Tag: ರಾಧಾ ರಮಣ

  • ಮಗಳ ಮುಖ ರಿವೀಲ್ ಮಾಡಿದ ‘ರಾಧಾ ರಮಣ’ ನಟಿ ಕಾವ್ಯಾ ಗೌಡ

    ಮಗಳ ಮುಖ ರಿವೀಲ್ ಮಾಡಿದ ‘ರಾಧಾ ರಮಣ’ ನಟಿ ಕಾವ್ಯಾ ಗೌಡ

    ಕಿರುತೆರೆ ನಟಿ ಕಾವ್ಯಾ ಗೌಡ (Kavya Gowda) ಅವರು ಮಗುವಿಗೆ ಜನ್ಮ ನೀಡಿ 6 ತಿಂಗಳ ನಂತರ ಇಂದು (ಆ.16) ವರಮಹಾಲಕ್ಷ್ಮಿ ಹಬ್ಬದಂದು ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಗಳು ಸಿಯಾಳ ಮುದ್ದಾದ ವಿಡಿಯೋವನ್ನು ‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಹಂಚಿಕೊಂಡಿದ್ದಾರೆ.

    ಲೈಟ್ ಬಣ್ಣ ಡ್ರೆಸ್ ಧರಿಸಿರುವ ಸಿಯಾಳ ತುಂಟಾಟದ ವಿಡಿಯೋ ಶೇರ್ ಮಾಡಿ, ಕಳೆದ 6 ತಿಂಗಳಿನಿಂದ ತಾಯ್ತನದ ಜರ್ನಿ ತುಂಬ ಪ್ರೀತಿಯಿಂದ ಕೂಡಿತ್ತು. ಇದೊಂದು ಸುಂದರವಾದ ಅನುಭವ. ನನ್ನ ಕೈತೋಳಿನಲ್ಲಿ ಸಿಯಾ ಇಟ್ಟುಕೊಂಡಾಗ ಆದ ಅನುಭವವನ್ನು ಹೇಳಲಾಗದು. ಸಿಯಾಳ ಜರ್ನಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಇಷ್ಟಪಡುವೆ ಎಂದು ಕಾವ್ಯಾ ಅವರು ಹೇಳಿದ್ದಾರೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮಹೇಶ್ ಬಾಬು ಪತ್ನಿ

    ಅಂದಹಾಗೆ, ಕಾವ್ಯಾ ಮತ್ತು ಸೋಮಶೇಖರ್ ದಂಪತಿ ಮಗಳಿಗೆ ಸಿಯಾ (Siya) ಎಂದು ಹೆಸರಿಟ್ಟಿದ್ದಾರೆ. ಸಿಯಾ ಅಂದರೆ ಸೀತೆ ಎಂದರ್ಥ. ಜೊತೆಗೆ ಸುಂದರವಾದ ಹೂವು ಎಂದು ಅರ್ಥ ಕೂಡ ಇದೆ.

    ಈ ವರ್ಷ ಜನವರಿ 22ರಂದು ಅಯೋಧ್ಯೆಯ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ದಿನ ಮುದ್ದಾದ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದರು.

  • ನಾವು ಮನೆಗಿಂತ ಜಾಸ್ತಿ ಸೆಟ್‌ನಲ್ಲಿ ಇದ್ವಿ- ಚಂದು ಗೌಡ

    ನಾವು ಮನೆಗಿಂತ ಜಾಸ್ತಿ ಸೆಟ್‌ನಲ್ಲಿ ಇದ್ವಿ- ಚಂದು ಗೌಡ

    ‘ರಾಧಾ ರಮಣ’ (Radha Ramana) ಸೀರಿಯಲ್ ನಟಿ ಪವಿತ್ರಾ ಜಯರಾಂ (Pavitra Jayaram) ಕಾರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನಟ ಚಂದು ಗೌಡ (Chandu Gowda) ಅವರು ಮಂಡ್ಯದ ಉಮ್ಮಡಹಳ್ಳಿಗೆ ಆಗಮಿಸಿ ಸಹನಟಿ ಪವಿತ್ರಾ ಅಂತಿಮ ದರ್ಶನ ಪಡೆದರು. ಈ ವೇಳೆ, ಪವಿತ್ರಾ ಜೊತೆಗಿನ ಒಡನಾಟದ ಬಗ್ಗೆ ಚಂದು ಗೌಡ ಮಾತನಾಡಿದ್ದರು.

