Tag: ರಾಜ್ಯ ಸಭಾ

  • ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

    ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

    ರಾಯಚೂರು: ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ (87) ನಿಧನ ಹೊಂದಿದ್ದಾರೆ.

    ಇವರು ರಾಯಚೂರಿನ ಅಬ್ದುಲ್ ಸಮದ್ ಸಿದ್ದೀಖಿ (Abdul Samad Siddiqui) 1988-1994ರವರೆಗೆ ರಾಜ್ಯ ಸಭಾ (Rajya Sabha) ಸದಸ್ಯರಾಗಿದ್ದರು. ಅಲ್ಲದೆ ಜಿಲ್ಲೆಯಲ್ಲಿ ಜನತಾದಳ ಪಕ್ಷ ಕಟ್ಟಲು ಮುಂದಾಳತ್ವ ವಹಿಸಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್‌ (Hyderabad) ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದರು.

    EDUCATION
    ಸಾಂದರ್ಭಿಕ ಚಿತ್ರ

    ಅಬ್ದುಲ್ ಸಮದ್ ಸಿದ್ದೀಖಿ ರಾಯಚೂರು ನಗರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ನ್ಯೂ ಎಜುಕೇಶನ್ ಸೊಸೈಟಿ ಅಡಿಯಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾರಣೀಭೂತರಾಗಿದ್ದರು. ಅಲ್ಲದೇ ರಾಯಚೂರಿನಲ್ಲಿ ಸಫೀಯಾ ಸಂಸ್ಥೆ ಮೂಲಕ ಮಹಿಳೆಯರಿಗೆ ಡಿ.ಎಡ್. ಕಾಲೇಜು ಸ್ಥಾಪಿಸಿದ್ದರು.

    ಜನತಾದಳದಿಂದ 1988 ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ 1994 ರ ವರೆಗೆ ಕಾರ್ಯನಿರ್ವಹಿಸಿದ್ದರು. ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪತ್ರಿಯರು ಮತ್ತು ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಇಂದು ರಾಯಚೂರು ನಗರದ ಶೇಖಮಿಯಾ ಬಾಬಾ ಖಬರಸ್ಥಾನದಲ್ಲಿ ಸಿದ್ದೀಖಿ ಅಂತ್ಯಕ್ರಿಯೆ ನಡೆಯಲಿದೆ.‌ ಇದನ್ನೂ ಓದಿ: ವರಕವಿ ದ.ರಾ.ಬೇಂದ್ರೆ ಸೊಸೆ ನಿಧನ

    Live Tv
    [brid partner=56869869 player=32851 video=960834 autoplay=true]

  • ನಿರ್ಮಲಾ ಸೀತಾರಾಮನ್, ಜಗ್ಗೇಶ್‍ಗೆ ಸಿಎಂ ಅಭಿನಂದನೆ

    ನಿರ್ಮಲಾ ಸೀತಾರಾಮನ್, ಜಗ್ಗೇಶ್‍ಗೆ ಸಿಎಂ ಅಭಿನಂದನೆ

    ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ರಾಜ್ಯದ ಇಬ್ಬರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಈ ಸಂಬಂಧ ಟ್ವಿಟ್ ಮಾಡಿರುವ ಸಿಎಂ, ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಶ್ರೀ ಜಗ್ಗೇಶ್ ರವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

    ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮವಾದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ. ನಾಲ್ಕನೇ ಅಭ್ಯರ್ಥಿಗೆ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದ್ರು ಜೆಡಿಎಸ್ ಬೆಂಬಲ ಬೇಕಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

  • ಹೆಚ್.ಡಿ ದೇವೇಗೌಡ್ರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

    ಹೆಚ್.ಡಿ ದೇವೇಗೌಡ್ರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

    – ಪ್ರತಿಭಟನಾ ನಿರತ ರೈತರಿಗೆ ಚರ್ಚೆಗೆ ಆಹ್ವಾನ
    – ರೈತರ ಒಳಿತಿಗಾಗಿ ಈ ನಿರ್ಧಾರ

    ನವದೆಹಲಿ: ಮಾಜಿ ಪ್ರಧಾನಿ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಈಗಾಗಲೇ ಕೇಂದ್ರದ ಕಾನೂನು ವಿರುದ್ಧ ಹೋರಾಟ ಮಾಡುತ್ತಿರುವ ರೈತರಿಗೆ ಪ್ರತಿಭಟನೆ ನಿಲ್ಲಿಸುವಂತೆ ಮೋದಿ ಮನವಿ ಮಾಡಿಕೊಂಡಿದ್ದಾರೆ.

    ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ಅವರು, ಭಾರತ ಮುಂದುವರಿಯಲು ಬಡತನದಿಂದ ಮುಕ್ತವಾಗಬೇಕು. ಈ ಹಿನ್ನೆಲೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಮೊದಲ ಬಾರಿ, ಎರಡನೇ ಬಾರಿ ಆಯ್ಕೆಯಾದಾಗಲೂ ನಮ್ಮ ಮೊದಲ ಭಾಷಣದಲ್ಲಿ ಇದನ್ನೇ ಹೇಳಿದ್ದೆವು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಹತ್ತು ಕೋಟಿ ಶೌಚಾಲಯ ನಿರ್ಮಿಸಿದೆ. ಏಳು ಕೋಟಿ ಉಚಿತ ಗ್ಯಾಸ್ ಕನೆಕ್ಷನ್ ನೀಡಿದೆ. ಐದು ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ಕೋಟಿಗೂ ಅಧಿಕ ಮನೆ ಕಟ್ಟಿಸಿ ಕೊಟ್ಟಿದೆ. ಸಾಕಷ್ಟು ಅಭಿವೃದ್ಧಿ ಪರ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

    ಇದೇ ವೇಳೆ ರೈತರ ಪ್ರತಿಭಟನೆ ವಿಚಾರ ಪ್ರಸ್ತಾಪಿಸಿದ ಪ್ರಧಾನಿ, ಕೃಷಿ ಮಂತ್ರಿಗಳು ಈ ಬಗ್ಗೆ ಚರ್ಚೆ ಮಾಡಿದ್ದಾರೆ. ದೇವೇಗೌಡರು ಈ ಚರ್ಚೆ ಗಂಭೀರತೆ ತಂದು ಕೊಟ್ಟಿದ್ದಾರೆ. ಅವರು ಒಳ್ಳೆಯ ಸಲಹೆಗಳನ್ನು ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಾನು ಅವರಿಗೆ ಆಭಾರಿಯಾಗಿದ್ದೇನೆ ಎಂದರು.

    ಹಿಂದಿನ ಸರ್ಕಾರಗಳು ಸಣ್ಣ ರೈತರ ಬಗ್ಗೆ ಕಾಳಜಿ ವಹಿಸಿಲ್ಲ. ನಾವು ಸಣ್ಣ ಸಣ್ಣ ರೈತರ ಬಗ್ಗೆ ಚಿಂತಿಸಿದ್ದೇವೆ. ಫಸಲ್ ಭೀಮಾ ಯೋಜನೆ ಜಾರಿಗೆ ತಂದಿದೆ. 90 ಸಾವಿರ ಕೋಟಿ ರೈತರಿಗೆ ನೀಡಿದೆ. ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ನೀಡುತ್ತಿದ್ದೇವೆ. ಮೀನುಗಾರರಿಗೂ ಇದರ ಲಾಭ ನೀಡಿದ್ದೇವೆ. ಯೂರಿಯಾ ಗೊಬ್ಬರ ಸರಳವಾಗಿ ಸಿಗುವಂತೆ ಮಾಡಿದೆ. ಪ್ರಧಾನ ಮಂತ್ರಿ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಹತ್ತು ಕೋಟಿ ಕುಟುಂಬಗಳಿಗೆ ನೀಡಿದೆ. ಬಂಗಾಳದ ಜನರನ್ನು ಸೇರಲು ಬಿಟ್ಟಿಲ್ಲ. ಇಲ್ಲದಿದ್ದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿತ್ತು ಎಂದು ತಿಳಿಸಿದರು.

    ಈವರೆಗೂ ಒಂದು ಲಕ್ಷದ 15 ಸಾವಿರ ಕೋಟಿ ಸರ್ಕಾರ ನೀಡಿದೆ. ರೈತರಿಗೆ ಪಿಂಚಣಿ ವ್ಯವಸ್ಥೆ ಮಾಡಿದೆ. ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆ ಜಾರಿ ತಂದಿದೆ. ಇದು ಬರೀ ರಸ್ತೆಯಲ್ಲ ಗ್ರಾಮೀಣ ಬದುಕು ಬದಲಿಸುತ್ತದೆ. ಕೃಷಿ ಉತ್ಪನ್ನಗಳ ಸಹಕಾರವಾಗಿದೆ. ಕಿಸಾನ್ ಉಡಾನ್ ಮೂಲಕವೂ ಬೆಳೆಗಳ ಸಾಗಾಟಕ್ಕೆ ವ್ಯವಸ್ಥೆ ಮಾಡಿದೆ ಎಂದು ಪ್ರಧಾನಿ ಹೇಳಿದರು.

    ಕೃಷಿ ವಿಚಾರದಲ್ಲೂ ಬದಲಾವಣೆ ಬಹಳ ಮುಖ್ಯ. ಬದಲಾವಣೆಯೊಂದಿಗೆ ನಾವು ಮುಂದುವರಿಯಬೇಕು. ಬದಲಾವಣೆ ಆದರೆ ಅಭಿವೃದ್ಧಿ ಸಾಧ್ಯ. ಕೃಷಿ ವಲಯದಲ್ಲಿ ಬದಲಾವಣೆಗಳು ಆಗಿಲ್ಲ. ನಿಂತಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ ನಾವು ಬದಲಾವಣೆಗಳನ್ನು ಒಪ್ಪಿಕೊಳ್ಳಬೇಕು ಎಂದ ಪ್ರಧಾನಿಯವರು ಕಾಂಗ್ರೆಸ್‍ಗೆ ಠಕ್ಕರ್ ನೀಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ಉಲ್ಲೇಖಿಸಿ ತಿರುಗೇಟು ನೀಡಿದ ಮೋದಿ, ಕೃಷಿ ಕ್ಷೇತ್ರದ ಬದಲಾವಣೆಗಳ ಬಗ್ಗೆ ಹಿಂದೆ ಮನಮೋಹನ್ ಸಿಂಗ್ ಮಾತನಾಡಿದ್ದರು. ಅದೇ ಹೇಳಿಕೆಯನ್ನು ಪ್ರಸ್ತಾಪಿಸಿ ಸಿಂಗ್ ಮಾತನ್ನು ನಾವು ಜಾರಿ ಮಾಡುತ್ತಿದ್ದೇವೆ ಎಂದು ಮೋದಿ ವ್ಯಂಗ್ಯವಾಡಿದರು.

    ಕೃಷಿ ಸಚಿವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಾತುಕತೆ ಒಮ್ಮತಕ್ಕೆ ಬಂದಿಲ್ಲ. ನಾವು ಮಾತುಕತೆಗೆ ಸಿದ್ಧವಿದ್ದೇವೆ. ಕೂತು ಚರ್ಚೆ ಮಾಡಿ ಉತ್ತಮ ನಿರ್ಧಾರ ತೆಗೆದುಕೊಳ್ಳೋಣ. ಪ್ರತಿಭಟನೆ ಅಂತಿಮಗೊಳಿಸಿ ಚರ್ಚೆಗೆ ಬನ್ನಿ. ಒಮ್ಮೆ ಈ ಕಾನೂನುಗಳ ಜಾರಿಗೆ ಅವಕಾಶ ನೀಡಿ. ಇದು ಹೇಗೆ ಕ್ರಾಂತಿ ತರಲಿದೆ ನೋಡಿ. ಒಂದು ವೇಳೆ ಕಾನೂನು ಸರಿಯಾಗಿ ಇಲ್ಲದ್ದರೇ ಬದಲಾವಣೆ ಮಾಡಲು ಎಂಎಸ್‍ಪಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ. ಜನಸಂಖ್ಯೆ ಹೆಚ್ಚಳದಿಂದ ಕೃಷಿ ಭೂಮಿ ಕಡಿಮೆ ಆಗ್ತಿದೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಈ ಕಾನೂನುಗಳು ಬೇಕು. ಇದರಲ್ಲಿ ರಾಜಕೀಯ ಮಾಡುವುದು ಬೇಡ. ರೈತರ ಒಳಿತಿಗಾಗಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮೋದಿ ಸ್ಪಷ್ಟಪಡಿಸಿದರು.

  • ಗುಜರಾತ್ ನಲ್ಲಿ ಕಾಂಗ್ರೆಸ್ ನ ಒಂದೇ 1 ಮತ ಹೆಚ್ಚು-ಕಮ್ಮಿಯಾದ್ರೆ ಮೋದಿ ಉತ್ತರಿಸಬೇಕು: ಎಚ್ ಕೆ ಪಾಟೀಲ್

    ಗುಜರಾತ್ ನಲ್ಲಿ ಕಾಂಗ್ರೆಸ್ ನ ಒಂದೇ 1 ಮತ ಹೆಚ್ಚು-ಕಮ್ಮಿಯಾದ್ರೆ ಮೋದಿ ಉತ್ತರಿಸಬೇಕು: ಎಚ್ ಕೆ ಪಾಟೀಲ್

    ಧಾರವಾಡ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಒಂದೇ ಒಂದು ಮತ ಹೆಚ್ಚು ಕಮ್ಮಿಯಾದ್ರೆ ಅದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಉತ್ತರ ನೀಡಬೇಕಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.

    ಧಾರವಾಡದಲ್ಲಿ ತಾಲೂಕು ಸೇವಾ ಸಂಘಗಳ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಹಬ್ಬಗಳಿದ್ದಾಗ ಅದರಲ್ಲೂ ರಾಜ್ಯಸಭೆಗೆ ಗುಜರಾತ್ ಚುನಾವಣೆ ಇದ್ದಾಗ ಐಟಿ ರೇಡ್ ಆಗಿದ್ದು ಸರಿಯಲ್ಲ. ಐಟಿ ಸಂಸ್ಥೆ ಈ ರೀತಿ ಮಾಡೊದ್ರಿಂದ ತನ್ನ ವಿಶ್ವಾಸ ಕಳೆದುಕೊಂಡಿದೆ. ಒಂದು ತಿಂಗಳ ಮುಂಚೆಯೇ ಐಟಿ ದಾಳಿಗೆ ತಯಾರಿ ಮಾಡಿಕೊಂಡಿದ್ದರೆ ಗುಜರಾತ್ ಶಾಸಕರು ಇಲ್ಲಿಗೆ ಬರುವ ಮುನ್ನವೇ ದಾಳಿ ನಡೆಸಬಹುದಿಲ್ಲವೇ ಎಂದು ಅವರು ಪ್ರಶ್ನಿಸಿದರು.

    ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆ ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮುಂದಿನ ವಾರದಲ್ಲೇ ಮೋಡ ಬಿತ್ತನೆ ಆರಂಭ ಮಾಡಲಾಗುವುದು. ವಿದೇಶದಿಂದ ಮೂರು ರೆಡಾರ್ ತರಿಸಿಕೊಳ್ಳಲಾಗಿದ್ದು, ಅವುಗಳನ್ನ ಬೆಂಗಳೂರು, ಗದಗ ಹಾಗೂ ಶಹಾಪೂರದಲ್ಲಿ ಅಳವಡಿಸಲಾಗುವದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು.