ನವದೆಹಲಿ: ರಷ್ಯಾ-ಉಕ್ರೇನ್ ಮೇಲೆ ಯುದ್ಧ ಆರಂಭಿಸುತ್ತಿದ್ದಂತೆ ಭಾರತ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬರುತ್ತಿತ್ತು. ಇದೀಗ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಇದಲ್ಲದೇ ವಿಶ್ವದ ಹಲವು ದೇಶಗಳೂ ಕೂಡ ಭಾರತ ಮಧ್ಯಪ್ರವೇಶಿಸಬೇಕೆಂದು ಅಭಿಪ್ರಾಯಪಟ್ಟಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಭಾರತದ ಪ್ರಧಾನಿ ಮೋದಿ ಮಾತುಕತೆ ನಡೆಸಿದರೆ ಯುದ್ಧ ನಿಲ್ಲಿಸಬಹುದೆಂಬ ಅಭಿಪ್ರಾಯ ಕೇಳಿಬರುತ್ತಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ್ದು, ಈಗಾಗಲೇ 50ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಕಿವ್: ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವುದನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಅಲ್ಲಿನ ಜನರು ಹೊರಗೆ ಏನು ನಡೆಯುತ್ತಿದೆ ಎಂಬುದೇ ತಿಳಿಯದೆ ಉಸಿರು ಬಿಗಿಯಾಗಿಸಿ ಒದ್ದಾಡುವಂತಹ ಪರಿಸ್ಥಿತಿಗೆ ಬಂದಿದ್ದಾರೆ.
ರಷ್ಯಾ ಉಕ್ರೇನ್ ಮೇಲೆ ಬಾಂಬುಗಳ ದಾಳಿ ನಡೆಸುತ್ತಿದ್ದು, ಉಕ್ರೇನ್ ನಿವಾಸಿಗಳಿಗೆ ಸರ್ಕಾರ ತಮ್ಮ ಜೀವ ಉಳಿಸಿಕೊಳ್ಳಲು ಬಂಕರ್ ಹಾಗೂ ಮೆಟ್ರೋ ಸುರಂಗಗಳಿಗೆ ತೆರಳುವಂತೆ ಸೂಚನೆ ನೀಡಿದೆ. ಇದರಂತೆ ಸಾವಿರಾರು ಜನರು ದಿಕ್ಕು ತೋಚದೇ ಸುರಂಗ ಮಾರ್ಗ ಹಾಗೂ ಬಂಕರ್ಗಳಿಗೆ ತೆರಳಿ ಬೀಡು ಬಿಟ್ಟಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿದ ಉಕ್ರೇನ್
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು, ಇಲ್ಲಿ ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ನಮಗೆ ಬಂಕರ್ ಇಲ್ಲವೇ ಮೆಟ್ರೋ ಸುರಂಗಗಳಿಗೆ ಹೋಗಿ ಜೀವ ಉಳಿಸಿಕೊಳ್ಳು ಸಲಹೆ ನೀಡಲಾಗಿದೆ. ಹೀಗಾಗಿ ನಾವು ಮೆಟ್ರೋ ಸುರಂಗಗಳಲ್ಲಿ ಆಶ್ರಯ ಪಡೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ನಾವೆಲ್ಲರೂ ಸುರಕ್ಷಿತವಾಗಿದ್ದೇವೆ: ಉಕ್ರೇನ್ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು
ಮೆಟ್ರೋ ಸುರಂಗಗಳಲ್ಲಿ ಸಾವಿರಾರು ಜನರು ಜೀವ ಉಳಿಸಿಕೊಳ್ಳಲು ತೆರಳಿದ್ದು, ಇದರಲ್ಲಿ ಕರ್ನಾಟಕದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಸದ್ಯ ಯಾರಿಗೂ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಕರ್ನಾಟಕ ಮೂಲದ ವಿದ್ಯಾರ್ಥಿ ಉಕ್ರೇನ್ನಿಂದ ಸಂದೇಶವನ್ನು ತಲುಪಿಸಿದ್ದಾರೆ.
ಕಿವ್: ರಷ್ಯಾ ದಾಳಿಯ ವಿರುದ್ಧ ತಮ್ಮ ದೇಶವನ್ನು ರಕ್ಷಿಸಲು ಬಯಸುವ ಎಲ್ಲಾ ನಾಗರಿಕರಿಗೆ ಸರ್ಕಾರ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ರಷ್ಯಾ ದಾಳಿ ಬಗ್ಗೆ ಇನ್ನೂ ತಮ್ಮ ಆತ್ಮ ಸಾಕ್ಷಿಯನ್ನು ಕಳೆದುಕೊಳ್ಳದ ಎಲ್ಲರಿಗೂ ರಷ್ಯಾ ವಿರುದ್ಧ ಪ್ರತಿಭಟಿಸುವ ಸಮಯ ಬಂದಿದೆ. ದೇಶವನ್ನು ರಕ್ಷಿಸಲು ಸಿದ್ಧರಾಗಿರುವ ಉಕ್ರೇನ್ನ ಎಲ್ಲಾ ನಾಗರಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದೇವೆ ಹಾಗೂ ಎಲ್ಲಾ ನಿರ್ಬಂಧವನ್ನು ತೆಗೆದು ಹಾಕುತ್ತಿದ್ದೇವೆ ಎಂದು ಉಕ್ರೇನ್ ಅಧ್ಯಕ್ಷ ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿಚಾರದಲ್ಲಿ ಇತರ ರಾಷ್ಟ್ರಗಳು ಮೂಗು ತೂರಿಸಬೇಡಿ – ಪುಟಿನ್ ನೇರ ಎಚ್ಚರಿಕೆ
ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಈಗಾಗಲೇ ಯುದ್ಧ ಸಾರಿದ್ದು, ಭಾರತೀಯ ಕಾಲಮಾನ ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವಿಚಾರವಾಗಿ ಇತರ ಯಾವುದೇ ರಾಷ್ಟ್ರಗಳು ಮೂಗು ತೂರಿಸದಂತೆ ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ಕಣ್ಣು ಯಾಕೆ? ರಷ್ಯಾಗೆ ಯಾಕೆ ಯಾರ ಭಯವಿಲ್ಲ?
ಉಕ್ರೇನ್ನಲ್ಲಿ ಇದೀಗ ರಷ್ಯಾ ದಾಳಿಗೆ ಜನರು ಬಲಿಯಾಗುತ್ತಿದ್ದು, ಕಾರ್ನಾಟಕ-ಭಾರತ ಸೇರಿದಂತೆ ಇತರ ದೇಶದ ವಿದ್ಯಾರ್ಥಿಗಳೂ ಸಿಲುಕಿಕೊಂಡಿದ್ದಾರೆ.
ನವದೆಹಲಿ: ಉಕ್ರೇನ್ನಲ್ಲಿ ನನ್ನ ಕೋಚ್ ನಿಕಿಟಿನ್ ಯೆವ್ಹೆನ್ ಮನೆ ಮುಂದೆಯೇ ಬಾಂಬ್ ದಾಳಿ ನಡೆದಿದೆ ಎಂದು ಟೋಕಿಯೋ ಪ್ಯಾರಾಲಂಪಿಕ್ಸ್ನ ಕಂಚಿನ ಪದಕ ಗೆದ್ದಿದ್ದ ಶರದ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿರುವ ಶರದ್ ಕುಮಾರ್, ನಾನು ನನ್ನ ಕೋಚ್ ಬಗ್ಗೆ ಚಿಂತೆ ಆಗುತ್ತಿದೆ. ಉಕ್ರೇನ್ನ ಖಾರ್ಕಿವ್ನಲ್ಲಿರುವ ಅವರ ಮನೆಯ ಮುಂದೆ ಬಂಬ್ ದಾಳಿ ನಡೆದಿದೆ. ಅವರೊಂದಿಗೆ ಮಾತನಾಡಿದ್ದೇನೆ ಮನೆಯ ನೆಲಮಹಡಿಯಲ್ಲಿ ಇದ್ದೇವೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಟೋಕಿಯೊ ಪ್ಯಾರಾಲಿಂಪಿಕ್ಸ್- ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ತಂಗವೇಲು, ಕಂಚು ಶರದ್ ಕುಮಾರ್ಗೆ
Just spoke to my coach in Ukraine Kharkiv , he is worried , he can hear bombing from his room, he is planning to move to his garage underground.
ಟೋಕಿಯೋ ಪ್ಯಾರಾಲಂಪಿಕ್ಸ್ನಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದ ಶರದ್ ಕುಮಾರ್ಗೆ ನಿಕಿಟಿನ್ ಯೆವ್ಹೆನ್ ಕೋಚ್ ಆಗಿದ್ದರು. ಉತ್ತರಪ್ರದೇಶ ಮೂಲದ ಶರದ್ಗೆ ನಿಕಿಟಿನ್ ಯೆವ್ಹೆನ್ ಮುಂದಿನ ಪ್ಯಾರಾಲಂಪಿಕ್ಸ್ ತಯಾರಿಗಾಗಿ ಹಲವು ಸಲಹೆಗಳನ್ನು ನೀಡುತ್ತಿದ್ದರು. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ್ದು, ಈಗಾಗಲೇ 50ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ರಷ್ಯಾದ ಭೂಸೇನಾ ಪಡೆಗಳು ನಾನಾ ಕಡೆಗಳಿಂದ ಉಕ್ರೇನ್ ಗಡಿ ಭಾಗಗಳನ್ನು ಪ್ರವೇಶಿಸಿವೆ. ಈ ವೇಳೆ ರಷ್ಯಾದ 50 ಆಕ್ರಮಣಕಾರರನ್ನು ಹತ್ಯೆಗೈದಿರುವುದಾಗಿ ಉಕ್ರೇನ್ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ದೇಶದ ನಾನಾ ಭಾಗಗಳ ತಲ್ಲಣಕ್ಕೆ ಕಾರಣವಾಗಿದೆ. ಉಕ್ರೇನ್ ನಲ್ಲಿ ವಾಸವಿರುವ ಭಾರತೀಯರೂ ಸೇರಿದಂತೆ ಅನೇಕ ರಾಷ್ಟ್ರಗಳ ಜನರು ಜೀವ ಹಿಡಿದುಕೊಂಡು ತವರಿಗೆ ಮರಳಲು ಕಾಯುತ್ತಿದ್ದಾರೆ. ತಮ್ಮವರು ಸುರಕ್ಷಿತವಾಗಿ ಮನೆಗೆ ವಾಪಸ್ಸಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಂಥದ್ದೊಂದು ಪ್ರಾರ್ಥನೆಯನ್ನು ಬಿಗ್ ಬಾಸ್ ಖ್ಯಾತಿಯ, ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಕೂಡ ಮಾಡಿದ್ದಾರೆ. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್
ಕನ್ನಡ ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಸ್ನೇಹಿತೆ ಸುಹಾನಿ ದಿವ್ಯ ಗಿರೀಶ್ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಉಕ್ರೇನ್ ಗೆ ಹೋದವರು ಯುದ್ಧದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದಾರಂತೆ. ಉಕ್ರೇನ್ ನಲ್ಲಿ ತಮ್ಮ ಗೆಳತಿ ಹೇಗಿದ್ದಾರೋ ಏನೋ ಎನ್ನುವ ಆತಂಕವನ್ನು ಶ್ವೇತಾ, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶುರುವಾದಾಗ ನನಗೆ ತಕ್ಷಣವೇ ನೆನಪಾಗಿದ್ದು, ಗೆಳತಿ ಸುಹಾನಿ ಮತ್ತು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು. ಅವರ ರಕ್ಷಣೆಗೆ ಕೂಡಲೇ ಭಾರತ ಸರ್ಕಾರ ಕ್ರಮ ತಗೆದುಕೊಳ್ಳಬೇಕು. ಎಲ್ಲ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ, ಅಲ್ಲಿರುವ ಭಾರತೀಯರಿಗೆ ಧೈರ್ಯ ಹೇಳುವ ಕೆಲಸ ಆಗಬೇಕು ಎಂದಿದ್ದಾರೆ ಶ್ವೇತಾ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ
ಯುದ್ಧ ಶುರುವಾದಾಗಿನಿಂದ ತಮಗೆ ಯಾವ ಕೆಲಸದಲ್ಲೂ ಆಸಕ್ತಿ ಕಾಣುತ್ತಿಲ್ಲ ಎಂದಿರುವ ಅವರು, ಎಲ್ಲರೂ ನನ್ನ ಗೆಳತಿಯ ಸುರಕ್ಷತೆಗಾಗಿ ಪ್ರಾರ್ಥಿಸಿ ಅಂದಿದ್ದಾರೆ. ಅವರ ಕುಟುಂಬಕ್ಕೂ ಕೂಡ ಧೈರ್ಯ ತುಂಬುವ ಕೆಲಸ ಆಗಲಿ ಎಂದು ಶ್ವೇತಾ ಬರೆದುಕೊಂಡಿದ್ದಾರೆ.
ಮಾಸ್ಕೋ: ರಷ್ಯಾ – ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ ಸಂಬಂಧ ಮುರಿದು ಬಿದ್ದಿದೆ. ಇತ್ತ ರಷ್ಯಾ- ಉಕ್ರೇನ್ ಯುದ್ಧ ವಿಚಾರವಾಗಿ ಇತರ ರಾಷ್ಟ್ರಗಳು ಮೂಗುತೂರಿಸಬೇಡಿ ಎಂದು ಪುಟಿನ್ ನೇರವಾಗಿ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ. ಈ ವಿಚಾರದಲ್ಲಿ ಯಾವುದೇ ರಾಷ್ಟ್ರಗಳು ಮೂಗುತೂರಿಸದಂತೆ ಇತರ ರಾಷ್ಟ್ರಗಳಿಗೆ ವಾಡ್ಲಿಮಿರ್ ಪುಟೀನ್ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಇತ್ತೀಚಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದು, ಹಸ್ತಕ್ಷೇಪ ಮಾಡುವ ಇತರ ರಾಷ್ಟ್ರಗಳು ಪರಿಣಾಮ ಎದುರಿಸಬೇಕಾದಿತು. ಈ ಹಿಂದೆ ಎಂದೂ ನೋಡಿರದ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪುಟೀನ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್
ಈ ಬಗ್ಗೆ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಪ್ರತಿಕ್ರಿಯಿಸಿ, ಪುಟಿನ್ ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ. ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ ಮತ್ತು ಗೆಲ್ಲುತ್ತದೆ. ಇದೊಂದು ಆಕ್ರಮಣಕಾರಿ ಯುದ್ಧ ಜಗತ್ತು ಪುಟೀನ್ ಅವರನ್ನು ತಡೆಯಬಹುದು ಮತ್ತು ತಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಉಕ್ರೇನ್ನಿಂದ ಜನ ಮಹಾವಲಸೆ ಆರಂಭಿಸಿದ್ದಾರೆ. ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಉಕ್ರೇನ್ ರಾಯಭಾರಿ ಕೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.
ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಹಿನ್ನೆಲೆ ರಷ್ಯಾ ದೇಶದ ನಡೆಯನ್ನು ಬ್ರಿಟನ್ ಮತ್ತು ಮಿತ್ರರಾಷ್ಟ್ರಗಳು ನಿರ್ಣಾಯಕವಾಗಿ ಪ್ರತಿಕ್ರಿಯಿಸಲಿವೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನಿಡಿದ್ದಾರೆ. ಇತ್ತ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ನಾಳೆ ಜಿ 7 ರಾಷ್ಟ್ರಗಳ ಸಭೆ ಕರೆದಿದ್ದಾರೆ. ಅಮೇರಿಕಾ, ಕೆನಡಾ, ಫ್ರಾನ್ಸ್, ಜರ್ಮನಿ, ಯುಕೆ, ಜಪಾನ್, ಇಟಲಿ ನಡುವೆ ನಾಳೆ ಜಿ7 ಸಭೆ ನಡೆಯಲಿದೆ.
ಬೆಳಗಾವಿ: ಉಕ್ರೇನ್ನಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇಬ್ಬರು ವಿದ್ಯಾರ್ಥಿಗಳು ಕೂಡ ಸುರಕ್ಷಿತವಾಗಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ನಿವಾಸಿ ಪ್ರಿಯಾ ನಿಡಗುಂದಿ ಹಾಗೂ ಗೋಕಾಕ್ ತಾಲೂಕಿನ ಘಟಪ್ರಭಾದ ನಿವಾಸಿ ಅಮೋಘಾ ಚೌಗಲಾ ಎಂಬ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು
ಸದ್ಯ ಉಕ್ರೇನ್ನಲ್ಲಿ ಯದ್ಧ ಆರಂಭವಾದ ಹಿನ್ನೆಲೆ ಕಾಲೇಜಿನ ವಸತಿ ನಿಲಯದಲ್ಲೇ ಇಬ್ಬರು ವಿದ್ಯಾರ್ಥಿಗಳು ಉಳಿದುಕೊಂಡಿದ್ದಾರೆ. ಉಕ್ರೇನ್ನಲ್ಲಿ ಯುದ್ಧ ಆರಂಭವಾಗಿದ್ದರಿಂದ ಇಬ್ಬರು ವಿದ್ಯಾರ್ಥಿಗಳ ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ:ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ
ಬೆಂಗಳೂರು: ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಿಯಾಂಕ ವಿದ್ಯಾರ್ಥಿನಿ(ಬೆಂಗಳೂರು):
ನಾವು ಉಕ್ರೇನ್ನಲ್ಲಿ ಇದ್ದೇವೆ. ಇಲ್ಲಿ ಭಯ ಇದ್ದರೂ, ಎಲ್ಲರೂ ಸುರಕ್ಷಿತವಾಗಿ ಇದ್ದಾರೆ. ಇಲ್ಲಿ ಊಟ ಮತ್ತು ನೀರಿಗೆ ಜನರ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ದಿನಸಿ ಅಂಗಡಿ ಮುಂದೆ ತುಂಬಾ ಜನರು ನಿಂತಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.
ಎಲ್ಲರೂ ಸುರಕ್ಷಿತವಾಗಿದ್ದೇವೆ. ನಾವು ಮಾರುಕಟ್ಟೆ ಮುಂದೆ ಇದ್ದೇವೆ. ಇಲ್ಲಿ ತುಂಬಾ ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸಾಲಾಗಿ ನಿಂತಿದ್ದಾರೆ. ಅಲ್ಲದೆ ನೀರಿಗೆ ಇಲ್ಲಿ ತುಂಬಾ ಸಮಸ್ಯೆಯಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ನಾವು ಇರುವ ಜಾಗದಲ್ಲಿ 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ. ಬೇರೆ ಕಡೆಯೂ ತುಂಬಾ ಜನರಿದ್ದಾರೆ. ಇಲ್ಲಿರುವ ಹಲವು ವಿದ್ಯಾರ್ಥಿಗಳು ಮೆಡಿಕಲ್ ಓದುತ್ತಿದ್ದಾರೆ. ಒಂದು ವಾರದಿಂದಲೂ ಇಲ್ಲಿಂದ ಹೋಗಿ ಎಂದು ತಿಳಿಸಲಾಗಿತ್ತು. ಸೂಚನೆ ಕೊಟ್ಟ ಕೆಲವು ದಿನಗಳಲ್ಲಿ ಹಲವು ಮಂದಿ ತಮ್ಮ ದೇಶಕ್ಕೆ ಹೋಗಿದ್ದಾರೆ. ಆದರೆ ಈ ವಾರ ಹೋಗಬೇಕು ಎಂದುಕೊಂಡವರು ಇಲ್ಲೇ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.
ವಿಮಾನದ ಟಿಕೆಟ್ ಬುಕ್ ಮಾಡಿಕೊಂಡಿದ್ದು, ಈಗ ರದ್ದಾಗಿದೆ. ಕಳೆದ ವಾರ ಹೇಳಿದ್ರಿಂದ ಎಷ್ಟೋ ಜನರಿಗೆ ಇವತ್ತು ಟಿಕೆಟ್ ಸಿಕ್ಕಿತ್ತು. ಕಳೆದ ವಾರ ಟಿಕೆಟ್ ಸಿಕ್ಕಿರಲಿಲ್ಲ. ಅಲ್ಲದೆ ದುಡ್ಡು ಸಹ ಹೆಚ್ಚಿತ್ತು ಎಂದು ತಿಳಿಸಿದರು.
ಕರ್ನಾಟಕದಲ್ಲಿ ನಾನು ಬೆಂಗಳೂರುನಲ್ಲಿ ಇದ್ದೇನೆ. ಪ್ರಸ್ತುತ ನಾವು ಇರುವ ಜಾಗದಲ್ಲಿ ಯಾವುದೇ ರೀತಿಯ ತೊಂದರೆ ಆಗಿಲ್ಲ. ದಾಳಿಯು ಗಡಿ ಪ್ರದೇಶದಲ್ಲಿ ನಡೆಯುತ್ತಿದೆ. ನಮಗೂ ದಾಳಿ ನಡೆಯುತ್ತಿರುವ ಜಾಗಕ್ಕೂ 300 ಕಿ.ಮೀ ದೂರ ಇದೆ ಎಂದರು.
ನಾವಿರುವ ಪ್ರದೇಶದ ಗಡಿ ರಷ್ಯಾ ಗಡಿಗೆ ಹತ್ತಿರವಿದೆ. ಇದು ಉತ್ತರದಲ್ಲಿ ಬರುತ್ತೆ. ನಮ್ಮ ಸ್ನೇಹಿತರೆಲ್ಲ ಒಂದೇ ಕಡೆ ಇದ್ದೇವೆ. ಇಲ್ಲಿನ ಸರ್ಕಾರ ಹೆಚ್ಚು ಹೊರಗಡೆ ಓಡಾಡಬೇಡಿ. ನಿಮಗೆ ಬೇಕಿರುವ ವಸ್ತುಗಳನ್ನು ತೆಗೆದುಕೊಳ್ಳಿ ಎಂದು ತಿಳಿಸಿದೆ ಎಂದು ವಿವರಿಸಿದರು.
ನಮ್ಮ ಸ್ನೇಹಿತರ ಜೊತೆ ಸೋಶಿಯಲ್ ಮೀಡಿಯಾ ಮೂಲಕ ಸಂಪರ್ಕದಲ್ಲಿ ಇದ್ದೇವೆ. ಗುಂಪಿನಲ್ಲಿ ಇರಬೇಕು ಎಂದು ಹೇಳುತ್ತಿಲ್ಲ. ಬದಲಿಗೆ ಎಲ್ಲೇ ಇದ್ರೂ ಸುರಕ್ಷಿತವಾಗಿ ಇರಬೇಕೆಂದು ಹೇಳುತ್ತಿದ್ದಾರೆ. ಹೊರಗೆ ಹೆಚ್ಚು ಬರಬಾರದು ಎಂದು ಹೇಳಿದ್ದಾರೆ. ಭಯಪಡಬೇಡಿ ಎಂದು ಹೇಳಿದ್ದಾರೆ ಎಂದರು.
ಇಲ್ಲಿ ಇರುವ ಎಷ್ಟೋ ಪ್ರಜೆಗಳು ಬೇರೆ ಕಡೆ ಹೋಗಲು ಸಿದ್ಧರಾಗಿ ನಿಂತಿದ್ದಾರೆ. ಅಲ್ಲದೆ ತಮ್ಮ ಬಟ್ಟೆಗಳನ್ನು ತುಂಬಿಕೊಂಡು ಬಂದು ಬೇರೆ ಕಡೆ ಹೋಗಲು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾರೆ ಎಂದು ಹೇಳಿದರು.
ನಾಗೇಶ್ ಪೂಜಾರಿ ವಿದ್ಯಾರ್ಥಿ(ಬೆಳಗಾವಿ)
ನಾವು ಎಲ್ಲರೂ ಸುರಕ್ಷಿರವಾಗಿ ಇದ್ದೇವೆ. 4 ವರ್ಷದಿಂದ ಇಲ್ಲೇ ಓಡುತ್ತಿದ್ದೇನೆ. ನಾನು ಮೆಡಿಕಲ್ ಓದುತ್ತಿದ್ದೇನೆ. ಇಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ. ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದರು.
ನಾವು ಭಯ ಪಡುವುದಿಲ್ಲ. ಅಲ್ಲದೆ ನಾವೆಲ್ಲ ಸುರಕ್ಷಿತವಾಗಿ ಇದ್ದೇವೆ. ನಮಗೆ ಬೇಕಾಗಿರುವ ಎಲ್ಲ ರೀತಿಯ ವಸ್ತುಗಳು ಸಿಗುತ್ತಿದೆ. ನನ್ನ ಜೊತೆ ಈಗ 250 ಜನಕ್ಕೂ ಹೆಚ್ಚು ಜನರು ಇದ್ದಾರೆ. 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ ಎಂದು ವಿವರಿಸಿದರು.
ನಾವು ಸಹ ವಿಮಾನವನ್ನು ಬುಕ್ ಮಾಡಿದ್ದೆವು. ಆದರೆ ಟಿಕೆಟ್ ಸಿಗಲಿಲ್ಲ. ಈಗ ನಮಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದೇವೆ. ದಿನಸಿ ಸಿಗುತ್ತಿದೆ. ಅದಕ್ಕೆಲ್ಲ ತೊಂದರೆ ಇಲ್ಲ ಎಂದರು. ಇದನ್ನೂ ಓದಿ: ಉಕ್ರೇನ್ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ಉಕ್ರೇನ್ ವಿದ್ಯಾರ್ಥಿ:
ವಾತಾವರಣ ಶಾಂತಿಯಿಂದ ಇದೆ. ಈಗ ನಮ್ಮನ್ನು ರೂಮ್ ಒಳಗೆ ಬಿಟ್ಟು ಊಟಕ್ಕೆ ತಯಾರಿ ಮಾಡುತ್ತಿದ್ದಾರೆ. ಇವತ್ತೆ ದಾಳಿ ನಡೆಯುತ್ತೆ ಎಂದು ನಮಗೆ ತಿಳಿದಿರಲಿಲ್ಲ. ಬೆಳಗ್ಗೆ 8 ಗಂಟೆಗೆ ದಾಳಿ ಮಾಡುವ ಶಬ್ದ ಕೇಳಿಸಿತು. ನಾವು ಇದ್ದ ಸ್ವಲ್ಪ ದೂರದಲ್ಲಿ ಶಬ್ದ ಕೇಳಿಸಿತು. ಸುದ್ದಿ ತಿಳಿದ ತಕ್ಷಣ ನಾವು ನಮ್ಮ ಕುಟುಂಬದ ಜೊತೆ ಮಾತನಾಡಿ ವಿಷಯ ತಿಳಿಸಿದ್ದೆವು ಎಂದರು.
ನಮ್ಮ ವಿಮಾನವು ಮೊದಲೇ ಬುಕ್ ಆಗಿತ್ತು. ಆದರೆ ನಾವು ಹೋಗ ಕೊನೆ ಕ್ಷಣದಲ್ಲಿ ವಿಮಾನ ರದ್ದಾಯಿತು. ಈ ಹಿನ್ನೆಲೆ ನಾವು ಮತ್ತೆ ವಾಪಸ್ ಬಂದೆವು. ಈಗ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ನಾವೆಲ್ಲರೂ ರೂಂಗೆ ಬಂದಿದ್ದೇನೆ. ಭಾರತೀಯರು ತುಂಬಾ ಜನ ಇದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು
ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ವಿಶ್ವವನ್ನೇ ಆತಂಕಕ್ಕೆ ದೂಡಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ. ಈ ವಿಚಾರವಾಗಿ ಯಾರಾದರೂ ಮಧ್ಯಪ್ರವೇಶಿಸಿದರೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಇತರ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಉಕ್ರೇನ್ನ ಕೈವ್, ಖಾರ್ಕಿವ್ ಮತ್ತು ಇತರ ಪ್ರದೇಶಗಳಲ್ಲಿ ದೊಡ್ಡ ಸ್ಫೋಟಗಳು ಸಂಭವಿಸಿವೆ. ಸಾಮಾನ್ಯವಾಗಿ ಸಿನಿಮಾ ಶೂಟಿಂಗ್ ನಡೆಸಲು ಉಕ್ರೇನ್ ಸಾಕಷ್ಟು ಫೇಮಸ್ ಪ್ಲೇಸ್ಗಳಿದ್ದು, ಉಕ್ರೇನ್ನಲ್ಲಿ ಭಾರತದ ಹಲವಾರು ಸಿನಿಮಾಗಳನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ : ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆದರಿಸಿದ ಬಿಗ್ ಬಾಸ್ ಪ್ರಥಮ್
RRR
ಕಳೆದ ವರ್ಷ ಆಗಸ್ಟ್ನಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅಭಿನಯದ ಬಹು ನಿರೀಕ್ಷಿತ ಆರ್ಆರ್ಆರ್ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಉಕ್ರೇನ್ನಲ್ಲಿ ನಡೆಸಲಾಗಿತ್ತು. ಎಸ್ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರದಲ್ಲಿ ಜ್ಯೂನಿಯರ್ ಎನ್ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಸಮುದ್ರಕನಿ, ರೇ ಸ್ಟೀವನ್ಸನ್, ಅಲಿಸನ್ ಡೂಡಿ, ಶ್ರಿಯಾ ಸರನ್ ಮತ್ತು ಒಲಿವಿಯಾ ಮೋರಿಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆರ್ಆರ್ಆರ್ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಾದ ಕೋಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಅವರ ಕಾಲ್ಪನಿಕ ಕಥಾಹಂದರವಾಗಿದೆ.