    ಪವಿತ್ರಾ ಸಾವಿನ ಸುದ್ದಿ ನಿಜಕ್ಕೂ ನೋವು ಕೊಟ್ಟಿದೆ. ‘ತ್ರಿನಯನಿ’ (Trinayani) ಸೀರಿಯಲ್‌ನಲ್ಲಿ 5 ವರ್ಷಗಳ ಕಾಲ ನಾವು ಒಟ್ಟಿಗೆ ಕೆಲಸ ಮಾಡಿದ್ವಿ. ಮನೆಗಿಂತ ನಾವು ಜಾಸ್ತಿ ಸೆಟ್‌ನಲ್ಲಿ ಜೀವನ ಮಾಡಿದ್ವಿ. ತಿಂಗಳಲ್ಲಿ 15 ದಿನ ನಾವು ಹೈದರಾಬಾದ್‌ನಲ್ಲಿ ಕೆಲಸ ಮಾಡಿದ್ದೇವೆ. ಪವಿತ್ರಾ ಜೊತೆ ಉತ್ತಮ ಒಡನಾಟ ಇತ್ತು. ಅವರು ಬೇರೆ ಅಲ್ಲ, ನಮ್ಮ ಮನೆಯವರು ಬೇರೆ ಅಲ್ಲ. ಇಷ್ಟು ಹತ್ತಿರದವರು ತೀರಿಕೊಂಡಾಗ ಅದು ಬೇರೇ ತರಹನೇ ನೋವಾಗುತ್ತದೆ. ಅವರ ಆತ್ಮಕ್ಕೆ ಶಾಂತಿ ಕೊಡಲಿ ಅಂತ ದೇವರಲ್ಲಿ ಕೇಳಿ ಕೇಳುತ್ತೇನೆ ಎಂದು ಕಿರುತೆರೆ ನಟ ಚಂದು ಗೌಡ ಭಾವುಕರಾಗಿದ್ದಾರೆ.

    ದೇವರು ಇಷ್ಟು ಚಿಕ್ಕ ವಯಸ್ಸಿಗೆ ಅವರನ್ನು ಕರೆದುಕೊಂಡು ಬಿಟ್ಟರು. ಅವರ ಸಾವು ನಾವು ನಿರೀಕ್ಷೆ ಮಾಡಿರಲಿಲ್ಲ. ಸಾಕಷ್ಟು ಸಮಯದಿಂದ ಒಟ್ಟಿಗೆ ಕೆಲಸ ಮಾಡಿದ್ದೇವೆ. ಈಗ ಅವರು ಇಲ್ಲ ಅಂದರೆ ಬೇಸರವಾಗುತ್ತೆ. ಆಕ್ಸಿಡೆಂಟ್ ಆದಾಗ ಅಂಬ್ಯುಲೆನ್ಸ್ ಸರಿಯಾದ ಸಮಯಕ್ಕೆ ಬರಲಿಲ್ಲ. ಈಗ ಅವರೇ ಇಲ್ಲ ಅಂದಾಗ ಯಾರನ್ನು ದೂರಿ ಏನು ಉಪಯೋಗ ಎಂದು ಪವಿತ್ರಾ ಅಂತಿಮ ದರ್ಶನ ಪಡೆದ ವೇಳೆ ಚಂದು ಗೌಡ ಮಾತನಾಡಿದ್ದಾರೆ. ಇದನ್ನೂ ಓದಿ:ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ

    ಇತ್ತೀಚೆಗೆ ಮದರ್ಸ್‌ ಡೇಗೆ ಎಂದು ಕಾರ್ಯಕ್ರಮ ಮಾಡಿದ್ವಿ. ಎಷ್ಟು ಚೆನ್ನಾಗಿ ಕುಣಿದಿದ್ವಿ. ಆಕ್ಟ್ ಮಾಡಿದ್ವಿ ಎಂದು ಪವಿತ್ರಾ ಜೊತೆಗಿನ ಒಡನಾಟವನ್ನು ಚಂದು ಗೌಡ ವಿವರಿಸಿದ್ದರು.

    ಪವಿತ್ರಾ ಅವರು ಬೆಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಕಾರು ನಿನ್ನೆ (ಮೇ 12) ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿತ್ತು. ಇಂದು (ಮೇ 13) ಹುಟ್ಟುರಾದ ಉಮ್ಮಡಹಳ್ಳಿಯಲ್ಲಿ ಪವಿತ್ರಾ ಅಂತ್ಯಕ್ರಿಯೆ ನೆರವೇರಿದೆ.

  • ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ

    ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ

    ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಕಿರುತೆರೆ ನಟಿ ಪವಿತ್ರಾ ಜಯರಾಂ (Pavitra Jayaram) ಅಂತ್ಯಕ್ರಿಯೆ ಹುಟ್ಟುರಾದ ಮಂಡ್ಯದ ಉಮ್ಮಡಹಳ್ಳಿಯಲ್ಲಿ ಜರುಗಿದೆ. ಒಕ್ಕಲಿಗ ಸಂಪ್ರದಾಯದಂತೆ ಪವಿತ್ರಾ ಕಾರ್ಯ ನೆರವೇರಿದೆ. ಇದನ್ನೂ ಓದಿ:ಸೀರಿಯಲ್‌ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್‌ ಫೈನ್‌!

    ಪವಿತ್ರಾರ ಅಂತ್ಯಕ್ರಿಯೆ ವೇಳೆ ಸಹನಟ ಚಂದ್ರಶೇಖರ್, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ ಕೂಡ ಭಾಗಿಯಾಗುವ ಮೂಲಕ ಅಂತಿಮ ದರ್ಶನ ಪಡೆದರು.

    ಪವಿತ್ರಾ ಅವರು ಬೆಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಕಾರು ನಿನ್ನೆ (ಮೇ 12) ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿತ್ತು. ಇದೀಗ ನಟಿಯ ಸಾವು ಕುಟುಂಬಕ್ಕೆ, ಆಪ್ತರಿಗೆ ಶಾಕ್‌ ಕೊಟ್ಟಿದೆ.

  • ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl)  ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ಮಿಂಚಿದ ಆಲಿಯಾ ಭಟ್ : ಸೀರೆ ಮೇಲೆ ಅಭಿಮಾನಿಗಳ ಕಣ್ಣು

    ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.

    ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿ 2 ವರ್ಷಗಳ ನಂತರ ನಟಿ ತಾಯಿ ಆಗಿರುವ ಸಿಹಿಸುದ್ದಿ ನೀಡಿದ್ದರು. ಇತ್ತೀಚೆಗಷ್ಟೇ ಕಾವ್ಯಾಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೇರಿತ್ತು. ಈ ಬೆನ್ನಲ್ಲೇ ನಟಿ ಸಿಹಿಸುದ್ದಿ ನೀಡಿದ್ದಾರೆ.

  • ಸೀಮಂತ ಶಾಸ್ತ್ರದ ಸಂಭ್ರಮದಲ್ಲಿ ನಟಿ ಕಾವ್ಯಾ ಗೌಡ

    ಸೀಮಂತ ಶಾಸ್ತ್ರದ ಸಂಭ್ರಮದಲ್ಲಿ ನಟಿ ಕಾವ್ಯಾ ಗೌಡ

    ಪ್ಯಾಟೆ ಮಂದಿ ಕಾಡಿಗ್ ಬಂದ್ರು, ರಾಧಾ ರಮಣ (Radha Ramana) ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ಕಾವ್ಯಾ ಗೌಡ (Kavya Gowda) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸೀಮಂತ ಶಾಸ್ತ್ರದ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ.

    ಕಾವ್ಯಾ ಗೌಡ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಕಾರ್ಯಕ್ರಮದಲ್ಲಿ ಲೈಟ್ ಬಣ್ಣದ ಸೀರೆಯಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ‌ ಸೀಮಂತ ಕಾರ್ಯಕ್ರಮ ನಡೆದಿದೆ.

    2021ರಲ್ಲಿ ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿದ್ದಾರೆ. ಗುರುಹಿರಿಯರು ಸಮ್ಮತಿಸಿದ ಮದುವೆಗೆ ಕಾವ್ಯಾ ಗ್ರೀನ್ ಸಿಗ್ನಲ್ ನೀಡಿದ್ದರು. ಇದನ್ನೂ ಓದಿ:ಶಿವರಾತ್ರಿಗೆ ಶಿವಣ್ಣ ನಟನೆಯ ಹೊಸ ಚಿತ್ರದ ಟೈಟಲ್ ಅನಾವರಣ

    ಕಳೆದ ವರ್ಷ ಹೊಸ ಮನೆ ಕಟ್ಟಿ ಗೃಹಪ್ರವೇಶ ಕೂಡ ಅದ್ದೂರಿಯಾಗಿ ಮಾಡಿದ್ದರು. ಹೊಸ ಮನೆಗೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ ಈಗ ಹೊಸ ಅತಿಥಿ ಆಗಮನವಾಗುತ್ತಿರೋ ಖುಷಿಯಲ್ಲಿದ್ದಾರೆ.

