Tag: ರಾಜ್ಯಪಾಲರು

  • ಆಡಳಿತ ಪಕ್ಷ ಗಿಮಿಕ್ ಮಾಡ್ತಿದೆ, ನಮಗೆ ಭಯ ಆಗ್ತಿದೆ: ಜಗದೀಶ್ ಶೆಟ್ಟರ್

    ಆಡಳಿತ ಪಕ್ಷ ಗಿಮಿಕ್ ಮಾಡ್ತಿದೆ, ನಮಗೆ ಭಯ ಆಗ್ತಿದೆ: ಜಗದೀಶ್ ಶೆಟ್ಟರ್

    ಬೆಂಗಳೂರು: ಬಹುಮತ ಸಾಬೀತು ಮಾಡಲು ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಪ್ರಸ್ತಾಪ ಸಲ್ಲಿಸಿದ್ದರು. ಆದರೆ ಇಂದು ವಿಶ್ವಾಸ ಮತಯಾಚನೆಗೆ ಮುಂದಾಗದೇ ಬಹುಮತ ಸಾಬೀತು ಮಾಡಲು ನಿಯಮಗಳ ಹೆಸರು ಹೇಳಿ ಅನಗತ್ಯ ಚರ್ಚೆ ಮಾಡುತ್ತಾರೆ. ಆದ್ದರಿಂದ ನಾವು ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡದೇ ಕಾಲದೂಡಲು ಚರ್ಚೆಗೆ ಸ್ಪೀಕರ್ ಅವರ ಅನುಮತಿಯೊಂದಿಗೆ ಚರ್ಚೆಗೆ ದಾರಿ ಮಾಡಿದ್ದಾರೆ. ಸಿದ್ದರಾಮಯ್ಯ, ಕೃಷ್ಣಬೈರೇಗೌಡ, ಎಚ್‍ಕೆ ಪಾಟೀಲ್ ಅವರು ರೂಲ್ ಮುಂದೂಡಲು ಮನವಿ ಮಾಡಿದ್ದಾರೆ. ಆದರೆ ಇದು ಬಹುಮತ ಸಾಬೀತು ಮಾಡಲು ತಡವಾಗಲಿದೆ. ಆದ್ದರಿಂದಲೇ ನಾವು ಈ ಕ್ರಮವನ್ನು ಕೈಗೊಂಡಿದ್ದೇವೆ ಎಂದರು. ಅವರಿಗೆ ಕೋರ್ಟ್ ಅಭಿಪ್ರಾಯದ ಬಗ್ಗೆ ಅನುಮಾನ ಇದ್ದರೆ ಕೋರ್ಟಿಗೆ ತೆರಳಬೇಕು ವಿನಾ: ಸದನದಲ್ಲಿ ಅನಗತ್ಯ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದರು.

    ಮುಖ್ಯಮಂತ್ರಿಗಳು ವಿಶ್ವಾಸಮತ ಎಂದು ಚರ್ಚೆಯನ್ನು ಪ್ರಾರಂಭ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ, ಕುಮಾರಸ್ವಾಮಿ ಬೇರೆ ಬೇರೆ ವಿಚಾರಕ್ಕೆ ಚರ್ಚೆ ನಡೆಸುತ್ತಿದ್ದಾರೆ. ಈ ರೀತಿ ಆಡಳಿತ ಪಕ್ಷ ಮಾಡುವಂತಿಲ್ಲ, ಆಡಳಿತ ಪಕ್ಷ ಗಿಮಿಕ್ ಮಾಡುತ್ತಿದ್ದು, ಬಹುಮತ ಸಾಬೀತು ಪಡಿಸುವ ಕ್ರಮವನ್ನು ತಡ ಮಾಡುತ್ತಿದ್ದಾರೆ ಎಂಬ ಭಯ ನಮಗೆ ಕಾಡುತ್ತಿದೆ. ಹಾಗಾಗಿ ವಿಶ್ವಾಸ ಮತ ಸಾಬೀತು ಮಾಡಬೇಕು ಎಂದು ಸ್ಪೀಕರ್ ಅವರಿಗೂ ಮನವಿ ಮಾಡಿದ್ದೇವೆ. ಆದರೆ ಸ್ಪೀಕರ್ ಅವರು ಸರ್ಕಾರ ಉಳಿಸುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

    ಸದ್ಯ ಸ್ಪೀಕರ್ ಅವರಿಗೆ ನಿರ್ದೇಶನ ಮಾಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಆ ಮೂಲಕ ರಾಜ್ಯಪಾಲರು ಸ್ಪೀಕರ್ ಅವರಿಗೆ ಮಾಡಿ ಬೇಗ ವಿಶ್ವಾಸ ಮತ ಸಾಬೀತು ಪಡಿಸಬೇಕು ಎಂಬುದು ನಮ್ಮ ಒತ್ತಾಯ ಎಂದರು. ಇದುವರೆಗೂ ಕರ್ನಾಟಕದ ಇತಿಹಾಸದಲ್ಲಿ 7 ಬಾರಿ ವಿಶ್ವಾಸ ಮತಯಾಚನೆ ಮಾಡಿದ್ದಾರೆ. ಎಲ್ಲಾ ಸಂದರ್ಭದಲ್ಲೂ 1 ದಿನದಲ್ಲೇ ಚರ್ಚೆಯೊಂದಿಗೆ ನಿರ್ಧಾರ ಮಾಡಿ ಮತಕ್ಕೆ ಹಾಕಲಾಗಿತ್ತು. ಆದರೆ ಇಂದು ಸಂಖ್ಯಾ ಬಲ ಇಲ್ಲದ ಸರ್ಕಾರವನ್ನು ಉಳಿಸಲು ಎಲ್ಲರೂ ಪ್ರಯತ್ನ ನಡೆಸುತ್ತಿದ್ದಾರೆ.

  • ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    – ಬಡ್ತಿ, ನೇಮಕಾತಿ, ವರ್ಗಾವಣೆಯಲ್ಲಿ ಸರ್ಕಾರ ಬ್ಯುಸಿ

    ಬೆಂಗಳೂರು: ರಾಜ್ಯಪಾಲರ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಮೈತ್ರಿ ಸರ್ಕಾರದ ಸಿಎಂ ಮತ್ತು ಸಚಿವರು ರಾತ್ರೋ ರಾತ್ರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ.

    ಶಾಸಕರ ರಾಜೀನಾಮೆ ಪರ್ವದ ಹಿನ್ನೆಲೆ ಪತನದ ಹಾದಿಯಲ್ಲಿರುವ ಮೈತ್ರಿ ಸರ್ಕಾರ ಯಾವುದೇ ಮಹತ್ತರ ನಿರ್ಧಾರವನ್ನು ಕೈಗೊಳ್ಳಬೇಡಿ ಎಂದು ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶವನ್ನು ಲೆಕ್ಕಿಸದ ಸರ್ಕಾರದ ರಾತ್ರಿ 10 ಗಂಟೆಯ ಸಮಯದಲ್ಲೂ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ.

    ತಡ ರಾತ್ರಿ ಶಕ್ತಿ ಭವನದ ಮುಂದೆ ಆಧಿಕಾರಿಗಳು ಫೈಲ್ ಹಿಡಿದುಕೊಂಡು ಓಡಾಡುತ್ತಿರುವುದು ಕಂಡು ಬಂದಿದೆ. ಬಹುಮತ ಸಾಬೀತು ಪಡಿಸುವ ಒತ್ತಡ ನಡುವೆಯೂ ಮೈತ್ರಿ ಸರ್ಕಾರ ಕಡತ ವಿಲೇವಾರಿಯಲ್ಲಿ ಬ್ಯುಸಿಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಬಡ್ತಿ, ನೇಮಕಾತಿ, ವರ್ಗಾವಣೆ ಮತ್ತು ಅನುದಾನ ಬಿಡುಗಡೆಯಲ್ಲಿ ತೊಡಗಿರುವ ಸರ್ಕಾರ, ಹಳೆಯ ದಿನಾಂಕವನ್ನು ಹಾಕಿ ಕಡತ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವರಾಜು ಬೊಮ್ಮಯಿ ಆರೋಪ ಮಾಡಿದ್ದರು. ಅವರು ಆರೋಪಕ್ಕೆ ಈಗ ನಡೆಯುತ್ತಿರುವ ದೃಶ್ಯಗಳು ಪುಷ್ಠಿ ನೀಡಿದ್ದಂತೆ ಆಗಿದೆ.

  • ದೋಸ್ತಿ ಸರ್ಕಾರಕ್ಕೆ ರಾಜ್ಯಪಾಲರ ಚಾಟಿ

    ದೋಸ್ತಿ ಸರ್ಕಾರಕ್ಕೆ ರಾಜ್ಯಪಾಲರ ಚಾಟಿ

    ಬೆಂಗಳೂರು: ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಂಡಿರುವ ಸರ್ಕಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಚಾಟಿ ಬೀಸಿದ್ದಾರೆ.

    ಸಮ್ಮಿಶ್ರ ಸರ್ಕಾರ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬಾರದು. ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ.

    ಸರ್ಕಾರ ಪತನದ ಮುನ್ಸೂಚನೆ ತಿಳಿಯುತ್ತಿದ್ದಂತೆ ರಾತ್ರೋ ರಾತ್ರಿ ಕಡತಗಳಿಗೆ ಸಹಿ ಮತ್ತು ಅಧಿಕಾರಿಗಳಿಗೆ ಭಡ್ತಿ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಈ ಆದೇಶವನ್ನು ಹೊರಡಿಸಿದ್ದಾರೆ.

    ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ ಸೋಮವಾರ ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ ನಡೆಸಿದ್ದರು.

    ಸರ್ಕಾರ ಪತನದಂಚಿಗೆ ತಲುಪಿರುವ ಸಮಯದಲ್ಲಿ ದಿಢೀರ್ ಎಂದು ಅಧಿಕಾರಿಗಳಿಗೆ ಬಡ್ತಿ ನೀಡಿರುವ ಹಿಂದೆ ಸಚಿವರ ಸ್ವಹಿತಾಸಕ್ತಿ ಅಡಗಿದೆ ಎಂಬ ಆರೋಪ ಕೇಳಿ ಬಂದಿದೆ. ಆತುರದಲ್ಲಿ ಬಡ್ತಿ ನೀಡುವ ವಿಷಯ ಕುರಿತು ಸಭೆ ನಡೆಸಲು ಅಧಿಕಾರಿಗಳ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು. ವಿಕಾಸಸೌಧದಲ್ಲಿ ನೆಪಮಾತ್ರಕ್ಕೆ ಸಭೆ ನಡೆಸಿದ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ತೆರಳಿ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ರೇವಣ್ಣ ಸಚಿವರಾಗುತ್ತಿದ್ದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಿಸಿಕೊಂಡಿದ್ದರು. ರೇವಣ್ಣ ಅವರ ಈ ನಡೆಗೆ ಸಚಿವ ಸಂಪುಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಲೋಕೋಪಯೋಗಿ ಇಲಾಖೆಯಲ್ಲಿ ಕೈ ಬಿಟ್ಟ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲು ಸಚಿವರು ಅಧಿಕಾರಿಗಳ ಮೂಲಕ ಮುಂದಾಗಿದ್ದಾರೆ. ಇದರಲ್ಲಿಯೂ ಸಚಿವರ ಸ್ವಹಿತಾಸಕ್ತಿಯೇ ಅಡಗಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿದೆ.

    ಬಡ್ತಿ ಪಡೆದ ಅಧಿಕಾರಿಗಳ ವಿವರ ಹೀಗಿದೆ
    ಎಇ ಹುದ್ದೆಯಿಂದ ಎಇಇ ಹುದ್ದೆ-100
    ಜೆಇ ಹುದ್ದೆಯಿಂದ ಎಇಇ(2)-200
    ಎಇಇ ಹುದ್ದೆಯಿಂದ ಇಇ – 400
    ಇಇ ಹುದ್ದೆಯಿಂದ ಎಸ್‍ಇ-126

  • ಆಪರೇಷನ್ ಕಮಲದ ಬಗ್ಗೆ ಪರಂ ಹೇಳಿಕೆ ವಿರುದ್ಧ ಅಶೋಕ್ ಕಿಡಿ

    ಆಪರೇಷನ್ ಕಮಲದ ಬಗ್ಗೆ ಪರಂ ಹೇಳಿಕೆ ವಿರುದ್ಧ ಅಶೋಕ್ ಕಿಡಿ

    ಬೆಂಗಳೂರು: ರಾಜ್ಯಪಾಲರು ಸೇರಿ ಎಲ್ಲ ನಾಯಕರೂ ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ ಎಂಬ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿಕೆಗೆ ಮಾಜಿ ಡಿಸಿಎಂ ಆರ್. ಅಶೋಕ್ ಕಿಡಿಕಾರಿದ್ದಾರೆ.

    ಈ ಬಗ್ಗೆ ಮಾತನಾಡಿದ ಅಶೋಕ್, ಪರಮೇಶ್ವರ್ ರಂತೆ ಜವಾಬ್ದಾರಿ ಇರುವಂತಹ ಕಾಂಗ್ರೆಸ್ ನಾಯಕರು ಸಾಂವಿಧಾನಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಪಾಲರ ಬಗ್ಗೆ ಯಾವುದೇ ಮಾಹಿತಿ, ಯಾವುದೇ ಸಾಕ್ಷ್ಯಾಧಾರ ಇಲ್ಲದೆ ಅವರ ಸ್ಥಾನಕ್ಕೆ ಅಗೌರವ ತರುವಂತಹ ಕೆಲಸ ಪರಮೇಶ್ವರ್ ಅವರಿಗೆ ಶೋಭೆ ತರುವುದಿಲ್ಲ. ರಾಜೀನಾಮೆ ನೀಡಿದ ಶಾಸಕರು ಸ್ಪೀಕರ್ ರನ್ನು ಭೇಟಿ ಮಾಡಲು ಹೋಗಿದ್ದಾರೆ. ಆದರೆ ಸ್ಪೀಕರ್ ಇರದ ಕಾರಣ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇವೆ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಪಾಲರು ಸೇರಿ ಎಲ್ಲ ನಾಯಕರೂ ಆಪರೇಷನ್ ಕಮಲದಲ್ಲಿ ಭಾಗಿ: ಪರಮೇಶ್ವರ್

    ಶಾಸಕರು ಕದ್ದುಮುಚ್ಚಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರಾ ಎಂದು ನಾನು ಪರಮೇಶ್ವರ್ ಅವರನ್ನು ಪ್ರಶ್ನಿಸಲು ಇಷ್ಟಪಡುತ್ತೇನೆ. ಶಾಸಕರು ಸಾರ್ವಜನಿಕವಾಗಿಯೇ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ನಿಮ್ಮ ಸರ್ಕಾರ ನೇಮಕ ಮಾಡಿದ ಪೊಲೀಸ್ ಕಮಿಷನರ್ ಅವರನ್ನು ಎದುರಿಗೆ ಕೂರಿಸಿಕೊಂಡು ಕಾಫಿ, ಸ್ನ್ಯಾಕ್ಸ್ ಕೊಡುವುದು ಸಾಮಾನ್ಯ. ಇವರು ಹೋದಾಗ ಕಾಫಿ ಕೊಟ್ಟರೆ ಅದು ಸರಿ. ಆದರೆ ಶಾಸಕರಿಗೆ ಕೊಟ್ಟರೆ ನಿಮಗೆ ಹೊಟ್ಟೆ ಉರಿ ಆಗುವುದಾದರೆ ನಿಮ್ಮ ತರಹ ಕದ್ದುಮುಚ್ಚಿ ಭೇಟಿ ಮಾಡುವ ಸ್ಥಾನ ಅದಲ್ಲ ಎಂದರು.

    ರಾಜ್ಯಪಾಲರ ಬಗ್ಗೆ ನೀವು ಕೊಟ್ಟ ಹೇಳಿಕೆ ಸರಿಯಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯಪಾಲರ ಕಚೇರಿಯನ್ನು ಎಷ್ಟು ದುರ್ಬಳಕೆ ಮಾಡಿಕೊಂಡಿದ್ದೀರಾ ಎಂಬುದು ಈಗ ಬಹಿರಂಗವಾಗಿದೆ. ನಿಮ್ಮ ಚಾಳಿಗೆ ನಾವು ಬರುವುದಿಲ್ಲ. ನಮಗೆ ಆದಂತಹ ಜವಾಬ್ದಾರಿ ಇದೆ. ಹಾಗಾಗಿ ನಾವು ಯಾವುದೇ ಕಾರಣಕ್ಕೂ ರಾಜ್ಯಪಾಲರ ಕಚೇರಿಯನ್ನು ರಾಜಕೀಯ ಕೇಂದ್ರವಾಗಿ ನಾವು ಮಾಡಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ. ನೀವು ಮಾಡಿರುವಂತಹ ಅನುಭವದ ಬಗ್ಗೆ ನಮ್ಮ ಮೇಲೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

    ಪರಮೇಶ್ವರ್ ಹೇಳಿದ್ದೇನು?
    ರಾಜ್ಯಪಾಲರೂ ಸೇರಿದಂತೆ ಎಲ್ಲ ಬಿಜೆಪಿ ಮುಖಂಡರು ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ವಿಶೇಷ ವಿಮಾನದ ಮೂಲಕ ಶಾಸಕರನ್ನು ಮುಂಬೈನ ರೆಸಾರ್ಟ್ ಗೆ ಕಳುಹಿಸಲಾಗಿದೆ. ಇದರ ಅರ್ಥ ಏನು, ಇಷ್ಟೆಲ್ಲ ಆದರೂ ಸಹ ನಮಗೆ ಸಂಬಂಧವಿಲ್ಲ ಅವರು ಏನಾದರೂ ಮಾಡಿಕೊಳ್ಳಲಿ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಇದು ಹೇಗೆ ಸಾಧ್ಯ, ಅವರೇ ಆಪರೇಷನ್ ಮಾಡುತ್ತಿರುವುದು. ಬಿಜೆಪಿಯವರೇ ಸರ್ಕಾರವನ್ನು ಅಸ್ಥಿರ ಹಾಗೂ ಕುದುರೆ ವ್ಯಾಪಾರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

  • ಸರ್ಕಾರಿ ಅಂಗನವಾಡಿಗೆ ಮಗಳನ್ನ ಸೇರಿಸಿದ ಐಎಎಸ್ ಅಧಿಕಾರಿ

    ಸರ್ಕಾರಿ ಅಂಗನವಾಡಿಗೆ ಮಗಳನ್ನ ಸೇರಿಸಿದ ಐಎಎಸ್ ಅಧಿಕಾರಿ

    ಭೋಪಾಲ್: ಸರ್ಕಾರಿ ಸೇವೆಯಲ್ಲಿರುವ ಹಲವು ಅಧಿಕಾರಿಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ನಿಮಗೆ ಗೊತ್ತೇ ಇದೆ. ಆದರೆ ಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮಗಳನ್ನ ಸರ್ಕಾರಿ ಅಂಗನವಾಡಿಗೆ ಸೇರಿಸುವ ಮೂಲಕ ಮಾದರಿಯಾಗಿದ್ದಾರೆ.

    ಐಎಎಸ್ ಅಧಿಕಾರಿ ಪಂಕಜ್ ಜೈನ್ ಅವರು ತಮ್ಮ ಮಗಳನ್ನ ಸರ್ಕಾರಿ ಅಂಗನವಾಡಿಗೆ ಸೇರಿಸಿದ್ದಾರೆ. ಇವರು ಮಧ್ಯಪ್ರದೇಶದ ಕಟ್ನಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಖಾಸಗಿ ಶಾಲೆಗಿಂತ ಸರ್ಕಾರಿ ಅಂಗನವಾಡಿಗಳು ಉತ್ತಮವಾಗಿವೆ ಎಂದು ಹೇಳಿ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿ ಶಾಲೆಗೆ ಸೇರಿಸಿ ಇತರರಿಗೆ ಮಾದರಿಯಾಗಿದ್ದಾರೆ.

    ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಅಂಗನವಾಡಿ ಮತ್ತು ಶಾಲೆಗೆ ಕಳುಹಿಸುವುದರಿಂದ ಅಲ್ಲಿನ ವಾತಾವರಣ ತಿಳಿಯುತ್ತದೆ. ಜೊತೆಗೆ ಅಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ನಮಗೆ ಬೇಗ ತಿಳಿಯುತ್ತದೆ. ಇದರಿಂದ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಬಹುದು. ನಮ್ಮ ಕೆಲಸವನ್ನು ನೋಡಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗೆ ಸೇರಿಸುತ್ತಾರೆ ಎಂದು ಡಿಸಿ ಪಂಕಜ್‍ಜೈನ್ ತಿಳಿಸಿದ್ದಾರೆ.

    ಈ ಬಗ್ಗೆ ತಿಳಿದು ಮಧ್ಯ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪಂಕಜ್‍ಜೈನ್ ಅವರಿಗೆ ಪತ್ರವೊಂದನ್ನ ಬರೆದು ಶುಭಾಶಯ ತಿಳಿಸಿದ್ದಾರೆ. ಇದೀಗ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸಾರ್ವಜನಿಕ ಅಧಿಕಾರಿ ಸಮಾಜಕ್ಕೆ ಮಾದರಿಯಾಗಬೇಕು. ನಿಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸುವ ಮೂಲಕ ಇದನ್ನ ನೀವು ತೋರಿಸಿಕೊಟ್ಟಿದ್ದೀರಿ. ಇದನ್ನು ನೋಡಿ ಇತರ ಸರ್ಕಾರಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಹೆಚ್ಚಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲದೇ ಇದರಿಂದ ಸರ್ಕಾರಿ ಯೋಜನೆಗಳು ಸರಿಯಾದ ಸಮಯಕ್ಕೆ ಚಾಲನೆ ಆಗುತ್ತವೆ. ಹೀಗೆ ನಿಮ್ಮ ಕರ್ತವ್ಯನಿಷ್ಠೆಯನ್ನು ಇದೇ ರೀತಿ ಮುಂದುವರಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • ಸಿಎಂ ಎಚ್‍ಡಿಕೆ ‘ಫಿಟ್ನೆಸ್’ ಬಗ್ಗೆ ಮಾಹಿತಿ ನೀಡಿ – ರಾಜ್ಯಪಾಲರಿಗೆ ಪತ್ರ

    ಸಿಎಂ ಎಚ್‍ಡಿಕೆ ‘ಫಿಟ್ನೆಸ್’ ಬಗ್ಗೆ ಮಾಹಿತಿ ನೀಡಿ – ರಾಜ್ಯಪಾಲರಿಗೆ ಪತ್ರ

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ತಮ್ಮ ಆರೋಗ್ಯದ ಬಗ್ಗೆ ಸಾರ್ವಜನಿಕವಾಗಿಯೇ ಹೇಳಿಕೆ ನೀಡಿದ್ದು, ಅವರ ಆರೋಗ್ಯ ಬಗ್ಗೆ ರಾಜ್ಯದ ಜನರಲ್ಲಿ ಆತಂಕ ಮೂಡಿದೆ. ಆದ್ದರಿಂದ ಸಿಎಂರ ಆರೋಗ್ಯದ ಕುರಿತು ಮಾಹಿತಿ ನೀಡಿ ಎಂದು ಸಾಮಾಜಿಕ ಹೋರಾಟಗಾರರೊಬ್ಬರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

    ಸಾಮಾಜಿಕ ಹೋರಾಟಗಾರ ಬಿಎಸ್ ಗೌಡ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, 2018ರ ಮೇ ತಿಂಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಸಿಎಂ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮ ಹಾಗೂ ಇತರೇ ಸಭೆಯಗಳಲ್ಲಿ ನನ್ನ ಆರೋಗ್ಯ ಸರಿ ಇಲ್ಲ. ನಾನು ಯಾವಾಗ ಬೇಕಾದರೂ ಸಾಯುವ ಪರಿಸ್ಥಿತಿ ಇದೆ ಎಂದು ಅವರೇ ಪ್ರಸ್ತಾಪ ಮಾಡಿದ್ದಾರೆ. ಈ ವಿಚಾರ ಮಾಧ್ಯಮಗಳಲ್ಲಿ ಕೂಡ ಸುದ್ದಿಯಾಗಿದ್ದು, ರಾಜ್ಯದ ಮತದಾರನಾಗಿ ಮುಖ್ಯಮಂತ್ರಿಗಳ ಆರೋಗ್ಯ ಬಗ್ಗೆ ಆತಂಕವಾಗುತ್ತಿದೆ ಎಂದಿದ್ದಾರೆ.

    ಸಿಎಂ ಅವರ ಆರೋಗ್ಯ ಬಗ್ಗೆ ತಿಳಿದುಕೊಳ್ಳಲು ಆಸಕ್ತನಾಗಿದ್ದು, ಆದ್ದರಿಂದ ರಾಜ್ಯಪಾಲರು ಸಿಎಂ ಅವರ ಆರೋಗ್ಯದ ತಪಾಸಣೆಯ ದಾಖಲೆಗಳನ್ನು ಬಹಿರಂಗ ಪಡಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

  • ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಪುದುಚೇರಿ: ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ.

    ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಹಾಗೂ ಅಲ್ಲಿನ ರಾಜ್ಯಪಾಲರಾದ ಕಿರಣ್ ಬೇಡಿ ಮಧ್ಯೆ ಉಂಟಾಗಿದ್ದ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ತೆರೆ ಎಳೆದಿದೆ. ಇದನ್ನೂ ಓದಿ: ಕಿರಣ್ ಬೇಡಿ ನಿವಾಸದ ಎದುರೇ ಮಲಗಿದ ಪುದುಚೇರಿ ಸಿಎಂ

    ಸಿಎಂ ವಿ.ನಾರಾಯಣ ಸ್ವಾಮಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬೇಡಿ. ಸರ್ಕಾರದ ಯಾವುದೇ ರೀತಿಯ ದಾಖಲೆಗಳನ್ನು ರಾಜ್ಯಪಾಲರು ಕೇಳುವ ಅಧಿಕಾರ ಹೊಂದಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿ.ನಾರಾಯಣ ಸ್ವಾಮಿ ಅವರು, ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದು ಸಂವಿಧಾನ ಉಳಿಸಲು ಸರ್ಕಾರ ನಡೆಸಿದ ಹೋರಾಟಕ್ಕೆ ಸಿಕ್ಕ ಜಯ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?:
    ಪುದುಚೇರಿ ರಾಜ್ಯಪಾಲರಾದ ಕಿರಣ್ ಬೇಡಿ ಅವರು ಸರ್ಕಾರದ ಕಾರ್ಯವೈಕರಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ವಿ.ನಾರಾಯಣ ಸ್ವಾಮಿ ಆರೋಪಿಸಿದ್ದರು. ಬಳಿಕ ನಾರಾಯಣಸ್ವಾಮಿ ಅವರು ಪುದುಚೇರಿ ರಾಜಭವನದ ಮುಂದೆ ತಮ್ಮ ಸಚಿವರು, ಶಾಸಕರೊಂದಿಗೆ ಪ್ರತಿಭಟನೆ ಕೂಡ ನಡೆಸಿದ್ದರು.

    ಕಿರಣ್ ಬೇಡಿ ಅವರು ಆಡಳಿತದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಲಕ್ಷ್ಮೀ ನಾರಾಯಣನ್ 2017ರಲ್ಲಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ಕರ್ನಾಟಕ, ತೆಲಂಗಾಣ ಸರ್ಕಾರದಿಂದ ಅದ್ಧೂರಿಯಾಗಿ ನಡೆಯಿತು ಪ್ರೇಮಿಗಳ ಮದುವೆ!

    ಕರ್ನಾಟಕ, ತೆಲಂಗಾಣ ಸರ್ಕಾರದಿಂದ ಅದ್ಧೂರಿಯಾಗಿ ನಡೆಯಿತು ಪ್ರೇಮಿಗಳ ಮದುವೆ!

    ಕೊಪ್ಪಳ: ಜಿಲ್ಲೆಯ ಗಂಗಾವತಿಯ ವಿದ್ಯಾನಗರದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ತೆಲಂಗಾಣ ಮತ್ತು ಕರ್ನಾಟಕ ಸರ್ಕಾರದ ವತಿಯಿಂದ ಪ್ರೇಮಿಗಳ ಮದುವೆಯೊಂದು ಅದ್ಧೂರಿಯಾಗಿ ನೆರವೇರಿದೆ.

    ಪ್ರೇಮ ವಿವಾಹಕ್ಕೆ ವಿರೋಧ ಪಡಿಸಿದ್ದ ಪೋಷಕರ ನಿರ್ಧಾರನ್ನು ಖಂಡಿಸಿ, ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳು ವಿವಾಹವಾಗಿದ್ದಾರೆ. ಗಂಗಾವತಿಯ ಸಿದ್ದಾಪುರ ಗ್ರಾಮದ ಯುವತಿ ನಿರಂಜನಿ, ಉಳೇನೂರು ಗ್ರಾಮದ ಯುವಕ ವೆಂಕಟ್ ಭಾರ್ಗವರನ್ನು ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ವೆಂಕಟ್ ಸೆವೆನ್ ಸ್ಟಾರ್ ಹೋಟೆಲ್ಲಿನ ಶೆಫ್ ಆಗಿದ್ದರೆ ನಿರಂಜನಿ ಬೆಂಗಳೂರಿನ ಅಮೆರಿಕನ್ ವೇಲ್ಸ್ ಫಾರ್ ಗೋ ಬ್ಯಾಂಕ್ ಉದ್ಯೋಗಿಯಾಗಿದ್ದರು.

    ಇತ್ತೀಚೆಗೆ ಇವರಿಬ್ಬರ ಪ್ರೀತಿಯ ವಿಷಯ ಯುವತಿಯ ಮನೆಯವರಿಗೆ ಗೊತ್ತಾಗಿತ್ತು. ಅಲ್ಲದೇ ನಿರಂಜನಿ ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಬ್ಬರೂ ಸಂಬಂಧಿಕರಾದರೂ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿ, ವೆಂಕಟ್ ಕೈ ಬಿಡುವಂತೆ ಯುವತಿಗೆ ಕಿರುಕುಳ ನೀಡಿದ್ದರು. ಮನೆಯವರ ಕಿರುಕುಳದಿಂದ ಬೇಸತ್ತ ಈ ಜೋಡಿ ಆಲ್ ಇಂಡಿಯಾ ಡೆಮೆಕ್ರಾಟಿಕ್ ಅಸೋಸಿಯೇಷನ್ ಮೊರೆ ಹೋಗಿದ್ದರು. ಈ ಬಗ್ಗೆ ಅಸೋಸಿಯೇಷನ್ ತೆಲಂಗಾಣ ರಾಜ್ಯಪಾಲರಿಗೆ ಪತ್ರ ಬರೆದಿತ್ತು.

    ನಂತರ ತೆಲಂಗಾಣ ರಾಜ್ಯಪಾಲರು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಇಬ್ಬರ ಮದುವೆ ಮಾಡಿಸುವಂತೆ ಆದೇಶ ರವಾನಿಸಿದ್ದರು. ಇದರಿಂದ ಎಚ್ಚೆತ್ತ ಪೊಲೀಸರು ಗಂಗಾವತಿಯ ಶ್ರೀರಾಮ ಮಂದಿರದಲ್ಲಿ ಪ್ರೇಮಿಗಳ ವಿವಾಹವನ್ನು ನೆರವೇರಿಸಿಕೊಟ್ಟಿದ್ದಾರೆ. ಅಲ್ಲದೇ ಈ ಮದುವೆಗೆ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳು ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೀವಾವಧಿ ಶಿಕ್ಷೆ ಕಡಿಮೆಗೊಳಿಸಿ: ರಾಜ್ಯಪಾಲರ ಮೊರೆ ಹೋದ ಆಸಾರಾಮ್ ಬಾಪು

    ಜೀವಾವಧಿ ಶಿಕ್ಷೆ ಕಡಿಮೆಗೊಳಿಸಿ: ರಾಜ್ಯಪಾಲರ ಮೊರೆ ಹೋದ ಆಸಾರಾಮ್ ಬಾಪು

    ಜೋಧಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನ ಆಸಾರಾಮ್ ಬಾಪು ತಮ್ಮ ಜೀವಾವಧಿ ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ರಾಜಸ್ಥಾನ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ.

    ಸ್ವಘೋಷಿತ ದೇವಮಾನವನೆಂದೇ ಹೆಸರು ಮಾಡಿದ್ದ ರಾಜಸ್ಥಾನದ ಆಸಾರಾಮ್ ಬಾಪು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸುಧೀರ್ಘ ವಿಚಾರಣೆ ನಡೆಸಿದ ಜೋಧಪುರ ನ್ಯಾಯಾಲಯ ಏಪ್ರಿಲ್ 25 ರಂದು ಜೀವಾವಧಿ ಶಿಕ್ಷೆ ಘೋಷಿಸಿತ್ತು.

    ಜೋಧಪುರ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ಆಸಾರಾಮ್ ಬಾಪು ಜುಲೈ 2 ರಂದು ಹೈಕೋರ್ಟ್‍ಗೆ ಮೆಟ್ಟಿಲೇರಿದ್ದರು. ಆದರೆ ಇಲ್ಲಿಯವರೆಗೂ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ರಾಜಸ್ಥಾನದ ರಾಜ್ಯಪಾಲರ ಮೊರೆ ಹೋಗಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರು ಜೋಧಪುರ್ ಬಂಧಿಖಾನೆ ವರಿಷ್ಠಾಧಿಕಾರಿಯಾದ ಕೈಲಾಶ್ ತ್ರಿವೇದಿಯವರು, ಆಸಾರಾಮ್ ಬಾಪುರವರು ತಮ್ಮ ಶಿಕ್ಷೆಯ ಪ್ರಮಾಣವನ್ನು ಕಡಿಮೆಮಾಡುವಂತೆ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ ವಯೋಸಹಜ ಜೀವನ ನಡೆಸುತ್ತಿರುವ ನನಗೆ ನೀಡಿರುವ ಜೀವಾವಧಿ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

    ಮಧ್ಯಪ್ರದೇಶದ ಚಿಂದ್ವಾರಾದಲ್ಲಿರುವ ಆಶ್ರಮದಲ್ಲಿ ಓದುತ್ತಿದ್ದ 16 ವರ್ಷದ ಬಾಲಕಿಯನ್ನು ಜೋಧಪುರದ ಬಳಿಯಿರುವ ಆಶ್ರಮದಲ್ಲಿ ಆಸಾರಾಮ ಬಾಪು 2013ರ ಆಗಸ್ಟ್ 15 ರಂದು ಅತ್ಯಾಚಾರ ಎಸಗಿದ್ದಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

    ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

    ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ.

    ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಗುರುವಾರ ಬೆಳಗ್ಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂತಸ ಗಳಿಗೆಯಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಸರ್ಕಾರ ರಚನೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಿತು. ಶಾಸಕಾಂಗದ ನಾಯಕರಾಗಿ ಯಡಿಯೂರಪ್ಪನವರನ್ನು ಆಯ್ಕೆ ಮಾಡಿದ ಬಳಿಕ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ಸ್ಥಾಪನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

    ಸಂಜೆಯ ವೇಳೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದರು. ಹೀಗಾಗಿ ರಾಜ್ಯಪಾಲರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಹೆಚ್ಚಿತ್ತು. ಈಗ ರಾಜ್ಯಪಾಲರು ಬಿಜೆಪಿಗೆ ಅನುಮತಿ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುವ ಸಾಧ್ಯತೆಯಿದೆ.

    ಬಿಎಸ್ ಯಡಿಯೂರಪ್ಪ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಈಗಾಗಲೇ ಅರ್ಚಕರು ಆಗಮಿಸಿದ್ದಾರೆ.

    https://twitter.com/nimmasuresh/status/996758894994182145