Tag: ರಾಜ್ಯ ಮುಖ್ಯಕಾರ್ಯದರ್ಶಿ

  • ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ಹಾಸನ: ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಿಗಿ ಕ್ರಮ ಮುಂದುವರಿದಿದ್ದು, ಅಕ್ರಮ ಸಾಗುವಳಿ ಚೀಟಿ ಮಂಜೂರಾತಿಗೆ ಸಹಕರಿಸಿದ ಆರೋಪ ಹೊತ್ತಿರುವ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದಾರೆ.

    ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ವಿರುದ್ಧ ರಾಜ್ಯ ಮುಖ್ಯಕಾರ್ಯದರ್ಶಿಗೆ ರೋಹಿಣಿ ಸಿಂಧೂರಿ ಪತ್ರ ಬರೆದಿದ್ದಾರೆ. ಪ್ರಸನ್ನಮೂರ್ತಿ ಹಾಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದರು. ಜುಲೈ 4 ರಂದೇ ಪ್ರಸನ್ನಮೂರ್ತಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು.

    ಮಾಜಿ ಸಚಿವ ಬಗರ್ ಹುಕುಂ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವಾಗ, ಸಾಗುವಳಿ ಚೀಟಿ ಫಲಾನುಭವಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಸದೇ ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡುವ ಕಡತಕ್ಕೆ ಸಹಿ ಮಾಡಿದ್ದರು. ಈ ವೇಳೆ ಪ್ರಸನ್ನಮೂರ್ತಿ ಕೂಡ ಸಹಾಯ ಮಾಡಿದ್ದರು. ಸಚಿವರಿಗೆ ತಹಶೀಲ್ದಾರ್ ಪ್ರಸನ್ನಮೂರ್ತಿ ಸಹಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಸಿಂಧೂರಿ ಅವರು ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

    ಮಾಜಿ ಉಸ್ತುವಾರಿ ಸಚಿವ ಎ.ಮಂಜುರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಅಧಿಕಾರಿ ವಿರುದ್ಧ ಆರೋಪ ಸಾಬೀತಾಗಿರೋದು ಇದೀಗ ಮಾಜಿ ಸಚಿವರಿಗೂ ಸಂಕಷ್ಟ ತಂದೊಡ್ಡುವ ಆತಂಕ ಶುರುವಾಗಿ. ಸಚಿವ ಎ. ಮಂಜು ಮೇಲೂ ಕಾನೂನು ಕ್ರಮ ಸಾಧ್ಯತೆ ಇದೆ.

    ವಾರದ ಹಿಂದೆಯಷ್ಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೌಕರನನ್ನ ಅಮಾನತು ಮಾಡಿ ಓರ್ವ ಅಧಿಕಾರಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು. ಇದೀಗ ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ರೋಹಿಣಿ ಬಿಸಿ ಮುಟ್ಟಿಸಿದ್ದಾರೆ.

  • ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

    ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಉಲ್ಲೇಖಿಸಿ ಐಪಿಎಸ್ ಅಧಿಕಾರಿಗಳ ಸಂಘ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳನ್ನ ಕೀಳು ಮಟ್ಟದಲ್ಲಿ ನೋಡುತ್ತಿದೆ. ಹಲವು ಪ್ರಕರಣಗಳ ತನಿಖೆ ವೇಳೆ ರಾಜಕಾರಣಿಗಳು ಹಸ್ತಕ್ಷೇಪ ಮಾಡುತ್ತಾರೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಸಲಾಗಿದೆ.

    ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪತ್ರದಲ್ಲಿ ಉಲ್ಲೇಖಸಿರುವ ಐಪಿಎಸ್ ಸಂಘದ ಅಧ್ಯಕ್ಷರಾಗಿರುವ ಎಡಿಜಿಪಿ ಆರ್ ಪಿ ಶರ್ಮಾ ಅವರು, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣ, ಐಪಿಎಸ್ ಅಧಿಕಾರಿಗಳ ಪದೇ ಪದೇ ವರ್ಗಾವಣೆ, ಪೊಲೀಸರ ವರ್ಗಾವಣೆ, ಮೈಸೂರು ಐಎಎಸ್ ಆಧಿಕಾರಿ ರಶ್ಮಿ ಮೇಲೆ ಕಚೇರಿಯಲ್ಲೆ ಹಲ್ಲೆ ಪ್ರಕರಣ, ಮೈಸೂರು ಡಿಸಿ ಶಿಖಾ ಅವರ ಮೇಲಿನ ದಾಳಿ ಹಾಗೂ ಈ ಸಂಬಂಧ ಎಫ್‍ಐಆರ್ ದಾಖಲಿಸಿಕೊಳ್ಳಲು ತಡ ಮಾಡಿರುವ ಘಟನೆ, ಯುಬಿ ಸಿಟಿ ಬಳಿ ದಾಳಿ ಪ್ರಕರಣ, ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಿಲು ಯತ್ನಿಸಿದ ರಾಜಕಾರಣಿ ಪ್ರಕರಣಗಳನ್ನು ತಮ್ಮ ಪತ್ರದ ಮೂಲಕ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ.

    ಭಾರತೀಯ ಪೊಲೀಸ್ ಇಲಾಖೆಗೆ ತನ್ನದೇ ಸಂಸ್ಕೃತಿ ಇದೆ, ಆದರೆ ಅದಕ್ಕೆ ಈಗ ಕರಿನೆರಳು ಬಿದ್ದಿದೆ. ಪೊಲೀಸ್ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ತಪ್ಪು ಕಂಡು ಬಂದರೂ ಪೊಲೀಸರನ್ನೇ ಬಲಿಪಶುವಾಗಿ ಮಾಡಲಾಗುತ್ತಿದೆ. ಪೊಲೀಸರು ಮನಸ್ಫೂರ್ತಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಂಗಳೂರು ಆರು ಮಂದಿ ಆಯುಕ್ತರನ್ನು ಕಂಡಿದೆ. ಐಪಿಎಸ್ ಅಧಿಕಾರಿಗಳಿಗೆ ಸೇವೆ ಸಲ್ಲಿಸಲು ಸ್ವತಂತ್ರ್ಯ ನೀಡಬೇಕು. ಚುನಾವಣೆಗೆ ಮುನ್ನ ಪೊಲೀಸ್ ಆಧಿಕಾರಿಗಳು ಹಾಗೂ ಮಾಜಿ ಪೊಲೀಸರನ್ನು ಸೇರಿಸಿ ಸಭೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಆರ್.ಪಿ.ಶರ್ಮಾ ಪತ್ರದ ಮೂಲಕ ಮನವಿ ಮಾಡಿದ್ದಾರೆ.