Tag: ರಾಜಣ್ಣ

  • ಶಾಸಕರಿಗೆ ಡಿನ್ನರ್‌ – ಡಿಕೆಶಿ ಜೊತೆ ಮೂವರು ಸಚಿವರು ಮುನಿಸು?

    ಶಾಸಕರಿಗೆ ಡಿನ್ನರ್‌ – ಡಿಕೆಶಿ ಜೊತೆ ಮೂವರು ಸಚಿವರು ಮುನಿಸು?

    ಬೆಂಗಳೂರು: ಡಿಕೆ ಶಿವಕುಮಾರ್‌ (DK Shivakumar) ಜೊತೆ ಮೂವರು ಸಚಿವರು ಮುನಿಸು ಮುಂದುರಿಸಿದ್ದಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಡಿಕೆಶಿ ಆಯೋಜಿಸಿದ್ದ ಭೋಜನ ಕೂಟದಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.

    ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ (KPCC) ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಹೋಟೆಲಿನಲ್ಲಿ ಗುರುವಾರ ರಾತ್ರಿ ಭೋಜನ ಕೂಟ (Dinner) ಆಯೋಜಿಸಿದ್ದರು.

    ಈ ಡಿನ್ನರ್‌ಗೆ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದರು. ಆದರೆ ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿ ಪವರ್‌ಫುಲ್‌ ಮಂತ್ರಿಗಳಾಗಿರುವ ಮೂವರು ಈ ಸಭೆಗೆ ಗೈರಾಗಿದ್ದರು. ಇದನ್ನೂ ಓದಿ: ಗ್ಯಾರಂಟಿಗಳಿಗೆ SCSP – TSP ಹಣ ಬಳಕೆ – ದಲಿತರ ಎಷ್ಟು ಕೋಟಿ ಹಣ ಬಳಕೆ? ಇಲ್ಲಿದೆ ಲೆಕ್ಕ..

     

    ಡಿಕೆಶಿ ಜೊತೆ ದೊಡ್ಡ ಮಟ್ಟದ ಬಂಡಾಯದ ಬಾವುಟ ಹಾರಿಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್‌ನಲ್ಲಿ ಭಾಗಿಯಾಗಿದ್ದರು. ಸತೀಶ್ ಜಾರಕಿಹೋಳಿ ಜೊತೆ ಡಿಕೆಶಿ ವಿರುದ್ದ ಬಂಡಾಯ ಸಾರಿದ್ದ ಗೃಹ ಸಚಿವ ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಸಹಕಾರಿ ಸಚಿವ ಕೆಎನ್‌ ರಾಜಣ್ಣ ಆಗಮಿಸರಲಿಲ್ಲ.  ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಮಹೀಂದ್ರಾ ಥಾರ್

    ಈ ಮೂಲಕ ಭೋಜನ ಕೂಟದಲ್ಲೂ ಡಿಕೆಶಿಯಿಂದ ಮೂವರು ಸಚಿವರು ಅಂತರ ಕಾಯ್ದುಕೊಂಡಿದ್ದಾರೆ. ಕಳೆದ ವಾರ ಡಿಕೆ ಶಿವಕುಮಾರ್‌ ಅವರು ಕೆಎನ್‌ ರಾಜಣ್ಣ ಅವರ ಭೇಟಿಗಾಗಿ ಕಚೇರಿಗೆ ಬಂದಿದ್ದರು. ಆದರೆ ಡಿಕೆಶಿ ಬರುತ್ತಿರುವ ವಿಷಯ ತಿಳಿದಿದ್ದರೂ ರಾಜಣ್ಣ ಅವರು ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಕಚೇರಿಯಿಂದ ಬೇಗನೇ ಹೊರ ನಡೆದಿದ್ದರು.

     

  • ಸಿದ್ದರಾಮಯ್ಯನವರನ್ನು ಪದಚ್ಯುತಿ ಮಾಡ್ತೀವಿ, ಇಳಿಸ್ತೀವಿ ಅಂದ್ರೆ ನಡೆಯಲ್ಲ: ರಾಜಣ್ಣ ಗುಡುಗು

    ಸಿದ್ದರಾಮಯ್ಯನವರನ್ನು ಪದಚ್ಯುತಿ ಮಾಡ್ತೀವಿ, ಇಳಿಸ್ತೀವಿ ಅಂದ್ರೆ ನಡೆಯಲ್ಲ: ರಾಜಣ್ಣ ಗುಡುಗು

    ಬೆಂಗಳೂರು: ಸಿದ್ದರಾಮಯ್ಯನವರನ್ನು ಪದಚ್ಯುತಿ ಮಾಡುತ್ತೇವೆ, ಇಳಿಸುತ್ತೇವೆ ಎಂದರೆ ಅದು ನಡೆಯುವುದಿಲ್ಲ ಎಂದು ಸಹಕಾರ ಸಚಿವ ರಾಜಣ್ಣ ಗುಡುಗಿದ್ದಾರೆ.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜಾರಾಗಲು ಯಾರಾದರು ಅವರ ಆಸ್ತಿ ಬರೆಸಿಕೊಂಡಿದ್ದಾರೆಯೇ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರಶ್ನಿಸಿದ ಬೆನ್ನಲ್ಲೇ ಇಂದು ಪಬ್ಲಿಕ್‌ ಟಿವಿ ಅವರನ್ನು ಸಂದರ್ಶಿಸಿದೆ.

    ಈ ಸಂದರ್ಶನದಲ್ಲಿ ರಾಜಣ್ಣ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ದಲಿತ ನಾಯಕರ ಸಭೆ ರದ್ದಾಗಿಲ್ಲ ಅದು ಮುಂದೂಡಿಕೆಯಾಗಿದೆ ಅಷ್ಟೇ. ಮುಂದೆ ನಾವು ಸಭೆಯನ್ನು ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ

     

    ಸುರ್ಜೆವಾಲ ಅವರ ಸೂಚನೆ ಮೇರೆಗೆ ಪರಮೇಶ್ವರ್‌ ಸಭೆಯನ್ನು ಮುಂದೂಡಿದ್ದಾರೆ. ಈ ಹಿಂದೆ ಸಿಎಂ ಜೊತೆ ಊಟಕ್ಕೆ ಸೇರಿದ್ದರಿಂದ ಮಾಧ್ಯಮಗಳಲ್ಲಿ ಬೇರೆ ಬೇರೆ ವಿಶ್ಲೇಷಣೆ ಬಂತು. ಅದಕ್ಕೆ ನೀವು ಪ್ರತ್ಯೇಕ ಸಭೆ ಸೇರುವುದು ಬೇಡ ಎಂದಿದ್ದಾರೆ ಎಂದು ಹೇಳಿದರು.

    ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಸಿಎಂ, ಡಿಕೆಶಿ ಒಬ್ಬರೇ ಡಿಸಿಎಂ ಆಗಿರುತ್ತಾರೆ ಎಂದರು. ಪಾರ್ಲಿಮೆಂಟ್ ಚುನಾವಣೆವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷರು ಆಗಿ ಮುಂದುವರಿಯುತ್ತಾರೆ ಅಂದಿದ್ದರು. ಅದಕ್ಕೆ ನಾನು ಹೈ ಕಮಾಂಡ್ ನಾಯಕರ ಹೇಳಿಕೆ‌ಯನ್ನ ಹೇಳುತ್ತಿದ್ದೇನೆ. ಪಾರ್ಲಿಮೆಂಟ್ ಚುನಾವಣೆವರೆಗೆ ಅಧ್ಯಕ್ಷರು ಅಂತ ಹೇಳಿದ್ದು ನನಗೆ ನೆನಪಿದೆ ಎಂದರು.

    ಸಿಎಂ ಬದಲಾವಣೆ, ಪವರ್ ಶೇರಿಂಗ್ ವಿಚಾರ ಎಲ್ಲಾ ಕಾಂಗ್ರೆಸ್ ಹೈ ಕಮಾಂಡ್‌ಗೆ ಬಿಟ್ಟಿದ್ದು. 5 ವರ್ಷದ ಅವಧಿಗೆ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರಲ್ಲ ಎಂದು ತಿಳಿಸಿದರು.

     

  • ಲೋಕಸಭೆ ಗೆಲುವಿಗೆ 3 ಡಿಸಿಎಂ ಹುದ್ದೆ ಸೃಷ್ಟಿ ಅಗತ್ಯ – ಮತ್ತೆ ಸಂಚಲನ ಮೂಡಿಸಿದ ರಾಜಣ್ಣ ಮಾತು

    ಲೋಕಸಭೆ ಗೆಲುವಿಗೆ 3 ಡಿಸಿಎಂ ಹುದ್ದೆ ಸೃಷ್ಟಿ ಅಗತ್ಯ – ಮತ್ತೆ ಸಂಚಲನ ಮೂಡಿಸಿದ ರಾಜಣ್ಣ ಮಾತು

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಸಂಘರ್ಷ ತೀವ್ರಗೊಂಡಿದೆ. ಮೂರು ಡಿಸಿಎಂ ಹುದ್ದೆ (DCM Post) ಸೃಷ್ಟಿಸಬೇಕು ಎಂಬ ಸಿಎಂ ಬಣದ ಪ್ರತಿಪಾದನೆ ಪಕ್ಷದೊಳಗೆ ಕಿಚ್ಚು ಹಚ್ಚಿದೆ. ಆದರೆ ಇದ್ಯಾವುದಕ್ಕೂ ಸಿದ್ದರಾಮಯ್ಯ (Siddaramaiah) ಬಣದ ಸಚಿವರು ಸೊಪ್ಪು ಹಾಕುತ್ತಿಲ್ಲ. ಬದಲಾಗಿ ಈ ವಿವಾದವನ್ನು ಇನ್ನಷ್ಟು ತೀವ್ರಗೊಳಿಸಲು ಯತ್ನಿಸುತ್ತಿದ್ದಾರೆ.

    ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಮತ್ತೊಮ್ಮೆ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ (Lok Sabaha Election) ಹೆಚ್ಚು ಸ್ಥಾನ ಗೆಲ್ಲಬೇಕು ಅಂದ್ರೆ ಮೂರು ಡಿಸಿಎಂ ಹುದ್ದೆ ಸೃಷ್ಟಿ ಅತ್ಯಗತ್ಯ. ಒಂದೊಮ್ಮೆ ಕಡಿಮೆ ಸೀಟ್ ಗೆದ್ದರೆ ರಾಜ್ಯದಲ್ಲಿ ಸರ್ಕಾರವೇ ವಿಸರ್ಜನೆ ಆಗಬಹುದು ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಸಂವಿಧಾನ ಪೀಠಿಕೆಯಲ್ಲಿ ಸಮಾಜವಾದಿ, ಜಾತ್ಯಾತೀತ ಪದಗಳೇ ಮಾಯ – ಕೇಂದ್ರ ಹಂಚಿದ ಪ್ರತಿಗಳು ಸೃಷ್ಟಿಸಿವೆ ಸಂಚಲನ

    ನನ್ನ ಹೇಳಿಕೆ ಹಿಂದೆ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಮೂರು ಡಿಸಿಎಂ ಸೃಷ್ಟಿಸಿದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಾಮುಖ್ಯತೆಯೂ ಕಡಿಮೆ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸದುದ್ದೇಶದಿಂದ ಈ ಸೂತ್ರ ಮುಂದಿಟ್ಟಿದ್ದೇನೆ ಅಷ್ಟೇ ಎಂದು ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೆಎನ್ ರಾಜಣ್ಣ ಅವರ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ.

    ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಕೆಎನ್ ರಾಜಣ್ಣ ಬೇಡಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಎಚ್ಚರಿಕೆಯ ಪ್ರತಿಕ್ರಿಯೆ ನೀಡತೊಡಗಿದ್ದಾರೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವರಾದ ಕೆಹೆಚ್ ಮುನಿಯಪ್ಪ, ಸಂತೋಷ್ ಲಾಡ್ ಜಾರಿಕೊಂಡಿದ್ದಾರೆ.

     

    ರಾಜಣ್ಣ ಹೇಳಿಕೆಯನ್ನು ಬಿಜೆಪಿ (BJP) ಅಸ್ತ್ರ ಮಾಡಿಕೊಳ್ಳಲು ನೋಡಿದೆ. ರಾಜಣ್ಣ ಮೂಲಕ ಈ ಅಸ್ತ್ರವನ್ನು ಅತೀಂದ್ರ ಶಕ್ತಿಗಳು ಪ್ರಯೋಗಿಸಿವೆ. ಇದರ ಹಿಂದಿನ ಉದ್ದೇಶ ಡಿ.ಕೆ. ಶಿವಕುಮಾರ್ ಹಾವಳಿ ಕಡಿಮೆ ಮಾಡುವುದಾಗಿದೆ. ಮೂರು ಡಿಸಿಎಂ ಅಗತ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೂ ಈ ಮನವಿಗೆ ಹೈಕಮಾಂಡ್ ಸ್ಪಂದಿಸಿದ್ರೆ ಏನು ಗತಿ ಎಂಬ ಭಯ ಹಾಲಿ ಡಿಸಿಎಂಗೆ ಇದೆ. ಇದನ್ನು ತಪ್ಪಿಸಲು ತಮ್ಮ ಸಹೋದರನನ್ನು ದೆಹಲಿಗೆ ಕಳಿಸಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.

    ಡಿಕೆ ಶಿವಕುಮಾರ್‌ಗೆ ಅವಮಾನ ಮಾಡಲೆಂದೇ ಸಿದ್ದರಾಮಯ್ಯ ಬೆಂಬಲಿಗರು ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮಾಜಿ ಮಂತ್ರಿ ಕೆಎಸ್ ಈಶ್ವರಪ್ಪ ಆರೋಪ ಮಾಡಿದ್ದಾರೆ. ಈ ಬಗ್ಗೆ ಟೀಕೆ ಮಾಡಿದ್ದ ಸಿಟಿ ರವಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಸೋತುಸುಣ್ಣವಾಗಿರೋ ಸಿಟಿ ರವಿ ಸುಮ್ಮನಿದ್ದರೆ ಒಳ್ಳೆಯದು ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರವರ ಆಪ್ತ ಸಹಾಯಕನನ್ನು ಕೋಟ್ಯಾಂತರ ರೂಪಾಯಿಗಳ ಆರ್ಥಿಕ ಅಪರಾಧದಲ್ಲಿ ಬಂಧಿಸಿ ನಂತರ ಮುಖ್ಯಮಂತ್ರಿಗಳ ಒತ್ತಡದಿಂದ ಆರೋಪಿಯನ್ನು ಗೃಹ ಇಲಾಖೆಯ ಬಿಡುಗಡೆ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ಮಾಡಿದೆ.

    ಮುಖ್ಯಮಂತ್ರಿಗಳು ಹಾಗೂ ಪ್ರಭಾವಿ ಮಂತ್ರಿಗಳು ತಮ್ಮ ಸ್ವೇಚ್ಛಾಚಾರಕ್ಕೆ ಗೃಹ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಸಿಸಿಬಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

    ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಅವರು ಮಾತನಾಡಿ, ರಾಜ್ಯದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಸ್ಥರಿಗೆ ಒಂದು ನ್ಯಾಯ. ಭ್ರಷ್ಟರನ್ನು ಬಂಧಿಸಬೇಕಾದ ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡು ಸಾಂವಿಧಾನಿಕವಾಗಿ ಪ್ರತಿಭಟನೆ ಮಾಡುವ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಅವರು ಮಾತನಾಡಿ, ಆರೋಪಿ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಮರು ಬಂಧನ ಆಗಲೇಬೇಕು, ಇದರ ಜೊತೆಗೆ ಮುಖ್ಯಮಂತ್ರಿಗಳ ಮಗ ವಿಜಯೇಂದ್ರರವರ ವಿಚಾರಣೆಯು ಸಹ ಮಾಡಬೇಕು. ನಾವು ಶಾಂತಿಯುತವಾದ ಪ್ರತಿಭಟನೆಯ ಮೂಲಕ ಅಗ್ರಹಿಸಿದರೆ ರಾಜ್ಯ ಸರ್ಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸಿ ನಾಚಿಕೆ ಬಿಟ್ಟು ಪ್ರತಿಭಟನಾಕಾರರನ್ನು ಬಂಧಿಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ : ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಗಳ ಮೂಲಕವೂ ಸಹ ಪ್ರಭಾವಿಗಳ ಅಕ್ರಮಗಳು ಹೊರಬರಬೇಕಿದೆ. ಈ ರೀತಿಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ. ಈ ಹಗರಣವದ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಿ.ಟಿ ನಾಗಣ್ಣ ಆಗ್ರಹಿಸಿದರು.

    ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿ ಇರುವ ಸಿಸಿಬಿ (ಕೇಂದ್ರ ಅಪರಾಧ ದಳ) ಕಚೇರಿಯ ಎದುರು ನಡೆದ ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ , ಉಷಾ ಮೋಹನ್, ಪ್ರಕಾಶ್ ನಾಗರಾಜ್, ಶಿಲ್ಪ ಬಿ, ಗೋಪಿನಾಥ್ ಮೊದಲಾದ ಮುಖಂಡರ ಜೊತೆಗೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಈ ಸಂದರ್ಭದಲ್ಲಿ ಬಂಧಿಸಲಾಯಿತು.

  • ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    – ಕೋಟಿ ಡೀಲ್‍ಗೆ ನೂರು ರೂಪಾಯಿ ಕೋಡ್‍ವರ್ಡ್
    – ಪ್ರಭಾವಿಗಳ ಒತ್ತಡಕ್ಕೆ ಮಣಿದ್ರಾ ಸಿಸಿಬಿ ಪೊಲೀಸರು..?
    – ನಂಗೆ ಗೊತ್ತಿಲ್ಲದೆ ಅರೆಸ್ಟ್ ಮಾಡಿದ್ದು ಸರೀನಾ ಅಂದ್ರು ರಾಮುಲು..?

    ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹಾಗೂ ಮೂವರು ಸಚಿವರ ಹೆಸರೇಳಿಕೊಂಡು ಗುತ್ತಿಗೆ, ವರ್ಗಾವಣೆ, ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ದೋಖಾ ಮಾಡಿದರೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಚಾವ್ ಆಗಿದ್ದಾರೆ.

    ನೀರಾವರಿ ಇಲಾಖೆ ಸಬ್ ಕಾಂಟ್ರಾಕ್ಟ್ ನೀಡೋ ವಿಚಾರದಲ್ಲಿ ಮೂವರು ಗುತ್ತಿಗೆದಾರರೊಂದಿಗೆ ಸಚಿವ ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಸಿಎಂ ಪುತ್ರ ವಿಜಯೇಂದ್ರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಅಂತ ಗೊತ್ತಾಗಿದೆ. 3 ಆಡಿಯೋದಲ್ಲಿ ಸುಮಾರು 5 ಕೋಟಿವರೆಗೆ ಪ್ರಸ್ತಾಪಿಸಿದ್ದಾರೆ. ಡೀಲ್ ಓಕೆಯಾದ್ರೆ ವಿಜಯೇಂದ್ರ ಹತ್ತಿರ ಮಾತನಾಡಿ ಸಹಿ ಹಾಕಿಸಿಕೊಡೋದಾಗಿಯೂ ರಾಮುಲು ಪಿಎ ಆಶ್ವಾಸನೆ ಕೊಟ್ಟಿದ್ದಾರೆ ಅಂತ ಹೇಳಲಾಗಿದೆ.

    ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟಿದ್ಯಾಕೆ…?:
    * ಆಡಿಯೋ 1 – ಗುತ್ತಿಗೆದಾರನ ಬಳಿ 1 ಕೋಟಿ ಹಣಕ್ಕೆ ಬೇಡಿಕೆ!
    (1 ಕೋಟಿಗೆ 100 ರೂ. ಅಂತ ಕೋಡ್ ವರ್ಡ್)
    * ಆಡಿಯೋ 2 – ಗುತ್ತಿಗೆದಾರನ ಬಳಿ 3 ಕೋಟಿ ಹಣಕ್ಕೆ ಡಿಮ್ಯಾಂಡ್!
    (3 ಕೋಟಿಗೆ 300 ರೂ. ಅಂತ ಕೋಡ್ ವರ್ಡ್)
    * ಆಡಿಯೋ 3 – 75 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ!
    (75 ಲಕ್ಷಕ್ಕೆ 75 ರೂಪಾಯಿ ಅಂತ ಕೋಡ್ ವರ್ಡ್…..)

    ಪೊಲೀಸ್ ಫ್ರೆಶರ್: ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಕೇಸಲ್ಲಿ ಸಿಸಿಬಿ ಪೊಲೀಸರು ಒತ್ತಡಕ್ಕೆ ಒಳಗಾದ್ರಾ ಅನ್ನೋ ಸಂಶಯ ವ್ಯಕ್ತವಾಗಿದೆ. ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟರೂ, ಕೇವಲ ವಿಚಾರಣೆಯನ್ನಷ್ಟೇ ನಡೆಸಿ, ಬಂಧನ ಮಾಡದೆ ರಾಮುಲು ಆಪ್ತನನ್ನು ಬಿಟ್ಟು ಕಳುಹಿಸಿದ್ದಾರೆ. ಬೆಳಗ್ಗೆಯಿಂದ ಪೊಲೀಸರ ಮೇಲೆ ರಾಮುಲು ಒತ್ತಡ ಹೇರಿದ್ದರಿಂದ ಯಾವುದೇ ಎಫ್‍ಐಆರ್ ಹಾಕದೆ ಧ್ವನಿ ಮಾದರಿ ಸಂಗ್ರಹ, ವಾಟ್ಸಪ್ ಚಾಟ್, ಡೀಲ್ ಆಡಿಯೋವನ್ನು ಪಡೆದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು ಕಳುಹಿಸಿದ್ದಾರೆ. ಸಾಮಾನ್ಯರ ಮೇಲೆ ದೂರು ಬಂದಿದ್ದರೆ, ಸಿಸಿಬಿ ಪೊಲೀಸರು ಹೀಗೆಯೇ ವರ್ತಿಸುತ್ತಿದ್ದಾರಾ..? ಪ್ರಭಾವಿಗಳ ಕೇಸ್ ಅಂತ ಪೊಲೀಸರು ಬೇಕಾಬಿಟ್ಟಿಯಾಗಿ ವರ್ತಿಸಿದ್ರಾ ಅನ್ನೋ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ವಿಜಯೇಂದ್ರನೇ ಡಿ ಪ್ಯಾಕ್ಟರ್ ಸಿಎಂ, ಯಡಿಯೂರಪ್ಪ ಡಿ ಜೀರೋ ಸಿಎಂ: ಸಿದ್ದರಾಮಯ್ಯ

    ಸಿಸಿಬಿ ಪೊಲೀಸರು ಎಡವಿದ್ದೆಲ್ಲಿ….?
    ಸೈಬರ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ವೇಳೆ ಎಡವಟ್ಟು ಮಾಡಿದ್ದಾರೆ. ರಾಮುಲು ಆಪ್ತನ ವಿರುದ್ಧ ಸಿಸಿಬಿ ಹಾಕಿರೋದು 2 ಸೆಕ್ಷನ್ ಅಷ್ಟೇ. ಐಟಿ ಆಕ್ಟ್ ಸೆಕ್ಷನ್ 66 ಮತ್ತು ಐಪಿಸಿ ಸೆಕ್ಷನ್ 420 ಅಡಿ ಎಫ್‍ಐಆರ್ ದಾಖಲಿಸಲಾಗಿದೆ. ಐಟಿ ಆಕ್ಟ್ 66- ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಬಿಡುಗಡೆ ಮಾಡಲಾಗಿದೆ. ಐಪಿಸಿ 420- ವಂಚನೆ ಆರೋಪ(ವಿಜಯೇಂದ್ರ ತನಗೆ ಆಗಿರೋ ವಂಚನೆ ಉಲ್ಲೇಖಿಸಿಲ್ಲ). ಎಫ್‍ಐಆರ್ ಪ್ರಾಥಮಿಕ ಸಾರಂಶದಲ್ಲಿ ಹೆಸರಷ್ಟೇ ಬಳಕೆ ಮಾಡಲಾಗಿದೆ.

    ಇತ್ತ ತಮ್ಮ ಆಪ್ತ ಸಹಾಯಕ ರಾಜಣ್ಣ ಕೋಟಿ ಕೋಟಿ ಡೀಲ್ ಮಾಡಿ ವಂಚನೆ ಎಸಗಿದ್ದಾನೆ ಅನ್ನೋ ಆರೋಪಕ್ಕಿಂತ ವಿಜಯೇಂದ್ರ ತಮಗೆ ನೆಪಮಾತ್ರಕ್ಕೂ ಮಾಹಿತಿ ಕೊಟ್ಟಿಲ್ಲ ಅಂತ ಸಚಿವ ಶ್ರೀರಾಮುಲು ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತ ರಾಜಣ್ಣನನ್ನು ಸಿಸಿಬಿಯವರು ಎತ್ತಾಕಿಕೊಂಡು ಹೋದ್ರು ಎಂಬ ಸುದ್ದಿ ಕೇಳಿ, ಆಪ್ತರ ಬಳಿ ವಿಜಯೇಂದ್ರ ಬಗ್ಗೆ ರಾಮುಲು ಕೂಗಾಡಿದ್ರಂತೆ. ನನಗೆ ಹೇಳಿದ್ರೆ ಆಗ್ತಿರಲಿಲ್ವಾ..? ನಾನು ಸರಿ ಮಾಡ್ತಿರಲಿಲ್ವಾ..? ನನಗೆ ಕೆಟ್ಟ ಹೆಸರು ತರಬೇಕು ಅಂತಾನೆ ಹೀಗೆ ಮಾಡಿದಂತಿದೆ. ನಾನು ವಿಜಯೇಂದ್ರರನ್ನು ಭೇಟಿ ಮಾಡಲ್ಲ, ಅದೇನಾಗುತ್ತೋ ಆಗ್ಲಿ ಅಂತಾ ಗರಂ ಆಗಿದ್ರು ಎನ್ನಲಾಗಿದೆ.

    ಇಡೀ ರಾತ್ರಿ ಸಚಿವ ರಾಮುಲು ನಿದ್ದೆ ಕೂಡ ಮಾಡಿರಲಿಲ್ಲ ಅಂತಾ ತಿಳಿದುಬಂದಿದೆ. ಬೆಳಗ್ಗೆ ರಾಮುಲು ಆಡಿದ ಮಾತುಗಳಲ್ಲೂ ಇದೇ ಧ್ವನಿಸ್ತಾ ಇತ್ತು. ತಪ್ಪು ಯಾರು ಮಾಡಿದ್ರು ತಪ್ಪು.. ತನಿಖೆ ನಡೀತಿದೆ ಅಂದ್ರು. ಹಿರಿಯ ಮಂತ್ರಿಯಾಗಿ ತಮಗೆ ಈ ವಿಚಾರದಲ್ಲಿ ಅವಮಾನವಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ರು. ಇದಾದ ಕೂಡಲೇ ಸಿಎಂ ಭೇಟಿ ಮಾಡಿ ರಾಜಣ್ಣನ ಬಿಡುಗಡೆಗೆ ಒತ್ತಡ ಹೇರಿದ್ರು. ಕೆಲವೇ ಕ್ಷಣಗಳಲ್ಲಿ ಆರೋಪಿ ರಾಜಣ್ಣನನ್ನು ಸಿಸಿಬಿ ಬಿಟ್ಟು ಕಳಿಸಿದ್ದು ಕಾಕತಾಳಿಯ.

    ಟ್ವೀಟ್ ಸಮರ: ಸಿಎಂ ಪುತ್ರ ವಿಜಯೇಂದ್ರ ಹಾಗೂ ರಾಮುಲು ಆಪ್ತ ಸಹಾಯಕ ರಾಜಣ್ಣ ಮಧ್ಯೆ ಟ್ವೀಟ್ ಸಮರ ನಡೆದಿದೆ. ರಾಮುಲು ಪಿಎ ವಿರುದ್ಧ ದೂರು ನೀಡಿದ್ದನ್ನು ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ ರಾಮುಲು ಆಪ್ತ ಸಹಾಯಕ, ಆರೋಪಿ ರಾಜಣ್ಣ ನಾನು ತಪ್ಪೇ ಮಾಡಿಲ್ಲ. ಆಡಿಯೋದಲ್ಲಿರುವ ಧ್ವನಿ ನನ್ನದಲ್ಲ ಎಂದಿದ್ದಾರೆ. ವಿಜಯೇಂದ್ರ ಕರೆದು ಮಾತನಾಡಬಹುದಿತ್ತು ಅಂತಲೂ ಬೇಸರಿಸಿಕೊಂಡಿದ್ದಾರೆ. ಅಂದ ಹಾಗೇ ಬಳ್ಳಾರಿ ಮೂಲದ ರಾಜಣ್ಣ ಕಳೆದ 20 ವರ್ಷದಿಂದ ರಾಮುಲು-ಜನಾರ್ದನರೆಡ್ಡಿ ಬಲಗೈ ಬಂಟರಾಗಿದ್ದರು.

    ಸಚಿವ ರಾಮುಲು ಪಿಎ ರಾಜಣ್ಣ ವಿರುದ್ಧದ ಡೀಲ್ ಆರೋಪ, ಬಂಧನ ಬಿಡುಗಡೆ ಪ್ರಹಸನ.. ಸಹಜವಾಗಿಯೇ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರಂತೂ ಸಿಎಂ ಕುಟುಂಬದ ವಿರುದ್ಧ, ಸಚಿವ ರಾಮುಲು ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ, ರಾಮುಲು ಪಿಎ, ವಿಜಯೇಂದ್ರ ಬಗ್ಗೆ ಮಾತನಾಡೋದು ನನ್ನ ಲೆವೆಲ್ ಅಲ್ಲ ಎನ್ನುತ್ತಾ ಜಾರಿಕೊಂಡಿದ್ದಾರೆ. ಇನ್ನೂ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾಡಿರೋ ಮಾಜಿ ಸಚಿವ ರೇವಣ್ಣ, ಡಿನೋಟಿಫಿಕೇಶನ್ ಮುಖ್ಯಮಂತ್ರಿ ಯಡಿಯೂರಪ್ಪಗೆ ದೇವರೇ ಶಿಕ್ಷೆ ಕೊಡೋ ಕಾಲ ಬರುತ್ತೆ ಅಂತಾ ಶಪಿಸಿದ್ದಾರೆ.

  • ಆಪ್ತ ಅರೆಸ್ಟ್ – ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

    ಆಪ್ತ ಅರೆಸ್ಟ್ – ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

    ಬೆಂಗಳೂರು: ವಿಜಯೇಂದ್ರ ಮೇಲೆ ಸಚಿವ ಶ್ರೀರಾಮುಲು ಕೆಂಡಾಮಂಡಲವಾಗಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.

    ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ ಕಾಯ್ತಾ ಇದ್ದರು. ಈಗಾಗಲೇ ಸಾಕಷ್ಟು ಹೆಸರು ಹಾಳು ಮಾಡಿದ್ದಾರೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಅಂದ್ರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವ ಬಗ್ಗೆ ರಾಮುಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಈ ಆರೋಪದಿಂದಾಗಿ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ. ಇದರಲ್ಲಿ ನನ್ನ ತೇಜೋವಧೆಗೆ ಇಳಿದಿದ್ದಾರೆ ಅನಿಸುತ್ತಿದೆ. ನನ್ನ ಆಪ್ತ ನನ್ನ ಆಪ್ತ ಅಂತಾ ಬಹಿರಂಗವಾಗಿ ನನ್ನ ಹೆಸರು ಡ್ಯಾಮೇಜ್ ಆಗುತ್ತಿದೆ. ನಾನು ವಿಜಯೇಂದ್ರ ಮತ್ತು ಸಿಎಂ ಜೊತೆ ನಾನು ಈ ಕುರಿತು ಮಾತನಾಡುತ್ತೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಈ ಕುರಿತು ಇನ್ನೇನು ಮಾತನಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಆಪ್ತ ಬಂಧನ – ವಿಜಯೇಂದ್ರ ಮೊದಲ ಪ್ರತಿಕ್ರಿಯೆ

  • ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ಅರೆಸ್ಟ್ ಆಗಿದ್ದಾರೆ.

    ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ.

    ರಾಜಣ್ಣ 8 ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 20ಕ್ಕೂ ಹೆಚ್ಚು ಆಡಿಯೋ ವಶಕ್ಕೆ ಪಡೆದಿದ್ದಾರೆ. ಪ್ರತಿಯೊಂದು ಆಡಿಯೋದಲ್ಲಿ ಸಿಎಂ ಹೆಸರು ಉಲ್ಲೇಖ ಮಾಡಿರೋದು ಪತ್ತೆಯಾಗಿದೆ. ನಿನ್ನೆಯಿಂದ ಆರೋಪಿಯನ್ನು ಟ್ರೇಸ್ ಮಾಡ್ತಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

    ಇತ್ತ ರಾಮುಲು ಬೆಂಬಲಿಗರು ಕಿಡ್ನಾಪ್ ಅಂತ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ: ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

  • ಜೆಡಿಎಸ್ ತೊರೆಯುವ ಸುಳಿವು ನೀಡಿದ ಗುಬ್ಬಿ ಶಾಸಕ ಶ್ರೀನಿವಾಸ್

    ಜೆಡಿಎಸ್ ತೊರೆಯುವ ಸುಳಿವು ನೀಡಿದ ಗುಬ್ಬಿ ಶಾಸಕ ಶ್ರೀನಿವಾಸ್

    – ತೆನೆ ‘ಹೊರೆ’ ಇಳಿಸಿ ‘ಕೈ’ ಹಿಡಿತಾರಾ?

    ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ತೆನೆ ಹೊರೆಯನ್ನ ಇಳಿಸುವ ಸುಳಿವು ನೀಡಿದ್ದಾರೆ. ಒಂದು ಜೆಡಿಎಸ್ ಮುಖಂಡರು ಬಿಜೆಪಿ ಜೊತೆಗೆ ಹೋದ್ರೆ ನೂರಕ್ಕೆ ನೂರರಷ್ಟು ಜನತಾದಳದಲ್ಲಿರಲ್ಲ ಎಂದು ಹೇಳಿದ್ದಾರೆ.

    ನಾನು ಅಧಿಕಾರದ ಹಿಂದೆ ಹೋಗಿದ್ರೆ ತುಮಕೂರು ಜಿಲ್ಲೆಯ ಉಸ್ತುವಾರಿ ಆಗಿರುತ್ತಿದ್ದೆ. ನಾನು ವಾಮ ಮಾರ್ಗದಲ್ಲಿ ರಾಜಕಾರಣ ಮಾಡುವ ವ್ಯಕ್ತಿಯಲ್ಲ. ಜೆಡಿಎಸ್ ನಲ್ಲಿಯ ಕೆಲವರು ಬಿಜೆಪಿ ಜೊತೆ ಹೋಗುವ ಬಗ್ಗೆ ಮಾತನಾಡಿದ್ರೆ, ಇನ್ನು ಕೆಲವರು ಬೇಡ ಅಂತಿದ್ದಾರೆ. ಕುಮಾರಸ್ವಾಮಿ ಬಿಜೆಪಿ ಹೋಗುವ ನಿರ್ಧಾರವನ್ನು ನಮ್ಮದೇ ಪಕ್ಷದ ಕೆಲ ಶಾಸಕರು ವಿರೋಧ ಮಾಡುತ್ತಾರೆ. ಒಂದು ವೇಳೆ ನಾನು ಪಕ್ಷ ತೊರೆದ್ರೆ ಕುಮಾರಸ್ವಾಮಿ ಅವರು ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿ ಜೊತೆಗಿನ ಸ್ನೇಹದ ಬಗ್ಗೆ ಕೆಲ ಶಾಸಕರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಜಣ್ಣ ಭೇಟಿಗೆ ಪ್ರತಿಕ್ರಿಯಿಸಿದ ಶಾಸಕರು, ಅವರು ಹಿರಿಯ ಮುಖಂಡರು. ರಾಜಣ್ಣ ಜೊತೆಗೆ ತುಂಬಾ ದಿನಗಳಿಂದ ಒಡನಾಟವಿದ್ದು, ಹಾಗಾಗಿ ಅವರ ಮನೆಗೆ ಬಂದಿದ್ದೇನೆ. ಕಾಂಗ್ರೆಸ್ ನಾಯಕರು ಯಾರು ನನ್ನನ್ನು ಸಂಪರ್ಕಿಸಿಲ್ಲ. ಸದ್ಯಕ್ಕೆ ನಾನು ಜೆಡಿಎಸ್ ಶಾಸಕನಾಗಿದ್ದು, ಪಕ್ಷ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

    ನನಗೆ ರಾಜಕೀಯ ಬೇಸರವಾಗಿದ್ದು, ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಅಸಮಾಧಾನ ಇದೆ. ಪ್ರಸ್ತುತ ರಾಜಕೀಯ ವ್ಯವಸ್ಥೆ ಅಸಹ್ಯಪಡುವಂತಿದ್ದು, ಹೀಗಾಗಿ ಎಲ್ಲೂ ಹೋಗದೇ ತೋಟದಲ್ಲಿದ್ದೇನೆ. ಬಿಜೆಪಿ ಜೊತೆಗಿನ ಸಖ್ಯ ಬಗ್ಗೆ ನೀವು ಕುಮಾರಸ್ವಾಮಿ ಅವರನ್ನ ಕೇಳಬೇಕು. ನಾನು ಜೆಡಿಎಸ್ ಶಾಸಕ, ಇಲ್ಲಿಯೇ ಇದ್ದೇನೆ. ಕುಮಾರಸ್ವಾಮಿ ಬಿಜೆಪಿ ಜೊತೆ ಹೋದ್ರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯನವರಿಗೆ ಈಗ ಜ್ಞಾನೋದಯವಾದಂತಿದೆ. ಸಿದ್ದರಾಮಯ್ಯರನ್ನ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಅಕ್ಷರಶಃ ಸತ್ಯ, ಅದೊಂದೇ ಕ್ಷೇತ್ರವಲ್ಲ ಸುಮಾರು ಕ್ಷೇತ್ರಗಳಲ್ಲಿ ಬಿಜೆಪಿ ನಾವು ಒಡಂಬಡಿಕೆ ಮಾಡಿಕೊಂಡು ಚುನಾವಣೆಗೆ ಹೋಗಿದ್ದೀವಿ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಇದರಲ್ಲಿ ಹೊಸದೇನಿದೆ ಎಂದು ಎಸ್.ಆರ್.ಶ್ರೀನಿವಾಸ್ ಪ್ರಶ್ನೆ ಮಾಡಿದ್ದಾರೆ.

  • ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ವಿರುದ್ಧ ಸೇಡು?

    ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ವಿರುದ್ಧ ಸೇಡು?

    ತುಮಕೂರು: ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅನ್ನು ಸರ್ಕಾರ ಸೂಪರ್ ಸೀಡ್ ಮಾಡಿ ಆದೇಶ ಹೊರಡಿಸಿದೆ. ಸೂಪರ್ ಸೀಡ್ ಆದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಸರ್ಕಾರದಿಂದ ಒಂದು ವರ್ಷ ಅವಧಿಗಾಗಿ ಬ್ಯಾಂಕಿನ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೂಪರ್ ಸೀಡ್ ಮಾಡಿರುವುದನ್ನು ಅಧಿಕೃತವಾಗಿ ವಾರ್ತಾ ಇಲಾಖೆ ತಿಳಿಸಿದೆ.

    2003 ರಿಂದ ಮಾಜಿ ಶಾಸಕ ರಾಜಣ್ಣ ಸತತ 5 ವರ್ಷಗಳ ಡಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ ಪ್ರಸಾದ್ ಉಪಾಧ್ಯಕ್ಷರಾಗಿದ್ದರೂ ರಾಜಣ್ಣ ಅವರು ಬ್ಯಾಂಕಿನಲ್ಲಿ ಹಿಡಿತ ಹೊಂದಿದ್ದರು. ಡಿಸಿಸಿ ಬ್ಯಾಂಕ್ ಈ ರೀತಿ ಸೂಪರ್ ಸೀಡ್ ಆಗುವುದು ಇದೇ ಮೊದಲಲ್ಲ. 2004ರಲ್ಲೂ ಸೂಪರ್ ಸೀಡ್ ಆಗಿತ್ತು.

    ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದರು. ಕಾಂಗ್ರೆಸ್ ಉಳಿಯಬೇಕಾದರೆ ಜೆಡಿಎಸ್‍ನಿಂದ ಹೊರ ಬರಬೇಕು ಎಂದು ಹೇಳಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋಲಲು ರಾಜಣ್ಣ ನೀಡಿದ ಹೇಳಿಕೆಗಳು ಕಾರಣ ಎನ್ನುವ ವಿಚಾರ ಚರ್ಚೆಯಾಗಿತ್ತು. ಅಷ್ಟೇ ಅಲ್ಲದೇ ಪರಮೇಶ್ವರ್ ವಿರುದ್ಧವೂ ರಾಜಣ್ಣ ಹೇಳಿಕೆಗಳನ್ನು ನೀಡುತ್ತಿದ್ದರು. ಹೀಗಾಗಿ ಸರ್ಕಾರ ಸೂಪರ್ ಸೀಡ್ ಮಾಡಿರಬಹುದಾ ಎನ್ನುವ ಪ್ರಶ್ನೆ ಎದ್ದಿದೆ.

    ವಿಶೇಷ ಏನೆಂದರೆ ಶನಿವಾರ ಬೆಳಗ್ಗೆ ರಾಜಣ್ಣ ಸುದ್ದಿಗೋಷ್ಠಿ ನಡೆಸಿ ಸಿಎಂ, ದೇವೇಗೌಡರ ವಿರುದ್ಧ ಗುಡುಗಿದ್ದಾರೆ. ಆದರೆ ಸಂಜೆ 5 ಗಂಟೆಯ ವೇಳೆಗೆ ಪೊಲೀಸರು ಭದ್ರತೆಗಾಗಿ ಡಿಸಿಸಿ ಬ್ಯಾಂಕಿಗೆ ನಿಯೋಜನೆ ಗೊಂಡಿದ್ದರು.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಜಣ್ಣ, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ನಾವು ನೆಲಕಚ್ಚಿದ್ದೇವೆ. ಹೀಗಿರುವಾಗ ಸಿಎಂ ಅವರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ ಎಂದು ಹೇಳಿ ಕೈ ನಾಯಕರ ವಿರುದ್ಧವೇ ಕಿಡಿಕಾರಿದ್ದರು.

    ಶಾಸನ ಸಭೆಯಲ್ಲಿ ಮಾತನಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಈಗ ಶಾಸಕರು ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದ್ದರು.

    1989ರಲ್ಲಿ 20 ಜನ ಶಾಸಕರ ರಾಜೀನಾಮೆ ಕೊಡಿಸಿ ಎಚ್.ಡಿ.ದೇವೇಗೌಡ ಅವರು ಎಸ್.ಆರ್. ಬೊಮ್ಮಯಿಯವರ ಸರ್ಕಾರ ಉರುಳಿಸಿದರು. ಆಗ ದೇವೇಗೌಡರಿಗೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.

     

  • ಯಾರು ಇದ್ರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯ ಪರ: ರಾಜಣ್ಣ

    ಯಾರು ಇದ್ರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯ ಪರ: ರಾಜಣ್ಣ

    ತುಮಕೂರು: ನಾನು ಮಾಜಿ ಸಿಎಂ ಸಿದ್ದರಾಮಯ್ಯರ ಪರವಾಗಿರುತ್ತೇನೆ. ಅವರು ಪವರ್ ಫುಲ್ ಆಗಿದ್ದು, ಯಾರು ಇದ್ದರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯರ ಪರವಾಗಿರುತ್ತೆನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಜಿ ಸಿಎಂ ಪರ ಬ್ಯಾಂಟಿಂಗ್ ಮಾಡಿದ್ದಾರೆ.

    ಶಿರಾದಲ್ಲಿ ಪರಿಶಿಷ್ಟ ಪಂಗಡಗಳ 7.5% ಮೀಸಲಾತಿ ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ರಾಜಣ್ಣ, 24 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶವನ್ನು ನಾವು ಪ್ರತಿಭಟನೆ ಎಂದು ಪರಿಗಣಿಸುವುದಿಲ್ಲ. ಅದೊಂದು ಜನಾಂದೋಲನವಾಗಿದೆ. ಜನರ ಬೇಡಿಕೆಯನ್ನು ಈಡೇರಿಸಲು ಅಂದಿನ ದಿನ ಸಮಾವೇಶ ನಡೆಸುತ್ತೇವೆ ಎಂದರು.

    ನಾನು ಸಿದ್ದರಾಮಯ್ಯರ ಪರ, ಅವರು ಪವರ್ ಫುಲ್ ಆಗಿದ್ದಾರೆ. ಯಾರು ಇದ್ದರೆಷ್ಟು ಹೋದರೆಷ್ಟು ನಾನಂತು ಸಿದ್ದರಾಮಯ್ಯರ ಪರವಾಗಿರುತ್ತೇನೆ ಎಂದು ಸಿದ್ದರಾಮಯ್ಯ ಪರ ಕೆ.ಎನ್.ರಾಜಣ್ಣ ಬ್ಯಾಂಟಿಂಗ್ ಮಾಡಿದ್ದಾರೆ. ಕುಮಾರಸ್ವಾಮಿ ಇರಬಹುದು ಇನ್ನೊಬ್ಬರು ಬರಬಹುದು, ಹೋಗಬಹುದು. ಆದರೆ ಸರ್ಕಾರ ಇದ್ದೆ ಇರುತ್ತದೆ. ಅದೊಂದು ನಿರಂತರವಾದ ವ್ಯವಸ್ಥೆಯಾಗಿದೆ. ಯಾರು ಅಧಿಕಾರದಲ್ಲಿರುತ್ತಾರೋ ಅವರು ನ್ಯಾಯಯುತವಾದ ಬೇಡಿಕೆಗೆ ಸ್ಪಂದಿಸುತ್ತಾರೆ ಎಂದು ರಾಜಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ರಾಜಣ್ಣ ಹಲವು ಬಾರಿ ಸರ್ಕಾರ ಬೀಳಲಿದೆ ಎಂದು ಗಡುವು ಕೊಟ್ಟಿದ್ದರು. ಆದರೆ ಡಿಸಿಎಂ ಜಿ.ಪರಮೇಶ್ವರ್ ಹಾಗೂ ರಾಜಣ್ಣರ ನಡುವಿನ ಮುಸುಕಿನ ಗುದ್ದಾಟದ ಬಳಿಕ ಕೆ.ಎನ್.ರಾಜಣ್ಣ ಸಾಪ್ಟ್ ಆಗಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಯಾರಿಂದಲೂ ಬೀಳಿಸುವುದಕ್ಕೆ ಆಗಲ್ಲ, ಉಳಿಸುವುದಕ್ಕೂ ಆಗಲ್ಲ. ಇರುವುದಾದರೆ ಇರುತ್ತದೆ, ಬೀಳೋದಾದರೆ ಬೀಳತ್ತೆ ಎಂದು ರಾಜಣ್ಣ ಹೇಳಿದ್ದಾರೆ.