Tag: ರಾಕ್ಷಸ

  • ರಣವೀರ್ ಸಿಂಗ್ ಚಿತ್ರಕ್ಕೆ ಹನುಮಾನ್ ಚಿತ್ರ ಖ್ಯಾತಿಯ ಡೈರೆಕ್ಟರ್ ಎಂಟ್ರಿ

    ರಣವೀರ್ ಸಿಂಗ್ ಚಿತ್ರಕ್ಕೆ ಹನುಮಾನ್ ಚಿತ್ರ ಖ್ಯಾತಿಯ ಡೈರೆಕ್ಟರ್ ಎಂಟ್ರಿ

    ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ (Ranveer Singh) ನಟನೆಯ ಹೊಸ ಚಿತ್ರಕ್ಕೆ ಹನುಮಾನ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆ ಚಿತ್ರಕ್ಕೆ ರಾಕ್ಷಸ  (Rakshasa)ಎನ್ನುವ ಹೆಸರನ್ನೂ ಇಡಲಾಗಿದೆಯಂತೆ. ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ, ಮುಂದಿನ ದಿನಗಳಲ್ಲಿ ಇದು ಬಹಿರಂಗವಾಗಬಹುದು ಎನ್ನುತ್ತಿದೆ ಬಿಟೌನ್.

    ಈ ನಡುವೆ  ಹನುಮಾನ್ 2 ಚಿತ್ರದ ಕುರಿತಂತೆ ಮತ್ತೊಂದು ಹೊಸ ಅಪ್ ಡೇಟ್ ನೀಡಿದ್ದಾರೆ ನಿರ್ದೇಶಕ ಪ್ರಶಾಂತ್. ಅಂಜನಾದ್ರಿ 2.0 ಹೆಸರಿನ ವಿಡಿಯೋವೊಂದನ್ನು ಶೇರ್ ಮಾಡಿರುವ ನಿರ್ದೇಶಕರು ಅಂಜನಾದ್ರಿ ಗ್ರಾಮದ ಹಿನ್ನೆಲೆಯನ್ನು ತೋರಿಸುವಂತಹ ವಿವರಗಳನ್ನು ಈ ವಿಡಿಯೋದಲ್ಲಿ ನೀಡಿದ್ದಾರೆ.

    ಈ ಹಿಂದೆ ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ (Prashant Verma) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ (Hanuman 2) ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಇಂದು ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.

    ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ (Teja Sajja), ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.

     

    ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ.

  • ಲೋಹಿತ್ ನಿರ್ದೇಶನದಲ್ಲಿ ‘ರಾಕ್ಷಸ’ನಾದ ಪ್ರಜ್ವಲ್ ದೇವರಾಜ್

    ಲೋಹಿತ್ ನಿರ್ದೇಶನದಲ್ಲಿ ‘ರಾಕ್ಷಸ’ನಾದ ಪ್ರಜ್ವಲ್ ದೇವರಾಜ್

    ‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ (Lohit) ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕ್ಯಾಪ್ಚರ್ ಮತ್ತು ಮಾಫಿಯಾ ಸಿನಿಮಾ ಮೂಲಕ ಸದ್ದು ಮಾಡುತ್ತಿರುವ ಲೋಹಿತ್ ಈ ಎರಡು ಸಿನಿಮಗಳಿ ರಿಲೀಸ್ ಗೂ ಮೊದಲೇ ಇದೀಗ ಮತ್ತೊಂದು ಸಿನಿಮಾ ಅನೌನ್ಸ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕರಲ್ಲಿ ಒಬ್ಬರಾಗಿರುವ ಲೋಹಿತ್ ಇದೀಗ ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ.  ಸಂಕ್ರಾಂತಿಯ ಮೊನ್ನ ದಿನ ‘ರಾಕ್ಷಸ’ (Rakshasa) ಸಿನಿಮಾದ ಫಸ್ಟ್ ಲುಕ್ ರಿವೀಲ್  ಮಾಡಿ ಕುತೂಹಲ ಹೆಚ್ಚಿಸಿದ್ದಾರೆ.

    ಅಂದಹಾಗೆ ‘ರಾಕ್ಷಸ’ನಾಗಿ ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಕಾಣಿಸಿಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಪ್ರಜ್ವಲ್ ದೇವರಾಜ್ ಗನ್ ಹಿಡಿದಿದ್ದಾರೆ. ಪುಟ್ಟ ಮಗು ಪ್ರಜ್ವಲ್ ಕೈ ಬೆರಳನ್ನು ಹಿಡಿದಿದ್ದಾರೆ. ಇನ್ನೂ ಕೈಯಲ್ಲಿ ಇರುವ ಟ್ಯಾಟೂ ಗಮನ ಸೆಳೆಯುತ್ತಿದೆ.

    ಈಗಾಗಲೇ ಪ್ರಜ್ವಲ್ ಜೊತೆ ‘ಮಾಫಿಯಾ’ ಸಿನಿಮಾ ಮಾಡಿರುವ ಲೋಹಿತ್ ಆ ಸಿನಿಮಾ ರಿಲೀಸ್ ಗೂ ಮೊದಲೇ ಇದೀಗ ‘ರಾಕ್ಷಸ’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಕ್ಷಸ ಸಿನಿಮಾದ ಫಸ್ಟ್ ಲುಕ್ ಅನ್ನು  ವಿಭಿನ್ನವಾಗಿ ರಿಲೀಸ್ ಮಾಡಲಾಯಿತು. ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕರು ‘ರಾಕ್ಷಸ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು. ಅಂದಹಾಗೆ ಒಬ್ಬರಲ್ಲ ಇಬ್ಬರಲ್ಲ ಬರೋಬ್ಬರಿ 40 ಜನ ನಿರ್ದೇಶಕರು ‘ರಾಕ್ಷಸ’ ಸಿನಿಮಾದ ಮೊದಲ ನೋಟ ಬಿಡುಗಡೆ ಮಾಡಿರುವು ವಿಶೇಷ. ಈ ಮೂಲಕ ಲೋಹಿತ್ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದರು.

    ಇನ್ನೂ ರಾಕ್ಷಸನ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟುಕೊಡದ ನಿರ್ದೇಶಕ ಲೋಹಿತ್ ಕೇವಲ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕವೇ ಕುತೂಹಲ ಹೆಚ್ಚಿಸಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್ ಜೊತೆ ಯಾರೆಲ್ಲ ಅಭಿನಯಿಸಿದ್ದಾರೆ, ಇದು ಯಾವ ರೀತಿಯ ಸಿನಿಮಾ ಎನ್ನುವ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ.  ನಬೀನ್ ಪೋಲ್ ಸಂಗೀತ ಚಿತ್ರಕ್ಕಿದೆ. ಸದ್ಯ ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿರುವ ರಾಕ್ಷಸ ಹೇಗಿರಲಿದೆ, ಯಾವಾಗ ತೆರೆಮೇಲೆ ಬರಲಿದೆ ಎಂದು ಕಾದುನೋಡಬೇಕಿದೆ.

  • ರಾಕ್ಷಸರ ಹತ್ತಿರ ಕೊರೊನಾ ಬರೋದಿಲ್ಲ, ನನಗಂತೂ ಬಂದಿಲ್ಲ: ಈಶ್ವರಪ್ಪ

    ರಾಕ್ಷಸರ ಹತ್ತಿರ ಕೊರೊನಾ ಬರೋದಿಲ್ಲ, ನನಗಂತೂ ಬಂದಿಲ್ಲ: ಈಶ್ವರಪ್ಪ

    – ಕೊರೊನಾ ಅಂತ ಹೆಣ ಬಿದ್ದಂತೆ ಮನೆಯಲ್ಲೇ ಬಿದ್ದುಕೊಂಡ್ರೆ ಹೇಗೆ?

    ಶಿವಮೊಗ್ಗ: ಕೊರೊನಾ ಈಗ ಎಲ್ಲೆಡೆ ಹರಡುತ್ತಿದೆ. ಆದರೆ ರಾಕ್ಷಸರ ಹತ್ತಿರ ಅದು ಸುಳಿಯುವುದೇ ಇಲ್ಲ. ನನಗಂತೂ ಕೊರೊನಾ ಬಂದಿಲ್ಲ. ನಿಮಗೆ ಏನಾದರೂ ಕೊರೊನಾ ಬಂದಿದೆಯಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಸ್ಯ ಚಟಾಕಿ ಹಾರಿಸಿದರು.

    ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಬರುತ್ತದೆ ಎಂದು ಹೆದರಿ ಹೆಣ ಬಿದ್ದಂತೆ ಮನೆಯಲ್ಲಿಯೇ ಬಿದ್ದುಕೊಂಡರೇ ಹೇಗೆ ಎಂದು ಪ್ರಶ್ನಿಸಿದರು. ಕೊರೊನಾ ಬರುತ್ತದೆ ಎಂಬ ಭಯದಿಂದ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಮನೆಯಲ್ಲೇ ಉಳಿದುಕೊಂಡರೇ ಅಭಿವೃದ್ಧಿ ಕಾರ್ಯಗಳ ಗತಿಯೇನು. ತಲೆ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳಲು ಸಾಧ್ಯವೇ ಎಂದರು.

    ಕೊರೊನಾ ಇದೆ ಎಂದು ಭಯ ಪಡುವ ಬದಲು ಕೊರೊನಾ ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಜೊತೆಗೆ ಅದು ಬರದಂತೆ ಜಾಗೃತಿ ವಹಿಸಬೇಕು ಎಂದು ಸಚಿವ ಈಶ್ವರಪ್ಪ ಕಿವಿ ಮಾತು ಹೇಳಿದರು.