arrangement.
ಉಕ್ರೇನ್ ಮೇಲೆ ರಷ್ಯಾ ದಾಳಿ ಪ್ರಾರಂಭಿಸಿದ ಬಳಿಕ ಉಕ್ರೇನ್ನ ವಾಯುಪ್ರದೇಶ ಮುಚ್ಚಿಹೋಗಿದೆ. ಇದೀಗ ಭಾರತೀಯರು ಕತಾರ್ನಿಂದ ಭಾರತಕ್ಕೆ ಮರಳಲು ಮೊದಲು ಕತಾರ್ ತಲುಪಬೇಕಾಗಿದೆ. ಆದರೆ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ಹೇಗೆ ಕತಾರ್ ಪ್ರವೇಶಿಸಬೇಕೆಂಬ ವಿಷಯವನ್ನು ಸ್ಪಷ್ಟಪಡಿಸಿಲ್ಲ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಈ ಬಗ್ಗೆ ಕತಾರ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವಿಟ್ಟರ್ನಲ್ಲಿ ಭಾರತೀಯ ಸರ್ಕಾರ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯ ಉಕ್ರೇನ್ನಲ್ಲಿರುವ ಭಾರತದ ಪ್ರಯಾಣಿಕರಿಗೆ ಕತಾರ್ನಿಂದ ಭಾರತಕ್ಕೆ ಹಿಂದಿರುಗಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಉಕ್ರೇನ್ನಿಂದ ಭಾರತೀಯರು ಏರ್ ಬಬಲ್ ವ್ಯವಸ್ಥೆಯ ಅಡಿಯಲ್ಲಿ ಸಾರಿಗೆ ಮುಖಾಂತರ ಕತಾರ್ ಪ್ರವೇಶಿಸಬಹುದು ಎಂದು ತಿಳಿಸಿದೆ.
ನವದೆಹಲಿ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತಕ್ಷಣ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಮನವಿ ಮಾಡಿದ್ದಾರೆ.
ಉಕ್ರೇನ್ ವಿರುದ್ಧ ಯುದ್ಧ ಆರಂಭವಾಗುತ್ತಿದ್ದಂತೆ ಭಾರತದ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂಬ ಮಾತು ಎಲ್ಲೆಡೆಯಿಂದ ಕೇಳಿಬರುತ್ತಿತ್ತು. ಇದೀಗ ಮೋದಿ, ಪುಟಿನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಯುದ್ಧ ನಿಲ್ಲಿಸಿ ಎಂದು ಮನವಿ ಮಾಡಿ ಉಕ್ರೇನ್ನ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಪುಟಿನ್ ಜೊತೆ ಸುಮಾರು 25 ನಿಮಿಷಗಳ ಮಾತುಕತೆ ನಡೆಸಿದ ಮೋದಿ, ಯುದ್ಧದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯರ ಬಗ್ಗೆ ವಿಶೇಷವಾಗಿ ಮಾತುಕತೆ ನಡೆಸಿದ್ದು, ಅವರ ಸುರಕ್ಷತೆ ಮುಖ್ಯ ಎಂದಿದ್ದಾರೆ. ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದ್ದು ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳುವಂತಾಗಬೇಕೆಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾ ಮತ್ತು ನ್ಯಾಟೋ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಯುದ್ಧದಿಂದ ಅತಿ ಹೆಚ್ಚು ಹಾನಿಯಾಗಲಿದೆ. ಭಾರತೀಯಯರ ರಕ್ಷಣೆಗೆ ಭಾರತದ ರಾಜತಾಂತ್ರಿಕರು ನಿರಂತರ ಸಂಪರ್ಕ ಹೊಂದಲಿದ್ದಾರೆ ಎಂದು ಮೋದಿಮನವಿ ಮಾಡಿದ್ದು, ಭಾರತದ ಜೊತೆಗೆ ಸಂಪರ್ಕದಲ್ಲಿರುವುದಾಗಿ ಪುಟಿನ್ ಭರವಸೆ ನೀಡಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಈ ಮೊದಲು ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು.
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದರು.
