ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಛಾಪು ಮೂಡಿಸಿರುವ ನಟ ರಾಜೇಶ್ ಧ್ರುವ (Rajesh Dhruva) ಹೀರೋ ಆಗಿರುವ ಅಭಿನಯಿಸಿರುವ ಹೊಸ ಸಿನಿಮಾ ಪೀಟರ್. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಕುತೂಹಲಕಾರಿ ಟೀಸರ್ ಬಿಡುಗಡೆಯಾಗಿದೆ.
ಥಿಂಕ್ ಮ್ಯೂಸಿಕ್ ಕನ್ನಡ ಯೂಟ್ಯೂಬ್ನಲ್ಲಿ ಪೀಟರ್ ಸಿನಿಮಾದ ಆಕರ್ಷಕ ಟೀಸರ್ ಅನಾವರಣ ಮಾಡಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಹಾಗೂ ಪ್ರೀತಿ-ಫ್ಯಾಮಿಲಿ ಕಂಟೆಂಟ್ ಜೊತೆಗೆ ಚೆಂಡೆ ಮೇಳವನ್ನು ಇಟ್ಕೊಂಡು ಟೀಸರ್ ಕಟ್ ಮಾಡಿದ್ದಾರೆ. ರಾಜೇಶ್ ಧ್ರುವ, ಪ್ರತಿಮಾ ನಾಯಕ್, ಜಾನ್ವಿ ರಾಯಲ, ರಘು ಪಾಂಡೇಶ್ವರ ಇಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.ಇದನ್ನೂ ಓದಿ: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು
‘ದೂರದರ್ಶನ’ ಚಿತ್ರ ಖ್ಯಾತಿಯ ನಿರ್ದೇಶಕ ಸುಕೇಶ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಬಾರಿ ಸುಕೇಶ್ ಸೆನ್ಸಿಟಿವ್ ಸಸ್ಪೆನ್ಸ್ ಡ್ರಾಮಾ ಕಥಾಹಂದವರನ್ನು ಪ್ರೇಕ್ಷಕರಿಗೆ ಉಣ ಬಡಿಸಲಿದ್ದಾರೆ. ಟೀಸರ್ ಮೂಲಕ ಮತ್ತಷ್ಟು ಚಿತ್ರದ ಮೇಲೆ ಭರವಸೆ ಹೆಚ್ಚಾಗಿದೆ. ಸಿನಿಮಾದಲ್ಲಿ ಜಾನ್ವಿ ರಾಯಲ, ರವೀಕ್ಷಾ ಶೆಟ್ಟಿ, ಪ್ರತಿಮಾ ನಾಯಕ್, ರಘು ಪಾಂಡೇಶ್ವರ್, ರಾಮ ನಾಡಗೌಡ, ವರುಣ್ ಪಟೇಲ್ ತಾರಾಬಳಗದಲ್ಲಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ಸೌಂಡ್ ಇಂಜಿನಿಯರ್ ರವಿ ಹೀರೆಮಠ್ ಹಾಗೂ ರಾಕೇಶ್ ಹೆಗಡೆ ವೃದ್ಧಿ ಸ್ಟುಡಿಯೊಸ್ ಬ್ಯಾನರ್ ನಡಿ ಪೀಟರ್ ಸಿನಿಮಾ ನಿರ್ಮಿಸಿದ್ದಾರೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ನವೀನ್ ಶೆಟ್ಟಿ ಸಂಕಲನ, ದೇವರಾಜ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಬಹು ಭಾಷೆಯಲ್ಲಿ ಪೀಟರ್ ಸಿನಿಮಾ ತೆರೆಗೆ ಬರಲಿದೆ.ಇದನ್ನೂ ಓದಿ: ಬೆನ್ನು ನೋವಿದ್ರೂ ನನ್ನನ್ನ ಎತ್ತಿಕೊಳ್ಳುವ ದೃಶ್ಯ ಮಾಡಲು ಒಪ್ಪಿಕೊಂಡಿದ್ರು – ರಚನಾ ರೈ
ಬಾಲಿವುಡ್ನ ಸಂಗೀತ ನಿರ್ದೇಶಕ ಕಮ್ ಗಾಯಕ ಅಜಯ್ ಗೋಗವಾಲೆ (Ajay Gogavale) ಅವರು ಸ್ಯಾಂಡಲ್ವುಡ್ಗೆ (Sabdalwood)ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ಕನ್ನಡ ಚಿತ್ರಕ್ಕೆ ಅವರು ಹಾಡಿದ್ದಾರೆ. ಇದನ್ನೂ ಓದಿ:ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು
‘ದೂರದರ್ಶನ’ ಚಿತ್ರ ನಿರ್ದೇಶಿಸಿದ್ದ ಸುಕೇಶ್ ಶೆಟ್ಟಿ ನಿರ್ದೇಶನದ ‘ಪೀಟರ್’ ಚಿತ್ರಕ್ಕೆ (Peter Film) ಬಾಲಿವುಡ್ ಗಾಯಕ ಅಜಯ್ ಗೋಗವಾಲೆ ಹಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಟುಡಿಯೋಗೆ ಆಗಮಿಸಿ ತಮ್ಮ ಹಾಡಿನ ಭಾಗ ಪೂರ್ಣಗೊಳಿಸಿ ತೆರಳಿದ್ದಾರೆ. ಇದನ್ನೂ ಓದಿ:ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್ ಫೋಟೋ ಹಂಚಿಕೊಂಡ ಮೇಘನಾ
ಅಂದಹಾಗೆ, ಈ ಚಿತ್ರದಲ್ಲಿ ‘ಅಗ್ನಿಸಾಕ್ಷಿ’ ಖ್ಯಾತಿಯ (Agnisakshi) ರಾಜೇಶ್ ಧ್ರುವ, ರವೀಕ್ಷಾ ಶೆಟ್ಟಿ, ಜಾನ್ವಿ ರಾಯಲ, ಪ್ರತಿಮಾ ನಾಯಕ್, ರಘು ಪಾಂಡೇಶ್ವರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ವೃದ್ಧಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ. ಕನ್ನಡ, ಮಲಯಾಳಂ, ತಮಿಳಿನಲ್ಲಿ ಸಿನಿಮಾ ಮೂಡಿ ಬರಲಿದೆ.
ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss Kannada 10) ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಯಾರೆಲ್ಲಾ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆಗೆ ಬರುತ್ತಾರೆ ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಮನೆ ಮಾಡಿದೆ. ಹೀಗಿರುವಾಗ ‘ಅಗ್ನಿಸಾಕ್ಷಿ’ (Agnisakshi) ಖ್ಯಾತಿಯ ರಾಜೇಶ್ ಧ್ರುವ (Rajesh Dhruva), ದೊಡ್ಮನೆಗೆ ಕಾಲಿಡುವ ಬಗ್ಗೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ರಾಜೇಶ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಹೋಗುತ್ತಿಲ್ಲ: ನಟಿ ರಂಜನಿ ರಾಘವನ್ ಸ್ಪಷ್ಟನೆ
ಬಿಗ್ ಬಾಸ್ಗೆ ಬರಲಿರುವ ಅಂದಾಜಿಸಲ್ಪಟ್ಟ ಸ್ಪರ್ಧಿಗಳ ಪಟ್ಟಿಯಲ್ಲಿ ನನ್ನ ಹೆಸರು ಚಾಲ್ತಿಯಲ್ಲಿದೆ ಅಂತಾ ತುಂಬಾ ಜನ ವಿಶ್ ತಿಳಿಸುತ್ತಾ ಇದ್ದೀರಿ, ಆದರೆ ನಾನು ಬಿಗ್ ಬಾಸ್ ಶೋಗೆ ಹೋಗುತ್ತಿಲ್ಲ. ಅದಕ್ಕೆ ಕಾರಣ ಕಿರುತೆರೆಯಲ್ಲಿ ಒಂದೊಳ್ಳೆ ಪಾತ್ರದ ಮೂಲಕ ಮತ್ತೆ ಸಕ್ರಿಯ ಆಗಿದ್ದೀನಿ, ಉಳಿದೆಲ್ಲ ಮಾಹಿತಿ ಶೀಘ್ರದಲ್ಲಿ ತಿಳಿಸುವೆ. ನಿಮ್ಮ ಹಾರೈಕೆ- ಪ್ರೀತಿ ಸದಾ ನನ್ನ ಜೊತೆಯಿರಲಿ, ಧನ್ಯೋಸ್ಮಿ ಎಂದು ರಾಜೇಶ್ ಧ್ರುವ ಬರೆದುಕೊಂಡಿದ್ದಾರೆ. ಈ ಮೂಲಕ ಬಿಗ್ ಬಾಸ್ಗೆ ಹೋಗುವ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ.
ಜನಪ್ರಿಯ ‘ಅಗ್ನಿಸಾಕ್ಷಿ’ ಸೀರಿಯಲ್ನಲ್ಲಿ ರಾಜೇಶ್ ಪಾತ್ರಕ್ಕೆ ಪ್ರಾಮುಖ್ಯತೆ ಇತ್ತು. ಅವರ ಪಾತ್ರ ಪ್ರೇಕ್ಷರ ಗಮನ ಸೆಳೆದಿತ್ತು. ನಾಯಕ ನಟ ಸಿದ್ಧಾರ್ಥ್ ಪಾತ್ರದಷ್ಟೇ ಇವರ ಪಾತ್ರ ಕೂಡ ಹೈಲೆಟ್ ಆಗಿತ್ತು.
ಸರಯೂ, ಅರಮನೆ ಗಿಳಿ, ಸೇರಿದಂತೆ ಹಲವು ಸೀರಿಯಲ್ ಮತ್ತು ರಿಯಾಲಿಟಿ ಶೋನಲ್ಲಿ ರಾಜೇಶ್ ಕಾಣಿಸಿಕೊಂಡಿದ್ದಾರೆ. ‘ಶ್ರೀ ಬಾಲಾಜಿ ಸ್ಟುಡಿಯೋ’ ಚಿತ್ರದ ಮೂಲಕ ನಟ ಗಮನ ಸೆಳೆದಿದ್ದರು. ಈ ಚಿತ್ರ ಮಲಯಾಳಂ ಭಾಷೆಯಲ್ಲೂ ಡಬ್ ಆಗಿದೆ.
ಕಿರುತೆರೆ ನಟ ಸಂಪತ್ ಜಯರಾಮ್ (Sampath Jayram) ಏ.22ರಂದು ಇಹಲೋಕ ತ್ಯಜಿಸಿದ್ದರು. ಸಂಪತ್ ಸಾವಿನ ಬೆನ್ನಲ್ಲೇ ಸಾಕಷ್ಟು ಗಾಸಿಪ್ಗಳು ಹುಟ್ಟಿಕೊಂಡವು ಹಾಗಾಗಿ ಸಹನಟನ ಸಾವಿಗೆ ಅಸಲಿ ಕಾರಣವೇನು ಎಂಬುದನ್ನ ‘ಅಗ್ನಿಸಾಕ್ಷಿ’ (Agnisakshi) ಖ್ಯಾತಿಯ ರಾಜೇಶ್ ಧ್ರುವ (Rajesh Dhruva)ತಿಳಿಸಿದ್ದಾರೆ. ಆಪ್ತ ಸ್ನೇಹಿತನ ಬಗ್ಗೆ ಕೆಟ್ಟ ಗಾಸಿಪ್ಗಳನ್ನ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು?
ಸಂಪತ್ ಮೂಲತಃ ಮಲೆನಾಡಿನ ಪ್ರತಿಭೆ, ಕಿರುತೆರೆ ಅಗ್ನಿಸಾಕ್ಷಿ ಸೀರಿಯಲ್ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ (Vaishnavi Gowda) ಅವರ ಅಣ್ಣನ ಪಾತ್ರದಲ್ಲಿ ಸಂಪತ್ ಮಿಂಚಿದ್ದರು. ನಟ ರಾಜೇಶ್ ಧ್ರುವ ಜೊತೆ ‘ಶ್ರೀ ಬಾಲಾಜಿ ಸ್ಟುಡಿಯೋ’ ಸೇರಿದಂತೆ ಹಲವು ಸೀರಿಯಲ್, ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಸಂಪತ್ ಸಾವಿನ ಬೆನ್ನಲ್ಲೇ ಸಾಕಷ್ಟು ಅಂತೆ ಕಂತೆ ಗಾಸಿಪ್ಗಳು ಶುರುವಾದವು. ಸಂಪತ್ ಸಾವಿನ ನೆಗೆಟಿವ್ ಸುದ್ದಿಗಳಿಗೆ ರಾಜೇಶ್ ಧ್ರುವ ಬ್ರೇಕ್ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಶೇರ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ ರಾತ್ರಿ 2 ಗಂಟೆಗೆ ರವಿ ಅವರಿಂದ ನನಗೆ ಕರೆ ಬರುತ್ತೆ ನಾನು ಕೂಡ ನಿದ್ರೆಯಲ್ಲಿದ್ದೆ. ಫೋನ್ ಸೈಲೆಂಟ್ನಲ್ಲಿ ಇರಲಿಲ್ಲ ರಿಂಗ್ ಆಗಿದಕ್ಕೆ ಪಿಕ್ ಮಾಡಿ ಮಾತನಾಡಿದೆ. ಸಂಪತ್ಗೆ ತುಂಬಾ ಸೀರಿಯಸ್ ಅಂತ ಹೇಳಿದರು ಎದ್ದೋ ಬಿದ್ನೋ ಅಂತ ಓಡಿ ಹೋದೆ ಅಷ್ಟರಲ್ಲಿ ಸಂಪತ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಯಾಕೆ ಸಂಪತ್ ಈ ರೀತಿ ಮಾಡಿಕೊಂಡರು ಅಂತ ವಿಚಾರಿಸಿದಾಗ ಅಲ್ಲಿ ಬಂದಂತ ಕಾಮನ್ ಉತ್ತರ ಇತ್ತೀಚಿಗೆ ಮದುವೆ ಮಾಡಿಕೊಂಡಿದ್ದ ಒಂದು ವರ್ಷ ಕೂಡ ಆಗಿರಲಿಲ್ಲ ಪತ್ನಿ ಚೈತನ್ಯ 5 ತಿಂಗಳ ಗರ್ಭಿಣಿ. 11 ಅಥವಾ 12 ವರ್ಷಗಳ ಕಾಲ ಪ್ರೀತಿಸಿ ಇಬ್ಬರೂ ಮನೆಯಲ್ಲಿ ಒಪ್ಪಿಸಿ, ಇಂಟರ್ ಕಾಸ್ಟ್ ಮದುವೆ ಮಾಡಿಕೊಂಡಿದ್ದರು. ತುಂಬಾ ಚೆನ್ನಾಗಿ ಜೀವನ ಲೀಡ್ ಮಾಡುತ್ತಿದ್ದರು. ಅವರಿಬ್ಬರ ಜೀವನದಲ್ಲಿ ಒಂದು ಹುಳುಕು ಇರಲಿಲ್ಲ. ಅವರ ಮದುವೆ ಪ್ರೀ-ವೆಡ್ಡಿಂಗ್ ಶೂಟ್ನ ನಾನೇ ಮಾಡಿಕೊಟ್ಟಿದ್ದು. ಅವರ ಮದುವೆ ಸಂಭ್ರಮದಲ್ಲಿ ಭಾಗಿಯಾಗಿರುವೆ. ಅವರ ಲವ್ ಸ್ಟೋರಿ ಪ್ರತಿಯೊಂದು ನನಗೆ ಗೊತ್ತು ಎಂದು ರಾಜೇಶ್ ಮಾತನಾಡಿದ್ದಾರೆ. ಇದನ್ನೂ ಓದಿ:ನಟ, ನಿರ್ದೇಶಕ ಟಪೋರಿ ಸತ್ಯ ನಿಧನ
ಸಂಪತ್ ಹೇಗೆ ಅನ್ನೋದು ಪ್ರತಿಯೊಬ್ಬರಿಗೂ ಗೊತ್ತು ಅಷ್ಟು ಸಿಂಪಲ್ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವ ವೀಕ್ ಮೈಂಡ್ ಹುಡುಗ ಅಲ್ಲ ಏಕೆಂದರೆ ಸಂಪತ್ ಅನೇಕರಿಗೆ ತಿದ್ದಿ ಬುದ್ಧಿ ಹೇಳಿದ್ದಾರೆ. ಆರ್ಥಿಕ ಸಮಸ್ಯೆ ಇತ್ತು ಗಂಡ-ಹೆಂಡತಿ ನೆಮ್ಮದಿಯಾಗಿ ಇರಲಿಲ್ಲ, ಅವಕಾಶ ಸಿಗಲಿಲ್ಲ ಎಂದು ಡಿಪ್ರೆಶನ್ನಲ್ಲಿದ್ದ ಅಂತಾ ವಿಡಿಯೋ ಹರಿದಾಡುತ್ತಿದೆ. ಚಾನ್ಸ್ ಇರಲಿಲ್ಲ ನಿಜ ಆದರೆ ನಮ್ಮ ತಂಡದಲ್ಲಿ ನಮಗೆ ನಾವೇ ಚಾನ್ಸ್ ಸೃಷ್ಠಿ ಮಾಡಿಕೊಳ್ಳುತ್ತಿದ್ವಿ. ಸ್ವಲ್ಪ ವರ್ಷದಲ್ಲಿ ಒಂದೊಳ್ಳೆ ನಟ ಅಂತ ಹೆಸರು ಮಾಡುವ ಸಾಮರ್ಥ್ಯ ಅವನಲ್ಲಿ ಇತ್ತು. ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಿ ಅನೇಕರು ಆತನ ನಟನೆ ಮೆಚ್ಚಿಕೊಂಡಿದ್ದರು. ಸಂಪತ್ ಎಂದಿಗೂ ಸೋಲು ಒಪ್ಪಿಕೊಳ್ಳುತ್ತಿರಲಿಲ್ಲ ತುಂಬಾ ಪ್ರಯತ್ನ ಮಾಡುತ್ತಿದ್ದರು. ಸಂಸಾರದಲ್ಲಿ ಸಣ್ಣ ಪುಟ್ಟ ಮಾತುಕತೆ ಅಂತಾ ಬಂದಾಗ ಹುಡುಗಾಟ ಮಾಡಿಕೊಳ್ಳಲು ಹೋಗಿ ಈ ರೀತಿ ಪರಿಣಾಮ ಬೀರಿದೆ. ದಯವಿಟ್ಟು ಕೆಟ್ಟ ಗಾಸಿಪ್ ಮಾಡಬೇಡಿ. ಗಂಡ-ಹೆಂಡತಿ ನಡುವೆ ಆದ ಚಿಕ್ಕ ಜಗಳಕ್ಕೆ ನಾನು ಸತ್ತು ಹೋಗುತ್ತೀನಿ ಹಾಗೆ ಹೀಗೆ ಎಂದು ಹೆದರಿಸಿದ್ದಾನೆ ಆಗ ಕುತ್ತಿಗೆ ಲಾಕ್ ಆಗಿದೆ. ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಹೀಗೆ ಮಾಡಿರೋದು ಅಲ್ಲ, ಹೆದರಿಸಲು ಹೋಗಿ ಅಚಾನಕ್ ಆಗಿ ಹೀಗೆ ಎಂದು ನಟ ರಾಜೇಶ್ ಧ್ರುವ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಸಿನಿಮಾಗಳೇ ಹಾಗೆ. ಶೀರ್ಷಿಕೆ ಮೂಲಕವೇ ನಿರೀಕ್ಷೆ ಹೆಚ್ಚಿಸಿಬಿಡುತ್ತವೆ. ಅಂತಹ ನಿರೀಕ್ಷೆ ಸಿನಿಮಾಗಳ ಸಾಲಿಗೆ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾ ಕೂಡ ಸೇರಿದೆ. ಈಗ ಈ ಸಿನಿಮಾನೂ ಸೊಗಸಾಗಿ ಮೂಡಿ ಬಂದಿದೆ ಎಂಬ ಖುಷಿ ಚಿತ್ರತಂಡದ್ದು. ಈ ಸಿನಿಮಾದ ಪೋಸ್ಟರ್ ಮತ್ತು ಹಾಡು ಈಗಾಗಲೇ ಮಜವೆನಿಸಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗು ಹಾಡೊಂದು ಬಿಡುಗಡೆಯಾಗಿದೆ.
‘ಗಂಧದಗುಡಿ’ ನಿರ್ದೇಶಕ ಅಮೋಘ ವರ್ಷ ಈ ಸಂದರ್ಭದಲ್ಲಿ ಸಿನಿಮಾ ತಂಡಕ್ಕೆ ಶುಭ ಕೋರಿ, ಇದೊಂದು ಅದ್ಭುತ ಕಲ್ಪನೆಯ ಕಥೆಯ ಸಿನಿಮಾ. ಸಿನಿಮಾ ಶೀರ್ಷಿಕೆಯೇ ಖುಷಿಕೊಟ್ಟಿದೆ. ಸಿನಿಮಾ ಕೂಡ ನೋಡುಗರಿಗೆ ಇಷ್ಟವಾಗುತ್ತೆ ಎಂಬುದಕ್ಕೆ ಚಿತ್ರದ ಟ್ರೇಲರ್ ಸಾಕ್ಷಿ. ಟ್ರೇಲರ್ ನೋಡಿದರೆ, ಇಲ್ಲಿ ಒಬ್ಬ ಫೋಟೋಗ್ರಾಫರ್ ನ ಭಾವನೆ, ತೊಳಲಾಟ, ಪೇಚಾಟ, ಬದುಕು ಎಲ್ಲವೂ ಇಲ್ಲಿ ಅನಾವರಣಗೊಂಡಿದೆ ಅನಿಸುತ್ತದೆ. ಕನ್ನಡದಲ್ಲಿ ಈ ರೀತಿಯ ವಿಭಿನ್ನ ಕಥಾಹಂದರದ ಸಿನಿಮಾಗಳು ಹೆಚ್ಚೆಚ್ಚು ಬರಲಿ. ಸಿನಿಮಾ ಎಲ್ಲರಿಗೂ ಯಶಸ್ಸು ತಂದುಕೊಡಲಿ ಅಂದರು.
ನಟ ಶಿಶಿರ್ ಕೂಡ ಸಿನಿಮಾ ತಂಡದ ಶ್ರಮದ ಕುರಿತು ಮಾತನಾಡಿದರು. ಒಳ್ಳೆಯ ಸಿನಿಮಾ ಆಗಲು ಮೊದಲು ಒಳ್ಳೆಯ ಮನಸ್ಸುಗಳು ಸೇರಬೇಕು. ಅವೆಲ್ಲದರಿಂದ ಒಳ್ಳೆಯ ಬಸಿನಿಮಾ ಮೂಡಿಬಂದಿದೆ. ಇದೊಂದು ಎಲ್ಲರ ಮನಸ್ಸಲ್ಲಿ ಉಳಿಯೋ ಚಿತ್ರವಾಗಲಿ ಅಂದರು ಅವರು. ಇದೇ ವೇಳೆ ಚಿತ್ರತಂಡ ಸಿನಿಮಾರಂಗದ ಹಿರಿಯ ಛಾಯಾಗ್ರಾಹಕ ಕೆ.ಎನ್.ನಾಗೇಶ್ ಕುಮಾರ್ ಅವರನ್ನು ಪ್ರೀತಿಯಿಂದ ಸನ್ಮಾನಿಸಿತು. ಈ ಚಿತ್ರವೇ ಕ್ಯಾಮರಾ ಮತ್ತು ಒಬ್ಬ ಫೋಟೋಗ್ರಾಫರ್ ಕುರಿತ ಕಥೆ. ಹಾಗಾಗಿ ನಾಗೇಶ್ ಕುಮಾರ್ ಅವರನ್ನೇ ಆಹ್ವಾನಿಸಿ, ಅದಕ್ಕೊಂದು ಅರ್ಥ ಕಲ್ಪಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ರಾಕಿಭಾಯ್ ಜೊತೆ ಕಾಣಿಸಿಕೊಂಡ ಪಾಂಡ್ಯ ಬ್ರದರ್ಸ್ – KGF 3 ಟ್ರೆಂಡಿಂಗ್
ಈಗಾಗಲೇ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದು, ಈಗಾಗಲೇ ಸಿನಿಮಾದ ಹಾಡುಗಳು ಮೆಚ್ಚುಗೆ ಪಡೆದಿವೆ. ಇದು ಒಬ್ಬ ಫೋಟೋಗ್ರಾಫರ್ ಜೀವನದ ಕಥೆ. ಈವರೆಗೆ ಆ ಕುರಿತು ಬರದಂತಹ ಕಥೆ ಇಲ್ಲಿದೆ. ಒಂದೊಂದು ಫ್ರೇಮ್ ಕೂಡ ಅದ್ಭುತವಾಗಿ ಮೂಡಿ ಬಂದಿದೆ, ಚಿತ್ರಕ್ಕೆ ಎಲ್ಲರ ಹಾರೈಕೆ ಇರಲಿ ಎಂಬುದು ಚಿತ್ರತಂಡದ ಮಾತು. ಈಗಂತೂ ಜನರು ಹೊಸ ಬಗೆಯ ಕಥೆ ಆಯ್ಕೆ ಮಾಡುತ್ತಾರೆ. ಅಂತಹವರಿಗೆ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ರುಚಿಸಲಿದೆ ಎಂಬುದು ನಿರ್ಮಾಪಕ ವೆಂಕಟೇಶ್ವರ ರಾವ್ ಬಳ್ಳಾರಿ ಅವರ ಮಾತು. ಇದು ಅವರ ಸೃಜನ ಪ್ರೊಡಕ್ಷನ್ ಅಡಿ ನಿರ್ಮಿಸಿದ ಮೊದಲ ಚಿತ್ರ.
ಅವರು, ಸಿನಿಮಾ ಮಾಡ್ತೀನಿ ಅಂದಾಗ,ಹಲವಾರು ಜನ ಸಿನಿಮಾ ಬೇಡ ಎಂದು ತಲೆಕೆಡಿಸಲು ಪ್ರಯತ್ನ ಪಟ್ಟಿದ್ದರಂತೆ. ಆದರೆ ಈ ಸಿನೆಮಾ ಎಲ್ಲರ ಮನಸ್ಸನ್ನು ಗೆಲ್ಲುತ್ತದೆ ಎಂಬ ವಿಶ್ವಾಸ ಅವರದು. ಇನ್ನು ನಿರ್ದೇಶಕ ರಾಜೇಶ್ ಧ್ರುವ ಅವರು, 23 ದಿನ ಮಳೆಯಲ್ಲೇ ಚಿತ್ರೀಕರಿಸಿದ್ದಾರಂತೆ. ಅವರ ಊರಿನಲ್ಲಿ ಅನುಭವಕ್ಕೆ ಬಂದ ಹಲವು ಅನುಭವನ್ನು, ಭಾಷೆಯನ್ನು ಈ ಸಿನೆಮಾದಲ್ಲಿ ಬಳಸಿಕೊಂಡು ಎಲ್ಲ ಕಲಾವಿದರಿಗೆ 30 ದಿನಗಳ ಕಾಲ ಅಲ್ಲಿಯ ಭಾಷೆಯ ಅರಿವು ಮಾಡಿಸಿ ಪಾತ್ರಕ್ಕೆ ತಕ್ಕಂತೆ ತಯಾರು ಮಾಡಿಸಿ ಶೂಟಿಂಗ್ ಮಾಡಿದ್ದಾರಂತೆ.ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರು ಈ ವೇಳೆ ಅನುಭವನ್ನು ಹಂಚಿಕೊಂಡರು.ಚಿತ್ರದಲ್ಲಿ ರಾಜೇಶ್ ಧ್ರುವ, ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಸಂಪತ್ ಜೆ ರಾಮ್, ಕಾಮಿಡಿ ಕಿಲಾಡಿಗಳು 4 ಖ್ಯಾತಿಯ ಶುಭಲಕ್ಷ್ಮಿ, ಕನ್ಯಾಕುಮಾರಿ ಧಾರವಾಹಿ ಖ್ಯಾತಿಯ ನಕುಲ್ ಶರ್ಮ, ರಕ್ಷಿತ್, ಬಿಗ್ ಬಾಸ್ 4 ಖ್ಯಾತಿಯ ರವಿ ಮೂರೂರು ಹಾಗೂ ವಿಶೇಷ ಪಾತ್ರದಲ್ಲಿ ಕಿರುತೆರೆ ನಟ ಶಿಶಿರ್ ಕಾಣಿಸಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕಿರುತೆರೆಯಿಂದ ಬೆಳ್ಳಿತೆರೆಗೆ ನಾಯಕ ಹಾಗೂ ನಿರ್ದೇಶಕರಾಗಿ ಬಡ್ತಿ ಪಡೆದಿರುವ ರಾಜೇಶ್ ಧ್ರುವ, ಹೊಸ ರೀತಿಯ ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ಅವರು ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಎಂದು ಹೊಸ ರೀತಿಯ ಹೆಸರು ಇಟ್ಟಿದ್ದಾರೆ. ಟೈಟಲ್ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಕೂಡ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗಾತ್ಮಕ ಚಿತ್ರಗಳತ್ತ ಮುಖ ಮಾಡಿದೆ. ಅದರಲ್ಲೂ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಿನಿಮಾ ಕೂಡ ಉತ್ತರ ಕನ್ನಡ ಜಿಲ್ಲೆಯ ಸೊಗಡನ್ನು ಪರಿಚಯಿಸಲಿದೆ.
ಈ ಇಡೀ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರದಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಅಲ್ಲಿಯ ಸ್ಥಳೀಯ ಪ್ರತಿಭೆಗಳನ್ನು ಬಳಸಿಕೊಳ್ಳಲಾಗಿದೆ. ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಚಿತ್ರಕ್ಕೆ ಬಳಸಿರುವುದು ಉತ್ತರ ಕನ್ನಡ ಭಾಷೆ ಹಾಗೂ ರಮಣೀಯ ಸ್ಥಳಗಳು ಎನ್ನುವುದು ನೆನಪಿಡಬೇಕಾದ ಸಂಗತಿ. ಇಡೀ ಸಿನಿಮಾ ನೋಡುಗನ ಕಣ್ಣು ತಂಪು ಮಾಡಿದರೆ, ಚಿತ್ರಕಥೆಯ ಹೊಸತನವು ಭಾರತ ಚಿತ್ರರಂಗದಲ್ಲಿ ಇಲ್ಲಿಯವರೆಗೂ ಬಂದಿಲ್ಲ ಎನ್ನುತ್ತಾರೆ ಸಿನಿಮಾದ ನಿರ್ದೇಶಕರು.
ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನೆಯ ಹೋರಾಟವೇ ಈ ಚಿತ್ರದ ಹೈಲೈಟ್. ಇದರ ಜೊತೆಗೆ ಮುದ್ದಾದ ಪ್ರೇಮಿಗಳ ಕಥೆಯೂ ಇದೆ. ಒಬ್ಬ ಇನ್ಶೂರೆನ್ಸ್ ಮಾಡಿಸುವವ ಹಾಗೂ ಅವನ ವೈಯಕ್ತಿಕ ಜೀವನದ ಬಗ್ಗೆ ಹಾಗೂ ಒಬ್ಬ ಜಮೀನ್ದಾರ ಮತ್ತು ಫೋಟೋಗ್ರಾಫರ್ ನಡುವಿನ ಸಂಘರ್ಷ ನೋಡುಗರಿಗೆ ಹೊಸ ಅನುಭವ ತರಿಸಲಿದೆ ಎಂದಿದೆ ಸಿನೆಮಾ ಟೀಮ್. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್
ಈ ಸಿನಿಮಾದ ನಿರ್ಮಾಪರು ವೆಂಕಟೇಶ್ವರ ರಾವ್. ಬಳ್ಳಾರಿ ಮೂಲದವರಾದ ಇವರು ಮೊದಲ ಬಾರಿಗೆ ಸೃಜನ್ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರಾಗಿ ಹಾಗೂ ಮುಖ್ಯ ಪಾತ್ರದಲ್ಲಿ ಕಿರುತೆರೆಯಲ್ಲಿ 6 ವರ್ಷಗಳ ಕಾಲ ಕೆಲಸ ಮಾಡಿ ಫೇಮಸ್ ಆಗಿರುವ, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ನಟ ರಾಜೇಶ್ ಧ್ರುವ ಕಾಣಿಸಿಕೊಂಡಿದ್ದಾರೆ. ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಸಂಪತ್ ಜೆ ರಾಮ್, ಶುಭಲಕ್ಷ್ಮಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ `ಅಗ್ನಿಸಾಕ್ಷಿ’ಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲಾಗಿದ್ದು, ಇಂದು ರಾಜೇಶ್ ಅವರ ಪತ್ನಿ ಶೃತಿ ವಿಚಾರಣೆಗೆ ಹಾಜರಾಗಿದ್ದಾರೆ.
ನನ್ನ ಪತಿ ಮೇಲೆ ಯಾವುದೇ ಕೋಪವಿಲ್ಲ. ಅವರಿಗೆ ಶಿಕ್ಷೆ ನೀಡಬೇಕು ಎಂದು ನಾನು ಅಂದುಕೊಂಡಿಲ್ಲ. ಅವರು ನನ್ನನ್ನು ಕರೆದುಕೊಂಡು ಹೋಗಲಿ ಎಂದು ನಾನು ಈ ರೀತಿ ಮಾಡುತ್ತಿದ್ದೇನೆ. ನಾನು ಮದ್ಯ ಕುಡಿಯುವಾಗ ಅವರೇ ವಿಡಿಯೋ ಮಾಡಿದ್ದಾರೆ. ಅಲ್ಲದೇ ತಮಾಷೆಗೆ ಮಾಡಿದ್ದು ಎಂದು ಅವರೇ ಒಪ್ಪಿಗೊಂಡಿದ್ದಾರೆ ಎಂದು ಶೃತಿ ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿಸಾಕ್ಷಿ ಅಖಿಲ್ ವಿರುದ್ಧ ದೂರು ದಾಖಲು
ನಾನು ಬೇರೆಯವರ ಮುಂದೆ ಕುಡಿಯಲಿಲ್ಲ. ರಾಜೇಶ್ ಅವರು ತಮ್ಮ ತಾಯಿಯನ್ನು ನೋಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಆದರೆ ಅವರ ತಾಯಿ ಈಗ ಧಾರವಾಡದಲ್ಲಿ ಇದ್ದಾರೆ. ನನ್ನನ್ನು ಅವರು ಈಗ ಕರೆದುಕೊಂಡು ಹೋಗಲಿ. ಸದ್ಯ ವಿಚಾರಣೆಯಲ್ಲಿ ಏನು ಕೇಳುತ್ತಾರೋ ಅದನ್ನು ಹೇಳುತ್ತೇನೆ. ಇಂದು ಕರೆದಿದ್ದರು ಹಾಗಾಗಿ ಬಂದಿದ್ದೇನೆ ಎಂದು ವಿಚಾರಣೆಗೆ ಹಾಜರಾದ ಶೃತಿ ಹೇಳಿದ್ದಾರೆ. ಇದನ್ನೂ ಓದಿ: ಹೊರಗಡೆ ಮಾಂಸ ತಿಂದು ಮನೆಯಲ್ಲಿ ತಾಯಿಗೆ ಕಿರುಕುಳ: ಶ್ರುತಿ ಆರೋಪಕ್ಕೆ ರಾಜೇಶ್ ಧ್ರುವ ತಿರುಗೇಟು
ಏನಿದು ಪ್ರಕರಣ?
ರಾಜೇಶ್ ಧ್ರುವ 2017ರಲ್ಲಿ ನನ್ನನ್ನು ಮದುವೆಯಾಗಿ ಬಳಿಕ ಅವರಿಗೆ ವರದಕ್ಷಿಣೆ ತರುವಂತೆ ಟಾರ್ಚರ್ ನೀಡಿದ್ದಾರೆ. ಅಲ್ಲದೆ ಮಾನಸಿಕ ಹಿಂಸೆ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಶೃತಿ ತಮ್ಮ ಪತಿ ರಾಜೇಶ್ ಮೇಲೆ ಆರೋಪ ಮಾಡಿದ್ದಾರೆ. ಮದುವೆ ಆದ ಬಳಿಕ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಮದುವೆ ಆದರೂ ನನಗೆ ಮದುವೆಯಾಗಿಲ್ಲ ಎಂದು ಧ್ರುವ ಹೇಳಿಕೊಂಡು ತಿರುಗಾಡುತ್ತಿದ್ದರು. ಇದನ್ನೂ ಓದಿ: ನಿಮ್ಮ ಹೆಣ್ಣಿನ ಹುಚ್ಚಿಗೆ ನನ್ನ ಮೇಲೆ ಆರೋಪ ಬೇಡ – ರಾಜೇಶ್ ಧ್ರುವ ಪತ್ನಿ ಕಣ್ಣೀರು
ಮದುವೆಯಾದ ಬಳಿಕ ಧ್ರುವ ಬೇರೆ ಯುವತಿಯರ ಜೊತೆ ಅಫೈರ್ ಇಟ್ಟುಕೊಂಡಿದ್ದರು. ಯುವತಿ `ತಕಧಿಮಿತ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ಆಗಿ ಭಾಗವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಶೃತಿ ಕುಮಾರಸ್ವಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಪತ್ನಿ `ಎಣ್ಣೆ’ ಹೊಡೆಯೋ ವಿಡಿಯೋ ಬಿಡುಗಡೆ ಮಾಡಿದ ನಟ ಅಖಿಲ್!
ಬೆಂಗಳೂರು: ಅಗ್ನಿಸಾಕ್ಷಿ ನಟ ರಾಜೇಶ್ ಧ್ರುವ ಅವರು ತಮ್ಮ ಪತ್ನಿ ಶ್ರುತಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ಬಗ್ಗೆ ಶ್ರುತಿ ಪ್ರತಿಕ್ರಿಯಿಸಿದ್ದಾರೆ.
ರಾಜೇಶ್ ತಮ್ಮ ಪತ್ನಿ ಶ್ರುತಿ ಮದ್ಯಪಾನದ ಮತ್ತಿನಲ್ಲಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಶ್ರುತಿ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದಾರೆ. ರಾಜೇಶ್ ಹಾಗೂ ಶ್ರುತಿ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾಗ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: ಅಗ್ನಿಸಾಕ್ಷಿ ಅಖಿಲ್ ವಿರುದ್ಧ ದೂರು ದಾಖಲು
ಈ ಬಗ್ಗೆ ಶ್ರುತಿ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ಈ ವಿಡಿಯೋ ಮಾಡುವಾಗ ರಾಜೇಶ್ ಅವರು ಇದ್ದರು. ಹೊಸ ವರ್ಷದಂದು ಈ ವಿಡಿಯೋವನ್ನು ಮಾಡಲಾಗಿದ್ದು, ರಾಜೇಶ್ ಅವರ ಸ್ನೇಹಿತ ಈ ವಿಡಿಯೋವನ್ನು ಮಾಡಿದ್ದರು. ರಾಜೇಶ್ ಅವರು ಈ ವಿಡಿಯೋವನ್ನು ಮೊದಲೇ ಮಾಡಬಹುದಿತ್ತು. ಆದರೆ ನಾನು ಸಾಕ್ಷಿ ನೀಡಿದ ಬಳಿಕ ಅವರು ಈ ಮದ್ಯಪಾನದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ” ಎಂದರು. ಇದನ್ನೂ ಓದಿ: ಹೊರಗಡೆ ಮಾಂಸ ತಿಂದು ಮನೆಯಲ್ಲಿ ತಾಯಿಗೆ ಕಿರುಕುಳ: ಶ್ರುತಿ ಆರೋಪಕ್ಕೆ ರಾಜೇಶ್ ಧ್ರುವ ತಿರುಗೇಟು
ಈ ವಿಡಿಯೋ ಅವರು ಬಿಡುಗಡೆ ಮಾಡಿ ನಾನು ದಿನ ಕುಡಿಯುತ್ತೇನೆ ಎಂದು ತೋರಿಸುತ್ತಿದ್ದಾರೆ. ಈ ವಿಡಿಯೋವನ್ನು 2015ರಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಆಗ ನಾವು ರಿಜಿಸ್ಟರ್ ಮದುವೆ ಆಗಿದ್ದೇವು. ಆ ದಿನ ಹೊಸ ವರ್ಷ ಎಂದು ಎಲ್ಲರು ಮದ್ಯಪಾನ ಮಾಡೋಣ ಎಂದು ಹೇಳಿದ್ದರು. ಆಗ ಅಖಿಲ್ ಅವರೇ ಈ ಎಣ್ಣೆಯ ಬಾಟಲ್ ತೆಗೆದುಕೊಂಡು ಬಂದು ನನಗೆ ನೀಡಿದ್ದರು. ನನಗೆ ಈ ಬಗ್ಗೆ ಯಾವುದೇ ವಿಷಯ ಗೊತ್ತಿಲ್ಲ. ಈ ವಿಡಿಯೋವನ್ನು ರಾಜೇಶ್ ಸ್ನೇಹಿತ ಚಿತ್ರೀಕರಿಸಿದ್ದು, ನನ್ನ ಹೆಸರು ಹಾಳು ಮಾಡಲು ಈಗ ಬಿಡುಗಡೆ ಮಾಡಿದ್ದಾರೆ ಎಂದು ಶ್ರುತಿ ಹೇಳಿದ್ದಾರೆ. ಇದನ್ನೂ ಓದಿ: ನಿಮ್ಮ ಹೆಣ್ಣಿನ ಹುಚ್ಚಿಗೆ ನನ್ನ ಮೇಲೆ ಆರೋಪ ಬೇಡ – ರಾಜೇಶ್ ಧ್ರುವ ಪತ್ನಿ ಕಣ್ಣೀರು
ಆದರೆ ರಾಜೇಶ್ ಅವರು, ಈ ಹೊಸ ವರ್ಷದಲ್ಲಿ ತೆಗೆದ ವಿಡಿಯೋ ಅಲ್ಲ. ಶ್ರುತಿ ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದರು. ಹಾಗಾಗಿ ನಾನು ವಿಡಿಯೋ ಮಾಡಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತ್ನಿ `ಎಣ್ಣೆ’ ಹೊಡೆಯೋ ವಿಡಿಯೋ ಬಿಡುಗಡೆ ಮಾಡಿದ ನಟ ಅಖಿಲ್!
ವಿಡಿಯೋದಲ್ಲಿ ಏನಿದೆ?
ಈ ವಿಡಿಯೋದಲ್ಲಿ ರಾಜೇಶ್ ಅವರು ಶ್ರುತಿಗೆ ನಾ ಯಾರು ಎಂದು ಪ್ರಶ್ನಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಶ್ರುತಿ ಹೇ ಸುಮ್ನೆ ಹಚ್ಚೋ ನೀನು ಎಂತೆಲ್ಲಾ ಮಾಡ್ತಿಯಾ? ಎಂದು ಅವಾಜ್ ಹಾಕಿದ್ದಾರೆ. ಬಳಿಕ ರಾಜೇಶ್ ನಾ ಯಾರು? ನಾ ಯಾರು? ಎಂದು ಮತ್ತೆ ಪ್ರಶ್ನಿಸಿದ್ದಾರೆ. ಅದಲ್ಲದೇ ಉಪ್ಪಿನಕಾಯಿ ಬೇಕಾ? ಎಂದು ಕೇಳಿದ್ದಾರೆ. ಆಗ ಶ್ರುತಿ ಬೇಕು ಎಂದು ಹೇಳಿದ್ದಾರೆ. ಮತ್ತೆ ರಾಜೇಶ್ ಅವರು ಶ್ರುತಿ ಕುಡಿಯುತ್ತಿರುವುದನ್ನು ನೋಡಿ, ಸರಿಯಾಗ್ ಕುಡಿತಿಯಲ್ಲೇ?. ಎಂದು ಕೇಳಿದ್ದಾರೆ. ಆದರೆ ಇದಕ್ಕೆ ಶ್ರುತಿ ಪ್ರತಿಕ್ರಿಯಿಸದೇ ಫಸ್ಟ್ ಹಚ್ಚಲೇ ಎಂದು ರಾಜೇಶ್ಗೆ ಬೈದಿದ್ದಾರೆ. ಆಗ ನನಗ್ಯಾಕ್ ಬೈತಿ? ನಾನೇನು ನಿನ್ನ ಗಂಡನಾ? ಎಂದು ಕೇಳಿದ್ದಾಗ ನನಗೆ ಅಳು ಬರ್ತಾಯಿದೆ. ಅಂವ ಅಲ್ಲಿ ನಿಂತು ಏನು ಮಾಡಕ್ಕತ್ಯಾನ?. ಹಚ್ಚಲ್ಲಿ. ಬ್ಯಾಕ್ ಬಾ ಎಂದು ಶ್ರುತಿ ಎಣ್ಣೆ ಮತ್ತಿನಲ್ಲಿ ಎಲ್ಲರಿಗೂ ಅವಾಜ್ ಹಾಕಿದ್ದಾರೆ.
ಬೆಂಗಳೂರು: ಅಗ್ನಿಸಾಕ್ಷಿ ಧಾರಾವಾಹಿಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ಅವರು ತಮ್ಮ ಪತ್ನಿ ಶೃತಿ ಮದ್ಯಪಾನ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ರಾಜೇಶ್ ತಮ್ಮ ಪತ್ನಿ ಶೃತಿ ಮದ್ಯಪಾನದ ಮತ್ತಿನಲ್ಲಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಶೃತಿ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದಾರೆ. ರಾಜೇಶ್ ಹಾಗೂ ಶೃತಿ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾಗ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ.
ಈ ವಿಡಿಯೋದಲ್ಲಿ ರಾಜೇಶ್ ಅವರು ಶೃತಿಗೆ ನಾ ಯಾರು ಎಂದು ಪ್ರಶ್ನಿಸಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಶೃತಿ ಹೇ ಸುಮ್ನೆ ಹಚ್ಚೋ ನೀನು ಎಂತೆಲ್ಲಾ ಮಾಡ್ತಿಯಾ? ಎಂದು ಅವಾಜ್ ಹಾಕಿದ್ದಾರೆ. ಬಳಿಕ ರಾಜೇಶ್ ನಾ ಯಾರು? ನಾ ಯಾರು? ಎಂದು ಮತ್ತೆ ಪ್ರಶ್ನಿಸಿದ್ದಾರೆ. ಅದಲ್ಲದೇ ಉಪ್ಪಿನಕಾಯಿ ಬೇಕಾ? ಎಂದು ಕೇಳಿದ್ದಾರೆ. ಆಗ ಶೃತಿ ಬೇಕು ಎಂದು ಹೇಳಿದ್ದಾರೆ.
ಮತ್ತೆ ರಾಜೇಶ್ ಅವರು ಶೃತಿ ಕುಡಿಯುತ್ತಿರುವುದನ್ನು ನೋಡಿ, ಸರಿಯಾಗ್ ಕುಡಿತಿಯಲ್ಲೇ?. ಎಂದು ಕೇಳಿದ್ದಾರೆ. ಆದರೆ ಇದಕ್ಕೆ ಶೃತಿ ಪ್ರತಿಕ್ರಿಯಿಸದೇ ಫಸ್ಟ್ ಹಚ್ಚಲೇ ಎಂದು ರಾಜೇಶ್ಗೆ ಬೈದಿದ್ದಾರೆ. ಆಗ ನನಗ್ಯಾಕ್ ಬೈತಿ? ನಾನೇನು ನಿನ್ನ ಗಂಡನಾ? ಎಂದು ಕೇಳಿದ್ದಾಗ ನನಗೆ ಅಳು ಬರ್ತಾಯಿದೆ. ಅಂವ ಅಲ್ಲಿ ನಿಂತು ಏನು ಮಾಡಕ್ಕತ್ಯಾನ?. ಹಚ್ಚಲ್ಲಿ. ಬ್ಯಾಕ್ ಬಾ ಎಂದು ಶೃತಿ ಎಣ್ಣೆ ಮತ್ತಿನಲ್ಲಿ ಎಲ್ಲರಿಗೂ ಅವಾಜ್ ಹಾಕಿದ್ದಾರೆ.
ಈ ವಿವಾದ ಬಗ್ಗೆ ಶೃತಿ ಮಾತನಾಡಿ, 2013ರಲ್ಲಿ ಮದುವೆ ರಿಜಿಸ್ಟರ್ ಆಗಿದೆ. ಇಬ್ಬರೂ ಲವ್ ಮಾಡಿದ್ದು, ಅವರೇ ನಮ್ಮ ಅಪ್ಪನ ಬಳಿ ಬಂದು ಮದುವೆ ಮಾತುಕತೆ ನಡೆಸಿದ್ದಾರೆ. ಆಗ ನನ್ನ ಅಪ್ಪ ಈವಾಗ ಬೇಡ ಓದಿ, ಒಳ್ಳೆಯ ಕೆಲಸ ಸಿಕ್ಕ ಬಳಿಕ ನೋಡೋಣ ಎಂದು ಹೇಳಿದ್ದರು. ನಂತರ ಅವರ ಅಮ್ಮ ಒಪ್ಪಿಕೊಂಡು ಬಳಿಕ ಜಾತಿ ಬೇರೆ ಬೇರೆಯಾಗಿದೆ. ಹೀಗಾಗಿ ಬೇಡ ಎಂದಿದ್ದರು. ಈ ವೇಳೆಯೂ ರಾಜೇಶ್, ಇಲ್ಲ ಅವಳು ಇಲ್ಲದೆ ನಾನು ಇರಲ್ಲ. ಸತ್ತು ಹೋಗ್ತೀನಿ ಎಂದು ಹೇಳಿದ್ದರು. ಇಷ್ಟೆಲ್ಲ ಆದ ಬಳಿಕ ನಾವು ರಿಜಿಸ್ಟರ್ ಮ್ಯಾರೇಜ್ ಆಗಿದ್ದೇವೆ” ಎಂದು ವಿವರಿಸಿದ್ರು.