Team #RRRMovie arrives in #Ukraine for the last schedule of the film… Excited????????????????
99 ಸಾಂಗ್ಸ್
’99 ಸಾಂಗ್ಸ್’ ಸಿನಿಮಾ ನಿರ್ಮಾಣ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಈ ಸಿನಿಮಾದ ಹಾಡುಗಳನ್ನು ಉಕ್ರೇನ್ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಐಡಿಯಲ್ ಎಂಟರ್ಟೈನ್ಮೆಂಟ್ ಜೊತೆಗೆ ವೈಎಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. 99 ಸಾಂಗ್ಸ್ ಅನ್ನು ಭಾರತದಲ್ಲಿ ಮತ್ತು ಉಕ್ರೇನ್ನಲ್ಲಿ ಚಿತ್ರೀಕರಣ ನಡೆಸಲಾಗಿತ್ತು. 99 ಸಾಂಗ್ಸ್ನ ಆರಂಭದಲ್ಲಿ ಇಹಾನ್ ಭಟ್ ಮತ್ತು ಎಡಿಲ್ಸಿ ವರ್ಗಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಆದಿತ್ಯ ಸೀಲ್, ಲೀಸಾ ರೇ ಮತ್ತು ಮನಿಶಾ ಕೊಯಿರಾಲಾ ಪೋಷಕ ಪಾತ್ರಗಳಲ್ಲಿದ್ದಾರೆ.
2.0
ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಆಮಿ ಜಾಕ್ಸನ್ ಅಭಿನಯದ 2.0 ಸಿನಿಮಾದ ಸಾಂಗ್ ಶೂಟಿಂಗ್ ಉಕ್ರೇನ್ನ ಟನಲ್ ಆಫ್ ಲವ್ನಲ್ಲಿ ಚಿತ್ರೀಕರಿಸಲಾಗಿತ್ತು. ಈ ಸಿನಿಮಾದ ರೋಜಾ ಕಾದಲ್ ಎಂಬ ಹಾಡನ್ನು ಎ.ಆರ್ ರೆಹಮಾನ್ ಸಂಯೋಜಿಸಿದ್ದಾರೆ. ಇನ್ನೂ ಈ ಸಾಂಗ್ನಲ್ಲಿ ಬರುವ ಉಕ್ರೇನ್ ದೃಶ್ಯಗಳು ಬಹಳ ಅದ್ಭುತವಾಗಿ ಮೂಡಿಬಂದಿದೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ
ದೇವ್
ದೇವ್ ರಜತ್ ರವಿಶಂಕರ್ ಬರೆದು ನಿರ್ದೇಶಿಸಿರುವ 2019ರ ತಮಿಳಿನ ರೋಮ್ಯಾಂಟಿಕ್ ಆ್ಯಕ್ಷನ್ ಸಿನಿಮಾವಾಗಿದೆ. ಚಿತ್ರದಲ್ಲಿ ಕಾರ್ತಿಕ್ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿದ್ದಾರೆ. ಪ್ರಕಾಶ್ ರಾಜ್ ಮತ್ತು ರಮ್ಯಾ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥಾವಸ್ತುವು ಮಾಜಿ ಭಾರತೀಯ ಕ್ರಿಕೆಟ್ ನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ಕಪಿಲ್ ದೇವ್ ಅವರ ಜೀವನ ಪ್ರೇರಿತವಾಗಿದೆ. ಇನ್ನು ಈ ಸಿನಿಮಾದ ಶೂಟಿಂಗ್ ದೃಶ್ಯಗಳನ್ನು ಚೆನ್ನೈ, ಹೈದರಾಬಾದ್, ಬೆಂಗಳೂರು, ಮುಂಬೈ, ಪುಣೆ, ಕುಲು, ಮನಾಲಿ, ಹಿಮಾಲಯ, ಗುಲ್ಮಾರ್ಗ್, ಉಕ್ರೇನ್ ಮತ್ತು ಕಾರ್ಪಾಥಿಯನ್ ಪರ್ವತಗಳಂತಹ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. 2018ರ ನವೆಂಬರ್ ಆರಂಭದಲ್ಲಿ ಉಕ್ರೇನ್ನಲ್ಲಿ ಚಿತ್ರೀಕರಣ ಮಾಡಲಾಯಿತು.
ವಿನ್ನರ್
ವಿನ್ನರ್ 2017ರಲ್ಲಿ ತೆರೆಕಂಡ ತೆಲುಗಿನ ಆ್ಯಕ್ಷನ್, ಕಾಮಿಡಿ ಸಿನಿಮಾವಾಗಿದ್ದು, ಶ್ರೀ ಲಕ್ಷ್ಮಿ ನರಸಿಂಹ ಪ್ರೊಡಕ್ಷನ್ಸ್ ಮತ್ತು ಲಿಯೋ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಲ್ಲಮಲುಪು ಬುಜ್ಜಿ, ಟ್ಯಾಗೋರ್ ಮಧು ಜಂಟಿಯಾಗಿ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಸಾಯಿ ಧರಮ್ ತೇಜ್, ರಾಕುಲ್ ಪ್ರೀತ್ ಸಿಂಗ್ ಮತ್ತು ಜಗಪತಿ ಬಾಬು ನಟಿಸಿದ್ದಾರೆ. ಇದರ ಶೂಟಿಂಗ್ ಸ್ಥಳಗಳಲ್ಲಿ ಕೈವ್, ಎಲ್ವಿವ್ ಮತ್ತು ಇಸ್ತಾನ್ಬುಲ್ನಲ್ಲಿ ಚಿತ್ರೀಕರಿಸಲಾಗಿದೆ.
ಈ ಚಿತ್ರತಂಡವು ಉಕ್ರೇನ್ನಲ್ಲಿ ಮೂರು ಹಾಡುಗಳನ್ನು ಚಿತ್ರೀಕರಿಸಿದೆ. ವಿನ್ನರ್ ಸಿನಿಮಾ ಉಕ್ರೇನ್ನಲ್ಲಿ ಚಿತ್ರೀಕರಿಸಲಾದ ಮೊದಲ ಭಾರತೀಯ ಚಲನಚಿತ್ರವಾಗಿದೆ ಎಂದು ನಿರ್ದೇಶಕ ಗೋಪಿಚಂದ್ ಮಲಿನೇನಿ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಯುದ್ಧ ಸಾರಿದ್ದಾರೆ. ತಮ್ಮ ಭಾಷಣದಲ್ಲಿ ತಮ್ಮ ಈ ವಿಚಾರದಲ್ಲಿ ಬೇರೆಯವರು ಮಧ್ಯ ಪ್ರವೇಶ ಮಾಡಿದರೆ ರಷ್ಯಾ ಕೂಡಲೇ ಪ್ರತಿದಾಳಿ ನಡೆಸಲಿದೆ ಮತ್ತು ಇತಿಹಾಸದಲ್ಲಿ ಕೇಳರಿಯದ ರೀತಿ ತಿರುಗೇಟು ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಇಲ್ಲಿ ಉಕ್ರೇನ್ ಮೇಲೆ ರಷ್ಯಾದ ಕಣ್ಣು ಯಾಕೆ? ಉಕ್ರೇನ್ ಎಷ್ಟು ಶ್ರೀಮಂತ ಇತ್ಯಾದಿ ವಿಚಾರಗಳ ಬಗ್ಗೆ ಕಿರು ಮಾಹಿತಿಯನ್ನು ನೀಡಲಾಗಿದೆ.
ಪ್ರಜಾಪ್ರಭುತ್ವ ದೇಶ:
ರಷ್ಯಾ-ಉಕ್ರೇನ್ ನಿವಾಸಿಗಳ ಧರ್ಮ, ಆಚಾರ, ವಿಚಾರ, ಆಹಾರ, ಉಡುಗೆ ಎಲ್ಲವೂ ಒಂದೇ. ಇದರ ಜೊತೆ ಉಕ್ರೇನ್ನಲ್ಲಿ ಫಲವತ್ತಾದ ಭೂಮಿ, ಖನಿಜ ಸಂಪತ್ತು ಹೇರಳವಾಗಿದೆ. ಪ್ರಾಚೀನ ನಾಗರಿಕತೆಯ ಪರಂಪರೆ ಉಳ್ಳ ಉಕ್ರೈನ್, ಕಮ್ಯುನಿಸ್ಟ್ ಸೋವಿಯತ್ ತೆಕ್ಕೆಯಲ್ಲಿ ಬಹುಕಾಲ ಇತ್ತು. 1991 ರಲ್ಲಿ ಸೋವಿಯತ್ ಪತನವಾಗಿ 15 ಹೋಳುಗಳಾದಾಗ ಮರಳಿ ಜನಿಸಿದ ಉಕ್ರೈನ್ ಸಮೃದ್ಧವಾಗಿ ಬೆಳೆಯತೊಡಗಿತು.
ಸ್ಟಾಲಿನ್ನಂತಹ ಸರ್ವಾಧಿಕಾರಿಯ ಕಾಲದಲ್ಲಿ ಉಕ್ರೇನ್ನಲ್ಲಿ ಬರಗಾಲವನ್ನುಂಟುಮಾಡಿ ಉಕ್ರೇನಿಯನ್ನರನ್ನು ಉಪವಾಸದಲ್ಲಿರಿಸಿ, ಸಾಯಿಸಿ, ಆ ಜಾಗದಲ್ಲಿ ರಷ್ಯನ್ನರನ್ನು ವಲಸೆ ಕಳುಹಿಸಿದಂತಹ ಕೆಲಸವನ್ನೂ ರಷ್ಯಾ ಮಾಡಿತ್ತು. ರಷ್ಯಾದ ಹಿಡಿತದಲ್ಲಿದ್ದಷ್ಟು ದಿನವೂ ರಷ್ಯನ್ ನುಡಿಯ ಹೇರಿಕೆಯನ್ನು ಅನುಭವಿಸಿದ್ದ ಉಕ್ರೇನ್ ಸೋವಿಯತ್ ಪತನದ ಬಳಿಕ ಒಂದು ಆಧುನಿಕ ಪ್ರಜಾಪ್ರಭುತ್ವ ದೇಶವಾಗಿ ಬೆಳೆಯತೊಡಗಿತು.
ರಷ್ಯಾದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ತನ್ನ ಎದುರಾಳಿಗಳನ್ನು ಕೊಂದು ಇಲ್ಲವೇ ಜೈಲಿಗೆ ದಬ್ಬಿ ಮೆರೆಯುತ್ತಿದ್ದ ಪುಟಿನ್ಗೆ ಪಕ್ಕದಲೇ ಒಂದು ಯಶಸ್ವಿ ಪ್ರಜಾಪ್ರಭುತ್ವ ನೆಲೆಯಾಗಿ ಉಕ್ರೇನ್ ಬದಲಾಗುತ್ತಿರುವುದು ಇಷ್ಟವಾಗುತ್ತಿರಲಿಲ್ಲ. ಉಕ್ರೇನಿಯನ್ನರನ್ನು ನೋಡಿ ಎಲ್ಲಿ ರಷ್ಯನ್ನರು ಬಂಡೇಳುತ್ತಾರೋ ಎನ್ನುವ ಆತಂಕ ರಷ್ಯಾಗೆ ಇತ್ತು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ
ಪುಟಿನ್ ಮಾಡಿದ್ದು ಏನು?
ಸಂಪತ್ಭರಿತ ದೇಶವಾಗಿರುವ ಉಕ್ರೇನ್ ಮೇಲೆ ಕಣ್ಣು ಹಾಕಿದ್ದ ಪುಟಿನ್ ಉಕ್ರೇನ್ನಲ್ಲಿರುವ ಬಂಡಾಯ ಹೋರಾಟಗಾರರಿಗೆ ಸಹಕಾರ ನೀಡತೊಡಗಿದರು. ಒಂದು ದೇಶವನ್ನು ಕೆಡವಬೇಕಾದರೆ ಆ ದೇಶದ ಸರ್ಕಾರದ ವಿರುದ್ಧವೇ ಜನರನ್ನು ದಂಗೆ ಏಳುವಂತೆ ಮಾಡುವು ತಂತ್ರ ಹೊಸದೆನಲ್ಲ. ಈ ತಂತ್ರವನ್ನೇ ಬಳಸಿಕೊಂಡ ರಷ್ಯಾ ಉಕ್ರೇನ್ ಬಂಡಾಯ ಹೋರಾಟಗಾರರಿಗೆ ಆರ್ಥಿಕ ಸಹಕಾರ, ಶಸ್ತ್ರಾಸ್ತ್ರವನ್ನು ನೀಡಿ ಬಂಡಾಯ ಏಳುವಂತೆ ಮಾಡಿ ಯಶಸ್ವಿಯಾಯಿತು.
ನ್ಯಾಟೋ ಸಹಕಾರ:
ರಷ್ಯಾದಿಂದ ಕಿರಿಕ್ ಜಾಸ್ತಿ ಆಗುತ್ತಿದ್ದಂತೆ ಉಕ್ರೇನ್ ಯುರೋಪ್ ರಾಷ್ಟ್ರಗಳ ಪರ ವಾಲತೊಡಗಿತು. ಯುರೋಪಿನ ನ್ಯಾಟೋ ಒಕ್ಕೂಟಕ್ಕೆ ಉಕ್ರೇನ್ ಸೇರಲು ಯತ್ನಿಸುತ್ತಿದ್ದಂತೆ ಪುಟಿನ್ ಸಿಟ್ಟಿಗೆ ಕಾರಣವಾಗಿತು. ಯಾವುದೇ ಕಾರಣಕ್ಕೂ ಉಕ್ರೇನ್ ನ್ಯಾಟೋಗೆ ಸೇರಬಾರದು ಮೊದಲು ಹೇಗಿತ್ತೋ ಅದೇ ರೀತಿಯಾಗಿ ಮುಂದುವರಿಯಬೇಕು ಎನ್ನುವುದು ಪುಟಿನ್ ವಾದ. ಈ ವಾದಕ್ಕೆ ಉಕ್ರೇನ್ ಸೊಪ್ಪು ಹಾಕದ ಕಾರಣ ಪುಟಿನ್ ಈಗ ಯುದ್ಧ ಘೋಷಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್
ರಷ್ಯಾಗೆ ಭಯ ಯಾಕಿಲ್ಲ?
ಪ್ರಸ್ತುತ ವಿಶ್ವದ ಸೂಪರ್ ಪವರ್ ದೇಶವಾದ ಅಮೆರಿಕ ಈಗಾಗಲೇ ಕೋವಿಡ್ನಿಂದ ಆರ್ಥಿಕವಾಗಿ ಭಾರೀ ನಷ್ಟವಾಗಿದೆ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿದ್ದ ಯುರೋಪ್ ದೇಶಗಳು ಕೊರೊನಾದಿಂದ ಈಗಷ್ಟೇ ಚೇತರಿಕೆ ಕಾಣುತ್ತಿದೆ.
ಆರ್ಥಿಕತೆ ನೆಲಕಚ್ಚಿರುವ ಯುರೋಪ್ ದೇಶಗಳು ಯುದ್ಧಕ್ಕೆ ಆಸಕ್ತಿ ತೋರಿಸಿದರೂ ಭಾರೀ ನಷ್ಟ ಅನುಭವಿಸಲಿದೆ. ರಷ್ಯಾಗೆ ವಿವಿಧ ದೇಶಗಳು ನಿರ್ಬಂಧ ಹೇರಿದರೂ ರಷ್ಯಾ ಈಗಾಗಲೇ ತನ್ನ ಕಾಲ ಮೇಲೆ ನಿಂತುಕೊಂಡಿದೆ. ತೈಲವನ್ನು ತಾನೇ ಉತ್ಪಾದನೆ ಮಾಡುತ್ತದೆ. ಆಹಾರ ಸಾಮಾಗ್ರಿಗಳಿಗೆ ಯಾವುದೇ ಸಮಸ್ಯೆ ಆಗಲಾರದು. ಇದನ್ನೂ ಓದಿ: Russia-Ukraine Crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ
ಚೀನಾ ಈಗಾಗಲೇ ರಷ್ಯಾಗೆ ಸಹಕಾರ ನೀಡಿದೆ. ಎಸ್ 400 ವಾಯು ರಕ್ಷಣಾ ವ್ಯವಸ್ಥೆ ಹೊಂದಿರುವ ಏಕೈಕ ರಾಷ್ಟ್ರ ರಷ್ಯಾ. ಮಿಲಿಟರಿ, ವಾಯು, ನೌಕಾ ಸೇನೆ ವಿಚಾರದಲ್ಲೂ ರಷ್ಯಾ ಪ್ರಭಲ ದೇಶವಾಗಿ ಹೊರಹೊಮ್ಮಿದೆ. ಈ ಎಲ್ಲ ಕಾರಣದಿಂದ ಪುಟಿನ್ ಅಮೆರಿಕ, ನ್ಯಾಟೋ ಪಡೆಗಳ ಬೆದರಿಕೆಗೆ ಜಗ್ಗದೇ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದಾರೆ.