Tag: ರಾಜನಾಥ ಸಿಂಗ್

  • ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದರೆ, ಭಾರತದ ಸಹಾಯ ಕೇಳಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್

    ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದರೆ, ಭಾರತದ ಸಹಾಯ ಕೇಳಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್

    ಜೈಪುರ: ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದೇ ಇದ್ದರೆ, ಭಾರತದ ಸಹಾಯ ಕೇಳಿ ಎಂದು ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.

    ಚುನಾವಣಾ ನಿಮಿತ್ತ ರಾಜಸ್ಥಾನದ ರಾಜಧಾನಿಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮೂಲಕ ಪಾಕಿಸ್ತಾನ ಪ್ರಧಾನಿ ಇರ್ಮಾನ್ ಖಾನ್ ಅವರಿಗೆ ಹೇಳುವುದೇನೆಂದರೆ, ಅಫ್ಘಾನಿಸ್ತಾನದಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯಲು ಅಮೆರಿಕದ ಸಹಾಯವನ್ನು ಪಡೆದು ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ. ಆದರೂ ಭಯೋತ್ಪಾದನೆಯನ್ನು ನಿಗ್ರಹಿಸಲು ಕಷ್ಟವೆನಿಸಿದರೆ, ಭಾರತದ ಸಹಾಯವನ್ನು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಾಲ್ಕು ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ದಾಳಿಯೇ ನಡೆದಿಲ್ಲವೆಂದು ಹೇಳಲ್ಲ. ಆದರೆ ಭಾರತದಲ್ಲಿ ಯಾವುದೇ ರೀತಿಯ ದೊಡ್ಡ ಭಯೋತ್ಪಾದನಾ ದಾಳಿಗಳು ನಡೆದಿಲ್ಲ. ಪ್ರವಾಸೋದ್ಯಮದಲ್ಲಿ ಸ್ವರ್ಗವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರ್ಕಾರ ಆ ರಾಜ್ಯವನ್ನು ರಾಜಕೀಯ ಪ್ರಕ್ರಿಯೆಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೆ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ಪ್ರಾಯೋಜಕತ್ವವನ್ನು ನೀಡುತ್ತಿದೆ ಎನ್ನುವ ಸಂಶಯವೇ ಇಲ್ಲವೆಂದು ಕಿಡಿಕಾರಿದ್ದಾರೆ.

    ದೇಶದಲ್ಲಿ ಶೇ.50 ರಿಂದ ಶೇ.60 ರಷ್ಟು ನಕ್ಸಲ್ ದಾಳಿಗಳು ಕಡಿಮೆಯಾಗಿದೆ. 90 ಜಿಲ್ಲೆಗಳಲ್ಲಿ ನಡೆಯುತ್ತಿದ್ದ ನಕ್ಸಲ್ ಚಟುವಟಿಕೆ ಈಗ 8 ರಿಂದ 9 ಜಿಲ್ಲೆಗಳಲ್ಲಿ ಮಾತ್ರ ಉಳಿದಿದೆ. ಮುಂದಿನ ಮೂರರಿಂದ ಐದು ವರ್ಷಗಳಲ್ಲಿ ನಕ್ಸಲರ ಸಮಸ್ಯೆಯು ಕೂಡ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಶ್ರೀನಗರ: ಭಾತರದೊಳಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

    ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೆರನ್ ಸೆಕ್ಟರ್ ನಲ್ಲಿ ಒಳ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟ ಹಾಕುವಲ್ಲಿ ಯಶಸ್ವಿಯಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಶ್ರೀನಗರದಿಂದ 94 ಕಿಮೀ ದೂರದಲ್ಲಿರುವ ಕೆರನ್ ಸೆಕ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಾಯಗೊಂಡಿದ್ದರು. ಸ್ಥಳದಲ್ಲಿ ಸೈನಿಕರು ಪಹರೆ ನಡೆಸುತ್ತಿದ್ದ ವೇಳೆ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರು ಯೋಧರ ಗುಂಡಿಗೆ ಬಲಿಯಾಗಿದ್ದಾರೆ.

    ಸೇನಾ ಪಡೆಗಳು ಇನ್ನೂ ಸ್ಥಳದಲ್ಲಿಯೇ ಪಹರೆ ಕಾಯುತ್ತಿದ್ದು, ಅಡಗಿಕೊಂಡಿರುವ ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇಂದು ಹತರಾದ 6 ಜನ ಭಯೋತ್ಪಾದಕರನ್ನು ಒಳಗೊಂಡಂತೆ ಒಟ್ಟು 21 ಉಗ್ರರು ಹತರಾಗಿದ್ದಾರೆ.

    ಕಳೆದರೆಡು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್ ಸೇರಿದಂತೆ ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಮಂತ್ರಿ ಜಿತೇಂದ್ರ ಸಿಂಗ್ ಕುಪ್ವಾರಾ ಜಿಲ್ಲೆಗೆ ಭೇಟಿ ನೀಡಿ ಗಡಿ ಪ್ರದೇಶದ ಜನರನ್ನು ಭೇಟಿಯಾಗಿದ್ದರು.

    ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ರಂಜಾನ್ ಒಪ್ಪಂದ ಮಾಡಿಕೊಂಡರು ಭಯೋತ್ಪಾದಕರ ದಾಳಿಗಳು ಇನ್ನೂ ನಿಂತಿಲ್ಲ. ಹಾಗಾಗಿ ರಂಜಾನ್ ಸಂದರ್ಭದಲ್ಲಿ ಈ ದಾಳಿಗಳು ನಡೆದಲ್ಲಿ ಸೇನೆ ಸಮರ್ಥವಾಗಿ ಮುಕ್ತವಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಿ ಎಂದು ರಾಜನಾಥ್ ಸಿಂಗ್ ಆದೇಶಿಸಿದ್ದಾರೆ.