Tag: ರಾಜೇಂದ್ರ ಗುಧಾ

  • ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಕ್ಕೆ ಸಚಿವ ರಾಜೇಂದ್ರ ಗುಧಾ ವಜಾ

    ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಕ್ಕೆ ಸಚಿವ ರಾಜೇಂದ್ರ ಗುಧಾ ವಜಾ

    ಜೈಪುರ: ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ವಜಾಗೊಳಿಸಿದ್ದಾರೆ.

    ರಾಜೇಂದ್ರ ಗುಧಾ (Rajendra Gudha) ಅವರು ಸೈನಿಕ ಕಲ್ಯಾಣ್, ಗೃಹರಕ್ಷಕ ದಳ ಮತ್ತು ನಾಗರಿಕಾ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಗುಧಾ ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕೆಲವೇ ಗಂಟೆಗಳ ಬಳಿಕ ಈ ಮಹತ್ತರ ಬೆಳವಣಿಗೆ ನಡೆದಿದೆ.

    ಗುಧಾ ಹೇಳಿದ್ದೇನು..?: ಮಣಿಪುರದಲ್ಲಿ (Manipur Women) ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ರಾಜಸ್ಥಾನದ (Rajasthan) ಮಹಿಳೆಯರ ಮೇಲಿನ ಘಟನೆಗಳೊಂದಿಗೆ ರಾಜೇಂದ್ರ ಗುಧಾ ಹೋಲಿಕೆ ಮಾಡಿದ್ದರು. ರಾಜಸ್ಥಾನದಲ್ಲೂ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆಯುತ್ತಿವೆ ಎಂದು ಅಧಿವೇಶನದಲ್ಲಿ ಹೇಳಿದ್ದಾರೆ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಬೇರೆ ರಾಜ್ಯಗಳ ಬದಲು ಸ್ವಂತ ಹಿತ್ತಲನ್ನೇ ನೋಡಬೇಕು ಎಂದಿದ್ದರು.

    ಗುಧಾ ಅವರ ಈ ಹೇಳಿಕೆಯನ್ನು ತಕ್ಷಣವೇ ಕಾಂಗ್ರೆಸ್ ಹೈಕಮಾಂಡ್ (Congress Highcommand) ಗಮನಕ್ಕೆ ತರಲಾಯಿತು. ಹೈಕಮಾಂಡ್‍ನಿಂದ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೇ ಅಶೋಕ್ ಗೆಹ್ಲೋಟ್, ಗುಧಾ ಅವರನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

    ವಜಾಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುಧಾ, ಮಹಿಳೆಯರ ಮೇಲಿನ ಅಪರಾಧಗಳಲ್ಲಿ ರಾಜಸ್ಥಾನ ನಂಬರ್ ಒನ್ ಸ್ಥಾನದಲ್ಲಿದೆ. ಅಷ್ಟಕ್ಕೂ ನಾನೇನು ಹೇಳಿದ್ದೆ..?. ಒಟ್ಟಿನಲ್ಲಿ ಸತ್ಯ ಹೇಳಿದ್ದಕ್ಕೆ ನನಗೆ ಶಿಕ್ಷೆಯಾಗಿದೆ ಎಂದು ಕಿಡಿಕಾರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು 25 ಕೋಟಿ ಆಫರ್‌ ಬಂದಿತ್ತು: ರಾಜಸ್ಥಾನ ಸಚಿವ ಆರೋಪ

    ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು 25 ಕೋಟಿ ಆಫರ್‌ ಬಂದಿತ್ತು: ರಾಜಸ್ಥಾನ ಸಚಿವ ಆರೋಪ

    ಜೈಪುರ: ಈಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಿದರೆ 25 ಕೋಟಿ ನೀಡುವ ಆಮಿಷವನ್ನು ನನಗೆ ಒಡ್ಡಲಾಗಿತ್ತು ಎಂದು ರಾಜಸ್ಥಾನದ ಸಚಿವ ರಾಜೇಂದ್ರ ಗುಧಾ ಗಂಭೀರ ಆರೋಪ ಮಾಡಿದ್ದಾರೆ.

    ರಾಜೇಂದ್ರ ಗುಧಾ ಅವರು ಬಿಎಸ್‌ಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. 2020 ರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧದ ಬಂಡಾಯದ ಸಂದರ್ಭದಲ್ಲಿ ತನಗೆ ಇದೇ ರೀತಿ 60 ಕೋಟಿ ರೂ. ಆಮಿಷ ಬಂದಿತ್ತು ಎಂದು ಹೇಳಿದ್ದರು. ಇದನ್ನೂ ಓದಿ: ಹಪ್ಪಳದ ಪ್ಯಾಕೆಟ್‍ನಲ್ಲಿ 15 ಲಕ್ಷ ಮೌಲ್ಯದ ಅಮೆರಿಕನ್ ಡಾಲರ್‌ – ವ್ಯಕ್ತಿ ಬಂಧನ

    ಜುಂಜುವಿನ ಖಾಸಗಿ ಶಾಲೆಯೊಂದರಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ಸಚಿವ ರಾಜೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಆದರೆ ಆಮಿಷವನ್ನು ಒಡ್ಡಿದ ನಾಯಕ ಅಥವಾ ಪಕ್ಷ ಯಾವುದು ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

    ಸದ್ಭಾವನೆ ಕುರಿತು ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ರಾಜೇಂದ್ರ ಗುಧಾ ಅವರು, ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ನನಗೆ 25 ಕೋಟಿ ಆಮಿಷ ಬಂದಿತ್ತು. ಈ ವಿಚಾರವನ್ನು ನನ್ನ ಪತ್ನಿ ಬಳಿಯೂ ಹೇಳಿದ್ದೆ ಎಂದು ಉತ್ತರಿಸಿದ್ದಾರೆ. ಈ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿಲ್ಲ, ಅದು ಸ್ವಾಭಾವಿಕ: ನಿರ್ಮಲಾ ಸೀತಾರಾಮನ್

    ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನನಗೆ 60 ಕೋಟಿ ರೂ. ಆಫರ್‌ ಕೂಡ ಇತ್ತು. ನಾನು ನನ್ನ ಕುಟುಂಬದೊಂದಿಗೆ ಈ ಬಗ್ಗೆ ಮಾತನಾಡಿದೆ. ನಮಗೆ ಸದ್ಭಾವನೆ ಬೇಕು, ಹಣವಲ್ಲ ಎಂದು ಕುಟುಂಬದವರು ನನಗೆ ಮನವರಿಕೆ ಮಾಡಿದ್ದರು ಎಂದು ಸ್ಮರಿಸಿದ್ದಾರೆ.

    2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಗುಧಾ ಅವರು 2019ರಲ್ಲಿ ಕಾಂಗ್ರೆಸ್‌ಗೆ ಸೇರಿದರು. 2020ರಲ್ಲಿ ಪೈಲಟ್ ಮತ್ತು ಇತರ 18 ಕಾಂಗ್ರೆಸ್ ಶಾಸಕರು, ನಾಯಕತ್ವದ ವಿರುದ್ಧ ಬಂಡಾಯವೆದ್ದಾಗ ಗುಧಾ ಅವರು ಗೆಹ್ಲೋಟ್ ಬಣದಲ್ಲಿಯೇ ಇದ್ದರು.

    Live Tv
    [brid partner=56869869 player=32851 video=960834 autoplay=true]