Tag: ರಾಕೆಟ್ ದಾಳಿ

  • ಇಸ್ರೇಲ್‌ ಮೇಲೆ ರಾಕೆಟ್‌ ಸುರಿಮಳೆ – ಏಕಕಾಲಕ್ಕೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್‌ ಅಟ್ಯಾಕ್‌

    ಇಸ್ರೇಲ್‌ ಮೇಲೆ ರಾಕೆಟ್‌ ಸುರಿಮಳೆ – ಏಕಕಾಲಕ್ಕೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್‌ ಅಟ್ಯಾಕ್‌

    – ಕೆಲ ಗಂಟೆಗಳ ಮುಂಚೆಯೇ ಸುಳಿವು ಕೊಟ್ಟಿದ್ದ ಅಮೆರಿಕ

    ಬೈರೂತ್: ಇಸ್ರೇಲ್ (Israel) ವಾಯುಪಡೆ ಹಿಜ್ಬುಲ್ಲಾ (Hezbollah) ಮುಖ್ಯಸ್ಥ ಹಸನ್ ನಸ್ರಲ್ಲಾ ಸೇರಿದಂತೆ ಪ್ರಮುಖ ನಾಯಕರನ್ನ ಹತ್ಯೆಗೈದ ಬಳಿಕ ಇಸ್ರೇಲ್‌-ಇರಾನ್‌ ನಡುವಿನ ಯುದ್ಧ ಸ್ವರೂಪವು ಮತ್ತಷ್ಟು ತೀವ್ರಗೊಂಡಿದೆ.

    ಇರಾನ್‌, ಇಸ್ರೇಲ್‌ ಮೇಲೆ ಏಕಕಾಲಕ್ಕೆ ನೂರಾರು ಕ್ಷಿಪಣಿಗಳನ್ನ ಹಾರಿಸಿದೆ. ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ.

    ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಇಸ್ರೇಲ್‌ ತನ್ನ ದೇಶದ ನಾಗರಿಕರಿಗೆ ತಿಳಿಸಿದೆ. ಭಾರತೀಯ ಕಾಲಮಾನ ರಾತ್ರಿ 10:08ರ ಸುಮಾರಿಗೆ ಇಸ್ರೇಲ್‌ ರಕ್ಷಣಾಪಡೆಗನ್ನು ಗುರಿಯಾಗಿಸಿ ಇರಾನ್‌ ರಾಕೆಟ್‌ ದಾಳಿ ನಡೆಸಿದೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

    ಸದ್ಯ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ತಿಳಿದುಬಂದಿಲ್ಲ. ಇಸ್ರೇಲ್‌ನ ಪ್ರಸಿದ್ಧ ಐರನ್ ಡೋಮ್ ಮತ್ತು ಆರೋ ರಕ್ಷಣಾ ವ್ಯವಸ್ಥೆಗಳಿಂದ ಕ್ಷಿಪಣಿಗಳನ್ನು ತಡೆಹಿಡಿಯಲು ಮುಂದಾಗಿದೆ. ಆದ್ರೆ ಜೆರುಸಲೇಂ ಮತ್ತು ಇತರೆಡೆಗಳಲ್ಲಿ ಸ್ಫೋಟ ಸಂಭವಿಸಿವೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ

    ಇಸ್ರೇಲ್‌ ಭದ್ರತಾ ಮಂಡಳಿಯ ತುರ್ತು ಸಭೆ:
    ಇರಾನ್‌ ರಾಕೆಟ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಭದ್ರತಾ ಮಂಡಳಿಯ ತುರ್ತು ಸಭೆ ಕರೆದಿದೆ. ಪ್ರಸಕ್ತ ವರ್ಷದಲ್ಲಿ ಇದೇ ಮೊದಲಬಾರಿಗೆ ಜೆರುಸಲೆಂನ ಬಂಕರ್‌ನಲ್ಲಿ ಭದ್ರತಾ ಮಂಡಳಿಯ ಸಭೆ ಕರೆಯಲಾಗಿದೆ. ಅಲ್ಲದೇ ಪ್ರತಿ ದಾಳಿಯ ಎಚ್ಚರಿಕೆಯನ್ನೂ ನೀಡಿವೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಆದ್ರೆ ಈ ದಾಳಿ ಬಗ್ಗೆ ಇರಾನ್‌ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

    ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

    ಬೈರುತ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

    ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ (Israeli strikes) ನಡೆಸಿದೆ. ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ಇದು 2006ರಲ್ಲಿ ಇಸ್ರೇಲ್-ಹಿಜ್ಜುಲ್ಲಾ ಕದನ (Israel Hezbollah conflict) ಆರಂಭವಾದ ಬಳಿಕ 28 ವರ್ಷಗಳಲ್ಲೇ ದೇಶದ ಅತಿದೊಡ್ಡ ಕರಾಳ ದಿನ ಎಂದು ಲೆಬನಾನ್ ಉಲ್ಲೇಖಿಸಿದೆ. ಲೆಬನಾನ್‌ ದಕ್ಷಿಣ, ಪೂರ್ವ ಪ್ರಾಂತ್ಯಗಳ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಉತ್ತರ ಭಾಗದ ಮೂರು ಸೇನಾ ನೆಲೆಗಳ ಮೇಲೆ ಬಂಡುಕೋರರ ಪ್ರತಿ ದಾಳಿ ನಡೆಸಿದ್ದಾರೆ. ಹೈಫಾದಲ್ಲಿರುವ ಇಸ್ರೇಲ್‌ ರಾಫೆಲ್‌ ಡಿಫೆನ್ಸ್‌ ಇಂಡಸ್ಟ್ರೀಸ್‌ ಸಂಕೀರ್ಣದ ಮೇಲೂ ಬಾಂಬ್‌ ದಾಳಿ ನಡೆಸಲಾಗಿದೆ ಎಂದು ಲೆಬನಾನ್‌ ಹೇಳಿಕೊಂಡಿದೆ.

    ಈ ದಾಳಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಗುಡುಗಿರುವ ಇಸ್ರೇಲ್, ಹಿಜ್ಜುಲ್ಲಾ ಉಗ್ರರು ತಮ್ಮ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಮನೆಗಳು ಮತ್ತು ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಲೆಬನಾನ್ ನಾಗರಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಇದನ್ನೂ ಓದಿ: 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    ಹಮಾಸ್ ಮೇಲಿನ ಇಸ್ರೇಲ್ ಯುದ್ಧದಲ್ಲಿ ಹಿಜ್ಜುಲ್ಲಾ ಉಗ್ರರು, ಹಮಾಸ್‌ಗೆ ನೇರ ಬೆಂಬಲ ಘೋಷಿಸಿದ್ದಾರೆ. ಅದರ ಭಾಗವಾಗಿ ಆಗಾಗ್ಗೆ ಇಸ್ರೇಲ್ ಸೇನಾ ನೆಲೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ರಾಕೆಟ್, ಕ್ಷಿಪಣಿ ಬಳಸಿ ದಾಳಿ ನಡೆಸುತ್ತಿದೆ. ಇದರಿಂದ ಸಿಟ್ಟಿಗೆದ್ದಿರುವ ಇಸ್ರೇಲ್, ಕಳೆದೊಂದು ವಾರದಿಂದ ಲೆಬನಾನ್‌ನಲ್ಲಿರುವ ಹಿಜ್ಜುಲ್ಲಾ ಉಗ್ರರ ಮೇಲೆ ಹಲವು ರೀತಿಯಲ್ಲಿ ದಾಳಿ ನಡೆಸಿದೆ.

    ಇತ್ತೀಚೆಗೆ ಇಸ್ರೇಲ್ ದೇಶವು ಲೆಬನಾನ್‌ನ ಹಿಜ್ಜುಲ್ಲಾ ಉಗ್ರರು ಹೊಂದಿದ್ದ ಪೇಜರ್ ಹಾಗೂ ವಾಕಿಟಾಕಿಗಳನ್ನು ಸ್ಫೋಟಿಸಿದ ನಂತರ ಸಂಘರ್ಷ ತೀವ್ರಗೊಂಡಿದೆ. ಇದು ಅನಿರ್ದಿಷ್ಟ ಯುದ್ಧಕ್ಕೆ ನಾಂದಿ ಹಾಡಿದೆ ಎಂದು ಹಿಜ್ಜುಲ್ಲಾ ಉಗ್ರರು ಘೋಷಿಸಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

    ಕಳೆದ ವರ್ಷ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ 5 ಸಾವಿರ ರಾಕೆಟ್‌ ಉಡಾಯಿಸಿದಾಗಿಂದ ಇಸ್ರೇಲ್‌-ಹಮಾಸ್‌ ಉಗ್ರರ ನಡುವಿನ ಯುದ್ಧ (Gaza war) ಆರಂಭವಾಗಿದೆ.

  • ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?

    ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?

    ಟೆಲ್‌ ಆವೀವ್‌: ಗಾಜಾ ಆಸ್ಪತ್ರೆ (Gaza Hospital) ಮೇಲೆ ರಾಕೆಟ್ ದಾಳಿ ನಡೆದಿದ್ದು 500 ಮಂದಿ ಬಲಿಯಾಗಿದ್ದಾರೆ. ಈ ದಾಳಿಯನ್ನು ನಡೆಸಿದವರು ಯಾರು ಎನ್ನುವುದರ ಬಗ್ಗೆ ಈಗ ಆರೋಪ, ಪ್ರತ್ಯಾರೋಪ ನಡೆಯುತ್ತಿದೆ.

    ಈ ರಾಕೆಟ್‌ ದಾಳಿಯನ್ನು ನಡೆಸಿದವರು ಯಾರು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಹಮಾಸ್‌ (Hamas) ಇಸ್ರೇಲ್‌ ನಡೆಸಿದ ದಾಳಿ ಎಂದು ಹೇಳಿದರೆ ಇಸ್ರೇಲ್‌ ಇದು ಹಮಾಸ್‌ ನಡೆಸಿದ ದಾಳಿ ಎಂದು ವಿಡಿಯೋ ರಿಲೀಸ್‌ ಮಾಡಿ ತಿರುಗೇಟು ನೀಡಿದೆ.

