Tag: ರಾಘವೇಂದ್ರ ಹಿಟ್ನಾಳ್

  • ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು: ರಾಘವೇಂದ್ರ ಹಿಟ್ನಾಳ್

    ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು: ರಾಘವೇಂದ್ರ ಹಿಟ್ನಾಳ್

    ಕೊಪ್ಪಳ: ಆರ್ಥಿಕ ವ್ಯವಸ್ಥೆ ಸರಿ ಹೋಗಬೇಕೆಂದರೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

    ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು. ಇದು ಜನರ ಕೂಗು, ಅದರ ಜೊತೆ ನಮ್ಮ ಬೆಂಬಲ ಕೂಡ ಇದೆ. ಸಿದ್ದರಾಮಯ್ಯ ಐದು ವರ್ಷದಲ್ಲಿ 15 ಲಕ್ಷ ಮನೆ ಕೊಟ್ಟಿದ್ದರು. ಆದರೆ ಬಿಜೆಪಿ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಸ್ಕೀಮ್ ಇದ್ದವು ಎಂದಿದ್ದಾರೆ.

    SIDDARAMAIAH

    ಸೀನಿಯರ್ ಅಂದ ಮೇಲೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದ್ದೆ ಇರುತ್ತದೆ. ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಮತ್ತು ಶಾಸಕರ ಅಭಿಪ್ರಾಯ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ಸರ್ಕಾರ ಬರಲು ಮಾಧ್ಯಮದವರು ಕೈ ಜೋಡಿಸಿ. ಬೆಲೆ ಏರಿಕೆ ವಿರುದ್ಧ ನೀವು ಕೈ ಜೋಡಿಸಿ. ಸಿಲಿಂಡರ್ ಬೆಲೆ ನಮಗೂ ಅಷ್ಟೇ, ನಿಮಗೂ ಅಷ್ಟೇ. ರೈತರು, ಮಹಿಳೆಯರು ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅಂತ ಬಯಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇತುವೆ ಮುಳುಗಿದರೂ ಲೆಕ್ಕಿಸದೇ ಬಸ್ ದಾಟಿಸಿದ ಚಾಲಕ

    ಕೊಪ್ಪಳದಲ್ಲಿ ಸುರಿದ ಭಾರೀ ಮಳೆಯಿಂದ ರೈತರಿಗೆ ಬೆಳೆ ಹಾನಿಯಾಗಿದ್ದು, ಕೊಪ್ಪಳ ಕ್ಷೇತ್ರದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‍ನಿಂದ ಸಮಸ್ಯೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರೇಹಳ್ಳ ಜಲಾಶಯದಿಂದ ನೀರು ಬಿಡುಗಡೆಯಾಗಿದ್ದರಿಂದ ನೀರು ಹರಿದಿದೆ. ಈಗಾಗಲೇ ನಾವು ಅಧಿಕಾರಿಗಳಿಗೆ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಕಳಪೆ ಆಗಿಲ್ಲ. ಆದರೆ ನೀರು ಹೋಗತ್ತದೆ ಎನ್ನುವುದಕ್ಕೆ ರೈತರು ಗೇಟ್ ತೆರೆಯಲು ಬಿಡಲ್ಲ. ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‍ಗಳು ಜಾಮ್ ಆಗಿವೆ. ಅಧಿಕಾರಿಗಳು ಸರ್ವೆ ಕಾರ್ಯ ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ಸರ್ಕಾರ ಪರಿಹಾರ ಕೊಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಂಗಳಮುಖಿಯರು ಹೊಡೆದಾಡಿದ್ರೆ ಯಾರನ್ನ ಕಳುಹಿಸಲಿ: ಸಿಎಂ ಇಬ್ರಾಹಿಂ

  • ಸಿದ್ದರಾಮಯ್ಯ ರಾಜ್ಯದ ಯಾವ ಮೂಲೆಯಲ್ಲಿ ಚುನಾವಣೆಗೆ ನಿಂತರೂ ಗೆಲ್ತಾರೆ: ಹಿಟ್ನಾಳ್

    ಸಿದ್ದರಾಮಯ್ಯ ರಾಜ್ಯದ ಯಾವ ಮೂಲೆಯಲ್ಲಿ ಚುನಾವಣೆಗೆ ನಿಂತರೂ ಗೆಲ್ತಾರೆ: ಹಿಟ್ನಾಳ್

    -ಸಿದ್ದರಾಮಯ್ಯ ಅವರೊಂದು ಶಕ್ತಿ

    ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೆ ರಾಜ್ಯದ ಯಾವ ಮೂಲೆಯಲ್ಲಿ ನಿಂತರೂ ಗೆಲ್ಲುತ್ತಾರೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಭರವಸೆ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ಚಿಮ್ಮನಕಟ್ಟಿ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಕೂಡ ಸಿದ್ದರಾಮಯ್ಯ ಗೆಲ್ಲುತ್ತಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀಡಿದ ಆಡಳಿತವೇ ಇದಕ್ಕೆ ಕಾರಣ. ರಾಜ್ಯದ ಕಟ್ಟ ಕಡೆಯ ಪ್ರಜೆಗೂ ಅವರ ಕೆಲಸ ತಲುಪಿದೆ. ಕಳೆದ 2018ರಲ್ಲಿ ಕೊಪ್ಪಳ, ಕುಷ್ಟಗಿಯಲ್ಲಿ ಸ್ಪರ್ಧೆ ಮಾಡುವಂತೆ ನಾನೇ ಕೇಳಿಕೊಂಡಿದ್ದೆ ಅದೇ ಸಮಯಕ್ಕೆ ಇಡೀ ಬದಾಮಿ ಜನರು ಸಿದ್ದರಾಮಯ್ಯ ಸ್ಪರ್ಧೆಗೆ ಒತ್ತಾಯ ಮಾಡಿದ್ದರು. ಹಾಗಾಗಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ದಿಸಿದ್ದರು ಎಂದರು. ಇದನ್ನೂ ಓದಿ: ಕಾಂಗ್ರೆಸ್‍ ಸೋಲು ಖಚಿತ: ರಮೇಶ್ ಜಾರಕಿಹೊಳಿ

    ಕೊಪ್ಪಳಕ್ಕೆ ಸಿದ್ದರಾಮಯ್ಯ ಬರುವುದಾದರೆ ಕೊಪ್ಪಳವನ್ನು ಬಿಟ್ಟು ಕೊಡುವುದರ ಜೊತೆಗೆ ಅತ್ಯಂತ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ. ನಾನು ಸಂತೋಷದಿಂದ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಬರೀ ನಾನು ಅಷ್ಟೇ ಅಲ್ಲ. ಬೈರತಿ ಹೆಬ್ಬಾಳಕ್ಕೆ ಬನ್ನಿ ಎಂದಿದ್ದಾರೆ. ಜಮೀರ್ ಅಹಮದ್ ಕೂಡ ಬೇಡಿಕೆ ಇಟ್ಟಿದ್ದಾರೆ ಸಿದ್ದರಾಮಯ್ಯ ಅವರೊಂದು ಶಕ್ತಿ. ಅವರು ಸ್ಪರ್ಧೆ ಮಾಡುವ ಭಾಗದಲ್ಲಿ ಅಭಿವೃದ್ಧಿ ಆಗುತ್ತದೆ. ಸಿದ್ದರಾಮಯ್ಯರಿಗೆ ಕ್ಷೇತ್ರ ಇಲ್ಲ ಎಂಬುದು ಮಾಧ್ಯಮಗಳ ಸೃಷ್ಟಿ ಮಾತ್ರ ಅವರನ್ನು ಎಲ್ಲಿ ನಿಲ್ಲಿಸಬೇಕು ಎಂಬುದರ ಬಗ್ಗೆ ಅವರ ಬೆಂಬಲಿಗರಲ್ಲಿ ಜಟಾಪಟಿ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ

    ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಇಬ್ಬರು ಮೂವರು ಸಿಎಂ ಆಗಿದ್ದಾರೆ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ. ಸಮಸ್ಯೆ ಇದೆ. ಇವರು ಬದಲಾಗಣೆ ಆಗುವ ನಿರೀಕ್ಷೆ ಕೂಡ ಇದೆ ಎಂದು ಮತ್ತೊಮ್ಮೆ ಸಿಎಂ ಬದಲಾವಣೆ ವಿಚಾರವನ್ನು ಮುನ್ನೆಲೆಗೆ ತಂದರು. ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಮುರುಗೇಶ್ ನಿರಾಣಿ

  • ಕಾಂಗ್ರೆಸ್ ಮಗನಾಗಲು ಬಿಜೆಪಿ ಅನ್ ಫಿಟ್: ರಾಘವೇಂದ್ರ ಹಿಟ್ನಾಳ

    ಕಾಂಗ್ರೆಸ್ ಮಗನಾಗಲು ಬಿಜೆಪಿ ಅನ್ ಫಿಟ್: ರಾಘವೇಂದ್ರ ಹಿಟ್ನಾಳ

    ಕೊಪ್ಪಳ: ಕಾಂಗ್ರೆಸ್ ಪಕ್ಷ ಅಪ್ಪ ಎನ್ನುವಂತೆ ಬಿಜೆಪಿ ಸಂಸದರು ಹೇಳಿದ್ದಾರೆ. ಆದರೆ ಬಿಜೆಪಿಯವರಿಗೆ ಕಾಂಗ್ರೆಸ್‍ನ ಮಗನಾಗಲೂ ಯೋಗ್ಯತೆ ಇಲ್ಲ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹರಿಹಾಯ್ದಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆ ಕುರಿತು ಉತ್ತರಿಸುವ ಸಂದರ್ಭದಲ್ಲಿ ಅಪ್ಪ ಮಾಡಿದ ಸಾಲ ಮಗ ತೀರಿಸಬೇಕೆಂದು ಬಿಜೆಪಿ ಸಂಸದರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅಪ್ಪ ಇದ್ದಂತೆ ಎಂದು ಪರೋಕ್ಷವಾಗಿ ಹೇಳಿದ್ದಾರೆ ಎಂದರು.

    ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮಾಡಿರುವ ಸಾಲ ತೀರಿಸಬೇಕು, ಅಪ್ಪ ಮಾಡಿದ ಸಾಲವನ್ನು ಮಗ ತೀರಸಬೇಕು. ಹೀಗಾಗಿ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದು ಇತ್ತೀಚಿಗೆ ಇತ್ತೀಚೆಗೆ ಸಂಸದ ಸಂಗಣ್ಣ ಕರಡಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೆ.ರಾಘವೇಂದ್ರ ಹಿಟ್ನಾಳ ಕಾಂಗ್ರೆಸ್ ಹಿಂದಿನ 63 ವರ್ಷದಲ್ಲಿ 57 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈಗಿನ ಮೋದಿ ಸರಕಾರ 7 ವರ್ಷದಲ್ಲಿ 82 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಲೈವಿ ರಿಲೀಸ್‍ಗೂ ಮುನ್ನ ಜಯಲಲಿತಾ ಸಮಾಧಿಗೆ ಕಂಗನಾ ಭೇಟಿ

    ಬಿಜೆಪಿ ಸರ್ಕಾರ ಕೇವಲ ಕೋಮು ಭಾವನೆ ಕೆರಳಿಸಿ, ಕಾರ್ಪೋರೆಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ ಎಂದರು.

    ಗಣೇಶ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಕಾದು ನೋಡಬೇಕು. ಕೊರೊನಾ ಎರಡನೆಯ ಅಲೆಗೆ ಉಪಚುನಾವಣೆ, ಜನಾಶೀರ್ವಾದ ಯಾತ್ರೆಗಳೇ ಕಾರಣ ಈ ಆಧಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

    ಕೊಪ್ಪಳ ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಗಿಣಗೆರೆಯಿಂದ ಚಿಕ್ಕಬಗನಾಳದವರೆಗೆ ಕಾರ್ಖಾನೆಗಳಿಂದ ರಸ್ತೆ ಮಾಡಿಸಲಾಗುವುದು ಎಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

  • ಕನಕದಾಸರ ಮೂರ್ತಿ ಪ್ರತಿಷ್ಠಾಪನೆ – ಕೊಪ್ಪಳದಲ್ಲಿ ಈಗ ರಾಜಕೀಯ ಜಿದ್ದಾಜಿದ್ದಿ

    ಕನಕದಾಸರ ಮೂರ್ತಿ ಪ್ರತಿಷ್ಠಾಪನೆ – ಕೊಪ್ಪಳದಲ್ಲಿ ಈಗ ರಾಜಕೀಯ ಜಿದ್ದಾಜಿದ್ದಿ

    ಕೊಪ್ಪಳ: ನಗರದ ಹೃದಯ ಭಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ ಎದುರುಗಡೆ ಇರುವ ಕನಕದಾಸ ವೃತ್ತದ ಸ್ಥಳ ಇದೀಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

    1988ರಲ್ಲಿ ಅಂದಿನ ಸಾರಿಗೆ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸ ವೃತ್ತವನ್ನು ಉದ್ಘಾಟನೆ ಮಾಡಿದ್ದರು. ಆದರೆ ಇತ್ತೀಚಿಗೆ ಬಹುಕೋಟಿ ವೆಚ್ಚದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಅದೇ ಸ್ಥಳದಲ್ಲಿಯೇ ಉದ್ಯಾನವನ ನಿರ್ಮಾಣ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.

    ಅದರಂತೆ ಕನಕದಾಸ ವೃತ್ತದ ಹಿಂಭಾಗದಲ್ಲಿನ ನಗರಸಭೆಗೆ ಸೇರಿದ 20 ವಾಣಿಜ್ಯ ಮಳಿಗೆಗಳನ್ನು ನೆಲಸಮ ಮಾಡಲಾಗಿದೆ. ಜೊತೆಗೆ ವಾಣಿಜ್ಯ ಮಳಿಗೆಗಳ ಜಾಗದಲ್ಲಿ ಕನಕದಾಸ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೃತ್ತ ನಿರ್ಮಾಣ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇದಕ್ಕೆ ಇದೀಗ ಸಂಸದ ಕರಡಿ ಸಂಗಣ್ಣ ವಿರೋಧ ವ್ಯಕ್ತಪಡಿಸಿದ್ದು, ನಗರಸಭೆಯ ವಾಣಿಜ್ಯ ಮಳಿಗೆಯ ಜಾಗವನ್ನು ಅತಿಕ್ರಮಿಸಿಕೊಂಡು ಕನಕದಾಸ ವೃತ್ತ ನಿರ್ಮಾಣ ಮಾಡಲಾಗುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಿ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕನಕದಾಸ ವೃತ್ತ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ ಆದರೆ ಸರ್ವಾಧಿಕಾರಿಯಂತೆ ನಿರ್ಧಾರ ತೆಗೆದುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

