ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ (Varamahalakshmi Festival) ಅರಿಶಿಣ ಕುಂಕುಮ ಪಡೆಯಲು ಹೋದ ವೇಳೆ ಅಪಘಾತಕ್ಕೀಡಾಗಿ ನವವಿವಾಹಿತೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಲಗ್ಗೆರೆ (Laggere) ಬಳಿ ನಡೆದಿದೆ.
ಗೀತಾ (23) ಸಾವಿಗೀಡಾದ ನವವಿವಾಹಿತೆ. ಗೀತಾ ಎರಡೂವರೆ ತಿಂಗಳ ಹಿಂದಷ್ಟೇ ಸುನೀಲ್ ಎಂಬವರನ್ನು ವಿವಾಹವಾಗಿದ್ದರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲೆಂದು ನಂದಿನಿ ಲೇಔಟ್ನಲ್ಲಿರುವ ನಾದಿನಿ ಮನೆಗೆ ದಂಪತಿ ಹೊರಟಿದ್ದರು. ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ. ಇದನ್ನೂ ಓದಿ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ
ಬೆಂಗಳೂರು: ಮಹಾಮಾರಿ ಕೊರೊನಾ(Corona) ರಾಜ್ಯಕ್ಕೆ ಮತ್ತೆ ವಕ್ಕರಿಸಿಕೊಂಡಿದ್ದು, ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೋವಿಡ್ ಪಾಸಿಟಿವ್ ಕಾಣಿಸಿದೆ.
ಮಲ್ಲೇಶ್ವರಂನ(Malleshwaram) 45 ವರ್ಷದ ವ್ಯಕ್ತಿಗೆ ಹಾಗೂ ರಾಜಾಜಿನಗರದ(Rajajinagara) 38 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇವರಿಬ್ಬರಿಗೂ ಕೋವಿಡ್ ಕಾಣಸಿಕೊಂಡಿದ್ದು, ಇಬ್ಬರನ್ನು ಹೋಂ ಐಸೂಲೇಷನ್ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ
ಬೆಂಗಳೂರಿನಲ್ಲಿ ವೈಟ್ಫೀಲ್ಡ್ನ(Whitefield) 84 ವರ್ಷದ ವೃದ್ಧ ಮೇ 17ರಂದು ಕೊರೊನಾಗೆ ಬಲಿಯಾಗಿದ್ದಾರೆ. ಮೇ 13ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೊರೊನಾಗೆ ತುತ್ತಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ಇವೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಒಟ್ಟು ಮೂರು ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್(Covid Positive) ಬಂದಿದೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ
ಶನಿವಾರ ರಾಜ್ಯದಲ್ಲಿ 108 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಐವರಿಗೆ ಕೋವಿಡ್ ಬಂದಿದೆ. ಶನಿವಾರ ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಒಂದು ಕೋವಿಡ್ ಕೇಸ್ ಪತ್ತೆಯಾಗಿತ್ತು.
ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಮಾಹಿತಿ ಹಕ್ಕು ಪರಿಣಾಮಕಾರಿಯಾದ ಅಸ್ತ್ರವಾಗಿದ್ದು ಇದು ಜನತಾ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್ ಕುಮಾರ್ (Dr.Harish Kumar) ಹೇಳಿದರು.
ರಾಜಾಜಿನಗರದ ಎಸ್.ನಿಜಲಿಂಗಪ್ಪ ಕಾಲೇಜಿನಲ್ಲಿ (S Nijalingappa College) ಏರ್ಪಡಿಸಿದ್ದ `ಮಾಹಿತಿ ಹಕ್ಕು ಕಾಯ್ದೆಯ ಮಹತ್ವ’ ವಿಷಯದ ಕುರಿತ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತದ ಪ್ರಜಾತಂತ್ರ ಸುಲಭವಾಗಿ ದಕ್ಕಿದ್ದಲ್ಲ ಅದರ ಹಿಂದೆ ಸುದೀರ್ಘ ಹೋರಾಟದ ಕಥಾನಕವೇ ಅಡಗಿದೆ ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಇನ್ಮುಂದೆ ಅಸ್ಸಾಮಿ ಭಾಷೆಯಲ್ಲೇ ಸರ್ಕಾರಿ ಆದೇಶ, ಸುತ್ತೋಲೆ: ಸಿಎಂ ಹಿಮಂತ ಬಿಸ್ವ ಶರ್ಮಾ
ನಾವು ಪ್ರಜಾತಂತ್ರ ರೂಪಿಕೆಯ ಜೊತೆಯಲ್ಲಿಯೇ ಸಾಮಾಜಿಕ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಳ್ಳುವ ಮುಖಾಂತರ ಅತ್ಯಂತ ಕಟ್ಟ ಕಡೆಯ ಪ್ರಜೆಗೂ ಪ್ರಭುತ್ವವನ್ನು ಸಮಾನವಾಗಿ ಪ್ರಶ್ನಿಸುವ ಅವಕಾಶವನ್ನು ನೀಡಿದ್ದೇವೆ. ಜನತೆ ಮಾಹಿತಿ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಬಳಸಿ ಆಡಳಿತದ ಆಗು ಹೋಗುಗಳಲ್ಲಿ ಭಾಗವಹಿಸಿ ಪ್ರಜಾತಂತ್ರವನ್ನು ಗಟ್ಟಿಗೊಳಿಸಬೇಕು. ಇದರಲ್ಲಿ ವಿದ್ಯಾರ್ಥಿಗಳ ಹಾಗೂ ಯುವಜನರ ಪಾತ್ರ ಹೆಚ್ಚಿದೆ ಎಂದು ತಿಳಿಸಿದರು.
ಬೆಂಗಳೂರು: ಪಾರ್ಕ್ನಲ್ಲಿ ಮಲಗಿದ್ದ ವೇಳೆ ಬೃಹತ್ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ರಾಜಾಜಿನಗರದ (Rajajinagar) ನವರಂಗ್ (Navarang) ಬಳಿ ಇರುವ ಪಾಲಿಕೆ ಪಾರ್ಕ್ನಲ್ಲಿ ನಡೆದಿದೆ.
ಬೆಂಗಳೂರು: ಮೊಬೈಲ್ ನೋಡುತ್ತಾ ಮನೆ ಮುಂದೆ ಕೂತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ 2 ಕಾಲುಗಳು ತುಂಡಾದ ಘಟನೆ ರಾಜಾಜಿನಗರದ (Rajajinagar) ಮಂಜುನಾಥ ನಗರದಲ್ಲಿ (Manjunath Nagar) ನಡೆದಿದೆ.
ಸದ್ಯ ಗಾಯಾಳು ಮಂಜುವನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ತಂದಿಕ್ಕುವ ಕೆಲಸ ಮಾಡ್ತಿದ್ದಾರೆ: ಅಶೋಕ್ ಕಿಡಿ
ಬೆಂಗಳೂರು: ತೆರಿಗೆ ವಂಚನೆ (Tax Evasion) ಹಿನ್ನೆಲೆ ಬೆಂಗಳೂರಿನ (Bengaluru) ಫುಡ್ ಇಂಡಸ್ಟ್ರಿ (Food Industry) ಮೇಲೆ ಆದಾಯ ತೆರಿಗೆ ಇಲಾಖೆ (IT) ದಾಳಿ (Raid) ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್ಗಳ ಮೇಲೆ ಐಟಿ ದಾಳಿ ನಡೆಸಿದ್ದು, ಒಟ್ಟು ನಗರದ ಎರಡು ಕಡೆ ದಾಳಿ ಮಾಡಿದೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ದಾಳಿ ನಡೆಸಿದ್ದಾರೆ. ಪಿಎಸ್ ಆಗ್ರೋ ಫುಡ್ ಎಲ್ಎಲ್ಪಿ ಕಾರ್ಖಾನೆ ಹಾಗೂ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ
ಬೆಂಗಳೂರು: ನಗರದಲ್ಲಿ ರಸ್ತೆಗಳು (Road) ಪದೇ ಪದೇ ಕುಸಿಯುತ್ತಲೇ ಇವೆ. ಒಂದು ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಾಂತರವಾಗುತ್ತಿದ್ದು, ಬಸವೇಶ್ವರ ನಗರದ (Basaveshwara Nagar) ರಸ್ತೆ ಕುಸಿದಿದೆ.
ರಾಜಾಜಿನಗರ (Rajajinagar) ವಿಧಾನಸಭಾ ಕ್ಷೇತ್ರದ ಬಸವೇಶ್ವರ ನಗರ, ವಾರ್ಡ್ ನಂಬರ್ 100ರಲ್ಲಿ ರಸ್ತೆ ಕುಸಿದು, ಬೃಹತ್ ಗುಂಡಿ ಬಿದ್ದಿದೆ. ಮೊನ್ನೆ ಸಂಜೆಯೇ ಈ ರಸ್ತೆ ಕುಸಿದು ಗುಂಡಿ ಬಿದ್ದಿದ್ದು, ಸ್ಥಳೀಯರು ದೊಡ್ಡ ದೊಡ್ಡ ಕಲ್ಲುಗಳನ್ನು ಹಾಕಿ ಗುಂಡಿ ಮುಚ್ಚಿದ್ದರು. ಇದೀಗ ಸುಮಾರು 7 ಅಡಿ ಉದ್ದ ರಸ್ತೆ ಕುಸಿದ ಪರಿಣಾಮ, ಪೈಪ್ ಲೈನ್ನ ಪೈಪ್ ಕೂಡ ಹೊಡೆದು ಹೋಗಿದೆ. ಜೊತೆಗೆ ಸುಮಾರು 4 ಅಡಿಯಷ್ಟು ಆಳದ ಗುಂಡಿ ಬಿದ್ದಿದೆ. ಇದನ್ನೂ ಓದಿ: ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ಮುಖಕ್ಕೆ ಆ್ಯಸಿಡ್ ಎರಚಿದ ಪತ್ನಿ!
ಗುಂಡಿ ಬಿದ್ದು ಒಂದೂವರೆ ದಿನವಾದ್ರೂ ಸ್ಥಳಕ್ಕೆ ಸುಳಿಯದ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳು ಪಬ್ಲಿಕ್ ಟಿವಿಯ ವರದಿ ನಂತರ ಸ್ಥಳಕಾಗಮಿಸಿದ್ರು. ಜಲಮಂಡಳಿಯ ಸಿಬ್ಬಂದಿ ದುರಸ್ತಿ ಕಾರ್ಯ ಮಾಡಿ, ಗುಂಡಿಯನ್ನು ಮುಚ್ಚುವ ಪ್ರಯತ್ನ ಮಾಡಿ, ನೀರನ್ನು ಹೊರಹಾಕುವ ಕೆಲಸ ಮಾಡಿದ್ರು. ಈ ಗುಂಡಿ ಪಕ್ಕದಲ್ಲೇ ಶಾಲೆಯಿದ್ದು ಮಕ್ಕಳು, ಪೋಷಕರು ಪರದಾಡಿದ್ರು. ಇನ್ನೊಂದು ದೊಡ್ಡ ಗುಂಡಿ ಶಾಲೆಯ ಮುಂಭಾಗದಲ್ಲಿ ಇದ್ದು, ಎರಡು ತಿಂಗಳಿನಿಂದ ಹಾಗೆ ಇದೆ ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್
Live Tv
[brid partner=56869869 player=32851 video=960834 autoplay=true]
ಬೆಂಗಳೂರಿನ ರಾಜಾಜಿನಗರದ (Rajajinagar) ಡಾ.ರಾಜ್ ಕುಮಾರ್ ರಸ್ತೆ ಅಂದಾಕ್ಷಣ ಅಲ್ಲಿ ರವಿಚಂದ್ರನ್ ಮನೆ ನೆನಪಾಗುತ್ತದೆ. ಖ್ಯಾತ ನಿರ್ಮಾಪಕರೂ, ರವಿಚಂದ್ರನ್ ಅವರ ತಂದೆಯವರೂ ಆದ ವೀರಸ್ವಾಮಿ (Veeraswamy) ಅವರಿಂದ ರವಿಚಂದ್ರನ್ ಪುತ್ರರ ತನಕ ಈ ಮನೆಯೇ ಕುಟುಂಬಕ್ಕೆ ನೆರಳಾಗಿದೆ. ಒಂದು ಕಾಲದಲ್ಲಿ ಅದು ಸಿನಿಮಾ ಇಂಡಸ್ಟ್ರಿಯ ಪ್ರಮುಖ ಸ್ಥಳವೂ ಆಗಿತ್ತು. ಅನೇಕ ಸಿನಿದಿಗ್ಗಜರು ಆ ಮನೆಗೆ ಬಂದಿದ್ದೂ ಇದೆ. ಇಂತಹ ಮನೆಯನ್ನು ರವಿಚಂದ್ರನ್ ತೊರೆದಿದ್ದಾರೆ.
ರವಿಚಂದ್ರನ್ (Ravichandran) ಆ ಮನೆಯಲ್ಲಿ ಇಲ್ಲ ಎಂಬ ವಿಷಯ ವಾರದಿಂದ ಗಾಂಧಿನಗರದಲ್ಲಿ ಗಿರಿಕಿ ಹೊಡೆಯುತ್ತಿತ್ತು. ಕೆಲವರು ಆ ಮನೆಯನ್ನು ಮಾರಿದರು ಎಂದು ಹೇಳಿದರೆ, ಇನ್ನೂ ಕೆಲವರು ವಾಸ್ತು ಕಾರಣಕ್ಕಾಗಿ ಬಿಟ್ಟಿದ್ದಾರೆ ಎಂದೂ ಮಾತನಾಡಿಕೊಳ್ಳುತ್ತಿದ್ದರು. ರಿಪೇರಿ ಕಾರಣಕ್ಕಾಗಿ ಬೇರೆ ಮನೆಗೆ ಶಿಫ್ಟ್ ಆಗಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ, ರವಿಚಂದ್ರನ್ ಅವರೇ ನಿನ್ನೆ ಬನಾರಸ್ ಸಿನಿಮಾದ ಟೀಸರ್ ಬಿಡುಗಡೆಗೂ ಮುನ್ನ, ಕೆಲ ಮಾಧ್ಯಮ ಸ್ನೇಹಿತರ ಮುಂದೆ ವಾಸ್ತವ ತೆರೆದಿಟ್ಟಿದ್ದಾರೆ.
ಅಸಲಿಯಾಗಿ ರವಿಚಂದ್ರನ್ ಸಂಪೂರ್ಣವಾಗಿ ಮನೆ ತೊರೆದಿಲ್ಲ. ಆದರೆ, ಹೊಸ ಮನೆಗೆ ಶಿಫ್ಟ್ ಆಗಿದ್ದು ನಿಜ ಎಂದಿದ್ದಾರೆ. ಮಗನ ಮದುವೆಯ ನಂತರ ಹೊಸ ಮನೆಗೆ ಹೋಗುವುದು ಎಂದು ಮೊದಲೇ ನಿರ್ಧಾರವಾಗಿತ್ತು. ಹಾಗಾಗಿ ಹೊಸ ಮನೆಗೆ ಹೋಗಿದ್ದೇವೆ. ಹಳೆ ಮನೆಯಲ್ಲೂ ನಾನು ಇರುತ್ತೇನೆ. ಸಿನಿಮಾ ಸಂಬಂಧಿ ಕೆಲಸಗಳನ್ನು ಇಲ್ಲಿಯೇ ಮಾಡುತ್ತಿದ್ದೇನೆ. ಹೊಸಕೆರೆ ಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಸದ್ಯ ರವಿಚಂದ್ರನ್ ವಾಸವಾಗಿದ್ದಾರೆ.
ಹೊಸ ಮನೆಗೆ ಶಿಫ್ಟ್ ಆಗಬೇಕು ಎನ್ನುವುದು ಹಲವು ವರ್ಷಗಳಿಂದ ನಡೆಯುತ್ತಲೇ ಇತ್ತು. ಅಮ್ಮನಿಗಾಗಿ ಹಳೆ ಮನೆಯಲ್ಲೇ ಇದ್ದೆವು. ಮನೋರಂಜನ್ (Manoranjan) ಮದುವೆ ನಂತರ ಹೋಗುವ ಕುರಿತು ಪ್ಲ್ಯಾನ್ ಮಾಡಲಾಗಿತ್ತು. ಅದರಂತೆಯೇ ಇದೀಗ ಹೊಸ ಮನೆಗೆ ಶಿಫ್ಟ್ ಆಗಿರುವುದಾಗಿ ರವಿಚಂದ್ರನ್ ತಿಳಿಸಿದ್ದಾರೆ. ಈ ಮೂಲಕ ಹರಡಿರುವ ಗಾಸಿಪ್ ಗೆ ತೆರೆ ಎಳೆದಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಜ್ಯದ ಬೆಂಗಳೂರು, ಕೋಲಾರ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ, ಗುಲ್ಬರ್ಗ ಸೇರಿದಂತೆ ಗೋವಾ ಕೇರಳದಲ್ಲೂ ಪ್ರಕಾಸ್ ತನ್ನ ಕೈಚಳಕ ತೋರಿಸಿದ್ದು, ಇದುವರೆಗೂ ಸುಮಾರು 20ಕ್ಕೂ ಹೆಚ್ಚು ಬಾರಿ ಜೈಲುಸೇರಿ ಹೊರಬಂದಿದ್ದಾನೆ. 1978ರಲ್ಲಿ ಆರೋಪಿ ತನ್ನ ಹತ್ತನೇ ವಯಸ್ಸಿಗೆ ಕಳ್ಳತನಕ್ಕೆ ಇಳಿದಿದ್ದನು. ಆರೋಪಿ ಕೈಚಳಕಕ್ಕೆ ಆತನ ಸಹೋದರ ವರದರಾಜ್, ಮಕ್ಕಳಾದ ಬಾಲರಾಜ್, ಮಿಥುನ್, ಅಳಿಯ ಜಾನ್ ಕೂಡ ಸಾಥ್ ನೀಡಿದ್ದಾರೆ. ಕಳೆದ ಆಗಸ್ಟ್ 22 ರಂದು ರಾಜಾಜಿನಗರದ ಮನೆಕಳ್ಳತನ ಮಾಡಿ ಪ್ರಕಾಶ್ ಸಿಕ್ಕಿಬಿದ್ದಿದ್ದಾನೆ. ನಿಜಕ್ಕೂ ಈತನ ಕ್ರಿಮಿನಲ್ ಹಿಸ್ಟರಿ ಎಲ್ಲರನ್ನೂ ಕೂಡ ಬೆಚ್ಚಿ ಬೀಳಿಸುವಂತಿದೆ.
* 1978-1986 (100 ಮನೆಗಳವು ಪ್ರಕರಣ)
ಕೇರಳದ ಕೊಟ್ಟಾಯಂ ನಲ್ಲಿ 2.5 ಕೆಜಿ ಚಿನ್ನ ಕಳವು, ಶೇಷಾದ್ರಿಪುರಂ ಚಿನ್ನದ ಅಂಗಡಿಯಲ್ಲಿ ಗೋಡೆ ಕೊರೆದು ಎರಡೂವರೆ ಚಿನ್ನ ಕಳವು, ಮಾರ್ಕೆಟ್ನ ಸೇಠ್ ಅಂಗಡಿ ಒಡೆದು 4 ಕೆಜಿ ಚಿನ್ನ 20 ಕೆಜಿ ಬೆಳ್ಳಿ ಕಳ್ಳತನ ಮಾಡಿದ್ದಾನೆ. ಪ್ರಕಾಶನ ಕೃತ್ಯಕ್ಕೆ ಆಗಿನ ಸಹಚರರಾದ ಜೋಸೆಫ್, ಅನಂದನ್, ಬಾಷಾ ಸಾಥ್ ನೀಡಿದ್ದರು. ಇದನ್ನೂ ಓದಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಮುರುಘಾ ಶರಣರ ವಿರುದ್ಧ ಕೇಸ್
* 1989-1990 (ಮೈಸೂರು)
ವೈರ್ ಮುಡಿ ಹಾಗೂ ನಾಗೇಶ್ ಎಂಬ ಸಹಚರರ ಜೊತೆ ಸೇರಿ 1989 ಮೈಸೂರಲ್ಲಿ 20 ಕಡೆ ಮನೆಗಳ್ಳತನ ಮಾಡಿದ್ದ. 1992 ನಾಗೇಶನ ಜೊತೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎರಡು ಚಿನ್ನದ ಅಂಗಡಿ ಒಡೆದು 17 ಕೆಜಿ ಚಿನ್ನಾಭರಣ ಕಳವು ಮಾಡಿದ್ದ. 1992 ರಲ್ಲಿ ಕಂಟ್ ಮಂಡೂರಲ್ಲಿ 7 ಕೆಜಿ ಚಿನ್ನಾಭರಣ ಹಾಗೂ ಶಿವಮೊಗ್ಗದ ಫೈನಾನ್ಸ್ ಕಚೇರಿಯಿಂದ 3 ಕೋಟಿ ನಗದು ಕದ್ದಿದ್ದನು. 1997 ರಲ್ಲಿ ಗೋವಾದಲ್ಲಿ 7 ಕೆಜಿ ಚಿನ್ನಾಭರಣ ಕಳವು ಮಾಡಿದ್ದನು.
2006ರಲ್ಲಿ ಮಕ್ಕಳಾದ ಮಿಥುನ್ ಹಾಗೂ ಬಾಲರಾಜ್ ಜೊತೆ ಕೈಚಳಕ ಆರಂಭಿಸಿದ್ದ. ಅಳಿಯ ಮಕ್ಕಳ ಜೊತೆ ಸೇರಿಕೊಂಡು ಕಳೆದ ಹದಿನಾರು ವರ್ಷಗಳಿಂದ ಕಳ್ಳತನ ಮಾಡಿದ್ದ. ಐಷಾರಾಮಿ ಮನೆಗಳು, ಜ್ಯುವೆಲರಿ ಶಾಪ್, ಫೈನಾನ್ಸ್ ಕಚೇರಿಗಳೇ ಈತನ ಟಾರ್ಗೆಟ್ ಆಗಿರುತ್ತಿತ್ತು. ಪ್ರತಿಬಾರಿ ಜೈಲಿಗೆ ಹೋದಾಗಲೂ ಆರೋಪಿ ಒಂದೊಂದು ಟೀಂ ಕಟ್ಟುತ್ತಿದ್ದನು.
Live Tv
[brid partner=56869869 player=32851 video=960834 autoplay=true]