ಎರಡನೇ ಜಾಗತಿಕ ಯುದ್ಧದ ಬಳಿಕ ನಡೆದ ಶೀತಲ ಸಮರದಲ್ಲಿ ಜಗತ್ತು ಎರಡು ಭಾಗಗಳಾಗಿ ವಿಭಜನೆಗೊಂಡಿತ್ತು. ಒಂದು ಗುಂಪಿಗೆ ಅಮೆರಿಕ ನಾಯಕತ್ವ ವಹಿಸಿದರೆ ಮತ್ತೊಂದಕ್ಕೆ ಸೋವಿಯತ್ ಯೂನಿಯನ್ ನಾಯಕತ್ವ ವಹಿಸಿತ್ತು. ಯುಎಸ್ಎಸ್ಆರ್ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು 1949ರಲ್ಲಿ ಅಮೆರಿಕ, ಕೆನಡಾ ಸೇರಿ 12 ದೇಶಗಳು ನಾರ್ತ್ ಅಟ್ಲಾಂಟಿಕ್ ಟ್ರೀಟಿ(ನ್ಯಾಟೋ) ಆರಂಭಿಸಿದವು. ಸದ್ಯ ನ್ಯಾಟೋ ಸದಸ್ಯ ರಾಷ್ಟ್ರಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಈ ಪೈಕಿ ಯಾವುದೇ ದೇಶದ ಮೇಲೆ ದಾಳಿ ನಡೆದರೂ ಅದು ನನ್ನ ಸಂಸ್ಥೆ ಮೇಲಿನ ದಾಳಿ ಎಂದು ಭಾವಿಸಲಾಗುತ್ತದೆ ಎಂದು ಆರಂಭದಲ್ಲಿಯೇ ನ್ಯಾಟೋ ಘೋಷಿಸಿತ್ತು. ಆದರೆ 1991ರ ಡಿಸೆಂಬರ್ನಲ್ಲಿ ಯುಎಸ್ಎಸ್ಆರ್ ಛಿದ್ರವಾದಾಗ ಪರಿಸ್ಥಿತಿ ಬದಲಾಯಿತು. ಅಮೆರಿಕ ವಿಶ್ವದ ದೊಡ್ಡಣ್ಣನಾಗಿ ಅವತರಿಸಿತು.
ರಷ್ಯಾ ಪರ ದೇಶಗಳು ಭಾರತ
ರಷ್ಯಾಗೆ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಆದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿಲುವನ್ನು ಖಂಡಿಸಿಲ್ಲ. ಉಕ್ರೇನ್ ಸಾರ್ವಭೌಮತ್ವದ ಬಗ್ಗೆ ಮಾತನಾಡಿಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎನ್ನುತ್ತಿದೆ. 2014ರಲ್ಲಿ ರಷ್ಯಾ ಕ್ರಿಮಿಯಾವನ್ನು ವಶಕ್ಕೆ ಪಡೆದಾಗಲೂ ಭಾರತ ವಿರೋಧಿಸಿರಲಿಲ್ಲ. ಭಾರತದ ಸ್ಥಿತಿ ಹೇಗಿದೆ ಎಂದರೆ ಅಮೆರಿಕ ಜೊತೆ ನಿಲ್ಲುತ್ತಿಲ್ಲ. ರಷ್ಯಾ ಜೊತೆಗೂ ಬಹಿರಂಗವಾಗಿ ಕೈಜೋಡಿಸುತ್ತಿಲ್ಲ. ಯಾರನ್ನು ಬಿಟ್ಟುಕೊಡುವ ಸ್ಥಿತಿಯಲ್ಲಿ ಭಾರತ ಇಲ್ಲ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
ಚೀನಾ
ನ್ಯಾಟೋ ವಿಸ್ತರಣೆ ಚೀನಾಗೂ ಇಷ್ಟವಿಲ್ಲ. ಇದನ್ನು ಬಹಿರಂಗವಾಗಿ ರಷ್ಯಾ ಜೊತೆ ಸೇರಿ ಘೋಷಿಸಿದೆ. ಈಗ ನಡೆಯುತ್ತಿರುವ ಯುದ್ಧವನ್ನು ಯುದ್ಧ ಎಂದೇ ಚೀನಾ ಪರಿಗಣಿಸಿಲ್ಲ.
