Tag: ರಾಜಾಹುಲಿ

  • ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಕಿರುತೆರೆ ಮತ್ತು ಹಿರಿತೆರೆ ನಟಿ ತನಿಷಾ ಕುಪ್ಪಂಡ (Tanisha Kuppanda) ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ಬೋಲ್ಡ್ ಆಗಿ ನಟಿಸಿರುವ ಈ ನಟಿಗೆ ಅನೇಕ ರೀತಿಯಲ್ಲಿ ಕಿರುಕುಳ ಆಗಿದೆಯಂತೆ. ಮೊನ್ನೆಯಷ್ಟೇ ಯುಟ್ಯೂಬರ್ ಒಬ್ಬನ ಮೇಲೆ ಆರೋಪ ಮಾಡಿದ್ದ ತನಿಷಾ ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸೂಪರ್ ಹಿಟ್ ಸಿನಿಮಾದ ನಟನೊಬ್ಬನ ಮೇಲೆ ಗುರುತರ ಆರೋಪ ಮಾಡಿದ್ದಾರೆ.

    ಪೆಂಟಗನ್ (Pentagon) ಸಿನಿಮಾದ ಒಂದು ಕಥೆಯಲ್ಲಿ ತನಿಷಾ ಬೋಲ್ಡ್ ಆಗಿರುವಂಥ ಪಾತ್ರವನ್ನು ನಿರ್ವಹಿಸಿದ್ದಾರೆ. ಅದು ಡೇಟಿಂಗ್ ಆಪ್ ಕುರಿತಾದ ಕಥೆಯಾಗಿದ್ದರಿಂದ, ಪಾತ್ರವೇ ಡಿಮಾಂಡ್ ಮಾಡಿದ್ದರಿಂದ ಅಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದೇನೆ ಎನ್ನುತ್ತಾರೆ. ಆದರೆ, ರಾಜಾಹುಲಿ ಅಂತಹ ಹಿಟ್ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರ ಮಾಡಿದ್ದ ನಟನೊಬ್ಬ ತನಿಷಾಗೆ ಬ್ಲೂಫಿಲ್ಮ್ ಮಾಡ್ತೀಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರಂತೆ. ಆ ನಟನ ಬಗ್ಗೆ ಮಾತನಾಡಿದ ತನಿಷಾ ಪತ್ರಿಕಾಗೋಷ್ಠಿಯಲ್ಲೇ ಕಣ್ಣೀರಿಟ್ಟಿದ್ದಾರೆ.

    ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿವೆ. ಕನ್ನಡದ ಪ್ರೇಮ, ಸಾಮಾಜಿಕ ಸಂದೇಶ ಹಾಗೂ ಮನರಂಜನೆ ನೀಡುವಂತಹ ಎಲ್ಲ ಅಂಶಗಳು ಇದ್ದರೂ, ಕೇವಲ ಒಂದೇ ಒಂದು ಕಥೆಯ ಬಗ್ಗೆ ಈ ರೀತಿ ಮಾತನಾಡುವುದು ಸರಿ ಅಲ್ಲ ಎನ್ನುವುದು ತನಿಷಾ ಮಾತು. ಐದು ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅವರು ನನ್ನಿಂದ ಕೆಟ್ಟ ರೀತಿಯಲ್ಲಿ ಪಾತ್ರ ಮಾಡಲು ಸಾಧ್ಯವಾ ಎನ್ನುವುದು ಅವರ ಪ್ರಶ್ನೆ. ಇದನ್ನೂ ಓದಿ: ನಟಿ ನಗ್ಮಾ ಜೊತೆಗೆ ಯಾವುದೇ ಸಂಬಂಧ ಹೊಂದಿಲ್ಲ : ನಟ ರವಿಕಿಶನ್

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

  • ಹೌದು ಹುಲಿಯಾ ಎಂದ ಕಾರ್ಯಕರ್ತ- ರಾಜಾಹುಲಿ ಬಂದ್ಬಿಟ್ಟಿದ್ದಾರೆ ಎಂದ ಸಿದ್ದು

    ಹೌದು ಹುಲಿಯಾ ಎಂದ ಕಾರ್ಯಕರ್ತ- ರಾಜಾಹುಲಿ ಬಂದ್ಬಿಟ್ಟಿದ್ದಾರೆ ಎಂದ ಸಿದ್ದು

    ಬೆಳಗಾವಿ: ನನಗೆ ಹುಲಿಯಾ ಎಂದು ಕರೆದವರು ಜನರು. ಆದರೆ ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಅವರ ಪಕ್ಷದವರೇ ಕರೆದರು ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಕಾಂಗ್ರೆಸ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಡಿಕೆ ಶಿವಕುಮಾರ್ ಅಧ್ಯಕ್ಷರು ಅಲ್ಲದ ಕಾಲದಲ್ಲಿ ಬೆಳಗಾವಿ ಬಗ್ಗೆ ಹೆಚ್ಚು ಆಸಕ್ತಿ ತೆಗೆದುಕೊಂಡಿದ್ದರು ಎಂದು ಹೇಳಿದರು. ಈ ವೇಳೆ ಕಾರ್ಯಕರ್ತರೊಬ್ಬರು ಹೌದು ಹುಲಿಯಾ ಎಂದರು. ಕಾರ್ಯಕರ್ತನ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ಸವಕಲು ಆಗಿ ಹೊಯ್ತು, ಈಗ ರಾಜಾಹುಲಿ ಕಣ್ರಯ್ಯಾ ಎಂದ ನಗೆ ಚಟಾಕಿ ಹಾರಿಸಿದರು. ಬಳಿಕ ನನಗೆ ಹುಲಿಯಾ ಅಂತಾ ಕರೆದವರು ಜನರು. ಯಡಿಯೂರಪ್ಪಗೆ ರಾಜಾಹುಲಿ ಅಂತಾ ಕರೆದವರು ಅವರ ಪಕ್ಷದವರು ಅಂತಾ ವ್ಯಂಗ್ಯವಾಡಿದರು. ಇದನ್ನೂ ಓದಿ: ಸಿಎಂ ಬಿಎಸ್‍ವೈಗೆ ‘ರಾಜಾಹುಲಿ’ ಹೆಸ್ರು ಬಂದಿದ್ದು ಹೇಗೆ?

    ಕಾಂಗ್ರೆಸ್ ಪಕ್ಷಕ್ಕೂ ಬೆಳಗಾವಿಗೂ ಬಹಳ ಅವಿನಾಭಾವ ಸಂಬಂಧ ಇದೆ. ಬೆಳಗಾವಿಯಲ್ಲಿ ಈಗ ಸ್ವಲ್ಪ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಎಂಇಎಸ್ ನವರು ಇರುವುದರಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಲು ಹೋಗಲಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹದಿನೈದು ಸ್ಥಾನ ಗೆಲ್ಲಬೇಕು. 2018ರ ಚುನಾವಣೆಯಲ್ಲಿ ಬಿಜೆಪಿಗೆ ಜನರ ಆಶೀರ್ವಾದ ಇರಲಿಲ್ಲ. ಕಾಂಗ್ರೆಸ್ 80 ಸ್ಥಾನ ಗೆಲುವು ಪಡೆದಿದೆ, ಆದರೆ ಮತಗಳ ಶೇಕಡಾ ಪ್ರಮಾಣದಲ್ಲಿ ನಮಗೇ ಹೆಚ್ಚು ಮತ ಬಂದಿದೆ. ರಾಜ್ಯಪಾಲರು ಕರೆದು ಸಿಎಂ ಆಗಿ ಅಂದ್ರೂ ಯಡಿಯೂರಪ್ಪ ಸಿಎಂ ಆದ ಬಳಿಕ ಬಹುಮತ ತೋರಿಸಲು ಆಗಲಿಲ್ಲ. ಆಗ ರಾಜೀನಾಮೆ ಕೊಟ್ಟು ಹೋದರು. ಆದರೆ ಮತ್ತೆ ಒಬ್ಬ ಶಾಸಕರಿಗೆ ಇಪ್ಪತ್ತು, ಮೂವತ್ತು ಕೋಟಿ ರೂ. ಕೊಟ್ಟು ಬಿಡಲಿಲ್ಲ. ಯಡಿಯೂರಪ್ಪ ರಾಜ್ಯಕ್ಕೆ ಒಳ್ಳೆಯದು ಮಾಡಲು ಅಧಿಕಾರಕ್ಕೆ ಬರಲಿಲ್ಲ, ಲೂಟಿ ಹೊಡೆಯಲು ಬಂದು ಕುಳಿತ್ತಿದ್ದಾರೆ ಎಂದು ಟೀಕೆ ಮಾಡಿದರು.

    ಯಡಿಯೂರಪ್ಪ ನಿಮ್ಮಷ್ಟು ಭ್ರಷ್ಟ ಯಾರು ಇಲ್ಲ, ಅಧಿಕಾರ ಬಿಟ್ಟು ತೊಲಗಿ ಅಂತಾ ಹೇಳಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕೆಟ್ಟ, ಭ್ರಷ್ಟ ಸರ್ಕಾರ ಯಾವ ಕಾಲದಲ್ಲಿ ಬಂದಿಲ್ಲ. ಇದನ್ನ ಹೇಳಿದರೆ ಸಿದ್ದರಾಮಯ್ಯ, ಯಡಿಯೂರಪ್ಪನನ್ನು ಟೀಕೆ ಮಾಡುತ್ತಿದ್ದಾನೆ ಅಂತಾರೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಂಬಳ ಕೊಡಲು ದುಡ್ಡಿಲ್ಲ. ನಾವು ಅಧಿಕಾರಕ್ಕೆ ಬರಲು ಈ ಮಾತು ಹೇಳುತ್ತಿಲ್ಲ ಎಂದರು.

    ರಾಜ್ಯ ಆರ್ಥಿಕತೆಯಲ್ಲಿ ಹತ್ತು ವರ್ಷ ಹಿಂದೆ ಹೋಗಿದೆ. ಮುಂದೆ ನಾವೇ ಅಧಿಕಾರಕ್ಕೆ ಬಂದರೂ ಸರಿಪಡಿಸಲು ಮೂರು ವರ್ಷ ಬೇಕು. ಎಲ್ಲಾ ಭಾಗ್ಯ ನಾವು ಕೊಟ್ಟಿದ್ದು, ಇವರು ತಿನ್ನಪ್ಪ ನುಂಗಪ್ಪ ಮಾಡಿದ್ದು. ಯಡಿಯೂರಪ್ಪ ಅಧಿಕಾರಕ್ಕೆ ಬಂದ ಮೇಲೆ ಈ ವರ್ಷ ತೊಂಬತ್ತು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಬಜೆಟ್ ನಲ್ಲಿ ಐವತ್ತು ಸಾವಿರ ಕೋಟಿ ಸಾಲ ಮಾಡುತ್ತೇವೆ ಎಂದರು. ಆದರೆ ಈಗ ತೊಂಬತ್ತು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಇವರು ಅಧಿಕಾರದಲ್ಲಿ ಇರಬೇಕಾ ನೀವೇ ಹೇಳಿ. ಈಗಲೇ ಹಳ್ಳಿ ಹಳ್ಳಿಗೆ ಹೋಗಿ ಏನು ನಡೆಯುತ್ತಿದೆ ಎಂದು ಹೇಳಬೇಕು. 2023ಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ಕಾರ್ಯಕರ್ತರು ಎಲೆಕ್ಷನ್ ವಾರಿಯರ್ಸ್ ಆಗಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

  • ಸಿಎಂ ಬಿಎಸ್‍ವೈಗೆ ‘ರಾಜಾಹುಲಿ’ ಹೆಸ್ರು ಬಂದಿದ್ದು ಹೇಗೆ?

    ಸಿಎಂ ಬಿಎಸ್‍ವೈಗೆ ‘ರಾಜಾಹುಲಿ’ ಹೆಸ್ರು ಬಂದಿದ್ದು ಹೇಗೆ?

    – ಫ್ಲ್ಯಾಶ್ ಬ್ಯಾಕ್ ಸ್ಟೋರಿ ಓದಿ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಾಹುಲಿ ಆಗಿದ್ದು ಯಾವಾಗ ಎಂಬ ಪ್ರಶ್ನೆಯನ್ನು ವಿಧಾನಸೌಧದ ಕಾರಿಡಾರ್‍ನಲ್ಲಿ ಒಬ್ಬರು ಕೇಳಿದ್ರು. ಆಗಲೇ ನಮ್ಗೆ 2013ರ ಫ್ಲ್ಯಾಶ್ ಬ್ಯಾಕ್ ಟಕಾಟಕಾ ಅಂತ ನೆನಪಿಗೆ ಬಂದಿದ್ದು.

    ಅದು 2012ರ ಡಿಸೆಂಬರ್ 9ರಂದು ಹಾವೇರಿಯಲ್ಲಿ ಕೆಜೆಪಿ ಕಹಳೆ ಮೊಳಗಿಸಿದ್ರು. ಯಡಿಯೂರಪ್ಪ ಅವರ ಆ ದಿನಗಳು ಅವರ ಪಾಲಿನ ಆಗ್ನಿಪರೀಕ್ಷೆಯ ದಿನಗಳಾಗಿದ್ದವು. ಅಧಿಕಾರ ಇರುವಾಗ ಈಗ ಇರುವ ಅಕ್ಕಪಕ್ಕದ ಲೀಡರ್ ಗಳು ಅಂದು ಯಾರೂ ಇರಲಿಲ್ಲ. ಮಲ್ಲೇಶ್ವರಂನ ಮನೆಯೊಂದರಲ್ಲಿ ಕೆಜೆಪಿ ಕಚೇರಿ ಮಾಡಿಕೊಂಡಿದ್ರು. ಆಗ ಸಿ.ಎಂ ಉದಾಸಿ, ಶೋಭಾ ಕರಂದ್ಲಾಜೆ, ದಿವಂಗತ ಧನಂಜಯ್ ಕುಮಾರ್, ಎಂ.ಡಿ. ಲಕ್ಷ್ಮೀ ನಾರಾಯಣ, ರೇಣುಕಾಚಾರ್ಯ ಅವರುಗಳೇ ಸ್ಟಾರ್ ಲೀಡರ್‍ಗಳು. ಆದರೂ ಯಡಿಯೂರಪ್ಪ ಗತ್ತು, ಆತ್ಮವಿಶ್ವಾಸ ಕಡಿಮೆಯಾಗಿರಲಿಲ್ಲ. ಆಗಲೇ ಯಡಿಯೂರಪ್ಪ ಅವರಿಗೆ ರಾಜಾಹುಲಿ ಅನ್ನೋ ಹೆಸರು ಬಂದಿದ್ದು.

    ನಿರ್ಮಾಪಕ ಕೆ.ಮಂಜು ಆಗತಾನೇ ರಾಜಾಹುಲಿ ಸಿನಿಮಾ ಸೆಟ್ಟೇರಿಸಿದ್ರು. ಕೆಜೆಪಿ ಸೇರಿದ್ದ ಕೆ.ಮಂಜು ಆಗಾಗ್ಗೆ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಬರ್ತಿದ್ರು. (ತುರುವೇಕೆರೆ ಟಿಕೆಟ್‍ಗೆ ಪ್ರಯತ್ನಿಸಿದ್ರು) ಆ ವೇಳೆಯಲ್ಲಿ ಮಾಧ್ಯಮದವರ ಜೊತೆ ಸ್ವಲ್ಪ ಟೈಮ್ ಮಾತನಾಡ್ತಿದ್ರು. ಒಂದು ದಿನ ಮಾತನಾಡುವಾಗ ನಮ್ ರಾಜಾಹುಲಿ ಯಡಿಯೂರಪ್ಪ, ನಮ್ ಸಿನಿಮಾನೂ ಹಿಟ್ ಆಗುತ್ತೆ. ಇವರೂ ಹಿಟ್ ಆಗ್ತಾರೆ ಎಂದು ಕೆ.ಮಂಜು ಹೇಳ್ತಿದ್ರು.

    2013ರ ವಿಧಾನಸಭೆ ಎಲೆಕ್ಷನ್ ನಲ್ಲಿ ಬಿಜೆಪಿಯನ್ನ ಮಲಗಿಸುವಲ್ಲಿ ಕೆಜೆಪಿ ಹಿಟ್ ಆದ್ರೆ 2013ರ ನವೆಂಬರ್ 1ರಲ್ಲಿ ತೆರೆಕಂಡ ರಾಜಾಹುಲಿ ಸಿನಿಮಾ ಕೂಡ ಹಿಟ್ ಆಯ್ತು. ಅಲ್ಲಿಂದ ರಾಜಾಹುಲಿ ಹವಾ ಶುರುವಾಗಿದೆ.

  • ಲಿರಿಕಲ್ ಹಾಡು ಕೇಳಿಸ್ತಾನಂತೆ ಜಂಟಲ್ ಮನ್!

    ಲಿರಿಕಲ್ ಹಾಡು ಕೇಳಿಸ್ತಾನಂತೆ ಜಂಟಲ್ ಮನ್!

    ಕನ್ನಡ ಚಿತ್ರರಂಗದ ಯಶಸ್ವೀ ನಿರ್ದೇಶಕರ ಸಾಲಿನಲ್ಲಿ ಬಹು ಹಿಂದಿನಿಂದಲೇ ಸ್ಥಾನ ಗಿಟ್ಟಿಸಿಕೊಂಡಿರುವವರು ಗುರು ದೇಶಪಾಂಡೆ. ರಾಜಾಹುಲಿಯಂಥಾ ಸೂಪರ್ ಹಿಟ್ ಸಿನಿಮಾ ಕೊಟ್ಟು ಆ ಯಶಸ್ಸಿನ ಹಂಗಾಮವನ್ನು ಇದುವರೆಗೂ ಅನೂಚಾನವಾಗಿ ಮುಂದುವರೆಸಿಕೊಂಡು ಬರುತ್ತಿರುವವರು ಗುರು ದೇಶಪಾಂಡೆ. ಅವರು ಇತ್ತೀಚಿನದಿನಗಳಲ್ಲಿ ಜಿ ಸಿನಿಮಾಸ್ ಎಂಬ ಬ್ಯಾನರ್ ಹುಟ್ಟುಹಾಕಿ ಅದರಡಿಯಲ್ಲಿ ಸಿನಿಮಾನಿರ್ಮಾಣಕ್ಕಿಳಿದಿರೋದು ಗೊತ್ತೇ ಇದೆ. ಈ ಬ್ಯಾನರಿನಲ್ಲಿಯೇ ಅವರು ನಿರ್ಮಾಣ ಮಾಡಿರುವ ಜಂಟಲ್ ಮನ್ ಚಿತ್ರವೀಗ ನಾನಾ ದಿಕ್ಕಿನಲ್ಲಿ ಚರ್ಚೆಗೀಡಾಗುತ್ತಿದೆ.

    ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರೀಕರಣದ ಹಂತದಲ್ಲಿಯೇ ಜಂಟಲ್ ಮನ್ ಜೋರಾಗಿಯೇ ಸುದ್ದಿ ಮಾಡಿದೆ. ಇದೀಗ ಈ ಸಿನಿಮಾದ ಲಿರಿಕಲ್ ಸಾಂಗ್ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದೆ. ಇದೇ ತಿಂಗಳ ಹದಿನೆಂಟನೇ ತಾರೀಕಿನಂದು ಈ ಲಿರಿಕಲ್ ಸಾಂಗನ್ನು ಅನಾವರಣಗೊಳಿಸಲು ಚಿತ್ರತಂಡ ನಿರ್ಧರಿಸಿದೆ. ಆ ಕ್ಷಣಗಳೀಗ ಹತ್ತಿರಾಗುತ್ತಿವೆ. ಹಲವಾರು ವರ್ಷಗಳಿಂದ ಗುರು ದೇಶಪಾಂಡೆಯವರ ಗರಡಿಯಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಜಡೇಶ್ ಕುಮಾರ್ ಹಂಪಿ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

    ಗುರು ದೇಶಪಾಂಡೆ, ಜಡೇಶ್ ಕುಮಾರ್ ಗೆ ಅವಕಾಶ ಕಲ್ಪಿಸಲು ಕಾರಣವಾಗಿರೋದು ಅವರು ಸಿದ್ಧಪಡಿಸಿಕೊಂಡಿದ್ದ ಅಪರೂಪದ ಕಥೆ. ಕನ್ನಡದ ಮಟ್ಟಿಗೆ ತೀರಾ ವಿಶೇಷವಾದ ಕಥೆ ಈ ಸಿನಿಮಾದಲ್ಲಿದೆ. ಈಗಾಗಲೇ ಥರ ಥರದ ಪಾತ್ರಗಳಲ್ಲಿ ನಟಿಸಿರುವ ಪ್ರಜ್ವಲ್ ದೇವರಾಜ್ ಅಂತೂ ಪ್ರೇಕ್ಷಕರೆಲ್ಲ ಅಚ್ಚರಿಗೊಳ್ಳುವಂಥಾ ಪಾತ್ರಕ್ಕಿಲ್ಲಿ ಜೀವ ತುಂಬಿದ್ದಾರಂತೆ. ಪ್ರಜ್ವಲ್ ದೇವರಾಜ್ ಇಡೀ ಜಗತ್ತಿನಲ್ಲಿ ಕೆಲವೇ ಕೆಲವರನ್ನು ಬಾಧಿಸುವಂಥಾ ವಿಚಿತ್ರ ಕಾಯಿಲೆ ಪೀಡಿತ ಯುವಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಅದು ದಿನದ ಬಹುಣಾಗವನ್ನು ನಿದ್ರೆಯಲ್ಲಿಯೇ ಕಳೆದು ಉಳಿದ ಕೆಲವೇ ಕೆಲ ಗಂಟೆಗಳಲ್ಲಿ ಓರ್ವ ಯುವಕ ಏನೆಲ್ಲ ಮಾಡುತ್ತಾನೆ, ಅಲ್ಲೆದುರಾಗೋಸವಾಲುಗಳನ್ನು ಹೇಗೆಲ್ಲ ಎದುರಿಸುತ್ತಾನೆಂಬ ರೋಚಕ ಕಥೆ ಈ ಸಿನಿಮಾದಲ್ಲಿದೆ. ಈ ಹಿಂದೆ ಮೈಸೂರಿನಲ್ಲಿ ಡಂಪಿಂಗ್ ಯಾರ್ಡಿನ ಕಸದ ರಾಶಿಯಲ್ಲಿ ಮಲಗಿ ಚಿತ್ರೀಕರಣದಲ್ಲಿ ಭಾಗಿಯಾಗುವ ಮೂಲಕ ಪ್ರಜ್ವಲ್ ಸುದ್ದಿ ಮಾಡಿದ್ದರು. ಮುಂದಿನ ವರ್ಷಾರಂಭದಲ್ಲಿ ತೆರೆಗಾಣಲು ಸಜ್ಜಾಗಿರೋ ಜಂಟಲ್ ಮನ್ ಈಗ ಲಿರಿಕಲ್ ವಿಡಿಯೋ ಮೂಲಕ ಪ್ರೇಕ್ಷಕರನ್ನುಮುಖಾಮುಖಿಯಾಗಲು ತಯಾರಾಗಿದ್ದಾನೆ.

  • ಸಿದ್ದು ರಾಜೀನಾಮೆಗೆ ಮುನ್ನವೇ ಹುಲಿಯಾ ಬಿಜೆಪಿ ಸೇರಿ ‘ರಾಜಾಹುಲಿಯಾ’ ಅಂತಿದ್ದ!

    ಸಿದ್ದು ರಾಜೀನಾಮೆಗೆ ಮುನ್ನವೇ ಹುಲಿಯಾ ಬಿಜೆಪಿ ಸೇರಿ ‘ರಾಜಾಹುಲಿಯಾ’ ಅಂತಿದ್ದ!

    ಚಿಕ್ಕೋಡಿ: ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗುತ್ತಿದೆ. ಬಿಜೆಪಿ ಗೆಲುವಿನ ನಾಗಾಲೋಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಮುನ್ನವೇ ಹುಲಿಯಾ ಖ್ಯಾತಿಯ ಪೀರಪ್ಪ ಕಟ್ಟಿಮನಿ ಬಿಜೆಪಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ.

    ಕಾಗವಾಡ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಜಯಭೇರಿ ಹಿನ್ನೆಲೆಯಲ್ಲಿ ಹೌದು ಹುಲಿಯಾ ಜೊತೆಗೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಒತ್ತಾಯದ ಮೇರೆಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪೀರಪ್ಪ ಕೂಡ ಬಿಜೆಪಿ ಮುಖಂಡರಿಗೆ ಹುಲಿ ಹುಲಿ ಎಂದು ಕರೆದು ಖುಷಿ ಪಟ್ಟಿದ್ದಾನೆ.

    ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಹೌದು ಹುಲಿಯಾ ಖ್ಯಾತಿಯ ಪೀರಪ್ಪ ಕಟ್ಟಿಮನಿ ಬಿಜೆಪಿ ಶಾಲು ಧರಿಸಿ, ತಲೆಗೆ ಬಿಜೆಪಿಯ ಕಮಲದ ಟೋಪಿ ಇಟ್ಟುಕೊಂಡು ಗುಲಾಲ ಎರಚಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಸಂಭ್ರಮಿಸಿದ್ದಾನೆ.

    ಕಾಗವಾಡ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ಪ್ರಚಾರ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಇದೇ ಪೀರಪ್ಪ ‘ಹೌದೋ ಹುಲಿಯಾ’ ಎಂದಿದ್ದರು. ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣ, ಟಿಕ್ ಟ್ಯಾಕ್ ನಲ್ಲಿ ಫುಲ್ ವೈರಲ್ ಆಗಿತ್ತು. ರಾತ್ರೋರಾತ್ರಿ ಪೀರಪ್ಪ ರಾಜ್ಯದ ಗಮನ ಸೆಳೆದಿದ್ದರು.

    ನಾನು ಸಿದ್ದರಾಮಯ್ಯ ಕಟ್ಟಾ ಅಭಿಮಾನಿ ಎಂದಿದ್ದ ಹುಲಿಯಾ ಸೋಮವಾರ ಬಿಜೆಪಿಯವರ ಜೊತೆ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಹುಲಿಯಾ ಎಂದು ಖ್ಯಾತಿಯಾಗಿದ್ದ ಪೀರಪ್ಪ ಕಟ್ಟಿಮನಿ ಅವರನ್ನ ಬಿಜೆಪಿ ಕಾರ್ಯಕರ್ತರು ಆಪರೇಶನ್ ಕಮಲ ನಡೆಸಿ ಬಿಜೆಪಿಗೆ ಸೆಳೆದಿದ್ದಾರೆ ಎಂಬ ನಗೆ ಚಟಾಕಿಗಳು ಈಗ ಕಾಗವಾಡ ಕ್ಷೇತ್ರದಲ್ಲಿ ಜೋರಾಗಿವೆ. ಜೊತೆಗೆ ಹೌದೋ ಹುಲಿಯಾನ ‘ರಾಜಾ ಹುಲಿಯಾ’ ಡೈಲಾಗ್ ಮತ್ತೆ ವೈರಲ್ ಆಗುತ್ತಿದೆ.