Tag: ರಾಜಾಸ್ಥಾನ್ ರಾಯಲ್ಸ್

  • IPLನಲ್ಲಿ ಸೊನ್ನೆಗೆ ಔಟಾಗಿದ್ದಕ್ಕೆ ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ರು –  ರಾಸ್‌ ಟೇಲರ್‌ ರೋಚಕ ಅನುಭವ

    IPLನಲ್ಲಿ ಸೊನ್ನೆಗೆ ಔಟಾಗಿದ್ದಕ್ಕೆ ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ರು – ರಾಸ್‌ ಟೇಲರ್‌ ರೋಚಕ ಅನುಭವ

    ಮುಂಬೈ: ಐಪಿಎಲ್‌ ನಲ್ಲಿ ಸೊನ್ನೆ ರನ್‌ಗಲಿಗೆ ಔಟಾಗಿದ್ದಕ್ಕೆ ಫ್ರಾಂಚೈಸಿ ತಂಡದ ಮಾಲೀಕರೊಬ್ಬರು ಮೂರ್ನಾಲ್ಕು ಬಾರಿ ಕಪಾಳಕ್ಕೆ ಬಾರಿಸಿದ್ದರು ಎಂದು ನ್ಯೂಜಿಲ್ಯಾಂಡ್ ಫೇಮಸ್‌ ಕ್ರಿಕೆಟಿಗ ರಾಸ್ ಟೇಲರ್ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲಿ 2011ರ ಐಪಿಎಲ್ ಸೀಸನ್ ನಲ್ಲಿ ತಮಗೆ ಆದ ರೋಚಕ ಅನುಭವವನ್ನು ಬಹಿರಂಗಪಡಿಸಿದ್ದಾರೆ.

    ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಮಾಲಿಕರ ಪೈಕಿ, ಓರ್ವ ತಮಗೆ 3-4 ಬಾರಿ ಕಪಾಳ ಮೋಕ್ಷ ಮಾಡಿದ್ದರು ಎಂಬ ಅಘಾತಕಾರಿ ಅಂಶ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    “ಪಂಜಾಬ್ ಕಿಂಗ್ಸ್ ವಿರುದ್ಧ ಮೊಹಾಲಿ ಪಂದ್ಯದಲ್ಲಿ ಡಕ್ ಔಟ್ ಆದ ಬೆನ್ನಲ್ಲೇ ಫ್ರಾಂಚೈಸಿ ಮಾಲಿಕರೊಬ್ಬರು ಕಪಾಳಮೋಕ್ಷ ಮಾಡಿದ್ದರು ಎಂದು ಟೇಲರ್ ತಮ್ಮ ಹೊಸ ಆತ್ಮಚರಿತ್ರೆ ʻರಾಸ್ ಟೇಲರ್; ಬ್ಲಾಕ್ ಅಂಡ್‌ ವೈಟ್ʼ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

    195 ರನ್ ಗಳ ಚೇಸಿಂಗ್ ಸವಾಲು ಇತ್ತು, ನಾನು ಎಲ್ ಬಿಡಬ್ಲ್ಯೂಗೆ ಡಕ್ ಔಟ್ ಆದೆ, ನಾವು ಗುರಿಯ ಸಮೀಪ ಹೋಗಲು ಸಾಧ್ಯವಾಗಲಿಲ್ಲ ಎಂದು ಟೇಲರ್ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.

    ಪಂದ್ಯದ ಬಳಿಕ ಹೋಟೆಲ್‌ನ ಟಾಪ್‌ ಫ್ಲೋರ್‌ ಡ್ರೆಸ್ಸಿಂಗ್‌ ರೂಂ ನಲ್ಲಿದ್ದ ನನಗೆ ರಾಯಲ್ ಚಾಲೆಂಜರ್ಸ್ ನ ಮಾಲಿಕರ ಪೈಕಿ ಓರ್ವರು, ʻರಾಸ್ ಟೇಲರ್ ನಾವು ನಿಮಗೆ ಡಕ್ ಔಟ್ ಆಗುವುದಕ್ಕಾಗಿ ಮಿಲಿಯನ್ ಡಾಲರ್ಸ್ ಹಣ ನೀಡಿಲ್ಲ ಎಂದು 3-4 ಬಾರಿ ಕಪಾಳಕ್ಕೆ ಬಾರಿಸಿದ್ದರು ʼಎಂಬುದನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿಚ್ಚ ಸುದೀಪ್‌ಗೆ ಬ್ಯಾಟ್ ಗಿಫ್ಟ್ ಕೊಟ್ಟ ಜೋಸ್ ಬಟ್ಲರ್

    ಕಿಚ್ಚ ಸುದೀಪ್‌ಗೆ ಬ್ಯಾಟ್ ಗಿಫ್ಟ್ ಕೊಟ್ಟ ಜೋಸ್ ಬಟ್ಲರ್

    ಮುಂಬೈ: ಇಂಗ್ಲೆಂಡ್ ತಂಡದ ಕ್ರಿಕೆಟಿಗ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬ್ಯಾಟ್‌ವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

    2022ರ 15ನೇ ಆವೃತ್ತಿ ಐಪಿಎಲ್‌ನಲ್ಲಿ ತಾವು ಆಡಿದ್ದ ಬ್ಯಾಟ್ ಮೇಲೆ ಸಹಿ ಮಾಡಿ ಅದನ್ನು ಕಿಚ್ಚ ಸುದೀಪ್‌ಗೆ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಸುದೀಪ್ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಆಟವಾಡಿದ ಫೋಟೋವೊಂದನ್ನು ರಾಜಾಸ್ಥಾನ್ ರಾಯಲ್ಸ್ ತಂಡವು ಟ್ವೀಟ್‌ನಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಮುಂಬೈಗೆ 725 ರನ್‍ಗಳ ದಾಖಲೆಯ ಜಯ – ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 129 ವರ್ಷಗಳ ಬಳಿಕ ರೆಕಾರ್ಡ್ ಬ್ರೇಕ್

    ಇದಕ್ಕೆ ಉತ್ಸಾಹದಿಂದಲೇ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್ ವಿಶೇಷ ವೀಡಿಯೋವೊಂದನ್ನು ಮಾಡಿದ್ದು, ಜೋಸ್ ಬಟ್ಲರ್‌ಗೆ ಧನ್ಯವಾದ ಹೇಳಿದ್ದಾರೆ. ಈ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ. ಅದರೊಂದಿಗೆ ಬ್ಯಾಟ್ ಸಿಗಲು ಸಹಾಯ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಕನ್ನಡಿಗ ಕೆ.ಸಿ.ಕಾರ್ಯಪ್ಪ ಹಾಗೂ ರಾಜಸ್ಥಾನ ರಾಯಲ್ಸ್ ತಂಡಕ್ಕೂ ಧನ್ಯವಾದ ಸಲ್ಲಿಸಿದ್ದಾರೆ.

    `ನಿಜಕ್ಕೂ ನನಗೆ ಬಹಳ ಅಚ್ಚರಿಯಾಯಿತು. ನಾನು ಇದನ್ನು ನಿರೀಕ್ಷೆ ಸಹ ಮಾಡಿರಲಿಲ್ಲ. ಮೊದಲಿಗೆ ನಾನು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಇದನ್ನು ಸಾಧ್ಯವಾಗಿಸಿದ ನನ್ನ ಸ್ನೇಹಿತ ಕೆಸಿ ಕಾರ್ಯಪ್ಪಗೂ ಥ್ಯಾಂಕ್ಸ್ ಹೇಳುತ್ತೇನೆ. ವಿಶೇಷವಾಗಿ ಜೋಸ್ ಬಟ್ಲರ್ ಸಲುವಾಗಿ ಈ ವೀಡಿಯೋ ಮಾಡಿದ್ದೇನೆ. ವೈಯಕ್ತಿಕವಾಗಿ ನೀವು ಸಹಿ ಮಾಡಿದಂಥ ಬ್ಯಾಟ್ ಅನ್ನು ನನಗೆ ನೀಡಿದ್ದಕ್ಕೆ ಬಹಳ ಧನ್ಯವಾದ. ಇದನ್ನು ನಾನು ಸ್ವೀಕರಿಸಿದ್ದೇನೆ. ನನಗೆ ಬಹಳ ಸಂತೋಷವಾಗಿದೆ ಎಂದು ಕೃತಜ್ಞತಾ ವೀಡಿಯೋವನ್ನು ಸುದೀಪ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿಯ ದಾಖಲೆಯ ರನ್ ಶಿಖರವನ್ನು ಪುಡಿಗಟ್ಟಿದ ಬಾಬರ್ ಅಜಾಮ್‌

    ಈ ಬಾರಿ ಐಪಿಎಲ್ ಸೀಜನ್‌ನಲ್ಲೂ ಜೋಸ್ ಬಟ್ಲರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ ಎಂದಿರುವ ಸುದೀಪ್ ಖಂಡಿತವಾಗಿ ನಾನು ಇದನ್ನು ಜೋಪಾನವಾಗಿ ಕಾಯ್ದಿಟ್ಟುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

    15ನೇ ಆವೃತ್ತಿ ಐಪಿಎಲ್‌ನಲ್ಲಿ ಜೋಸ್ ಬಟ್ಲರ್ ಏಕಾಂಗಿ ಹೋರಾಟದ ಮೂಲಕ ರಾಜಾಸ್ಥಾನ್ ರಾಯಲ್ಸ್ ತಂಡವನ್ನು ಫೈನಲ್ ಪಂದ್ಯದ ವೆರೆಗೆ ಮುನ್ನಡೆಸಿದ್ದರು. ಒಟ್ಟು 15 ಪಂದ್ಯಗಳಲ್ಲಿ 718 ರನ್‌ಗಳನ್ನು ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಳಿಸಿಕೊಂಡರು.

  • ಟೈಟಾನ್ಸ್ Vs ರಾಯಲ್ಸ್ ಫೈನಲ್ – ಯಾರಾಗ್ತಾರೆ ಚಾಂಪಿಯನ್?

    ಟೈಟಾನ್ಸ್ Vs ರಾಯಲ್ಸ್ ಫೈನಲ್ – ಯಾರಾಗ್ತಾರೆ ಚಾಂಪಿಯನ್?

    ಮುಂಬೈ: ಐಪಿಎಲ್ 15ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಗ್ರ ಕ್ರಮಾಂಕದ ತಂಡಗಳಾದ ಗುಜರಾತ್ ಟೈಟಾನ್ಸ್ ಹಾಗೂ ಮತ್ತು ರಾಜಸ್ಥಾನ ರಾಯಲ್ಸ್ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿವೆ.

    ಅಹಮದಾಬಾದ್‌ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ಇಂದು ರಾತ್ರಿ 8ಕ್ಕೆ ಪಂದ್ಯ ಆರಂಭವಾಗಲಿದೆ. ನೂತನವಾಗಿ ಸೇರ್ಪಡೆಗೊಂಡ ಗುಜರಾತ್ ಟೈಟಾನ್ಸ್ ತಂಡವು ಮೊದಲ ಪ್ರಯತ್ನದಲ್ಲೇ ಫೈನಲ್ಸ್ ಪ್ರವೇಶಿಸಿದ್ದು, ಈ ಬಾರಿ ಚಾಂಪಿಯನ್ ಆಗುವ ನಿರೀಕ್ಷೆ ಮೂಡಿಸಿದೆ. 2008ರ ಬಳಿಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಟ್ಟಿರುವ ರಾಜಾಸ್ಥಾನ ರಾಯಲ್ಸ್ ಸಹ 2ನೇ ಬಾರಿಗೆ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಳ್ಳುವ ತವಕದಲ್ಲಿದೆ.

    IPL 2022 BATLER

    ಐಪಿಎಲ್ ಆರಂಭಗೊಂಡಾಗ ಲೀಗ್‌ನಲ್ಲೇ ಹೊರಬೀಳುತ್ತವೆ ಎಂಬ ಟೀಕೆಗಳನ್ನು ಮೀರಿ ಉಭಯ ತಂಡದ ನಾಯಕರಾದ ಹಾರ್ದಿಕ್ ಪಾಂಡ್ಯ ಹಾಗೂ ಸಂಜು ಸ್ಯಾಮ್ಸನ್ ಫೈನಲ್‌ವರೆಗೂ ತಮ್ಮ ತಂಡವನ್ನು ಮುನ್ನಡೆಸಿದ್ದಾರೆ.

    ಟೈಟಾನ್ಸ್ ಬೌಲಿಂಗ್, ರಾಯಲ್ಸ್ ಬ್ಯಾಟಿಂಗ್: ರಾಜಾಸ್ಥಾನ್‌ ರಾಯಲ್ಸ್‌ನ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾನ್ಸನ್, ದೇವದತ್ ಪಡಿಕ್ಕಲ್, ಶಿಮೊನ್ ಹೆಟ್ಮಾಯರ್ ರಾಜಾಸ್ಥಾನ್ ರಾಯಲ್ಸ್‌ನಲ್ಲಿ ಬಲಿಷ್ಠ ಬ್ಯಾಟರ್‌ಗಳಿಗೆ ಗುಜರಾತ್ ಟೈಟಾನ್ಸ್ ಮೊಹಮದ್ ಶಮಿ, ರಶೀದ್ ಖಾನ್, ಅಲ್ವಾರಿ ಜೋಸೆಫ್, ಯಶ್ ದಯಾಳ್, ಸಾಯಿಕಿ ಶೋರ್‌ರ ಬೌಲರ್‌ಗಳಿಂದ ಕಠಿಣ ಸವಾಲು ಎದುರಾಗಲಿದೆ.

    818 ರನ್‌ಗಳನ್ನು ಗಳಿಸಿ ಆರೆಂಜ್‌ಕ್ಯಾಪ್ ಮುಡಿಗೇರಿಸಿಕೊಂಡಿರುವ ಜೋಸ್ ಬಟ್ಲರ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅವರನ್ನು ತಡೆಯುವುದು ಬೌಲರ್‌ಗಳಿಗೂ ಸವಾಲಾಗಿದೆ. ಈಗಾಗಲೇ ಮುಖಾಮುಖಿಯಾಗಿರುವ 2 ಪಂದ್ಯಗಳಲ್ಲಿ ಟೈಟಾನ್ಸ್ ಗೆಲುವು ಸಾಧಿಸಿದ್ದು, ಅಂತಿಮ ಫೈನಲ್‌ ಪಂದ್ಯದಲ್ಲಿ ಆರ್‌ಆರ್ ಗೆಲುವಿನ ಮೆಟ್ಟಿಲೇರಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

    ಇದರೊಂದಿಗೆ ಗುಜರಾತ್ ಬ್ಯಾಟರ್‌ಗಳಾದ ಶುಭಮನ್ ಗಿಲ್, ವೃದ್ಧಿಮಾನ್ ಸಾಹಾ, ಮ್ಯಾಥ್ಯು ವೇಡ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್‌ಗೆ ಪ್ರಸಿದ್ ಕೃಷ್ಣ, ಟ್ವೆಂಟ್ ಬೌಲ್ಟ್, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಒಬೆಡ್ ಮೆಕಾಮ್‌ರಿಂದ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.

    IPL2022 GT VS RR - GT STARTS

    ಯಾವ ವರ್ಷ ಯಾರು ಚಾಂಪಿಯನ್?

    • 2008 – ರಾಜಸ್ಥಾನ ರಾಯಲ್ಸ್
    • 2009 – ಡೆಕ್ಕನ್ ಚಾರ್ಜರ್
    • 2010 – ಚೆನ್ನೈ ಸೂಪರ್ ಕಿಂಗ್ಸ್
    • 2011 – ಚೆನ್ನೈ ಸೂಪರ್‌ಕಿಂಗ್ಸ್
    • 2012 – ಕೋಲ್ಕತ್ತಾ ನೈಟ್ ರೈಡರ್
    • 2013 – ಮುಂಬೈ ಇಂಡಿಯನ್ಸ್
    • 2014 – ಕೋಲ್ಕತ್ತಾ ನೈಟ್ ರೈಡರ್
    • 2015 – ಮುಂಬೈ ಇಂಡಿಯನ್ಸ್
    • 2016 – ಸನ್‌ರೈಸರ್ಸ್‌ ಹೈದರಾಬಾದ್
    • 2017 – ಮುಂಬೈ ಇಂಡಿಯನ್ಸ್
    • 2018 – ಚೆನ್ನೈ ಸೂಪರ್ ಕಿಂಗ್ಸ್
    • 2019 – ಮುಂಬೈ ಇಂಡಿಯನ್ಸ್
    • 2020 – ಮುಂಬೈ ಇಂಡಿಯನ್ಸ್
    • 2021 – ಚೆನ್ನೈ ಸೂಪರ್‌ಕಿಂಗ್ಸ್

  • ಆರ್‌ಸಿಬಿಗಾಗಿ ಮದುವೆಯನ್ನೇ ಮುಂದೂಡಿದ್ದ ರಜತ್ ಪಾಟಿದಾರ್

    ಆರ್‌ಸಿಬಿಗಾಗಿ ಮದುವೆಯನ್ನೇ ಮುಂದೂಡಿದ್ದ ರಜತ್ ಪಾಟಿದಾರ್

    ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ ಆರ್‌ಸಿಬಿ ತಂಡದ ರಜತ್ ಪಾಟಿದಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

    IPL 2022 RCB (3)

    ಹೌದು ಆರ್‌ಸಿಬಿ ತಂಡದಲ್ಲಿ ಪಾಟಿದಾರ್ ಎಂಬ ಆಟಗಾರ ಇದ್ದಾರೆ ಎಂಬುದೇ ಗೊತ್ತಿರಲಿಲ್ಲ. ಆದರೆ, ಲಕ್ನೋ ವಿರುದ್ಧದ ಪಂದ್ಯದಲ್ಲಿ ಅವರ ಸ್ಫೋಟಕ ಬ್ಯಾಟಿಂಗ್ ಲಕ್ಷಾಂತರ ಕ್ರೀಡಾಭಿಮಾನಿಗಳ ಮನದಲ್ಲಿ ಉಳಿಯುವಂತೆ ಮಾಡಿದೆ. ಇದನ್ನೂ ಓದಿ: ಸೋಲಿನ ಬಳಿಕ ನಾಯಕ ರಾಹುಲ್‌ನನ್ನು ದಿಟ್ಟಿಸಿದ ಗಂಭೀರ್ – ನೆಟ್ಟಿಗರಿಂದ ಟ್ರೋಲ್

    ಪಾಟಿದಾರ್ ಅವರ ಅದ್ಭುತ ಬ್ಯಾಟಿಂಗ್‌ನಿಂದ ಆರ್‌ಸಿಬಿ ರಾಜಾಸ್ಥಾನ್ ರಾಯಲ್ಸ್ ವಿರುದ್ಧ 2ನೇ ಕ್ವಾಲಿಫೈಯರ್‌ಗೆ ಲಗ್ಗೆಯಿಟ್ಟಿದೆ. ಲುವ್ನಿತ್ ಸಿಸೋಡಿಯಾ ಅವರು ಗಾಯಗೊಂಡಿದ್ದರಿಂದಾಗಿ ಅವರ ಬದಲಾಗಿ ಆರ್‌ಸಿಬಿ ತಂಡಕ್ಕೆ ಸೇರ್ಪಡೆಯಾದ ರಜತ್ ಆರ್‌ಸಿಬಿಗಾಗಿ ಆಡಲು ತನ್ನ ಮದುವೆಯನ್ನೇ ಮುಂದೂಡಿದ್ದಾರೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ನಾವು ಸೋಲಲು ಇದೇ ಕಾರಣ – ಬೇಸರ ವ್ಯಕ್ತಪಡಿಸಿದ ಕೆ.ಎಲ್ ರಾಹುಲ್

    IPL 2022 RCB (3)

    ಇದೇ ತಿಂಗಳ ಮೇ 9ರಂದು ಪಾಟಿದಾರ್ ಮದುವೆ ನಿಗದಿಯಾಗಿತ್ತು. ಸಣ್ಣ ಸಮಾರಂಭದಲ್ಲಿ ಮದುವೆ ಮಾಡಿಕೊಳ್ಳುವುದಕ್ಕಾಗಿ ಇಂಧೋರ್‌ನಲ್ಲಿ ಹೋಟೆಲ್ ಸಹ ಕಾಯ್ದಿರಿಸಲಾಗಿತ್ತು. ಈಗ ಆರ್‌ಸಿಬಿಗಾಗಿ ಆಡಲು ಮುಂದಾಗಿರುವ ರಜತ್ ಮುಂದಿನ ಜೂನ್ ತಿಂಗಳಲ್ಲಿ ರಜತ್ ಮದುವೆಯಾಗಲಿದ್ದಾರೆ ಎಂದು ರಜತ್ ತಂದೆ ಮನೋಹತ್ ಪಾಟಿದಾರ್ ಹೇಳಿದ್ದಾರೆ.

  • ಕೊನೆಯಲ್ಲಿ ಪರಾಗ್ ಸ್ಫೋಟಕ ಆಟ – ಆರ್‌ಆರ್‌ಗೆ 29 ರನ್‍ಗಳ ಜಯ, ಮತ್ತೆ ಕೊಹ್ಲಿ ವಿಫಲ

    ಕೊನೆಯಲ್ಲಿ ಪರಾಗ್ ಸ್ಫೋಟಕ ಆಟ – ಆರ್‌ಆರ್‌ಗೆ 29 ರನ್‍ಗಳ ಜಯ, ಮತ್ತೆ ಕೊಹ್ಲಿ ವಿಫಲ

    ಮುಂಬೈ: ಕೊನೆಯಲ್ಲಿ ರಿಯಾನ್ ಪರಾಗ್ ಸ್ಫೋಟಕ ಆಟ ನಂತರ ಬೌಲರ್‍ಗಳು ಉತ್ತಮ ಪ್ರದರ್ಶನದಿಂದ ಆರ್‌ಸಿಬಿ ವಿರುದ್ಧ ರಾಜಸ್ಥಾನ 29 ರನ್‍ಗಳ ಜಯ ಸಾಧಿಸಿದೆ.

    145 ರನ್‍ಗಳ ಸುಲಭ ಸವಾಲನ್ನು ಪಡೆದ ಆರ್‌ಸಿಬಿ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 19.3 ಓವರ್‍ಗಳಲ್ಲಿ 115 ರನ್‍ಗಳಿಗೆ ಆಲೌಟ್ ಆಯ್ತು.

    RIYAN PARAG RR

    ಆರ್‌ಸಿಬಿ ತಂಡಕ್ಕೂ ಆರಂಭದಲ್ಲೇ ಆಘಾತ ಕಾದಿತ್ತು. ಮೊದಲ ಓವರ್‍ನಲ್ಲೇ ಕೊಹ್ಲಿ 2 ಬೌಂಡರಿ ಬಾರಿಸಿದ ನಂತರ ಉತ್ತಮ ಫಾರ್ಮ್‍ನಲ್ಲಿದ್ದಾರೆ ಎಂದುಕೊಂಡಿತ್ತು. ಭರವಸೆ ಹುಸಿಯಾಗಿಸಿದ ಕೊಹ್ಲಿ 2ನೇ ಓವರ್ ನಲ್ಲೇ ತಮ್ಮ ವಿಕೆಟ್ ಒಪ್ಪಿಸಿ ಹೊರನಡೆದರು. ಇದನ್ನೂ ಓದಿ: 6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

    IPL RR VS RCB 2

    ನಾಯಕ ಫಾಫ್ ಡು ಪ್ಲೆಸಿಸ್ 23(21 ಎಸೆತ), ರಜತ್ ಪತಿದರ್ 16 ರನ್, ಹಸರಂಗ 18 ರನ್ ಹೊಡೆದು ಔಟಾದರು. ರಾಜಸ್ಥಾನ ಪರ ಕುಲದೀಪ್ ಸೆನ್ 4, ಅಶ್ವಿನ್ 3, ಪ್ರಸಿದ್ಧ್ ಕೃಷ್ಣ 2 ವಿಕೆಟ್ ಪಡೆದರು.

    ಪುಣೆಯ ಎಂಸಿಎ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‍ಗೆ ಇಳಿದ ರಾಜಾಸ್ಥಾನ್ ರಾಯಲ್ಸ್ ತಂಡ ಆರಂಭದಲ್ಲೇ ಕಷ್ಟ ಎದುರಿಸಿತು. ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ ನಾಯಕನ ನಿರೀಕ್ಷೆಗೆ ತಕ್ಕಂತೆ ಬೌಲಿಂಗ್ ಪ್ರದರ್ಶಿಸಿದ ಬೌಲರ್‌ಗಳು ರಾಜಸ್ಥಾನ್ ರಾಯಲ್ಸ್ ತಂಡವನ್ನು 144 ರನ್‍ಗಳಿಗೆ ಕಟ್ಟಿಹಾಕಿದರು.

    RCB VIRAT KOHILI

    ರಾಜಸ್ಥಾನ್ ಪರ ರಿಯಾನ್ ಪರಾಗ್ 29 ಎಸೆತಗಳಲ್ಲಿ 56 ರನ್‍ಗಳಿಸಿ ತಂಡಕ್ಕೆ ಆಸರೆಯಾದರು. ಜವಾಬ್ದಾರಿ ಆಟ ಪ್ರದರ್ಶಿಸುತ್ತಿದ್ದ ಸಂಜೂ ಸ್ಯಾಮ್ಸನ್(27) ರಿವರ್ಸ್ ಸ್ವೀಪ್ ಮೂಲಕ ಫೋರ್‌ ಹೊಡೆಯುವ ಪ್ರಯತ್ನದಿಂದ ಕ್ಲೀನ್ ಬೌಲ್ಡ್ ಆದರು.

    ರಾಜಸ್ಥಾನ್‍ಗೆ ಪರಾಗ್ ಆಸರೆ: ಆರ್‌ಸಿಬಿ ಬೌಲಿಂಗ್ ದಾಳಿಗೆ ಆರಂಭದಲ್ಲೇ ತತ್ತರಿಸಿದ ರಾಜಸ್ಥಾನ್ ರಾಯಲ್ಸ್‍ಗೆ ರಿಯಾನ್ ಪರಾಗ್ 56 ರನ್(29 ಎಸೆತ, 3 ಬೌಂಡರಿ, 4 ಸಿಕ್ಸರ್) ಗಳಿಸಿ ಆಸರೆಯಾದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಉತ್ಸಾಹ ಕಳೆದು ಕೊಳ್ಳದೇ ಬಿರುಸಿನ ಆಟವಾಡಿದ ರಿಯಾನ್ ಪರಾಗ್ ಆಕರ್ಷಕ ಅರ್ಧಶತಕ ಬಾರಿಸಿದರು. ಅಲ್ಲದೇ ತಂಡದ ಮೊತ್ತವನ್ನು 140ರ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    RR VS RCB

    ಆರ್‍ಆರ್ ಬ್ಯಾಟಿಂಗ್ ವೈಫಲ್ಯ: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್‍ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಓಪನರ್‍ಗಳಾಗಿ ಕಣಕ್ಕಿಳಿದ ಜಾಸ್ ಬಟ್ಲರ್ 8 ರನ್ ಹಾಗೂ ದೇವದತ್ ಪಡಿಕ್ಕಲ್ 7 ರನ್ ಹೊಡೆದು ಔಟಾದರು. ನಂತರ ಬ್ಯಾಟಿಂಗ್‍ನಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಆರ್.ಅಶ್ವಿನ್ ಬಿರುಸಿನ ಆಟವಾಡಿ 17 ರನ್ ಹೊಡೆದು ಹೊರನಡೆದರು. ನಾಯಕ ಸಂಜು ಸ್ಯಾಮ್ಸನ್ 27 ರನ್, ಮಧ್ಯಮ ಕ್ರಮಾಂಕದಲ್ಲಿ ಬಂದ ಡ್ಯಾರೆಲ್ ಮಿಚೆಲ್ 16 ರನ್ ಹೊಡೆದು ಔಟಾದರು.

    PARAG 50

    ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬೌಲರ್‍ಗಳು ಉತ್ತಮ ಪ್ರದರ್ಶನ ನೀಡಿದರು. ಜಾಶ್ ಹೇಜಲ್‍ವುಡ್ 2 ಪ್ರಮುಖ ವಿಕೆಟ್ ಪಡೆದು ಮಿಂಚಿದರೆ ಇವರಿಗೆ ಉತ್ತಮ ಸಾಥ್ ನೀಡಿದ ವನಿಂದು ಹಸರಂಗ ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಹರ್ಷಲ್ ಪಟೇಲ್ 1 ವಿಕೆಟ್ ಪಡೆದರು.

  • ಡೆಲ್ಲಿಯ ಪ್ರವೀಣ್‌ಗೆ  ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನೋಬಾಲ್ ಕೇಳುವಂತೆ ಒತ್ತಾಯಿಸಿ ಬ್ಯಾಟರ್‌ಗಳನ್ನು ಕರೆಯಲು ಕರೆದು ಹೈಡ್ರಾಮ ಮಾಡಿದ ಡೆಲ್ಲಿ ತಂಡದ ನಾಯಕ ರಿಷಭ್‌ಪಂತ್‌ಗೆ ಐಪಿಎಲ್ ಮಂಡಳಿ ದಂಡದ ವಿಧಿಸುವ ಮೂಲಕ ಪಂಚ್‌ಕೊಟ್ಟಿದೆ.

    ವಾಂಖೆಡೆ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ತಮ್ಮ ತಂಡದ ಪಂದ್ಯದ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್‌ಪಂತ್ ಅವರಿಗೆ ಪಂದ್ಯದ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

    IPL ನೀತಿ ಸಂಹಿತೆಯ ನಿಯಮ 2.7 ಅಡಿಯಲ್ಲಿ 2ನೇ ಹಂತದ ಅಪರಾಧಕ್ಕೆ ಪಂತ್ ಗುರಿಯಾಗಿದ್ದಾರೆ. ಆದ್ದರಿಂದ ಪಂತ್‌ಗೆ ಶೇ.100ರಷ್ಟು ದಂಡಶುಲ್ಕ ವಿಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೂ ಪಂದ್ಯದ ಶುಲ್ಕದ ಶೇ.50ರಷ್ಟು ದಂಡ ವಿಧಿಸಲಾಗಿದೆ. ಇನ್ನೂ ಪಂದ್ಯದ ವೇಳೆ ಅಂಗಳಕ್ಕೆ ಇಳಿದು 3ನೇ ಅಂಪೈರ್‌ಗೆ ಮನವಿ ಮಾಡುವಂತೆ ಒತ್ತಾಯಿಸಿದಕ್ಕಾಗಿ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಅವರಿಗೂ 2.2ರ ನಿಯಮದ ಪ್ರಕಾರ ಶೇ.100 ದಂಡ ವಿಧಿಸುವ ಜೊತೆಗೆ ಮುಂದಿನ ಒಂದು ಪಂದ್ಯದಲ್ಲಿ ಸಹಾಯ ಕೋಚ್ ಆಗಿ ನಿರ್ವಹಿಸುವುದನ್ನು ಬ್ಯಾನ್ ಮಾಡಿದೆ.

    RISHAB PANTH

    ಏನಿದು ಆರ್ಟಿಕಲ್ 2.7, 2.2 ನಿಯಮ?: ಐಪಿಎಲ್ ನಿಯಮದ ಪ್ರಕಾರ ಪಂದ್ಯದ ಅವಧಿ ಮುಗಿಯುವವೆರೆಗೆ ಯಾವುದೇ ನಿರ್ಧಾರಗಳನ್ನು ಕ್ರೀಸ್‌ನಲ್ಲಿರುವವರೇ ಬಗೆಹರಿಸಿಕೊಳ್ಳಬೇಕು. ಅಂಪೈರ್ ತೀರ್ಪು ಪರಿಶೀಲನೆ ಮಾಡುವುದಿದ್ದರೂ ಬ್ಯಾಟರ್‌ಗಳೇ ಮನವಿ ಮಾಡಬೇಕು. ಒಂದು ವೇಳೆ ಪಂದ್ಯ ನಡೆಯುವ ವೇಳೆ ಉಳಿದವರು ಅಪೀಲ್ ಮಾಡುವಂತೆ ಒತ್ತಾಯಿಸುವುದು, ಅವರನ್ನು ಹೊರಬರುವಂತೆ ಸೂಚನೆ ನೀಡುವುದು ಅವರ ಪರವಾಗಿ ಅಪೀಲ್ ಮಾಡಲು ಕ್ರೀಡಾಂಗಣಕ್ಕೆ ಬರುವಂತಿಲ್ಲ.

  • ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    ಮುಂಬೈ: ಐಪಿಎಲ್ ಕ್ರಿಕೆಟ್‌ನಲ್ಲಿ ಆಗಾಗ ವಿವಾದಗಳು ನಡೆಯುತ್ತಿರುತ್ತವೆ. ಆದರೆ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ಪಂದ್ಯ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ.

    ಕೊನೆಯ ಓವರ್‌ನಲ್ಲಿ ಅಂಪೈರ್ ನೀಡಿದ ತೀರ್ಪಿನಿಂದ ಅಸಮಧಾನಗೊಂಡ ಡೆಲ್ಲಿ ತಂಡದ ನಾಯಕ ರಿಷಭ್‌ಪಂತ್ ನಡೆದುಕೊಂಡ ರೀತಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣ ಮಾತ್ರವಲ್ಲದೇ, ಹಿರಿಯ ಕ್ರಿಕೆಟಿಗರಿಂದಲೂ ಟೀಕೆಗೆ ಗುರಿಯಾಗಿದೆ. ಇಷ್ಟಕ್ಕೂ ಆ ಕೊನೆಯ ಓವರ್‌ನಲ್ಲಿ ನಡೆದಿದ್ದೇನು? ಇಲ್ಲಿದೆ ಮಾಹಿತಿ. ಇದನ್ನೂ ಓದಿ: ಬಟ್ಲರ್‌ ಬಿರುಗಾಳಿ ಬೆದರಿದ ಡೆಲ್ಲಿ – ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ರಾಜಸ್ಥಾನ

    wtson

    ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ವೆಸ್ಟ್ಇಂಡೀಸ್ ಕ್ರಿಕೆಟಿಗ ರೋವನ್ ಪೊವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ತಂಡಕ್ಕೆ 36 ರನ್‌ಗಳು ಬೇಕಾಗಿತ್ತು. ಅಂದರೆ ಆರು ಬಾಲ್‌ನಲ್ಲಿ 6 ಸಿಕ್ಸರ್, ಇದು ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು.

    ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‌ಟಾಸ್ ಆಗಿದ್ದು ಇದನ್ನು ಕೂಡ ಪೊವೆಲ್ ಸಿಕ್ಸ್ಗೆ ಅಟ್ಟಿದರು. ಆದರೆ ಇದು ಅವರ ಸೊಂಟದ ಭಾಗಕ್ಕಿಂತಲೂ ಮೇಲಿತ್ತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು.

    ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್‌ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ರೋವನ್ ಪೊವೆಲ್ ಮತ್ತು ಕುಲೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಟೆಸ್ಟ್ ಕ್ರಿಕೆಟ್‌ನಲ್ಲಿ ಡಿಕ್ಲೇರ್ ಘೋಷಣೆ ಮಾಡುವಂತೆ ಪೆವಿಲಿಯನ್‌ಗೆ ಬನ್ನಿ ಎಂದು ಕರೆದರು.

    ಆಕ್ರೋಷದಲ್ಲಿದ್ದ ಪಂತ್ ತಮ್ಮ ತಂಡದ ಕೋಚ್ ಪ್ರವೀಣ್ ಆಮ್ರೆ ಅವರನ್ನು ಅಂಪೈರ್ ಬಳಿ ಚರ್ಚಿಸಲು ಮೈದಾನಕ್ಕೆ ಕಳುಹಿಸಿದರು. ಅಂಗಣಕ್ಕೆ ಧಾವಿಸಿ ಆನ್ ಫೀಲ್ಡ್ ಅಂಪೈರ್‌ಗಳ ಜೊತೆಗೆ ಚರ್ಚಿಸಿ ಕನಿಷ್ಠ 3ನೇ ಅಂಪೈರ್‌ಗೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಆದರೆ, ಲೆಗ್ ಅಂಪೈರ್ ನಿತಿನ್ ಮೆನನ್ ಅದು ನೋ-ಬಾಲ್ ಅಲ್ಲ ಎಂದು ತೀರ್ಪು ನೀಡಿದ್ದ ಕಾರಣ, ಅದೇ ತೀರ್ಪಿಗೆ ಬದ್ಧರಾಗಿ ನಿಂತು ಆಟ ಮುಂದುವರಿಸಲು ಆನ್‌ಫೀಲ್ಡ್ ಅಂಪೈರ್ ತೀರ್ಮಾನಿಸಿದರು. ಅತ್ತ ಬೌಂಡರಿ ಗೆರೆ ಬಳಿಯಿದ್ದ ಆರ್‌ಆರ್ ಬ್ಯಾಟರ್ ಜಾಸ್ ಬಟ್ಲರ್ ಜೊತೆಗೂ ಪಂತ್ ರೇಗಾಡಿದರು. ಹಿರಿಯ ಆಟಗಾರ ಶೇನ್ ವಾಟ್ಸನ್ ಮೇಲೂ ಕೋಪಗೊಂಡರು. ಇದನ್ನೂ ಓದಿ: ರಾಜಸ್ಥಾನ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಆಘಾತ – ತಂಡದೊಂದಿಗಿಲ್ಲ ಕೋಚ್ ಪಾಟಿಂಗ್

    IPL 2022 JOS BUTLER

    ಬಳಿಕ ಡೈವರ್ಟ್ ಆದ ಪೋವೆಲ್ 4ನೇ ಎಸೆತವನ್ನು ಎದುರಿಸುವಲ್ಲಿ ವಿಫಲರಾದರು. 5ನೇ ಎಸೆತದಲ್ಲಿ 2ರನ್‌ಗಳಿಸಿ 6ನೇ ಎಸೆತಕ್ಕೆ ಕ್ಯಾಚ್ ನೀಡಿ ನಿರ್ಗಮಿಸಿದರು. ಗೆಲ್ಲುವ ಕನಸು ಕಂಡಿದ್ದ ಡೆಲ್ಲಿಗೆ ರಿಷಬ್ ಪಂಥ್ ಅವರ ನಿರ್ಧಾರ ತಂಡದ ದಿಕ್ಕನ್ನೇ ಬದಲಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯಲ್ಲಿ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ರೋಚಕವಾಗಿತ್ತು. ಜೋಸ್ ಬಟ್ಲರ್, ದೇವದತ್ ಪಡಿಕಲ್ ಹಾಗೂ ಸಂಜು ಸಾಮ್ಸನ್ ಅವರ ಮಿಂಚಿನಾಟ ರನ್ 200ರ ಗಡಿದಾಟುವಂತೆ ಮಾಡಿತ್ತು.

    ನೋಬಾಲ್ ನಿಯಮಗಳೇನು?: ಸಾಮಾನ್ಯವಾಗಿ ಬೌಲಿಂಗ್ ವೇಳೆ ಬೌಲರ್ ಕೈನಿಂದ ಬಾಲ್ ಹೊರಡುವ ಮುನ್ನವೇ ಕ್ರೀಸ್‌ನಿಂದ ಕಾಲು ಹೊರಕ್ಕಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಮಾನ ಮುಖ್ಯ ಅಂಪೈರ್ ನೀಡುತ್ತಾರೆ. ಒಂದು ವೇಳೆ ಕ್ರೀಸ್‌ನಲ್ಲಿ ಸಮಸ್ಯೆಯಿಲ್ಲದೆ ಬಾಲು ಫುಲ್‌ಟಾಸ್ ಆಗಿ ಸೊಂಟಕ್ಕಿಂತ ಮೇಲ್ಭಾಗದಲ್ಲಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಪನ್ನು ಲೆಗ್‌ಅಂಪೈರ್ ಕೊಡಬೇಕು. ಇಲ್ಲದಿದ್ದರೆ ಅದು ನೋಬಾಲ್ ಆಗುವುದಿಲ್ಲ. ಹಾಗೆಯೇ ಸೊಂಟದ ಮೇಲ್ಭಾಗಕ್ಕೆ ಬಾಲ್ ಬರುವ ಸಾಧ್ಯತೆಯಿದ್ದರೂ ಬ್ಯಾಟ್ಸ್‌ಮನ್‌ ಕ್ರೀಸ್‌ನಿಂದ ಆಚೆಯಿದ್ದರೆ ಅದನ್ನು ನೋಬಾಲ್ ನೀಡದಂತೆ ತೀರ್ಪು ನೀಡಬಹುದು.

  • ಪ್ಲೆ-ಆಫ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಔಟ್?

    ಪ್ಲೆ-ಆಫ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಔಟ್?

    ಮುಂಬೈ: 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಬಹುತೇಕ ಪಂದ್ಯಗಳು ಅರ್ಧದಷ್ಟು ಮುಗಿದಿದೆ. ಆದರೂ, ಚೆನ್ನೈ ಸೂಪರ್‌ಕಿಂಗ್ಸ್(ಸಿಎಸ್‌ಕೆ) 6 ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಿದ್ದು, ಈ ಬಾರಿ ಪ್ಲೆಆಫ್ ತಲುಪುವ ಕನಸು ಬಹುತೇಕ ಅಂತ್ಯವಾಗಿದೆ.

    ಗುಜರಾತ್ ಟೈಟನ್ಸ್, ರಾಜಾಸ್ಥಾನ್ ರಾಯಲ್ಸ್, ಸನ್‌ರೈಸರ್ಸ್ ಹೈದರಾಬಾದ್, ಕಿಂಗ್ಸ್ ಪಂಜಾಬ್, ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಲಾ 6 ಪಂದ್ಯಗಳನ್ನಾಡಿದ್ದರೆ, ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್, ಕೊಲ್ಕತ್ತಾ ನೈಟ್‌ರೈಡರ್ಸ್ ತಂಡಗಳು ತಲಾ 7 ಪಂದ್ಯಗಳನ್ನಾಡಿವೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಪಂದ್ಯಗಳನ್ನಾಡಿದೆ. ಇದನ್ನೂ ಓದಿ: ಕೆಜಿಎಫ್ ಚಾಪ್ಟರ್-2 ಡೈಲಾಗ್ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ವ್ಯಂಗ್ಯ

    csk won

    ಐಪಿಎಲ್ ಕ್ರಮಾಂಕದಲ್ಲಿ ಟಾಪ್- 4ರಲ್ಲಿ ಗುಜರಾತ್ ಟೈಟನ್ಸ್ 6 ಪಂದ್ಯಗಳಿಗೆ ಹಾಗೂ ಆರ್‌ಸಿಬಿ ತಂಡವು 7 ಪಂದ್ಯಗಳಿಗೆ ತಲಾ ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 10 ಅಂಕಗಳನ್ನು ಗಳಿದ್ದರೆ, ರಾಜಾಸ್ಥಾನ್, ಲಕ್ನೋ ಮತ್ತು ಹೈದರಾಬಾದ್ ತಂಡವು ತಲಾ 8 ಅಂಕಗಳನ್ನು ಪಡೆದಿವೆ. ನಂತರದ ಸ್ಥಾನಲ್ಲಿರುವ ಕೆಕೆಆರ್ ಮತ್ತು ಪಂಜಾಬ್ 6 ಅಂಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 4 ಅಂಕಗಳನ್ನು ಪಡೆದಿದೆ. ಇನ್ನೂ ಸತತ ಸೋಲಿನ ರುಚಿ ಕಂಡಿರುವ ಮುಂಬೈ ಒಂದೂ ಅಂಕವನ್ನು ಗಳಿಸದೇ ಕೊನೆಯಲ್ಲಿದೆ. ಒಂದೇ ಒಂದು ಪಂದ್ಯ ಗೆದ್ದಿರುವ ಚೆನ್ನೈ 9ನೇ ಸ್ಥಾನದಲ್ಲಿದೆ. ಹಾಗಾಗಿ, ಸಿಎಸ್‌ಕೆ ತಂಡ ಈ ಬಾರಿ ಪ್ಲೇ-ಆಫ್ ಸುತ್ತಿಗೆ ಬರುವುದು ಕಷ್ಟ ಎನ್ನಲಾಗಿದೆ. ಇನ್ನು ಒಂದು ಪಂದ್ಯದಲ್ಲಿ ಸೋತರೂ ಶೇ.95ರಷ್ಟು ಪ್ಲೇ-ಆಫ್ ಸುತ್ತಿಗೆ ಪ್ರವೇಶ ಪಡೆಯುವುದಿಲ್ಲ ಎಂದು ಐಪಿಎಲ್ ಮಂಡಳಿ ಹೇಳಿದೆ. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ

    IPL 2022 RR VS LSG (3)

    ಐಪಿಎಲ್ ಪ್ಲೆಆಫ್ ಸುತ್ತಿಗೆ ತಲುಪಲು ಕನಿಷ್ಠ 7 ಪಂದ್ಯಗಳನ್ನು ಗೆದ್ದಿರಬೇಕು. ಮೊದಲ 2 ಸ್ಥಾನದಲ್ಲಿರುವ ತಂಡ ಹೆಚ್ಚು ಗೆಲುವು ಸಾಧಿಸಿದ್ರೆ, 3 ಅಥವಾ 4ನೇ ಸ್ಥಾನದಲ್ಲಿರುವ ತಂಡಗಳು 8 ಪಂದ್ಯಗಳನ್ನು ಗೆದ್ದು ಪ್ಲೆಆಫ್ ಸೇರುತ್ತವೆ. ಕೆಲವೊಮ್ಮೆ ರನ್‌ರೇಟ್ ಹೆಚ್ಚಾಗಿದ್ದಾಗ 7 ಪಂದ್ಯಗಳನ್ನು ಗೆದ್ದ ತಂಡಗಳು ಪ್ಲೆ-ಆಫ್ ಸೇರಿದ್ದ ಉದಾಹರಣೆಗಳಿವೆ. ಹಾಗಾಗಿ ಸಿಎಸ್‌ಕೆ ತಂಡವು ಉಳಿದ 8 ಪಂದ್ಯಗಳಲ್ಲಿ ಕನಿಷ್ಠ 6 ಅಥವಾ 7 ಪಂದ್ಯಗಳನ್ನಾದರೂ ಗೆದ್ದರೆ ಪ್ಲೆ-ಆಫ್ ಕನಸು ಕೊಂಚವಾದರೂ ಜೀವಂತವಾಗಿರಿಸಿಕೊಳ್ಳಬಬಹುದು ಎನ್ನಲಾಗುತ್ತಿದೆ.  ಇದನ್ನೂ ಓದಿ: 2023ರಲ್ಲಿ ಆರಂಭಗೊಳ್ಳಲಿದೆ 6 ತಂಡಗಳ ನಡುವಿನ ಮಹಿಳಾ ಐಪಿಎಲ್

    IPL 2022 SRH (1)

    ಕಳಪೆ ಬೌಲಿಂಗ್: ಸಿಎಸ್‌ಕೆ ತಂಡ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಲೇ ಇದ್ದರೂ, ಬೌಲಿಂಗ್ ವಿಭಾಗ ಕೆಟ್ಟ ಪ್ರದರ್ಶನ ನೀಡುತ್ತಿದೆ. ತಂಡ 200 ಸಮೀಪ ರನ್‌ಗಳಿಸಿದರೂ ಬೌಲಿಂಗ್ ವೈಫಲ್ಯದಿಂದ ಗೆಲುವನ್ನು ಕೈಚೆಲ್ಲಬೇಕಾಗುತ್ತಿದೆ. ಹಾಗಾಗಿ, ಆಟಗಾರರು ಎದುರಾಳಿಯ ಸಂಪೂರ್ಣ ವಿಕೆಟ್ ಪಡೆದರೆ ಮಾತ್ರ ಸಿಎಸ್‌ಕೆ ತಂಡ ಮುಂಬರುವ ಪಂದ್ಯಗಳನ್ನು ಗೆಲ್ಲಲು ಸಾಧ್ಯ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿಎಸ್‌ಕೆ ಅಭಿಮಾನಿಗಳು ಪ್ಲೆ ಆಫ್ ತಲುಪುತ್ತದೆ ಎನ್ನುವ ಭರವಸೆಯನ್ನೇ ಕಳೆದುಕೊಂಡಿದ್ದು, ಇದಕ್ಕಾಗಿ ಚೆನ್ನೈ ಹೊಸ ಆಲೋಚನಾ ಕ್ರಮದಲ್ಲಿ ಮುಂದಿನ ಪಂದ್ಯಗಳನ್ನು ಎದುರಿಸಲು ಸಜ್ಜಾಗುತ್ತಿದೆ.

  • ಬಟ್ಲರ್ ಬೊಂಬಾಟ್ ಶತಕ – ರಾಜಸ್ಥಾನ್ ರಾಯಲ್ಸ್‌ಗೆ 7ರನ್‌ಗಳ ರೋಚಕ ಜಯ

    ಬಟ್ಲರ್ ಬೊಂಬಾಟ್ ಶತಕ – ರಾಜಸ್ಥಾನ್ ರಾಯಲ್ಸ್‌ಗೆ 7ರನ್‌ಗಳ ರೋಚಕ ಜಯ

    ಮುಂಬೈ: ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಇಂಗ್ಲೆಂಡ್ ಆಟಗಾರ ಜಾಸ್ ಬಟ್ಲರ್ (103) ಸ್ಪೋಟಕ ಶತಕ, ಸಂಜೂ ಸ್ಯಾಮ್ಸನ್(38) ಜವಾಬ್ದಾರಿಯ ಬ್ಯಾಟಿಂಗ್ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ರೋಚಕ 7 ರನ್‌ಗಳ ಜಯ ಸಾಧಿಸಿತು.

    ಬ್ರಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್ 103, ಸಂಜೂ ಸ್ಯಾಮನ್ಸ್ 38 ಹಾಗೂ ಹೆಟ್ಮಾಯೆರ್ ಅಜೇಯ 26 ಬ್ಯಾಟಿಂಗ್ ಪ್ರದರ್ಶಿಸಿದರು. ಇದರಿಂದಾಗಿ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 217 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ

    RR

    ದಾಖಲೆ ಶತಕ: 15ನೇ ಆವೃತ್ತಿಯಲ್ಲಿ ಫಾರ್ಮ್ನಲ್ಲಿರುವ ಜಾಸ್ ಬಟ್ಲರ್ 103 ರನ್ (61 ಬಾಲ್, 9 ಬೌಂಡರಿ, 5 ಸಿಕ್ಸರ್) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿಯನ್ನ ಧೂಳಿಪಟ ಮಾಡಿದ ಬಟ್ಲರ್, ಬೌಂಡರಿ, ಸಿಕ್ಸರ್‌ಗಳನ್ನು ಸಿಡಿಸಿದರು. ಬೌಲರ್‌ಗಳ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದ ಬಟ್ಲರ್, ಐಪಿಎಲ್ ಆವೃತ್ತಿಯ 3ನೇ ಹಾಗೂ ಈ ಸೀಸನ್‌ನ 2ನೇ ಶತಕ ದಾಖಲಿಸಿ ಮಿಂಚಿದರು. ಇಡೀ ಐಪಿಎಲ್ ಆವೃತ್ತಿಯಲ್ಲಿ ಒಂದೇ ಐಪಿಎಲ್‌ನಲ್ಲಿ 2 ಬಾರಿ ಶತಕ ಸಿಡಿಸಿ ದಾಖಲೆಯನ್ನೂ ನಿರ್ಮಿಸಿದರು.  ಇದನ್ನೂ ಓದಿ: 2023ರಲ್ಲಿ ಆರಂಭಗೊಳ್ಳಲಿದೆ 6 ತಂಡಗಳ ನಡುವಿನ ಮಹಿಳಾ ಐಪಿಎಲ್

    KKR VS RR IPL 2022.JPG 02

    ಜಾಸ್ ಬಟ್ಲರ್ ಅವರಿಗೆ ಉತ್ತಮ ಸಾಥ್ ನೀಡಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 24(18) ಮೊದಲ ವಿಕೆಟ್‌ಗೆ 97 ರನ್‌ಗಳಿಸಿ ಉತ್ತಮ ಆರಂಭ ಒದಗಿಸಿದರು. ನಂತರ ಬಂದ ನಾಯಕ ಸಂಜೂ ಸ್ಯಾಮ್ಸನ್ 38(19) ಬಿರುಸಿನ ಆಟದ ಮೂಲಕ ತಂಡದ ರನ್‌ವೇಗವನ್ನು ಹೆಚ್ಚಿಸಿದರು. ಅಲ್ಲದೆ ಬಟ್ಲರ್ ಹಾಗೂ ಸ್ಯಾಮ್ಸನ್ 2ನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟವಾಡಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಶಿಮ್ರಾನ್ ಹೆಟ್ಮಾಯೆರ್ 26*(13) ಉಪಯುಕ್ತ ಕಾಣಿಕೆ ನೀಡಿದರೆ. ರಿಯಾನ್ ಪರಾಗ್(5) ಹಾಗೂ ಕರುಣ್ ನಾಯರ್(3) ಬಹುಬೇಗನೆ ವಿಕೆಟ್ ಒಪ್ಪಿಸಿ ಹೊರನಡೆದರು. ಕೆಕೆಆರ್ ಪರ ಸುನೀಲ್ ನರೈನ್ 2/21, ಪ್ಯಾಟ್ ಕಮ್ಮಿನ್ಸ್ 1/50, ಶಿವಂ ಮಾವಿ 1/34 ಹಾಗೂ ಆಂಡ್ರೆ ರಸೆಲ್ 1/29 ವಿಕೆಟ್ ಪಡೆದರು.

    KKR VS RR IPL 2022

    ಐಯ್ಯರ್, ಫಿಂಚ್ ಮಿಂಚಿನಾಟ ವ್ಯರ್ಥ: ರಾಜಸ್ಥಾನ್ ನೀಡಿದ 217 ರನ್‌ಗಳ ಗುರಿ ಬೆನ್ನತ್ತಿದ್ದ ಕೆಕೆಆರ್ ತಂಡ ಆರಂಭದಲ್ಲೇ ಎಡವಿತು. ಮೊದಲ ಓವರ್ ಮೊದಲ ಬಾಲ್‌ನಲ್ಲೇ ಸಿಂಗಲ್ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಸುನೀಲ್ ನರೇನ್ ರನ್‌ಔಟ್‌ಗೆ ಗುರಿಯಾದರು. ನಂತರ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಹಾಗೂ ಫಿಂಚ್ ಜೋಡಿ ಉತ್ತಮ ಪ್ರದರ್ಶನ ನೀಡಿತು. ಆರನ್ ಫಿಂಚ್ 28 ಎಸೆತಗಳಲ್ಲಿ 58 (9 ಬೌಂಡರಿ, 2 ಸಿಕ್ಸರ್) ಗಳಿಸಿ ನಿರ್ಗಮಿಸಿದರು. 2ನೇ ಬ್ಯಾಟಿಂಗ್‌ನಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ 85 ರನ್ (7 ಬೌಂಡರಿ, 4 ಸಿಕ್ಸರ್) ಗಳಿಸಿ ಆಡುತ್ತಿದ್ದಂತೆಯೇ ಯಜುವೇಂದ್ರ ಚಾಹಲ್‌ಗೆ ತಮ್ಮ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಮಧ್ಯಮಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಆಂಡ್ರೆರಸ್ಸಲ್ ಮೊದಲ ಎಸೆತದಲ್ಲೇ ರವಿಚಂದ್ರನ್ ಅಶ್ವಿನ್‌ಗೆ ತಮ್ಮ ವಿಕೆಟ್ ಒಪ್ಪಿಸಿದರು. ಇದು ತಂಡಕ್ಕೆ ಮತ್ತಷ್ಟು ಪೆಟ್ಟು ನೀಡಿತು.

    KKR

    ಕೊನೆಯಲ್ಲಿ ಬಂದ ಉಮೇಶ್ ಯಾದವ್ 9 ಬಾಲ್‌ಗೆ 21 ರನ್‌ಗಳಿಸಿ ಮತ್ತೆ ತಂಡದಲ್ಲಿ ಗೆಲುವಿನ ಕನಸು ಮೂಡಿಸಿದ್ದರು. ಈ ನಡುವೆ ಒಬೆಟ್ ಮಕಾಯ್‌ ಅವರಿಗೆ ವಿಕೆಟ್ ಒಪ್ಪಿಸಿದ್ದರಿಂದ ನಂತರದ ಆಟಗಾರರು ತಂಡವನ್ನು ಮುನ್ನಡೆಸುವಲ್ಲಿ ವಿಫಲಾದರು.

    ರನ್ ಏರಿದ್ದು ಹೇಗೆ?
    3ನೇ ಓವರ್ 25 ರನ್
    4ನೇ ಓವರ್ 40 ರನ್
    19ನೇ ಓವರ್ 199
    20ನೇ ಓವರ್ 217 ರನ್

  • ಐಪಿಎಲ್ ಅಬ್ಬರ – ಸನ್ ರೈಸರ್ಸ್‌ಗಿಂದು ರಾಯಲ್ಸ್ ಸವಾಲು

    ಐಪಿಎಲ್ ಅಬ್ಬರ – ಸನ್ ರೈಸರ್ಸ್‌ಗಿಂದು ರಾಯಲ್ಸ್ ಸವಾಲು

    ಮುಂಬೈ: ಟಾಟಾ ಐಪಿಎಲ್-2022 ಟೂರ್ನಿಯ 15ನೇ ಆವೃತ್ತಿಯ ಪಂದ್ಯದಲ್ಲಿ ಬಲಿಷ್ಠ ಸನ್‌ ರೈಸರ್ಸ್‌ ಹೈದ್ರಾಬಾದ್ (SRH) ಹಾಗೂ ರಾಜಾಸ್ಥಾನ್ ರಾಯಲ್ಸ್ (RR) ತಂಡಗಳಿಂದು ಸೆಣಸಲಿವೆ.

    ಪುಣೆಯ ಮಹಾರಾಷ್ಟ್ರದ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿ ಶುಭಾರಂಭ ಮಾಡುವ ಮೂಲಕ ಗೆಲುವಿನ ಅಭಿಯಾನಕ್ಕೆ ಸಜ್ಜಾಗಿವೆ. ಇವೆರಡೂ ತಂಡಗಳು ಈ ಹಿಂದೆ ಐಪಿಎಲ್ ಚಾಂಪಿಯನ್ ಪಟ್ಟ ಧರಿಸಿವೆ ಎಂಬುದು ವಿಶೇಷ. ಇದನ್ನೂ ಓದಿ: ಲಕ್ನೋಗೆ ಲಾಕ್ ಹಾಕಿದ ಟೈಟಾನ್ಸ್ – ಗುಜರಾತ್‍ಗೆ 5 ವಿಕೆಟ್‍ಗಳ ಜಯ

    IPL

    ತೀವ್ರ ಪೈಪೋಟಿ
    ಈವರೆಗೆ ಉಭಯ ತಂಡಗಳು ಒಟ್ಟು 15 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ಹೈದ್ರಾಬಾದ್ ತಂಡವು 8 ಪಂದ್ಯಗಳಲ್ಲಿ ಹಾಗೂ ರಾಜಾಸ್ಥಾನ್ ರಾಯಲ್ಸ್ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಜಸ್ಥಾನ ತಂಡವು 2008ರ ಐಪಿಎಲ್ ಅವೃತ್ತಿಯಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತ್ತು. ಹೈದ್ರಾಬಾದ್ ತಂಡವು 2016ರಲ್ಲಿ ಚಾಂಪಿಯನ್ ಪಟ್ಟ ಕಿರೀಟ ಗೆದ್ದು, 2018ರಲ್ಲಿ ಚೆನ್ನೇ ಸೂಪರ್ ಕಿಂಗ್ಸ್ ವಿರುದ್ಧ ಸೋಲನ್ನು ಕಂಡು ರನ್ನರಪ್ ಪಡೆಯುವಲ್ಲಿ ಸೀಮಿತವಾಯಿತು. ಇದನ್ನೂ ಓದಿ: ಪಿಎಸ್‍ಎಲ್‍ಗಿಂತ ಐಪಿಎಲ್ ಉತ್ತಮವಾಗಿದೆ: ಪಾಕ್ ಮಾಜಿ ಆಟಗಾರ

    ಇದೀಗ 15ನೇ ಆವೃತ್ತಿಯ ನಾಲ್ಕನೇ ದಿನದ ಆಟದಲ್ಲಿ ಎಸ್‌ಆರ್‌ಎಚ್ ಮತ್ತು ಆರ್‌ಆರ್ ತಂಡಗಳು ಮುಖಾಮುಖಿಯಾಗುತ್ತಿವೆ. ಹೈದ್ರಾಬಾದ್‌ನಲ್ಲಿ ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಅಭಿಶೇಕ್ ಶರ್ಮ, ನಿಕೋಲಾಸ್ ಪೂರನ್ (ವಿಕೆಟ್ ಕೀಪರ್), ಏಡೆನ್ ಮಾರ್‌ಕ್ರಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್‌ಸನ್, ಉಮ್ರಾನ್ ಮಾಲಿಕ್, ಟಿ.ನಟರಾಜನ್ ಇರಲಿದ್ದಾರೆ.

    IPL

    ರಾಜಸ್ಥಾನ್ ರಾಯಲ್ಸ್ ತಂಡದಿಂದ ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕಲ್, ಶಿಮ್ರನ್ ಹೆಟ್ಮೆಯರ್ / ರಾಸೀ ವ್ಯಾನ್ ಡೆರ್ ದುಸ್ಸೆನ್, ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್, ಜೇಮ್ಸ್ ನೀಶಮ್, ಆರ್.ಅಶ್ವಿನ್, ಟ್ರೆಂಟ್‌ಬೋಲ್ಟ್, ಯಜುವೇಂದ್ರ ಚಾಹಲ್, ಪ್ರಸಿದ್ಧ ಕೃಷ್ಣ ಕಣದಲ್ಲಿ ಇರಲಿದ್ದಾರೆ.

    ಈ ಬಾರಿ ಐಪಿಎಲ್‌ನಲ್ಲಿ ಎರಡೂ ತಂಡಗಳಲ್ಲೂ ಹೊಸ ಮುಖಗಳಿಗೆ ಆದ್ಯತೆ ನೀಡಿವೆ. ಆದರೆ ಆರ್‌ಆರ್ ತಂಡದ ಬೌಲಿಂಗ್‌ನಲ್ಲಿ ಅಶ್ಚಿನ್, ಚಾಹಲ್, ನ್ಯೂಜಿಲೆಂಡ್‌ನ ಟ್ರೆಂಟ್ ಬೋಲ್ಟ್‌ನಂತಹ ಅನುಭವೀ ಆಟಗಾರರಿದ್ದಾರೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿಗೆ ತೀವ್ರ ಪೈಪೋಟಿ ನಡೆಯಲಿದೆ.