    ಮೀರಾ ಮಾಧವ, ರಾಧಾ ರಮಣ, ಬಕಾಸುರ ಸಿನಿಮಾ ಸೇರಿದಂತೆ ಸಾಕಷ್ಟು ಜಾಹೀರಾತುಗಳಲ್ಲಿ ಕಾವ್ಯಾ ಕೆಲಸ ಮಾಡಿದ್ದಾರೆ.

  • ಆ್ಯನಿವರ್ಸರಿಯಂದು ಗುಡ್ ನ್ಯೂಸ್ ಕೊಟ್ಟ ‘ರಾಧಾ ರಮಣ’ ನಟಿ ಕಾವ್ಯಾ

    ಆ್ಯನಿವರ್ಸರಿಯಂದು ಗುಡ್ ನ್ಯೂಸ್ ಕೊಟ್ಟ ‘ರಾಧಾ ರಮಣ’ ನಟಿ ಕಾವ್ಯಾ

    ಟಿ ಕಾವ್ಯಾ ಗೌಡ (Kavya Gowda) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮದುವೆಯ 2ನೇ ವರ್ಷದ ಆ್ಯನಿವರ್ಸರಿಯಂದು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿ ಸುದ್ದಿಯನ್ನ (Pregnancy) ನಟಿ ತಿಳಿಸಿದ್ದಾರೆ. ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡು ಅಭಿಮಾನಿಗಳಿಗೆ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ತಿಳಿಸಿದ್ದಾರೆ.

    ಈ ಖುಷಿ ಸುದ್ದಿಯನ್ನು ಗೌಪ್ಯವಾಗಿಡಲು ಸಾಕಷ್ಟು ಸಮಯದಿಂದ ಪ್ರಯತ್ನಿಸಿದ್ದೇವೆ. ಕೊನೆಗೂ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ಹೇಳೋದಕ್ಕೆ ಖುಷಿಯಿದೆ. 2024ರಲ್ಲಿ ಮಗುವಿನ ಆಗಮನ ಆಗಲಿದೆ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಡಿಸೆಂಬರ್ 2, 2021ರಂದು ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಗೌಡ ಮದುವೆಯಾದರು. ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಅದ್ದೂರಿಯಾಗಿ ಹಸೆಮಣೆ (Wedding) ಏರಿದ್ದರು. ಕುಟುಂಬದವರು ಸಮ್ಮತಿಸಿದ ಮದುವೆಗೆ ನಟಿ ಗ್ರೀನ್ ಸಿಗ್ನಲ್ ನೀಡಿದ್ದರು. ಇದನ್ನೂ ಓದಿ:ಉತ್ತರಕಾಶಿ ಘಟನೆ ಕುರಿತು ಸಿನಿಮಾ: 14ಕ್ಕೂ ಹೆಚ್ಚು ಶೀರ್ಷಿಕೆ ನೋಂದಣಿ

    ಕಳೆದ ಮೇನಲ್ಲಿ ಅದ್ದೂರಿಯಾಗಿ ಮನೆ ಗೃಹಪ್ರವೇಶ ಮಾಡಿದ್ದರು ಕಾವ್ಯಾ- ಸೋಮಶೇಖರ್ ದಂಪತಿ. ನಟನೆ ಬಿಟ್ಟು ಸಂಪೂರ್ಣವಾಗಿ ವೈವಾಹಿಕ ಬದುಕಿನಲ್ಲಿ ನಟಿ ಬ್ಯುಸಿಯಾಗಿದ್ದರು. ಇದೀಗ 2ನೇ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ನಟಿ ಖುಷಿ ಸುದ್ದಿ ನೀಡಿದ್ದಾರೆ.

    ಮೀರಾ ಮಾಧವ, ಗಾಂಧಾರಿ, ರಾಧಾ ರಮಣ (Radha Ramana), ‘ಬಕಾಸುರ’ ಸಿನಿಮಾ ಸೇರಿದಂತೆ 150ಕ್ಕೂ ಹೆಚ್ಚು ಆ್ಯಡ್ ಶೂಟ್‌ನಲ್ಲಿ ಕಾವ್ಯಾ ಗೌಡ ನಟಿಸಿದ್ದಾರೆ.

  • ಹೆಣ್ಣು ಮಗುವಿಗೆ ತಾಯಿಯಾದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ

    ಹೆಣ್ಣು ಮಗುವಿಗೆ ತಾಯಿಯಾದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ

    ‘ಬಿಗ್ ಬಾಸ್’ (Bigg Boss Kannada) ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ (Ashita Chandrappa) ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೆಣ್ಣು ಮಗುವಿಗೆ ತಾಯಿಯಾಗುವ ಮೂಲಕ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಟಿ ಮಾಹಿತಿ ನೀಡಿದ್ದಾರೆ.

    ಕೆಲದಿನಗಳ ಹಿಂದೆ ಮೊದಲ ಮಗುವಿನ ನಿರೀಕ್ಷೆಯಲ್ಲಿರೋದಾಗಿ ಆಶಿತಾ ರಿವೀಲ್ ಮಾಡಿದ್ದರು. ಬಳಿಕ ಸೀಮಂತ ಶಾಸ್ತ್ರದ ಫೋಟೋಗಳನ್ನ ಹಂಚಿಕೊಂಡಿದ್ದರು. ಈಗ ಮನೆಗೆ, ಮಗಳ ಆಗಮನ ಆಗಿರುವ ಸಂಭ್ರಮದಲ್ಲಿದ್ದಾರೆ. ಹೆಣ್ಣು ಮಗಳು ಹುಟ್ಟಿದ್ದಾಳೆ ಎಂದು ನಟಿ ಸಂತಸ ವ್ಯಕ್ತಪಡಿಸಿದ್ದಾರೆ.

    ಕಳೆದ 2021ರ ವರ್ಷದ ಅಂತ್ಯದಲ್ಲಿ ಉದ್ಯಮಿ ರೋಹನ್ ರಾಘವೇಂದ್ರ (Rohan Raghavendra) ಜೊತೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ಬಳಿಕ ನಟಿ ಬಣ್ಣದ ಜಗತ್ತಿನಿಂದ ದೂರ ಉಳಿದುಕೊಂಡರು. ಇದನ್ನೂ ಓದಿ:ಮೊದಲ ಚಿತ್ರದ ಶೂಟಿಂಗ್‌ ಎಲ್ಲಿಗೆ ಬಂತು? ಅಪ್‌ಡೇಟ್‌ ಕೊಟ್ರು ಸಾನ್ಯ ಅಯ್ಯರ್

    ನಟ ವಿರಾಟ್‌ಗೆ (Viraat) ಜೋಡಿಯಾಗಿ ಜೊತೆ ಜೊತೆಯಲಿ ಸೀರಿಯಲ್‌ನಲ್ಲಿ ನಾಯಕಿಯಾಗಿ ಆಶಿತಾ ನಟಿಸಿದ್ದರು. ಬಳಿಕ ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿ ಗಮನ ಸೆಳೆದರು. ರಾಧಾ ರಮಣ (Radha Ramana) ಧಾರಾವಾಹಿಯಲ್ಲಿ ರಮಣ ತಂಗಿ ಅವನಿ ಪಾತ್ರಕ್ಕೆ ಜೀವತುಂಬಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ರಾಧಾ ರಮಣ (Radha Ramana), ಮೀರಾ ಮಾಧವ, ಶುಭವಿವಾಹ ಸೀರಿಯಲ್‌ಗಳ ಮೂಲಕ ಮನೆ ಮಾತಾದ ನಟಿ ಕಾವ್ಯ ಗೌಡ (Kavya Gowda) ನೂತನ ಮನೆಗೆ ಕಾಲಿಟ್ಟಿದ್ದಾರೆ. ಗೃಹ ಪ್ರವೇಶದ (House Warming) ಸಂಭ್ರಮದಲ್ಲಿದ್ದಾರೆ ನಟಿ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ‘ಬಕಾಸುರ’ ಚಿತ್ರ ಖ್ಯಾತಿಯ ನಟಿ ಕಾವ್ಯ ಅವರು ಉದ್ಯಮಿ ಸೋಮಶೇಖರ್ (Somashekar) ಜೊತೆ 2021ರಲ್ಲಿ ಮೇ 13ರಂದು ಹೊಸ ಬಾಳಿಗೆ ಕಾಲಿಟ್ಟಿದ್ದರು. ಗುರು ಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಮದುವೆಯ ನಂತರ ನಟನೆಯಿಂದ ಬ್ರೇಕ್ ತೆಗೆದುಕೊಂಡು ಜ್ಯುವೆಲ್ಲರಿ ಡಿಸೈನರ್ ಆಗಿ ಕಾವ್ಯ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:ತಪ್ಪೆಲ್ಲ ನನ್ನದೇ ಎಂದು ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

    ಮದುವೆಯಾಗಿ ಒಂದು ವರ್ಷವಾಗುವ ಮುಂಚೆಯೇ ಇದೀಗ ಹೊಸ ಮನೆಗೆ ಕಾವ್ಯ ಗೌಡ ದಂಪತಿ ಪಾದಾರ್ಪಣೆ ಮಾಡಿದ್ದಾರೆ. ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿ ಮಿಂಚಿದ್ದಾರೆ. ನಟಿ ಕಾವ್ಯ ಕೂಡ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸವ್ಯಸಾಚಿ ಸೀರೆಯಲ್ಲಿ ನಟಿ ಕಾವ್ಯ ಮಿಂಚಿದ್ದಾರೆ.

    ಕಾವ್ಯ ದಂಪತಿ ಅವರ ಮನೆ ನೋಡುಗರ ಗಮನ ಸೆಳೆಯುತ್ತಿದೆ. ಮನೆಯಲ್ಲಿ ಎಲ್ಲಾ ಕಡೆ ಮರದ ತುಂಡಿನಿಂದ ವಿನ್ಯಾಸ ಮಾಡಿದ ಹಾಗೇ ಕಾಣುತ್ತಿದೆ. ಮನೆ ಕಟ್ಟಿಸಿದ ರೀತಿ ವಿಭಿನ್ನವಾಗಿದೆ. ನಟಿಯ ಹೊಸ ಮನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನೂ ನೆಚ್ಚಿನ ನಟಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ಕೂರ್ಗ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ `ರಾಧಾ ರಮಣ’ ನಟಿ ಕಾವ್ಯಾ ಗೌಡ

    ಕೂರ್ಗ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ `ರಾಧಾ ರಮಣ’ ನಟಿ ಕಾವ್ಯಾ ಗೌಡ

    ಮೀರಾ ಮಾಧವ, ಗಾಂಧಾರಿ, ರಾಧಾ ರಮಣ ಸೀರಿಯಲ್ ಮೂಲಕ ಮನೆಮಾತಾದ ನಟಿ ಕಾವ್ಯಾ ಗೌಡ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೀಗ ಕೂರ್ಗ್‌ನಲ್ಲಿ ಪತಿಯೊಂದಿಗೆ ವಿಶೇಷವಾಗಿ ಬರ್ತಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಸಾಕಷ್ಟು ಸೀರಿಯಲ್ ಮತ್ತು `ಬಕಾಸುರ’ ಚಿತ್ರದೊಂದಿಗೆ ಹಿರಿತೆರೆಗೆ ಕಾಲಿಟ್ಟ ನಟಿ ಕಾವ್ಯಾ ಗೌಡ, ಕಳೆದ ವರ್ಷ ಉದ್ಯಮಿ ಸೋಮಶೇಖರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಟನೆಗೆ ಬೈ ಹೇಳಿ ದಾಂಪತ್ಯ ಜೀವನದತ್ತ ಮುಖ ಮಾಡಿದ್ದಾರೆ. ಇನ್ನು ಆಭರಣ ವಿನ್ಯಾಸ ತರಬೇತಿ ಸಹ ಪಡೆಯುತ್ತಿದ್ದಾರೆ. ಸದ್ಯ ನಟಿ ಕಾವ್ಯಾ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಪತಿಯೊಂದಿಗೆ ಕೂರ್ಗ್‌ನಲ್ಲಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ಕೂರ್ಗ್‌ ರೆಸಾರ್ಟ್‌ವೊಂದರಲ್ಲಿ ಬೀಡು ಬಿಟ್ಟಿರುವ ಕಾವ್ಯಾ ಗೌಡ ದಂಪತಿ, ಕೂರ್ಗ್ನ ಸುಂದರ ತಾಣದಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ವೈಟ್ ಕಲರ್ ಔಟ್‌ಪೀಟ್‌ನಲ್ಲಿ ಮಿಂಚುತ್ತಿದ್ದಾರೆ. ತಮ್ಮ ಬರ್ತಡೇ ಬಂದಿರುವ ಗಿಫ್ಟ್ಗಳನ್ನ ಶೇರ್ ಮಾಡಿರುವ ಕಾವ್ಯಾ ಅವರ ಉಡುಗೊರೆ ಅನ್ನು ನೋಡಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ನೆಚ್ಚಿನ ನಟಿಯ ಬರ್ತಡೇಗೆ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

  • ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

    ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

    ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

    ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.