Tag: ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ

  • ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.

    ಇಂದು (ಸೆ.5) ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ (Kundapura) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.ಇದನ್ನೂ ಓದಿ: 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳು ಇವರೇ – ಕಿಂಗ್‌ ಕೊಹ್ಲಿ, ಬಾದ್‌ ಶಾಗೆ ಅಗ್ರಸ್ಥಾನ

    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ (Hijab Contraversy) ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ತಡೆ ನೀಡಿದೆ.

    ಏನಿದರ ಹಿನ್ನೆಲೆ:
    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

  • ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ – 31 ಶಿಕ್ಷಕರು ಆಯ್ಕೆ

    ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ – 31 ಶಿಕ್ಷಕರು ಆಯ್ಕೆ

    ಬೆಂಗಳೂರು: 2023-24 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ (Best Teacher Award) 31 ಶಿಕ್ಷಕರನ್ನು ಆಯ್ಕೆ ಮಾಡಿ ಶಿಕ್ಷಣ ಇಲಾಖೆ ಪ್ರಕರಣೆ ಹೊರಡಿಸಿದೆ.

    ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಕೃಷಿ ಸಚಿವರ ಭೇಟಿ: ಹವಾಮಾನ ಪರಿಸ್ಥಿತಿ ಅಧ್ಯಯನ

    ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರಿಗೆ ಅಕ್ಷರ ಮಾತೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಲಿದ್ದಾರೆ.

    ಪ್ರಾಥಮಿಕ ಶಾಲಾ ಶಿಕ್ಷಕರು
    ಶಿವಮೊಗ್ಗದ ಫೌಜಿಯ ಸರವತ್‌, ಚಿಕ್ಕಬಳ್ಳಾಪುರದ ಮಂಜುನಾಥ್‌, ದಾವಣಗೆರೆಯ ಬಿ.ಕೆ.ಸತೀಶ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂ.ಜಿ.ಸುಜಾತ, ವಿಜಯಪುರದ ಮಹಮ್ಮದ ಹಾಶೀಮಸಾಬ ಹುಸೇನಸಾಬ ಲಷ್ಕರಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ್ರತಾಪ ಶಂಕರ ಜೋಡಟ್ಟಿ, ಬಾಗಲಕೋಟೆಯ ಮೊಹಮದ್‌ ಹುಸೇನ ಅಬ್ದುಲ್‌ ಖಾದರ ಸೌದಾಗರ, ಬೀದರ್‌ನ ಮಾರ್ತಂಡಪ್ಪ ತೆಳಗೇರಿ, ಶಿರಸಿಯ ಅಕ್ಷತಾ ಅನಿಲ ಬಾಸಗೋಡ, ಧಾರವಾಡದ ಶೇಕಪ್ಪ ಭೀಮಪ್ಪ ಕೇಸರಿ, ಮೈಸೂರಿನ ಭಾಸ್ಕರ, ಹಾಸನದ ಎ.ಬಿ.ಮೂರ್ತಿ, ಬಳ್ಳಾರಿಯ ಎಂ.ಆರ್‌.ವನಜಾಕ್ಷಮ್ಮ, ರಾಯಚೂರಿನ ಸೈಯದಾ ಸಾಜೀದಾ ಫಾತೀಮಾ, ಮಂಡ್ಯದ ಜಿ.ಪ್ರಶಾಂತ, ಚಾಮರಾಜನಗರ ಜಿಲ್ಲೆಯ ವಿ.ವೀರಪ್ಪ, ತುಮಕೂರಿನ ಎಂ.ಜಿ.ಗಂಗಾಧರ, ಕೊಡಗಿನ ಬಿ.ಟಿ.ಪೂರ್ಣೇಶ್‌, ಉತ್ತರ ಕನ್ನಡದ ಮಂಜುನಾಥ ಹರಿಕಂತ್ರ, ಹಾವೇರಿಯ ಸೋಮಪ್ಪ ಫಕಿರಪ್ಪ ಕಠಾರಿ. ಇದನ್ನೂ ಓದಿ: ಪಾರ್ಲಿಮೆಂಟ್ ಚುನಾವಣೆ ಒಳಗೆ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಈಶ್ವರಪ್ಪ

    ಪ್ರೌಢ ಶಾಲಾ ಶಿಕ್ಷಕರು
    ಉತ್ತರ ಕನ್ನಡದ ಪ್ರಕಾಶ ನಾಯ್ಕ, ಧಾರವಾಡದ ಸುರೇಶ್‌ ಬಿ.ಮುಗಳಿ, ಚಿತ್ರದುರ್ಗದ ಕೆ.ಟಿ.ನಾಗಭೂಷಣ್‌, ಮಧುಗಿರಿಯ ಜಿ.ಹೆಚ್‌.ರೇಣುಕರಾಜ್‌, ಮಂಡ್ಯದ ಜಿ.ಸಿ.ರಜನಿ, ಕೊಪ್ಪಳದ ಬಸಪ್ಪ ವಾಲಿಕರ, ಬೆಂಗಳೂರಿನ ಪಿ.ಜಿ.ಇಂದಿರಾ, ಶಿವಮೊಗ್ಗದ ವಿಜಯ ಆನಂದರಾವ್‌, ಮೈಸೂರಿನ ಎಸ್.ಹರ್ಷ, ಉಡುಪಿಯ ನರೇಂದ್ರ, ಚಿಕ್ಕೋಡಿಯ ಶ್ರೀಶೈಲ ಸ ಗಸ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]