ಬೆಂಗಳೂರು: ರಾತ್ರಿ ಹೊತ್ತು ತಮ್ಮ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಬಳಸಲು ಸಚಿವ ಕೆ.ಜೆ ಜಾರ್ಜ್ ಪುತ್ರ ರಾಣಾ ಜಾರ್ಜ್ಗೆ ಹೈಕೋರ್ಟ್ ಅನುಮತಿ ನೀಡಿದೆ.
ರಾತ್ರಿ ಹೊತ್ತು ತಮ್ಮ ಜಮೀನಿಗೆ ತೆರಳಲು ಅಭಯಾರಣ್ಯದಲ್ಲಿ ಹಾದುಹೋಗಲು ಅನುಮತಿ ನೀಡುವಂತೆ ರಾಣಾ ಜಾರ್ಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ವನ್ಯಜೀವಿಗಳಿಗೆ ತೊಂದರೆಯಾಗದಂತೆ ಸಂಚಾರ ನಡೆಸುವಂತೆ ಆದೇಶಿಸಿದೆ.
ರಾಣಾ ಜಾರ್ಜ್ ಅವರ ಜಮೀನು, ಹೆಚ್ಡಿ ಕೋಟೆಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿದೆ. ಇಲ್ಲಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆ ಮಾರ್ಗ ಮೂಲಕ ರಾತ್ರಿ-ಹಗಲು ಓಡಾಡಲು ಅನುಮತಿ ಕೋರಲಾಗಿತ್ತು. ರಾತ್ರಿ, ಹಗಲು ಸಂಚಾರಕ್ಕೆ ಅನುಮತಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಮಡಿಕೇರಿ: ರಾಜ್ಯ ಸರ್ಕಾರದ ಇಂಧನ ಸಚಿವರಾಗಿರುವ ಕೆ.ಜೆ ಜಾರ್ಜ್ (KJ George) ಅವರ ಪುತ್ರ ರಾಣಾ ಜಾರ್ಜ್ ಅವರು ಹೆಚ್.ಡಿ ಕೋಟೆ ಬಳಿಯ ಗ್ರಾಮಗಳ ಅರಣ್ಯದೊಳಗೆ ಕೃಷಿ ಸಂಬಂಧಿತ ತೋಟ ಹಾಗೂ ಜಮೀನು ಹೊಂದಿದ್ದಾರೆ. ಆದರೆ, ಅರಣ್ಯದೊಳಗಿರುವ ಜಮೀನಿಗೆ ಹೋಗದಂತೆ ರಾಜ್ಯ ಸರ್ಕಾರ ತಡೆ ನೀಡಿತ್ತು. ಈ ಸಂಬಂಧ ಪ್ರಕರಣ ಕೈಗೆತ್ತಿಕೊಂಡ ಹೈಕೋರ್ಟ್ (Karnataka Highcourt) ವಿಚಾರಣೆ ಬಳಿಕ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವರು, ಕೋರ್ಟ್ ತೀರ್ಮಾನ ಏನೇ ಬಂದರೂ ಎಲ್ಲರೂ ತಲೆಬಾಗಬೇಕು ಎಂದಿದ್ದಾರೆ.
ಸರ್ಕಾರದ ವಿರುದ್ಧ ತಮ್ಮ ಮಗ ಹೋಗಿದ್ದಾರೆ. ಎಂದು ಯಾಕೆ ಹೇಳುತ್ತೀರಿ ಅವರು ತಮ್ಮ ಹಕ್ಕನ್ನು ಕೋರ್ಟ್ನಲ್ಲಿ ಕೇಳಿದ್ದಾರೆ. ನಾನು ಮಂತ್ರಿಯಾಗಿ ಪ್ರಭಾವ ಬೀರಿ ಅದಕ್ಕೆ ಅನುಮತಿ ನೀಡಿದ್ರೆ ಮಾದ್ಯಮಗಳಲ್ಲೇ ಅಧಿಕಾರ ದುರುಪಯೋಗ ಮಾಡಿದ್ದೀರಿ ಎಂದು ಹೇಳುತ್ತಿದ್ದರು. ತಮ್ಮ ಮಗ ರಾಣಾ ಜಾರ್ಜ್ (Rana George) ಅವರು ತಮ್ಮ ಹಕ್ಕನ್ನು ಕಾನೂನು ರೀತಿಯಲ್ಲಿ ಕೋರ್ಟ್ಗೆ ಹೋಗಿ ಕೇಳಿದ್ದಾರೆ. ಕೋರ್ಟ್ನಲ್ಲಿ ಈ ಪ್ರಕರಣ ಇರುವಾಗ ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ. ತೀರ್ಪು ಏನೇ ಬಂದರೂ ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ? – ಗುರುತು ಪತ್ತೆಗೆ ಪೊಲೀಸರ ಹರಸಾಹಸ
ಏನಿದು ಪ್ರಕರಣ..?
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಬಳಿಯ ಶಂಭುಗೌಡನಹಳ್ಳಿ, ಲಕ್ಕಸೋಗೆ ಗ್ರಾಮಗಳಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ ಜಮೀನು ಹೊಂದಿದ್ದಾರೆ. ಈ ಜಮೀನಿಗೆ ಹೋಗಬೇಕೆಂದರೆ ಹೆಚ್.ಡಿ ಕೋಟೆಯ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಜಮೀನಿಗೆ ಹೋಗಬೇಕು. ಆದರೆ, ರಾಜ್ಯ ಸರ್ಕಾರದಿಂದ ಅರಣ್ಯದೊಳಗೆ ಜಮೀನಿಗೆ ಹೋಗಲು ಹಾದಿ ಬಳಕೆ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕುಪಿತಗೊಂಡ ರಾಣಾ ಜಾರ್ಜ್ ಸರ್ಕಾರದ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರಣ್ಯದಲ್ಲಿ ಜಮೀನನ್ನು ಹೊಂದಿದವರು ತಮ್ಮ ಜಮೀನಿಗೆ ಹೋಗಲು ಅವಕಾಶ ನೀಡಬೇಕು. ರಾತ್ರಿ ಹಾಗೂ ಹಗಲಿನ ಸಮಯದಲ್ಲಿ ಅನಿರ್ಬಂಧಿವಾಗಿ ಸಂಚರಿಸಲು ಅನುಮತಿ ಅಗತ್ಯವಿದೆ. ಅನುಮತಿ ನೀಡುವಂತೆ ಅರಣ್ಯಾಧಿಕಾರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್ ಚುಪ್- ಅಷ್ಟಕ್ಕೂ ಆಗಿದ್ದೇನು?
ಈ ವೇಳೆ ರಾಣಾ ಜಾರ್ಜ್ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರು, ಅಭಯಾರಣ್ಯದ ವ್ಯಾಪ್ತಿಯಲ್ಲಿ ಜಮೀನು ಹೊಂದಿರುವವರಿಗೆ ಸಂಚರಿಸಲು ವಿನಾಯಿತಿ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 27(1)(ಸಿ) ಅಡಿ ವಿನಾಯಿತಿ ಇದೆ. ಆದರೆ, ಅರಣ್ಯ ಇಲಾಖೆ ಅರ್ಜಿದಾರರ ವಿರುದ್ಧ ಕಾನೂನುಬಾಹಿರ ಆದೇಶ ಹೊರಡಿಸಿದೆ. ಇದು ಸಂವಿಧಾನದ 19 (1)(ಡಿ) ವಿಧಿಗೆ ವ್ಯತಿರಿಕ್ತವಾಗಿದೆ. ಮುಕ್ತಸಂಚಾರಕ್ಕೆ ಅಡ್ಡಿ ಮಾಡಿರುವ ಅರಣ್ಯ ಇಲಾಖೆಯ ಈ ನಿರ್ಬಂಧವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ದೂರು – ನಡ್ಡಾ, ಖರ್ಗೆಯಿಂದ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ರಾಣಾ ಜಾರ್ಜ್ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದೆ. ನಂತರ ಅರಣ್ಯ ಇಲಾಖೆಯ ನಿಯಮಾವಳಿಯಲ್ಲಿ ಜಮೀನಿಗೆ ಹೋಗಲು ಅವಕಾಶ ನೀಡಬೇಕು ಎಂಬ ಬಗ್ಗೆ ಉಲ್ಲೇಖವಿದ್ದರೂ, ನಿರ್ಬಂಧ ವಿಧಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ನ.29ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಪುತ್ರ ರಾಣಾ ಜಾರ್ಜ್, ತಮ್ಮ ತಂದೆಯ ಅಧಿಕಾರ ದುರುಪಯೋಗ ಮಾಡಿಕೊಳ್ಳಲು ಮುಂದಾಗಿದ್ದಾರೆ.
ರಾಣಾ ಜಾರ್ಜ್ ಕಾಡಿನಲ್ಲಿ ಸುತ್ತಾಡಿಕೊಂಡು ಮಜಾ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದು, ಕಾಡಿನ ರಾಜನಾಗಿ ಮೆರದಾಡುತ್ತಿದ್ದ ವಿಚಾರ ಈ ಹಿಂದೆ ಸುದ್ದಿಯಾಗಿತ್ತು. ಇದೀಗ ಮತ್ತೆ ಅರಣ್ಯದೊಳಗೆ ತನ್ನ ರೇಂಜ್ ರೋವರ್ ಕಾರಿನಲ್ಲಿ ಸವಾರಿ ಮಾಡೋಕೆ ಅನುಮತಿ ಕೇಳಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಹೈ ಇನ್ ಪ್ಲ್ಯೂಯೆನ್ಸ್ ಮಾಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸ್ವಂತ ವಾಹನದಲ್ಲಿ ಪರ್ಮನೆಂಟ್ ಆಗಿ ಸಂಚಾರ ಮಾಡಲು ಅನುಮತಿ ನೀಡಬೇಕು ಅಂತ ಅರಣ್ಯ ಇಲಾಖೆಗೆ ಕೋರಿರುವ ಪತತಿದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ಅರಣ್ಯ ಇಲಾಖೆಯ ಬೋರ್ಡ್ ಮೆಂಬರ್ ಆಗಿರುವ ರಾಣಾ, ಈ ಹಿಂದೆ ಸ್ನೇಹಿತರ ಜೊತೆ ಕಾಡಿನೊಳಗೆ ಹೋಗಿ ಎಣ್ಣೆ ಪಾರ್ಟಿ ಮಾಡಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಇದಕ್ಕೂ ಮೊದಲು ಜಾರ್ಜ್ ಗೃಹಸಚಿವರಾಗಿದ್ದಾಗ ರಾಣಾ ತನ್ನ ತಂದೆ ಮಿನಿಸ್ಟರ್ ಅನ್ನೋ ದರ್ಪದಿಂದ ತನ್ನ ತಾಯಿ ಹಾಗೂ ಸ್ನೇಹಿತರೊಂದಿಗೆ ಬಂಡೀಪುರ ಅರಣ್ಯದೊಳಗೆ ಸ್ವಂತ ವಾಹನ ನುಗ್ಗಲು ಯತ್ನಿಸಿದ್ರು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಇವ್ರ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಆ ವೇಳೆ ಅಧಿಕಾರಿಗಳ ಬಳಿ ಚಾಲೆಂಜ್ ಮಾಡಿದ್ದ ರಾಣಾ ಜಾರ್ಜ್, ನನ್ನನ್ನೇ ಬಿಡಲ್ಲ ಅಂತೀರಾ, ಮುದೊಂದು ದಿನ ನಿಮ್ಮ ಕಣ್ಣೆದುರೇ ನನ್ನ ವಾಹನದಲ್ಲಿ ಸವಾರಿ ಮಾಡ್ತೀನಿ ನೋಡ್ತಾ ಇರಿ ಅಂತಾ ತೊಡೆ ತಟ್ಟಿ ಬಂದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಬೆಂಗಳೂರು: ಕಾಡಿನೊಳಗೆ ಸ್ವಂತ ವಾಹನದಲ್ಲಿ ಹೋಗಿ ಮೋಜು-ಮಸ್ತಿ ಮಾಡಿ ಸದ್ದು ಮಾಡಿದ್ದ ರಾಣಾ, ಈಗ ತನ್ನ ತಂದೆ ಬೆಂಗಳೂರು ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಮೂಲಕ ಸಿಎಂಗೆ ಪ್ರಭಾವ ಬೀರಿ ಅರಣ್ಯ ಇಲಾಖೆಯಲ್ಲಿ ಹೊಸ ಹುದ್ದೆಯನ್ನು ಸೃಷ್ಟಿಸಿದ್ದಾರೆ.
ಹೌದು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನತಿ ಶ್ರೀಧರ್ ದಕ್ಷ ಅಧಿಕಾರಿಯಾಗಿದ್ದು ಜಾರ್ಜ್ ಮಗ ರಾಣಾ ಹಸ್ತಕ್ಷೇಪ ಮಾಡಿದರೆ ಸಹಿಸುತ್ತಿರಲಿಲ್ಲ. ಇದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿರುವ ರಾಣಾರನ್ನ ಕೆರಳಿಸಿದೆ. ಈಗ ಪುನತಿ ಶ್ರೀಧರ್ ಕೈಕೆಳಗೆ ಕೆಲಸ ಮಾಡುತ್ತಿದ್ದ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಈಗ ಪುನತಿ ಶ್ರೀಧರ್ಗಿಂತ ಉನ್ನತ ಶ್ರೇಣಿಯ ವನ್ಯಜೀವಿ ಪರಿಪಾಲಕ ಸೃಷ್ಟಿ ಮಾಡಿ ಅರಣ್ಯ ಇಲಾಖೆಯೊಳಗೆ ಡರ್ಟಿ ಪಾಲಿಟಿಕ್ಸ್ ನಡೆಸಿದ್ದಾರೆ.
ತನ್ನ ಮೋಜು ಮಸ್ತಿಗಾಗಿ ಕಾಡಿನೊಳಗೆ ಹೋಗಿ ಕುಡಿದು ಮಜಾ ಮಾಡುವುದಕ್ಕೆ ರಾಣಾ ಅರಣ್ಯ ಇಲಾಖೆಯನ್ನು ಬಲಿಕೊಡುತ್ತಿರುವುದು ಎಷ್ಟು ಸರಿ ಇನ್ನುವ ಪ್ರಶ್ನೆ ಹಿಂದೆಯೇ ಎದ್ದಿತ್ತು. ಈಗ ತನಗೆ ಬೇಕಾದವರನ್ನು ಆಯಕಟ್ಟಿನ ಸ್ಥಳಕ್ಕೆ ನೇಮಿಸುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಆರೋಪ ಮಾಡಬೇಡಿ: ನನ್ನ ಮಗ ಅರಣ್ಯ ಇಲಾಖೆಯಲ್ಲಿ ಯಾರನ್ನು ವರ್ಗಾವಣೆ ಮಾಡುವ ಇಲ್ಲವೇ ಉನ್ನತ ಹುದ್ದೆ ನೀಡುವಂತ ಸ್ಥಾನದಲ್ಲಿ ಇಲ್ಲ. ಹಾಗೇನಾದರೂ ನಿಯಮ ಮೀರಿ ಯಾರಿಗಾದರು ಉನ್ನತ ಹುದ್ದೆ ನೀಡಿದರೆ ಸಿಎಂ ಹಾಗೂ ಅರಣ್ಯ ಸಚಿವರನ್ನು ಕೇಳಿ. ನನ್ನ ಮಗನ ಮೇಲೆ ಸುಳ್ಳು ಆರೋಪ ಮಾಡುವುದು ಬೇಡ. ನನ್ನ ಮಗನ ವಿರುದ್ಧ ದಾಖಲೆಗಳಿದ್ದರೆ ಕೊಡಿ ಎಂದು ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯಿಸಿದ್ದಾರೆ.