Tag: ರಾಜಪಥ

  • ಮೋದಿ ಕನಸಿನ ಸೆಂಟ್ರಲ್ ವಿಸ್ಟಾ ಯೋಜನೆಯಿಂದ ಉಳಿತಾಯವಾಗಲಿದೆ 1,000 ಕೋಟಿ ವಾರ್ಷಿಕ ಬಾಡಿಗೆ

    ಮೋದಿ ಕನಸಿನ ಸೆಂಟ್ರಲ್ ವಿಸ್ಟಾ ಯೋಜನೆಯಿಂದ ಉಳಿತಾಯವಾಗಲಿದೆ 1,000 ಕೋಟಿ ವಾರ್ಷಿಕ ಬಾಡಿಗೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ನೂತನ ಸಂಸತ್ ಭವನ (New Parliament Building) ಭಾನುವಾರ ಉದ್ಘಾಟನೆಗೊಳ್ಳಲು ಸಜ್ಜಾಗಿದೆ. ಮೋದಿ ಅವರ ಮಹಾತ್ವಾಕಾಂಕ್ಷೆಯ 20,000 ಕೋಟಿ ರೂ. ವೆಚ್ಚದ ಸೆಂಟ್ರಲ್ ವಿಸ್ಟಾ (Central Vista) ಯೋಜನೆಯ ಭಾಗವಾಗಿ ನೂತನ ಸಂಸತ್ ನಿರ್ಮಾಣಗೊಂಡಿದೆ.

    ಪರಿಸರವಾದಿಗಳು, ಪ್ರತಿ ಪಕ್ಷಗಳು ಸೇರಿದಂತೆ ಅನೇಕ ಕಡೆಗಳಿಂದ ಸೆಂಟ್ರಲ್ ವಿಸ್ಟಾದ ಯೋಜನೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಸೆಂಟ್ರಲ್ ವಿಸ್ಟಾ ಯೋಜನೆ ವಾರ್ಷಿಕವಾಗಿ ಸರ್ಕಾರದ 1,000 ಕೋಟಿ ರೂ.ಯಷ್ಟು ಬಾಡಿಗೆಯನ್ನು ಉಳಿಸುತ್ತದೆ ಎಂದು ಈ ಹಿಂದೆಯೇ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದರು.

    ಏನಿದು ಸೆಂಟ್ರಲ್ ವಿಸ್ಟಾ ಯೋಜನೆ?
    ಕೇಂದ್ರ ದೆಹಲಿಯಲ್ಲಿನ ವಿವಿಧ ಕಟ್ಟಡಗಳಲ್ಲಿ ನೆಲೆಸಿರುವ ಅನೇಕ ಕಚೇರಿಗಳನ್ನು ಸೆಂಟ್ರಲ್ ವಿಸ್ಟಾದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಕೈಗೆತ್ತಿಕೊಂಡ ಯೋಜನೆ ಇದಾಗಿದೆ.

    ಕೇಂದ್ರ ಸರ್ಕಾರದ ಹಲವಾರು ಕಚೇರಿಗಳು ವಿವಿಧ ಸ್ಥಳಗಳಲ್ಲಿ ಚದುರಿ ಹೋಗಿವೆ. ಈ ಕಚೇರಿಗಳಲ್ಲಿ ಹಲವು ಹೆಚ್ಚಿನ ಮೊತ್ತದ ಬಾಡಿಗೆ ಕಟ್ಟಡಗಳಲ್ಲಿವೆ. ಸೆಂಟ್ರಲ್ ವಿಸ್ಟಾ ಯೋಜನೆ ಸಂಪೂರ್ಣಗೊಂಡ ಬಳಿಕ ಈ ಎಲ್ಲಾ ಕಚೇರಿಗಳನ್ನು ಒಂದೇ ಸ್ಥಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸರ್ಕಾರದಿಂದ ವಾರ್ಷಿಕವಾಗಿ ಖರ್ಚಾಗುವ ಬರೋಬ್ಬರಿ 1,000 ಕೋಟಿ ರೂ. ಮೊತ್ತದ ಬಾಡಿಗೆಯನ್ನು ಉಳಿಸಬಹುದು ಎಂದು ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 2 ವರ್ಷ ಕಾಲ ಹುಡುಕಾಟ – ಇತಿಹಾಸದಿಂದ ಮರೆಮಾಚಲಾಗಿದ್ದ ಸೆಂಗೋಲ್ ಬೆಳಕಿಗೆ ಬಂದಿದ್ದು ಹೇಗೆ?

    ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಲ್ಲಿ ಹೊಸ ಸಂಸತ್ ಭವನ ನಿರ್ಮಾಣ, ಸಂಸತ್ತಿನ ಸದಸ್ಯರ ಕಚೇರಿಗಳು, ಸೆಂಟ್ರಲ್ ವಿಸ್ಟಾ ಅವೆನ್ಯೂವಿನ (ರಾಜಪಥ) ಹೊಸ ಮಾದರಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳಿಗೆ ಹೊಸ ನಿವಾಸಗಳ ನಿರ್ಮಾಣಗಳು ಒಳಗೊಂಡಿವೆ. ಇದಕ್ಕಾಗಿ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ ರಾಜಪಥದಲ್ಲಿರುವ ಎಲ್ಲಾ 3.5 ಕಿ.ಮೀ ವರೆಗಿನ ಕಟ್ಟಡಗಳನ್ನು ನೆಲಸಮಗೊಳಿಸಲು ನಿರ್ಧರಿಸಲಾಗಿತ್ತು.

    ಸೆಂಟ್ರಲ್ ವಿಸ್ಟಾ ಯೋಜನೆಯ ಒಟ್ಟಾರೆ ವೆಚ್ಚ 20,000 ಕೋಟಿ ರೂ. ಆಗಿದೆ. ಈ ಯೋಜನೆ 2026ರ ವೇಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

  • ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಾನು ಗಾಂಧಿವಾದಿಯಲ್ಲ, ಉಪವಾಸ ಸತ್ಯಾಗ್ರಹದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ: ಕಂಗನಾ ಮತ್ತೆ ವಿವಾದ

    ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೆ ಹೊಸದಾಗಿ ನಾಮಕರಣಗೊಂಡ ಕರ್ತವ್ಯ ಪಥವನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್  (Kangana Ranaut) ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಂಗನಾ, ‘ನಾನು ಗಾಂಧಿವಾದಿಯಲ್ಲ, ನೇತಾವಾದಿ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಅಲ್ಲದೇ, ಕೇವಲ ಉಪವಾಸ ಸತ್ಯಾಗ್ರಹದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ಮಹಾತ್ಮ ಗಾಂಧೀಜಿ ಅವರನ್ನು ಟೀಕಿಸಿದರು. ಗಾಂಧೀಜಿ (Gandhiji) ಬಗ್ಗೆ ಕಂಗನಾ ಆಡಿದ ಈ ಮಾತು ಗಾಂಧಿವಾದಿಗಳನ್ನು ಕೆರಳಿಸಿದೆ.

    ಮಾಧ್ಯಮಗಳ ಜೊತೆ ಮುಂದುವರೆದು ಮಾತನಾಡಿದ ಕಂಗನಾ, ‘ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಸಾವರ್ಕರ್ (Veer Savarkar) ಹಾಗೂ ಸುಭಾಷ್ ಚಂದ್ರ ಬೋಸ್ (Subhash Chandra Bose) ರಂತಹ ವೀರ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಇವರು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರು, ಅಧಿಕಾರಕ್ಕಾಗಿ ಅಲ್ಲ ಎಂದು ಮಾತನಾಡಿದರು. 2ನೇ ವಿಶ್ವ ಯುದ್ಧದಲ್ಲಿ ಭಾಗವಹಿಸಿ ದೇಶವನ್ನು ಹೀನಾಯ ಸ್ಥಿತಿಯಿಂದ ಮೇಲೆತ್ತಲು ನೇತಾಜಿ ತುಂಬಾ ಶ್ರಮ ಪಟ್ಟರು. ಅಂಥವರನ್ನು ನಾವು ನೆನೆಯಬೇಕು ಅಂದರು ಕಂಗನಾ. ಇದನ್ನೂ ಓದಿ:‘ಯಶೋದಾ’ ಟೀಸರ್ನಲ್ಲಿ ಸಮಂತಾ ಮತ್ತೊಂದು ಮುಖ ಅನಾವರಣ

    ಕರ್ತವ್ಯ ಪಥ ಬದಲಾವಣೆ ಕುರಿತು ಕಂಗನಾ ಮಾತನಾಡಿ, ರಾಜಪಥ (Rajpatha) ಅಂತ ಹೆಸರು ಕೇಳಿದಾಗೆಲ್ಲ ಏನೋ ಕಸಿವಿಸಿ ಆಗೋದು. ರಾಜಪಥ ಪದವೇ ಮಾದರಿ ಆದುದಲ್ಲ. ಹಾಗಾಗಿ ಕರ್ತವ್ಯದ ಪಥ ಹೆಸರು ಇಟ್ಟಿರುವುದು ಖುಷಿಯಾಗಿದೆ ಮತ್ತು ಹೆಮ್ಮೆ ತಂದಿದೆ ಅಂದರು. ಈ ರೀತಿಯಲ್ಲಿ ನಾನು ನೇರವಾಗಿ ಮಾತನಾಡಿ, ಕೆಲವರ ಕಂಗಣ್ಣಿಗೆ ಗುರಿಯಾಗಿರುವೆ. ಸತ್ಯ ನುಡಿದಾಗ ಇದೆಲ್ಲ ಸಹಜ. ನಾನು ಸತ್ಯ ನುಡಿಯುತ್ತಲೇ ಇರುವೆ ಅಂದರು.

    Live Tv
    [brid partner=56869869 player=32851 video=960834 autoplay=true]

  • ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ

    ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ

    ನವದೆಹಲಿ: ದೇಶದಲ್ಲಿರುವ ಎಲ್ಲರೂ ಒಮ್ಮೆ ಕರ್ತವ್ಯ ಪಥ ನೋಡಿ. ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ ಎಂದು ಕರ್ತವ್ಯ ಪಥ (Kartavya Path) ಉದ್ಘಾಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi)  ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಗಿದ ನಿನ್ನೆಗಳನ್ನು ಬಿಟ್ಟು, ನಾಳೆಯ ದಿನಗಳಲ್ಲಿ ಬಣ್ಣ ತುಂಬುತ್ತಿದ್ದೇವೆ. ಗುಲಾಮಿಯ ಪ್ರತೀಕವಾಗಿದ್ದ ಕಿಂಗ್ಸ್‌ವೇ ಇತಿಹಾಸ ಸೇರಿದೆ. ಇದು ಕರ್ತವ್ಯ ಪಥ ರೂಪದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ ಮೂರ್ತಿಯನ್ನು ಸ್ಥಾಪಿಸಿದೆ. ಸ್ವಾತಂತ್ರ್ಯಕ್ಕೂ ಮುನ್ನ ಬ್ರಿಟಿಷರ ಮೂರ್ತಿ ಇತ್ತು. ಅದೇ ಸ್ಥಳದಲ್ಲಿ ನೇತಾಜಿ ಮೂರ್ತಿ ಸ್ಥಾಪಿಸಲಾಗಿದೆ. ಇದೊಂದು ಐತಿಹಾಸಿಕ, ಅಭೂತಪೂರ್ವ ಕ್ಷಣ ಎಂದರು. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಬೋಸ್ ಅವರನ್ನು ಇಡೀ ವಿಶ್ವ ನಾಯಕ ಎಂದು ಒಪ್ಪಿಕೊಂಡಿತ್ತು. ಭಾರತದ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದರು. ಆಧುನಿಕ ಭಾರತ ಕಟ್ಟುವ ಕನಸು ಕಂಡಿದ್ದರು. ಸುಭಾಷ್ ಅಖಂಡ ಭಾರತದ ಮೊದಲ ನಾಯಕ. ಮೊದಲು ಅಂಡಮಾನ್ ಸ್ವಾತಂತ್ರ್ಯ ಗೊಳಿಸಿದ್ದರು. ಅಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದರು. 2019 ರಲ್ಲಿ ಗಣರಾಜ್ಯೋತ್ಸವದ ದಿನ ಅಜಾದ್ ಹಿಂದ್ ಸದಸ್ಯರಿಗೆ ಅವಕಾಶ ನೀಡಲಾಗಿತ್ತು. ಗುಲಾಮಿ ಮಾನಸಿಕತೆಯಿಂದ ಹೊರ ಬರುವುದು. ನಮ್ಮ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವ ಸಂಕಲ್ಪ ಮಾಡುವುದು ಪಂಚ ಪ್ರಾಣ ಸಂಕಲ್ಪ ಭಾಗವಾಗಿದೆ. ಇದು ಈಗಿನಿಂದ ಗುಲಾಮಿತನದಿಂದ ಹೊರ ಬರುವ ಪ್ರಯತ್ನ ಮಾಡಿಲ್ಲ. ಹಿಂದೆ ರೇಸ್ ಕೋರ್ಸ್ ರಸ್ತೆಯನ್ನು ಲೋಕ ಕಲ್ಯಾಣ ಮಾರ್ಗ್ ಎಂದು ಬದಲಾಯಿಸಲಾಯಿತು. ಇಲ್ಲಿ ಪ್ರಧಾನಿ ಮಂತ್ರಿಗಳ ನಿವಾಸ ಇದೆ. ಈ ಬದಲಾವಣೆ ಸೀಮಿತವಾಗಿಲ್ಲ. ನೀತಿಯಲ್ಲೂ ಬದಲಾವಣೆ ಶುರುವಾಗಿದೆ. ಸಾಕಷ್ಟು ಬ್ರಿಟಿಷ್ ಕಾನೂನು ಬದಲಾಯಿಸಿದೆ ಎಂದು ನುಡಿದರು.

    ಬಜೆಟ್ ಸಮಯ ಬದಲಾಯಿಸಿದೆ. ಎನ್‍ಇಪಿ ಮೂಲಕ ಶಿಕ್ಷಣ ಪದ್ದತಿ ಬದಲಿಸಿದೆ. ಇವುಗಳ ಮೂಲಕ ಗುಮಾಮಿ ಮಾನಸಿಕತೆಯಿಂದ ಹೊರ ಬರುವ ಪ್ರಯತ್ನ ಆರಂಭಿಸಿದೆ. ಕರ್ತವ್ಯ ಪಥ ಬರೀ ಇಟ್ಟಿಗೆ ರಸ್ತೆಯಲ್ಲ. ಇದು ಪ್ರೇರಣೆಯ ರಸ್ತೆಯಾಗಿದೆ. ಬೋಸ್ ಪ್ರತಿಮೆ, ರಾಷ್ಟ್ರೀಯ ಯುದ್ಧ ಸ್ಮಾರಕ ಪ್ರೇರಣೆ ನೀಡಲಿದೆ. ಇದೇ ಪ್ರೇರಣೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ರಾಜಪಥ್ ಬ್ರಿಟಿಷ್‍ರಿಗಾಗಿತ್ತು, ಅದು ಗುಲಾಮಿ ಪ್ರತೀಕವಾಗಿತ್ತು. ಈಗ ವಾಸ್ತುಶಿಲ್ಪ ಅದರ ಆತ್ಮವೂ ಬದಲಾಗಿದೆ. ಈ ಹಾದಿಯಲ್ಲಿ ಬರುವ ಜನ ನಾಯಕರಿಗೆ ತಮ್ಮ ಕರ್ತವ್ಯ ನೆನಪಿಸುತ್ತದೆ. ರಾಷ್ಟ್ರವೇ ಮೊದಲು ಎನ್ನುವ ಭಾವನೆ ರಕ್ತ ಕಣ ಕಣದಲ್ಲೂ ಮೂಡುವಂತೆ ಪ್ರೇರಣೆ ನೀಡಲಿದೆ. ಈ ಕಾಮಗಾರಿಯಲ್ಲಿ ಕೆಲಸ ಮಾಡಿದ ಕೆಲಸಗಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಅವರು ದೇಶದ ಅಭಿವೃದ್ಧಿ ಕೆಲಸದಲ್ಲಿ ಭಾಗವಾಗಿದ್ದಾರೆ ಎಂದರು. ಇದನ್ನೂ ಓದಿ: ಮೋದಿ ಹತ್ಯೆ ಸಂಚು ಪ್ರಕರಣದ ಬೆನ್ನತ್ತಿದ NIA

    ಜನವರಿ 26 ರಂದು ಅವರು ಮತ್ತು ಅವರ ಕುಟುಂಬ ನನ್ನ ಅತಿಥಿಯಾಗಿರಲಿದ್ದಾರೆ. ಕರ್ತವ್ಯ ಪಥ ಮೇಲೆ ದೇಶದ ದೃಷ್ಟಿ ಇದೆ. ದೇಶದ ಎಲ್ಲ ನಾಗರಿಕರು ಈ ಕಾರ್ಯಕ್ರಮದ ಭಾಗವಾಗಿದ್ದಾರೆ. ನಾನು ಎಲ್ಲರಿಗೂ ಸ್ವಾಗತ ಕೋರುತ್ತೇನೆ. ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿದೆ. ವಿಮಾನ ನಿಲ್ದಾಣಗಳು, ಮೆಟ್ರೊ ವಿಸ್ತರಣೆ ನಡೆಯುತ್ತಿದೆ. ಡಿಜಿಟಲ್ ಸೌಕರ್ಯಗಳ ಜೊತೆಗೆ ಸಾಂಸ್ಕೃತಿಕ ಸೌಕರ್ಯಗಳನ್ನು ಹೆಚ್ಚಿಸುವ ಪ್ರಯತ್ನ ನಡೆದಿದೆ. ಈ ಮೂಲಕ ಭಾರತದ ಸಾಂಸ್ಕೃತಿಕತೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ರಾಜಪಥ ಇನ್ನು ಕರ್ತವ್ಯ ಪಥ – ನವ ಭಾರತದಲ್ಲಿ ಗುಲಾಮಿತನದ ಸಂಕೇತಗಳಿಗೆ ಸ್ಥಾನವಿಲ್ಲ: ಬಿಜೆಪಿ

    ರಾಜಪಥ ಇನ್ನು ಕರ್ತವ್ಯ ಪಥ – ನವ ಭಾರತದಲ್ಲಿ ಗುಲಾಮಿತನದ ಸಂಕೇತಗಳಿಗೆ ಸ್ಥಾನವಿಲ್ಲ: ಬಿಜೆಪಿ

    ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಐಕಾನಿಕ್ ರಸ್ತೆ ರಾಜಪಥ್, (Rajpath) ಸದ್ಯ ಕರ್ತವ್ಯ ಪಥವಾಗಿ (Kartavya Path) ಬದಲಾಗಿರುವ ಹೊಸ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ. ಈ ಸಿದ್ಧತೆಯ ನಡುವೆ ಇನ್ನುಮುಂದೆ ನವ ಭಾರತದಲ್ಲಿ ಗುಲಾಮಿತನದ ಸಂಕೇತಗಳಿಗೆ ಸ್ಥಾನವಿಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.

    ರಾಜಪಥ ಇನ್ನು ಕರ್ತವ್ಯ ಪಥ. ನವ ಭಾರತದಲ್ಲಿ ಗುಲಾಮಿತನದ ಸಂಕೇತಗಳಿಗೆ ಸ್ಥಾನವಿಲ್ಲವೆಂದು ಫೋಟೋ ಹಂಚಿಕೊಂಡು ಬಿಜೆಪಿ (BJP) ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ರಾಜಪಥ್‍ನಿಂದ ಕರ್ತವ್ಯ ಪಥವಾಗಿ ಬದಲಾದ ದೆಹಲಿ ಐಕಾನಿಕ್ ರಸ್ತೆ ಹೇಗೆ ಅಭಿವೃದ್ಧಿಯಾಗಿದೆ ಗೊತ್ತಾ?

    ಇಂದು ಸಂಜೆ ಏಳು ಗಂಟೆಗೆ ರಾಜಪಥ್, ಕರ್ತವ್ಯ ಪಥವಾಗಿ ಬದಲಾಗಿರುವ ಹೊಸ ರಸ್ತೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅವರು ಅನಾವರಣಗೊಳಿಸಲಿದ್ದಾರೆ. ಸ್ವತಂತ್ರ ಪೂರ್ವಕ್ಕೂ ಮುನ್ನ ಕಿಂಗ್ಸ್‌ವೇ ಆಗಿದ್ದ ಈ ರಸ್ತೆಯನ್ನು ಸ್ವಾತಂತ್ರ್ಯದ ಬಳಿಕ ರಾಜಪಥ್ ಎಂದು ನಾಮಕರಣ ಮಾಡಲಾಗಿತ್ತು. ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಈ ಪ್ರದೇಶವನ್ನು ಅಭಿವೃದ್ಧಿಗೊಳಿಸಿ ಅದಕ್ಕೆ ಕರ್ತವ್ಯ ಪಥ್ ಎಂದು ನರೇಂದ್ರ ಮೋದಿ ಸರ್ಕಾರ ಮರು ನಾಮಕರಣ ಮಾಡಿದೆ. ಇದನ್ನೂ ಓದಿ: ಕಿಂಗ್ಸ್‌ವೇಯಿಂದ ರಾಜ್‌ಪಥ್‌; ರಾಜ್‌ಪಥ್‌‌ನಿಂದ ಕರ್ತವ್ಯ ಪಥ್ – ಇಲ್ಲಿದೆ ದೆಹಲಿಯ ಐಕಾನಿಕ್ ರಸ್ತೆಯ ಇತಿಹಾಸ

    ಈ ಹಿಂದೆ ಸ್ವಾತಂತ್ರ್ಯ ದಿನಾಚರಣೆ ದಿನದಂದು ನರೇಂದ್ರ ಮೋದಿ ಹೇಳಿದಂತೆ ಅಮೃತೋತ್ಸವ ಕಾಲ ಘಟ್ಟದಲ್ಲಿ ಎರಡನೇ ಪಂಚಪ್ರಾಣದ ಭಾಗವಾಗಿ ವಸಾಹತು ಶಾಹಿ ಮನಸ್ಥಿತಿಯ ಕುರುಹುಗಳನ್ನು ತೆಗೆದು ಹಾಕುವುದು ಇದರ ಉದ್ದೇಶವೂ ಆಗಿದೆ. ಸೆಂಟ್ರಲ್ ವಿಸ್ಟಾ ಯೋಜನೆಯ ಭಾಗವಾಗಿ ಈ ಯೋಜನೆ ರೂಪಿಸಲಾಗಿದೆ. ಹಲವು ಸಮಸ್ಯೆಗಳಿದ್ದ ರಾಜಪಥ್ ರಸ್ತೆಯನ್ನು ಆಧುನಿಕರಿಸಿ ಅಭಿವೃದ್ಧಿ ಪಡಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ

    ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ

    ನವದೆಹಲಿ: ಐತಿಹಾಸಿಕ ರಾಜಪಥ ಹಾಗೂ ಸೆಂಟ್ರಲ್ ವಿಸ್ಟಾ ಹುಲ್ಲು ಹಾಸುಗಳನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಈ ಮಾರ್ಗ ರೈಸಿನಾ ಹಿಲ್‌ನಲ್ಲಿರುವ ರಾಷ್ಟ್ರಪತಿ ಭವನದಿಂದ ವಿಜಯ್ ಚೌಕ್ ಹಾಗೂ ಇಂಡಿಯಾ ಗೇಟ್ ಮೂಲಕ ದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದವರೆಗೆ ಸಾಗುತ್ತದೆ. ಇದೀಗ ಈ ಹಾದಿಯನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಕೇಂದ್ರ ಪ್ರಕಟಿಸಿದೆ. ಇದನ್ನೂ ಓದಿ: ಸಮವಸ್ತ್ರ ನಿರ್ಧಾರ ಶಿಕ್ಷಣ ಹಕ್ಕು ಉಲ್ಲಂಘನೆಯಲ್ಲ – ಹಿಜಬ್ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅಭಿಪ್ರಾಯ

    ದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಅಂಶಗಳನ್ನು ಕೈಬಿಡುವ ಉದ್ದೇಶದಿಂದ ಈ ನಿರ್ಧಾರವನ್ನು ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣದಲ್ಲಿ, ಬ್ರಿಟಿಷರಿಗೆ ಸಂಬಂಧಿಸಿದ ಚಿಹ್ನೆಗಳನ್ನು ನಿರ್ಮೂಲನೆ ಮಾಡುವ ಅಂಶವನ್ನು ಒತ್ತಿ ಹೇಳಿದ್ದರು.

    ಇತ್ತೀಚೆಗೆ ಪ್ರಧಾನಿ ನಿವಾಸವಿರುವ ರಸ್ತೆಯ ಹೆಸರನ್ನು ರೇಸ್ ಕೋರ್ಸ್ ರಸ್ತೆಯಿಂದ ಲೋಕ ಕಲ್ಯಾಣ ಮಾರ್ಗ ಎಂದು ಬದಲಿಸಲಾಯಿತು. ಕಳೆದ ವಾರ ಭಾರತೀಯ ನೌಕಾಪಡೆಯ ಧ್ವಜದಲ್ಲಿ ಉಳಿದುಕೊಂಡಿದ್ದ ವಸಾಹತುಶಾಹಿ ಕುರುಹನ್ನು ತೆಗೆದು ಹಾಕಿ, ಹೊಸ ಧ್ವಜವನ್ನು ಪರಿಚಯಿಸಲಾಯಿತು. ಇದನ್ನೂ ಓದಿ: ಬಿಸಿಸಿಐ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡ ಮಾಸ್ಟರ್ ಕಾರ್ಡ್

    Live Tv
    [brid partner=56869869 player=32851 video=960834 autoplay=true]

  • ಗಣರಾಜ್ಯೋತ್ಸವ ಆಚರಣೆಗೆ ರಾಜಪಥದಲ್ಲಿ ಸಿದ್ಧತೆ

    ಗಣರಾಜ್ಯೋತ್ಸವ ಆಚರಣೆಗೆ ರಾಜಪಥದಲ್ಲಿ ಸಿದ್ಧತೆ

    ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಇಡೀ ದೇಶವೇ ಗಣರಾಜ್ಯೋತ್ಸವದ ಸಿದ್ಧತೆಯಲ್ಲಿ ತೊಡಗಿದೆ. ದೆಹಲಿಯ ರಾಜಪಥನಲ್ಲಿ ಪರೇಡ್‌ಗಾಗಿ ಸೈನಿಕರು ಪೂರ್ಣ ಉಡುಗೆಯಲ್ಲಿ ಪೂರ್ವಾಭ್ಯಾಸ ಮಾಡಿದವು. ಇನ್ನೊಂದೆಡೆ ಹೆಲಿಕಾಪ್ಟರ್‌ಗಳು ಇಂದು ದೆಹಲಿಯ ರಾಜ್‌ಪಥ್‌ನ ಮೇಲೆ ಹಾರಾಡಿದವು.

    ಪ್ರತಿ ವರ್ಷ ಪರೇಡ್ ಸ್ಥಳದಲ್ಲಿ ನಡೆಯುವ ಪೂರ್ವ ಸಿದ್ಧತೆಯನ್ನು ವೀಕ್ಷಿಸಲು ಪ್ರೇಕ್ಷಕರು ಜಮಾಯಿಸಿದ್ದರು. ಈ ದೃಶ್ಯವು ರಾಜಪಥ ಸ್ಥಳದಿಂದ ರಾಷ್ಟ್ರಪತಿ ಭವನದವೆರೆಗೂ ನೋಡಬಹುದಾಗಿತ್ತು. ನಾಲ್ಕು ಮಿಗ್-17 ಹೆಲಿಕಾಪ್ಟರ್‌ಗಳು ವೈನ್‌ಗ್ಲಾಸ್ ರಚನೆಯಲ್ಲಿ ಹಾರಾಡುತ್ತಿದ್ದವು. ಇದನ್ನು ನೋಡಲು ಜನಸಂದಣಿಯೇ ತುಂಬಿತ್ತು. ರಾಷ್ಟ್ರ ಲಾಂಛನ ಹಾಗೂ ಸೇವಾ ಚಿಹ್ನೆಗಳು ಈ ಹೆಲಿಕಾಪ್ಟರ್ ಮೇಲಿದ್ದವು.

    ಭಾರತೀಯ ಸೈನಿಕರು ಗಣರಾಜ್ಯೋತ್ಸವಕ್ಕಾಗಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಪರೇಡ್ ಮಾಡುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಈ ಬಾರಿಯ ಗಣರಾಜ್ಯೋತ್ಸವವು ಇಂದಿನಿಂದಲೇ ಪ್ರಾರಂಭಗೊಳ್ಳಲಿದೆ. ಪ್ರತಿ ವರ್ಷ ಜನವರಿ 24 ರಂದು ಪ್ರಾರಂಭಗೊಳ್ಳುತ್ತಿತ್ತು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

    ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್‌ರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

  • ರಾಜಪಥ್‍ನಲ್ಲಿ ಗಣರಾಜ್ಯೋತ್ಸವ ಪರೇಡ್‍ಗೆ ಭರ್ಜರಿ ಸಿದ್ಧತೆ

    ರಾಜಪಥ್‍ನಲ್ಲಿ ಗಣರಾಜ್ಯೋತ್ಸವ ಪರೇಡ್‍ಗೆ ಭರ್ಜರಿ ಸಿದ್ಧತೆ

    ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಒಂದೇ ವಾರ ಬಾಕಿ ಇದೆ. ದೆಹಲಿಯ ರಾಜಪಥ್‍ನಲ್ಲಿ ನಡೆಯುತ್ತಿದೆ ಪರೇಡ್ ಪೂರ್ವಾಭ್ಯಾಸ ನಡೆಯುತ್ತಿದೆ.

    ಗಣರಾಜ್ಯೋತ್ಸವ ಕಾರ್ಯಕ್ರಮ, ಪರೇಡ್, ಸ್ಥಬ್ಧ ಚಿತ್ರಗಳ ಮೆರವಣಿಗೆ ಇಡೀ ದೇಶದ ಕೇಂದ್ರಬಿಂದು. ದೆಹಲಿಯ ಗಣರಾಜ್ಯೋತ್ಸವ ಪರೇಡ್ ಭಾರತದಲ್ಲಿ ಗಣರಾಜ್ಯೋತ್ಸವವನ್ನು ಗುರುತಿಸುವ ಪರೇಡ್‍ಗಳಲ್ಲಿ ಅತಿ ದೊಡ್ಡದು.  ಮೂರು ದಿನಗಳ ಕಾಲ ನಡೆಯುವ ಭಾರತದ ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾಗಿದೆ.

    ಇಂದು ದೆಹಲಿಯ ರಾಜಪಥ್‌ನಲ್ಲಿ ಕೊರೆಯುವ ಚಳಿ, ಹಿಮಪಾತದ ನಡುವೆ ಸೇನಾಪಡೆ ಯೋಧರು ಪರೇಡ್‍ಗೆ ಪೂರ್ವ ತಯಾರಿ ನಡೆಸುತ್ತಿರುವ ದೃಶ್ಯ ಮನಮೋಹಕವಾಗಿದೆ. ಸೇನೆಯಲ್ಲಿ ಶಿಸ್ತು, ಸಂಯಮ ಎಷ್ಟು ಇರುತ್ತದೆ, ಇರಬೇಕಾಗುತ್ತದೆ ಎಂಬುದನ್ನು ಇದು ಸೂಚಿಸುತ್ತದೆ. ಪ್ರತಿವರ್ಷ ಹೊರದೇಶಗಳ ಗಣ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತದೆ. ಆದರೆ ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿ ಸಾಂಕೇತಿಕವಾಗಿ ಸರಳವಾಗಿ ಕೊರೊನಾ ಮಾರ್ಗಸೂಚಿಗಳೊಂದಿಗೆ ಆಚರಿಸಲಾಗುತ್ತಿದೆ.

    ಮೆರವಣಿಗೆಯು ರಾಷ್ಟ್ರಪತಿ ಭವನದಿಂದ ರಾಜಪಥದ ಉದ್ದಕ್ಕೂ, ಇಂಡಿಯಾ ಗೇಟ್‍ಗೆ ಮತ್ತು ಅಲ್ಲಿಂದ ಕೆಂಪು ಕೋಟೆಗೆ ಮೆರವಣಿಗೆ ಸಾಗುತ್ತದೆ. ಭಾರತದ ರಾಷ್ಟ್ರಪತಿಗಳು ರಾಷ್ಟ್ರಧ್ವಜವನ್ನು ಹಾರಿಸುವುದರೊಂದಿಗೆ ಆರಂಭವಾಗುತ್ತದೆ. ಇದರ ನಂತರ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಹಲವಾರು ರೆಜಿಮೆಂಟ್‍ಗಳಿಂದ ಬ್ಯಾಂಡ್‍ಗಳೊಂದಿಗೆ ಮೆರವಣಿಗೆ ಮಾಡಲಾಗುತ್ತದೆ. ವಿವಿಧ ರಾಜ್ಯಗಳು ಅಲ್ಲಿನ ಸಂಸ್ಕೃತಿಗಳನ್ನು ಸೂಚಿಸುವ ಸ್ಥಬ್ಧ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಮೆರವಣಿಗೆ ಕೊನೆಗೊಳ್ಳುತ್ತದೆ.

  • ರಾಜಪಥ ಚಿತ್ರ ಈ ವಾರ ಬಿಡುಗಡೆ

    ರಾಜಪಥ ಚಿತ್ರ ಈ ವಾರ ಬಿಡುಗಡೆ

    ಸಂತೋಷ್ ಮಹಾರಾಜ್ ಫಿಲ್ಮ್ಸ್ ಲಾಂಛನದಲ್ಲಿ ಸಂತೋಷ್ ಹೆಚ್.ರಾಯ್ಕರ್ ನಿರ್ಮಾಣದ ರಾಜಪಥ ಚಿತ್ರ ಈ ವಾರ ಬಿಡುಗಡೆಯಾಗಲಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಯು’ ಸರ್ಟಿಫಿಕೇಟ್ ನೀಡಿದೆ.

    ಮೂಗೂರು ಸಿದ್ದು ರಚಿಸಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಸಾಹಿತ್ಯ ಮತ್ತು ಸಂಗೀತ- ಚಂದ್ರ ಓಬಯ್ಯ, ಛಾಯಾಗ್ರಹಣ – ರಘು, ಸಂಕಲನ – ಸಂಜೀವ ರೆಡ್ಡಿ, ಜೇಮ್ಸ್ ಪೆರೆಕಲ್ವಿಲ್ ಹಿನ್ನೆಲೆ ಸಂಗೀತವಿದೆ.

    ತಾರಾಗಣದಲ್ಲಿ ಸಂತೋಷ್ ಮಹಾರಾಜ್, ಹೆಚ್.ಆರ್. ಉಮೇಶ್, ನಿತ್ಯಾ, ಸಿಂಧು, ಸುಧೀರ್ ಹೆಚ್ ರಾಯ್ಕರ್, ತೇಜ್‍ಪಾಲ್ ಮಹೇಶ್ ಚಕ್ರವರ್ತಿ, ಆನಂದ್ ಡಿ ಕಳಸ, ರಿಕ್ಷಣ ಪೂಜಾರಿ, ರಂಗ, ಎಸ್.ಎ ಮುತ್ತಗಿ, ಉಮೆಶ್ ಶೆಟ್ಟಿ ಮಂದಾರ್ತಿ, ರಮಾಕಾಂತ್ ಆರ್ಯನ್, ಜೆ.ಕೆ. ರಜು, ಬೇಬಿ ಪರಿಣಿತ, ಬೇಬಿ ಐಶ್ವರ್ಯ ಎಸ್ ರಾಯ್ಕರ್ ಮುಂತಾದವರಿದ್ದಾರೆ.

    ಪ್ರತಿಯೊಬ್ಬರಿಗೂ ಪುಟ್ಟ ಪುಟ್ಟ ಕನಸುಗಳಿರುತ್ತೆ. ಆ ಕನಸನ್ನು ನನಸು ಮಾಡಿಕೊಳ್ಳಬೇಕಾದರೆ ಜೀವನದಲ್ಲಿ ತಾಳ್ಮೆ, ನಂಬಿಕೆ ಮುಖ್ಯ. ಹಾಗೇ ಪ್ರೀತಿ ಪ್ರೇಮ, ಸ್ನೇಹವೂ ಅಗತ್ಯ. ಇದರ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ.