Tag: ರಾಜು

  • ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ – ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್‌ ಶಾಕ್‌ ನೀಡಿ ಸಿಕ್ಕಿಬಿದ್ದ

    ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ – ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್‌ ಶಾಕ್‌ ನೀಡಿ ಸಿಕ್ಕಿಬಿದ್ದ

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder Case) 9ನೇ ಆರೋಪಿ ರಾಜು (Raju) ಅಲಿಯಾಸ್‌ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಅಸಲಿಗೆ ದರ್ಶ‌ನ್‌ಗೂ (Darshan) ಧನರಾಜುಗೆ ನೇರ ನೇರ ಸಂಪರ್ಕ ಇಲ್ಲ. ಆದರೆ ಸ್ನೇಹಿತನ ಮಾತು ಕೇಳಿ ರಾಜು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

    ದರ್ಶನ್‌ (Darshan) ಮೇಲಿನ ಅಂಧಾಭಿಮಾನದಿಂದ ಎ5 ಆರೋಪಿ ನಂದೀಶ್‌ ಸ್ನೇಹಿತನನ್ನ ಭಾಗಿಯಾಗಿಸಿದ್ದಾನೆ. ಜೊತೆಗೆ ಕೆಲಸ ಮಾಡುತ್ತಿದ್ದವನ ಮಾತು ಕೇಳಿ ಎಲೆಕ್ಟ್ರಿಕ್ ಡಿವೈಸ್ ತಂದು ಸಹಾಯ ಮಾಡಿದ್ದಕ್ಕೆ ಈಗ ರಾಜು ಈ ಪ್ರಕರಣದ ಆರೋಪಿ ಪಟ್ಟಿ ಸೇರಿದ್ದಾನೆ. ಇದನ್ನೂ ಓದಿ: ಗುಜರಾತ್‌ ಗಲಭೆ, ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿಲ್ಲ: NCERT ನಿರ್ದೇಶಕ

    ನಂದೀಶ್‌ ಜೊತೆ ಬೆಂಗಳೂರಲ್ಲಿ ರಾಜು ಕೇಬಲ್ ಕೆಲಸ ಮಾಡಿಕೊಂಡಿದ್ದ. ಕೇಬಲ್ ಕೆಲಸ ಮಾಡುತ್ತಿದ್ದರಿಂದ ಎಲೆಕ್ಟ್ರಿಕಲ್ ಮೆಗ್ಗಾರ್ ಬಗ್ಗೆ ಆರೋಪಿಗಳು ತಿಳಿದುಕೊಂಡಿದ್ದರು.

    ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಗೆ ನಂದೀಶ್‌ ಮತ್ತು ಇತರ ಆರೋಪಿಗಳು ಕರೆಂಟ್‌ ಶಾಕ್‌ ನೀಡುವ ಪ್ಲ್ಯಾನ್‌ ಮಾಡಿದ್ದರು. ಜೂನ್‌ 8 ರಂದು ಮೆಗ್ಗಾರ್ ಸಾಧನದ ಜೊತೆ ರಾಜುನನ್ನು ಪಟ್ಟಣಗೆರೆ ಶೆಡ್‌ಗೆ ನಂದೀಶ್ ಕರೆಸಿಕೊಂಡಿದ್ದ. ಪ್ಲ್ಯಾನ್‌ನಂತೆ ರಾಜುವಿನಿಂದ ಎಲೆಕ್ಟ್ರಿಕಲ್ ಮೆಗ್ಗಾರ್‌ ಯಂತ್ರವನ್ನು ನಂದೀಶ್ ತರಿಸಿಕೊಂಡಿದ್ದರು. ಆ ಮೆಗ್ಗಾರ್‌ ಯಂತ್ರವನ್ನು ಬಳಸಿ ರೇಣುಕಾಸ್ವಾಮಿಗೆ ಆರೋಪಿಗಳು ಕರೆಂಟ್ ಶಾಕ್ ನೀಡಿದ್ದರು.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜು ತಲೆ ಮರೆಸಿಕೊಂಡಿದ್ದ. ಈ ಪ್ರಕರಣದಲ್ಲಿ ರಾಜು ಪಾತ್ರ ಇರುವುದನ್ನು ಖಚಿತಪಡಿಸಿದ ಪೊಲೀಸರು ಎಫ್‌ಐಆರ್‌ನಲ್ಲಿ 9ನೇ ಆರೋಪಿಯನ್ನಾಗಿ ಹೆಸರಿಸಿದ್ದರು. ನಾಪತ್ತೆಯಾಗಿದ್ದ ಸ್ನೇಹಿತ ರಾಜುವನ್ನು ಬೆಂಗಳೂರಿನ ಸ್ನೇಹಿತನ ಮನೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಸದ್ಯ ರಾಜುವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾಜು ಜೊತೆ ಎಲೆಕ್ಟ್ರಿಕಲ್ ಮೆಗ್ಗರ್ ಯಂತ್ರ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ರಾಜು ತನ್ನ ಪಾತ್ರವನ್ನು ವಿವರಿಸಿದ್ದಾನೆ.

  • ಬೈಕ್ ದಾನ ಮಾಡಿ, ಕೊಟ್ಟ ಮಾತು ಉಳಿಸಿಕೊಂಡ ಡ್ರೋನ್ ಪ್ರತಾಪ್

    ಬೈಕ್ ದಾನ ಮಾಡಿ, ಕೊಟ್ಟ ಮಾತು ಉಳಿಸಿಕೊಂಡ ಡ್ರೋನ್ ಪ್ರತಾಪ್

    ಬಿಗ್ ಬಾಸ್ (Big Boss) ಸ್ಪರ್ಧೆಯಲ್ಲಿ ತಮಗೆ ಬಹುಮಾನವಾಗಿ ಬಂದಿದ್ದ ಎಲೆಕ್ಟ್ರಿಕ್ ಬೈಕ್ ಅನ್ನು ದಾನ ಮಾಡುವುದಾಗಿ ವೇದಿಕೆಯ ಮೇಲೆಯೇ ಘೋಷಿಸಿದ್ದರು ಡ್ರೋನ್ ಪ್ರತಾಪ್ (Drone Pratap). ಅಗತ್ಯವಿದ್ದವರಿಗೆ ಈ ಬೈಕ್ ಅನ್ನು ನೀಡುವುದಾಗಿ ತಿಳಿಸಿದ್ದರು. ಹೇಳಿದ ಹಾಗೆ ಪ್ರತಾಪ್ ನಡೆದುಕೊಂಡಿದ್ದಾರೆ.

    ಬಿಗ್ ಬಾಸ್ ಸ್ಪರ್ಧೆಯಲ್ಲಿ ಡ್ರೋನ್ ಪ್ರತಾಪ್ ಗೆ ಹತ್ತು ಲಕ್ಷ ರೂಪಾಯಿ ಹಣ ಮತ್ತು ಒಂದು ಎಲೆಕ್ಟ್ರಿಕ್ ಬೈಕ್ (Bike) ಬಹುಮಾನವಾಗಿ ಬಂದಿತ್ತು. ತಮಗೆ ಬಹುಮಾನವಾಗಿ ಬಂದ ಅಷ್ಟೂ  ಹಣವನ್ನೂ ದಾನ ಮಾಡುವುದಾಗಿ ಹೇಳಿಕೊಂಡಿದ್ದರು. ಅದರ ಮೊದಲ ಭಾಗವಾಗಿ ಈಗ ಬೈಕ್ ಅನ್ನು ನೀಡಿದ್ದಾರೆ.

    ಬೆಂಗಳೂರಿನ ರಾಜು (Raju) ಎನ್ನುವವರು ತಮ್ಮ ಗೆಳೆಯನ ಹೆಸರಿನಲ್ಲಿ ಬೈಕ್ ತೆಗೆದುಕೊಂಡು ತಿಂಗಳ ಕಂತು ಕಟ್ಟುತ್ತಾ ಫುಡ್ ಡಿಲೆವರಿ ಮಾಡುತ್ತಿದ್ದರು. ಗೆಳೆಯ ಮೋಸ ಮಾಡಿದ್ದಕ್ಕೆ ಬೈಕ್ ಅನ್ನು ಬ್ಯಾಂಕ್ ನವರು ಸೀಸ್ ಮಾಡಿದ್ದರು. ಅಂತಹ ರಾಜುವಿಗೆ ತಮಗೆ ಬಹುಮಾನವಾಗಿ ಬಂದಿದ್ದ ಬೈಕ್ ಅನ್ನು ಡ್ರೋನ್ ನೀಡಿದ್ದಾರೆ.

     

    ಬೈಕ್ ನೀಡುವುದಷ್ಟೇ ಅಲ್ಲ, ರಾಜು ಅವರ ಮನೆಗೂ ಡ್ರೋನ್ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಮತ್ತಷ್ಟು ನೆರವಿನ ಅಗತ್ಯವಿದ್ದರೆ ಮಾಡುವುದಾಗಿಯೂ ಅವರು ಹೇಳಿದ್ದಾರೆ. ಈ ಮೂಲಕ ಡ್ರೋನ್ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

  • ಹೊಸ ವರ್ಷಕ್ಕೆ ಮದ್ಯ ಖರೀದಿಸಲು 6 ತಿಂಗಳ ಮಗನನ್ನೇ ಮಾರಾಟಕ್ಕಿಟ್ಟ ಭೂಪ!

    ಹೊಸ ವರ್ಷಕ್ಕೆ ಮದ್ಯ ಖರೀದಿಸಲು 6 ತಿಂಗಳ ಮಗನನ್ನೇ ಮಾರಾಟಕ್ಕಿಟ್ಟ ಭೂಪ!

    – ಪತ್ನಿ ಹಣ ಕೊಡದಿದ್ದಕ್ಕೆ ಕಂದಮ್ಮನನ್ನೇ ಮಾರಿದ

    ಹೈದರಾಬಾದ್: ಮದ್ಯದ ಚಟಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಹೊಸ ವರ್ಷದ ಸಂಭ್ರಮಾಚರಣೆಗೆ ಮದ್ಯ ಖರೀದಿಸಲು ತನ್ನ ಮಗನನ್ನೇ ಮಾರಾಟಕ್ಕಿಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ರಾಜು ಮತ್ತು ಸಾರಾ ದಂಪತಿ ಮಲಕ್‍ಪೇಟೆ ಏರಿಯಾ ಆಸ್ಪತ್ರೆಯ ಬಳಿ ಫುಟ್‍ಪಾತ್‍ನಲ್ಲಿ ವಾಸಿಸುತ್ತಾ ಜೀವನ ನಡೆಸುತ್ತಿದ್ದರು. ದಂಪತಿಗೆ 6 ತಿಂಗಳ ಗಂಡು ಮಗುವೊಂದಿತ್ತು. ಹೊಸ ವರ್ಷದ ಗುಂಗಿನಲ್ಲಿದ್ದ ರಾಜು ತನ್ನ ಪತ್ನಿ ಸಾರಾ ಜೊತೆ ಮದ್ಯ ಖರೀದಿಸಲು ಹಣ ಕೇಳಿದ್ದಾನೆ. ಆಕೆ ಹಣ ಕೊಡಲು ನಿರಾಕರಿಸಿದ್ದರಿಂದ ತನ್ನ 6 ತಿಂಗಳ ಮಗುವನ್ನೇ ಮಾರಾಟ ಮಾಡಲು ಹೊರಟಿದ್ದಾನೆ.

    ಹೊಸ ವರ್ಷದ ಆಚರಣೆಗಾಗಿ ಮದ್ಯಕುಡಿಯಲು ಹಣ ಕೊಡದಿದ್ದ ಪತ್ನಿಯ ವಿರುದ್ಧ ಕೋಪಗೊಂಡ ರಾಜು ತನ್ನ ಆರು ತಿಂಗಳ ಗಂಡು ಮಗುವನ್ನು ಆಫ್ರೀನ್ ಎಂಬ ಏಜೆಂಟ್‍ನ ಸಹಾಯದಿಂದ ಮಾರಾಟ ಮಾಡಲು ಯತ್ನಿಸಿದ್ದಾನೆ. ಅದರಂತೆ ಏಜೆಂಟ್, ಗಂಡು ಮಗುವನ್ನು ಬಯಸುವ ಗ್ರಾಹಕರನ್ನು ಸಂಪರ್ಕಿಸಿ 70,000 ರೂಪಾಯಿಗೆ ಮಾರಾಟ ಮಾಡಿ ಕೊಡುವುದಾಗಿ ರಾಜುಗೆ ತಿಳಿಸಿದ್ದಾನೆ.

    ಆಫ್ರೀನ್ ಮಗುವಿನೊಂದಿಗೆ ಎಬ್ಬಿ ನಗರಕ್ಕೆ ಕರೆದುಕೊಂಡು ಬಂದು ಮಾರಾಟ ಮಾಡುತ್ತಿರುವುದರ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಚಾದರ್‍ಘಾಟ್ ಪೊಲೀಸರು, ರಾಜು ಮತ್ತು ಆಫ್ರೀನ್ ನಡುವೆ ಹಣದ ವಿಚಾರವಾಗಿ ಚೌಕಾಸಿ ನಡೆಯುತ್ತಿರುವುದನ್ನು ಗಮನಿಸಿದ್ದಾರೆ. ನಂತರ ಸಿಸಿಟಿವಿ ಆಧಾರದ ಮೂಲಕ ಮಗುವನ್ನು ಮಾರಾಟ ಮಾಡಿದ ಸ್ಥಳವನ್ನು ಗುರುತು ಮಾಡಿ ಮಗುವನ್ನು ರಕ್ಷಿಸಿದ್ದಾರೆ. ರಾಜು ಮತ್ತು ಆಫ್ರೀನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಚಾದರ್‍ಘಾಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಪರಿಹಾರ- ಗುಂಡೂರಾವ್ ಆರೋಪಕ್ಕೆ ಪ್ರತಾಪ್ ಸಿಂಹ ಕೆಂಡಾಮಂಡಲ

    ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಪರಿಹಾರ- ಗುಂಡೂರಾವ್ ಆರೋಪಕ್ಕೆ ಪ್ರತಾಪ್ ಸಿಂಹ ಕೆಂಡಾಮಂಡಲ

    ಮೈಸೂರು: ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಬಿಜೆಪಿ ಪರಿಹಾರ ನೀಡಿದೆ ಅಂತ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಮಾಡಿರುವ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ಕೆಂಡಾಮಂಡಲರಾಗಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ಅಮಿತ್ ಶಾ ಅವರನ್ನು ಕ್ರಿಮಿನಲ್ ಅಂತ ಕರೆದು ಗಡಿಪಾರು ಮಾಡಬೇಕುಂತ ಹೇಳಿ ಕರೆ ಕೊಟ್ಟು ಚುನಾವಣಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಅವರು ದೂರು ಕೊಟ್ಟಿದ್ದಾರೆ. ಇದರ ಜೊತೆಗೆ ಬಿಜೆಪಿ ನಾಯಕರು ಇಲ್ಲಿಯವರೆಗೆ ಏನ್ ಮಾಡಿದ್ದಾರೆ ಅನ್ನೋ ಪ್ರಶ್ನೆಯನ್ನು ಕೂಡ ಹಾಕಿದ್ದಾರೆ. ನಾನು ಮೈಸೂರಿನವನು, ಮೈಸೂರು ಬಗ್ಗೆ ಪ್ರೀತಿಯಿದೆ ಅಂತ ಬಾಡೂಟ, ಮೀನೂಟ ಹಾಗೂ ಮದುವೆ ಮುಂಜಿ ಅಂತ ಮೈಸೂರಿಗೆ ಆಗಾಗ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜು ಹತ್ಯೆಯಾಗಿ ಒಂದೂವರೆ ವರ್ಷ ಕಳೆದ್ರೂ, ಅವರ ತಾಯಿಯ ಕಣ್ಣೀರು ಒರೆಸುವ ಅಥವಾ ಸಾಂತ್ವಾನ ಹೇಳುವ ಕೆಲಸವನ್ನು ಮಾಡಿದ್ದಾರೆಯೇ ಅಂತ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜುವನ್ನು ಹತ್ಯೆ ಮಾಡಿದ ಅಬೀಬ್ ಪಾಷಾ ಮೇಲಿನ ಚಾರ್ಜ್ ಶೀಟನ್ನು ವೀಕ್ ಮಾಡಿ ಆತನ ಬಿಡುಗಡೆಯಾಗುವವರೆಗೆ ನೋಡಿಕೊಂಡರು. ಅಲ್ಲದೇ ಆತ ಜೈಲಿನಿಂದ ಬಿಡುಗಡೆಯಾದ ಬಳಿಕ ಆತನನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಿದ್ದಾರೆ. ಈ ಎಲ್ಲಾ ಘಟನೆಗಳನ್ನು ನೋಡಿಯೂ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ. ಇಂದು ಅದೇ ಅಬೀಬ್ ಪಾಷಾ ಯಾರೋ ಒಬ್ಬ ಸಂಸದರನ್ನು ಹತ್ಯೆ ಮಾಡಲು ಹೊಂಚುಹಾಕಿದ್ದಾನೆ ಎಂಬುವುದನ್ನು ಮಾಧ್ಯಮಗಳು ವರದಿ ಮಾಡಿದ್ದವು. ದಿನೇಶ್ ಗುಂಡೂರಾವ್ ಅವರಿಗೆ ಕನಿಷ್ಠ ಸೌಜನ್ಯ, ನೈತಿಕತೆ ಇದ್ದಿದ್ದೇ ಆದ್ರೆ ಅವರ ಮುಖ್ಯಮಂತ್ರಿ ನಡೆದುಕೊಳ್ಳುವ ರೀತಿಯ ಬಗ್ಗೆ ಮಾತನಾಡಲಿ ಅಂತ ಸಚಿವರ ವಿರುದ್ಧ ಕೆಂಡಾಮಂಡಲರಾದ್ರು.  ಇದನ್ನೂ ಓದಿ: ಅಮಿತ್ ಶಾ ರಿಂದ ನೀತಿ ಸಂಹಿತೆ ಉಲ್ಲಂಘನೆ – ಗಡಿಪಾರಿಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್

    ಚುನಾವಣಾ ಆಯೋಗಕ್ಕೆ ದೂರು: ರಾಜು ಕುಟುಂಬಕ್ಕೆ ಪರಿಹಾರ ಕೊಟ್ಟಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಡ್ತೀವಿ ಅಂತ ಹೇಳ್ತಾ ಇರೋ ನೀವುಗಳು, ನಮ್ಮ ಕಾರ್ಯಕರ್ತ ಸತ್ತಾಗ ಅವರ ಬೆಂಬಲಕ್ಕೆ ಯಾರು ನಿಂತಿದ್ದರು ಎಂಬುವುದು ನಿಮಗೆ ತಿಳಿದಿದೆಯಾ?. ನಿನ್ನೆ ಅಮಿತ್ ಶಾ ಅವರು ಏನೂ ಪರಿಹಾರ, ದುಡ್ಡು ಕೊಟ್ಟಿಲ್ಲ. ಒಂದು ವೇಳೆ ಕೊಟ್ಟಿದ್ದೇವೆ ಅಂತಾನೇ ತಿಳ್ಕೊಳ್ಳಿ. ನಾವು ಕಾಂಗ್ರೆಸ್ ಅಥವಾ ಸಾರ್ವಜನಿಕರ ಹಣ ಕೊಟ್ಟಿಲ್ಲ. ನಮ್ಮ ಪಕ್ಷದ ಕಾರ್ಯಕರ್ತನ ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಹೀಗಾಗಿ ನಮ್ಮ ಪಕ್ಷದ ಹಣವನ್ನೇ ನೀಡಿದ್ದೇವೆ ಅಂತ ತಿಳ್ಕೊಳ್ಳಿ. ಇದರಿಂದ ನಿಮಗೇನು ತೊಂದ್ರೆ ಅಂತ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ರು.

    ಅಬೀಬ್ ಪಾಷಾನನ್ನು ಬಿಡುಗಡೆಗೊಳಿಸಿ ಇದೀಗ ಆತ ಮತ್ತೊಂದು ಹತ್ಯೆ ಮಾಡಿದ್ರೆ ನಿಮ್ಮ ನೀತಿ ಸಂಹಿತೆ ತಡೆಯುತ್ತಾ ಅಂತ ಮರುಪ್ರಶ್ನೆ ಹಾಕಿದ ಅವರು ದಿನೇಶ್ ಗುಂಡೂರಾವ್ ಅವರು ಸ್ವಲ್ಪ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯ ಪ್ರಮುಖ ಆರೋಪಿಗೆ ಜಾಮೀನು-ಹಾರ, ತುರಾಯಿ ಹಾಕಿ ಭರ್ಜರಿ ಸ್ವಾಗತ

    ಕಾಂಗ್ರೆಸ್ ನ ರಾಜಕಾರಣ ಏನು ಎಂಬುದು ನಮಗೆ ತಿಳಿದಿದೆ. ಒಬ್ಬ ಮಗನನ್ನು ಕಳೆದುಕೊಂಡ ತಾಯಿಯ ಆ ದುಃಖವನ್ನು ಅರ್ಥಮಾಡಿಕೊಳ್ಳಿ. ಚುನಾವಣೆಗೂ ಈ ವಿಚಾರಕ್ಕೂ ಸಂಬಂಧ ಕಲ್ಪಿಸಬೇಡಿ. ರಾಷ್ಟ್ರೀಯ ಅಧ್ಯಕ್ಷರು ಇಲ್ಲಿಗೆ ಬಂದಿರುವ ಸಂದರ್ಭದಲ್ಲಿ ರಾಜು ಮನೆಗೆ ಭೇಟಿ ನೀಡಿ ಅವರ ತಾಯಿಗೆ ಸಾಂತ್ವಾನ ಹೇಳಿ, ಧೈರ್ಯ ತುಂಬಿದ್ದಾರೆ ಅಷ್ಟೇ ಅಂತ ಸ್ಪಷ್ಟಪಡಿಸಿದ್ದಾರೆ.

    24 ಜನರನ್ನ ಕಳೆದುಕೊಂಡ ನೋವು ನಮಗಿದೆ: ಒಟ್ಟಿನಲ್ಲಿ ಶಾ ಅವರು ರಾಜು ಮನೆಗೆ ಭೇಟಿ ನೀಡಿದ್ದರ ಕುರಿತು ಕೇಸ್ ಹಾಕೋದಾದ್ರೆ ಹಾಕಿ. ಇದರಿಂದ ನಮಗೇನೂ ಬೇಜಾರಿಲ್ಲ. 24 ಜನ ಕಾರ್ಯಕರ್ತರನ್ನು ಕಳೆದುಕೊಂಡ ನಮ್ಮ ನೋವು ಬೇರೆ ಇದೆ. ಹೀಗಾಗಿ ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಲು ಯಾವ ನೀತಿ ಸಂಹಿತೆಗೂ ಸಾಧ್ಯವಿಲ್ಲ. ಸಿಎಂ ಅವರು ಅರ್ಧ ಗಂಟೆ ಸಮಯ ನಿಗದಿ ಮಾಡಿಕೊಂಡು ರಾಜು ಮನೆಗೆ ಹೊಗಿಲ್ಲ. 8 ಕೊಲೆ ಪ್ರಕರಣದ ಆರೋಪಿಯಾಗಿರುವ ಅಬೀಬ್ ಪಾಷಾ ಬಿಡುಗಡೆಗೆ ಅನುಕೂಲ ಮಾಡಿದ್ರಿ ಅಂತ ಸಿಎಂ ಅವರನ್ನು ಪ್ರಶ್ನಿಸಿದ್ರು.  ಇದನ್ನೂ ಓದಿರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

    ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಿನ್ನೆ ಮೈಸೂರಿಗೆ ಬೇಟಿ ನಿಡಿದ್ದು, ಇದೇ ವೇಳೆ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ರಾಜು ಮನೆಗೆ ಭೇಟಿ ನೀಡಿ ಅವರ ತಾಯಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದರು. ಈ ಸಂದರ್ಭದಲ್ಲಿ ರಾಜು ಕುಟುಂಬಕ್ಕೆ ಬಿಜೆಪಿ ಪರಿಹಾರ ನೀಡಿದೆ ಅಂತ ಕಾಂಗ್ರೆಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿತ್ತು.