Tag: ರಾಜ್ಯ ಮುಖ್ಯ ಕಾರ್ಯದರ್ಶಿ

  • ಮಗಳ ಮದ್ವೆಗೆ ಒಂದು ದಿನ ರಜೆ ಹಾಕಿದ ಹಿರಿಯ ಐಎಎಸ್ ಅಧಿಕಾರಿ

    ಮಗಳ ಮದ್ವೆಗೆ ಒಂದು ದಿನ ರಜೆ ಹಾಕಿದ ಹಿರಿಯ ಐಎಎಸ್ ಅಧಿಕಾರಿ

    ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿಯ ಮಗಳ ಮದುವೆ ಅಂದರೆ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಅಷ್ಟೇ ಅಲ್ಲದೆ ತಿಂಗಳುಗಳ ಕಾಲ ರಜೆ ಹಾಕಿ ವಿಶೇಷವಾಗಿ ಲಗ್ನಪತ್ರಿಕೆ ಮಾಡಿಸಿ ಅದನ್ನು ಕೊಡುತ್ತಾರೆ. ಆದರೆ ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ತಮ್ಮ ಮಗಳ ಮದುವೆಗೆ ಕೇವಲ ಒಂದೇ ಒಂದು ದಿನ ರಜೆ ತೆಗೆದುಕೊಂಡಿದ್ದಾರೆ.

    ಇದೇ ಭಾನುವಾರ ವಿಜಯಭಾಸ್ಕರ್ ಅವರ ಮಗಳ ನಡೆಯಲಿದೆ. ವಿಜಯ ಭಾಸ್ಕರ್ ಅವರ ಮಗಳು ವೃತ್ತಿಯಲ್ಲಿ ವಕೀಲೆಯಾಗಿದ್ದು, ಉದ್ಯಮಿ ಗೌತಮ್ ಕುಮಾರ್ ಅವರನ್ನು ವರಿಸುತ್ತಿದ್ದಾರೆ. ಮದುವೆಯನ್ನು ಕೂಡ ಸರಳವಾಗಿ ಮಾಡಬೇಕೆಂದು ನಿರ್ಧಾರ ಮಾಡಿರುವ ವಿಜಯಭಾಸ್ಕರ್, ಮಲ್ಲೇಶ್ವರಂನಲ್ಲಿರುವ ಟಿಟಿಡಿ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಸುತ್ತಿದ್ದಾರೆ.

    ಕಲ್ಯಾಣ ಮಂಟಪದ ದಿನದ ಬಾಡಿಗೆ 1,44,500 ರೂ. ಆಗಿದೆ. ಮದುವೆಗೂ ಯಾವುದೇ ಸರ್ಕಾರಿ ವಾಹನಗಳನ್ನು ಬಳಸದೆ ಖಾಸಗಿ ಟ್ರಾವೆಲ್ಸ್ ಮೂಲಕ ವಾಹನಗಳನ್ನು ಬಾಡಿಗೆಗೆ ತರಿಸುತ್ತಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯೂ ಕೂಡ ಸರಳವಾಗಿ ಮಾಡಿಸಿದ್ದಾರೆ.

    ಸಾಮಾನ್ಯ ಜನರಂತೆ ಮದುವೆಯ ವೆಡ್ಡಿಂಗ್ ಕಾರ್ಡ್ ಪ್ರಿಂಟ್ ಮಾಡಿಸಿದ್ದಾರೆ. ಕಾರ್ಡ್ ನಲ್ಲಿ ತಮ್ಮ ಹುದ್ದೆ ಹಾಗೂ ಅಧಿಕಾರವನ್ನು ಉಲ್ಲೇಖಿಸದೆ ಕೇವಲ ವಿಜಯಭಾಸ್ಕರ್ ಎಂದು ನಮೂದಿಸಿದ್ದಾರೆ. ತಮ್ಮ ಸಿಬ್ಬಂದಿಗೆ ಖುದ್ದು ಆಮಂತ್ರಣ ಕೊಟ್ಟು ಮದುವೆಗೆ ಬರುವಂತೆ ವಿನಂತಿಸಿದ್ದಾರೆ.

  • ರಾಜಭವನದ ಅಧಿಕಾರಿಗಳ ವಿರುದ್ಧ ಖಾರವಾಗಿ ಪತ್ರ ಬರೆದು ಪ್ರತಿಭಟಿಸಿದ ಸ್ಪೀಕರ್

    ರಾಜಭವನದ ಅಧಿಕಾರಿಗಳ ವಿರುದ್ಧ ಖಾರವಾಗಿ ಪತ್ರ ಬರೆದು ಪ್ರತಿಭಟಿಸಿದ ಸ್ಪೀಕರ್

    ಬೆಂಗಳೂರು: ರಾಜಭವನದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ಅವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.

    ಈ ಕುರಿತು ಪತ್ರದಲ್ಲಿ ಅಸಮಾಧಾನ ಹೊರ ಹಾಕಿರುವ ಸ್ಪೀಕರ್, ರಾಜ್ಯ ಮುಖ್ಯ ಕಾರ್ಯದರ್ಶಿಗಳಾದ ನಿಮ್ಮ ಆಹ್ವಾನದ ಮೇಲೆ ಸಚಿವ ಸಂಪುಟ ಸಚಿವರ ಪ್ರಮಾಣ ವಚನ ಹಾಗೂ ಪ್ರತಿಜ್ಞಾ ವಿಧಿ ಸಮಾರಂಭಕ್ಕೆ ಆಗಮಿಸಿದ್ದೆ. ಆದರೆ ಈ ವೇಳೆ ರಾಜಭವನದ ಮುಂದೆ ಅರ್ಧ ಗಂಟೆ ಕಾದಿದ್ದು, ಅಸಹಾಯಕನಾಗಿ ಹಿಂದಿರುತ್ತೇನೆ, ಈ ಪರಿಸ್ಥಿತಿಗೆ ಯಾರು ಕಾರಣ ಎಂಬುವುದು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

    ಅಧಿಕಾರಿಗಳ ವಿರುದ್ಧ ಆಕ್ರೋಶ: ಮಾನ್ಯ ಮುಖ್ಯ ಮಂತ್ರಿಗಳು, ಉಪ ಮುಖ್ಯಮಂತಿಗಳು, ವಿಧಾನಸಭಾ ಪರಿಷತ್ ಸಭಾಪತಿಗಳ ಹೊರತಾಗಿ ಮತ್ತೊಂದು ಸಾಂವಿಧಾನಿಕ ಸ್ಥಾನ ವಿಧಾನಸಭಾಧ್ಯಕ್ಷರದ್ದು ಮಾತ್ರ. ಮುಖ್ಯ ಮಂತ್ರಿಗಳು ಹಾಗೂ ಸಭಾಪತಿಗಳಿಗೆ ಒಂದು ಗೌರವಯುತ ವ್ಯವಸ್ಥೆ ಮಾಡುವುದು ಜವಾಬ್ದಾರಿಯಾಗಿರುತ್ತದೆ. ನಿಮ್ಮ ಅಧಿಕಾರಿಗಳ ದುರಹಂಕಾರ, ಅಜ್ಞಾನ ಹಾಗೂ ರಾಜಭವನದ ಒಳಗಿರತಕ್ಕಂತಹ ಅಧಿಕಾರಿಗಳ ದುರಂಹಾರ ಇದಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ರಾಜಭವನದ ಒಳಗೂ ಹಾಗೂ ಹೊರಗೂ ತುಂಬಿದ್ದಂತಹ ವಾಹನಗಳು ಯಾರದ್ದು ಎಂದು ಪ್ರಶ್ನಿಸಿರುವ ರಮೇಶ್ ಕುಮಾರ್, ಯಾರು ಅವರಿಗೆ ಅನುಮತಿ ನೀಡಿದರು ಹಾಗೂ ಸಾರ್ವಜನಿಕ ಜೀವನದಲ್ಲಿ ಇವರ ಸ್ಥಾನಮಾನ ಏನೆಂದು ತಿಳಿದುಕೊಳ್ಳಲು ಕುತೂಹಲನಾಗಿದ್ದೇನೆ. ಈ ಅಪರಾಧಕ್ಕೆ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.