Tag: ರಾಜಸ್ತಾನ್

  • ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಜೈಪುರ: ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ್ದು, ಮಹಿಳೆಯೊಬ್ಬಳು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್‍ನಿಂದ ಪತಿಯನ್ನು ಥಳಿಸಿದ್ದಾಳೆ. ಈ ಹಿನ್ನೆಲೆ ಪತಿಯೂ ತನ್ನ ರಕ್ಷಣೆ ಮಾಡಿ ಎಂದು ನ್ಯಾಯಾಲಯಕ್ಕೆ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ತೊಂದರೆಗೀಡಾದ ಪತಿಯೂ ಶಾಲೆಯ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಇವರು ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ನನ್ನ ಪತ್ನಿಯೂ ನನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ. ಈ ಹಿನ್ನೆಲೆ ನನಗೆ ರಕ್ಷಣೆ ಕೊಡಿ ಎಂದು ಪ್ರಾಂಶುಪಾಲರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪಗೆ ಕೊಟ್ಟು ಗೊತ್ತೇ ಹೊರತು ಬೇಡಿ ಪಡೆದು ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ 

    ಪತಿಯು ದೂರಿನಲ್ಲಿ, ಪತ್ನಿ ನನ್ನ ಮೇಲೆ ಪ್ಯಾನ್, ಸ್ಟಿಕ್ ಮತ್ತು ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ನಡೆಸುತ್ತಿದ್ದಾಳೆ. ಇದರಿಂದ ಗಾಬರಿಗೊಂಡ ನಾನು ಸಾಕ್ಷ್ಯ ಸಂಗ್ರಹಿಸಲು ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದೆ ಎಂದು ತಿಳಿಸಿದ್ದಾರೆ. ಪತ್ನಿ ಹಲ್ಲೆ ಮಾಡುತ್ತಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದ್ದು, ವೈರಲ್ ಆಗಿದೆ.

    ವೀಡಿಯೋದಲ್ಲಿ ಏನಿದೆ?
    ಪತ್ನಿಯೂ ತಮ್ಮ ಮಗ ಮುಂದೆಯೇ ಕ್ರಿಕೆಟ್ ಬ್ಯಾಟ್ ಹಿಡಿದು ಪತಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆಯುತ್ತಿರುವುದನ್ನು ಕಾಣಬಹುದು. ಈ ಹಿನ್ನೆಲೆ ಪತಿಯೂ ರಕ್ಷಣೆಗಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ಘಟನೆಯ ದೃಶ್ಯಾವಳಿಗಳನ್ನು ಹಾಜರುಪಡಿಸಿದ್ದಾರೆ. ಅವರಿಗೆ ಭದ್ರತೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ನಡೆದಿದ್ದೇನು?
    ಪ್ರಾಂಶುಪಾಲರಾದ ಅಜಿತ್ ಸಿಂಗ್ ಯಾದವ್ ಅವರು ಏಳು ವರ್ಷಗಳ ಹಿಂದೆ ಹರಿಯಾಣದ ಸೋನಿಪತ್ ನಿವಾಸಿ ಸುಮನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ, ಅವರ ಜೀವನವು ಚೆನ್ನಾಗಿತ್ತು. ಆದರೆ ಸ್ವಲ್ಪ ಸಮಯದ ನಂತರ ಸುಮನ್ ಅವರು ಅಜಿತ್ ಅವರಿಗೆ ಹೊಡೆಯುವುದನ್ನು ಪ್ರಾರಂಭಿಸಿದರು. ಆಗಾಗ್ಗೆ ಪತ್ನಿ ನೀಡುತ್ತಿದ್ದ ಹಿಂಸೆಯಿಂದ ಅಜಿತ್‍ಗೆ ಹಲವು ಗಾಯವಾಗಿದೆ. ಅವುಗಳನ್ನು ಗುಣಪಡಿಸಲು ಅವರು ವೈದ್ಯಕೀಯ ಸಹಾಯವನ್ನು ಪಡೆಯುತ್ತಿದ್ದರು ಎಂದು ಅವರೇ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿದ್ದರೆ, ಈ ದೇವಸ್ಥಾನಕ್ಕೆ ಭೇಟಿ ಪಕ್ಕಾ 

    ಯಾವುದೇ ರೀತಿಯ ಸಾಕ್ಷ್ಯಿಗಳು ಇಲ್ಲದ ಹಿನ್ನೆಲೆ ಅಜಿತ್ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕ್ಯಾಮೆರಾ ಇಟ್ಟಿದ್ದಾರೆ. ನಂತರ ಸುಮನ್ ಬ್ಯಾಟ್‍ನಲ್ಲಿ ಹೊಡೆಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಹೆಂಡತಿ ಮಿತಿಗಳನ್ನು ಮೀರಿದ್ದರಿಂದ ನಾನು ನ್ಯಾಯಾಲಯದ ಆಶ್ರಯ ಪಡೆದಿದ್ದೇನೆ. ಸೋದರ ಮಾವ ಸಹ ನನ್ನ ಪತ್ನಿಯನ್ನು ಹಿಂಸೆಗೆ ಪ್ರೇರೇಪಿಸುತ್ತಾನೆ ಎಂದು ಆರೋಪಿಸಿದರು.

  • ಓಮಿಕ್ರಾನ್‌ನಿಂದ ಗುಣಮುಖರಾಗಿದ್ದ ವೃದ್ಧ ಸಾವು

    ಓಮಿಕ್ರಾನ್‌ನಿಂದ ಗುಣಮುಖರಾಗಿದ್ದ ವೃದ್ಧ ಸಾವು

    ಜೈಪುರ್: ಕೊರೊನಾ ರೂಪಾಂತರಿ ಓಮಿಕ್ರಾನ್‌ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿ ಡಿಸ್ಚಾರ್ಜ್‌ ಆಗಿದ್ದ ವೃದ್ಧ ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಉದಯಪುರ್‌ನಲ್ಲಿ ನಡೆದಿದೆ.

    73 ವರ್ಷ ವಯಸ್ಸಿನ ವೃದ್ಧ ಓಮಿಕ್ರಾನ್‌ ಸೋಂಕಿಗೆ ಒಳಗಾಗಿದ್ದರು. ಉದಯಪುರ್‌ನ ಎಂಬಿಜಿಹೆಚ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು. ಇದನ್ನೂ ಓದಿ: ಮಹಿಳೆಗೆ ಕೊರೊನಾ – ಚಲಿಸುತ್ತಿದ್ದ ವಿಮಾನದ ಟಾಯ್ಲೆಟ್‌ನಲ್ಲೇ 3 ಗಂಟೆ ಕ್ವಾರಂಟೈನ್‌

    ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯ ಸುಮನ್‌, ಡಿ.15ರಂದು ಕೋವಿಡ್‌ನಿಂದಾಗಿ ವೃದ್ಧ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಡಿ.21ರಂದು ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್‌ ಬಂದಿತು. ಮತ್ತೆ ಡಿ.25ರಂದು ಅವರ ಮಾದರಿಯನ್ನು ಜೀನೋಮ್‌ ಸೀಕ್ವೆನ್ಸಿಂಗ್‌ ಕಳುಹಿಸಿದ್ದಾಗ ವರದಿಯಲ್ಲಿ ಓಮಿಕ್ರಾನ್‌ ದೃಢಪಟ್ಟಿತ್ತು.

    ಕೋವಿಡ್‌ ಲಸಿಕೆಯ ಎರಡು ಡೋಸ್‌ ಅನ್ನು ಅವರು ಪಡೆದುಕೊಂಡಿದ್ದರು. ಆದರೆ ಅವರು ಮಧುಮೇಹ ಮೆಲ್ಲಿಟಸ್‌, ಅಧಿಕ ರಕ್ತದೊತ್ತಡ, ಹೈಪೋಥೈರಾಯ್ಡಿಸಮ್‌ ಕಾಯಿಲೆಗಳಿಂದ ಬಳಲುತ್ತಿದ್ದರು. ಓಮಿಕ್ರಾನ್‌ನಿಂದ ಗುಣಮುಖರಾಗಿದ್ದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆಮ್ಲಜನಕ ಪ್ರಮಾಣವೂ ಕಡಿಮೆಯಾಗಿದ್ದರಿಂದ ಅವರು ಮೃತಪಟ್ಟರು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

  • ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ದುಬೈ: 14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ದಿನೇ ದಿನೇ ರೋಚಕತೆ ಪಡೆದುಕೊಳ್ಳತ್ತಿವೆ. ಟೂರ್ನಿಯ ಕೊನೆಯ ಹಂತದ ಕೆಲವೇ ಕೆಲವು ಲೀಗ್ ಪಂದ್ಯಗಳು ಬಾಕಿ ಉಳಿದಿದ್ದು, ಇನ್ನೂ ಪ್ಲೇ ಆಫ್‍ಗೆ ಯಾವ ತಂಡಗಳು ಎಂಟ್ರಿ ಕೊಡಲಿವೆ ಎಂಬುದು ಖಚಿತವಾಗಿಲ್ಲ.

    ದುಬೈನಲ್ಲಿ ನಡೆಯುತ್ತಿರುವ ದ್ವಿತೀಯಾರ್ಧದ ಐಪಿಎಲ್ ಪಂದ್ಯಗಳು ಅಭಿಮಾನಿಗಳಿಗೆ ರಸದೌತಣ ನೀಡುತ್ತಿವೆ. ಇದುವರೆಗೂ ಒಟ್ಟು ಲೀಗ್‍ನಲ್ಲಿ 43 ಪಂದ್ಯಗಳು ನಡೆದಿದೆ. ಇನ್ನೂ 13 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದರೂ ಯಾವ ಯಾವ ತಂಡಗಳು ಪ್ಲೇ ಆಫ್‍ಗೆ ಲಗ್ಗೆಯಿಡಲಿವೆ ಎಂಬುದು ಕೂತಹಲಕಾರಿಯಾಗಿದೆ. 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್, 8 ಗೆಲುವು ಹಾಗೂ 2 ಸೋಲುಗಳಿಂದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. 11 ಪಂದ್ಯಗಳನ್ನಾಡಿರುವ ಡೆಲ್ಲಿ, 8 ಗೆಲುವು ಹಾಗೂ 3 ಸೋಲುಗಳಿಂದ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಪತ್ನಿಯಾಗುವವಳು ನನ್ನಂತೆಯೇ ಕ್ರೀಡಾಪಟುವಾಗಿರಬೇಕು: ನೀರಜ್ ಚೋಪ್ರಾ

    ಬೆಂಗಳೂರು ರಾಯಲ್ ಚಾಲೆಂಜರ್ಸ್ ಕೂಡ ಚೆನ್ನೈ ಹಾಗೂ ಡೆಲ್ಲಿ ನಂತರದ ಸ್ಥಾನದಲ್ಲಿದೆ. 11 ಪಂದ್ಯಗಳನ್ನಾಡಿರುವ ಆರ್‍ಸಿಬಿ 7 ಗೆಲುವು ಹಾಗೂ 4 ಸೋಲುಗಳಿಂದ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 11 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಕಂಡಿರುವ ಕೆಕೆಆರ್ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ 5 ಗೆಲುವು, 6 ಸೋಲುಗಳಿಂದ 5ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ

    ಎಲ್ಲಾ ತಂಡಗಳಿಗೂ 10 ಪಂದ್ಯಗಳೂ ಮುಗಿದರೂ ಇನ್ನೂ ಪ್ಲೇ ಆಫ್ ಲಗ್ಗೆಯಿಡಲು ಮಾತ್ರ ಸಾಧ್ಯವಾಗಿಲ್ಲ. ಉಳಿದ 13 ಲೀಗ್ ಪಂದ್ಯಗಳ ನಂತರವಷ್ಟೇ ಮುಂದಿನ ಹಂತಕ್ಕೆ ಹೋಗುವ ತಂಡಗಳು ಯಾವುವು ಎಂಬುದು ಖಚಿತವಾಗುತ್ತದೆ.

    ಚೆನ್ನೈ, ಡೆಲ್ಲಿ ಪ್ಲೇ ಆಫ್ ಖಚಿತ

    ಈಗಾಗಲೇ 16 ಅಂಕಗಳೊಂದಿಗೆ ಕ್ರಮವಾಗಿ ಒಂದು ಹಾಗೂ 2ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್‍ನತ್ತ ಮುನ್ನಡೆದಿವೆ. ಉಳಿದಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದ, ಡೆಲ್ಲಿ 3ರಲ್ಲಿ ಒಂದು ಪಂದ್ಯ ಗೆದ್ದರೂ ಪ್ಲೇ ಆಫ್ ಪ್ರವೇಶಿಸಲಿದೆ. ಎರಡು ತಂಡಗಳ ನೆಟ್ ರನ್‍ರೇಟ್ ಕೂಡ ಉತ್ತಮವಾಗಿದೆ.

    ಒಂದು ಪಂದ್ಯ ಗೆದ್ದೂ ಆರ್​ಸಿಬಿ ಪ್ಲೇ ಆಫ್‍ಗೆ

    ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದಿರುವ 3 ಪಂದ್ಯಗಳಲಿ ನೆಟ್ ರನ್‍ರೇಟ್ ಜೊತೆಗೆ ಒಂದು ಪಂದ್ಯ ಗೆದ್ದರೂ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ರಾಜಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ ಜಯಗಳಿಸಿರುವ ಬೆಂಗಳೂರು, ಚೆನ್ನೈ ಹಾಗೂ ಡೆಲ್ಲಿ ಜೊತೆ ಪ್ಲೇ ಆಫ್‍ಗೆ ಎಂಟ್ರಿ ಕೊಡಲಿದೆ.

    ಸನ್ ರೈಸರ್ಸ್, ರಾಜಸ್ತಾನ್, ಪಂಜಾಬ್ ದೂರ

    ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹೈದರಾಬಾದ್ ಈಗಾಗಲೇ ಪ್ಲೇ ಆಫ್ ಕನಸನ್ನು ಕೈ ಚೆಲ್ಲಿದೆ. ರಾಜಸ್ಥಾನ, ಪಂಜಾಬ್ 11 ಪಂದ್ಯಗಳಿಂದ 8 ಅಂಕ ಪಡೆದಿದ್ದರೂ ಪ್ಲೇ ಆಫ್ ಪ್ರವೇಶ ಕಷ್ಟ. ಎರಡು ತಂಡಗಳು, ಉಳಿದಿರುವ ಮೂರು ಪಂದ್ಯಗಳನ್ನು ಗೆದ್ದರೂ ನೆಟ್ ರನ್‍ರೇಟ್ ಕೊರತೆಯುಂಟಾಗಿ ಟೂರ್ನಿಯಿಂದ ಹೊರಬರುವ ಸಾಧ್ಯತೆ ಹೆಚ್ಚಿದೆ.

    ಕೆಕೆಆರ್, ಮುಂಬೈ, ಪಂಜಾಬ್ ನಡುವೆ ಪ್ಲೇ ಆಫ್‍ಗಾಗಿ ಹಣಾಹಣಿ

    ಪ್ಲೇ ಆಫ್‍ಗಾಗಿ ಮೂರು ತಂಡಗಳಿಗೂ ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. 5 ಜಯದೊಂದಿಗೆ 10 ಅಂಕಗಳಿಸಿರುವ ಮುಂಬೈ ಕೆಕೆಆರ್ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿವೆ. ಮುಂದಿನ ಪಂದ್ಯಗಳನ್ನು ಗೆದ್ದು ನೆಟ್ ರನ್‍ರೇಟ್‍ನಲ್ಲಿ ಚೇತರಿಕೆ ಕಂಡು ಸೆಮಿಸ್ ಹಂತಕ್ಕೆ ತಲುಪಲು ಕೆಕೆಆರ್ ಹಾಗೂ ಮುಂಬೈ ಹರಸಾಹಸ ಪಡಬೇಕಿದೆ.

  • ನೋಡ ನೋಡುತ್ತಿದ್ದಂತೆ ಕುಸಿದ ನೂರಾರು ಜನ ಕುಳಿತಿದ್ದ ಶೆಡ್ ವಿಡಿಯೋ ನೋಡಿ

    ನೋಡ ನೋಡುತ್ತಿದ್ದಂತೆ ಕುಸಿದ ನೂರಾರು ಜನ ಕುಳಿತಿದ್ದ ಶೆಡ್ ವಿಡಿಯೋ ನೋಡಿ

    – 17 ಮಂದಿಗೆ ಗಂಭೀರ ಗಾಯ

    ಜೈಪುರ: ಟ್ರಾಕ್ಟರ್ ರೇಸ್ ನೋಡುವ ವೇಳೆ ಶೆಡ್ ಕುಸಿದು 17 ಮಂದಿ ಗಾಯಗೊಂಡಿರುವ ಘಟನೆ ರಾಜಸ್ತಾನದ ಶ್ರೀ ಗಂಗಾನಗರದಲ್ಲಿ ನಡೆದಿದೆ.

    ಭಾನುವಾರ ಪಡಂಪುರ್ ಪ್ರದೇಶದಲ್ಲಿನ ಆನಾಜ್ ಮಂಡಿಯಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ಟ್ರಾಕ್ಟರ್ ರೇಸ್ ಅನ್ನು ಆಯೋಜಿಸಲಾಗಿತ್ತು. ರೇಸ್ ನೋಡಲು ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ರೇಸ್ ಕಾಣುತ್ತಿರಲಿಲ್ಲ ಎಂದು ನೂರಾರು ಜನರು ಶೆಡ್ ಮೇಲೆ ಕುಳಿತು ವೀಕ್ಷಿಸುತ್ತಿದ್ದರು. ಅತಿ ಹೆಚ್ಚು ಜನರು ಕುಳಿತಿದ್ದರಿಂದ ಶೆಡ್ ಕುಸಿದಿದೆ. ಶೆಡ್ ಕುಸಿಯುವ ದೃಶ್ಯಗಳು ಸ್ಥಳೀಯ ವ್ಯಕ್ತಿಯೊಬ್ಬರ ಮೊಬೈಲನಲ್ಲಿ ಸೆರೆಯಾಗಿವೆ.

    ಶೆಡ್‍ನ ಅಡಿ ಸಿಲುಕಿದ್ದ ಜನರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಒಟ್ಟು 17 ಮಂದಿ ಗಾಯಗೊಂಡಿದ್ದು, ಅದರಲ್ಲಿ 7 ಮಂದಿಗೆ ಗಂಭೀರವಾದ ಗಾಯಗಳಾಗಿವೆ. ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದ10 ಜನರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

    ಈ ಕಾರ್ಯಕ್ರಮವನ್ನು ಆಯೋಜಿಸಲು ಆಡಳಿತ ಮಂಡಳಿಯ ಆಯೋಜಕರು ಯಾವುದೇ ಅನುಮತಿಯನ್ನು ಪಡೆದುಕೊಂಡಿರಲಿಲ್ಲ. ಟ್ರಾಕ್ಟರ್ ರೇಸ್ ನೋಡುವುದಕ್ಕಾಗಿ ಗ್ರಾಮಸ್ಥರು ಆಗಮಿಸಿದ್ದರು.

  • ಮದುವೆಗೆ ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ್ರು!

    ಮದುವೆಗೆ ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ್ರು!

    ಜೈಪುರ: ಮದುವೆಯಯಾಗಲು ನಿರಾಕರಿಸಿದ್ದಾಳೆ ಎನ್ನುವ ಕ್ಷುಲಕ್ಕ ಕಾರಣಕ್ಕೆ ಯುವತಿಗೆ ಯುವಕ ಮತ್ತು ಆತನ ತಂದೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ರಾಜಸ್ಥಾನದ ಬಾಣಸ್ವಾರ ಜಿಲ್ಲೆಯ ಐಸಲ್ರ್ವಾದಲ್ಲಿ ಘಟನೆ ನಡೆದಿದ್ದು, 18 ವರ್ಷದ ಯುವತಿಯನ್ನು ಸೀಮಾ ಎಂದು ಗುರುತಿಸಲಾಗಿದೆ.

    ತನ್ನನ್ನು ಮದುವೆಯಾಗುವಂತೆ ಆರೋಪಿ ರವಿ ಸೀಮಾ ಬಳಿ ಬೇಡಿಕೆ ಇಟ್ಟಿದ್ದ. ಆದರೆ ತನ್ನ ಆಸೆಯನ್ನು ನಿರಾಕರಿಸಿದಕ್ಕೆ ಸೀಮಾ ಮನೆಗೆ ತೆರಳಿ ರವಿ ಬೆಂಕಿಯನ್ನು ಹಚ್ಚಿದ್ದಾನೆ. ತಕ್ಷಣ ಸೀಮಾಳನ್ನು ಸಮೀಪದ ಎಂಜಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಆದರೆ ಶೇ.75 ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಸೀಮಾ ಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

    ಘಟನೆಯ ಬಗ್ಗೆ ಸೀಮಾಳ ತಂದೆ ಪ್ರತಿಕ್ರಿಯಿಸಿದ್ದು, ರವಿ ಎಂಬಾತ ತನ್ನನ್ನು ಮದುವೆಯಾಗುವಂತೆ ಮಗಳ ಬಲಿ ಬೇಡಿಕೆ ಇಟ್ಟಿದ್ದ. ಆದರೆ ಆಕೆ ನಿರಾಕರಿಸಿದ್ದಕ್ಕೆ ಆತ ತನ್ನ ತಂದೆ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

    ಈ ಮೊದಲೇ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಮದುವೆ ಕುರಿತು ಕಿರುಕುಳವನ್ನು ಆರೋಪಿಗಳು ನೀಡಿದ್ದರು. ಈ ಕುರಿತು ಸೀಮಾಳ ತಂದೆ ಪೊಲೀಸರಿಗೆ ದೂರನ್ನು ಸಹ ನೀಡಿದ್ದರು. ಆದರೆ ಅಧಿಕಾರಿಗಳು ಇವರ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

    ಈ ಘಟನೆಯ ಕುರಿತು ಆಸ್ಪತ್ರೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.