Tag: ರಾಜಸ್ಥಾನ ಪೊಲೀಸ್‌

  • 4 ವರ್ಷದ ಮಗುವಿನ ಮೇಲೆ ಸಬ್‌ ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ – ಗ್ರಾಮಸ್ಥರಿಂದ ಥಳಿತ, ಕಠಿಣ ಶಿಕ್ಷೆಗೆ ಆಗ್ರಹ

    4 ವರ್ಷದ ಮಗುವಿನ ಮೇಲೆ ಸಬ್‌ ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ – ಗ್ರಾಮಸ್ಥರಿಂದ ಥಳಿತ, ಕಠಿಣ ಶಿಕ್ಷೆಗೆ ಆಗ್ರಹ

    ಜೈಪುರ: 4 ವರ್ಷದ ಮಗುವಿನ ಮೇಲೆ ಸಬ್ ಇನ್ಸ್‌ಪೆಕ್ಟರ್‌ (Sub Inspector) ಒಬ್ಬ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ (Rajasthan) ದೌಸಾ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಠಾಣೆಗೆ ನುಗ್ಗಿ ಪೊಲೀಸ್‌ ಅಧಿಕಾರಿಯನ್ನ ಹಿಗ್ಗಾಮುಗ್ಗ ಥಳಿಸಿ, ಮೇಲಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಠಾಣೆಯ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಗ್ರಾಮಸ್ಥರು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಿಹಾರ್‌ ಜೈಲಿನಿಂದ ಬಂದು ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾದ ಮನೀಶ್ ಸಿಸೋಡಿಯಾ

    ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಶುಕ್ರವಾರ ಮಧ್ಯಾಹ್ನ ಮಗುವನ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ಅತ್ಯಾಚಾರ ಎಸಗಿದ ನಂತರ ಸಮೀಪದಲ್ಲಿ ವಾಸಿಸುವ ಕುಟುಂಬಸ್ಥರು ದೂರು ನೀಡಿದ್ದು, ಎಸ್‌ಐ ಭೂಪೇಂದ್ರ ರಾಹುವಾಸ್ ಪೊಲೀಸ್ ಠಾಣೆಯಲ್ಲಿ (Rahuwas Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ಸಾವು, 60 ಮಂದಿಗೆ ಗಾಯ

    ಸದ್ಯ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಬಜರಂಗ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ- 6 ಗ್ಯಾರಂಟಿ ಘೋಷಿಸಿದ ತೆಲಂಗಾಣ ಕಾಂಗ್ರೆಸ್

    ಪ್ರತಿಭಟನಾ ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ (BJP MP) ಕಿರೋಡಿ ಲಾಲ್‌ ಮೀನಾ ಮಾತನಾಡಿ, ಪುಟ್ಟ ದಲಿತ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದ ನಂತರ ಜನ ರೊಚ್ಚಿಗೆದ್ದಿದ್ದಾರೆ. ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ. ಸಂತ್ರಸ್ತ ಮಗುವಿನ ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ಸಂತ್ರಸ್ತ ಮಗುವಿನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

  • ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

    ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

    ಜೈಪುರ: ʻ10 ವರ್ಷದವಳಿದ್ದಾಗ ನನ್ನನ್ನ ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ ಮಾಡಿ ಕೋಟಿಗಟ್ಟಲೇ ಸಂಪಾದಿಸಿದ್ರು. ನಾನೀಗ ನೊಂದಿದ್ದೇನೆ, ನನಗೆ ನ್ಯಾಯ ಕೊಡಿಸಿ..ʼ ವೇಶ್ಯಾವಾಟಿಕೆ ಜಾಲಕ್ಕೆ ಸಿಕ್ಕಿ ನರಳುತ್ತಿದ್ದ ಸಂತ್ರಸ್ತೆಯೊಬ್ಬಳ ಕೂಗು ಇದಾಗಿದೆ.

    ಹೌದು. ರಾಜಸ್ಥಾನದ (Rajasthan) ಬಿಲ್ವಾರದಲ್ಲಿ 10 ವರ್ಷಗಳ ಹಿಂದೆ ಮಾರಾಟವಾಗಿ ವೇಶ್ಯಾವಾಟಿಕೆ ದಂಧೆಗೆ ಸಿಲುಕಿದ್ದ ಹುಡುಗಿಯೊಬ್ಬಳು (Girl) 8-9 ವರ್ಷಗಳ ಬಳಿಕ ತನ್ನ ಕರಾಳ ಕತೆಯನ್ನು ಹೇಳಿಕೊಂಡಿದ್ದಾಳೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ವೀಡಿಯೋ ಮಾಡಿಬಿಟ್ಟಿರುವ ಸಂತ್ರಸ್ತೆ ತನ್ನನ್ನು ರಕ್ಷಿಸುವಂತೆ ಪೊಲೀಸರಿಗೆ ಕೇಳಿಕೊಂಡಿದ್ದಾಳೆ.

    ಸಂತ್ರಸ್ತೆ ವೀಡಿಯೋದಲ್ಲಿ ಹೇಳಿರುವುದೇನು?
    ʻಹಲೋ ನಾನು ಸ್ವಂತ ಇಚ್ಛೆಯ ಮೇಲೆ ಈ ವೀಡಿಯೋ ಮಾಡುತ್ತಿದ್ದೇನೆ. ನಾನು 10 ವರ್ಷದವಳಿದ್ದಾಗ ಮಾಧೋಪುರದಲ್ಲಿ ನನ್ನನ್ನು ಮಾರಾಟ ಮಾಡಿದರು. 11ನೇ ವರ್ಷದಲ್ಲಿ ಬಲವಂತವಾಗಿ ನನ್ನನ್ನ ವೇಶ್ಯಾವಾಟಿಕೆಗೆ ತಳ್ಳಿದರು. ಒಂದೆರಡು ವರ್ಷ ಮಾಧೋಪುರದಲ್ಲಿ ಇಟ್ಟುಕೊಂಡು ನಂತರ ನನ್ನನ್ನು ಬೇರೆ ಸ್ಥಳಕ್ಕೆ ಮಾರಾಟ ಮಾಡಿದರು. ಇಲ್ಲಿನ ಡಿಯೋಲಿ ನಗರದಲ್ಲಿ ಕಿಶನ್‌ ಎಂಬ ವ್ಯಾಪಾರಿ 20 ಲಕ್ಷ ರೂ.ಗೆ ನನ್ನನ್ನು ಖರೀದಿಸಿ 8-9 ವರ್ಷಗಳ ಕಾಲ ನನ್ನನ್ನು ಬಳಸಿಕೊಂಡು ವ್ಯಾಪಾರ ಮಾಡಿಕೊಂಡ.

    ನಂತರ ಜೈಪುರ, ಮುಂಬೈಗೆ (Mumbai) ಮಾರಾಟ ಮಾಡಿದ. ಅಲ್ಲಿಯೂ ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೆ ಶಂಭು ಮತ್ತು ಪ್ರೇಮ್ ಎಂಬ ಇಬ್ಬರು ಕಾಮುಕರು ನನಗೆ ಸಾಕಷ್ಟು ಹಿಂಸೆ ನೀಡಿದರು. ನನಗಷ್ಟೇ ಅಲ್ಲದೇ ಇತರ ಹೆಣ್ಣುಮಕ್ಕಳನ್ನೂ ಹಿಂಸಿಸುತ್ತಿದ್ದರು. ಬೇರೆ ಬೇರೆ ಕಡೆ ವ್ಯಾಪಾರ ಮಾಡುವಂತೆ ಒತ್ತಾಯ ಮಾಡಿದ್ದರು. ಆದರೂ ನಾನು ಹಿಂಸೆಯನ್ನೆಲ್ಲಾ ಸಹಿಸಿಕೊಂಡು ಕೋಟ್ಯಂತರ ರೂಪಾಯಿ ಸಂಪಾದಿಸಿಕೊಟ್ಟೆ. ಆದರೀಗ ನಾನು ಇಂತಹ ದೌರ್ಜನ್ಯಗಳಿಂದ ಬೇಸತ್ತಿದ್ದೇನೆ, ತುಂಬಾ ನೊಂದಿದ್ದೇನೆ. ಅವರಿಂದ ನಾನು ತಪ್ಪಿಸಿಕೊಂಡು ಈ ವೀಡಿಯೋ ಮಾಡುತ್ತಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದಾಳೆ.

    ಮುಂದುವರಿದು ಆ ನೀಚರು ಎಷ್ಟೋ ಹೆಣ್ಣುಮಕ್ಕಳ ಜೀವನ ನಾಶ ಮಾಡಿದ್ದಾರೆ. ನಾನು ನನ್ನ ಬಾಲ್ಯವನ್ನು ಕಳೆದುಕೊಂಡಿದ್ದೇನೆ. ಆದ್ದರಿಂದ ಮತ್ತೆ ನನ್ನ ಊರಿಗೆ ವಾಪಸ್‌ ಹೋಗುವುದಿಲ್ಲ ಎಂದು ಅಲವತ್ತುಕೊಂಡಿದ್ದಾಳೆ.

    POLICE JEEP

    ವೀಡಿಯೋ ಆಧರಿಸಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (Commission for Protection of Child Rights) ಆಯುಕ್ತರು ಬಿಲ್ವಾರಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಈ ವೇಳೆ 27 ಮಕ್ಕಳು ನಾಪತ್ತೆಯಾಗಿರುವುದು ಕಂಡುಬಂದಿದೆ.

    ಇನ್ನೂ ವೀಡಿಯೋ ಆಧರಿಸಿ ಕೇಸ್‌ ದಾಖಲಿಸಿಕೊಂಡಿರುವ ಬಿಲ್ವಾರ ಎಸ್ಪಿ ಆದರ್ಶ್‌ ಸಿಧು, ಸಂತ್ರಸ್ತೆಯನ್ನು ಪತ್ತೆಮಾಡಲಾಗಿದೆ. ಬಾಲಕಿ ವೀಡಿಯೋದಲ್ಲಿ ಮಾಡಿರುವ ಆರೋಪಗಳ ಮೇರೆಗೆ ಕೇಸ್‌ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆಕೆಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಹೇಳಿದ್ದಾರೆ.