    ಸಂಸದ ಕರಡಿ ಸಂಗಣ್ಣ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರ ಹಿಂದೆ ರಾಜಕೀಯ ಉದ್ದೇಶ ಇರುವುದು ಸಹ ಸ್ಪಷ್ಟ. 2013 ರಲ್ಲಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದ ರಾಘವೇಂದ್ರ ಹಿಟ್ನಾಳ್, ಕುರುಬ ಸಮಾಜಕ್ಕೆ ಸೇರಿದವರು. ಜೊತೆಗೆ ಕರಡಿ ಸಂಗಣ್ಣ ಪ್ರಥಮ ಬಾರಿಗೆ ಶಾಸಕರಾದಾಗ ಕನಕದಾಸ ವೃತ್ತದ ಹಿಂಭಾಗದ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿಸಿದ್ದರು. ಆದರೆ ಇದೀಗ ಶಾಸಕ ರಾಘವೇಂದ್ರ ಹಿಟ್ನಾಳ್, ಕರಡಿ ಸಂಗಣ್ಣ ಕಟ್ಟಿಸಿದ್ದ ವಾಣಿಜ್ಯ ಮಳಿಗೆಗಳನ್ನು ಯಾವುದೇ ಸೂಚನೆ, ಚರ್ಚೆ ಮಾಡದೇ ನೆಲಸಮ ಮಾಡಿಸಿದ್ದಾರೆ. ಜೊತೆಗೆ ವಾಣಿಜ್ಯ ಮಳಿಗೆ ಇದ್ದ ಜಾಗವನ್ನು ಅತಿಕ್ರಮಿಸಿಕೊಂಡು ಆ ಜಾಗದಲ್ಲಿ ಕನಕದಾಸ ವೃತ್ತವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ ಎಂಬ ಆರೋಪ ಬಂದಿದೆ.

    ಕನಕದಾಸ ವೃತ್ತದ ಸ್ಥಳದ ಕುರಿತು ಸಂಸದ ಕರಡಿ ಸಂಗಣ್ಣ ಡಿಸಿಗೆ ಪತ್ರ ಬರೆದಿರುವುದಕ್ಕೆ ಇದೀಗ ಕುರುಬ ಸಮಾಜದವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಕನಕದಾಸರ ವಿಚಾರದಲ್ಲಿ ರಾಜಕಾರಣ ಮಾಡಬಾರದು, ಈ ಕೂಡಲೇ ಸಂಸದ ಕರಡಿ ಸಂಗಣ್ಣ ಕುರುಬ ಸಮಾಜದವರ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ. ಈ ಮುಂಚೆ ಇದ್ದ ಕನಕದಾಸ ವೃತ್ತದಲ್ಲಿ 10 ಲಕ್ಷ ವೆಚ್ಚದಲ್ಲಿ ಕಟ್ಟೆಯೊಂದನ್ನು ಕಟ್ಟಲಾಗಿತ್ತು. ಆದರೆ ಲಾಕ್‍ಡೌನ್ ವೇಳೆಯಲ್ಲಿ ಆ ಕಟ್ಟೆಯನ್ನು ಕೆಡವಲಾಗಿದ್ದು, ಹೊಸದೊಂದು ಕಟ್ಟೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಒಟ್ಟಿನಲ್ಲಿ ದಾರ್ಶನಿಕ ಕನಕದಾಸರ ವೃತ್ತ ಇದೀಗ ಕೊಪ್ಪಳದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

  • ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೋವಿಡ್ 19 ದೃಢ

    ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೋವಿಡ್ 19 ದೃಢ

    ಕೊಪ್ಪಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಶಾಸಕರಿಗೆ ಕೊರೊನಾ ದೃಢಪಟ್ಟ ಮಾಹಿತಿಯನ್ನು ಜಿಲ್ಲಾಧಿಕಾರಿ ಸೂರಳ್ಕರ್ ವಿಕಾಸ್ ಕಿಶೋರ್ ಬಹಿರಂಗಪಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೊರೊನಾ ಸೊಂಕು ತಗಲಿರುವ ಬಗ್ಗೆ ಕ್ಷೇತ್ರದಾದ್ಯಂತ ಹರಿದಾಡಿತ್ತು.

    ಈಗ ಸ್ವತಃ ಜಿಲ್ಲಾಧಿಕಾರಿಗಳೇ ಶಾಸಕರಿಗೆ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ಕೆಲದಿನಗಳ ಹಿಂದೇ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿರವರಿಗೆ ಕೊರೊನಾ ದೃಢಪಟ್ಟಿತ್ತು. ಗಂಗಾವತಿ ಶಾಸಕರ ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕುಳಿತಿದ್ದರು. ಅದಕ್ಕಾಗಿ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದನ್ನೂ ಓದಿ: ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು

    ಹೋಮ್ ಕ್ವಾರಂಟೈನ್ ಮುಗಿಸಿಕೊಂಡು ಎರಡು ದಿನಗಳ ಹಿಂದೆಯಷ್ಟೇ ಕಾಟ್ರಳ್ಳಿ ಗ್ರಾಮದ ಹಾಲು ಘಟಕವನ್ನ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಅದಾದ ಬಳಿಕ ಹಿಟ್ನಾಳ್‍ಗೆ ಕೊರೊನಾ ಧೃಡಪಟ್ಟಿದೆ. ಈಗ ಶಾಕಸರ ಒಡನಾಡಿಯಾಗಿದ್ದ ಕಾರ್ಯಕರ್ತರಿಗೂ ಹಾಗೂ ಹಿಂಬಾಲಕರಿಗೂ ಆತಂಕ ಶುರುವಾಗಿದೆ.

  • ಶಾಸಕ ಹಿಟ್ನಾಳ್ ಅಂಧ ದರ್ಬಾರ್- ತಮ್ಮ ಕಚೇರಿಗೆ ಪದೇ ಪದೇ ನವೀಕರಣ

    ಶಾಸಕ ಹಿಟ್ನಾಳ್ ಅಂಧ ದರ್ಬಾರ್- ತಮ್ಮ ಕಚೇರಿಗೆ ಪದೇ ಪದೇ ನವೀಕರಣ

    – ರಿನೋವೇಷನ್ ಹೆಸರಲ್ಲಿ 50 ಲಕ್ಷ ಬಿಲ್

    ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ ಅಂಧ ದರ್ಬಾರ್ ನಡೆಸುತ್ತಿದ್ದಾರಾ ಅನ್ನೋ ಅನುಮಾನವೊಂದು ಎದ್ದಿದೆ. ಕಳೆದ ಅವಧಿಯಲ್ಲಿ ತಮ್ಮ ಕಚೇರಿಯನ್ನ ನವೀಕರಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ್, ಇದೀಗ ಮತ್ತೆ 50 ಲಕ್ಷ ವೆಚ್ಚದಲ್ಲಿ ನವೀಕರಣ ಮಾಡಲು ಮುಂದಾಗಿದ್ದಾರೆ.

    ಕೊಪ್ಪಳ ನಗರದ ಹಳೆಯ ಜಿಲ್ಲಾ ಪಂಚಾಯತ್ ಕಟ್ಟಡದ ಆವರಣದಲ್ಲಿರುವ ಶಾಸಕರ ಕಚೇರಿ ಇದೀಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಇನ್ನೂ ಏನೂ ಆಗದೆ ಹಾಗೆ ಇರುವ ಸಮ್ಮೇಕ್ ಹಾಗೂ ಪೇಂಟಿಂಗ್ ಒಂದೆಡೆಯಾದರೆ, ಇನ್ನೊಂದಡೆ ಹೊಸದಾದ ಕಟ್ಟಡದ ಮೇಲ್ಛಾವಣಿ ಕೆಡವಿ ಹಾಕಿದ್ದಾರೆ. ಮಗದೊಂದು ಕಡೆ ಕೆಡವಿ ಹಾಕಿರುವ ಕಟ್ಟಡದ ನವೀಕರಣಕ್ಕೆ 50 ಲಕ್ಷ ಅನುದಾನ ಬಿಡುಗಡೆ ಮಾಡಿರುವ ದಾಖಲೆ ಇದೆ.

    ಕಳೆದ 4 ವರ್ಷಗಳ ಹಿಂದೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ 10 ಲಕ್ಷ ವೆಚ್ಚದಲ್ಲಿ ನವೀಕರಣ ಮಾಡಿಕೊಂಡಿದ್ದರು. ಈ ಕಟ್ಟಡ ಇನ್ನೂ ಚೆನ್ನಾಗಿರುವ ವೇಳೆಯಲ್ಲಿ ಇದೀಗ 50 ಲಕ್ಷ ವೆಚ್ಚದಲ್ಲಿ ಮತ್ತೆ ನವೀಕರಣ ಮಾಡಲು ಶಾಸಕರು ಮುಂದಾಗಿದ್ದಾರೆ. ಶಾಸಕರ ಈ ನಡೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

    ಶಾಸಕ ರಾಘವೇಂದ್ರ ಹಿಟ್ನಾಳ್ ಈ ಹಿಂದೆ ತಮ್ಮ ಕಚೇರಿ ನವೀಕರಣ ಮಾಡಿಕೊಂಡ ವೇಳೆಯಲ್ಲಿ ಪೇಂಟಿಂಗ್, ಹೊಸದಾದ ಎಸಿ, ಐಷಾರಾಮಿ ಫರ್ನಿಚರ್ ಗಳನ್ನು ಖರೀದಿ ಮಾಡಿಕೊಂಡಿದ್ದರು. ಆದರೆ ಇದೀಗ ಆ ವಸ್ತುಗಳೆಲ್ಲವೂ ನಿರುಪಯುಕ್ತವಾಗಲಿವೆ. ಒಟ್ಟಿನಲ್ಲಿ ಕಚೇರಿ ನವೀಕರಣ ನೆಪದಲ್ಲಿ ಅರ್ಧ ಕೋಟಿ ಹಣ ಖರ್ಚು ಮಾಡುವುದು ಅವಶ್ಯಕತೆ ಇತ್ತಾ ಎನ್ನುವುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

  • ಸಿದ್ದರಾಮಯ್ಯ ವಿಪಕ್ಷ ನಾಯಕನಾಗಿ ಮುಂದುವರಿಯಲಿ: ಹಿಟ್ನಾಳ್

    ಸಿದ್ದರಾಮಯ್ಯ ವಿಪಕ್ಷ ನಾಯಕನಾಗಿ ಮುಂದುವರಿಯಲಿ: ಹಿಟ್ನಾಳ್

    ಕೊಪ್ಪಳ: ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಅಷ್ಟೇ ಅಲ್ಲ ಹೈಕಮಾಂಡ್ ಸಹ ಸಿದ್ದರಾಮಯ್ಯರನ್ನು ಮುಂದುವರಿಸುವ ವಿಶ್ವಾಸವಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯನವರದ್ದು ಮುಗಿದ ಅಧ್ಯಾಯ ಅಲ್ಲ. ಸಿದ್ದರಾಮಯ್ಯ ನಿನ್ನೆ-ಮೊನ್ನೆ ಬಂದ ಮುಖಂಡರಲ್ಲ. ಜೀವನದುದ್ದಕ್ಕೂ ಹೋರಾಟ ಮಾಡಿದವರು ಜೊತೆಗೆ ಅವರು ಪ್ರಯತ್ನವಾದಿ ಎಂದರು.

    ಸೋಲು ಗೆಲುವು ಸಾಮಾನ್ಯವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರ್ತಾರೆ. ನಾವು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿಯೇ ಮುಂದುವರಿಯುತ್ತೇವೆ. ಉಪಚುನಾವಣೆಯ ಜನಾದೇಶವನ್ನು ನಾವು ಸ್ವಾಗತಿಸುತ್ತೇವೆ. ಬಿಜೆಪಿ ಹಣ, ಅಧಿಕಾರ ದುರಪಯೋಗದಿಂದ ಗೆದ್ದಿದೆ ಎಂದು ವಾಗ್ದಾಳಿ ನಡೆಸಿದರು.

    ಸರ್ಕಾರ ಅಧಿಕಾರದಲ್ಲಿರೋ ಕಾರಣ ಮತದಾರರು ಒಲವು ತೋರಿಸಿದ್ದು, ಇನ್ನಾದ್ರೂ ಬಿಜೆಪಿ ಒಳ್ಳೆಯ ಆಡಳಿತ ಕೊಡಲಿ ಎಂದು ತಿಳಿಸಿದರು.

    ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೆಡವಲು ಕಾರಣರಾದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಇದರ ಫಲಿತಾಂಶ ಸೋಮವಾರ ಹೊರ ಬಿದ್ದಿದ್ದು, 12 ಕಡೆಗಳಲ್ಲಿ ಕಮಲ ಅರಳಿದೆ. ಅದರಲ್ಲಿಯೂ ಜೆಡಿಎಸ್ ಭದ್ರ ಕೋಟೆಯಾಗಿದ್ದ ಮಂಡ್ಯದ ಕೆಆರ್ ಪೇಟೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿರುವುದು ಅಚ್ಚರಿ ಮೂಡಿಸಿದೆ. ಹುಣಸೂರು ಹಾಗೂ ಶಿವಾಜಿನಗರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಜಯಗಳಿಸಿದ್ದಾರೆ.

    ಚುನಾಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷ ಹಾಗೂ ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ, ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

     

  • ಸರ್ಕಾರ ಉಳಿಯುತ್ತೋ ಬಿಡುತ್ತೋ ಗೊತ್ತಿಲ್ಲ ನಾನು ಕಾಂಗ್ರೆಸ್‍ನಲ್ಲಿ ಇರುತ್ತೇನೆ – ರಾಘವೇಂದ್ರ ಹಿಟ್ನಾಳ್

    ಸರ್ಕಾರ ಉಳಿಯುತ್ತೋ ಬಿಡುತ್ತೋ ಗೊತ್ತಿಲ್ಲ ನಾನು ಕಾಂಗ್ರೆಸ್‍ನಲ್ಲಿ ಇರುತ್ತೇನೆ – ರಾಘವೇಂದ್ರ ಹಿಟ್ನಾಳ್

    – ಆಪರೇಷನ್ ಕಮಲಕ್ಕೆ ಸಿದ್ದರಾಮಯ್ಯ ಕಾರಣ ಅಲ್ಲ

    ಕೊಪ್ಪಳ: ಸರ್ಕಾರ ಉಳಿಯುತ್ತೋ ಬಿಡುತ್ತೋ ನನಗೆ ಗೊತ್ತಿಲ್ಲ. ಆದರೆ ನಾನು ಕಾಂಗ್ರೆಸ್‍ನಲ್ಲಿ ಇರುತ್ತೇನೆ ಎಂದು ಕೈ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣದ ಆಮಿಷ, ಅಧಿಕಾರದ ಆಸೆ ತೋರಿಸಿ ನಮ್ಮ ಸರ್ಕಾರವನ್ನು ಅಸ್ಥಿರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ನಾಯಕರ ಮೇಲೆ ಕಿಡಿಕಾರಿದರು.

    ನಾನು ಅಮರೇಗೌಡರು ಸಿದ್ದರಾಮಯ್ಯ ಆಪ್ತರೇ. ಆಪರೇಷನ್ ಕಮಲಕ್ಕೆ ಸಿದ್ದರಾಮಯ್ಯ ಕಾರಣವಾಗಿದರೆ ನಾವು ಹೋಗಬೇಕಿತ್ತು. ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾದರೆ ನಮ್ಮನ್ನು ಏಕೆ ಸಿದ್ದರಾಮಯ್ಯ ಬಿಜೆಪಿ ಕಳಿಸಿಲ್ಲ ಎಂದು ರಾಘವೇಂದ್ರ ಹಿಟ್ನಾಳ್ ಪ್ರಶ್ನೆ ಮಾಡಿದರು.

    ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ. ಕಾಂಗ್ರೆಸ್‍ನಲ್ಲಿ ಇರುತ್ತೇನೆ. ಸರ್ಕಾರ ಉಳಿಯುತ್ತೋ ಬಿಡುತ್ತೋ ಗೊತ್ತಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ಶಾಸಕರು ಕಾರ್ಯಕರ್ತರನ್ನು ವಿಚಾರಿಸದೇ ರಾಜೀನಾಮೆ ನೀಡಿದ್ದು ಸರಿ ಅಲ್ಲ ಎಂದು ಕಿಡಿಕಾರಿದರು.

  • ಕೊಪ್ಪಳದಲ್ಲಿ ಅಭ್ಯರ್ಥಿಗಳ ಮಧ್ಯೆ ಟಾಕ್ ಫೈಟ್

    ಕೊಪ್ಪಳದಲ್ಲಿ ಅಭ್ಯರ್ಥಿಗಳ ಮಧ್ಯೆ ಟಾಕ್ ಫೈಟ್

    ಕೊಪ್ಪಳ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎರಡು ಪಕ್ಷದ ನಾಯಕರುಗಳು ಒಬ್ಬೊಬ್ಬರ ಮೇಲೆ ಮಾತನಾಡುವ ಮೂಲಕ ಟಾಕ್ ಫೈಟ್ ನಡೆಸುತ್ತಿದ್ದಾರೆ.

    ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಸಹೋದರ ರಾಘವೇಂದ್ರ ಹಿಟ್ನಾಳ್ ನಡುವೆ ಇದೀಗ ಟಾಕ್ ಫೈಟ್ ಎರ್ಪಟ್ಟಿದೆ. ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಂಗಣ್ಣ ಕರಡಿ ತಮ್ಮ ಭಾಷಣದಲ್ಲಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರೂಫ್ ಕೇಳುವ ರಾಘವೇಂದ್ರ ಹಿಟ್ನಾಳ್ ಇಲ್ಲಿರುವುದಕ್ಕೆ ಯೋಗ್ಯರಲ್ಲಾ ಅವರು ಪಾಕಿಸ್ತಾನಕ್ಕೆ ಹೋಗಲಿ. ರಾಘವೇಂದ್ರ ಹಿಟ್ನಾಳ್ ಒಬ್ಬ ಅಯೋಗ್ಯ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಘವೇಂದ್ರ ಹಿಟ್ನಾಳ್ ಕರಡಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

    ಸಂಗಣ್ಣ ಕರಡಿ ಮಾನಸಿಕ ಅಸ್ವಸ್ಥ ಕಳೆದುಕೊಂಡಿದ್ದಾರೆ. ಮೊನ್ನೆ ನಡೆದ ಕಾಂಗ್ರೆಸ್ ಸಮಾವೇಶ ನೋಡಿ ವಿಚಲಿತರಾಗಿದ್ದಾರೆ. ನಮಗೆ ದೇಶಾಭಿಮಾನದ ಬಗ್ಗೆ ಪಾಠ ಮಾಡೋದು ಅವಶ್ಯವಿಲ್ಲ. ಬಿಜೆಪಿಯವರಿಗೆ ಹಿಂದೂತ್ವ, ಹಿಂದೂ ಸಂಪ್ರದಾಯದ ಬಗ್ಗೆ ಗೊತ್ತೆ ಇಲ್ಲ. ಅವರಿಗೆ ಜನರಿಂದ ಸ್ಪಂದನೆ ಸಿಗುತ್ತಿಲ್ಲ, ಹಾಗಾಗಿ ಮಾತನಾಡುತ್ತಿದ್ದಾರೆ. ಈಶ್ವರಪ್ಪ ಜೊತೆಗೆ ಕೂಡಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಮಾಡುತ್ತಿದ್ದಾರೆ ಎಂದು ಕರಡಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ಮುಂದಿನ ದಿನಗಳಲ್ಲಿ ಇವರಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ಯಾರು ಯೋಗ್ಯ ಇದ್ದಾರೆ, ಯಾರು ಯೋಗ್ಯರಿಲ್ಲ ಎನ್ನುವುದನ್ನು ಜನತೆ ನಿರ್ಧರಿಸುತ್ತಾರೆ. ಅವರು ಮಾತನಾಡಿರುವುದನ್ನು ನೋಡಿದರೆ ಅವರು ಮಾನಸಿಕವಾಗಿ ಕುಗ್ಗಿರುವುದು ಸ್ಪಷ್ಟವಾಗುತ್ತದೆ. ಅವರ ಮಾತಿನಲ್ಲಿ ಸೋಲಿನ ಭಯ ಕಾಡುತ್ತಿದೆ. ಹೇಗಾದರೂ ಮಾಡಿ ಜಾತಿ-ಜಾತಿಗಳ ಮದ್ಯೆ ಜಗಳ ಹಚ್ಚಿ ಗೆಲ್ಲಲು ಹೊರಟಿದ್ದಾರೆ. ಇದು ಕೊಪ್ಪಳ ಲೋಕಸಭಾ ವ್ಯಾಪ್ತಿಯಲ್ಲಿ ಸಾಧ್ಯವಿಲ್ಲ ಎಂದು ಸಂಗಣ್ಣ ಕರಡಿ ಹೇಳಿಕೆಗೆ ರಾಘವೇಂದ್ರ ಹಿಟ್ನಾಳ್ ತಿರುಗೇಟು ನೀಡಿದರು.

  • ಸತ್ತ ಉಗ್ರರ ಲೆಕ್ಕ ಬೇಕಾದ್ರೆ ಶಾಸಕರು ಪಾಕಿಸ್ತಾನಕ್ಕೆ ಹೋಗಲಿ: ಹಿಟ್ನಾಳ್‍ಗೆ ಮುನವಳ್ಳಿ ತಿರುಗೇಟು

    ಸತ್ತ ಉಗ್ರರ ಲೆಕ್ಕ ಬೇಕಾದ್ರೆ ಶಾಸಕರು ಪಾಕಿಸ್ತಾನಕ್ಕೆ ಹೋಗಲಿ: ಹಿಟ್ನಾಳ್‍ಗೆ ಮುನವಳ್ಳಿ ತಿರುಗೇಟು

    ಕೊಪ್ಪಳ: ಭಾರತೀಯ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್‍ನಲ್ಲಿ ಸಾವನ್ನಪ್ಪಿದ ಉಗ್ರರ ಲೆಕ್ಕ ಕೇಳುವ ಶಾಸಕರು ಪಾಕಿಸ್ತಾನಕ್ಕೆ ಹೋಗಲಿ ಎಂದು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರು, ರಾಘವೇಂದ್ರ ಹಿಟ್ನಾಳ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿದ ಶಾಸಕರು, ರಾಘವೇಂದ್ರ ಹಿಟ್ನಾಳ್ ಅವರಿಗೆ ಅನುಮಾನವಿದ್ದರೆ ನೇರವಾಗಿ ಪಾಕಿಸ್ತಾನಕ್ಕೆ ಹೋಗಿ ನೋಡಿ ಬರಲಿ. ಅಲ್ಲಿನ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡು ಬರಲಿ. ಈ ನಿಟ್ಟಿನಲ್ಲಿ ರಾಘವೇಂದ್ರ ಹಿಟ್ನಾಳ್ ಅವರು ಆದಷ್ಟು ಬೇಗ ಪಾಕಿಸ್ತಾನಕ್ಕೆ ಹೋಗಿ ಸಾಕ್ಷಿಗಳನ್ನು ತರಲಿ ಎಂದು ಕಿಡಿಕಾರಿದರು. ಇದನ್ನು ಓದಿ: ಬಾಲಕೋಟ್ ಉಗ್ರರ ಕ್ಯಾಂಪ್‍ನಿಂದ ಸಾಗಿಸಲಾಗಿತ್ತು 35 ಶವ: ಪ್ರತ್ಯಕ್ಷದರ್ಶಿಗಳಿಂದ ಬಯಲಾಯ್ತು ಪಾಕ್ ಬಣ್ಣ

    ಭಾರತೀಯ ಸೇನೆಯ ವಿಚಾರದಲ್ಲಿ ರಾಘವೇಂದ್ರ ಹಿಟ್ನಾಳ್ ಸಣ್ಣತನ ತೋರಿದ್ದಾರೆ. 12 ನಿಮಿಷದಲ್ಲಿ ಯದ್ಧ ಮಾಡೋದಕ್ಕೆ ಸಾಧ್ಯವೇ ಎಂದು ಪ್ರಶ್ನಿಸುವ ಮೂಲಕ ಸೈನಿಕರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆಯನ್ನ ನಾವು ಖಂಡಿಸುತ್ತೇವೆ ಎಂದು ಗುಡುಗಿದರು. ಇದನ್ನು ಓದಿ: ಏರ್ ಸ್ಟ್ರೈಕ್ ಸಾಕ್ಷಿಯನ್ನ ಯಾರೂ ಕೇಳಿಲ್ಲ: ಎಂ.ಬಿ.ಪಾಟೀಲ್

    ಪಾಕಿಸ್ತಾನದ ನೆಲೆಯಲ್ಲಿರುವ ಉಗ್ರರನ್ನು ಸೆದೆಬಡಿಯಲು ಭಾರತೀಯ ವಾಯು ಪಡೆ ಏರ್ ಸ್ಟ್ರೈಕ್ ನಡೆಸಿದೆ. ಇದನ್ನು ಬಿಟ್ಟರೆ ಬೇರೆ ಯಾವ ಉದ್ದೇಶವೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಲಿಲ್ಲ. ಈ ಮೂಲಕ ಪುಲ್ವಾಮಾ ದಾಳಿಯ ಪ್ರತಿಕಾರವನ್ನು ತೀರಿಸಿಕೊಂಡಿದ್ದಾರೆ ಎಂದು ತಿಳಿದರು.

    https://youtu.be/oseIZ5XYm4o

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv