Tag: ರಾಜಾ ಮಹಾದೇವರೆಡ್ಡಿ

  • ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ

    ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ

    ಎಸ್.ಟೀಂ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಎಲ್ ಲಕ್ಷ್ಮೀ ನಿರ್ಮಿಸುತ್ತಿರುವ ನ್ಯಾಚುರಲ್, ಥ್ರಿಲ್ಲರ್ ಜಾನರ್ ನ ಹೊಸಬರ ಸಿನಿಮಾ ಸುವರ್ಣ ಸುಂದರಿ. ಚರಿತ್ರೆ ಭವಿಷ್ಯತ್ತನ್ನು ಹಿಂಬಾಲಿಸುತ್ತದೆ ಎಂಬ ಅಡಿ ಬರಹವನ್ನು ಸುವರ್ಣ ಸುಂದರಿ ಹೊಂದಿದೆ. ಈ ಸಿನಿಮಾವನ್ನು ಎಂ.ಎಸ್.ಎನ್ ಸೂರ್ಯ ನಿರ್ದೇಶನ ಮಾಡುತ್ತಿದ್ದು, ಇದೇ ಮೇ 31ರಂದು ಸಿನಿಮಾ ರಿಲೀಸ್ ಆಗಲಿದೆ.

    ಇತ್ತೀಚಿಗೆ ಸುವರ್ಣ ಸುಂದರಿ ಚಿತ್ರತಂಡ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಡೈರೆಕ್ಟರ್ ಸೂರ್ಯ ಮಾತಾಡುತ್ತಾ, ಸುವರ್ಣಸುಂದರಿ ಚಿತ್ರದಲ್ಲಿ ವಿಎಫ್‍ಎಕ್ಸ್ ಗಾಗಿ ಒಂದು ವರ್ಷದವರೆಗೂ ಕೆಲಸ ನಡೆಯಿತು. ಟೈಂ ತೆಗೆದುಕೊಂಡರು. ಔಟ್ ಪುಟ್ ಅದ್ಭುತವಾಗಿ ಬಂದಿದೆ. ಈಗಿನ ಕನ್ನಡ ಚಿತ್ರಗಳಲ್ಲಿ ಸ್ಕ್ರೀನ್ ಪ್ಲೇ ಬೇಸ್ಡ್ ಚಿತ್ರಗಳಲ್ಲಿ ಒಳ್ಳೆಯ ಪ್ರಶಂಸೆಗಳಿವೆ. ಅದೇ ರೀತಿಯಲ್ಲಿ ಸುವರ್ಣಸುಂದರಿ ಮೂರು ಜನ್ಮಗಳ ಕಾನ್ಸೆಪ್ಟ್ ನಿಂದ ಇಂಟ್ರೆಸ್ಟಿಂಗ್ ಸ್ಕ್ರೀನ್ ಪ್ಲೇಯೊಂದಿಗೆ ಮಾಡಿದ್ದೇವೆ. ಪ್ರೇಕ್ಷಕರನ್ನು ಆಕರ್ಷಿಸುವುದರೊಂದಿಗೆ ಕಮರ್ಷಿಯಲ್ ಆಗಿ ಪಕ್ಕಾ ಹಿಟ್ ಆಗಬಹುದೆಂಬ ನಂಬಿಕೆಯಲ್ಲಿದ್ದೇವೆ ಎಂದಿದ್ದಾರೆ.

    ನಿರ್ಮಾಪಕಿ ಲಕ್ಷ್ಮೀ ಮಾತನಾಡಿ, ಸುವರ್ಣ ಸುಂದರಿ ಚಿತ್ರದ ಟ್ರೇಲರ್ ಸಾಧಾರಣ ಪ್ರೇಕ್ಷಕರಿಂದ ಹಿಡಿದು ಸೆಲೆಬ್ರೆಟಿಗಳವರೆಗೂ ಎಲ್ಲರಿಗೂ ಇಷ್ಟವಾಗಿದೆ. ಬಜೆಟ್ ಹೆಚ್ಚಾದರೂ ಕ್ವಾಲಿಟಿ ಔಟ್ ಪುಟ್ ನೋಡಿದ ಮೇಲೆ ಸಿನಿಮಾ ಗೆಲ್ಲುವುದರ ಬಗ್ಗೆ ತುಂಬಾ ಕಾನ್ಫಿಡೆಂಟ್ ಆಗಿ ಇದ್ದೀವಿ. ಶೀಘ್ರದಲ್ಲಿ ಧ್ವನಿ ಸುರುಳಿ ಬಿಡುಗಡೆ ಮಾಡಿ ಮೇ 31ರಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎಂದರು.

    ಸುವರ್ಣ ಸುಂದರಿಯಲ್ಲಿ ಜಯಪ್ರದ, ಪೂರ್ಣ, ಸಾಕ್ಷಿ, ಇಂದ್ರ, ರಾಮ್ ಮುದ್ದು ಕುಮಾರಿ, ಸಾಯಿ ಕುಮಾರ್, ತಿಲಕ್, ಅವಿನಾಶ್, ಜಯ ಜಗದೀಶ್, ಸತ್ಯ ಪ್ರಕಾಶ್ ಇನ್ನಿತರರು ನಿಟಿಸಿದ್ದಾರೆ. ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ರಾಮ ಸುಂಕರ ಸಾಹಸ ಸಂಯೋಜನೆಯನ್ನು ಮಾಡುತ್ತಿದ್ದಾರೆ. ಯುವ ಮಹಂತಿ ಛಾಯಾಗ್ರಹಣ, ನಾಗು ಕಲಾ ನಿರ್ದೇಶನ, ಪ್ರವೀಣ್ ಪುಡಿ ಸಂಕಲನ ಈ ಚಿತ್ರಕ್ಕಿದೆ.

  • ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!

    ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!

    ಎರಡು ವರ್ಷದ ಹಿಂದೆ ಮುಹೂರ್ತ ಆಚರಿಸಿಕೊಂಡಿದ್ದ ‘ಸುವರ್ಣ ಸುಂದರಿ’ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಕ್ರಿ.ಶ. 1508 ರಿಂದ 2018ರವರೆಗಿನ ನಾಲ್ಕು ತಲೆಮಾರಿನ ಕತೆ ಈ ಚಿತ್ರದಲ್ಲಿದೆ. ಶ್ರೀ ಕೃಷ್ಣದೇವರಾಯರ ಅವಧಿಯಲ್ಲಿ ರಾಜಾ ಮಹಾದೇವರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು ಈ ಚಿತ್ರದ ಸನ್ನಿವೇಶಗಳಿಗೆ ವಿಶೇಷವಾಗಿ ಬಳಸಲಾಗಿದೆ.

    ಮೈ ನವಿರೇಳಿಸುವ ರೋಚಕ ಸ್ಟಂಟ್ಸ್ ಗಳು ಈ ಚಿತ್ರದಲ್ಲಿರಲಿವೆ. ಸುವರ್ಣ ಸುಂದರಿಗಾಗಿ ಕೇರಳ, ಹೈದರಾಬಾದ್, ಬೀದರ್, ವಿಧಾನಸೌಧ ರಸ್ತೆ, ನೈಸ್ ರೋಡ್‍ಗಳಲ್ಲಿ 90 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕತೆಗೆ ಪೂರಕವಾಗಿ 50 ನಿಮಿಷ ಗ್ರಾಫಿಕ್ಸ್ ಬಳಸಲಾಗಿದೆ. ನಾಯಕಿಯಾಗಿ ಡೆಹರಾಡೂನ್ ಮೂಲದ ಸಾಕ್ಷಿ ಎರಡು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾರಂಭದ ಅವಧಿಯಲ್ಲಿ ಸಾಯಿಕುಮಾರ್ ಪಾತ್ರವಿರುತ್ತದೆ. ಹಾಗೆಯೇ 1960ರ ಕಲೆಕ್ಟರ್ ಪಾತ್ರದಲ್ಲಿ ತಿಲಕ್ ನಟಿಸಿದ್ದಾರೆ. ಮತ್ತೊಬ್ಬ ನಾಯಕಿ ಪೂರ್ಣ ಮತ್ತು ಜಯಪ್ರದಾ ಪಾತ್ರದ ವಿವರವನ್ನು ಚಿತ್ರತಂಡ ಇನ್ನೂ ಜಾಹೀರು ಮಾಡಿಲ್ಲ. ಈ ಚಿತ್ರದಲ್ಲಿರುವ ಎರಡು ಹಾಡುಗಳಿಗೆ ಸಾಯಿಕಾರ್ತಿಕ್ ಸಂಗೀತ ಸಂಯೋಜಿಸಿದ್ದಾರೆ.

    ಇತಿಹಾಸ ವಿಷಯದಲ್ಲಿ ಪದವಿ ಪಡೆದುಕೊಂಡಿರುವ ಎಂ.ಎಸ್.ಎನ್.ಸೂರ್ಯ ಕತೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಅವರ ಸಹೋದರಿ ನಿರ್ಮಾಪಕಿಯಾಗಿದ್ದಾರೆ. ಬಾಹುಬಲಿ-2 ಚಿತ್ರದ ಸೆಕೆಂಡ್ ಕ್ಯಾಮರಾಮೆನ್ ಯಲ್ಲಮಹಂತಿ ಈಶ್ವರ್ ಛಾಯಾಗ್ರಹಣವಿದ್ದು, ರಾಮ್ ಸುಂಕರ ಸಾಹಸ ಸಂಯೋಜಿಸಿದ್ದಾರೆ.

    ಅನುಷ್ಕಾ ಶೆಟ್ಟಿ ಅಭಿನಯದ ಆರುಂಧತಿ ನಿರ್ಮಾಣದ ಸಂದರ್ಭದಲ್ಲಿ ತಂತ್ರಜ್ಞಾನ ಈಗಿನಷ್ಟು ಮುಂದುವರಿದಿರಲಿಲ್ಲ. ಆದರೆ ಸುವರ್ಣ ಸುಂದರಿಗೆ ಈಗಿನ ಅಪ್‍ಡೇಟೆಡ್ ಟೆಕ್ನಾಲಜಿಯನ್ನು ಬಳಸಿಕೊಂಡಿರುವುದರಿಂದ ದೃಶ್ಯಗಳು ಮತ್ತಷ್ಟು ನೈಜವಾಗಿ ಮೂಡಿಬಂದಿವೆ. ಇದೆಲ್ಲದರ ಪರಿಣಾಮವೆನ್ನುವಂತೆ ಆರು ಕೋಟಿಯಲ್ಲಿ ನಿರ್ಮಾಣಗೊಳ್ಳಬೇಕಿದ್ದ ಸುವರ್ಣ ಸುಂದರಿ ಪ್ರಚಾರದ ಹಂತಕ್ಕೆ ಬರುವ ಹೊತ್ತಿಗೆ ಹತ್ತು ಕೋಟಿಗೆ ಬಂದು ನಿಂತಿದೆಯಂತೆ. ಆದರೂ ಇದಕ್ಕೆಲ್ಲಾ ಚಿಂತೆ ಮಾಡದೆ ಎಂ.ಎನ್.ಲಕ್ಷೀ ಖರ್ಚು ಮಾಡಿದ್ದಾರೆ. ಈ ಚಿತ್ರವು ಇದೇ 31ರಂದು ರಾಜ್ಯದ್ಯಂತ ತೆರೆ ಕಾಣುವ ಸಾಧ್ಯತೆ ಇದೆ.