    ನಾವು ಆಸ್ಪತ್ರೆಯ ಮೇಲೆ ದಾಳಿ ನಡೆಸಿಲ್ಲ. ಪ್ಯಾಲೆಸ್ತೀನ್‌ ಹಮಾಸ್‌ ಉಗ್ರರು ನಡೆಸಿದ ರಾಕೆಟ್‌ ಗುರಿ ತಪ್ಪಿ ಆಸ್ಪತ್ರೆಯ ಮೇಲೆ ಬಿದ್ದಿದೆ ಎಂದ ಇಸ್ರೇಲ್‌ (Israel) ಹೇಳಿದೆ. ಇದನ್ನೂ ಓದಿ: ಐರನ್ ಡೋಮ್ ಆಯ್ತು ಈಗ ಐರನ್ ಬೀಮ್ – ಏನಿದು ಇಸ್ರೇಲ್ ಪವರ್‌ಫುಲ್ ವೆಪನ್?

    ಇಸ್ರೇಲ್‌ ಸೇನೆಯ ವಕ್ತಾರ ಪ್ರತಿಕ್ರಿಯಿಸಿ, ಆಸ್ಪತ್ರೆಯ ಸಮೀಪ ಯಾವುದೇ ವೈಮಾನಿಕ ಕಾರ್ಯಾಚರಣೆ ಮಾಡಿಲ್ಲ. ಆಸ್ಪತ್ರೆಯ ಮೇಲೆ ಬಿದ್ದ ರಾಕೆಟ್‌ಗೂ ನಾವು ಬಳಕೆ ಮಾಡುತ್ತಿರುವ ರಾಕೆಟ್‌ ಉಪಕರಣಗಳಿಗೂ ಹೊಂದಿಕೆಯಾಗುವುದಿಲ್ಲ ಎಂದು ಎಂದು ತಿಳಿಸಿದ್ದಾರೆ.

    ಇಸ್ರೇಲ್‌ ಆರೋಪಕ್ಕೆ ಹಮಾಸ್‌ ಪ್ರತಿಕ್ರಿಯಿಸಿ, ಇಸ್ರೇಲ್‌ ಸುಳ್ಳು ಆರೋಪ ಮಾಡುತ್ತಿದೆ. ಭಯಾನಕ ಅಪರಾಧ ಮತ್ತು ಹತ್ಯಾಕಾಂಡವನ್ನು ಮುಚ್ಚಲು ಕಟ್ಟು ಕಥೆಯನ್ನು ಸೃಷ್ಟಿಸುತ್ತಿದೆ ಎಂದು ಹೇಳಿದೆ.

    ಇಸ್ರೇಲ್‌ ಏರ್‌ಸ್ಟ್ರೈಕ್‌ ದಾಳಿಯ ಎಚ್ಚರಿಕೆ ಬೆನ್ನಲ್ಲೇ ಉತ್ತರ ಗಾಜಾದಿಂದ 10 ಲಕ್ಷಕ್ಕೂ ಹೆಚ್ಚು ಜನರು ದಕ್ಷಿಣ ಗಾಜಾಕ್ಕೆ ತೆರಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5ನೇ ದಿನಕ್ಕೆ ಇಸ್ರೇಲ್, ಪ್ಯಾಲೇಸ್ಟೈನ್‌ಗಳ ಸಮರ – ಹಮಾಸ್, ಹಿಜ್ಬುಲ್ಲಾದಿಂದ ಏಕಕಾಲಕ್ಕೆ ರಾಕೆಟ್ ದಾಳಿ

    5ನೇ ದಿನಕ್ಕೆ ಇಸ್ರೇಲ್, ಪ್ಯಾಲೇಸ್ಟೈನ್‌ಗಳ ಸಮರ – ಹಮಾಸ್, ಹಿಜ್ಬುಲ್ಲಾದಿಂದ ಏಕಕಾಲಕ್ಕೆ ರಾಕೆಟ್ ದಾಳಿ

    – ಇಸ್ರೇಲ್‍ನಿಂದಲೂ ಪ್ರತಿದಾಳಿ

    ಜೆರುಸಲೆಂ: ಇಸ್ರೇಲ್- ಪ್ಯಾಲೇಸ್ಟೈನ್ (Isreal- Palestine ನಡುವೆ ನಡೆಯುತ್ತಿರುವ ಕಾಳಗ ಸದ್ಯ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇಷ್ಟು ದಿನ ಇಸ್ರೇಲ್ ಮೇಲೆ ಪ್ರತ್ಯೇಕವಾಗಿ ದಾಳಿ ಮಾಡುತ್ತಿದ್ದ ಹಮಾಸ್ ಮತ್ತು ಲೆಬನಾನ್‍ನ ಹಿಜ್ಬುಲ್ಲಾ ಈಗ ಏಕ ಕಾಲದಲ್ಲಿ ರಾಕೆಟ್ ಹಾರಿಸಲು ಶುರು ಮಾಡಿವೆ. ಇದಕ್ಕೆ ಪ್ರತಿದಾಳಿ ಆರಂಭಿಸಿರುವ ಇಸ್ರೇಲ್ ಗಾಜಾ (Gaza) ಪಟ್ಟಿಯಲ್ಲಿ ಬಿಳಿರಂಜಕದ ಬಳಕೆ ಮಾಡಿದೆ ಎನ್ನಲಾಗಿದೆ.

    ಪ್ಯಾಲೇಸ್ಟೈನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿ ಐದು ದಿನಗಳಾಗಿದೆ. ಆದರೂ ಎರಡು ದೇಶಗಳ ನಡುವೆ ನಡೆಯುತ್ತಿರುವ ಸಮರ ಅಂತ್ಯ ಕಾಣುತ್ತಿಲ್ಲ. ಈ ನಡುವೆ ಹಮಾಸ್ ದಾಳಿಯಿಂದ ದೇಶದಲ್ಲಿ ಸತ್ತವರ ಸಂಖ್ಯೆ 1,000ಕ್ಕಿಂತ ಹೆಚ್ಚಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಇತ್ತ ಪ್ಯಾಲೇಸ್ಟೈನ್ ನಲ್ಲೂ ಸರಿ ಸುಮಾರು ಐದು ಸಾವಿರ ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇದನ್ನೂ ಓದಿ: ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು

    ರಾಕೆಟ್ ಹಾರಿಸಿ ಯುದ್ಧ ಸಾರಿದ ಹಮಾಸ್‍ನ ಯುದ್ಧದಾಹಿ ಮನಸ್ಥಿತಿ ಇನ್ನೂ ಕಡಿಮೆಯಾಗಿಲ್ಲ. ಇಸ್ರೇಲ್ ಮೇಲೆ ನಿರಂತರ ದಾಳಿ ಮಾಡುತ್ತಲೇ ಇದೆ. ಇಷ್ಟು ದಿನ ಇಸ್ರೇಲ್ ಮೇಲೆ ಪ್ರತ್ಯೇಕವಾಗಿ ದಾಳಿ ಮಾಡುತ್ತಿದ್ದ ಹಮಾಸ್ ಮತ್ತು ಲೆಬನಾನ್‍ನ ಹಿಜ್ಬುಲ್ಲಾ ಈಗ ಏಕ ಕಾಲದಲ್ಲಿ ರಾಕೆಟ್ ಹಾರಿಸಲು ಶುರು ಮಾಡಿವೆ. ಹಮಾಸ್ ಅಶ್ಕೆಲೋನ್, ಬೀರ್ ಗನಿಮ್ ಮತ್ತು ಜಿಕಿಮ್‍ನಲ್ಲಿ ಹೊಸ ದಾಳಿ ಮಾಡಿದೆ. ಹಿಜ್ಬುಲ್ಲಾ ತನ್ನ ಇಸ್ರೇಲ್ ಗಡಿಯಲ್ಲಿ 15 ರಾಕೆಟ್ ದಾಳಿ ಮಾಡಿದೆ. ಇದನ್ನೂ ಓದಿ: ಉಗ್ರರಿದ್ದ ಕಾರನ್ನು ಬೆನ್ನಟ್ಟಿ ಬೈಕ್‌ ಓಡಿಸುತ್ತಲೇ ಗುಂಡು ಹಾರಿಸಿದ ಇಸ್ರೇಲ್‌ ಪೊಲೀಸ್‌ – ರೋಚಕ ದೃಶ್ಯದ ವೀಡಿಯೋ ವೈರಲ್‌

    ಇದಕ್ಕೆ ಪ್ರತಿ ದಾಳಿ ನಡೆಸಿರುವ ಇಸ್ರೇಲ್ ಸೇನೆ ದಕ್ಷೀಣ ಲೆಬನಾನ್‍ನಲ್ಲಿರುವ ಹಿಜ್ಬುಲ್ಲಾ ವೀಕ್ಷಣಾ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಗಾಜಾ ಪಟ್ಟಿಯಲ್ಲಿ ಏರ್ ಸ್ಟೈಕ್ ಮುಂದುವರಿದಿದ್ದು, ಜೊತೆಗೆ ನಿಷೇಧಿತ ಬಿಳಿ ರಂಜಕ ಬಾಂಬ್‍ಗಳನ್ನು ಬಳಸುತ್ತಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ಏನಿದು ಬಿಳಿ ರಂಜಕದ ಬಾಂಬ್ ಅಂತಾ ನೋಡುವುದಾದ್ರೆ.

    ಬಿಳಿ ರಂಜಕದ ಬಾಂಬ್ ದಾಳಿ ಯಾಕೆ?: ಇದು ಹೆಚ್ಚು ಸುಡುವ ರಾಸಾಯನಿಕವಾಗಿದ್ದು, ಗಾಳಿಯ ಸಂಪರ್ಕಕ್ಕೆ ಬಂದಾಗ ವೇಗವಾಗಿ ಸುಡುತ್ತದೆ. ಇದರ ರಾಸಾಯನಿಕ ಕ್ರಿಯೆಯು ತೀವ್ರವಾದ ಶಾಖವನ್ನು ಹೊರಸೂಸುತ್ತದೆ. ಬಿಳಿ ರಂಜಕವು ನೆಲದ ಮೇಲೆ ವೇಗವಾಗಿ ಹರಡುತ್ತದೆ, ಬೆಂಕಿಯನ್ನು ಉಂಟು ಮಾಡುತ್ತದೆ. ಚರ್ಮ ಮತ್ತು ಬಟ್ಟೆ ಸೇರಿದಂತೆ ಹಲವು ಮೇಲ್ಮೈಗಳಿಗೆ ವೇಗವಾಗಿ ಅಂಟಿಕೊಳ್ಳುತ್ತದೆ, ಉರಿ ಸೃಷ್ಟಿಸುತ್ತದೆ. ಅನೇಕ ರಾಷ್ಟ್ರಗಳು ತಮ್ಮ ಯುದ್ಧಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಿಕೊಂಡಿವೆ.

    ಫೆನಿಯನ್ ಫೈರ್ ಎಂದು ಕರೆಯುವ ಇದನ್ನು ಮೊದಲ ಮತ್ತು 2ನೆಯ ಮಹಾಯುದ್ಧಗಳಲ್ಲಿ ಬ್ರಿಟಿಷ್ ಸೇನೆಯು ಬಳಸಿತು. 2006ರಲ್ಲಿ ಇಸ್ರೇಲ್ ಲೆಬನಾನ್ ಯುದ್ಧದ ಸಮಯದಲ್ಲಿ ಹೆಜ್ಬೊಲ್ಲಾ ವಿರುದ್ಧದ ಹೋರಾಟದಲ್ಲಿ ಬಳಸಿತು. ಇದೇ ತಂತ್ರವನ್ನೇ ಈಗ ಹಮಾಸ್ ವಿರುದ್ಧವೂ ಇಸ್ರೇಲ್ ಬಳಕೆ ಮಾಡುತ್ತಿದೆ. ಪ್ಯಾಲೇಸ್ಟೈನ್ ವಶಕ್ಕೆ ಹೊರಟಿರುವ ಇಸ್ರೇಲ್ ಎಲ್ಲ ಪ್ರಯತ್ನಗಳನ್ನು ಮಾಡುತ್ತಿರವುದಕ್ಕೆ ಇದೇ ಉದಾಹರಣೆ ಎನ್ನಲಾಗುತ್ತಿದೆ.

    ಶನಿವಾರ ಹೋರಾಟ ಆರಂಭವಾದಾಗಿನಿಂದ ಗಾಜಾದಲ್ಲಿ ಕನಿಷ್ಠ 2,00,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಇಸ್ರೇಲ್ ಪ್ರಧಾನಿ ಜೊತೆಗೆ ಮಾತನಾಡಿರುವ ಮೋದಿ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದ್ದಾರೆ. ಈ ನಡುವೆ ಆರ್ಥಿಕ ಸಹಾಯ ಮಾಡಿದೆ. ಈ ನಡುವೆ ಕ್ಯಾಬಿನೆಟ್ ಸಭೆ ನಡೆಸಿರುವ ಇಸ್ರೇಲ್ ಪ್ರಧಾನಿ ಯುದ್ಧ ತೀವ್ರಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ

    ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ

    ಟೆಲ್ ಅವಿವ್: ಇಸ್ರೇಲ್ (Israel) ಮೇಲೆ ದಾಳಿ ನಡೆಸಿರುವ ಹಮಾಸ್ ಉಗ್ರರು (Hamas Militants) ದೇಶದೊಳಗೆ ನುಗ್ಗಿ ಜನರತ್ತ ಗುಂಡು ಹಾರಿಸುತ್ತಿದ್ದಾರೆ. ಇದನ್ನು ಕಟ್ಟಡದ ಮೇಲಿಂದ ವ್ಯಕ್ತಿಯೊಬ್ಬರೂ ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವೀಡಿಯೋವನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಹೋರಾಟಗಾರ ಆರ್ಸೆನ್ ಒಸ್ಟ್ರೋವ್ಸ್ಕಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಉಗ್ರಗಾಮಿ ಸಂಘಟನೆ ಹಮಾಸ್ ಉಡಾವಣೆ ಮಾಡಿದ ಸಾವಿರಾರು ರಾಕೆಟ್‍ಗಳು ಇಸ್ರೇಲ್‍ನ ಪಟ್ಟಣಗಳು ಹೊತ್ತಿ ಉರಿಯುವಂತೆ ಮಾಡಿವೆ. ಉಗ್ರರ ದಾಳಿಯ ಬೆನ್ನಲ್ಲೇ ಯುದ್ಧವನ್ನು ಇಸ್ರೇಲ್ ಘೋಷಿಸಿದೆ. ಇದರ ನಡುವೆಯೇ ಉಗ್ರಗಾಮಿಗಳು ದೇಶದ ಕೆಲವು ಪ್ರಮುಖ ನಗರಗಳಿಗೆ ನುಗ್ಗಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ಈ ವೇಳೆ ಸಾರ್ವಜನಿಕರ ಮೇಲೆ ಮನಬಂದಂತೆ ಗುಂಡು ಹಾರಿಸುತ್ತಿದ್ದಾರೆ. ಇದನ್ನು ವ್ಯಕ್ತಿಯೋರ್ವ ವೀಡಿಯೋ ಮಾಡಿದ್ದಾನೆ. ಅಲ್ಲದೇ ಅವನೆಡೆಗೆ ಉಗ್ರರು ನೋಡಿದಾಗ ಆತ ಅಡಗಿಕೊಳ್ಳಲು ಓಡಿರುವುದು ಸಹ ವೀಡಿಯೋದಲ್ಲಿ ಕಾಣುತ್ತದೆ.

    ಗಾಜಾದಲ್ಲಿ ಉಗ್ರರು ಇಸ್ರೇಲ್ ಸೈನಿಕರ ಮೃತದೇಹಗಳನ್ನು ರಸ್ತೆಯಲ್ಲಿ ಎಳೆದಾಡಿ ಸಂಭ್ರಮಿಸುತ್ತಿರುವ ವೀಡಿಯೋ ಸಹ ವೈರಲ್ ಆಗುತ್ತಿದೆ. ಇದಕ್ಕೂ ಮೊದಲು ಉಗ್ರರು ಕೇವಲ 20 ನಿಮಿಷಗಳಲ್ಲಿ 5000 ರಾಕೆಟ್‍ಗಳಿಂದ (Rocket Attack) ದಾಳಿ ನಡೆಸಿದ್ದರು. ಇದನ್ನೂ ಓದಿ: ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ನವದೆಹಲಿ: ಇಸ್ರೇಲ್‌ನಲ್ಲಿರುವ (Israel) ಭಾರತೀಯರು ಎಚ್ಚರಿಕೆಯಿಂದಿರಿ ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಗಮನ ಹರಿಸಲು ಭಾರತೀಯ ರಾಯಭಾರ ಕಚೇರಿ (Indian Embassy) ಸೂಚನೆ ನೀಡಿದೆ. ಇಸ್ರೇಲ್‌ ಮತ್ತು ಹಮಾಸ್ ಬಂಡುಕೋರರ‌ ನಡುವೆ ಯುದ್ಧ ಘೋಷಣೆಯಾದ ಮೇಲೆ ಈ ಸಲಹೆ ನೀಡಲಾಗಿದೆ.

    ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು (Indians) ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು, ಅನಗತ್ಯ ಓಡಾಟ ತಪ್ಪಿಸಬೇಕು ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ ಎಂದು ರಾಯಭಾರ ಕಚೇರಿ ಸಲಹೆ ನೀಡಿದೆ. ತುರ್ತು ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: Asian Games 2023: ಚಿನ್ನದ ಮಳೆ – ಚೊಚ್ಚಲ ಚಾಂಪಿಯನ್‌ ಕಿರೀಟ ಧರಿಸಿದ ಭಾರತ

    ಘಾಜಾಪಟ್ಟಿಯಿಂದ ಹಮಾಸ್ ಬಂಡುಕೋರರು 5,000 ರಾಕೆಟ್‌ಗಳನ್ನು (Rocket Attack) ಇಸ್ರೇಲ್ ನತ್ತ ಉಡಾಯಿಸಿದ ಬಳಿಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ. ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಇದನ್ನೂ ಓದಿ: ಮಕ್ಕಳ ಮೇಲಿನ ದೌರ್ಜನ್ಯ ದೃಶ್ಯ – ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಖಡಕ್ ಸೂಚನೆ

    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿ ನಾವು ಯುದ್ಧದಲ್ಲಿದ್ದೇವೆ, ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಶತ್ರುಗಳು ಸೂಕ್ತ ಬೆಲೆ ತೆರಲಿದ್ದಾರೆ ಎಂದು ತಮ್ಮ ನಾಗರಿಕರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯನವ್ರು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಸುರೇಶ್ ಗೌಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    ಟೆಲ್‌ ಅವಿವ್: ಹಮಾಸ್ ಉಗ್ರರ (Hamas Militants) ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ (Gaza Strip) ಇಸ್ರೇಲ್ (Israel) ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ (Rocket Attack) ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ (War) ಘೋಷಣೆ ಮಾಡಿದೆ.

    ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‌ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.

    ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಇದನ್ನೂ ಓದಿ: ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್

    ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಧಿಕಾರ ಬಿಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಪೂರ್ಣಾವಧಿ ಸಿಎಂ ಪ್ರಶ್ನೆಗೆ ಸಿದ್ದರಾಮಯ್ಯ ಮಾತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಲ್ಲದ ಸಮರ – ಉಕ್ರೇನ್‌ ದಿನಸಿ ಅಂಗಡಿ ಮೇಲೆ ರಷ್ಯಾ ರಾಕೆಟ್‌ ದಾಳಿಗೆ 49 ಮಂದಿ ಬಲಿ

    ನಿಲ್ಲದ ಸಮರ – ಉಕ್ರೇನ್‌ ದಿನಸಿ ಅಂಗಡಿ ಮೇಲೆ ರಷ್ಯಾ ರಾಕೆಟ್‌ ದಾಳಿಗೆ 49 ಮಂದಿ ಬಲಿ

    ಕೀವ್‌/ಮಾಸ್ಕೋ: 2022ರ ಫೆಬ್ರವರಿ 24ರಂದು ಆರಂಭವಾದ ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಸದ್ದು ಮಾಡುತ್ತಲೇ ಇದೆ. ಯುದ್ಧ ಆರಂಭವಾಗಿ ವರ್ಷ ಕಳೆದರೂ, ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡರೂ, ವಿಶ್ವದ ಅನೇಕ ರಾಷ್ಟ್ರಗಳು ಶಾಂತಿ ಕಾಪಾಡುವಂತೆ ಸಲಹೆ ನೀಡಿದರೂ ಡೋಂಟ್‌ಕೇರ್‌ ಎನ್ನುವಂತೆ ರಷ್ಯಾ ಉಕ್ರೇನ್‌ ಮೇಲಿನ ದಾಳಿಯನ್ನ ಮುಂದುವರಿಸಿದೆ.

    ಗುರುವಾರವೂ ಸಹ ರಷ್ಯಾ ಸೇನೆಯು ಉಕ್ರೇನ್‌ನ ಖಾರ್ಕೀವ್‌ ಪೂರ್ವ ಪ್ರದೇಶದ ದಿನಸಿ ಅಂಗಡಿ ಹಾಗೂ ಕೆಫೆಯೊಂದರ ಮೇಲೆ ದಾಳಿ (Russian Rocket Strike) ನಡೆಸಿದ್ದು, ಸುಮಾರು 49 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಗ್ರೋಜಾ ಗ್ರಾಮದಲ್ಲಿ ಮಧ್ಯಾಹ್ನ 1:15ರ (ಭಾರತೀಯ ಕಾಲಮಾನ) ವೇಳೆಗೆ ದಾಳಿ ನಡೆದಿರುವುದಾಗಿ ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ತಿಳಿಸಿದ್ದಾರೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodimir Zelensky) ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: P-8I Poseidon: ಹಿಂದೂ ಮಹಾಸಾಗರದ ಕಾವಲುಗಾರ – ಬೋಯಿಂಗ್ P-8I ವಿಮಾನ

    ಕಳೆದ ವರ್ಷ ಉಕ್ರೇನ್‌ ವಶಪಡಿಸಿಕೊಂಡಿದ್ದ ಕಾರ್ಕೀವ್‌ ಪ್ರದೇಶಗಳನ್ನು ಮರಳಿ ಪಡೆದುಕೊಳ್ಳಲು ಉಕ್ರೇನ್‌ ಕಸರತ್ತು ನಡೆಸುತ್ತಿದೆ. ಆದ್ರೆ ಇದಕ್ಕೆ ಆಸ್ಪದ ನೀಡದ ರಷ್ಯಾ ಉಕ್ರೇನಿನ ಮೇಲೆ ಭೀಕರ ದಾಳಿ ನಡೆಸುತ್ತಲೇ ಇದೆ, ಅಲ್ಲಿನ ಮೂಲ ಸೌಕರ್ಯಗಳನ್ನು ನಾಶಪಡಿಸುತ್ತಿದೆ. ಇದನ್ನೂ ಓದಿ: ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

    ರಷ್ಯಾ ಸೇನೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಗುರುವಾರ ಉಕ್ರೇನಿನ 49 ಮಂದಿ ಸಾವನ್ನಪ್ಪಿದ್ದಾರೆ. ಇದು ರಷ್ಯಾದ ಉದ್ದೇಶಿದ ಭಯೋತ್ಪಾದಕ ದಾಳಿ ಎಂದು ಉಕ್ರೇನಿಯನ್‌ ಪ್ರಾಸಿಕ್ಯೂಟರ್ ಜನರಲ್ ಆರೋಪಿಸಿದ್ದಾರೆ. ಘಟನೆ ನಂತರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: 2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ- ಸೇತುವೆ ಉಡೀಸ್ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ರಷ್ಯಾ

    ಕೀವ್: ಎರಡು ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ (Russia) ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ (Rocket) ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

    https://twitter.com/Ukraine66251776/status/1579347170792452096

    ರಷ್ಯಾ ಸೇನೆ ಸೋಮವಾರ ಬೆಳ್ಳಂಬೆಳಗ್ಗೆ (ಸ್ಥಳೀಯ ಸಮಯ ಬೆಳಗ್ಗೆ 8:15) ಅಬ್ಬರಿಸಿದೆ. ಉಕ್ರೇನ್ ರಾಜಧಾನಿ ಕೀವ್ ಮೇಲೆ ಹಲವು ಡೆಡ್ಲಿ ರಾಕೆಟ್‌ಗಳು ಏಕಕಾಲಕ್ಕೆ ದಾಳಿ ನಡೆದಿದ್ದು, ಹಲವು ಕಟ್ಟಡಗಳನ್ನ ಉಡೀಸ್ ಮಾಡಿದೆ. ಕೀವ್ (Kyiv) ನಗರದ ಹಲವೆಡೆ ಹೊಗೆ, ಧೂಳಿನ ಅಬ್ಬರ ಹೆಚ್ಚಾಗಿದ್ದು, ಹಲವು ಕಟ್ಟಡಗಳು ನೆಲಸಮವಾಗಿವೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ಉಕ್ರೇನ್ (Ukraine) ರಾಜಧಾನಿ ಕೀವ್ (Kyiv) ಮಾತ್ರವಲ್ಲ, ಲಿವ್, ತೆರ್ನೋಪಿಲ್ ಸೇರಿದಂತೆ ಹಲವು ನಗರಗಳ ಮೇಲೆ ರಾಕೆಟ್ ದಾಳಿ ನಡೆದಿದೆ. ಕೀವ್ ನಗರದಲ್ಲಿ ಭಾರೀ ಪ್ರಮಾಣದ ಸ್ಪೋಟದ ಸದ್ದು, ಹೊಗೆ, ಧೂಳು ಹಾಗೂ ಬೆಂಕಿ ತುಂಬಿಕೊಂಡಿದೆ. ಇದರಿಂದಾಗಿ ಕಿವ್ ನಗರದಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸದ್ಯ ಉಕ್ರೇನ್ ವಿರುದ್ಧ ರಷ್ಯಾ ನಡೆಸಿದ ದಾಳಿಯ ಭಯಾನಕ ವೀಡಿಯೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿವೆ. ಕಿಲೋ ಮೀಟರ್ ದೂರದಲ್ಲಿ ನಿಂತವರಿಗೂ ಸ್ಫೋಟದ ದೃಶ್ಯ ಕಂಡುಬರುತ್ತಿದೆ. ಆದರೆ ಸ್ಫೋಟದಿಂದ ಜೀವ ಹಾನಿ ಆಗಿರುವ ಬಗ್ಗೆ ಈವರೆಗೆ ವರದಿ ಲಭ್ಯವಾಗಿಲ್ಲವಾದ್ರೂ ರಕ್ಷಣಾ ಕಾರ್ಯಾಚರಣೆ ಬಳಿಕವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

    ಸೇತುವೆ ಉಡೀಸ್ ಮಾಡಿದ್ದ ಉಕ್ರೇನ್:
    ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕನಸಿನ ಕ್ರಿಮಿಯಾ – ರಷ್ಯಾ ಸಂಪರ್ಕಿಸುವ ಕ್ರಿಮಿಯಾ ಸೇತುವೆಯನ್ನು (Crimean Bridge) ಉಕ್ರೇನ್ ಉಡೀಸ್ ಮಾಡಿತ್ತು. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

    ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

    ಕಪ್ಪುಸಮುದ್ರ ಮತ್ತು ಅಜೋವ್ ಸಮುದ್ರವನ್ನು ಸಂಪರ್ಕಿಸುವ ಕ್ರೆಚ್ ಜಲಸಂಧಿಗೆ ಅಡ್ಡಲಾಗಿ ನಿರ್ಮಿಸಿರುವ 19 ಕಿ.ಮೀ. ಉದ್ದದ ಈ ಸೇತುವೆಯನ್ನು 2018ರಲ್ಲಿ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಇದು ಯೂರೋಪ್‌ನಲ್ಲಿಯೇ ಅತಿ ಉದ್ದದ ಸೇತುವೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ರೈಲು ನಿಲ್ದಾಣದಲ್ಲಿ ರಾಕೆಟ್ ದಾಳಿ – 35 ಸಾವು

    ಕೀವ್: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಬಹುತೇಕ ಉಕ್ರೇನ್ ಅನ್ನು ಸರ್ವನಾಶ ಮಾಡಿರುವ ರಷ್ಯಾ ಶುಕ್ರವಾರ ಇನ್ನೊಂದು ಭೀಕರ ದಾಳಿ ನಡೆಸಿದೆ. ಉಕ್ರೇನ್‌ನ ಕ್ರಾಮಾಟೋರ್ಸ್ಕ್ ರೈಲು ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ.

    ನಾಗರಿಕರನ್ನು ಸ್ಥಳಾಂತರಿಲು ಬಳಸಲಾಗುತ್ತಿದ್ದ ರೈಲು ನಿಲ್ದಾಣದ ಮೇಲೆ ಶುಕ್ರವಾರ ರಾಕೆಟ್ ದಾಳಿ ನಡೆದಿದ್ದು, 35 ಜನರು ಸಾವನ್ನಪ್ಪಿದ್ದಾರೆ ಹಾಗೂ ನೂರಾರು ಜನರು ಗಾಯಗೊಂಡಿದ್ದಾರೆ. ಆದರೆ ರಷ್ಯಾ ತಾನು ದಾಳಿ ನಡೆಸಿರುವುದನ್ನು ಅಲ್ಲೆಗಳೆದಿದೆ. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ರಾಕೆಟ್ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾವನ್ನು ಮಿತಿಯೇ ಇಲ್ಲದ ಕ್ರೂರಿ ಎಂದು ಟೀಕಿಸಿದ್ದಾರೆ. ಉಕ್ರೇನ್ ನಾಗರಿಕರನ್ನು ಸಿಕ್ಕ ಸಿಕ್ಕಲ್ಲಿ ಕೊಲ್ಲುತ್ತಿರುವ ರಷ್ಯಾವನ್ನು ಶಿಕ್ಷಿಸದಿದ್ದರೆ ಈ ಕ್ರೂರತನಕ್ಕೆ ಕೊನೆಯೇ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಸಸ್ಪೆಂಡ್‌

    ಇತ್ತೀಚೆಗೆ ಉಕ್ರೇನ್‌ನ ಬುಚಾ ನಗರದಲ್ಲಿ ರಷ್ಯಾ ಪಡೆಗಳು ಉಕ್ರೇನಿಯನ್ನರ ಭೀಕರ ಹತ್ಯೆಗೈದಿದ್ದು, ಇದನ್ನು ಭಾರತ ಸೇರಿದಂತೆ ಹಲವು ದೇಶಗಳು ಬಲವಾಗಿ ಖಂಡಿಸಿದೆ. ಬುಚಾ ನಗರದ ರಸ್ತೆಗಳಲ್ಲಿ ಉಕ್ರೇನಿಯನ್ನರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ಇತ್ತೀಚೆಗೆ ವರದಿ ಮಾಡಲಾಗಿತ್ತು.