Tag: ರಾಘವೇಂದ್ರ

  • ನನ್ನ ವಿರುದ್ಧ ರಾಘವೇಂದ್ರ ಷಡ್ಯಂತ್ರ – ಬಂಧಿಸುವಂತೆ ಈಶ್ವರಪ್ಪ ದೂರು

    ನನ್ನ ವಿರುದ್ಧ ರಾಘವೇಂದ್ರ ಷಡ್ಯಂತ್ರ – ಬಂಧಿಸುವಂತೆ ಈಶ್ವರಪ್ಪ ದೂರು

    ಬೆಂಗಳೂರು: ಯಡಿಯೂರಪ್ಪ (Yediyurappa) ಕುಟುಂಬದ ವಿರುದ್ಧ ಮಾಜಿ ಸಚಿವ ಕೆಎಸ್‌ಈಶ್ವರಪ್ಪ (KS Eshwarappa) ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ (BY Raghavendra) ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.

    ಬಿ ವೈ ರಾಘವೇಂದ್ರ ಅವರು ಹಲವು ಚುನಾವಣಾ ಅಕ್ರಮ‌ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರ ಮುಂದೆ ರೇವಣ್ಣ ಕಣ್ಣೀರು!

     

    ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ.‌ ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.

    ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು‌ ಕೊಟ್ಟಿರುವುದಾಗಿ ಈಶ್ವರಪ್ಪ ತಿಳಿಸಿದರು. ನಾನು ಸಾಯುವ ತನಕ ಬಿಜೆಪಿಯಲ್ಲೇ ಇರುತ್ತೇನೆ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ಸಾಯುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.

  • ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌ವೈ ಕುಟುಂಬ

    ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌ವೈ ಕುಟುಂಬ

    ಶಿವಮೊಗ್ಗ: ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಿಕಾರಿಪುರ ತಾಲೂಕು ಕಚೇರಿಯ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಮಂಗಳವಾರ ಮತ ಚಲಾಯಿಸಿದರು.

    ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಅವರು ಹುಚ್ಚರಾಯಸ್ವಾಮಿ ದರ್ಶನ ಪಡೆದರು. ರಾಘವೇಂದ್ರ ಸ್ವಾಮಿ ಮಠಕ್ಕೂ ಭೇಟಿ ನೀಡಿ ರಾಯರ ದರ್ಶನ ಪಡೆದರು. ನಂತರ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು.

    ಮತದಾನದ ಬಳಿಕ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. ರಾಘವೇಂದ್ರ ಎರಡೂವರೆ ಲಕ್ಷ ಲೀಡ್‌ನಲ್ಲಿ ಗೇಲ್ತಾರೆ. ಇಂದು ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರದಲ್ಲಿ 14 ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಳೆದ 14 ಕ್ಷೇತ್ರಗಳ ಪೈಕಿ ಒಂದೆರಡರಲ್ಲಿ ಸಮಸ್ಯೆ ಇದೆ. ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಲು ರಾಜ್ಯದಿಂದ 25-26 ಸೀಟ್ ಗೆಲ್ಲಿಸಿ ಕೊಡುತ್ತೇವೆ ಎಂದು ತಿಳಿಸಿದರು.

  • ಕುತೂಹಲ ಮೂಡಿಸುವ ‘ವೇಷ’ ಸಿನಿಮಾದ ಟ್ರೈಲರ್ ರಿಲೀಸ್

    ಕುತೂಹಲ ಮೂಡಿಸುವ ‘ವೇಷ’ ಸಿನಿಮಾದ ಟ್ರೈಲರ್ ರಿಲೀಸ್

    ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ ‘ವೇಷ’ (Vesha)  ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ ವೇಷ ಚಿತ್ರದ ಟ್ರೈಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ವೇಷದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

    ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ವೇಷ ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ, ನಾಯಕನಿಗೆ ಯಾವುದೊ ಒಂದು ಸಂದರ್ಭ ವೇಷ ಹಾಕುವ ಹಾಗೆ ಮಾಡುತ್ತದೆ. ಟ್ರೈಲರ್ ಮೂಲಕ ಹೊರಬಂದಿರುವ ವೇಷ ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ. ಈತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್. ಇದನ್ನೂ ಓದಿ:ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ. ವೇಷ ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ. ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ – ನಿರ್ಮಾಪಕ ರಾಘವೇಂದ್ರ.

    ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ವೇಷ ಚಿತ್ರದ ಕುರಿತು ಮಾತನಾಡಿದರು. ಚಿತ್ರದ ವಿತರಣೆಯನ್ನ ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್ ಗೌಡ ಅವರು ಮಾಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುರಿಗಾಹಿ ಹನುಮಂತಗೆ ಮದುವೆ ಮಾಡಿಸೋಕೆ ರೆಡಿಯಾದ ಶೋ

    ಕುರಿಗಾಹಿ ಹನುಮಂತಗೆ ಮದುವೆ ಮಾಡಿಸೋಕೆ ರೆಡಿಯಾದ ಶೋ

    ವರು ಒಟ್ಟು 10 ಮಂದಿ ಕಿಲಾಡಿಗಳು. ಅದ್ರಲ್ಲೊಬ್ಬ ಸಿಂಗರ್. ಇನ್ನೊಬ್ಬ ಡಾನ್ಸರ್. ಮತ್ತೊಬ್ಬ ಹಾಸ್ಯಕ್ಕೆ ಪಂಟರ್. ಹಳ್ಳಿ ಹೈದರಿಗೆ ಮಾತೇ ಬಂಡವಾಳ. ಮಾತಿನಿಂದಲೇ ಸುರಸುಂದರಿಯರನ್ನ ಪಟಾಯಿಸೋದ್ರಲ್ಲಿ ಯಶಸ್ವಿಯಾಗ್ತಾರಾ? ವೀಕೆಂಡ್‌ನಲ್ಲಿ ಭರ್ಜರಿ ಮನರಂಜನೆ ಕೊಡ್ತಿರುವ ಹೊಸ ಹೊಸ ರಿಯಾಲಿಟಿ ಶೋ ಭರ್ಜರಿ ಬ್ಯಾಚುಲರ್ಸ್ ಗ್ರ್ಯಾಂಡ್ ಓಪನಿಂಗ್ ಸಖತ್ತಾಗಿತ್ತು.

    ಮಾತಲ್ಲೇ ಮನೆಕಟ್ಟೋ 10 ಹುಡುಗರು. ಮನಸ್ಸು ತುಂಬಾ ದೊಡ್ಡ ದೊಡ್ಡ ಕನಸು ಕಟ್ಟಿಕೊಂಡಿರುವ 10  ಹುಡುಗೀರು. ಈ ಹತ್ತೂ ಹುಡ್ಗೀರದ್ದು ಬಣ್ಣಬಣ್ಣದ ಕನಸು. ಆದರೆ ಈ ಹತ್ತು ಹುಡುಗರದ್ದು ಹುಡುಗಿಯರ ಮನ ಒಲಿಸೋಕೆ ಸರ್ಕಸ್ಸು. ಸೂಟು ಬೂಟು ಹಾಕೊಳ್ಳೋಕೆ ಬರಲ್ಲ. ಹೈಫೈ ಕಾರಂತೂ ಇಲ್ಲವೇ ಇಲ್ಲ. ಇಂಗ್ಲೀಷು ಬರಲ್ಲ. ಕನ್ನಡ ಬಿಟ್ಟು ನಾವಿಲ್ಲ ಎನ್ನುವ ಹಳ್ಳಿ ಹೈಕಳು.

    ಜೀ ಕನ್ನಡ ವಾಹಿನಿಯ ಹೊಸ ರಿಯಾಲಿಟಿ ಶೋ ಭರ್ಜರಿ ಬ್ಯಾಚುಲರ್ಸ್ ಗೆ ಚಾಲನೆ ಸಿಕ್ಕಿದೆ. ನಿರ್ಣಾಯಕರ ಸ್ಥಾನದಲ್ಲಿ ಕನಸುಗಾರ ರವಿಚಂದ್ರನ್ ಹಾಗೂ ಡಿಂಪಲ್‌ ಕ್ವೀನ್ ರಚಿತಾ ಕುಳಿತಿದ್ದಾರೆ. ದಶ ಹುಡುಗರು ದಶ ಹುಡುಗಿಯರು ಈ ರಿಯಾಲಿಟಿ ಶೋ ಮುಖ್ಯ ಸ್ಪರ್ಧಿಗಳು. ತಮ್ಮ ಟ್ಯಾಲೆಂಟ್‌ನಿಂದ ಈಗಾಗ್ಲೇ ಗುರುತಿಸಿಕೊಂಡಿದ್ದಾರೆ ಕಿಲಾಡಿಗಳು. ಆದರೆ ಇವರಿಗೆ ಹುಡ್ಗೀರ್ ಮಾತ್ರಾ ಬೀಳ್ತಿಲ್ಲ. ಯಾಕಂದ್ರೆ ಇವ್ರೆಲ್ಲಾ ಹುಡುಗರ ಬಗ್ಗೆ ದೊಡ್ಡ ದೊಡ್ಡ ಕನಸು ಹೊತ್ತ ಅಲ್ಟ್ರಾ ಮಾಡರ್ನ್ ಹುಡ್ಗೀರು.

    ವಿವಿಧ ಧಾರಾವಾಹಿಗಳಲ್ಲಿ ನಟನೆಯಿಂದ ಹೆಸರು ಮಾಡಿರುವ ನಟಿಯರೇ ಭರ್ಜರಿ ಬ್ಯಾಚುಲರ್ಸ್‍ ಗಳಿಗೆ ಸ್ವಯಂ ವರಕ್ಕೆ ನಿಂತಿರುವ ಸುಂದರಾಂಗಿಯರು. ಅಂದಚಂದ, ನೃತ್ಯ, ಹಾಡು ಓದು ಬರಹದಲ್ಲಿ ಮುಂದಿರುವ ಈ ಸುಂದರಿಯರಿಗೆ ತಕ್ಕಂಥ ಜೋಡಿ ಈ ದಶ ಕಿಲಾಡಿಗಳಲ್ಲಿ ಯಾರಾಗ್ತಾರೆ? ಎಲ್ಲರಿಗೂ ಕುತೂಹಲ ಇದೆ. ಒಬ್ಬೊಬ್ಬರಾಗೇ ಬ್ಯಾಚುಲರ್‌ಗಳು ಅಖಾಡಕ್ಕಿಳಿದು ಸುಂದರಿಯರನ್ನ ಒಲಿಸಿಕೊಳ್ಳುವ ಎಲ್ಲಾ ಪ್ರಯತ್ನ ಮಾಡ್ತಿದ್ದಾರೆ.

    ಕಾಮಿಡಿ ಕಿಲಾಡಿಗಳು ವೇದಿಕೆಯಲ್ಲಿ ಭಾರೀ ಮಿಂಚಿರುವ ಪ್ರತಿಭೆಗಳು ತಮ್ಮ ನಟನೆ, ಮಾತಿನ ಚತುರತೆಯಿಂದ ಹುಡ್ಗೀರ ಮನ ಗೆಲ್ಲಬೇಕಿಗೆ. ಯಾಕಂದ್ರೆ ಲುಕ್ ಇಲ್ಲ. ಆದರೆ ಲಕ್‌ನಿಂದ ಯಾವ ಸುಂದರಿಯರೂ ಮಾತಿಗೆ ಕರುಗುತ್ತಿಲ್ಲ. ಹೀಗಾಗೇ ರಿಯಾಲಿಟಿ ಶೋ ಆರಂಭದಲ್ಲೇ ಹುಡ್ಗೀರ ಮನ ಕದಿಯಲು ಭರ್ಜರಿ ಸರ್ಕಸ್ ಮಾಡ್ತಿದ್ದಾರೆ ಭರ್ಜರಿ ಬ್ಯಾಚುಲರ್ಸ್.

    ಭರ್ಜರಿ ಬ್ಯಾಚುಲರ್ಸ್ ಪಟ್ಟಿಯಲ್ಲಿ ವಿಧ ವಿಧದ ಪ್ರತಿಭೆಗಳಿವೆ. ಮುಗ್ಧತೆಯಿಂದ ಹೆಸರು ಮಾಡಿರುವ ಕುರಿಗಾಹಿ ಸಿಂಗರ್ ಹನುಮಂತ. ಹುಡ್ಗೀರ್ ಕಂಡ್ರೆ ನಾಚಿಕೊಳ್ತಾನೆ. ಈ ಸ್ಪರ್ಧೆಯಲ್ಲಿ ಹೇಗೆ ಕಾಣಿಸ್ಕೊಳ್ತಾನೆ ಅನ್ನೋದು ಕುತೂಹಲ. ಇನ್ನು ಹುಡ್ಗೀರ ಪಾತ್ರದಲ್ಲೇ ಮಿಂಚುವ ರಾಘವೇಂದ್ರಾಗೆ ಹುಡ್ಗೀರ ಸ್ನೇಹವಷ್ಟೇ ಅಲ್ಲದೇ ಪ್ರೀತಿಯೂ ಸಿಗಬೇಕಿದೆ. ಹೇಗೆ ಯಶಸ್ವಿಯಾಗ್ತಾನೆ ಅನ್ನೋದು ನಿರೀಕ್ಷೆ.

    ರಾಕೇಶ್, ಮನೋಹರ್, ಸೂರಜ್ ಕಾಮಿಡಿ ಕಿಲಾಡಿಗಳು ವೇದಿಕೆಯಲ್ಲಿ ಸಿಕ್ಕಿರುವ ಜೀ ಪ್ರತಿಭೆಗಳು. ಆದರೆ ನಗಿಸುವಷ್ಟು ಸುಲಭವಾ ಹುಡ್ಗೀರ ಮನ ಗೆಲ್ಲೋದು? ಅದನ್ನ ಸ್ವತಃ ಟ್ರೈ ಮಾಡೋಕೆ ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ಕಾಣಿಸ್ಕೊಂಡಿದ್ದಾರೆ. ಈ ಕಿಲಾಡಿಗಳಿಗೆ ಕಾಳ್ ಹಾಕೋದು ಸುಲಭ. ಆದರೆ ಆ ಕಾಳನ್ನ ಆರಿಸಿಕೊಳ್ಳೋಕೆ ಇಲ್ಲಿ ಹುಡ್ಗೀರಂತೂ ಸಿದ್ಧವಿಲ್ಲ.

    ಬೇರೆ ಬೇರೆ ಕ್ಷೇತ್ರದಲ್ಲಿ ಹೆಸರು ಮಾಡಿರೋ ಹಲವು ಪ್ರತಿಭೆಗಳು ಒಂದೆಡೆ ಸೇಕ್ಕೊಂಡು ಮಸ್ತ್ ಮನರಂಜನೆ ಕೊಡಲು ಬಂದಿದ್ದಾರೆ. ಆದರೆ ಹುಡ್ಗೀರ್ ಮಾತ್ರಾ ಪ್ರತಿಭೆ ಜೊತೆ ಪೈಲ್ವಾನ್ ಗುಣದ ಹುಡುಗ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಭರ್ಜರಿ ಬ್ಯಾಚುಲರ್‌ಗಳಿಗೆ ಯಾವ ಯಾವ ಹುಡ್ಗೀರು ಸೆಟ್ ಆಗ್ತಾರೋ ನೋಡ್ಬೇಕಿದೆ.

  • ಶಂಕರ್ ನಾಗ್ ನೆನಪಿನ ‘ಸಂಜು ಮತ್ತು ಗೀತಾ’ ಸಿನಿಮಾಗೆ ಮುಹೂರ್ತ

    ಶಂಕರ್ ನಾಗ್ ನೆನಪಿನ ‘ಸಂಜು ಮತ್ತು ಗೀತಾ’ ಸಿನಿಮಾಗೆ ಮುಹೂರ್ತ

    ಟ ಶಂಕರ್ ನಾಗ್ (Shankar Nag) ಅಭಿನಯದ “ಗೀತಾ” ಚಿತ್ರದಿಂದ ಈತನಕ ಸಂಜು ಮತ್ತು ಗೀತಾ (Geeta and Sanju) ಎಂಬ ಹೆಸರು ಜನಪ್ರಿಯ. ಈಗ ಅದೇ ಹೆಸರಿನ ಚಿತ್ರವೊಂದು ನಿರ್ಮಾಣವಾಗುತ್ತಿದೆ.ಆರ್ ಕೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ನಡೆಯಿತು.

      

    ಇದೊಂದು ನವೀರಾದ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ. ಈ ಹಿಂದೆ ನನ್ನ ನಿರ್ದೇಶನದ “ಕಾಣೆಯಾಗಿದ್ದಾಳೆ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ವಿನಯ್ ಕಾರ್ತಿಕ್ (Vinay Karthik) ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸಿದ್ದಾರೆ.  “ಮಂಗಳ ಗೌರಿ” ಧಾರಾವಾಹಿಯಲ್ಲಿ ಅಭಿನಯಿಸಿದ್ದ ಸನ್ಮಿತ ಈ ಚಿತ್ರದ ನಾಯಕಿ. ರಾಘವೇಂದ್ರ ರಾಜಕುಮಾರ್ ಈ ಚಿತ್ರದಲ್ಲಿ ನಾಯಕಿಯ ತಂದೆ ಪಾತ್ರದಲ್ಲಿ,‌ ಹಿರಿಯ ನಟಿ ಭವ್ಯ ನಾಯಕನ ತಾಯಿಯಾಗಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ , ಸ್ವಾತಿ ಸೇರಿದಂತೆ ಅನೇಕ ಕಲಾವಿದರು ನಮ್ಮ ಚಿತ್ರದ ತಾರಾಬಳಗದಲ್ಲಿದ್ದಾರೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಆರ್ ಕೆ ಮಾಹಿತಿ ನೀಡಿದರು. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದೆ ಎಂದರು ಹಿರಿಯ ನಟಿ ಭವ್ಯ. ನನಗೆ ಆರ್ ಕೆ ಅವರ ಜೊತೆ ಎರಡನೇ ಚಿತ್ರ. ರಾಘವೇಂದ್ರ ರಾಜಕುಮಾರ್, ಭವ್ಯ ಅವರಂತಹ ಹಿರಿಯ ನಟರೊಡನೆ ಅಭಿನಯಿಸುತ್ತಿರುವುದು ಖುಷಿಯಾಗಿದೆ ಎಂದು ನಾಯಕ ವಿನಯ್ ಕಾರ್ತಿಕ್ ಹೇಳಿದರು.

    ತಮ್ಮ ಪಾತ್ರದ ಬಗ್ಗೆ ನಾಯಕಿ ಸನ್ಮಿತ ಮಾತನಾಡಿದರು. ನಾನು ಈ ಚಿತ್ರದಲ್ಲೂ ಹೆಣ್ಣಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ “ಮಹಾಭಾರತ” ದ ರಾಘವೇಂದ್ರ (Raghavendra)ತಿಳಿಸಿದರು. ನಿರ್ಮಾಪಕ ಸಂಜಯ್ ಮಾಗನೂರು ಹಾಗೂ ಸಂಗೀತ ನಿರ್ದೇಶಕ ಕೌಶಿಕ್ ಚಿತ್ರದ ಬಗ್ಗೆ ಮಾಹಿತಿ ನೀಡಿದರು.  ಛಾಯಾಗ್ರಾಹಕ ನಾಗರಾಜ್, ಸಂಕಲನಕಾರ ಶಿವರಾಜು ಮೇಹು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ರಾಯರ 401 ನೇ ಪಟ್ಟಾಭಿಷೇಕ

    ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ರಾಯರ 401 ನೇ ಪಟ್ಟಾಭಿಷೇಕ

    ರಾಯಚೂರು: ಮಂತ್ರಾಲಯದಲ್ಲಿ ಗುರು ವೈಭವೋತ್ಸವ ಸಂಭ್ರಮ ಮನೆ ಮಾಡಿದೆ. ಇಂದು ರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತಿದ್ದು, ಬೆಳಗ್ಗೆಯಿಂದಲೇ ಶ್ರೀ ಮಠದಲ್ಲಿ ವಿಶೇಷ ಪೂಜೆಗಳು ಆರಂಭಗೊಂಡಿವೆ. ರಾಯರ ಪಾದುಕೆಗಳಿಗೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ನೆರವೇರಿಸಿದರು.

    ಶ್ರೀ ಮಠದ ಪ್ರಾಂಗಣದಲ್ಲಿ ಪ್ರಹ್ಲಾದ್ ರಾಜರಿಗೆ ಮುತ್ತು, ರನ್ನ ಮತ್ತು ಕನಕಗಳಿಂದ ಅಭಿಷೇಕ ಮಾಡಿದರು. ಗುರು ವೈಭವೋತ್ಸವ ಹಿನ್ನೆಲೆ ಮಂತ್ರಾಲಯ ಮಠದ ಪ್ರಾಂಗಣದಲ್ಲಿ ಸ್ವರ್ಣ ರಥೋತ್ಸವ ಜರುಗಿತು. ರಾಯರ ಪಾದುಕೆಗಳನ್ನು ರಥದಲ್ಲಿಟ್ಟು ಕೋಲಾಟ, ಭಜನೆಯ ಮೆರಗಿನೊಂದಿಗೆ ನಡೆದ ಸ್ವರ್ಣ ರಥೋತ್ಸವ ನಡೆಯಿತು. ರಾಯರ ಪಟ್ಟಾಭಿಷೇಕ ಸಂಭ್ರಮಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು.

    ಈ ವರ್ಷದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಭಾಗವಹಿಸಿದ್ದು ವಿಶೇಷವಾಗಿತ್ತು. ಇನ್ನೂ ಐದು ದಿನಗಳ ಕಾಲ ಗುರು ವೈಭವೋತ್ಸವ ನಡೆಯಲಿದ್ದು, ಮಾರ್ಚ್ 9 ರಂದು ರಾಯರ 427 ನೇ ವರ್ಧಂತಿ ಉತ್ಸವ ಜರುಗಲಿದೆ. ಈ ಸಂಭ್ರಮದಲ್ಲಿ ಭಾಗವಹಿಸಲು ಭಕ್ತರ ದಂಡು ಮಂತ್ರಾಲಯಕ್ಕೆ ಹರಿದು ಬರುತ್ತಿದೆ.

  • ಮಗಳಿಗೆ ನಾಮಕರಣ ಮಾಡಿದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

    ಮಗಳಿಗೆ ನಾಮಕರಣ ಮಾಡಿದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

    ಬೆಂಗಳೂರು: ಕಿರುತೆರೆ ನಟಿ ಅಮೃತಾ ರಾಮಮೂರ್ತಿ ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೃತಾ ಮತ್ತು ಪತಿ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ದೃತಿ ಎಂದು ನಾಮಕರಣ ಮಾಡಿದ್ದೇವೆ. ದೃತಿ ಪುಟ್ಟಿಯೆಂದು ಕರೆಯುತ್ತೇವೆ ಎಂದು ಬರೆದುಕೊಂಡಿದ್ದಾರೆ. ಅಪ್ಪು ಸರ್ ವಲ್‌ ಯೂ, ನಮ್ಮ ಜೀವನದ ಬೆಳಕು ನೀವು ಎಂದು ಬರೆದುಕೊಂಡಿದ್ದಾರೆ. ಅಮೃತಾ ರಾಮಮೂರ್ತಿ ಮಗಳ ಹೆಸರಿನ ಅನಾವರಣದ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದಾರೆ. ಈ ವೀಡಿಯೋಗೆ ಪುನೀತ್ ರಾಜ್‍ಕುಮಾರ್ ಅಭಿನಯದ ಸಿನಿಮಾ ಸಾಂಗ್‍ನ ಮ್ಯೂಸಿಕ್‍ನ್ನು ಬಳಸಿರುವುದು ವಿಶೇಷವಾಗಿದೆ.

    ಮಗು ಜನಿಸಿದಾಗ ಪಂಪತಿ ದೇವತೆಯ ಆಗಮನವಾಗಿದೆ ಎಂದು ಇನ್‍ಸ್ಡಾಗ್ರಾಮ್‍ನಲ್ಲಿ ಬರೆದುಕೊಂಡು ಹೆಣ್ಣು ಮಗುವಿಗೆ ಪೋಷಕರಾಗಿರುವ ಕುರಿತಾಗಿ 5 ತಿಂಗಳ ಹಿಂದೆಯೇ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮಗಳಿಗೆ ನಾಮಕರಣ ಮಾಡಿರುವ ಕುರಿತಾಗಿ ತಿಳಿಸಿದ್ದಾರೆ. ಮಗಳ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಲವು ಬಾರಿ ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇಲ್ಲಿವರೆಗೂ ದೃತಿ ಮುಖದ ಪರಿಚಯವನ್ನು ಮಾಡಿಕೊಟ್ಟಿಲ್ಲ. ಇದನ್ನೂ ಓದಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

    ಮಿಸ್ಟರ್ & ಮಿಸಸ್ ರಂಗೇಗೌಡ ಧಾರಾವಾಹಿಯಲ್ಲಿ ರಾಘವೇಂದ್ರ ಹಾಗೂ ಅಮೃತಾ ಒಟ್ಟಾಗಿ ನಟಿಸಿದ್ದರು. ಆ ಧಾರಾವಾಹಿಯಲ್ಲಿ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದ ಅವರು ನಿಜ ಜೀವನದಲ್ಲಿಯೂ ಕೂಡ ಸತಿ-ಪತಿಗಳಾದರು. 20019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದಂಪತಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ದಾರಾವಾಹಿಗಳ ಮೂಲಕವಾಗಿ ಜನಮನ್ನಣೆಗಳಿಸಿಕೊಂಡಿದ್ದರು. ಅಮೃತಾ ರಾಮಮೂರ್ತಿ ಸದ್ಯ ಯಾವುದೇ ಸಿರಿಯಲ್‍ನಲ್ಲಿಯೂ ಕಾಣಿಸಿಕೊಂಡಿಲ್ಲ. ಮಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಇವರ ಪತಿ ರಾಘವೇಂದ್ರ ಅವರು ಸೀರಿಯಲ್‍ನಲ್ಲಿ ನಟಿಸುತ್ತಿದ್ದಾರೆ. ತಮ್ಮದೇ ಆಗಿರುವ ವಿಶೇಷ ಶೈಲಿಯ ನಟನೇಯ ಮೂಲಕವಾಗಿ ಅಭಿಮಾನಿಗಳ ಮನಸ್ಸಿಗೆ ಹತ್ತಿರವಾಗಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಅಮೃತಾ ರಾಮಮೂರ್ತಿಗೆ ಸೀಮಂತದ ಸಂಭ್ರಮ

     

  • ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ಜಾರಿ ತರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರ ನಿರ್ಧಾರ ಸರಿಯಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸ್ವತಂತ್ರವಾಗಿ ಅವರ ಧರ್ಮದಲ್ಲಿ ಬದುಕಲು ಅವಕಾಶವಿದೆ. ಆದರೆ ಬಲತ್ಕಾರವಾಗಿ ಮತಾಂತರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ನಿಟ್ಟಿನಲ್ಲಿ ಬಿಗಿಯಾದ ನಿಲುವು ಬರುವುದು ಸರಿ ಇದೆ ಎಂದು ತಿಳಿಸಿದರು.

    ಪದೇ ಪದೇ ಅಲ್ಲೊಂದು, ಇಲ್ಲೊಂದು ಮತಾಂತರ ಪ್ರಕರಣ ಕೇಳಿ ಬರುತ್ತಿದೆ. ಆ ದೃಷ್ಟಿಕೋನ ಇಟ್ಟುಕೊಂಡು ಮತಾಂತರ ಕಾಯ್ದೆಯಲ್ಲಿ ತಿದ್ದುಪಡಿ ತರಲು ಸರ್ಕಾರ ಯೋಚಿಸುತ್ತಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಗೃಹಸಚಿವರು ಹೇಳಿದ್ದಾರೆ ಎಂದು ತಿಳಿಸಿದರು.

    ಈ ವೇಳೆ ಗೋಹತ್ಯೆಗೆ ಸಂಬಂಧಿಸಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಗೂ ತಿದ್ದುಪಡಿಯ ಅಗತ್ಯವಿದೆ. ಗೋಹತ್ಯೆ ಪ್ರಕರಣ ದಾಖಲಾದರೂ ಆರೋಪಿಗಳು ಕೆಲವೇ ಗಂಟೆಯಲ್ಲಿ ಹೊರಬರುತ್ತಾರೆ. ಹೀಗಾಗಿ ಕಾಯ್ದೆ ಮತ್ತಷ್ಟು ಬಿಗಿಯಾದರೆ, ಕಾನೂನಿಗೂ ಇನ್ನಷ್ಟು ಗೌರವ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ. ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಪ್ರಾಶಸ್ತ್ಯದಲ್ಲೇ ಶಿವಮೊಗ್ಗ ಗೆಲುವು ಸಾಧಿಸುತ್ತೇವೆ. ರಾಜ್ಯದಲ್ಲಿ 12- 15 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದರು. ಇದನ್ನೂ ಓದಿ: ಲಸಿಕೆ ನೀಡುವಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ನಂಬರ್ 1

  • ಹೆಣ್ಣು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

    ಹೆಣ್ಣು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

    ಬೆಂಗಳೂರು: ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಅವರು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ಅಮೃತಾ ಅವರ ಪತಿ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಇನ್ ಸ್ಟಾ ಸ್ಟೋರಿಯಲ್ಲಿ ಈ ಖುಷಿ ವಿಚಾರವನ್ನು ಶೇರ್ ಮಾಡಿಕೊಂಡಿರುವ ರಾಘವೇಂದ್ರ ಅವರು ‘ದೇವತೆಯ ಆಗಮನವಾಗಿದೆ’ ಎಂದು ಹೇಳುವ ಮೂಲಕ ಹೆಣ್ಣು ಮಗುವಿನ ತಂದೆಯಾಗಿರುವುದಾಗಿ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ.

    ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕಿರುತೆರೆ ನಟ ರಾಘವೆಂದ್ರ ಗೌಡ ಹಾಗೂ ನಟಿ ಅಮೃತಾ ರಾಮಮೂರ್ತಿ ದಂಪತಿ ಇತ್ತೀಚೆಗೆ ಸೀಮಂತ ಕಾರ್ಯ ಶಾಸ್ತ್ರೋಕ್ತವಾಗಿ ನೆರವೇರಿಸಿದ್ದರು. ಸೀಮಂತ ಸಮಾರಂಭದ ಫೋಟೋಗಳನ್ನು ಅಮೃತಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಒಂದು ಫೋಟೋದಲ್ಲಿ ಕೆಂಪು ಬಣ್ಣದ ಸೀರೆಯುಟ್ಟು ಅಮೃತಾ ಕಾಣಿಸಿಕೊಂಡಿದ್ದರೆ, ಮತ್ತೊಂದರಲ್ಲಿ ಪತಿ ರಾಘವೇಂದ್ರ ಪತ್ನಿಗೆ ಅಕ್ಷತೆ ಹಾಕಿ ಆಶೀರ್ವಾದ ಮಾಡಿದ್ದರು. ಇನ್ನೊಂದು ಫೋಟೋದಲ್ಲಿ ಪತ್ನಿ ಹಣೆಗೆ ಪ್ರೀತಿಯಿಂದ ಚುಂಬಿಸುತ್ತಿರುವುದನ್ನು ಕಾಣಬಹುದಾಗಿತ್ತು.

    ಫೋಟೋ ಜೊತೆಗೆ ಅಮೃತಾ, ಪ್ರತಿಯೊಬ್ಬ ಹೆಣ್ಣಿಗೂ ತಾಯ್ತನದ ಸಮಯದಲ್ಲಿ ವಿವಿಧ ಆಸೆಗಳು, ಕನಸುಗಳು ಇರುತ್ತದೆ, ಹಾಗೆ ನನ್ನ ಬಹು ದೊಡ್ಡ ಕನಸು ಅಂದ್ರೆ ನನ್ನ ಸೀಮಂತ ಶಾಸ್ತ್ರವನ್ನು (ತಾಯಿ-ಮಗುವಿನ ಹಿತಕ್ಕಾಗಿ ಮಾಡುವ ಶಾಸ್ತ್ರ) ಹಿರಿಯರ ಸಮ್ಮುಖದಲ್ಲಿ ಸಂತೋಷದಿಂದ ಮಾಡಿಸಿಕೊಳ್ಳಬೇಕು ಎಂದಿತ್ತು. ಆ ನನ್ನ ಕನಸು ಈಡೇರಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ನಾನು ಚಿರಋಣಿ. ಮೊದಲಿಗೆ ನನ್ನ ಜೀವ ರಾಘವೇಂದ್ರ, ಅತ್ತೆ, ಮಾವ, ಅತ್ತಿಗೆ, ಅಣ್ಣ, ಅಮ್ಮ, ಅಪ್ಪ, ಅಕ್ಕ, ಬಾವ, ಸ್ನೇಹಿತರು ಹಾಗೆ ನನ್ನ ಆತ್ಮೀಯರು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು.

    ರಾಘವೇಂದ್ರ ಹಾಗೂ ಅಮೃತಾ ಮೇ ತಿಂಗಳಿನಲ್ಲಿ ತಮ್ಮ 2ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಇಬ್ಬರೂ ತಾವು ತಂದೆ-ತಾಯಿಯಾಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಹಂಚಿಕೊಂಡಿದ್ದರು. ಜೊತೆಗೆ ನಾವಿಬ್ಬರು ಈಗ ಮೂವರು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು.

     

    View this post on Instagram

     

    A post shared by RRaGhu N ರಘು (@rraghun.boss21)

  • ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

    ಕುಕ್ಕೆ ಸುಬ್ರಹ್ಮಣ್ಯನಿಗಿದ್ದಾನೆ ಮತ್ತೊಬ್ಬ ಅಪ್ಪಟ ಕ್ರಿಕೆಟ್ ಆಟಗಾರ ಭಕ್ತ

    ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ, ಜಗತ್ತಿನೆಲ್ಲೆಡೆ ಭಕ್ತರನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯನಿಗೂ ಭಾರತೀಯ ಕ್ರಿಕೆಟ್ ತಂಡಕ್ಕೂ ಇರುವ ನಂಟಿನ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್, ರವಿಶಾಸ್ತ್ರಿ, ಮನೀಶ್ ಪಾಂಡೆ, ಕೆ.ಎಲ್.ರಾಹುಲ್ ಸೇರಿದಂತೆ ಬಹುತೇಕ ಎಲ್ಲಾ ಕ್ರಿಕೆಟಿಗರು ಕುಕ್ಕೆ ಸುಬ್ರಹ್ಮಣ್ಯ ಬಂದು ತಮ್ಮ ಯಶಸ್ಸಿನ ಮೆಟ್ಟಿಲನ್ನು ಗಟ್ಟಿಗೊಳಿಸಿದವರೇ. ಇದೀಗ ಪ್ರಸ್ತುತ ಇರುವ ಕ್ರಿಕೆಟ್ ತಂಡದಲ್ಲೂ ಒಬ್ಬ ಕ್ರೀಡಾಳು ಭಾರತೀಯ ಕ್ರಿಕೆಟ್ ತಂಡ ದೇಶ, ವಿದೇಶ ನೆಲದಲ್ಲಿ ಆಟವಾಡಲು ಹೋಗುವ ಮೊದಲು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಸೇವೆ ಸಲ್ಲಿಸುತ್ತಾರೆ.

    ಭಾರತೀಯ ಕ್ರಿಕೆಟ್ ತಂಡದ ಥ್ರೋಡೌನ್ ಸ್ಪೆಷಲಿಸ್ಟ್ ಡಿ.ರಾಘವೇಂದ್ರ ಕಳೆದ ಇಪ್ಪತ್ತು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಪ್ರಾರ್ಥನೆ ಮಾಡಿ, ತಮ್ಮ ಇಷ್ಟಾರ್ಥ ಪೂರೈಸಿಕೊಂಡಿದ್ದಾರೆ. ಕುಮುಟಾದ ತನ್ನ ಮನೆಯಿಂದ ಹೊರಬಂದು ಬೆಂಗಳೂರಿಗೆ ಸೇರಿದ್ದ ರಾಘವೇಂದ್ರ ಒಪ್ಪತ್ತಿನ ಊಟಕ್ಕೂ ಪರದಾಡಿದ ದಿನಗಳು ಸಾಕಷ್ಟಿವೆ. ಎಳವೆಯಲ್ಲೇ ಕ್ರಿಕೆಟ್‍ನ ಹುಚ್ಚು ತಲೆಗೆ ಹಚ್ಚಿಸಿಕೊಂಡಿದ್ದ ರಾಘವೇಂದ್ರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ನೋಡಿಯೇ ತನ್ನ ಪ್ರತಿಭೆಯನ್ನು ಹೆಚ್ಚಿಸಿಕೊಂಡವರು. ಕ್ರೀಡಾಂಗಣದ ಹೊರಗೆ ಬಂದ ಬಾಲನ್ನು ಹೆಕ್ಕಿಕೊಡುತ್ತಿದ್ದ ರಾಘವೇಂದ್ರ ಇದೀಗ ದೇಶ-ವಿದೇಶಗಳ ಕ್ರಿಕೆಟ್ ತಂಡಕ್ಕೆ ಬೇಕಾದ ಕ್ರೀಡಾಳುವಾಗಿದ್ದಾರೆ. ಮೊದಲ ಬಾರಿಗೆ ಕುಕ್ಕೆಗೆ ಬಂದಾಗ ಕುಕ್ಕೆಯ ಛತ್ರದ ಹೊರಗೆ ಚಾಪೆ ಹಾಕಿ ಮಲಗಿದ್ದ ರಾಘವೇಂದ್ರ ಕುಕ್ಕೆ ಸುಬ್ರಹ್ಮಣ್ಯ ಕೃಪೆಗೆ ಪಾತ್ರರಾಗಿ ಇಂದು ಆಕಾಶದೆತ್ತರಕ್ಕೆ ಬೆಳೆದಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಪ್ಪಟ ಭಕ್ತರಾಗಿರುವ ಡಿ.ರಾಘವೇಂದ್ರ, ತಮ್ಮ ತಂಡ ಪ್ರತೀ ಬಾರಿ ಆಡುವ ಆಟಕ್ಕೆ ಮೊದಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಡದ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಾರೆ. ಗೆದ್ದು ಬಂದ ಬಳಿಕ ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದು ರಾಘವೇಂದ್ರ ಅವರ ರೂಢಿ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿ ಮೂಲಕ ಭಾರತೀಯ ತಂಡದ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ, ಆಸ್ಟ್ರೇಲಿಯಾ ದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತೀಯ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲುವು ಸಾಧಿಸಿದ ತಕ್ಷಣವೇ ಕುಕ್ಕೆ ಸುಬ್ರಹ್ಮಣ್ಯದ ಪ್ರೋಟೋಕಾಲ್‌ ಸಿಬ್ಬಂದಿ ಪ್ರಮೋದ್‍ಗೆ ದೂರವಾಣಿ ಕರೆಮಾಡಿ ತಂಡದ ಹೆಸರಿನಲ್ಲಿ ಸುಬ್ರಹ್ಮಣ್ಯನಿಗೆ ಸೇವೆ ಸಲ್ಲಿಸಲು ತಿಳಿಸಿದ್ದಾರೆ.

    ಕೇವಲ ಕ್ರಿಕೆಟ್ ಮಾತ್ರವಲ್ಲ, ಇತರ ಕ್ರೀಡಾಳುಗಳು ಕೂಡ ಕುಕ್ಕೆಗೆ ಭೇಟಿ ನೀಡಿ ತಮ್ಮ ಕ್ರೀಡೆಯಲ್ಲಿ ಯಶಸ್ಸು ಗಳಿಸಿದ್ದಾರೆ. ಸುಬ್ರಹ್ಮಣ್ಯ ದೇವರಿಗೂ ಕ್ರೀಡೆಗೂ ಸಾಮ್ಯತೆಯಿದ್ದು, ಸುಬ್ರಹ್ಮಣ್ಯ ಸ್ಚಾಮಿಯ ತಾಯಿ ಪಾರ್ವತಿಯು ತಮ್ಮ ಇಬ್ಬರು ಮಕ್ಕಳಾದ ಗಣಪತಿ ಹಾಗೂ ಸುಬ್ರಹ್ಮಣ್ಯರಿಗೆ ತ್ರಿಲೋಕವನ್ನು ಮೂರು ಬಾರಿ ಸುತ್ತಿ ಬರುವಂತೆ ಸೂಚಿಸಿದ್ದಾರೆ. ಬೇಗ ಸುತ್ತು ಬಂದವರಿಗೆ ಮಾವಿನ ಹಣ್ಣನ್ನು ಬಹುಮಾನವಾಗಿ ನೀಡುವುದಾಗಿಯೂ ಹೇಳಿ ಕ್ರೀಡಾ ಮನೋಭಾವವನ್ನು ಸುಬ್ರಹ್ಮಣ್ಯ ಬಿತ್ತಿದ್ದರು. ಈ ಕಾರಣಕ್ಕಾಗಿಯೇ ಸುಬ್ರಹ್ಮಣ್ಯ ಸನ್ನಿಧಿಗೆ ಬರುವ ಕ್ರೀಡಾಳುಗಳು ಅತ್ಯಂತ ಯಶಸ್ವಿಯಾಗುತ್ತಾರೆ ಎನ್ನುವುದು ಕ್ಷೇತ್ರದ ಹಿರಿಯ ಸಿಬ್ಬಂದಿಯ ನಂಬಿಕೆಯಾಗಿದೆ.

    ತನ್ನ ಅಪಾರ ಚಾಕಚಕ್ಯತೆಯ ಥ್ರೋಡೌನ್ ಬಾಲಿಂಗ್‍ನಿಂದ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತಿರುವ ರಾಘವೇಂದ್ರ ಎಷ್ಟೇ ಎತ್ತರಕ್ಕೆ ಬೆಳೆದರೂ ಕುಕ್ಕೆ ಸುಬ್ರಹ್ಮಣ್ಯದ ನಂಟು ಮರೆತಿಲ್ಲ. ಕುಕ್ಕೆ ಸುಬ್ರಹ್ಮಣ್ಯನ ಆಶೀರ್ವಾದ ಈ ಯುವ ಪ್ರತಿಭಾವಂತ ಆಟಗಾರನ ಮೇಲಿರಲಿ. ಆ ಮೂಲಕ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ದೇವಾಲಯದ ಸಿಬ್ಬಂದಿ ಹಾರೈಸಿದ್ದಾರೆ.