Tag: ರಾಜ್ಯಾಧ್ಯಕ್ಷ

  • ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಸೈಲೈಂಟಾಗಿ ಮೈತ್ರಿ ಆಗಿದ್ದವು: ಎಚ್. ವಿಶ್ವನಾಥ್

    ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಸೈಲೈಂಟಾಗಿ ಮೈತ್ರಿ ಆಗಿದ್ದವು: ಎಚ್. ವಿಶ್ವನಾಥ್

    ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಳಗೆ ಮೈತ್ರಿ ಮಾಡಿಕೊಂಡಿದ್ದವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

    ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿರುವುದು ಕೇವಲ ಮಾತಿನ ಸರ್ಕಾರವಷ್ಟೇ. ಇಲ್ಲಿಯವರೆಗೂ ಕಾಮ್ ಕಿ ಬಾತ್ (ಕೆಲಸಗಳು) ಆಗುತ್ತಲೆ ಇಲ್ಲ. ಬರೀ ಮಾತಿನ ಆಡಳಿತ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಸರ್ವಾಧಿಕಾರಿಯ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯು ಒಳಗೊಳಗೆ ಮೈತ್ರಿ ಮಾಡಿಕೊಂಡಿದ್ದವು. ಎಂ.ಬಿ.ಪಾಟೀಲ್ ಅವರನ್ನು ಗೆಲ್ಲಿಸೋಕೆ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡಿದ್ದವು ಎಂದು ಗಂಭೀರವಾಗಿ ಆರೋಪಿಸಿದರು.

    ಕಾಂಗ್ರೆಸ್ಸಿನವರೇ ನೀವು ಸೆಕ್ಯೂಲರ್ ಆಗಿಯೇ ಇರಿ, ಅದನ್ನು ನೀವೂ ಯಾವತ್ತು ಮಿಕ್ಸ್ ಮಾಡಬೇಡಿ. ಕಾಂಗ್ರೆಸ್ ಸೆಕ್ಯೂಲರ್ ಪಾರ್ಟಿ ಎಂದು ಕಾಂಗ್ರೆಸ್ಸಿಗೆ ಬುದ್ಧಿಮಾತು ಹೇಳಿದರು. ಅಲ್ಲದೇ ಈ ಮೊದಲು ನೀವು ನಮ್ಮನ್ನು ಬಿಜೆಪಿಯ ಬಿ ಟೀಮ್ ಎಂದು ಕರೆದಿದ್ದಿರಿ, ನಾವು ಬಿಜೆಪಿ ಜೊತೆ ಹೋಗಿ ಸರ್ಕಾರ ರಚನೆ ಮಾಡಿಲ್ಲವೆಂದು ಪರೋಕ್ಷವಾಗಿ ಕಾಂಗ್ರೆಸ್ಸನ್ನು ಟೀಕಿಸಿದರು.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತೇನೆ. ಅವರು ನೂರು ವರ್ಷ ಚೆನ್ನಾಗಿರಲಿ, ಅಲ್ಲದೇ ಇನ್ನು ಮುಂದೆ ಅವರು ರಾಷ್ಟ್ರೀಯ ನಾಯಕರಾಗಿ ಬೆಳೆಯಲಿ ಎಂದು ಹಾರೈಸಿ, ನಿಮಗೆ ಇದಕ್ಕಿಂತ ಬೇರೆನಾದರೂ ಬೇಕಾ, ಸದ್ಯ ನಮ್ಮ ನಡುವಿನ ಸಂಬಂಧ ಈಗ ಹೇಗಿದೆ ಎಂದು ವ್ಯಂಗ್ಯವಾಗಿ ಉತ್ತರಿಸಿದರು.

    ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ದುಂದು ವೆಚ್ಚ ವಿಚಾರ ಕುರಿತು ಬಿಜೆಪಿಗೆ ತಿರುಗೇಟು ನೀಡಿದ ಅವರು, ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದಾಗ ದೇಶ-ವಿದೇಶಗಳ ಅತಿಥಿಗಳನ್ನು ಆಹ್ವಾನಿಸಲಾಗಿತ್ತು, ಆಗಲೂ ಸಾರ್ವಜನಿಕರ ಹಣವನ್ನು ಬಳಕೆ ಮಾಡಿಕೊಂಡಿಲ್ಲವೇ ಹಾಗೂ ಅಂದಿನ ಖರ್ಚನ್ನ ಖುದ್ದು ಮೋದಿ ಜೇಬಿನಿಂದ ಮಾಡಿದ್ದಾರ ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದರು.

    ಶಾದಿ ಭಾಗ್ಯಕ್ಕೆ ಅನುದಾನವನ್ನು ನಮ್ಮ ಸರ್ಕಾರ ಕಡಿಮೆ ಮಾಡಿಲ್ಲ. ಹಿಂದಿನ ಸರ್ಕಾರ ತನ್ನ ಕೊನೆ ಬಜೆಟ್ ನಲ್ಲಿ ಅನುದಾನ ಕಡಿಮೆ ಮಾಡಿತ್ತು. ಆದರೆ ಅದನ್ನು ಈಗ ನಮ್ಮ ತಲೆಗೆ ಯಾಕೆ ಕಟ್ಟುತ್ತಿದ್ದೀರಿ ಎಂದು ಪ್ರಶ್ನಿಸಿ, ನಾವೇನೂ ಅನುದಾನ ಕಡಿತ ಮಾಡಿಲ್ಲ. ಒಮ್ಮೆ ಬಜೆಟ್ ಪುಸ್ತಕ ನೋಡಿ ಆರೋಪ ಮಾಡಿ. ಅನ್ನಭಾಗ್ಯದ ಅಕ್ಕಿ ಕಡಿಮೆ ಮಾಡಿದ್ದಕ್ಕೆ ಸಮರ್ಥನೆ ನೀಡಿದ ಅವರು, ಹಿಂದಿನ ಸರ್ಕಾರ ಚುನಾವಣಾ ದೃಷ್ಟಿಯಿಂದ 25 ಲಕ್ಷ ಹೆಚ್ಚುವರಿ ಕಾರ್ಡ್ ಅನ್ನು ಬೇಕಾಬಿಟ್ಟಿಯಾಗಿ ಹಂಚಿತ್ತು. ಹೀಗಾಗಿ ಅಕ್ಕಿ ಕಡಿಮೆ ಮಾಡಬೇಕಾದ ಅನಿರ್ವಾಯತೆಯಿಂದ ಅಕ್ಕಿ ಮಾಡಿದ್ದೇವೆ ಎಂದರು.

