Tag: ರಾಂಪುರ

  • ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

    – ಭಾವಿ ಸೊಸೆ ಜೊತೆ ಏಕಾಂತದಲ್ಲಿ ಇದ್ದಾಗಲೇ ಪತ್ನಿಗೆ ಸಿಕ್ಕಿಬಿದ್ದ ಶಕೀಲ್‌

    ಲಕ್ನೋ: ಉತ್ತರ ಪ್ರದೇಶದ (Uttar Pradesh) ರಾಂಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗನಿಗೆ ನಿಶ್ಚಯಿಸಿದ್ದ ಹುಡುಗಿಯನ್ನೇ ಪ್ರೀತಿಸಿ ಮದುವೆಯಾಗಿರುವ ಘಟನೆ ನಡೆದಿದೆ.

    ಶಕೀಲ್‌ ಎಂಬ ವ್ಯಕ್ತಿ ತನ್ನ ಮಗನ ಮದುವೆಗೆ ಹೆಣ್ಣನ್ನು ನಿಶ್ಚಯ ಮಾಡಿದ್ದ. ಬಳಿಕ ಆಕೆಯೊಂದಿಗೆ ಫೋನ್‌ನಲ್ಲಿ ಮಾತನಾಡಿ ಸಲುಗೆ ಬೆಳೆಸಿಕೊಂಡ. ಆಕೆಯನ್ನು ಬಲೆಗೆ ಬೀಳಿಸಿ ಸಂಬಂಧ ಬೆಳೆಸಿದ್ದ. ಇದನ್ನೂ ಓದಿ: ಆಸ್ತಿಯ ದುರಾಸೆ, ರೋಗಿಯೊಂದಿಗೇ ಚಕ್ಕಂದ – ʻಪಾರಿತೋಷʼನ ಪ್ರೇಮಕ್ಕೆ ಪತಿಯನ್ನೇ ಕೊಂದ ಫಿಸಿಯೋಥೆರಪಿಸ್ಟ್‌ ಪತ್ನಿ

    ಮಗನಿಗೆ ನಿಶ್ಚಯಿಸಿದ್ದ ಹೆಣ್ಣಿನ ಜೊತೆ ಏಕಾಂತದಲ್ಲಿದ್ದಾಗ ಶಕೀಲ್‌ ತನ್ನ ಪತ್ನಿ ಹಾಗೂ ಮಗನಿಗೆ ಸಿಕ್ಕಿಬಿದ್ದಿದ್ದ. ಪರಿಣಾಮ ಕುಟುಂಬದಲ್ಲಿ ಗಲಾಟೆ ನಡೆದಿತ್ತು. ಕೊನೆಗೆ ಆಕೆಯನ್ನು ತನ್ನ ಮಗನಿಗೆ ಕೊಟ್ಟು ಮದುವೆ ಮಾಡಲು ಶಕೀಲ್‌ ಪತ್ನಿ ಶಬಾನಾ ನಿರಾಕರಿಸಿದಳು. ಇದರಿಂದ ಕೋಪಗೊಂಡು ಆರೋಪಿ ಶಕೀಲ್‌ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ.

    ಶಕೀಲ್‌ಗೆ ಆರು ಮಕ್ಕಳಿದ್ದಾರೆ. ಮಗನಿಗೆ ನಿಶ್ಚಯಿಸಿದ್ದ ಹೆಣ್ಣಿನ ಜೊತೆ ಶಕೀಲ್‌ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಆತನ ಪತ್ನಿ ಶಬಾಬಾಗೆ ಗುಮಾನಿ ಇತ್ತು. ತನ್ನ ಪತಿ ಹಾಗೂ ಮಗನಿಗೆ ನಿಶ್ಚಯಿಸಿದ್ದ ಹೆಣ್ಣು ಒಟ್ಟಿಗೆ ಇದ್ದಾಗ ಸಾಕ್ಷಿ ಸಮೇತ ಶಬಾನಾ ಹಿಡಿದಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ 5ನೇ ತಲೆಮಾರಿನ 40 ಸ್ಟೆಲ್ತ್ ಫೈಟರ್ ಜೆಟ್‌ ಪೂರೈಸಲು ಚೀನಾ ಮೆಗಾ ಡೀಲ್‌

    ನನ್ನ ಪತಿ ಆಕೆಗೆ ಇಡೀ ದಿನ ಫೋನ್‌ ಕರೆ ಮಾಡಿ ಮಾತನಾಡುತ್ತಾನೆ. ಮೊದಲಿಗೆ ಯಾರೂ ನನ್ನ ಮಾತನ್ನು ನಂಬಲಿಲ್ಲ. ನಂತರ ನನ್ನ ಮಗ ಮತ್ತು ನಾನು ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿದೆವು. ತನ್ನ ತಂದೆಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ನಂತರ ಆಕೆಯನ್ನು ಮದುವೆಯಾಗಲು ನನ್ನ ಮಗ ನಿರಾಕರಿಸಿದ್ದಾನೆ. ಅವನ ಅಜ್ಜ-ಅಜ್ಜಿಯರಿಗೂ ಅವರಿಬ್ಬರ ನಡುವಿನ ಸಂಬಂಧದ ಬಗ್ಗೆ ತಿಳಿದಿತ್ತು. ಶಕೀಲ್ 2 ಲಕ್ಷ ರೂಪಾಯಿ ನಗದು ಮತ್ತು ಸುಮಾರು 17 ಗ್ರಾಂ ಚಿನ್ನಾಭರಣವನ್ನು ತೆಗೆದುಕೊಂಡು ಹೋಗಿ ಆಕೆಯನ್ನು ಮದುವೆಯಾಗಿದ್ದಾನೆಂದು ಪತ್ನಿ ಆರೋಪಿಸಿದ್ದಾರೆ.

    ಏಪ್ರಿಲ್‌ನಲ್ಲಿ ಉತ್ತರ ಪ್ರದೇಶದ ಮಹಿಳೆಯೊಬ್ಬರು ತನ್ನ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದರು. ಅಲಿಗಢದ ವಧು ಶಿವಾನಿ ಅವರ ತಾಯಿ ಅನಿತಾ ಮನೆಯಲ್ಲಿದ್ದ 3.5 ಲಕ್ಷ ರೂ.ಗಳಿಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಹೋಗಿದ್ದರು ಎಂದು ಆರೋಪಿಸಿದ್ದರು. ಇದೇ ಮಾದರಿಯ ಮತ್ತೊಂದು ಪ್ರಕರಣ ಈಗ ವರದಿಯಾಗಿದೆ.

  • ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

    ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

    ಚಿತ್ರದುರ್ಗ: ಬೀದಿ ನಾಯಿಗಳ ದಾಳಿಗೆ (Stray Dogs Attack) ಬಾಲಕ ಬಲಿಯಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ರಾಂಪುರ (Rampura) ಗ್ರಾಮದಲ್ಲಿ ನಡೆದಿದೆ.

    ರಾಂಪುರ ಗ್ರಾಮದ ಮಿಥುನ್(11) ಮೃತ ಬಾಲಕ. ಟ್ಯೂಷನ್‌ಗೆ ತೆರಳುವ ವೇಳೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿವೆ. ಗುಂಪಾಗಿ ಅಟ್ಯಾಕ್ ಮಾಡಿರುವ ಬೀದಿ ನಾಯಿಗಳು ಬಾಲಕನ ತಲೆ, ಕೆನ್ನೆ ಹಾಗೂ ಮೈಯೆಲ್ಲಾ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ಆಟೋ ಚಾಲಕ ರಾಜಪ್ಪ ಬಾಲಕನ ರಕ್ಷಣೆಗೆ ಮುಂದಾಗಿದ್ದು, ಗಾಯಾಳು ಬಾಲಕ ಮಿಥುನ್‌ಗೆ ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

    ಬಾಲಕನ ಸ್ಥಿತಿ ಗಂಭೀರವಾದ ಹಿನ್ನೆಲೆ ಆತನನ್ನು ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮಿಥುನ್ ಸಾವಿಗೀಡಾಗಿದ್ದಾನೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ

  • 45 ವರ್ಷಗಳಲ್ಲಿಯೇ ಮೊದಲ ಬಾರಿಗೆ ರಾಮ್‌ಪುರ ಚುನಾವಣೆಯಿಂದ ದೂರ ಉಳಿದ ಅಜಂ ಖಾನ್ ಕುಟುಂಬ

    45 ವರ್ಷಗಳಲ್ಲಿಯೇ ಮೊದಲ ಬಾರಿಗೆ ರಾಮ್‌ಪುರ ಚುನಾವಣೆಯಿಂದ ದೂರ ಉಳಿದ ಅಜಂ ಖಾನ್ ಕುಟುಂಬ

    ಲಕ್ನೋ: 1977ರ ನಂತರ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Samajwadi Party leader Azam Khan) ಮತ್ತು ಅವರ ಕುಟುಂಬಸ್ಥರು ರಾಮ್‌ಪುರ (Rampur) ವಿಧಾನಸಭಾ ಸ್ಥಾನ  (Assembly seat) ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

    ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ. ಸಮಾಜವಾದಿ ಪಕ್ಷವು ಅಜಂ ಖಾನ್ ಅವರ ಪತ್ನಿ ತಂಜೀನ್ ಫಾತಿಮಾ (Tanzeen Fatima) ಅಥವಾ ಅವರ ಸೊಸೆಯನ್ನು ಕಣಕ್ಕಿಳಿಸುತ್ತಿಲ್ಲ. ಬದಲಾಗಿ ಅಸೀಮ್ ರಜಾಗೆ (Asim Raza) ಟಿಕೆಟ್ ನೀಡಿದೆ. ಅಜಂ ಖಾನ್ ಅಥವಾ ಅವರ ಕುಟುಂಬಸ್ಥರು 1977 ರಿಂದ ಈ ಕ್ಷೇತ್ರದಿಂದ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

    ಅಜಂ ಖಾನ್ ಅವರು 1977 ರಿಂದ 2022 ರವರೆಗೆ 12 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅದರಲ್ಲಿ ಹತ್ತು ಬಾರಿ ಗೆದ್ದಿದ್ದಾರೆ ಮತ್ತು ಎರಡು ಬಾರಿ ಸೋತಿದ್ದಾರೆ. 2019ರಲ್ಲಿ ಅಜಂ ಖಾನ್ ಸಂಸತ್ ಸದಸ್ಯರಾದ ಬಳಿಕ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ತಜೀನ್ ಫಾತ್ಮಾ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅಸೀಂ ರಾಜಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ: ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಎಪ್ಪತ್ತು ಮತ್ತು ಎಂಬತ್ತರ ದಶಕದಲ್ಲಿ ಕಾಂಗ್ರೆಸ್ (Congress) ಪ್ರಬಲ ಶಕ್ತಿ ಹೊಂದಿದ್ದ ಪಕ್ಷವಾಗಿತ್ತು. 1980 ಮತ್ತು 1993ರ ನಡುವೆ, ಅಜಂ ಖಾನ್ ಐದು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಸತತವಾಗಿ ಗೆದ್ದರು. ಆದರೆ 1996ರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಅಫ್ರೋಜ್ ಅಲಿ ಖಾನ್ ವಿರುದ್ಧ ಸೋತರು. ಅಜಂ ಖಾನ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಯಿತು. ನಂತರ ಅವರು 2002 ಮತ್ತು 2022ರ ನಡುವೆ ಮತ್ತೆ ಸತತವಾಗಿ ಐದು ಬಾರಿ ಚುನಾವಣೆಯಲ್ಲಿ ಗೆದ್ದರು. ಇದನ್ನೂ ಓದಿ: ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಅಜಂ ಖಾನ್ ಮತ್ತು ಅವರ ಕುಟುಂಬ ಕಾನೂನು ಮೊಕದ್ದಮೆಗಳನ್ನು ಎದುರಿಸಿದೆ. 2014ರಲ್ಲಿ ಅಖಿಲೇಶ್ ಯಾದವ್ (Akhilesh Yadav) ಸರ್ಕಾರದಲ್ಲಿ ಸಚಿವರಾಗಿದ್ದಾಗ ಸರ್ಕಾರಿ ಭೂಮಿಯನ್ನು ಕಬಳಿಸಲು ಸಂಚು ರೂಪಿಸಿದ್ದ ಆರೋಪದಡಿ ಅಜಂ ಖಾನ್ ಅವರ ಪತ್ನಿ ಮತ್ತು ಪುತ್ರನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿತ್ತು.

    ನಂತರ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಾಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅಜಂ ಖಾನ್ ಅವರನ್ನು ಅಸೆಂಬ್ಲಿ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]