ಪಾಕಿಸ್ತಾನ
ರಷ್ಯಾ ಪ್ರವಾಸದಲ್ಲಿ ಇಮ್ರಾನ್ ಇದ್ದಾರೆ. ಯುದ್ಧ ಶುರುವಾಗಿದ್ದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಎಂಥಾ ಟೈಮಲ್ಲಿ ಬಂದಿದ್ದೇನೆ.. ಸಿಕ್ಕಾಪಟ್ಟೆ ಎಕ್ಸೈಟ್ ಆಗ್ತಿದೆ ಎಂದು ಇಮ್ರಾನ್ ಹೇಳಿದ್ದಾರೆ.
ಕ್ರೊವೇಷಿಯಾ
2009ರಲ್ಲಿಯೇ ನ್ಯಾಟೋವನ್ನು ಸೇರಿದೆ. ಆದರೆ ಗಡಿ ಭದ್ರತೆ ವಿಚಾರದಲ್ಲಿ ಕ್ರೊವೇಷಿಯಾ ರಷ್ಯಾ ಪರವಾಗಿದೆ. ಜೊತೆಗೆ ಮೊನ್ನೆ ವಿಶ್ವಸಂಸ್ಥೆಯಲ್ಲಿ, ಉಕ್ರೇನ್ ದೇಶವನ್ನು ಮೂರು ಭಾಗ ಮಾಡಿದ ರಷ್ಯಾ ನಿಲುವನ್ನು ಖಂಡಿಸಿದೆ.
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿರುವುದರಿಂದ ಇದರ ಪ್ರಭಾವ ನೇರವಾಗಿ ಜಾಗತಿಕ ಮಾರುಕಟ್ಟೆ ಮೇಲೆ ಬಿದ್ದಿದೆ. ಇದರಲ್ಲಿ ಭಾರತೀಯ ಷೇರು ಮಾರುಕಟ್ಟೆ ಕೂಡಾ ಹೊರತಾಗಿಲ್ಲ.
ಇಂದು ಮುಂಬೈ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ. ಒಂದೇ ದಿನ 13 ಲಕ್ಷ ಕೋಟಿ ರೂ. ನಷ್ಟವಾಗಿದೆ. ಬಿಎಸ್ಇ ಸೂಚ್ಯಂಕದಲ್ಲಿ 2,702 ಅಂಶ, ಎನ್ಎಸ್ಇ ಸೂಚ್ಯಂಕದಲ್ಲಿ 815.30 ಅಂಶ ನಷ್ಟವಾಗಿದೆ. ಈ ವರ್ಷದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಷೇರುಪೇಟೆ ನಷ್ಟಹೋಗಿರುವುದು ಇದೇ ಮೊದಲು.
ವಿದೇಶಿ ಹೂಡಿಕೆದಾರರ ಜೊತೆ ದೇಶಿಯ ಇನ್ವೆಸ್ಟರ್ಗಳು ಕೂಡ ಷೇರುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಷೇರುಪೇಟೆಗೆ ಭಾರೀ ನಷ್ಟವಾಗಿದೆ. ಡಾಲರ್ ಎದುರು ರೂ. ಮೌಲ್ಯ 75.61 ರೂ.ಗೆ ಕುಸಿದಿದೆ. ಇನ್ನೂ ಉಕ್ರೇನ್ ಮೇಲಿನ ದಾಳಿಯಿಂದ ದೇಶದ ಮೇಲೆ ಏನೇನು ಪರಿಣಾಮ ಆಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!
100 ಡಾಲರ್ ದಾಟಿದ ಕಚ್ಛಾ ತೈಲ ಬೆಲೆ:
ಕಳೆದ 2-3 ದಿನಗಳಿಂದ 97.98 ಡಾಲರ್(7,429 ರೂ.) ಆಚೆ ಈಚೆ ಇದ್ದ 1 ಬ್ಯಾರಲ್ ಕಚ್ಛಾ ತೈಲದ ಬೆಲೆ ಯುದ್ಧ ಪ್ರಾರಂಭವಾಗುತ್ತಿದ್ದಂತೆ 105 ಡಾಲರ್(7,961 ರೂ.) ದಾಟಿದೆ. ಇದು 2014ರ ಬಳಿಕದ ಗರಿಷ್ಠ ಮಟ್ಟವಾಗಿದೆ.
ತೈಲ ಉತ್ಪಾದನೆಯಲ್ಲಿ ಜಗತ್ತಿನಲ್ಲಿಯೇ ಎರಡನೇ ಅತೀದೊಡ್ಡ ದೇಶ ರಷ್ಯಾ. ಯುರೋಪ್ ರಾಷ್ಟ್ರಗಳಿಗೆ ಶೇ.35 ರಷ್ಟು ಕಚ್ಚಾ ತೈಲ ರಷ್ಯಾದಿಂದಲೇ ಪೂರೈಕೆಯಾಗುತ್ತದೆ. ಯುದ್ಧ ನಿಲ್ಲದೇ ಹೀಗೆ ಮುಂದುವರೆದಲ್ಲಿ, ಆರ್ಥಿಕ ನಿರ್ಬಂಧಗಳ ಹೇರಿಕೆ ಹೆಚ್ಚಳವಾದಲ್ಲಿ ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಲಾಗದ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.
ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಕನಿಷ್ಟ 7-8 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.
ಚಿನ್ನದ ಬೆಲೆ ಶೇ.30 ರಷ್ಟು ಹೆಚ್ಚಳ:
ಯುದ್ಧದ ಪ್ರಭಾವ ನೇರವಾಗಿ ಬಂಗಾರದ ಮೇಲೆ ಬಿದ್ದಿದೆ. ಕೇವಲ ಒಂದೇ ದಿನದಲ್ಲಿ ಬಂಗಾರದ ಬೆಲೆ ಶೇ.30 ರಷ್ಟು ಹೆಚ್ಚಿದೆ. ಇಂದು 10 ಗ್ರಾಂ. 24 ಕ್ಯಾರೆಟ್ ಚಿನ್ನದ ಬೆಲೆ 2,500 ರೂ. ಹೆಚ್ಚಿದ್ದು, 54 ಸಾವಿರದ ಗಡಿದಾಟಿದೆ. ಆಭರಣದ ಚಿನ್ನದ ಬೆಲೆ 1,000 ರೂ. ಹೆಚ್ಚಿದ್ದು, 47ಸಾವಿರದ ಅಂಚಿನಲ್ಲಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ರಸಗೊಬ್ಬರ ಪೂರೈಕೆ ವ್ಯತ್ಯಯ/ಬೆಲೆ ಹೆಚ್ಚಳ ಸಾಧ್ಯತೆ:
ಭಾರತಕ್ಕೆ ಡಿಎಪಿ ಸೇರಿ ಮೂರು ಬಗೆಯ ರಸಗೊಬ್ಬರವನ್ನು ಪೂರೈಸುವ ದೇಶಗಳಲ್ಲಿ ರಷ್ಯಾ ಪ್ರಮುಖ. ಯುದ್ಧದಿಂದ ಭಾರತಕ್ಕೆ ರಸಗೊಬ್ಬರ ಆಮದು ಕಷ್ಟಕರವಾಗಿದ್ದು, ಮುಂಗಾರು ಬೆಳೆಯ ಸಿದ್ಧತೆಯಲ್ಲಿರುವ ರೈತರಿಗೆ ಸಮಸ್ಯೆಯಾಗಲಿದೆ ಜೊತೆಗೆ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ.
ಸೂರ್ಯಕಾಂತಿ ಎಣ್ಣೆ ದರ ಹೆಚ್ಚಳ:
ಉಕ್ರೇನ್ನಿಂದ ಭಾರತಕ್ಕೆ ಸೂರ್ಯಕಾಂತಿ ಎಣ್ಣೆ ಹೆಚ್ಚಿನ ಮಟ್ಟದಲ್ಲಿ ಆಮದು ಆಗುತ್ತದೆ. ಯುದ್ಧದಿಂದ ಆಮದು ಕಷ್ಟಸಾಧ್ಯವಾಗುವುದರಿಂದ ಸೂರ್ಯಕಾಂತಿ ಎಣ್ಣೆ ದುಬಾರಿಯಾಗುವ ಸಾಧ್ಯತೆ ಇದೆ.
ಮದ್ಯ ಪ್ರಿಯರಿಗೆ ಶಾಕ್:
ಯುದ್ಧದಿಂದ ಮದ್ಯದ ಬೆಲೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಉಕ್ರೇನ್ ವಿಶ್ವದಲ್ಲೇ ಅತೀ ಹೆಚ್ಚು ಬಾರ್ಲಿ ಪೂರೈಸುವ 5 ಪ್ರಮುಖ ದೇಶಗಳಲ್ಲಿ ಒಂದು. ಮದ್ಯ ತಯಾರಿಕೆಗೆ ಬಾರ್ಲಿ ಅಗತ್ಯ. ಯುದ್ಧದಿಂದಾಗಿ ಬಾರ್ಲಿ ಪೂರೈಕೆ ಏರುಪೇರಾಗುವುದರಿಂದ ಮದ್ಯದ ಬೆಲೆಯೂ ಹೊರೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ಮೊಬೈಲ್ ಉದ್ಯಮಕ್ಕೆ ಆಘಾತ:
ಮೊಬೈಲ್ ಬಿಡಿಭಾಗಗಳ ಪೂರೈಕೆಯಲ್ಲಿ ರಷ್ಯಾ ಮುಂದಿದೆ. ಯುದ್ಧದಿಂದ ಆಮದು-ರಫ್ತಿಗೆ ತೊಡಕಾಗುವ ಸಾಧ್ಯತೆ ಇರುವುದರಿಂದ ಮೊಬೈಲ್ ಉದ್ಯಮಕ್ಕೆ ಕಷ್ಟವಾಗಲಿದೆ.
ವಾಹನ ಉದ್ಯಮಕ್ಕೆ ಪೆಟ್ಟು:
ವಾಹನ ಎಕ್ಸಾಸ್ಟ್ ವ್ಯವಸ್ಥೆಗೆ ಪಲಾಡಿಯಂ ಲೋಹ ಅಗತ್ಯ. ಪಲಾಡಿಯಂ ಲೋಹವನ್ನು ಹೆಚ್ಚು ರಫ್ತು ಮಾಡುವ ದೇಶ ರಷ್ಯಾ. ಯುದ್ಧ ಬಿಕ್ಕಟ್ಟಿನ ಬಳಿಕ ಪಲಾಡಿಯಂ ಲೋಹದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಕೆಮಿಕಲ್ಸ್, ಕಬ್ಬಿಣ, ಉಕ್ಕು, ಪ್ಲಾಸ್ಟಿಕ್ಗಳೊಂದಿಗೆ ಕೈಗಾರಿಕೆಯಲ್ಲಿ ಬಳಕೆಯಾಗುವ ರಿಯಾಕ್ಟರ್ಸ್, ಬಾಯ್ಲರ್ ಯಂತ್ರ, ಮೆಕಾನಿಕಲ್ ವಸ್ತು, ಎಣ್ಣೆ ಬೀಜ ಕೂಡಾ ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉಕ್ರೇನ್ ಮೇಲೆ ಕಣ್ಣು ಯಾಕೆ? ರಷ್ಯಾಗೆ ಯಾಕೆ ಯಾರ ಭಯವಿಲ್ಲ?
ಕೇವಲ ರಷ್ಯಾ ಹಾಗೂ ಉಕ್ರೇನ್ನಿಂದ ಆಮದು ಆಗುವ ವಸ್ತುಗಳಿಗಷ್ಟೇ ಭಾರತದಲ್ಲಿ ಪೆಟ್ಟು ಬೀಳದೇ ರಫ್ತಿನಿಂದಲೂ ನಷ್ಟವಾಗುವ ಸಾಧ್ಯತೆ ಇದೆ. ಭಾರತದಿಂದ ಉಕ್ರೇನ್ಗೆ ರಫ್ತಾಗುವ ವಸ್ತುಗಳ ಪೈಕಿ ಸಿಂಹಭಾಗ ಔಷಧಿಗಳದ್ದಾಗಿದೆ. ಮೌಲ್ಯದ ಲೆಕ್ಕದಲ್ಲಿ ಉಕ್ರೇನ್ಗೆ ಔಷಧಿ ರಫ್ತು ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಅತೀದೊಡ್ಡ ದೇಶವಾಗಿದೆ.
ಹಣ್ಣು, ಕಾಫಿ, ಟೀ ಪುಡಿ ಉದ್ಯಮಕ್ಕೂ ಯುದ್ಧದಿಂದ ಹೊಡೆತ ಬೀಳಲಿದ್ದು, ಇವುಗಳ್ನು ಉಕ್ರೇನ್ಗೆ ಭಾರತ ರಫ್ತು ಮಾಡುತ್ತದೆ.