Tag: ರಾಜಮಾರ್ತಾಂಡ

  • ಅಣ್ಣನ ಸಮಾಧಿ ಮೇಲೆ ಮಗಳನ್ನು ಆಟವಾಡಿಸಿದ ಧ್ರುವ ಸರ್ಜಾ

    ಅಣ್ಣನ ಸಮಾಧಿ ಮೇಲೆ ಮಗಳನ್ನು ಆಟವಾಡಿಸಿದ ಧ್ರುವ ಸರ್ಜಾ

    ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅವರು ಅಣ್ಣ ಚಿರು ಸರ್ಜಾ (Chiru Sarja) ಸಮಾಧಿ ಪಕ್ಕ ಮಲಗಿರುವ ವಿಡಿಯೋವೊಂದು ಇತ್ತೀಚಿಗೆ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ವಿಶೇಷ ವಿಡಿಯೋವೊಂದನ್ನ ಸ್ವತಃ ಧ್ರುವ ಸರ್ಜಾ ಶೇರ್ ಮಾಡಿದ್ದಾರೆ. ಅಣ್ಣನ ಸಮಾಧಿ ಮೇಲೆ ಮಗಳನ್ನು (Daughter) ಆಟವಾಡಿಸುತ್ತಿರುವ ವಿಡಿಯೋವನ್ನ ಸೋಶಿಯಲ್‌ ಮೀಡಿಯಾದಲ್ಲಿ ಶೇರ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಿಚ್ಚನ 50ನೇ ಚಿತ್ರಕ್ಕೆ ‘ಕಾಂತಾರ’ ಹೀರೋ ಆ್ಯಕ್ಷನ್ ಕಟ್

    ಚಿರು ಸರ್ಜಾ ಅಗಲಿ 3 ವರ್ಷಗಳು ಕಳೆದಿದೆ. ಅಣ್ಣ ಅಗಲಿಕೆಯ ನೋವು ಇನ್ನೂ ಧ್ರುವಗೆ ಮಾಸಿಲ್ಲ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಅಣ್ಣನ ಸಮಾಧಿ ಮೇಲೆ ಮುದ್ದು ಮಗಳನ್ನ ಧ್ರುವ ಆಟ ಆಡಿಸುತ್ತಾ ಇರುವ ವಿಡಿಯೋ ಮನ ಕಲಕುವಂತಿದೆ. ವಿಡಿಯೋ ನೋಡಿ ಖುಷಿ ಪಡಬೇಕಾ? ವಿಧಿಯಾಟಕ್ಕೆ ಹಿಡಿ ಶಾಪ ಹಾಕಬೇಕಾ ಅಂತಿದ್ದಾರೆ ಅಭಿಮಾನಿಗಳು.

    ಧ್ರುವ ಪತ್ನಿ ಪ್ರೇರಣಾ (Prerana) ಸೀಮಂತ ಶಾಸ್ತ್ರ (Baby Shower) ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಆಗ ಮಗಳಿಗೆ ಪ್ರೇರಣಾ ಚಿರು ಫೋಟೋವನ್ನ ತೋರಿಸಿ ಮಾತನಾಡುತ್ತಿದ್ದರು. ಅಂದಿನ ಆ ದೃಶ್ಯ ಕೂಡ ಸಖತ್ ವೈರಲ್ ಆಗಿತ್ತು.

    ಅಕ್ಟೋಬರ್ 6ರಂದು ಧ್ರುವ ಸರ್ಜಾ ಹುಟ್ಟುಹಬ್ಬದಂದು ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ (Rajamartanda Film) ರಿಲೀಸ್ ಆಗುತ್ತಿದೆ. ಚಿರು- ಮೇಘನಾ ಪುತ್ರ ರಾಯನ್ (Rayan) ಕೂಡ ನಟಿಸಿದ್ದಾರೆ. ಚಿರು ಪಾತ್ರಕ್ಕೆ ಇಡೀ ಸಿನಿಮಾ ಧ್ರುವ ಸರ್ಜಾ ಡಬ್ಬಿಂಗ್ ಮಾಡಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

    ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

    ನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಚಿರು ಸರ್ಜಾ 2020ರಲ್ಲಿ ಅಗಲಿದ್ದರು. ಅವರು ನಟಿಸಿರುವ ಕೊನೆಯ ಸಿನಿಮಾ `ರಾಜಮಾರ್ತಾಂಡ’ (Rajamarthanda) ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ. ಚಿರು ಕೊನೆ ಚಿತ್ರಕ್ಕೆ ಡಬ್ಬಿಂಗ್ ಮಾಡುವ ಮೂಲಕ ಧ್ರುವ ಸರ್ಜಾ (Druva sarja) ಸಾಥ್ ನೀಡಿದ್ದಾರೆ. ಚಿರು ನಟಿಸಿರುವ ಸಿನಿಮಾ ಮೇಲೆ ಧ್ರುವಾಗಿರುವ ಪ್ರೀತಿ, ಕಮೀಟ್‌ಮೆಂಟ್ ಬಗ್ಗೆ ಪ್ರಥಮ್ ಮಾತನಾಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಚಿರು ಸಿನಿಮಾ ಬಗ್ಗೆ ಧ್ರುವಾ ಸರ್ಜಾ  ಮೌನ ಮುರಿದಿದ್ದಾರೆ.

    ಚಿರು ಕಡೆಯ ಸಿನಿಮಾ `ರಾಜಮಾರ್ತಾಂಡ’ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ. ಹೀಗಿರುವಾಗ ಚಿರು ನಿಧನದ ಮುನ್ನ ಈ ಚಿತ್ರ ಕಂಪ್ಲೀಟ್ ಆಗಿತ್ತು. ಚಿರು ಪಾತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಅದರ ಜವಾಬ್ದಾರಿಯನ್ನ ಧ್ರುವ ಸರ್ಜಾ ಹೊತ್ತಿದ್ದಾರೆ. ಅಣ್ಣನ ಸಿನಿಮಾವೆಂದು ಪ್ರೀತಿಯಿಂದ ಡಬ್ಬಿಂಗ್ ಮಾಡಿ ಕೊಡ್ತಿದ್ದಾರೆ. ಈ ಬಗ್ಗೆ ಪ್ರಥಮ್ ಕೂಡ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ನನ್ನ- ಮಹೇಶ್ ಬಾಬು ನಡುವಿನ ಜಗಳಕ್ಕೆ ಕಾರಣ ಯಾರು ಎಂದು ಬಿಚ್ಚಿಟ್ಟ ನಮ್ರತಾ ಶಿರೋಡ್ಕರ್

    ನಿನ್ನೆ ಚಿರಂಜೀವಿ ಸರ್ಜಾ ಅಣ್ಣವ್ರ `ರಾಜಮಾರ್ತಾಂಡ’ ಸಿನಿಮಾ ಡಬ್ಬಿಂಗ್ ಟೈಂ ಇದು. ಮಧ್ಯಾಹ್ನ ಊಟಕ್ಕೆ ಬನ್ನಿ ಸಿಗೋಣ ಅಂತ ಹೇಳಿದವರು ಡಬ್ಬಿಂಗ್ ಥಿಯೇಟರ್‌ನಿಂದ ಹೊರ ಬಂದಾಗ ರಾತ್ರಿ 7ಗಂಟೆ ಆಗಿತ್ತು. ಡಬ್ಬಿಂಗ್ ಮುಗೀತಾ ಎಂದು ಕೇಳಿದಕ್ಕೆ ನಮ್ ಹೀರೋ ಧ್ರುವ ಸರ್ಜಾ ಹೇಳಿದಿಷ್ಟು. ಇಲ್ಲ ಇನ್ನೊಂದೆರಡು ದಿನ ಇದೆ ಮಾಡಿ ಮುಗಿಸುತ್ತೀನಿ. ಅಣ್ಣ ಇಲ್ಲ ಅಂದಾಗ ಹೇಗೇಗೋ ಮಾಡೋಕಾಗಲ್ಲ.ಕೆಲಸ ಒಪ್ಪಿಕೊಂಡ ಮೇಲೆ ಚೆನ್ನಾಗಿ ಮಾಡ್ಬೇಕು ಬ್ರೋ, ಲೇಟಾದ್ರೂ ನೀಟಾಗಿ ಮಾಡೋಣ ಅಂದಿದ್ದರು ಪ್ರತಿ ದೃಶ್ಯಕ್ಕೂ ಜೀವ ತುಂಬಿದ್ದಕ್ಕೆ ಸಾಕ್ಷಿಯಾಗಿತ್ತು. ಮೂವರು ಹಿರಿಯರನ್ನು ಧ್ರುವ ಅವ್ರಿಗೆ ಪರಿಚಯ ಮಾಡೋಣ ಅಂತ ಕರೆದುಕೊಂಡು ಹೋಗಿದ್ದೆ. ಅದ್ರಲ್ಲಿ ಒಬ್ಬರು ಹಿರಿಯರು ಹೇಳಿದ್ದಿಷ್ಟು. ಪ್ರಥಮ್, ಧ್ರುವ ಸರ್ಜಾ ಅವ್ರು ಒಬ್ಬ ಗೆದ್ದರೆ ಕನಿಷ್ಟ ಸಾವಿರ ಜನ ನೆಮ್ಮದಿಯಾಗಿ ಊಟ ಮಾಡುತ್ತಾರೆ ಅಂತ. ಹೀಗಾಗಿ ನಮ್ಮ ಮೀಟಿಂಗ್ ಇನ್ನೊಂದು ದಿನಕ್ಕೆ ಪೋಸ್ಟ್ ಪೋನ್ ಆಯ್ತು. ಈ ಸ್ಪೆಷಲ್ ಅರ್ಪಣೆ ಚಿರು ಅಣ್ಣನಿಗೆ ಧ್ರುವ ಅವರಿಂದ’ ಎಂದು ಒಳ್ಳೆ ಹುಡುಗ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಪ್ರಥಮ್ ಪೋಸ್ಟ್ ನೋಡಿದ ಬಳಿಕ ಅಭಿಮಾನಿಗಳು, ಅಣ್ಣ ಚಿರು ಮೇಲೆ ಧ್ರುವಾಗಿರುವ ಪ್ರೀತಿ ಕಂಡು ಫಿದಾ ಆಗಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಅಣ್ಣನ ಸಿನಿಮಾಕ್ಕೆ ವಾಯ್ಸ್ ಕೊಡಲಿದ್ದಾರೆ ಧ್ರುವ ಸರ್ಜಾ

    ಅಣ್ಣನ ಸಿನಿಮಾಕ್ಕೆ ವಾಯ್ಸ್ ಕೊಡಲಿದ್ದಾರೆ ಧ್ರುವ ಸರ್ಜಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಇತ್ತೀಚೆಗಷ್ಟೇ ಜ್ಯೂನಿಯರ್ ಚಿರು ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಸುದ್ದಿಯಾಗಿದ್ದರು. ಇದೀಗ ದಿವಂಗತ ಪತಿ ಚಿರು ಅಭಿನಯದ ರಾಜಮಾರ್ತಂಡ ಸಿನಿಮಾ ಕುರಿತಂತೆ ಆಪ್‍ಡೇಟ್ಸ್ ನೀಡುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ನಟಿ ಮೇಘನಾ ರಾಜ್ ಪತಿಯ ಸಿನಿಮಾಕ್ಕೆ ಧ್ರುವ ಸರ್ಜಾ ವಾಯ್ಸ್ ಡಬ್ ನೀಡುತ್ತಿರುವ ವಿಚಾರವನ್ನು ತಿಳಿಸುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

    ಲಾಕ್‍ಡೌನ್ ಸಮಯದಲ್ಲಿ ರಾಜಮಾರ್ತಾಂಡ ಸಿನಿಮಾದ ಡಬ್ಬಿಂಗ್ ಮಾಡಲು ತಯಾರಿ ನಡೆದಿತ್ತು. ಆದರೆ ಚಿರು ಅಗಲಿದ ನಂತರ ಇದೀಗ ಧ್ರುವ ಸರ್ಜಾ ಅಣ್ಣನ ಸಿನಿಮಾಕ್ಕೆ ವಾಯ್ಸ್ ಡಬ್ ನೀಡಲು ಮುಂದಾಗಿದ್ದಾರೆ.

    ಧ್ರುವ ಅಭಿನಯದ ಪೊಗರು ಸಿನಿಮಾ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದ್ದು, ಚಿತ್ರದ ಇಂಟರ್‍ವೆಲ್ ಸಮಯದಲ್ಲಿ ಚಿರು ಅಭಿನಯದ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ಪ್ರಸಾರವಾಗಲಿದೆ.

    ರಾಜಮಾರ್ತಾಂಡ ಸಿನಿಮಾವನ್ನು ನಿರ್ದೇಶಕ ರಾಮ್ ನಾರಾಯಣ ನಿರ್ದೇಶಿಸುತ್ತಿದ್ದು, ಚಿತ್ರದ ಪ್ರಮುಖ ಪಾತ್ರಗಳಲ್ಲಿ ಓಂ ಪ್ರಕಾಶ್, ದೀಪ್ತಿ ಸತಿ ಮತ್ತು ತ್ರಿವೇಣಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತಾ ಸಂಯೋಜಿಸಿದ್ದು, ಗಣೇಶ್ ಅವರ ಛಾಯಾಗ್ರಹಣವಿದೆ.

  • ಚಿರು ಸರ್ಜಾ ಈಗ ಸಖತ್ ಬ್ಯುಸಿ

    ಚಿರು ಸರ್ಜಾ ಈಗ ಸಖತ್ ಬ್ಯುಸಿ

    ಬೆಂಗಳೂರು: ಬಹುಶಃ ಕನ್ನಡ ಚಿತ್ರರಂಗದ ಬೇರಾವ ಸ್ಟಾರ್ ಗಳೂ ಇಲ್ಲದಷ್ಟು ಬ್ಯುಸಿ ಇರೋ ನಟ ಅಂದರೆ ಅದು ಚಿರಂಜೀವಿ ಸರ್ಜಾ. ಈಗಷ್ಟೇ ಸಿಂಗ ಸಿನಿಮಾದ ಹಾಡಿಗಾಗಿ ಬ್ಯಾಂಕಾಕ್ ಗೆ ಹೋಗಿ ಬಂದಿದ್ದಾರೆ. ರಾಜಮಾರ್ತಾಂಡ, ರಣಮ್, ಆಧ್ಯ, ಜುಗಾರಿ ಕ್ರಾಸ್ ಮತ್ತು ಖಾಕಿ ಸದ್ಯ ಚಿರು ನಟಿಸುತ್ತಿರುವ ಚಿತ್ರಗಳು. ಬ್ಯಾಕ್ ಟು ಬ್ಯಾಕ್ ಕಾಲ್ ಶೀಟ್ ಗಳನ್ನು ಕೊಟ್ಟು ಒಂದು ದಿನ ಕೂಡಾ ಪುರುಸೊತ್ತಿಲ್ಲದೆ ಚಿರು ಸಿನಿಮಾ ಚಿತ್ರೀಕರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅನೌನ್ಸ್ ಆಗಿ ಚಿತ್ರೀಕರಣಗೊಳ್ಳುತ್ತಿರುವ ಸಿನಿಮಾಗಳೇ ಆರಕ್ಕಿಂತಾ ಹೆಚ್ಚಿವೆ. ಇದರ ಜೊತೆಗೆ ಧೈರ್ಯಂ ಖ್ಯಾತಿಯ ಶಿವ ತೇಜಸ್ ನಿರ್ದೇಶನದ ಸಿನಿಮಾ ಮತ್ತು ಅನಿಲ್ ಮಂಡ್ಯ ನಿರ್ದೇಶನದ ಚಿತ್ರಗಳೂ ಕ್ಯೂನಲ್ಲಿ ನಿಂತಿವೆ.

    ಸಾಲದೆಂಬಂತೆ ತರುಣ್ ಶಿವಪ್ಪ ನಿರ್ಮಾಣದ ಸಿನಿಮಾ ಕೂಡಾ ಆರಂಭಗೊಳ್ಳಲಿದೆ. ಇಷ್ಟು ಸಿನಿಮಾಗಳಲ್ಲಿ ಯಾವುದು ಮೊದಲು ಚಿತ್ರೀಕರಣ ಪೂರೈಸಿ, ಬಿಡುಗಡೆಗೆ ತಯಾರಾಗುತ್ತದೋ ಗೊತ್ತಿಲ್ಲ. ಈ ನಡುವೆ ಶಿವತೇಜಸ್ ಮತ್ತು ಅನಿಲ್ ಮಂಡ್ಯ ಸ್ಕ್ರಿಪ್ಟ್ ಕೆಲಸಗಳನ್ನೆಲ್ಲಾ ಮುಗಿಸಿ ಚಿರು ಡೇಟ್ಸ್ ಗಾಗಿ ಕಾದು ಕುಳಿತಿದ್ದಾರೆ. ಈ ಇಬ್ಬರ ಸಿನಿಮಾಗಳಲ್ಲಿ ಯಾವುದು ಮೊದಲು ಮುಹೂರ್ತ ಆಚರಿಸಿಕೊಳ್ಳುತ್ತದೋ ಎನ್ನುವ ಕುತೂಹಲ ಎಲ್ಲರದ್ದಾಗಿದೆ.

    ಚಿರು ಇಷ್ಟೊಂದು ಸಿನಿಮಾಗಳನ್ನು ಒಟ್ಟೊಟ್ಟಿಗೇ ಒಪ್ಪಿಕೊಂಡು ಬ್ಯುಸಿಯಾಗಿರೋದರ ನಡುವೆಯೇ ತಮ್ಮ ಪತ್ನಿ ಮೇಘನಾರಾಜ್ ಜೊತೆ ಹತ್ತು ದಿನಗಳ ಕಾಲ ಸ್ವಿಜರ್ ಲೆಂಡ್ ಟ್ರಿಪ್ಪಿಗೆ ಹೋಗಲು ಕೂಡಾ ಟೈಮು ಮಾಡಿಕೊಂಡಿದ್ದಾರೆ. ಇದೇ ತಿಂಗಳ ಮೂರನೇ ವಾರದ ಹೊತ್ತಿಗೆ ಚಿರು ದಂಪತಿ ಫಾರಿನ್ ಟ್ರಿಪ್ಪಿಗೆ ತೆರಳಲಿದೆ.

    ಒಟ್ಟಾರೆ ಚಿರು ಬ್ಯುಸಿಯಾಗಿರೋ ರೀತಿಯನ್ನು ನೋಡಿದರೆ ಮದುವೆಯಾದ ಮೇಲೆ ಅವರ ನಸೀಬು ಬದಲಾದಂತೆ ಕಾಣುತ್ತಿದೆ. ಯಾಕೆಂದರೆ, ವರ್ಷಕ್ಕೆ ಒಂದೋ ಎರಡೋ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದ ಚಿರು ಕೈಲೀಗ ಮುಕ್ಕಾಲು ಡಜನ್ ಸಿನಿಮಾಗಳಿವೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv