Tag: ರಾಜೀವ್ ಕುಮಾರ್

  • ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ರಾಜೀವ್‌ ಕುಮಾರ್‌ (Rajiv Kumar) ಅವರ ಅಧಿಕಾರ ಅವಧಿ ಇದೇ ಫೆ.18ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ಮಟ್ಟದ ಉನ್ನತ ಮಟ್ಟದ ಆಯ್ಕೆ ಸಮಿತಿ ಸೋಮವಾರ ಸಭೆ ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಪಿಎಂ ಮೋದಿ (PM Modi), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದ್ದಾರೆ. ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಸಭೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಮೊದಲು ಸರ್ಚಿಂಗ್‌ ಕಮಿಟಿಯಿಂದ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಸಮಿತಿ ಶಿಫಾರಸು ಮಾಡಲಿದೆ. ನಂತರ ಅಧ್ಯಕ್ಷರು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಿಸಲಿದ್ದಾರೆ. ಇದನ್ನೂ ಓದಿ: ಕಳ್ಳರ ಹಾವಳಿಗೆ ಒನಕೆ ಓಬವ್ವನ ರೂಪ ತಾಳಿದ ಮಹಿಳೆಯರು – ರಾತ್ರಿ ಗಸ್ತು ಸಂಚಾರ

    ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದು, ಅವರ ಅಧಿಕಾರ ಅವಧಿಯು ಜನವರಿ 26, 2029ರ ವರೆಗೆ ಇದೆ. ನಂತರದಲ್ಲಿ ಸುಖಬೀರ್ ಸಿಂಗ್ ಸಂಧು ಇದ್ದಾರೆ.

    ರಾಜೀವ್‌ ಕುಮಾರ್‌ ಮುಂದಿನ ನಡೆ ಏನು?
    ನಿವೃತ್ತಿ ಬಳಿಕ ತಮ್ಮ ಮುಂದಿನ ನಡೆ ಏನೆಂಬುದನ್ನು ಈಗಾಗಲೇ ರಾಜೀವ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ. ನಿವೃತ್ತಿ ಬಳಿಕ ಮುಂದಿನ ನಾಲ್ಕೈದು ತಿಂಗಳು ಹಿಮಾಲಯಕ್ಕೆ ತೆರಳುವುದಾಗಿ ಹೇಳಿದ್ದಾರೆ. ನನಗೆ ಸ್ವಲ್ಪ ಏಕಾಂತ ಮತ್ತು ಸ್ವಯಂ ಅಧ್ಯಯನ ಬೇಕಿರುವುದರಿಂದ ಆತ್ಮಾವಲೋಕನ ಮಾಡಿಕೊಳ್ಳುವತ್ತ ಕಾಲ ಕಳೆಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

  • PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    ನವದೆಹಲಿ: ನಿಷೇಧಿತ ಪಿಎಫ್‌ಐ (PFI) ಸಂಘಟನೆಯೊಂದಿಗೆ ಎಸ್‌ಡಿಪಿಐ (SDPI) ಯಾವುದೇ ಸಂಬಂಧ ಹೊಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗ (Election Commission) ಸ್ಪಷ್ಟನೆ ನೀಡಿದೆ.

    ಸೆಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಪಿಎಫ್‌ಐ (PFI) ಸಂಘಟನೆಯನ್ನು ನಿಷೇಧಿಸಿತು. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪಿಎಫ್‌ಐ ಹಾಗೂ ಅದರ 8 ಅಂಗ ಸಂಸ್ಥೆಗಳನ್ನು ನಿಷೇಧಿಸಿತು. ಇದನ್ನೂ ಓದಿ: ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ

    ಎಸ್‌ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ಪಿಎಫ್‌ಐ ನೊಂದಿಗೆ ಯಾವುದೇ ನಂಟಿರುವುದು ಕಂಡುಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ (Rajiv Kumar) ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಈ ಕುರಿತು ಮಾತನಾಡಿರುವ ಅವರು, ಪಿಎಫ್‌ಐ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ನಮಗೆ ತಿಳಿದಿದೆ. ಆದರೆ ಎಸ್‌ಡಿಪಿಐ ಎಲ್ಲಾ ರೀತಿಯ ಅಗತ್ಯ ದಾಖಲೆ ಸಲ್ಲಿಸಿದ್ದು, ಈವರೆಗೂ ಪಿಎಫ್‌ಐನೊಂದಿಗೆ ಯಾವುದೇ ಸಂಪರ್ಕ ಹೊಂದಿರುವುದು ಕಂಡುಬಂದಿಲ್ಲ. ಎಸ್‌ಡಿಪಿಐ ಕಡೆಯಿಂದ ಲೋಪವಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

    2009ರ ಜೂನ್ 21ರಂದು ಎಸ್‌ಡಿಪಿಐ ಅಸ್ತಿತ್ವಕ್ಕೆ ಬಂದಿದ್ದು, 2010 ಏಪ್ರಿಲ್ 13ರಂದು ಭಾರತದ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಂಡಿದೆ. ಇಲ್ಲಿಯವರೆಗೆ ಎಸ್‌ಡಿಪಿಐ ಕರ್ನಾಟಕ, ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಆಂಧ್ರಪ್ರದೇಶಗಳಲ್ಲಿ ಸದಸ್ಯರನ್ನು ಹೊಂದಿದ್ದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಆದಿವಾಸಿಗಳು ಸೇರಿದಂತೆ ಎಲ್ಲ ವರ್ಗದ ನಾಗರಿಕರ ಪ್ರಗತಿಗಾಗಿ ಶ್ರಮಿಸುತ್ತಿದೆ ಎಂದು ಪಕ್ಷ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ನವದೆಹಲಿ: ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಗುರುವಾರ ನೇಮಕಗೊಂಡಿದ್ದಾರೆ.

    ಹಾಲಿ ಸುಶೀಲ್ ಚಂದ್ರ ಅವರ ಅಧಿಕಾರವಧಿ ಮೇ 14ಕ್ಕೆ ಮುಗಿಯಲಿದೆ. ಮೇ 15 ರಂದು ರಾಜೀವ್‌ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್‌

    ಸಚಿವಾಲಯದ ಅಧಿಸೂಚನೆಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು, ರಾಜೀವ್‌ ಕುಮಾರ್‌ ಅವರಿಗೆ ಶುಭಾಶಯ ತಿಳಿಸಿದ್ದಾರೆ.

    ರಾಜೀವ್‌ ಕುಮಾರ್‌ ಅವರು 2020ರಿಂದ ಈವರೆಗೂ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 1984ನೇ ಬ್ಯಾಚ್‌ನ ಜಾರ್ಖಂಡ್‌ ಕೇಡರ್‌ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಅಂಧ ವ್ಯಕ್ತಿ ಮಗಳ ಕನಸ್ಸನ್ನು ಕೇಳಿ ಮೋದಿ ಭಾವುಕ – ವೀಡಿಯೋ ವೈರಲ್

  • ಮೋದಿ ಮತ್ತೆ ಪ್ರಧಾನಿಯಾಗಲ್ಲ, ಸುಪ್ರೀಂನಿಂದ ನೈತಿಕ ಗೆಲುವು – ಮಮತಾ ಬ್ಯಾನರ್ಜಿ

    ಮೋದಿ ಮತ್ತೆ ಪ್ರಧಾನಿಯಾಗಲ್ಲ, ಸುಪ್ರೀಂನಿಂದ ನೈತಿಕ ಗೆಲುವು – ಮಮತಾ ಬ್ಯಾನರ್ಜಿ

    ಕೊಲ್ಕತ್ತಾ: ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡುವ ಮೂಲಕ ನಮಗೆ ನೈತಿಕ ಗೆಲುವು ಸಿಕ್ಕಿದೆ. ಹಾಗೂ ಈ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜೆಗಳಿಗಿಂತ ಯಾರೂ ದೊಡ್ಡವರಲ್ಲ. ಪ್ರಜಾಪ್ರಭುತ್ವವೇ ದೇಶದ ಒಡೆಯ. ನಾವು ಸಾಕ್ಷಿ ನಾಶ ಮಾಡುತ್ತಿದ್ದೇವೆ ಅಂತ ಆರೋಪಿಸಿದ್ದರು. ಅದು ಸುಳ್ಳಾಗಿದೆ. ರಾಜೀವ್ ಕುಮಾರ್ ಪ್ರಕರಣ ಗೆಲುವು ಕೇವಲ ನನ್ನದಲ್ಲ. ಬಂಗಾಳ ಜನತೆ, ಸೇವ್ ಇಂಡಿಯಾ ಕ್ಯಾಂಪೇನ್ ಹಾಗೂ ಸಂವಿಧಾನದ ಗೆಲುವು ಎಂದು ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಮತಾ ಬ್ಯಾನರ್ಜಿ ಗುಡುಗಿದರು.  ಇದನ್ನು ಓದಿ: ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ಪ್ರಕರಣದ ಕುರಿತು ವಿಚಾರಣೆ ನಡೆಯದೇ ಏಕಾಏಕಿ ಸಿಬಿಐ ಅಧಿಕಾರಿಗಳು ರಾಜೀವ್ ಕುಮಾರ್ ಅವರನ್ನು ಭಾನುವಾರ ಬಂಧಿಸಲು ಮುಂದಾಗಿದ್ದರು. ಆದರೆ ಈಗ ಕೋರ್ಟ್ ಆದೇಶದಿಂದ ರಾಜೀವ್ ಕುಮಾರ್ ಅವರನ್ನು ಬಂಧಿಸುವಂತಿಲ್ಲ. ಇಬ್ಬರಿಗೂ ಒಪ್ಪಿಗೆಯಾದ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಎನ್ನುವ ಆದೇಶ ನೀಡಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಜನರಿಗೆ, ರೈತರು, ಕಲಾವಿದರು ಸೇರಿದಂತೆ ಅನೇಕರಿಗೆ ತೊಂದರೆ ಕೊಟ್ಟಿದ್ದಾರೆ. ಹೀಗಾಗಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದಿಲ್ಲ ಎಂದು ಕುಟುಕಿದರು. ಇದನ್ನು ಓದಿ:  ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

    ಕೇಂದ್ರ ಸರ್ಕಾರವು ಎಲ್ಲರನ್ನೂ ಬಂಧಿಸಿ, ರೈಲಿಗೆ ಕಳುಹಿಸಲು ಮುಂದಾಗಿದೆ. ಈ ನೀತಿಯ ವಿರುದ್ಧ ನಾನು ಈ ಧರಣಿ ಮುಂದುವರಿಸಬೇಕಾದರೆ ಇತರ ನಾಯಕರನ್ನು ಭೇಟಿ ಮಾಡುವೆ. ನಾನು ಒಬ್ಬಳೇ ಹೋರಾಡುವುದಿಲ್ಲ. ಈ ನಿಟ್ಟಿನಲ್ಲಿ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ಸೇರಿದಂತೆ ಅನೇಕರ ಬೆಂಬಲ ಪಡೆಯುತ್ತೇನೆ ಎಂದು ಹೇಳಿದರು.

    ರಾಜೀವ್ ಕುಮಾರ್ ವಿರುದ್ಧ ಅವರು ಹಲವಾರು ಆರೋಪಗಳನ್ನು ಮಾಡಲಾಗಿತ್ತು. ಜೊತೆಗೆ ನಾವು ನ್ಯಾಯಾಂಗ ನಿಂದನೆ ಮಾಡಿದ್ದೇವೆ ಎಂದು ಅವರು ದೂರಿದ್ದರು. ಇದು ತಿರಸ್ಕೃತವಾಗಿದೆ ಎಂದು ಹೇಳಿದರು.

    ಚಿಟ್ ಫಂಡ್ ಬಹುಕೋಟಿ ಹಗರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ಅಸ್ಸಾಂ ಉಪ ಮುಖ್ಯಮಂತ್ರಿಗಳು 3 ಕೋಟಿ ರೂ. ಪಡೆದಿದ್ದರು. ಅವರನ್ನು ಬಂಧಿಸಲಾಗಿದೆಯೇ? ರೋಸ್ ವ್ಯಾಲಿ ಗ್ರೂಪ್‍ನ ರೋಸ್ ಅಂತ ಕರೆದುಕೊಂಡಿದ್ದ ಬಾಬುಲ್ ಸುಪ್ರಿಯೋ ಅವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಕೋರ್ಟ್ ಕಲಾಪ ಹೀಗಿತ್ತು

    ನವದೆಹಲಿ: ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

    ಸಿಬಿಐ ಸಲ್ಲಿಸಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಅರ್ಜಿ ವಿಚಾರಣೆ ವೇಳೆ ರಾಜೀವ್ ಕುಮಾರ್ ಅವರು ವಿಚಾರಣೆಗೆ ಹಾಜರಾಗಬೇಕು, ಆದರೆ ಅವರನ್ನು ಬಂಧಿಸುವಂತಿಲ್ಲ ಎಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರಿದ್ದ ತ್ರಿಸದಸ್ಯ ಪೀಠ ಆದೇಶಿಸಿತು.

    ಸಿಬಿಐ ಪರವಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷರ್ ಮೆಹ್ತಾ ಹಾಜರಾಗಿದ್ದರೆ, ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿದ್ದರು.

    ಕೆಕೆ ವೇಣುಗೋಪಾಲ್ ಅವರು ಆರಂಭದಲ್ಲಿ, ರಾಜೀವ್ ಕುಮಾರ್ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದಾರೆ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ ಬಳಿಕ ಸಲ್ಲಿಕೆಯಾದ ದಾಖಲೆಗಳು ತಿರುಚಲ್ಪಟ್ಟಿದೆ. ಯಾಕೆ ತಿರುಚಲ್ಪಟ್ಟಿದೆ ಎಂದು ಕೇಳಿದ್ದಕ್ಕೆ ಇದೂವರೆಗೆ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಿಲ್ಲ. ಫೋನ್ ಕಾಲ್‍ಗಳ ಮಾಹಿತಿ ಡಿಲೀಟ್ ಆಗಿದೆ. ಯಾರ ಯಾರಿಗೆ ಕಾಲ್ ಮಾಡಿದ್ದಾರೆ ಅವುಗಳು ಡಿಲೀಟ್ ಆಗಿದೆ. ಪ್ರಕರಣದ ಆರೋಪಿಯಾಗಿರುವ ಸುದಿಪ್ಟೋ ಸೆನ್ ಫೋನ್ ಮರಳಿ ನೀಡಲಾಗಿದೆ ಎಂದು ತಿಳಿಸಿದರು.

    ವಿಚಾರಣೆಗೆ ಬಂದಿದ್ದ ಸಿಬಿಐ ಅಧಿಕಾರಿಗಳನ್ನು ಬಸ್ಸಿನಲ್ಲಿ ತುಂಬಿಸಲಾಗಿದೆ. ಠಾಣೆಗಳಲ್ಲಿ ಹಲವು ಗಂಟೆಗಳ ಕಾಲ ಅಧಿಕಾರಿಗಳನ್ನು ಪೊಲೀಸರು ವಶದಲ್ಲಿ ಇಟ್ಟಿದ್ದಾರೆ. ಸಿಬಿಐ ಜಂಟಿ ನಿರ್ದೇಶಕರ ಮನೆಗೆ ಮುತ್ತಿಗೆ ಹಾಕಲಾಗಿತ್ತು. ಪಶ್ಚಿಮ ಬಂಗಾಳ ಪೊಲೀಸರ ಹಿಂದೆ ಯಾರಿದ್ದಾರೆ? ಯಾರ ಆದೇಶದ ಹಿನ್ನೆಲೆಯಲ್ಲಿ ಈ ಕೆಲಸಗಳು ನಡೆದಿದೆ ಎಂದು ಪ್ರಶ್ನಿಸಿದರು. ಈ ಪ್ರಕರಣದ ವಿಚಾರಣೆ ನಡೆಸುವಂತೆ ಸಿಬಿಐಗೆ ನೀಡಿದ್ದೇ ಸುಪ್ರೀಂ ಕೋರ್ಟ್. ಹೀಗಾಗಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪೊಲೀಸರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ವಾದಿಸಿದರು.

    ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಾಜರಾಗಿದ್ದ ಅಭಿಷೇಕ್ ಮನು ಸಿಂಘ್ವಿ, ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿಯಾಗಿದೆ. ಪೊಲೀಸರು ಯಾವುದೇ ಸಿಬಿಐ ಅಧಿಕಾರಿಗಳನ್ನು ಬಂಧಿಸಿಲ್ಲ ಮತ್ತು ವಶಕ್ಕೆ ಪಡೆದಿಲ್ಲ, ರಾಜೀವ್ ಕುಮಾರ್ ಅವರು ಹಲವು ಬಾರಿ ತಟಸ್ಥ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಬಿಐಗೆ ಪತ್ರ ಬರೆದಿದ್ದಾರೆ. ರಾಜೀವ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 201(ಪುರಾವೆ ನಾಶ) ಅಡಿಯಲ್ಲಿ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ. ಎಫ್‍ಐಆರ್ ದಾಖಲಾಗದೇ ಬಂಧನ ಮಾಡುವುದು ಎಷ್ಟು ಸರಿ? 5 ವರ್ಷದ ವಿಚಾರಣೆ ನಡೆಯುತ್ತಿದ್ದು ಈಗ ತುರ್ತಾಗಿ ಬಂಧನ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

    ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾಯಮೂರ್ತಿಗಳು, ನೀವು ಬಹಳ ವಿಚಾರಗಳನ್ನು ಊಹೆ ಮಾಡುತ್ತೀರಿ. ಇದು ನಿಮ್ಮ ಸಮಸ್ಯೆ, ಸಿಬಿಐ ತನಿಖೆಗೆ ರಾಜೀವ್ ಕುಮಾರ್ ಸಹಕರಿಸಬೇಕು ಎಂದು ಸಿಂಘ್ವಿಗೆ ಹೇಳಿದರು.

    ಎರಡು ಕಡೆಯ ವಾದವನ್ನು ಅಲಿಸಿದ ಕೋರ್ಟ್ ರಾಜೀವ್ ಕುಮಾರ್ ಅವರನ್ನು ಬಂಧಿಸುವಂತಿಲ್ಲ. ರಾಜೀವ್ ಕುಮಾರ್ ಅವರು ಮೇಘಾಲಯದ ಶಿಲ್ಲಾಂಗ್‍ ನ ತಟಸ್ಥ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿ ಮುಂದಿನ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು. ಈ ವೇಳೆ ನ್ಯಾಯಾಂಗ ನಿಂದನೆ ಕುರಿತ ಅರ್ಜಿಗೆ ಸಂಬಂಧ ಪಟ್ಟಂತೆ ಸಿಬಿಐ ಆರೋಪಗಳಿಗೆ ಫೆ.18ರ ಒಳಗಡೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ಉತ್ತರ ನೀಡುವಂತೆ ಸೂಚಿಸಿತು.

    ವಿಚಾರಣೆ ಫೆ.7ಕ್ಕೆ: ಸಿಬಿಐ ಬಂಧನಕ್ಕೆ ತಡೆ ಕೋರಿ ರಾಜೀವ್ ಕುಮಾರ್ ಪಶ್ಚಿಮ ಬಂಗಾಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ವೇಳೆ ಈ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ಹೇಳಿ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ನವದೆಹಲಿ: ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ತುರ್ತು ಮಧ್ಯಂತರ ಅರ್ಜಿ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಲಿದೆ.

    ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ಆರ್‌ಟಿಜಿಎಸ್‌ ಮೂಲಕ ನಡೆಸಿರುವ ವ್ಯವಹಾರದ ಸಾಕ್ಷ್ಯವನ್ನು ನಾಶ ಮಾಡಲು ಮುಂದಾಗಿದ್ದಾರೆ ಸಿಬಿಐ ಆರೋಪಿಸಿದೆ.

    ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್, ಆರೋಪಗಳಿಗೆ ಸಾಕ್ಷ್ಯವನ್ನು ನೀಡಿ. ನಿಮ್ಮ ಆರೋಪದ ಪ್ರಕಾರವೇ ರಾಜೀವ್ ಕುಮಾರ್ ಸಾಕ್ಷ್ಯವನ್ನು ನಾಶ ಮಾಡುತ್ತಿದ್ದಾರೆ ಎಂದಾದರೆ ಈ ಪ್ರಕರಣವನ್ನು ನಾವು ಗಂಭೀರವಾಗಿ ಸ್ವೀಕರಿಸುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

     

    ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ತುಷರ್ ಮೆಹ್ತಾ ಹಾಜರಾಗಿ, ನಮ್ಮ ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಪೊಲೀಸರು ಅಕ್ರಮವಾಗಿ ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಾಕಷ್ಟು ಬಾರಿ ಸಮನ್ಸ್ ಜಾರಿ ಮಾಡಿದರೂ ಹಾಜರಾಗುತ್ತಿಲ್ಲ. ಹೀಗಾಗಿ ಕೋಲ್ಕತ್ತಾ ಪೊಲೀಸ್ ಆಯುಕ್ತರು ಕೂಡಲೇ ಶರಣಾಗಬೇಕು ಎಂದು ವಾದಿಸಿದರು.

    ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿ ರಾಜೀವ್ ಕುಮಾರ್ ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ ಹೊರತು ಆರೋಪಿಯಲ್ಲ ಎಂದು ತಿಳಿಸಿದರು. ಈ ವೇಳೆ ನಾಳಿನ ವಿಚಾರಣೆಯಲ್ಲಿ ತಮ್ಮ ವಾದಕ್ಕೆ ಪೂರಕ ಮಾಹಿತಿಯನ್ನು ನೀಡುವಂತೆ ಕೋರ್ಟ್ ಸಿಂಘ್ವಿಗೆ ಸೂಚಿಸಿತು.

    ಕಳೆದ ಎರಡು ವರ್ಷಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡುತ್ತಿದ್ದರೂ ರಾಜೀವ್ ಕುಮಾರ್ ವಿಚಾರಣೆ ಹಾಜರಾಗುತ್ತಿಲ್ಲ. ಅಷ್ಟೇ ಅಲ್ಲದೇ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಸಭೆಗಳಿಗೂ ಅವರು ಹಾಜರಾಗಿಲ್ಲ ಎಂದು ಸಿಬಿಐ ಆರೋಪಿಸಿದೆ.

    ಭಾನುವಾರ ಏನಾಯ್ತು?
    ಭಾನುವಾರ ಸಂಜೆ 6.30ರ ವೇಳೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ನಿವಾಸಕ್ಕೆ 40ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ಆಗಮಿಸಿದೆ. ಈ ತಂಡ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಸುದ್ದಿ ತಿಳಿಯುತ್ತಲೇ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದರು. ಈ ವೇಳೆ ಸಿಬಿಐ ಅಧಿಕಾರಿಗಳು ಮತ್ತು ಕೋಲ್ಕತ್ತಾ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟವೂ ನಡೆಯಿತು. ಅಂತಿಮವಾಗಿ 40 ಮಂದಿ ಅಧಿಕಾರಿಗಳ ಪೈಕಿ 15 ಮಂದಿಯನ್ನು ಜೀಪ್‍ನಲ್ಲಿ ಕುಳ್ಳಿರಿಸಿಕೊಂಡು ಹೋದರು.

    ಸಿಬಿಐ ಅಧಿಕಾರಿಗಳು ಬಂದ ವಿಚಾರ ತಿಳಿಯುತ್ತಲೇ ಕೋಪಗೊಂಡ ಮಮತಾ ಬ್ಯಾನರ್ಜಿ ರಾಜೀವ್ ಕುಮಾರ್ ನಿವಾಸಕ್ಕೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ದಂಗೆಗೆ ಕಾರಣವಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಮತಾ ಬ್ಯಾನರ್ಜಿ ಪ್ರತಿಭಟನೆಯ ವೇಳೆ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಧರಣಿ ಸ್ಥಳದಲ್ಲಿಯೇ ಕುಳಿತಿದ್ದರು.

    ಸಿಬಿಐ ಹೋಗಿದ್ದು ಯಾಕೆ?
    ಬಂಗಾಳ ಶಾರದಾ ಮತ್ತು ರೋಸ್ ವ್ಯಾಲಿ ಹಗರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಈ ತಂಡದ ನೇತೃತ್ವವನ್ನು ರಾಜೀವ್ ಕುಮಾರ್ ವಹಿಸಿದ್ದರು. ತನಿಖೆ ವಿಳಂಬವಾಗಿದ್ದ ಕಾರಣ ಸಿಬಿಐ ರಾಜೀವ್ ಕುಮಾರ್ ಮೇಲೆಯೇ ಶಂಕೆ ವ್ಯಕ್ತಪಡಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ರಾಜೀವ್ ಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಭಾನುವಾರ ಅವರ ನಿವಾಸಕ್ಕೆ ತೆರಳಿತ್ತು.

    ಸಿಬಿಐ ಹೇಳೋದು ಏನು?
    ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಚಿಟ್‍ಫಂಡ್ ಹಗರಣದ ತನಿಖೆ ನಡೆದಿದೆ. ಈ ತನಿಖೆಗೆ ಯಾರ ಅನುಮತಿಯೂ ಬೇಕಿಲ್ಲ. ಸ್ಥಳೀಯ ಪೊಲೀಸರು ತನಿಖೆಗೆ ಸಹಕಾರ ನೀಡಬೇಕು. ಆದರೆ ನಮ್ಮ ಮನವಿಯನ್ನು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್‌  ಪಡೆಗಳನ್ನು ಭದ್ರತೆಗೆ ಕರೆಸಿಕೊಂಡಿದ್ದೇವೆ ಎಂದು ಸಿಬಿಐ ನಿರ್ದೇಶಕ ನಾಗೇಶ್ವರ ರಾವ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಬಿಐ Vs ಮಮತಾ: ಅಧಿಕಾರಿಗಳನ್ನೇ ವಶಕ್ಕೆ ಪಡೆದ ಪೊಲೀಸರು – ದೀದಿ ಅಹೋರಾತ್ರಿ ಧರಣಿ

    ಸಿಬಿಐ Vs ಮಮತಾ: ಅಧಿಕಾರಿಗಳನ್ನೇ ವಶಕ್ಕೆ ಪಡೆದ ಪೊಲೀಸರು – ದೀದಿ ಅಹೋರಾತ್ರಿ ಧರಣಿ

    – ಇಂದು ಸುಪ್ರೀಂಗೆ ಸಿಬಿಐ
    – ಕೋಲ್ಕತ್ತಾದಲ್ಲಿ ಭಾರೀ ಹೈಡ್ರಾಮ
    – ಮಮತಾಗೆ ನಾಯಕರ ಬೆಂಬಲ
    – ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಒತ್ತಾಯ

    ಕೋಲ್ಕತ್ತಾ/ನವದೆಹಲಿ: ಇತಿಹಾಸವೇ ಕಂಡರಿಯದ ಕಾನೂನು ಹಾಗೂ ಬೀದಿ ಸಂಘರ್ಷಕ್ಕೆ ಪಶ್ಚಿಮ ಬಂಗಾಳ ಸಾಕ್ಷಿಯಾಗಿದೆ. ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಪ್ರಶ್ನಿಸಲು ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಭಾನುವಾರ ರಾತ್ರಿ ವಶಕ್ಕೆ ಪಡೆದ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.

    ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಐತಿಹಾಸಿಕ ಮೆಟ್ರೋ ಸಿನಿಮಾ ಬಳಿ ಅಹೋರಾತ್ರಿ ಧರಣಿ ನಡಸಿದ್ದಾರೆ. ಕೋಲ್ಕತ್ತಾದಲ್ಲಿರುವ ಸಿಬಿಐ ಕಚೇರಿ ಬ್ಲಾಕ್ ಮಾಡಿ ಅಹೋರಾತ್ರಿ ಧರಣಿ ಕುಳಿತಿದ್ದು, ಮೋದಿ ತೊಲಗಿಸಿ, ದೇಶ ಉಳಿಸಿ ಆಂದೋಲನಕ್ಕೆ ಕರೆ ನೀಡಿದ್ದಾರೆ.

    ರಾಜ್ಯಾದ್ಯಂತ ಟಿಎಂಸಿ ಕಾರ್ಯಕರ್ತರು ಬೀದಿಗಿಳಿದಿದ್ದು, ರೈಲ್ ರೋಕೋ ಚಳವಳಿ ನಡೆಸಿದ್ದಾರೆ. ಅಧಿಕಾರಿಗಳನ್ನು ವಶಕ್ಕೆ ಪಡೆದ ಬೆನ್ನಲ್ಲೆ ಸಿಬಿಐ ತನ್ನ ಸಿಬ್ಬಂದಿ ಭದ್ರತೆಗೆ ಸಿಆರ್‍ಪಿಎಫ್ ನಿಯೋಜಿಸಿದೆ. ರಾಜ್ಯಪಾಲರಾದ ಕೇಸರಿನಾಥ್ ತ್ರಿಪಾಠಿ ಈ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿದೆ.

    ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳು ಬಹುಕೋಟಿ ಹಗರಣದ ವಿರುದ್ಧ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿರುವ ಸಿಬಿಐನ ಹಂಗಾಮಿ ನಿರ್ದೇಶಕ ಎಂ.ನಾಗೇಶ್ವರ ರಾವ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬಿಜೆಪಿ ನಾಯಕರು ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಸಂಜೆ ಏನಾಯ್ತು?
    ಭಾನುವಾರ ಸಂಜೆ 6.30ರ ವೇಳೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ನಿವಾಸಕ್ಕೆ 40ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ಆಗಮಿಸಿದೆ. ಈ ತಂಡ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಸುದ್ದಿ ತಿಳಿಯುತ್ತಲೇ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದರು. ಈ ವೇಳೆ ಸಿಬಿಐ ಅಧಿಕಾರಿಗಳು ಮತ್ತು ಕೋಲ್ಕತ್ತಾ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟವೂ ನಡೆಯಿತು. ಅಂತಿಮವಾಗಿ 40 ಮಂದಿ ಅಧಿಕಾರಿಗಳ ಪೈಕಿ 15 ಮಂದಿಯನ್ನು ಜೀಪ್‍ನಲ್ಲಿ ಕುಳ್ಳಿರಿಸಿಕೊಂಡು ಹೋದರು.

    ಸಿಬಿಐ ಅಧಿಕಾರಿಗಳು ಬಂದ ವಿಚಾರ ತಿಳಿಯುತ್ತಲೇ ಕೋಪಗೊಂಡ ಮಮತಾ ಬ್ಯಾನರ್ಜಿ ರಾಜೀವ್ ಕುಮಾರ್ ನಿವಾಸಕ್ಕೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ದಂಗೆಗೆ ಕಾರಣವಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಮತಾ ಬ್ಯಾನರ್ಜಿ ಪ್ರತಿಭಟನೆಯ ವೇಳೆ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಧರಣಿ ಸ್ಥಳದಲ್ಲಿಯೇ ಕುಳಿತಿದ್ದರು.

    ಸಿಬಿಐ ಹೋಗಿದ್ದು ಯಾಕೆ?
    ಬಂಗಾಳ ಶಾರದಾ ಮತ್ತು ರೋಸ್ ವ್ಯಾಲಿ ಹಗರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಈ ತಂಡದ ನೇತೃತ್ವವನ್ನು ರಾಜೀವ್ ಕುಮಾರ್ ವಹಿಸಿದ್ದರು. ತನಿಖೆ ವಿಳಂಬವಾಗಿದ್ದ ಕಾರಣ ಸಿಬಿಐ ರಾಜೀವ್ ಕುಮಾರ್ ಮೇಲೆಯೇ ಶಂಕೆ ವ್ಯಕ್ತಪಡಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ರಾಜೀವ್ ಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಭಾನುವಾರ ಅವರ ನಿವಾಸಕ್ಕೆ ತೆರಳಿತ್ತು.

    ಸಿಬಿಐ ಹೇಳೋದು ಏನು?
    ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಚಿಟ್‍ಫಂಡ್ ಹಗರಣದ ತನಿಖೆ ನಡೆದಿದೆ. ಈ ತನಿಖೆಗೆ ಯಾರ ಅನುಮತಿಯೂ ಬೇಕಿಲ್ಲ. ಸ್ಥಳೀಯ ಪೊಲೀಸರು ತನಿಖೆಗೆ ಸಹಕಾರ ನೀಡಬೇಕು. ಆದರೆ ನಮ್ಮ ಮನವಿಯನ್ನು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಆರ್‍ಪಿಎಫ್ ಪಡೆಗಳನ್ನು ಭದ್ರತೆಗೆ ಕರೆಸಿಕೊಂಡಿದ್ದೇವೆ ಎಂದು ಸಿಬಿಐ ನಿರ್ದೇಶಕ ನಾಗೇಶ್ವರ ರಾವ್ ತಿಳಿಸಿದ್ದಾರೆ.

    ನಾಯಕರಿಂದ ಬೆಂಬಲ:
    ಮಮತಾ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ದೇವೇಗೌಡ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು, ಎಸ್‍ಪಿ ಅಧ್ಯಕ್ಷ ಅಖೀಲೇಶ್ ಯಾದವ್ ಸೇರಿದಂತೆ ಪ್ರಮುಖರು ಬೆಂಬಲ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv