Tag: ರಾಖಿ ಸಾವಂತ್

  • ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

    ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

    ನಿನ್ನೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ( Adil Khan) ವಿರುದ್ಧ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು ನಟಿ ರಾಖಿ ಸಾವಂತ್ (Rakhi Sawant). ಸಂಜೆ ರೆಸ್ಟೋರೆಂಟ್ ನಲ್ಲಿ ಆದಿಲ್ ಖಾನ್ ಜೊತೆ ಊಟ ಮಾಡುತ್ತಿದ್ದ ವಿಡಿಯೋವನ್ನೂ ಹಂಚಿಕೊಂಡಿದ್ದರು. ಆದಿಲ್ ನನ್ನ ಬಳಿ ಕ್ಷಮೆ ಕೇಳಲು ಬಂದಿದ್ದ, ನಾನು ಕ್ಷಮಿಸಲಿಲ್ಲ ಎಂಬ ಹೇಳಿಕೆ ನೀಡಿದ್ದರು. ಇವತ್ತು ಬೆಳಗ್ಗೆ ತನ್ನನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ಆದಿಲ್ ನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ ರಾಖಿ. ಹಾಗಾಗಿ ಮೈಸೂರು ಹುಡುಗ ಆದಿಲ್ ಸದ್ಯ ಪೊಲೀಸ್ ವಶದಲ್ಲಿ ಇದ್ದಾನೆ.

    ಮದುವೆ ವಿಷಯ ಬಹಿರಂಗ ಪಡಿಸಿ ಇನ್ನೂ ಎರಡು ತಿಂಗಳೂ ಕಳೆದಿಲ್ಲ. ಆಗಲೇ ಪತಿಯ ಮೇಲೆ ದಿನಕ್ಕೊಂದು ಆರೋಪ ಮಾಡಿ, ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದರು ನಟಿ ರಾಖಿ ಸಾವಂತ್. ಹಲವು ದಿನಗಳ ಹಿಂದೆಯಷ್ಟೇ ಮೈಸೂರು (Mysore) ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು. ಇದನ್ನೂ ಓದಿ: ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.

    ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

    ಈ ಇಬ್ಬರ ಜಗಳ ತಾರಕಕ್ಕೇರಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇದೀಗ ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಪತಿಯ ವಿರುದ್ಧ ರಾಖಿ ಸಾವಂತ್ ಮುಂಬೈನ ಓಶಿವಾರ್ ಠಾಣೆಗೆ ದೂರು ನೀಡಿದ್ದು, ತನಗೆ ಪತಿಯಿಂದ ಮೋಸ ಆಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ರಾಖಿ. ಇದೀಗ ಪತಿಯನ್ನು ಅವರೇ ಪೊಲೀಸನವರಿಗೆ ಹಿಡಿದುಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರಿನ ಹುಡುಗ, ಪತಿ ಆದಿಲ್ ವಿರುದ್ಧ ದೂರು ನೀಡಿದ ರಾಖಿ ಸಾವಂತ್

    ಮೈಸೂರಿನ ಹುಡುಗ, ಪತಿ ಆದಿಲ್ ವಿರುದ್ಧ ದೂರು ನೀಡಿದ ರಾಖಿ ಸಾವಂತ್

    ದುವೆ ವಿಷಯ ಬಹಿರಂಗ ಪಡಿಸಿ ಇನ್ನೂ ಎರಡು ತಿಂಗಳೂ ಕಳೆದಿಲ್ಲ. ಆಗಲೇ ಪತಿಯ ಮೇಲೆ ದಿನಕ್ಕೊಂದು ಆರೋಪ ಮಾಡಿ, ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದಾರೆ ನಟಿ ರಾಖಿ ಸಾವಂತ್. ಹಲವು ದಿನಗಳ ಹಿಂದೆಯಷ್ಟೇ ಮೈಸೂರು ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು.

    ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.  ಇದನ್ನೂ ಓದಿ: ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

    ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

    ಈ ಇಬ್ಬರ ಜಗಳ ತಾರಕಕ್ಕೇರಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇದೀಗ ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಪತಿಯ ವಿರುದ್ಧ ರಾಖಿ ಸಾವಂತ್ ಮುಂಬೈನ ಓಶಿವಾರ್ ಠಾಣೆಗೆ ದೂರು ನೀಡಿದ್ದು, ತನಗೆ ಪತಿಯಿಂದ ಮೋಸ ಆಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ರಾಖಿ. ಸದ್ಯ ದೂರು ಸ್ವೀಕರಿಸಿರುವ ಠಾಣಾ ಅಧಿಕಾರಿಗಳು ಮುಂದೆ ಯಾವ ಕ್ರಮ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

    ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

    ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮತ್ತು ಮೈಸೂರು (Mysore) ಹುಡುಗ ಆದಿಲ್ (Adil) ಮದುವೆ (Marriage) ವಿಚಾರ ಮತ್ತೆ ಹಾದಿರಂಪ ಬೀದಿ ರಂಪ ಆಗಿದೆ. ಕ್ಯಾಮೆರಾಗಳ ಮುಂದೆ ಗೆಳೆಯ ಆದಿಲ್ ನನ್ನು ಹಾಡಿ ಹೊಗಳುತ್ತಿದ್ದ ರಾಖಿ, ಇದೀಗ ಅವನ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಹುಡುಗಿಯ ಜೊತೆ ಅವನು ಸಂಬಂಧವನ್ನು ಹೊಂದಿದ್ದಾನೆ ಎಂದು ಕಣ್ಣೀರು ಇಟ್ಟಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ತಾವು ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಘೋಷಣೆ ಮಾಡಿದರು. ಈ ವಿಚಾರ ಆದಿಲ್ ಮನೆಯವರಿಗೆ ಗೊತ್ತಾಗಿ ತಮಗೆ ತೊಂದರೆ ಆಗುತ್ತಿದೆ ಎನ್ನುವ ಸಂಕಟವನ್ನೂ ಅವರು ಹಂಚಿಕೊಂಡಿದ್ದರು. ಆದಿಲ್ ಮನೆಯವರು ತನ್ನ ಪತಿಯ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ಮದುವೆ ಎಲ್ಲಿ ಮುರಿದು ಬೀಳುತ್ತದೆಯೋ ಎನ್ನುವ ಭಯ ಇದೆ. ಮೈಸೂರಿನವರು ನಮ್ಮನ್ನು ರಕ್ಷಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಆದಿಲ್ ತಮ್ಮ ಮದುವೆ ಬಗ್ಗೆ ಘೋಷಣೆ ಮಾಡಬೇಕು ಎಂದೂ ಒತ್ತಾಯಿಸಿದ್ದರು. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

    ತಮ್ಮ ಮದುವೆ ವಿಚಾರ ಹಾಗೂ ಫೋಟೋಗಳನ್ನು ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದಂತೆಯೇ ಅನಿವಾರ್ಯವಾಗಿ ಆದಿಲ್ ಕೂಡ ಒಪ್ಪಿಕೊಳ್ಳಬೇಕಾಯಿತು. ಆನಂತರ ಒಟ್ಟಿಗೆ ನಗುನಗುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟಿತ್ತು ಜೋಡಿ. ಇದೀಗ ರಾಖಿ ಮತ್ತೆ ಕಣ್ಣೀರು ಹಾಕಿದ್ದಾರೆ. ಆದಿಲ್ ಜೊತೆಗಿನ ಮದುವೆಯನ್ನು ಉಳಿಸಿಕೊಳ್ಳಬೇಕು. ಅವನ ಜೊತೆ ಸಂಬಂಧ ಹೊಂದಿರುವ ಹುಡುಗಿಗೆ ಅರ್ಥ ಮಾಡಿಸಬೇಕು ಎಂದು ಅವರು ಹೇಳಿದ್ದಾರೆ.

    ಆದಿಲ್ ಗೆ ಹಲವಾರು ಬಾರಿ ಎಚ್ಚರಿಕೆ ಕೊಟ್ಟಿದ್ದೇನೆ. ತಿದ್ದಿಕೊಳ್ಳಲೂ ತಿಳಿಸಿರುವೆ. ಆದರೆ, ಅವನು ತಿದ್ದಿಕೊಳ್ಳುತ್ತಿಲ್ಲ. ಮದುವೆ ಅನ್ನುವುದು ದೊಡ್ಡ ವಿಚಾರ. ನಾನು ಈ ಮದುವೆಯನ್ನು ಉಳಿಸಿಕೊಳ್ಳಲೇಬೇಕು. ಆ ಹುಡುಗಿಯನ್ನು ಬಿಟ್ಟು ಅವನು ಬರಬೇಕು. ಅವನು ನಮ್ಮ ಮದುವೆಯ ವಿಚಾರವನ್ನು ಯಾಕೆ ಗುಟ್ಟಾಗಿ ಇಟ್ಟಿದ್ದ ಎನ್ನುವುದು ಈಗ ಗೊತ್ತಾಗುತ್ತಿದೆ. ಇಂಥದ್ದೊಂದು ಅಫೇರ್ ಇಟ್ಟುಕೊಳ್ಳಲು ಅವನು ನಾಟಕ ಮಾಡಿದ ಎಂದು ರಾಖಿ ಕ್ಯಾಮೆರಾಗಳ ಮುಂದೆ ಕಣ್ಣೀರು ಹಾಕುತ್ತಾ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟಿ ರಾಖಿ ಸಾವಂತ್ ತಾಯಿ ಜಯಾ ನಿಧನ

    ನಟಿ ರಾಖಿ ಸಾವಂತ್ ತಾಯಿ ಜಯಾ ನಿಧನ

    ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ತಾಯಿ ಜಯಾ ಸಾವಂತ್ (Jaya Sawant) ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ (Death). ಕ್ಯಾನ್ಸರ್ (Cancer) ಮತ್ತು ಬ್ರೇನ್ ಟ್ಯೂಮರ್ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದ ಕಾರಣದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ತಾಯಿಯ ಕೊನೆಯ ಕ್ಷಣಗಳನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ರಾಖಿ, ತಾಯಿಯ ಎದುರು ಕುಳಿತು ದುಃಖಿಸಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ರಾಖಿ ಸಾವಂತ್ ತಮ್ಮ ತಾಯಿಗೆ ಇರುವ ಖಾಯಿಲೆ ಕುರಿತು ಮಾತನಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡು, ತಾಯಿ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿರುವ ಕುರಿತು ಹೇಳಿಕೊಂಡಿದ್ದರು. ಎಡದೇಹಕ್ಕೆ ಪ್ಯಾರಾಲೈಸ್ ಆಗಿರುವ ಕುರಿತು ಮಾಹಿತಿ ಹಂಚಿಕೊಂಡು, ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿರಿ ಎಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ

    ರಾಖಿ ತಾಯಿ 2021ರಿಂದಲೇ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿದ್ದಾರೆ. 2021ರ ಏಪ್ರಿಲ್‌ನಲ್ಲಿ ಅದಕ್ಕಾಗಿ ಶಸ್ತ್ರಚಿಕಿತ್ಸೆ ಕೂಡ ನಡೆಸಲಾಗಿತ್ತು. ಈ ಸರ್ಜರಿಗೆ ಸಲ್ಮಾನ್ ಖಾನ್ ಧನ ಸಹಾಯ ಮಾಡಿದ್ದರು ಎಂದು ಸ್ವತಃ ರಾಖಿಯೇ ಹೇಳಿಕೊಂಡಿದ್ದರು. ಸಂಕಷ್ಟದ ಸಮಯದಲ್ಲಿ ಸಹಾಯ ಹಸ್ತ ಚಾಚಿದ ಸಲ್ಮಾನ್ ಖಾನ್‌ ಗೆ ರಾಖಿ ಸಾವಂತ್ ಧನ್ಯವಾದ ತಿಳಿಸಿದ್ದರು. ಕೊನೆಗೂ ಯಾವುದೂ ಅವರ ತಾಯಿಯನ್ನು ಕೈ ಹಿಡಿಯಲಿಲ್ಲ. ನಿನ್ನೆ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ಖಾನ್ ಜೊತೆ ಮದುವೆಯಾದ ಬೆನ್ನಲ್ಲೇ ರಾಖಿ ಸಾವಂತ್ ಬಂಧನ

    ಆದಿಲ್ ಖಾನ್ ಜೊತೆ ಮದುವೆಯಾದ ಬೆನ್ನಲ್ಲೇ ರಾಖಿ ಸಾವಂತ್ ಬಂಧನ

    ಬಾಲಿವುಡ್ (Bollywood) ನಟಿ ರಾಖಿ ಸಾವಂತ್ (Rakhi Sawant) ಮೈಸೂರು ಹುಡುಗ ಆದಿಲ್ ಖಾನ್ (Adil Khan) ಜೊತೆ ವೈವಾಹಿಕ ಜೀವನ ಆರಂಭಿಸುತ್ತಿರುವ ಬೆನ್ನಲ್ಲೇ ನಟಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರಾಖಿ ಸಾವಂತ್‌ನ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

    ಇತ್ತೀಚೆಗೆ ತಮ್ಮ ಮದುವೆ ವಿಚಾರವಾಗಿ ರಾಖಿ ಸಖತ್ ಸುದ್ದಿಯಲ್ಲಿದ್ದರು. ಆದಿಲ್ ಜೊತೆಗಿನ ಮದುವೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ʻಬಿಗ್ ಬಾಸ್ʼ ಖ್ಯಾತಿಯ ರಾಖಿ ಸಾವಂತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಶೆರ್ಲಿನ್ ಚೋಪ್ರಾ (Sherlyn Chopra) ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ರಾಖಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ಯುವ ನಟ ಧನುಷ್ ನಿಧನ

    ರಾಖಿ ಬಂಧನ ಬಗ್ಗೆ ಟ್ವಿಟ್ಟರ್‌ನಲ್ಲಿ ನಟಿ ಶೆರ್ಲಿನ್ ಮಾಹಿತಿ ಹಂಚಿಕೊಂಡಿದ್ದಾರೆ. ಅಂಬೋಲಿ ಪೊಲೀಸರು ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ. (ಜ.18)ರಂದು ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್‌ ಕೋರ್ಟ್ ತಿರಸ್ಕರಿಸಿತ್ತು ಎಂದು ಶೆರ್ಲಿನ್ ಟ್ವೀಟ್ ಮಾಡಿದ್ದಾರೆ.

    ಕಳೆದ ವರ್ಷ ಮೀ ಟೂ ಆರೋಪಿ ಸಾಜಿದ್ ಖಾನ್ (Sajid Khan) ವಿರುದ್ಧ ನೀಡಿದ ಹೇಳಿಕೆಗಾಗಿ ರಾಖಿ ಸಾವಂತ್, ಶೆರ್ಲಿನ್ ಚೋಪ್ರಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಕ್ಟೋಬರ್ 29ರಂದು ಸಾಜಿದ್ ಖಾನ್ ವಿರುದ್ಧ ಹೇಳಿಕೆಯನ್ನು ದಾಖಲಿಸಿದ ನಂತರ ಶೆರ್ಲಿನ್ ಮಾಧ್ಯಮಗಳೊಂದಿಗೆ ಮಾತನಾಡಿ, ಸಲ್ಮಾನ್ ಖಾನ್ (Salman Khan), ಸಿನಿಮಾ ನಿರ್ಮಾಪಕನನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಬಳಿಕ ರಾಖಿ, ಶೆರ್ಲಿನ್ ಹೇಳಿಕೆಯನ್ನು ಖಂಡಿಸಿದರು. ಪಾಪರಾಜಿಗಳೊಂದಿಗೆ ಮಾತನಾಡಿದ್ದ ರಾಖಿ, ಯಾವ ದೂರಿನಲ್ಲಿ ಅರ್ಹತೆ ಇದೆ ಮತ್ತು ಯಾವುದು ಇಲ್ಲ ಎಂದು ಪೊಲೀಸರಿಗೆ ತಿಳಿದಿದೆ ಎಂದು ಹೇಳಿದರು. ನಂತರ ಶೆರ್ಲಿನ್ ಚೋಪ್ರಾ, ರಾಖಿ ವಿರುದ್ಧ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದರು.

    ಇನ್ನೂ ಪತಿ ಆದಿಲ್ ಜೊತೆ ಸೇರಿ ರಾಖಿ ಡ್ಯಾನ್ಸ್ ಅಕಾಡೆಮಿಯನ್ನ ಶುರು ಮಾಡಿದ್ದರು. ಅದರ ಉದ್ಘಾಟನೆ ಮಾಡಬೇಕಿತ್ತು. ಜ.19 ಮಧ್ಯಾಹ್ನ 3 ಗಂಟೆಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದಕ್ಕೂ ಮುನ್ನವೇ ನಟಿಯ ಬಂಧನವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರಿನಿಂದ ಆದಿಲ್ ಗೆ ಕರೆ ಬರ್ತಿವೆ: ‘ನನ್ನನ್ನು ಬಿಟ್ಟು ಹೋಗ್ಬೇಡ’ ಎಂದು ಗಳಗಳನೆ ಅತ್ತ ರಾಖಿ

    ಮೈಸೂರಿನಿಂದ ಆದಿಲ್ ಗೆ ಕರೆ ಬರ್ತಿವೆ: ‘ನನ್ನನ್ನು ಬಿಟ್ಟು ಹೋಗ್ಬೇಡ’ ಎಂದು ಗಳಗಳನೆ ಅತ್ತ ರಾಖಿ

    ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮತ್ತು ಮೈಸೂರಿನ ಹುಡುಗ ಆದಿಲ್ ಖಾನ್ (Adil) ಮದುವೆ (Marriage) ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಮ್ಮಿಬ್ಬರದ್ದೂ ಮದುವೆ ಆಗಿಲ್ಲ ಎಂದು ಹೇಳುತ್ತಿದ್ದ ಆದಿಲ್, ಕೊನೆಗೂ ಒಪ್ಪಿಕೊಂಡು ಆಗಿದೆ. ಆದರೆ, ಮೈಸೂರಿನಿಂದ ಆತನಿಗೆ ನಿರಂತರವಾಗಿ ಕರೆ ಬರುತ್ತಿರುವುದಾಗಿ ರಾಖಿ ಹೇಳಿಕೊಂಡಿದ್ದಾರೆ. ಕ್ಯಾಮೆರಾಗಳ ಮುಂದೆ ದುಃಖಿಸುತ್ತಾ ಮಾತನಾಡಿರುವ ಅವರು ‘ಮೈಸೂರಿನ (Mysore) ಜನ ನನ್ನೊಂದಿಗೆ ನಿಲ್ಲಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

    ‘ಆದಿಲ್ ನನ್ನನ್ನು ಮದುವೆ ಆದಾಗಿಂದ ಅವರ ಕುಟುಂಬದಿಂದ ಮತ್ತು ಮೈಸೂರಿನ ಹಲವರು ಅವನಿಗೆ ನಿರಂತರವಾಗಿ ಕರೆ ಮಾಡುತ್ತಿದ್ದಾರೆ. ರಾಖಿಯನ್ನು ಬಿಟ್ಟು ಬರುವಂತೆ ಒತ್ತಡ ಹೇರುತ್ತಿದ್ದಾರೆ. ಇದು ನನಗೆ ಆತಂಕ ಮೂಡಿಸಿದೆ. ಅವನನ್ನು ನಾನು ಮನಸಾರೆ ಇಷ್ಟಪಟ್ಟು ಮದುವೆ ಆಗಿರುವೆ. ಈ ವಿಷಯದಲ್ಲಿ ನನಗೆ ಮೈಸೂರು ಜನ ಆಶೀರ್ವದಿಸಬೇಕು. ನಾವಿಬ್ಬರೂ ಸುಖವಾಗಿ ಜೀವನ ನಡೆಸುವಂತೆ ಸಪೋರ್ಟ್ ಮಾಡಿ’ ಎಂದು ರಾಖಿ ಕೈ ಮುಗಿದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ತಾಯಿಯಾಗುತ್ತಿರುವ ಗುಡ್‌ ನ್ಯೂಸ್‌ ಕೊಟ್ರು ʻಯೇ ಜವಾನಿ ಹೇ ದಿವಾನಿ’ ನಟಿ

    ಮದುವೆಯಾಗಿ ಏಳು ತಿಂಗಳಿಗೆ ರಾಖಿ ಸಾವಂತ್ ತಾಯಿ ಆಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಕೊಡುವಂತೆ ರಾಖಿ ಆಡಿದ ಮಾತುಗಳು ಕೂಡ ವೈರಲ್ ಆಗುತ್ತಿವೆ. ಮಾಧ್ಯಮದೊಂದಿಗೆ ಮಾತನಾಡುತ್ತಾ ಮದುವೆ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ರಾಖಿ. ಆಗ ಸಂದರ್ಶಕರು ‘ನೀವು ಪ್ರಗ್ನೆಂಟಾ?’ ಎಂದು ಕೇಳುತ್ತಾರೆ. ಈ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದು ಹೇಳುವ ಮೂಲಕ ಅನುಮಾನಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ ರಾಖಿ ಸಾವಂತ್.

    ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಕೂಡ ಹೇಳಿದ್ದಾರೆ. ಆ ಕುಟುಂಬಕ್ಕೆ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದು ಹೇಳಿದ್ದರು. ಇದೀಗ ಸದ್ದಿಲ್ಲದೇ ಆ ಕುಟುಂಬವನ್ನೂ ಸೊಸೆಯಾಗಿ ಸೇರಿಕೊಂಡಿದ್ದಾರೆ. ಜೊತೆಗೆ ಇದೀಗ ಪ್ರಗ್ನೆಂಟ್ ಎನ್ನುವ ಸುದ್ದಿಗೂ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಖಿ ಸಾವಂತ್ ಪ್ರಗ್ನೆಂಟ್: ನೋ ಕಾಮೆಂಟ್ಸ್ ಎಂದ ನಟಿ

    ರಾಖಿ ಸಾವಂತ್ ಪ್ರಗ್ನೆಂಟ್: ನೋ ಕಾಮೆಂಟ್ಸ್ ಎಂದ ನಟಿ

    ದುವೆಯಾಗಿ (Marriage) ಏಳು ತಿಂಗಳಿಗೆ ರಾಖಿ ಸಾವಂತ್ (Rakhi Sawant) ತಾಯಿ ಆಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಕೊಡುವಂತೆ ರಾಖಿ ಆಡಿದ ಮಾತುಗಳು ಕೂಡ ವೈರಲ್ ಆಗುತ್ತಿವೆ. ಮಾಧ್ಯಮದೊಂದಿಗೆ ಮಾತನಾಡುತ್ತಾ ಮದುವೆ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ರಾಖಿ. ಆಗ ಸಂದರ್ಶಕರು ‘ನೀವು ಪ್ರಗ್ನೆಂಟಾ? (Pregnant)’ ಎಂದು ಕೇಳುತ್ತಾರೆ. ಈ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದು ಹೇಳುವ ಮೂಲಕ ಅನುಮಾನಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ ರಾಖಿ ಸಾವಂತ್.

    ತಾನು ಪ್ರೀತಿಸಿ ಮದುವೆಯಾದ ಹುಡುಗ ಆದಿಲ್ ಖಾನ್ (Adil) ತಮಗೆ ಮೋಸ ಮಾಡುತ್ತಿದ್ದಾನೆ ಎಂದು ಮೊನ್ನೆಯಷ್ಟೇ ನಟಿ ರಾಖಿ ಸಾವಂತ್ ಕಣ್ಣೀರಿಟ್ಟಿದ್ದರು. ಅವನು ತನ್ನನ್ನು ಮದುವೆಯೇ ಆಗಿಲ್ಲವೆಂದು ಹೇಳುತ್ತಿದ್ದಾನೆ. ಅವನಿಂದ ನನಗೆ ಮೋಸ ಆಗುತ್ತಿದೆ ಎಂದು ಹೇಳಿಕೊಂಡಿದ್ದರು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ರಾಖಿ ಸಾವಂತ್ ನನ್ನೊಂದಿಗೆ ಮದುವೆ ಆಗಿದ್ದಾರೆ ಎಂದು ಸ್ವತಃ ಆದಿಲ್ ಹೇಳಿಕೊಂಡಿದ್ದಾರೆ. ಹಾಗಾಗಿ ಮದುವೆ ವಿವಾದ ಸರಿ ಹೋಗಿದೆ. ಹಾಗಾಗಿಯೇ ಕೇಸರಿ ಬಣ್ಣದ ಬುರ್ಖಾ ಧರಿಸಿ ಎಲ್ಲರಿಗೂ ವಂದನೆಗಳನ್ನು ಹೇಳಿದ್ದಾರೆ ರಾಖಿ. ಇದನ್ನೂ ಓದಿ: ರವಿಚಂದ್ರನ್ ಸಿನಿಮಾದ ಹೆಸರು ಮತ್ತು ನಾಯಕಿ ಬದಲು

    ರಾಖಿ ಕಣ್ಣೀರು ಹಾಕುತ್ತಿದ್ದಂತೆಯೇ ಮದುವೆಯಾಗಿ ಆರು ತಿಂಗಳಿಗೆ ಈ ಮದುವೆ ಮುರಿದು ಬಿತ್ತು ಎಂದು ಹೇಳಲಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ಖಾನ್ ರಿಜಿಸ್ಟರ್ (Register) ಮದುವೆ ಆಗಿದ್ದರು. ನಿಕಾ ಕೂಡ ಮಾಡಿಕೊಂಡಿದ್ದರು. ಆದರೆ, ತಮ್ಮ ಮದುವೆಯೇ ಆಗಿಲ್ಲ ಎಂದು ಆದಿಲ್ ಹೇಳುತ್ತಿದ್ದಾನೆ ಎಂದು ರಾಖಿ ರಂಪಾಟ ಮಾಡಿದ್ದರು. ಮದುವೆ ಆಗಿದ್ದರ ಗುರುತಾಗಿ ರಿಜಿಸ್ಟರ್ ಪತ್ರಗಳನ್ನೂ ಅವರು ಬಹಿರಂಗ ಪಡಿಸಿದ್ದರು.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿದ್ದ ರಾಖಿ, ‘ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆಯವರೆಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿ ಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ’ ಎಂದು ರಾಖಿ ಹೇಳಿಕೊಂಡಿದ್ದರು.

    ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಕೂಡ ಹೇಳಿದ್ದಾರೆ. ಆ ಕುಟುಂಬಕ್ಕೆ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದು ಹೇಳಿದ್ದರು. ಇದೀಗ ಸದ್ದಿಲ್ಲದೇ ಆ ಕುಟುಂಬವನ್ನೂ ಸೊಸೆಯಾಗಿ ಸೇರಿಕೊಂಡಿದ್ದಾರೆ. ಜೊತೆಗೆ ಇದೀಗ ಪ್ರಗ್ನೆಂಟ್ ಎನ್ನುವ ಸುದ್ದಿಗೂ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಖಿ ಸಾವಂತ್ ಮದುವೆ ವಿವಾದ ಸುಖಾಂತ್ಯ: ಬುರ್ಖಾ ಧರಿಸಿದ ನಟಿ

    ರಾಖಿ ಸಾವಂತ್ ಮದುವೆ ವಿವಾದ ಸುಖಾಂತ್ಯ: ಬುರ್ಖಾ ಧರಿಸಿದ ನಟಿ

    ತಾನು ಪ್ರೀತಿಸಿ ಮದುವೆಯಾದ ಹುಡುಗ ಆದಿಲ್ ಖಾನ್ ತಮಗೆ ಮೋಸ ಮಾಡುತ್ತಿದ್ದಾನೆ ಎಂದು ಮೊನ್ನೆಯಷ್ಟೇ ನಟಿ ರಾಖಿ ಸಾವಂತ್ ಕಣ್ಣೀರಿಟ್ಟಿದ್ದರು. ಅವನು ತನ್ನನ್ನು ಮದುವೆಯೇ ಆಗಿಲ್ಲವೆಂದು ಹೇಳುತ್ತಿದ್ದಾನೆ. ಅವನಿಂದ ನನಗೆ ಮೋಸ ಆಗುತ್ತಿದೆ ಎಂದು ಹೇಳಿಕೊಂಡಿದ್ದರು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ರಾಖಿ ಸಾವಂತ್ ನನ್ನೊಂದಿಗೆ ಮದುವೆ ಆಗಿದ್ದಾರೆ ಎಂದು ಸ್ವತಃ ಆದಿಲ್ ಹೇಳಿಕೊಂಡಿದ್ದಾರೆ. ಹಾಗಾಗಿ ಮದುವೆ ವಿವಾದ ಸರಿ ಹೋಗಿದೆ. ಹಾಗಾಗಿಯೇ ಕೇಸರಿ ಬಣ್ಣದ ಬುರ್ಖಾ ಧರಿಸಿ ಎಲ್ಲರಿಗೂ ವಂದನೆಗಳನ್ನು ಹೇಳಿದ್ದಾರೆ ರಾಖಿ.

    ರಾಖಿ ಕಣ್ಣೀರು ಹಾಕುತ್ತಿದ್ದಂತೆಯೇ ಮದುವೆಯಾಗಿ ಆರು ತಿಂಗಳಿಗೆ ಈ ಮದುವೆ ಮುರಿದು ಬಿತ್ತು ಎಂದು ಹೇಳಲಾಗಿತ್ತು. ಆರು ತಿಂಗಳ ಹಿಂದೆಯಷ್ಟೇ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ಖಾನ್ ರಿಜಿಸ್ಟರ್ ಮದುವೆ ಆಗಿದ್ದರು. ನಿಕಾ ಕೂಡ ಮಾಡಿಕೊಂಡಿದ್ದರು. ಆದರೆ, ತಮ್ಮ ಮದುವೆಯೇ ಆಗಿಲ್ಲ ಎಂದು ಆದಿಲ್ ಹೇಳುತ್ತಿದ್ದಾನೆ ಎಂದು ರಾಖಿ ರಂಪಾಟ ಮಾಡಿದ್ದರು. ಮದುವೆ ಆಗಿದ್ದರ ಗುರುತಾಗಿ ರಿಜಿಸ್ಟರ್ ಪತ್ರಗಳನ್ನೂ ಅವರು ಬಹಿರಂಗ ಪಡಿಸಿದ್ದರು. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿದ್ದ ರಾಖಿ, ‘ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆಯವರೆಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿ ಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ’ ಎಂದು ರಾಖಿ ಹೇಳಿಕೊಂಡಿದ್ದರು.

    ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಕೂಡ ಹೇಳಿದ್ದಾರೆ. ಆ ಕುಟುಂಬಕ್ಕೆ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದು ಹೇಳಿದ್ದರು. ಇದೀಗ ಸದ್ದಿಲ್ಲದೇ ಆ ಕುಟುಂಬವನ್ನೂ ಸೊಸೆಯಾಗಿ ಸೇರಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಖಿ ಗೋಳಾಟದ ಬಳಿಕ ಮದುವೆ ಬಗ್ಗೆ ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್ ಖಾನ್

    ರಾಖಿ ಗೋಳಾಟದ ಬಳಿಕ ಮದುವೆ ಬಗ್ಗೆ ಅಧಿಕೃತ ಪೋಸ್ಟ್ ಹಂಚಿಕೊಂಡ ಆದಿಲ್ ಖಾನ್

    ಮೈಸೂರು ಹುಡುಗ (Mysore) ಆದಿಲ್ ಖಾನ್ (Adil Khan) ಜೊತೆ ರಾಖಿ ಸಾವಂತ್ (Rakhi Sawant) ಮದುವೆ ಮ್ಯಾಟರ್ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ತಮ್ಮ ಮದುವೆ ಆಗಿದ್ರು ಕೂಡ ಒಪ್ಪಿಕೊಳ್ತಿಲ್ಲ ಅಂತಾ ರಾಖಿ ಗೋಳಾಡಿದ್ದರು. ಈ ಬೆನ್ಲಲ್ಲೇ ತಮ್ಮ ಮದುವೆಯ (Wedding) ಬಗ್ಗೆ ಆದಿಲ್ ಖಾನ್ ಮೌನ ಮುರಿದಿದ್ದಾರೆ. ಈ ಕುರಿತು ಅಧಿಕೃತ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ.

    ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿರುವ ರಾಖಿ, ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆ ಮಂದಿಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ ಎಂದು ರಾಖಿ ಹೇಳಿಕೊಂಡಿದ್ದರು. ರಾಖಿ ಅರಚಾಟ ಗೋಳಾಟ ನಂತರ ಆದಿಲ್ (Adil Khan) ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ನಾನು ಯಾವತ್ತೂ ರಾಖಿಯನ್ನು ಮದುವೆಯಾಗಿದ್ದಾಗಿ ಹೇಳಿರಲಿಲ್ಲ. ಅದಕ್ಕೆ ಕೆಲವು ಕಾರಣಗಳಿತ್ತು. ಕೆಲವೊಂದು ಕಾರಣಗಳಿಂದ ನಮ್ಮ ಮದುವೆ ವಿಚಾರವನ್ನು ಮುಚ್ಚಿಟ್ಟೆ. ರಾಖಿ ನಮಗೆ `ಹ್ಯಾಪಿ ಮ್ಯಾರೀಡ್ ಲೈಫ್’ ಎಂದು ಬರೆದಿದ್ದಾರೆ. ತಮ್ಮ ಮದುವೆ ಫೋಟೋ ಶೇರ್ ಮಾಡಿ, ಅಧಿಕೃತವಾಗಿ ಹೇಳಿದ್ದಾರೆ. ಪತಿಯ ಪೋಸ್ಟ್‌ಗೆ ಲವ್‌ ಯೂ ಜಾನ್‌ ಎಂದು ರಾಖಿ ಪ್ರತಿಕ್ರಿಯೆ ನೀಡಿದ್ದಾರೆ.

    ಒಟ್ನಲ್ಲಿ ರಾಖಿ ಮದುವೆ (Wedding) ಪ್ರಸಂಗಕ್ಕೆ ಈಗ ಅಂತ್ಯವಾಗಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ನವ ಜೋಡಿಗೆ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ಖಾನ್  ಮದುವೆ ಆಗಿ ಮೋಸ ಮಾಡ್ತಿದ್ದಾನೆ : ನಟಿ ರಾಖಿ ಸಾವಂತ್ ಅಳಲು

    ಆದಿಲ್ ಖಾನ್ ಮದುವೆ ಆಗಿ ಮೋಸ ಮಾಡ್ತಿದ್ದಾನೆ : ನಟಿ ರಾಖಿ ಸಾವಂತ್ ಅಳಲು

    ದುವೆಯಾಗಿ ಆರು ತಿಂಗಳಿಗೆ ರಾಖಿ ಸಾವಂತ್ ಮತ್ತು ಆದಿಲ್ ಖಾನ್ ಮದುವೆ ಮುರಿದು ಬಿತ್ತಾ? ಹೌದು ಎನ್ನುತ್ತಾರೆ ನಟಿ ರಾಖಿ ಸಾವಂತ್. ಆರು ತಿಂಗಳ ಹಿಂದೆಯಷ್ಟೇ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ಖಾನ್ ರಿಜಿಸ್ಟರ್ ಮದುವೆ ಆಗಿದ್ದಾರೆ. ನಿಕಾ ಕೂಡ ಮಾಡಿಕೊಂಡಿದ್ದರು. ಆದರೆ, ಇದೀಗ ತಮ್ಮ ಮದುವೆಯೇ ಆಗಿಲ್ಲ ಎಂದು ಆದಿಲ್ ಹೇಳುತ್ತಿದ್ದಾನೆ ಎನ್ನುತ್ತಾರೆ ರಾಖಿ. ಮದುವೆ ಆಗಿದ್ದರ ಗುರುತಾಗಿ ರಿಜಿಸ್ಟರ್ ಪತ್ರಗಳನ್ನೂ ಅವರು ಬಹಿರಂಗ ಪಡಿಸಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಮಾಹಿತಿ ನೀಡಿರುವ ರಾಖಿ, ‘ಆರು ತಿಂಗಳ ಹಿಂದೆಯೇ ನಾವಿಬ್ಬರೂ ಮದುವೆ ಆಗಿದ್ದೇವೆ. ತಮ್ಮ ತಂಗಿಯ ಮದುವೆ ಆಗೋವರೆಗೂ ಈ ವಿಷಯವನ್ನು ಯಾರಿಗೂ ಹೇಳಬೇಡಿ ಎಂದು ಆದಿಲ್ ಹೇಳಿದ್ದ. ಹಾಗಾಗಿ ಸುಮ್ಮನಿದ್ದೆ. ಆದಿಲ್ ಮನೆಯವರೆಗೆ ನಾನು ಅಂದರೆ ಇಷ್ಟವಿಲ್ಲ. ಹಾಗಾಗಿ ಅವರೂ ಅಡ್ಡಿ ಪಡಿಸುತ್ತಿದ್ದಾರೆ. ಆದಿಲ್ ಇಷ್ಟದಂತೆ ನಾನು ಫಾತಿಮಾ ಆಗಿಯೂ ಬದಲಾಗಿದ್ದೆ. ಇಷ್ಟೆಲ್ಲ ಹೊಂದಾಣಿಕೆ ಮಾಡಿಕೊಂಡರೂ, ಅವನು ನನಗೆ ಮೋಸ ಮಾಡುತ್ತಿದ್ದಾನೆ’ ಎಂದು ರಾಖಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: `ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಪೆಟ್ಟು

    ರಾಖಿ ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೈಸೂರು ಹುಡುಗ ಆದಿಲ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಈ ಸುದ್ದಿಗೆ ಪೂರಕ ಆದಿಲ್ ಮತ್ತು ರಾಖಿ ಸಾವಂತ್ ಮದುವೆಯನ್ನು ರೆಜಿಸ್ಟರ್ ಮಾಡಿಸುತ್ತಿರುವ ಫೋಟೋಗಳು ಹರಿದಾಡುತ್ತಿವೆ. ಅಲ್ಲದೇ, ರಿಜಿಸ್ಟರ್ ಪತ್ರದಲ್ಲಿ ಇಬ್ಬರು ಫೋಟೋ ಕೂಡ ಇರುವುದು ಕಂಡುಬಂದಿದೆ.

    ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಕೂಡ ಹೇಳಿದ್ದಾರೆ. ಆ ಕುಟುಂಬಕ್ಕೆ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದು ಹೇಳಿದ್ದರು. ಇದೀಗ ಸದ್ದಿಲ್ಲದೇ ಆ ಕುಟುಂಬವನ್ನೂ ಸೊಸೆಯಾಗಿ ಸೇರಿಕೊಂಡಿದ್ದಾರೆ.

    ನಿನ್ನೆಯಷ್ಟೇ ತಮ್ಮ ತಾಯಿಗೆ ಕ್ಯಾನ್ಸರ್ ಆಗಿರುವ ಸುದ್ದಿಯನ್ನು ಹಂಚಿಕೊಂಡಿದ್ದರು. ಮರಾಠಿ ಬಿಗ್ ಬಾಸ್ ಮನೆಯಲ್ಲಿ ಇದ್ದ ರಾಖಿ, ತಾಯಿಯ ಅನಾರೋಗ್ಯದ ಕಾರಣಕ್ಕಾಗಿಯೇ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದರು. ಇದೀಗ ದಢೀರ್ ಅಂತ ಮದುವೆ ಪತ್ರವನ್ನು ಹಿಡಿದು ನಿಂತಿದ್ದಾರೆ. ತಾಯಿಗೆ ಹುಷಾರಿಲ್ಲದ ಕಾರಣದಿಂದಾಗಿ ಅವರು ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಆದರೆ, ಈ ಮದುವೆ ಕುರಿತಾಗಿ ಆದಿಲ್ ಆಗಲಿ ಅಥವಾ ರಾಖಿ ಸಾವಂತ್ ಆಗಲಿ ಎಲ್ಲಿಯೂ ಬಹಿರಂಗ ಪಡಿಸಿಲ್ಲ. ಆದರೆ, ರೆಜಿಸ್ಟಾರ್ ಮದುವೆ ಆಗಿರುವ ಕುರಿತು, ಅವರು ಸಹಿ ಮಾಡುತ್ತಿರುವ ಮತ್ತು ಆ ಪತ್ರವನ್ನು ಹಿಡಿದು ನಿಂತಿರುವ ಫೋಟೋಗಳು ಮಾತ್ರ ವೈರಲ್ ಆಗಿವೆ. ಮುಂದಿನ ದಿನಗಳಲ್ಲಿ ಈ ಫೋಟೋ ಕುರಿತಾಗಿ ಅವರು ಏನು ಹೇಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k