    ಇದೇ ವೇಳೆ ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತನಾಡಿ, ಪ್ರಜ್ವಲ್ ರೇವಣ್ಣ ಒಬ್ಬ ನಿಷ್ಠಾವಂತ ನಾಯಕರಾಗಿದ್ದಾರೆ. ಅವರಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಮೇಲೆ ಒಳ್ಳೆಯ ಹಿಡಿತ ಇದೆ. ಆದುದರಿಂದ ಅಂತಹ ನಾಯಕರು ನಮ್ಮ ಪಕ್ಷಕ್ಕೆ ಬೇಕು. ಕೇವಲ ಅವರನ್ನು ದೇವೇಗೌಡರ ಮೊಮ್ಮಗ ಅನ್ನೋದನ್ನ ಪಕ್ಕಕ್ಕೆ ಸರಿಸಿ ಮಾತನಾಡಿ. ಅಲ್ಲದೇ ನನ್ನ ಅವಧಿಯಲ್ಲಿ ಪಕ್ಷದಲ್ಲಿ ಅವರ ಪಾತ್ರ ಇನ್ನೂ ಚೆನ್ನಾಗಿ ಇರಲಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಮೋದಿ ಅಪ್ಪಿದ ರಾಹುಲ್ ನಡೆ ಮಕ್ಕಳಾಟ – ಎಚ್.ವಿಶ್ವನಾಥ್

    ಮೋದಿ ಅಪ್ಪಿದ ರಾಹುಲ್ ನಡೆ ಮಕ್ಕಳಾಟ – ಎಚ್.ವಿಶ್ವನಾಥ್

    ಬೆಂಗಳೂರು: ಲೋಕಸಭೆ ಸದನದ ವೇಳೆ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವರ್ತನೆಯನ್ನು ಮಿತ್ರ ಪಕ್ಷ ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ರಾಹುಲ್ ಅವರ ವರ್ತನೆ ಹುಡುಗಾಟ, ಮಕ್ಕಳಾಟ ರೀತಿ ಇದೆ ಎಂದು ಹೇಳಿದ್ದಾರೆ. ಇತ್ತ ವಿಶ್ವನಾಥ್ ಹೇಳಿಕೆಯನ್ನೇ ಉಲ್ಲೇಖಿಸಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಹಾಮೈತ್ರಿ ಕೂಟದ ಬಗ್ಗೆ ವ್ಯಂಗ್ಯವಾಡಿದ್ದಾರೆ. ತಮ್ಮ ಪ್ರಧಾನಿ ಅಭ್ಯರ್ಥಿ ಬಗ್ಗೆ ಮಹಾಮೈತ್ರಿಕೂಟ ಯೋಚನೆ ಮಾಡುತ್ತಿರುವುದು ಇದನ್ನೇ. `ರಾಹುಲ್ ಗಾಂಧಿ ಬಗ್ಗೆ ಮಹಾಮೈತ್ರಿ ಕೂಟದ ಪಕ್ಷವೊಂದು ಅರ್ಥ ಮಾಡ್ಕೊಂಡಿದ್ದು, ಅವರು ಸರ್ಕಾರ ರಚನೆ ಮಾಡೋದು ಬರೀ ಕನಸಷ್ಟೇ ಎಂದು ಬಿಎಸ್‍ವೈ ಕಾಲೆಳೆದಿದ್ದಾರೆ.

    ಇದಕ್ಕೂ ಮುನ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅಧಿಕೃತವಾಗಿ ಪಕ್ಷದ ಕಚೇರಿಯಲ್ಲಿ ಕೆಲಸ ಪ್ರಾರಂಭ ಮಾಡಿದ ಬಳಿಕ ಮಾತನಾಡಿದ ವಿಶ್ವನಾಥ್ ಅವರು, ಹಿಂದೆ ಜನತ ಪರಿವಾರದಲ್ಲಿದ್ದ ಎಲ್ಲಾ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತಲು ಯತ್ನಿಸುತ್ತೇನೆ. ಯಾವುದೇ ಕಾರಣದಿಂದ ಅವರು ಪಕ್ಷ ಬಿಟ್ಟು ಹೊರ ನಡೆದಿದ್ದರು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಅದ್ದರಿಂದ ಮತ್ತೆ ಪಕ್ಷಕ್ಕೆ ಬಂದು ಜನತಾ ಪರಿವಾರವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆಯಿಲ್ಲ. ಜಿಲ್ಲೆಯ ಸಮಿತಿಗಳು ಪಕ್ಷದ ಪರವಾಗಿ ಕೆಲಸ ಮಾಡಿ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಸದ್ಯ ಇರುವ ರಾಜ್ಯ ಸಮಿತಿಯನ್ನ ವಿಸರ್ಜನೆ ಮಾಡಲಿದ್ದು, ಹೊಸ ಸಮಿತಿಯನ್ನ ಆದಷ್ಟು ಬೇಗ ರಚನೆ ಮಾಡುತ್ತೇವೆ. ಹಿರಿಯರು, ಯುವಕರು, ಮಹಿಳೆಯರು ಈ ಸಮಿತಿಯಲ್ಲಿ ಇರುತ್ತಾರೆ. ಜಿಲ್ಲಾ ಸಮಿತಿಗಳು ಸ್ಥಳೀಯ ಚುನಾವಣೆಯವರೆಗೂ ಹಾಗೇ ಮುಂದುವರೆಯುತ್ತದೆ. ನನ್ನ ಮೊದಲ ಪ್ರವಾಸ ಉತ್ತರ ಕರ್ನಾಟಕದಿಂದಲೇ ಪ್ರಾರಂಭ ಮಾಡಲಿದ್ದು, ಉತ್ತರ ಕರ್ನಾಟಕಕ್ಕೆ ಜೆಡಿಎಸ್ ಕೊಡುಗೆ ಏನು ಎಂಬುವುದನ್ನು ಜನತೆಗೆ ತಿಳಿಸುತ್ತೇವೆ ಎಂದು ಹೇಳಿದರು.

    ಬಳಿಕ ಜೆಪಿ ಭವನದಲ್ಲಿ ಮಾತನಾಡಿದ ಅವರಯ ಸಿಎಂ ದುರ್ಬಲರಾಗಿದ್ದು, ರೇವಣ್ಣ ಸೂಪರ್ ಸಿಂಗ್ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ಕೊಟ್ಟರು. ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ನಾಯಕರು ಈ ರೀತಿ ಮಾತನಾಡುವುದು ಸರಿಯಲ್ಲ. ನಮ್ಮ ದೇಶದಲ್ಲಿ ವಾಕ್ ಸ್ವಾತಂತ್ರ್ಯ ಇರುವುದರಿಂದ ಯಾರು ಬೇಕಾದರು ಮಾತನಾಡಬಹುದು. ದೇವೇಗೌಡರು ದೇಶಕ್ಕೆ ಪ್ರಧಾನಿ ಆದವರು. ಅವರ ರಾಜಕೀಯ ಅನುಭವದಲ್ಲಿ ಸಲಹೆ ಪಡೆಯೋದು ತಪ್ಪಲ್ಲ. ಸಿಎಂ ಇದನ್ನೆ ಮಾಡುತ್ತಿದ್ದಾರೆ ಅಷ್ಟೇ. ದೇವೇಡಗೌಡರು ಸರ್ಕಾರದ ಫೈಲ್ ನೋಡುತ್ತಿಲ್ಲ. ಬಿಜೆಪಿ ಅವರು ಬಾಲಿಶವಾಗಿ ನಡೆದುಕೊಳ್ಳಬಾರದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪರಿವಾರದಿಂದ ಹೊರ ಹೋದವರೆಲ್ಲರೂ ಪಕ್ಷಕ್ಕೆ ವಾಪಸ್ಸಾಗಬೇಕು- ಎಚ್ ವಿಶ್ವನಾಥ್

    ಪರಿವಾರದಿಂದ ಹೊರ ಹೋದವರೆಲ್ಲರೂ ಪಕ್ಷಕ್ಕೆ ವಾಪಸ್ಸಾಗಬೇಕು- ಎಚ್ ವಿಶ್ವನಾಥ್

    ಬೆಂಗಳೂರು: ಜನತಾ ಪಕ್ಷ ಬಿಟ್ಟಿರುವ ಎಲ್ಲರೂ ಪಕ್ಷಕ್ಕೆ ವಾಪಸ್ ಆಗಬೇಕು. ಜನತಾ ಪರಿವಾರದಿಂದ ಹೊರ ಹೋದವರನ್ನ ವಾಪಸ್ ಬರುವಂತೆ ಮನವಿ ಮಾಡ್ತೀನಿ. ಜೆಡಿಎಸ್ ಪಕ್ಷ ಬೆಳವಣಿಗೆಗೆ ಎಲ್ಲರೂ ಒಗ್ಗೂಡಿಸೋದು ನನ್ನ ಕೆಲಸ ಅಂತ ಹುಣೂಸುರು ಶಾಸಕ ಎಚ್ ವಿಶ್ವನಾಥ್ ತಿಳಿಸಿದ್ದಾರೆ.

    ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿ ವರಿಷ್ಠರು ಕೊಟ್ಟಿದ್ದಾರೆ. ಅದನ್ನ ನಿಭಾಯಿಸಲು ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ. ಸಿಎಂ ಆಗಿ ಕುಮಾರಸ್ವಾಮಿ ಆದಾಗಿನಿಂದ ರಾಜ್ಯಾದ್ಯಂತ ಹೆಚ್ಚು ಮಳೆ ಆಗಿದೆ ಅಂದ್ರು.

    ರಾಜಕೀಯವಾಗಿ ಜರ್ಜರಿತವಾದಾಗ ದೇವೇಗೌಡರು, ಕುಮಾರಸ್ವಾಮಿ ನನಗೆ ಅವಕಾಶ ನೀಡಿದ್ರು. ಹುಣಸೂರಿನಿಂದ ಟಿಕೆಟ್ ನೀಡಿ ಗೆಲ್ಲಿಸಿದ್ರು. ಈಗ ನನ್ನ ಮೇಲೆ ಅಭಿಮಾನವಿಟ್ಟು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ರಾಜ್ಯದ ಜವಾಬ್ದಾರಿ ನನಗೆ ನೀಡಿದ್ದಾರೆ. ಮುಂದೆ ಸ್ಥಳೀಯ ಸಂಸ್ಥೆ, ಲೋಕಸಭೆ ಚುನಾವಣೆ ಇದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹೊಸ ರೂಪ ನೀಡುತ್ತೇನೆ. ಪಕ್ಷ ಬಿಟ್ಟಿರುವ ಎಲ್ಲಾ ನಾಯಕರು ಪಕ್ಷಕ್ಕೆ ವಾಪಸ್ ಕರೆದುಕೊಂಡು ಬರುತ್ತೇವೆ. ರಾಜ್ಯದ ಅಭಿವೃದ್ಧಿಗೆ ಹೋದವರು ವಾಪಸ್ ಪಕ್ಷಕ್ಕೆ ಬರಬೇಕು ಅಂತ ಹೇಳಿದ್ರು.

    ಬಿಜೆಪಿಗೆ ತಿರುಗೇಟು:
    ಮಾತೋಡೋರಿಗೆ ಬೇಡ ಅನ್ನೋಕೆ ಆಗೊಲ್ಲ. ಪ್ರಜಾಪ್ರಭುತ್ವದಲ್ಲಿ ಮಾತನಾಡೋದಕ್ಕೆ ಅವಶ್ಯಕತೆ. ಆದ್ರೆ ರಾಷ್ಟ್ರೀಯ ಪಕ್ಷದ ನಾಯಕರು ಹೇಗೆ ಮಾತನಾಡಬೇಕು ಅನ್ನೋದು ತಿಳಿದುಕೊಳ್ಳಬೇಕು ಅಂತ ಸೂಪರ್ ಸಿಎಂ, ಸುಪ್ರೀಂ ಸಿಎಂ ಎಂಬ ಬಿಜೆಪಿ ಟ್ವಿಟ್ ಗೆ ತಿರುಗೇಟು ನೀಡಿದ್ರು.

    ದೇವೇಗೌಡರು ಸರ್ಕಾರದ ಫೈಲ್ ನೋಡ್ತಿಲ್ಲ ಅನ್ನೋ ವಿಚಾರದ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇವೇಗೌಡರು ದೇಶದ ಪ್ರಧಾನಿ ಆದವರು. ರಾಜಕೀಯ ಅನುಭವ ಅವರಿಗೆ ಹೆಚ್ಚಿದೆ. ಅವರ ರಾಜಕೀಯ ಅನುಭವದಲ್ಲಿ ಸಲಹೆ ಪಡೆದ್ರೆ ಏನು ತಪ್ಪು ಅಂತ ಪ್ರಶ್ನಿಸಿದ್ರು.

    ಬಾಲಿಶವಾಗಿ ಬಿಜೆಪಿ ಅವರು ನಡೆದುಕೊಳ್ಳಬಾರದು. ಯಡಿಯೂರಪ್ಪ ಅವರು ಸುಮ್ಮನೆ ಮಾತನಾಡಬಾರದು. ಜನರು ಒಪ್ಪಿ ಸಮ್ಮಿಶ್ರ ಸರ್ಕಾರ ಆಗಿದೆ. ಸೇವೆಗಾಗಿ ನಾವು ಇಬ್ಬರೂ ವೋಟ್ ಕೇಳಿದ್ದೇವೆ. ಜಗಳ ಮಾಡ್ತೀವಿ ಅಂತ ವೋಟ್ ಕೇಳಿಲ್ಲ. ಜನತಾಂತ್ರಿಕವಾಗಿ ಎಲ್ಲರು ಕೆಲಸ ಮಾಡೋಣ. ಯಡಿಯೂರಪ್ಪ, ಅವರ ಪಕ್ಷದ ನಾಯಕರು ನಮ್ಮ ಜೊತೆ ಕೈ ಜೋಡಿಸಬೇಕು. ಸಾಲಮನ್ನಾ ವಿಚಾರದಲ್ಲಿ ವಿಪಕ್ಷಗಳು ಗೊಂದಲ ಮೂಡಿಸುತ್ತಿವೆ. ಸಹಕಾರಿ ಬ್ಯಾಂಕ್ ನ ಸಾಲಮನ್ನಾ ಕುರಿತು ಆದೇಶ ಆಗುತ್ತಿದೆ. ರಾಷ್ಟ್ರೀಯ ಬ್ಯಾಂಕ್ ಗಳ ಸಾಲಮನ್ನಾ ಕೂಡಾ ಆದಷ್ಟು ಬೇಗ ಆದೇಶ ಆಗುತ್ತೆ. ಯಾರು ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು ಅಂತ ಸ್ಪಷ್ಟಪಡಿಸಿದ್ರು.

    ಕಾರ್ಯಕರ್ತರಿಗೆ ಶರವಣ ಕರೆ:
    ಸಿಎಂ ಕುಮಾರಸ್ವಾಮಿ 18 ಗಂಟೆ ಕೆಲಸ ಮಾಡ್ತಿದ್ದಾರೆ. ಇಡೀ ರಾಜ್ಯ ನಮ್ಮನ್ನ ನೋಡುತ್ತಿದೆ. ಪಕ್ಷದ ಕಾರ್ಯಕರ್ತರು ಮುಂದಿನ ಚುನಾವಣೆಗೆ ರೆಡಿಯಾಗಬೇಕು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಎಲ್ಲಾ ಶ್ರಮ ವಹಿಸಬೇಕು ಅಂತ ಪರಿಷತ್ ಸದಸ್ಯ ಶರವಣ ಕರೆ ನೀಡಿದ್ರು.

    ದೇವಾಲಯ, ಜೆಡಿಎಸ್ ವರಿಷ್ಠರ ಭೇಟಿ:
    ಅಧಿಕಾರ ಸ್ವೀಕಾರಕ್ಕೂ ವಿಶ್ವನಾಥ್ ಅವರು, ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನ ನಂತರ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ದೇವಸ್ಥಾನಕ್ಕೆ ಆಗಮಿಸುತ್ತಿದ್ದಂತೆಯೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದ್ದರು. ಈ ವೇಳೆ ವಿಶ್ವನಾಥ್ ಗೆ ಪರಿಷತ್ ಸದಸ್ಯ ಶರವಣ ಸಾಥ್ ನೀಡಿದ್ರು. ಬಳಿಕ ಅವರು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಆ ನಂತರ ಜೆಡಿಎಸ್ ಕಚೇರಿಯಲ್ಲಿ ಎಚ್.ವಿಶ್ವನಾಥ್ ಅವರು ನೂತನ ರಾಜ್ಯಾಧ್ಯಕ್ಷರಾಗಿ ಅಧಿಕೃತವಾಗಿ ಕೆಲಸ ಆರಂಭಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಶೀಘ್ರವೇ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ: ಹೆಚ್‍ಡಿಡಿ

    ಶೀಘ್ರವೇ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ: ಹೆಚ್‍ಡಿಡಿ

    ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವ ಕಾರಣ ರಾಜ್ಯಾಧ್ಯಕ್ಷರಾಗಿ ಜೆಡಿಎಸ್ ಸಂಘಟನೆ ಮಾಡುವುದು ಕಷ್ಟ ಸಾಧ್ಯ. ಅದ್ದರಿಂದ ರಾಜ್ಯಾಧ್ಯಕ್ಷರ ಜೊತೆ ಪದಾಧಿಕಾರಿಗಳ ಬದಲಾವಣೆ ಆಗಬೇಕಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

    ಇಂದು ಆಯೋಜಿಸಲಾಗಿದ್ದ ಪಕ್ಷದ ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ರಾಜ್ಯಾಧ್ಯಕ್ಷರು ಪದಾಧಿಕಾರಿಗಳ ನೇಮಕಕ್ಕೆ ಸಮಿತಿ ರಚನೆ ಆಗಲಿದೆ. ಪಕ್ಷದ ನಿಯಮಾವಳಿ ಗಮನದಲ್ಲಿಟ್ಟು ಸಮಿತಿ ರಚನೆ ಮಾಡಲಾಗುತ್ತದೆ. ಪದಾಧಿಕಾರಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ತೊಂದರೆಯಾಗಬಾರದು ಎಂದು ಚಿಂತಿಸಲಾಗಿದೆ ಎಂದರು.

    ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಧು ಬಂಗಾರಪ್ಪ, ಪಿಜಿಆರ್ ಸಿಂಧ್ಯಾ, ವಿಶ್ವನಾಥ್ ಹೆಸರು ಕೇಳಿ ಬರುತ್ತಿದ್ದು, ಈ ಕುರಿತು ಅಂತಿಮ ತೀರ್ಮಾನ ಹೊರ ಬೀಳಬೇಕಿದೆ. ಇಂದಿನ ಸಭೆಯಲ್ಲಿ ಜಫ್ರುಲ್ಲಾ ಖಾನ್, ಎಂಎಲ್‍ಸಿ ಶರವಣ, ಶಾಸಕ ಗೋಪಾಲಯ್ಯ, ಮನೋಹರ್, ಅಪ್ಪಾಜಿಗೌಡ, ಬೆಂಗಳೂರು ನಗರ ವಕ್ತಾರ ಪ್ರಕಾಶ್, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದರು.

    ಇದೇ ವೇಳೆ ಲೋಕಸಭೆ ಚುನಾವಣೆಗೆ ಮೈತ್ರಿ ಕುರಿತು ಪ್ರತಿಕ್ರಿಯೆ ನೀಡಿದ ದೇವೇಗೌಡರು, ಚುನಾವಣೆ ಹೊಂದಾಣಿಕೆಗೆ ನಮ್ಮಿಂದ ತೊಂದರೆಯಾಗಬಾರದು. ಮುಂದಿನ ತಿಂಗಳು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲಾಗುವುದು. ಆದರೆ ಇಂದಿನ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೀಟು ಬಿಟ್ಟು ಕೊಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಲ್ಲದೇ ಕಾಂಗ್ರೆಸ್ ಪಕ್ಷದೊಂದಿಗೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

    ಪಕ್ಷದ ಘಟಕ ಅಧ್ಯಕ್ಷರ ಸಭೆಯ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಕುಮಾರಸ್ವಾಮಿ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸ ಪದಾದಿಕಾರಿಗಳ ನೇಮಕದ ಬಗ್ಗೆ ನಾನೇ ಸಭೆ ಕರೆಯಲು ಹೇಳಿದ್ದೆ. ನಾನೇ ಸಲಹೆ ಸೂಚನೆ ಕೊಟ್ಟಿದ್ದೇನೆ, ಏಳೆಂಟು ಜನರ ಹೆಸರು ಕೇಳಿಬಂದಿದೆ. ಪಕ್ಷದ ಹಿರಿಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಈ ಕುರಿತು ಒಂದು ವಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

  • ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಸಜ್ಜು!

    ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಸಜ್ಜು!

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಭಾರತೀಯ ಜನತಾ ಪಾರ್ಟಿ ಸಜ್ಜಾಗಿದೆ.

    ತೃತೀಯರಂಗದ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾದ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿ ಹೈಕಮಾಂಡ್, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಚಂಡ ಗೆಲುವಿಗೆ ತಯಾರಿ ನಡೆಸಲು ಆರಂಭಿಸಿದೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಬೈಕ್ ಜಾಥಗಳ ಮೂಲಕ ಮನವರಿಕೆ ಮಾಡಲು ಬಿಜೆಪಿ ಸಿದ್ಧವಾಗಿದೆ. ರಾಜ್ಯಾದ್ಯಂತ 5 ದಿನಗಳ ಕಾಲ ಬೃಹತ್ ಬೈಕ್ ರ‍್ಯಾಲಿಗಳ ಆಯೋಜನೆ ಮಾಡಿದ್ದು, ಜೂನ್ 15 ರಿಂದ 20 ರವರೆಗೆ ರಾಜ್ಯಾದ್ಯಂತ ಬೈಕ್ ರ‍್ಯಾಲಿ ನಡೆಸಲು ಪಕ್ಷ ತೀರ್ಮಾನಿಸಿದೆ.

    ಪ್ರತಿ ವಿಧಾನಸಭಾ ಕ್ಷೇತ್ರಗಳಿಗೊಂದರಂತೆ 5 ದಿನಗಳಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೈಕ್ ರ‍್ಯಾಲಿ ಕೈಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದು, ಪ್ರತಿ ಬೈಕ್ ರ‍್ಯಾಲಿವೂ ಯಶಸ್ವಿಯಾಗಬೇಕು. ಎಲ್ಲಾ ಕಡೆ ಬೈಕ್ ರ‍್ಯಾಲಿಗೆ ಭರ್ಜರಿ ರೆಸ್ಪಾನ್ಸ್ ಸಿಗುವಂತಾಗಬೇಕು. ಈ ಕುರಿತು ಆಯಾ ಜಿಲ್ಲೆಗಳ ಸಂಸದರು, ಜಿಲ್ಲಾಧ್ಯಕ್ಷರು, ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಪದಾಧಿಕಾರಿಗಳಿಗೆ ಬಿಎಸ್‍ವೈ ಖಡಕ್ ಸೂಚನೆ ನೀಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

  • ಕಾಂಗ್ರೆಸ್ ಹೀನಾಯ ಸೋಲು ಕಂಡ್ರೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ- ಬಿಎಸ್‍ವೈ

    ಕಾಂಗ್ರೆಸ್ ಹೀನಾಯ ಸೋಲು ಕಂಡ್ರೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ- ಬಿಎಸ್‍ವೈ

    ಬೆಂಗಳೂರು: ತಮ್ಮ ಸ್ವಂತ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರು ದಯನೀಯ ಸೋಲನ್ನು ಅನುಭವಿಸಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಾಳತ್ವದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕಡೆಗೆ ಜನ ಓಗೊಟ್ಟಿದ್ದಾರೆ. ರಾಜ್ಯದ ಮತದಾರ ಬದಲಾವಣೆಗೆ ತನ್ನ ಜನಾದೇಶವನ್ನು ನೀಡಿದ್ದಾರೆ ಅಂತ ಹೇಳಿದ್ರು.

    ಕಾಂಗ್ರೆಸ್ ಕುತಂತ್ರಗಳನ್ನು ಮಾಡುತ್ತಿದೆ. ಇವುಗಳನ್ನು ತೀವ್ರವಾಗಿ ನಾವು ಖಂಡಿಸುತ್ತೇವೆ. ರಾಷ್ಟ್ರೀಯ ನಾಯಕರುಗಳ ಜೊತೆ ಸಮಾಲೋಚನೆಯನ್ನು ಮಾಡಿ ನಮ್ಮ ಮುಂದಿನ ನಿಲುವು ಏನಿರಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಗಲು-ರಾತ್ರಿ ಎನ್ನದೇ ದುಡಿದ ಲಕ್ಷಾಂತರ ಜನ ನಮ್ಮ ಕಾರ್ಯಕರ್ತ ಹಾಗೂ ರಾಜ್ಯದ ಮತದಾರರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಿದ್ರು.

    ಕಾಂಗ್ರೆಸ್ ವಿರೋಧ ಅಲೆಯಿಂದಾಗಿ ಜೆಡಿಎಸ್ ಗಣನೀಯ ಪ್ರಮಾಣದಲ್ಲಿ ತನ್ನ ಸ್ಥಾನಗಳನ್ನು ಗಳಿಸಿದೆ. ಎಲ್ಲಕ್ಕೂ ಮಿಗಿಲಾಗಿ ಕರ್ನಾಟಕ ರಾಜ್ಯದ ಆರೂವರೆ ಕೋಟಿ ಜನ ಬಿಜೆಪಿಗೆ ಕೊಟ್ಟಿರುವಂತಹ ಬೆಂಬಲಕ್ಕಾಗಿ ತಲೆಬಾಗಿ ವಂದಿಸುತ್ತೇನೆ ಅಂದ್ರು.

    ಕಾಂಗ್ರೆಸ್ ದಯನೀಯ ಸೋಲನ್ನುಭವಿಸದ ಮೇಲೆಯೂ, ತಿಸ್ಕಾರಗೊಂಡ ಬಳಿಕವೂ ಹಿಂಬಾಗಿಲಿನಿಂದ ಅಧಿಕಾರ ಹಿಡಿಯೋದನ್ನು ಪ್ರಯತ್ನ ಮಾಡಿರುವುದನ್ನು ಬಿಎಸ್‍ವೈ ಮತ್ತೊಮ್ಮೆ ಖಂಡಿಸಿದ್ರು.

  • ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ವದಂತಿ- ಬಿಎಸ್‍ವೈ ಪ್ರತಿಕ್ರಿಯಿಸಿದ್ದು ಹೀಗೆ

    ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ವದಂತಿ- ಬಿಎಸ್‍ವೈ ಪ್ರತಿಕ್ರಿಯಿಸಿದ್ದು ಹೀಗೆ

    ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಬಿಎಸ್‍ವೈ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲ ಸುಳ್ಳು ನಾನು ನಿಮ್ಮೆದುರು ನಿಂತಿದ್ದೇನೆ ನೋಡಿ ಎಂದು ಹೇಳಿದ್ದಾರೆ.

    ಗುಜರಾತ್ ಮತ್ತು ಹಿಮಾಚಲ ಪ್ರದೇಶ ಫಲಿತಾಂಶದ ಬಳಿಕ ಮೊದಲ ಪರಿವರ್ತನಾಯಾತ್ರೆಗೆ ಕೊಪ್ಪಳಕ್ಕೆ ಬಂದಿಳಿದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ನೇರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಾಗುತ್ತಿರುವ ಕೋಮುಗಲಭೆಗೆ ನೇರವಾಗಿ ರಾಜ್ಯ ಸರ್ಕಾರವೇ ಕಾರಣ. ಸಿದ್ದರಾಮಯ್ಯನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ್ರು. ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿ ಆಪರೇಷನ್ ಕಮಲ ಇಲ್ಲ. ಯಾರಾದ್ರೂ ಪಕ್ಷಕ್ಕೆ ಬರುವವರಿದ್ರೆ ಸ್ವಾಗತ ಮಾಡಿಕೊಳ್ಳುತ್ತೇವೆ ಎಂದ್ರು.

    ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆ ಫಲಿತಾಂಶ ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ತಂದಿದೆ. ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ಬಿಜೆಪಿ 6ನೇ ಬಾರಿಗೆ ಗುಜರಾತ್‍ನಲ್ಲಿ ಮತ್ತೆ ಅಧಿಕಾರ ಹಿಡಿದಿದ್ದು ಸಾಮಾನ್ಯ ಮಾತಲ್ಲ. ದೇಶದಲ್ಲೇ ಸುದೀರ್ಘ ಅಧಿಕಾರ ಮಾಡಿದ ಹೆಗ್ಗಳಿಕೆ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರಕ್ಕಿದೆ. ಇವಿಎಂ ಬಗ್ಗೆ ಸಿದ್ದರಾಮಯ್ಯ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇವಿಎಂ ಇಂಪ್ಲಿಮೆಂಟೇಷನ್ ಆಗಿದ್ದು ರಾಜೀವ್ ಗಾಂಧಿ ಕಾಲದಲ್ಲಿ, ಕಾಂಗ್ರೆಸ್ ಸರ್ಕಾರವಿದ್ದಾಗ. ಸೋಲಿನ ಭೀತಿಯಿಂದ ಇವಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ 371 ಕಲಂ ಬಿಜೆಪಿಯವರು ವಿರೋಧಿಸಿದ್ರು ಎಂದು ಈ ಭಾಗದಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. 371 ಕಲಂ ಜಾರಿಯಾಗಲು ನಮ್ಮ ಪಾತ್ರ ಇದೆ ಎಂದು ಸ್ಪಷ್ಟಪಡಿಸಿದ್ರು.

  • ಬಿಎಸ್‍ವೈ, ಶೋಭಾ ಕರಂದ್ಲಾಜೆ ಬಗ್ಗೆ ಬಿಜೆಪಿಯವರಿಂದ್ಲೇ ವಾಟ್ಸಪ್‍ನಲ್ಲಿ ಅವಹೇಳನ- ಕೇಸ್ ದಾಖಲು

    ಬಿಎಸ್‍ವೈ, ಶೋಭಾ ಕರಂದ್ಲಾಜೆ ಬಗ್ಗೆ ಬಿಜೆಪಿಯವರಿಂದ್ಲೇ ವಾಟ್ಸಪ್‍ನಲ್ಲಿ ಅವಹೇಳನ- ಕೇಸ್ ದಾಖಲು

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿಯಿಂದಲೇ ಅವಮಾನ ಮಾಡಲಾಗಿದೆ.

    ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಹಾಗೂ ಇಬ್ಬರೂ ಜೊತೆಯಲ್ಲಿರುವ ಅಶ್ಲೀಲ ಫೋಟೋವೊಂದು ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಕಾವೇರಿ-ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ ಕಿಶೋರ್ ಕುಮಾರ್ ವಿರುದ್ಧ ಬಿಜೆಪಿಯ ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ದೂರು ದಾಖಲಿಸಿದ್ದಾರೆ.

    ಪರಿವರ್ತನಾ ಸಮಾವೇಶದ ಸಂದರ್ಭದಲ್ಲಿ ಬಿಜೆಪಿಯೊಳಗೆ ಜಟಾಪಟಿ ನಡೆದಿತ್ತು. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಅವರು ಬಿಜೆಪಿ ಸೇರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ದೂರು ದಾಖಲಾಗಿರೋ ಕಿಶೋರ್, ರಾಜೇಶ್ ಹಾಲಾಡಿ ವಿರುದ್ಧ ಗುಂಪಿನ ನಾಯಕರಾಗಿದ್ದಾರೆ ಎನ್ನಲಾಗಿದೆ.

     

  • ಕರ್ನಾಟಕವನ್ನು ವಾಟಾಳ್‍ಗೆ ಬರೆದುಕೊಟ್ಟಿಲ್ಲ- ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾಗ್ದಾಳಿ

    ಕರ್ನಾಟಕವನ್ನು ವಾಟಾಳ್‍ಗೆ ಬರೆದುಕೊಟ್ಟಿಲ್ಲ- ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾಗ್ದಾಳಿ

    ಬೆಂಗಳೂರು: ಬಂದ್ ಗೆ ಬೆಂಬಲ ನೀಡದವರು ಕನ್ನಡ ವಿರೋಧಿಗಳು ಅಂತಾ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಅವರಿಗೆ ಕರ್ನಾಟಕವನ್ನು ಬರೆದುಕೊಟ್ಟಿಲ್ಲ. ಕನ್ನಡದ ಕೆಲಸ ಮಾಡುವವರೆಲ್ಲರೂ ಕನ್ನಡಾಭಿಮಾನಿಗಳೇ ಅಂತಾ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಾಗ್ದಾಳಿ ನಡೆಸಿದ್ದಾರೆ.

    ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹತ್ತಾರು ವಿಷಯಗಳನ್ನು ಮುಂದಿಟ್ಟುಕೊಂಡು ಇಂದು ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಬಂದ್‍ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣ ಗೌಡ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ, ಯಾರೋ ಒಬ್ಬ ಕನ್ನಡ ಚಳವಳಿ ಅಥವಾ ಹೋರಾಟದಲ್ಲಿ ಭಾಗವಹಿಸಿಲ್ಲ ಅಂದ ತಕ್ಷಣ ಆತ ಕನ್ನಡ ವಿರೋಧಿಯಾಗಲು ಸಾಧ್ಯವಿಲ್ಲ. ಕರ್ನಾಟದಲ್ಲಿ ಕನ್ನಡದ ಬಗ್ಗೆ ಅಭಿಮಾನವಿರುವ ಎಲ್ಲರೂ ಕನ್ನಡಾಭಿಮಾನಿಗಳೇ ಆಗಿರುತ್ತಾರೆ. ಹೋರಾಟಗಾರರಷ್ಟೇ ಕನ್ನಡದ ಅಭಿಮಾನಿಗಳು, ಕನ್ನಡದ ಪರವಾಗಿ ಇರುವವರು ಅಂತಾ ಅರ್ಥ ಅಲ್ಲ. ನಮಗಿಂತಲೂ ಚೆನ್ನಾಗಿ ಕನ್ನಡವನ್ನು ಪ್ರೀತಿಸೋರು, ಬಲ್ಲವರು ಇದ್ದಾರೆ ಅಂತಾ ಹೇಳಿದ್ರು.

    ಬಂದ್‍ನಲ್ಲಿ ಸಫಲರು ಯಾರು, ವಿಫಲರು ಯಾರು ಅಂತಾ ಹೇಳೋದಕ್ಕಿಂತ ಎಲ್ಲ ಸಂದರ್ಭಗಳಲ್ಲೂ ಜನ ನಾವು ಹೇಳಿದ ಹಾಗೇ ಕೇಳ್ತಾರೆ ಅನ್ನೋ ಅಹಂಕಾರದ ಗುಣ ಸರಿಯಾದ ಕ್ರಮವಲ್ಲ. ಇದನ್ನು ಜನರ ಪರವಾದ ಬಂದ್ ಅಂತಾ ಹೇಗೆ ಹೇಳ್ತೀರಿ. ಜನರ ಪರವಾದ ಬಂದ್ ಅಂತಾ ಆದ್ರೆ ಜನಈ ಬಂದ್ ಸ್ವೀಕರಿಸುತ್ತಿದ್ದರು ಅಂತಾ ಹೇಳಿದ್ರು.

    ಇದನ್ನೂ ಓದಿ: ಕೋಲಾರದಲ್ಲಿ ಸರ್ಕಾರಿ ಬಸ್‍ಗೆ ಕಲ್ಲು- ತೆಲುಗು ನಟ ನಂದಮೂರಿ ತಾರಕರತ್ನ ಕಾರಿಗೆ ತಡೆ


    ಸಂಸದರಿಗೆ ಬಿಸಿ ಮುಟ್ಟಿಸಿ: ಹೋರಾಟಗಾರರಿಗೆ ನಾನಾ ರೀತಿಯ ಹೋರಾಟದ ಮಾರ್ಗಗಳಿರುತ್ತವೆ. ಎಲ್ಲೋ ಒಂದು ಬಾರಿ ಜನ ನಮಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಅಂದ್ರೆ ಅದನ್ನು ದುರುಪಯೋಗಪಡಿಸಿಕೊಳ್ಳೋದು ಸರಿಯಲ್ಲ. ಪ್ರತೀ ಸಾರಿನೂ ಬಂದ್ ಬಂದ್ ಅಂತಾ ಕುಳಿತುಕೊಂಡ್ರೆ ಶ್ರೀ ಸಾಮಾನ್ಯರ ಮೇಲೆ ಆಗುವ ಪರಿಣಾಮದ ಹೊಣೆಯನ್ನು ಯಾರು ಹೊತ್ತು ಮಾತನಾಡಲು ಸಾಧ್ಯವಿದೆ? ಕೇಂದ್ರಕ್ಕೆ ಮುಟ್ಟಿಸಲು ನಮ್ಮ ರಾಜ್ಯದಿಂದ 28 ಜನ ಲೋಕಸಭಾ ಸದಸ್ಯರನ್ನು ಈಗಾಗಲೇ ಕಳುಹಿಸಿಕೊಟ್ಟಿದ್ದೇವಲ್ವಾ. ಹೀಗಾಗಿ ಕೇಂದ್ರಕ್ಕೆ ಮುಟ್ಟಿಸಬೇಕಾದ್ರೆ ಮೊದಲು ಅವರಿಗೆ ಬಿಸಿ ಮುಟ್ಟಿಸಬೇಕು. ಅವರ ಮನೆ ಮುಂದೆ ಹೋಗಿ ಧರಣಿ ಮಾಡೋಣ. ಈ ಮೂಲಕ ಅವರನ್ನು ಎಚ್ಚರಗೊಳಿಸೋಣ. ರಾಜ್ಯದ ಸಮಸ್ಯೆಯ ಬಗ್ಗೆ ಜಾಗೃತಿಗೊಳಿಸೋಣ. ಕೇಂದ್ರಕ್ಕೆ ಯಾವ ರೀತಿ ರಾಜ್ಯದ ಸಮಸ್ಯೆಯನ್ನು ಮುಟ್ಟಿಸಬೇಕು ಅದೇ ರೀತಿ ತಲುಪಿಸೋಣ. ಇಲ್ಲವೇ ಸಾವಿರಾರು ಸಂಖ್ಯೆಯಲ್ಲಿ ದೆಹಲಿಗೆ ಹೋಗಿ ಅಲ್ಲಿಯ ಜಂತರ್ ಮಂತರ್ ಮುಂದೆ ಕುಳಿತು ಪ್ರತಿಭಟನೆ ಮಾಡೋಣ ಅಂತಾ ತಿಳಿ ಹೇಳಿದ್ರು.

    ಪ್ರತಿಷ್ಠೆ ಬಿಡಿ, ಒಮ್ಮತವಿರಲಿ: ಯಾವುದೇ ಒಂದು ಹೋರಾಟಕ್ಕೂ ಒಮ್ಮತವಿರಬೇಕು. ಒಗ್ಗಟ್ಟಿನಿಂದ ನಾವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪ್ರತೀ ಬಾರಿನೂ ನಾನು ಇದೇ ಮಾತನ್ನ ಹೇಳ್ತಾ ಇದ್ದೀನಿ. ನಾವು ನಮ್ಮ ಪ್ರತಿಷ್ಠೆಗಳನ್ನು ಬಿಟ್ಟು ಒಮ್ಮತದ ಹೋರಾಟ ಮಾಡೋಣ. ರಾಜ್ಯದ ಜನರ ಹಿತಕ್ಕೋಸ್ಕರ ಪ್ರತಿಭಟನೆಗಳನ್ನು ಮಾಡಬೇಕಾದ್ರೆ ನಾವು ನಮ್ಮ ಪ್ರತಿಷ್ಠೆಗಳನ್ನು ಬಿಟ್ಟು ಬಿಡಬೇಕು. ಒಟ್ಟಿನಲ್ಲಿ ಒಗ್ಗಟ್ಟಿನಿಂದ ಈ ನಾಡು ಕಟ್ಟುವ ಕೆಲಸ ಮಾಡಬೇಕು. ಒಮ್ಮತ ಅಂದ್ರೆ ನನ್ನಿಂದ, ನಾನು, ನನ್ನ ಮಾತನ್ನು ಎಲ್ಲರೂ ಕೇಳಬೇಕು ಅನ್ನೋ ಪ್ರತಿಷ್ಠೆ ಬಿಟ್ಟು ಬಿಡಬೇಕು ಅಂದ್ರು.

    ಇದನ್ನೂ ಓದಿ: ಕರ್ನಾಟಕ ಬಂದ್: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿಗೆ ನೋಟಿಸ್

     

    ಬಂದ್‍ಗೆ ವಿರೋಧವಿಲ್ಲ: ಇಂದಿನ ರಾಜ್ಯ ಬಂದ್ ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಬದಲಾಗಿ ನನಗೆ ಬಂದ್ ಇಷ್ಟ ಇಲ್ಲ. ಅದಕ್ಕಾಗಿ ನಾನು ಬಂದ್ ನಿಂದ ದೂರ ಉಳಿದ್ದೀನಿ. ಆದ್ರೆ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕಾರ್ಯಕರ್ತರಿಗೆ ಕರೆ ಮಾಡಿ ಬಂದ್ ಗೆ ಬೆಂಬಲ ಸೂಚಿಸಲು ತಿಳಿಸಿದ್ದೇನೆ. ಯಾಕಂದ್ರೆ ಬೆಂಗಳೂರಿನಲ್ಲಿ ನಡೆದ ಕಾವೇರಿ ಗಲಭೆಯ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಕನ್ನಡಿಗರನ್ನು ಜೈಲಿಗೆ ಹಾಕಿದ್ರು. ಅಂದು ಅವರನ್ನು ಭೇಟಿಯಾಗಲು ಜೈಲಿಗೆ ಹೋಗಿದ್ದೆ. ಅಂದು ಅವರಲ್ಲಿ ಕಣ್ಣೀರು ಹಾಕಿದ್ದನ್ನು ನೋಡಿದ್ರೆ ನಮಗೆ ಇಂತಹ ವ್ಯವಸ್ಥೆ ಬೇಕಾ ಅಂತಾ ಅನ್ನಿಸ್ತು. ಆದ್ರೆ ಯಾರು ಹೋಗಿ ಅವರನ್ನು ಜೈಲಲ್ಲಿ ನೋಡಿದ್ದಾರೆ ಅಂತಾ ಪ್ರಶ್ನಿಸಿದರು.

    https://www.youtube.com/watch?v=fAzg4duUVEY