Tag: ರಾಜಸ್ಥಾನ ಶಾಸಕ

  • ಬೆಂಗಳೂರಿನ ಬಟ್ಟೆ ವ್ಯಾಪಾರಿ ಈಗ ರಾಜಸ್ಥಾನದಲ್ಲಿ ಶಾಸಕ

    ಬೆಂಗಳೂರಿನ ಬಟ್ಟೆ ವ್ಯಾಪಾರಿ ಈಗ ರಾಜಸ್ಥಾನದಲ್ಲಿ ಶಾಸಕ

    ನವದೆಹಲಿ: ನಗರದಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಈಚೆಗೆ ನಡೆದ ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ.

    ರಾಜಾಜಿನಗರ ನಿವಾಸಿ ಲಾಡೂಲಾಲ್‌ ಪಿಟ್ಲಿಯಾ (52) (Ladulal Pitliya) ಎಂಬ ವ್ಯಕ್ತಿ ಬೆಂಗಳೂರಿನ (Bengaluru) ಚಿಕ್ಕಪೇಟೆಯಲ್ಲಿ ಜವಳಿ ಅಂಗಡಿ ನಡೆಸುತ್ತಿದ್ದರು. ಈಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ‌ ರಾಜಸ್ಥಾನದ ಸಹರಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

    ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿದಿದ್ದ ರಾಜೇಂದ್ರ ತ್ರಿವೇದಿ ವಿರುದ್ಧ ಲಾಡೂಲಾಲ್‌ ಕಣಕ್ಕಿಳಿದಿದ್ದರು. ಬರೋಬ್ಬರಿ 1.17 ಲಕ್ಷ ಮತ ಪಡೆದು, 54,684 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಇದನ್ನೂ ಓದಿ: 3 ರಾಜ್ಯಗಳಲ್ಲಿ ಮೋದಿ ಪಡೆಗೆ ಭರ್ಜರಿ ಗೆಲುವು – ಗ್ಯಾರಂಟಿಯಿಂದಲೇ ತೆಲಂಗಾಣದಲ್ಲಿ ಗೆದ್ದ ಕಾಂಗ್ರೆಸ್

    ‘2018 ರ ರಾಜಸ್ಥಾನ ಚುನಾವಣೆಯಲ್ಲಿ ಪಿಟ್ಲಿಯಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಇದು ಬಿಜೆಪಿಗೆ ಸಮಸ್ಯೆಯಾಗಿ ಪರಿಣಮಿಸಿತು. ಪಿಟ್ಲಿಯಾ ಅವರಿಗೆ ಮನವರಿಕೆ ಮಾಡಲು ನಾನು ಅವರ ಮನೆಗೆ ಭೇಟಿ ನೀಡಿದ್ದು ನೆನಪಿದೆ. ನಮ್ಮ ಮನವಿಗೆ ಆಗ ಅವರು ಒಪ್ಪಲಿಲ್ಲ’ ಎಂದು ಶಾಸಕ ಎಸ್‌.ಸುರೇಶ್‌ ಕುಮಾರ್‌ ನೆನಪಿಸಿಕೊಂಡಿದ್ದಾರೆ. ಆ ಚುನಾವಣೆಯಲ್ಲಿ ಪಿಟ್ಲಿಯಾ ಅವರು 30,573 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದರು.

    ರಾಜಾಜಿನಗರದಲ್ಲಿ ಈಗ ಇಬ್ಬರು ಶಾಸಕರಿದ್ದಾರೆ. ಒಬ್ಬರು ಹಾಜರ್, ಒಬ್ಬರು ಗೈರು ಎಂದು ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹಾಸ್ಯ ಮಾಡಿದ್ದಾರೆ.

    ಪಿಟ್ಲಿಯಾ ಅವರು ರಾಜಾಜಿನಗರ 2ನೇ ಬ್ಲಾಕ್‌ನ ಜುಗನಹಳ್ಳಿಯಲ್ಲಿ ವಾಸವಾಗಿದ್ದರು. ಅವರಿಗೆ ಅಲ್ಲಿ ದೊಡ್ಡ ಮನೆ ಇದೆ. ಅವರು ಜವಳಿ ವ್ಯಾಪಾರದಲ್ಲಿದ್ದಾರೆ. ಅವರ ಮಕ್ಕಳು ಚಿಕ್ಕಪೇಟೆಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಗನ ಹಂತಕರನ್ನು ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಸೇಡು – 7 ಬಾರಿ ಗೆದ್ದಿದ್ದ ‘ಕೈ’ ಶಾಸಕನ ಮಣಿಸಿದ ಬಿಜೆಪಿ ಅಭ್ಯರ್ಥಿ

  • ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ಮಸಿ ಬಳಿದ ದುಷ್ಕರ್ಮಿಗಳು!

    ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ಮಸಿ ಬಳಿದ ದುಷ್ಕರ್ಮಿಗಳು!

    ನವದೆಹಲಿ: ರಾಜಸ್ಥಾನದ ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ ಮೇಲೆ ದೆಹಲಿಯ ರಸ್ತೆಯಲ್ಲಿ ಮಸಿ ಬಳಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಂತ್ರಸ್ತೆ ತನ್ನ ತಾಯಿಯೊಂದಿಗೆ ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಶಾಯಿಯ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

    ಕೃತ್ಯ ನಡೆದ ತಕ್ಷಣ ಆಕೆಯನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದುಕೊಂಡು ಹೋಗಲಾಯಿತು. ಮೇಲ್ನೋಟಕ್ಕೆ ದುಷ್ಕರ್ಮಿಗಳು ನೀಲಿ ಬಣ್ಣದ ಶಾಯಿಯನ್ನು ಎರಚಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅದರ ಬಗ್ಗೆ ಕೂಲಂಕಷವಾಗಿ ಪರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು ನಗರಸಭೆ ಕಲುಷಿತ ನೀರಿನಿಂದ ಸರಣಿ ಸಾವು – ಘೋಷಣೆಗೆ ಸೀಮಿತವಾದ ಪರಿಹಾರ

    ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಹಿಳೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಲು ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

    ಹಿನ್ನೆಲೆ ಏನು?
    ಕಳೆದ ವರ್ಷ ಜನವರಿ 8 ರಿಂದ ಈ ವರ್ಷ ಏಪ್ರಿಲ್ 17 ರ ವರೆಗೆ ರಾಜಸ್ಥಾನದ ಸಚಿವ ಮಹೇಶ್ ಜೋಶಿಯ ಪುತ್ರ ರೋಹಿತ್ ಜೋಶಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಮದುವೆಯಾಗುವುದಾಗಿ ಭರವಸೆಯನ್ನೂ ನೀಡಿದ್ದ. ಹಲವು ಬಾರಿ ಅಪಹರಣ ಹಾಗೂ ಬ್ಲ್ಯಾಕ್‌ಮೇಲ್ ಮಾಡಿರುವುದಾಗಿಯೂ ಸಂತ್ರಸ್ತೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ

    ಈ ಬಗ್ಗೆ ದೆಹಲಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ತಿಂಗಳು ಪೊಲೀಸರ ತಂಡ ರೋಹಿತ್ ಜೋಶಿಯನ್ನು ಬಂಧಿಸಲು ಜೈಪುರಕ್ಕೆ ತೆರಳಿತ್ತು. ಆದರೆ ಸಚಿವರ ಪುತ್ರ ತಮ್ಮ ಮನೆಯಲ್ಲಿ ಪತ್ತೆಯಾಗಿರಲಿಲ್ಲ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಸಚಿವರ ಮಗನನ್ನು ಉಳಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.