Tag: ರಾಧಿಕಾ ನಾರಾಯಣ್

  • ಮಹಾ ಶಿವರಾತ್ರಿಗೆ ತೆರೆಗೆ ಬರಲಿದೆ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’?

    ಮಹಾ ಶಿವರಾತ್ರಿಗೆ ತೆರೆಗೆ ಬರಲಿದೆ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’?

    ಮಹಾ ಶಿವರಾತ್ರಿಯಂದು ರಮೇಶ್ ಅರವಿಂದ್ ಡಿಟೆಕ್ಟಿವ್ ಪಾತ್ರದಲ್ಲಿ ಅಭಿನಯಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಥ್ರಿಲ್ ನೀಡಲು ಬರ್ತಿದೆ. ಫೆಬ್ರವರಿ 21ರ ಮಹಾ ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’ ಚಿತ್ರ ಬಿಡುಗಡೆಯಾಗುತ್ತಿದೆ. ‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್ ಮಿಂಚಿದ್ದಾರೆ. ಸಸ್ಪೆನ್ಸ್ ,ಥ್ರಿಲ್ಲರ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ ಚಿತ್ರ ಮೂಡಿಬಂದಿದ್ದು ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ, ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ.

    ರಮೇಶ್ ಅರವಿಂದ್ ಮೂರು ದಶಕಗಳ ಸಿನಿ ಜೀವನದಲ್ಲಿ ಇದೆ ಮೊದಲ ಬಾರಿ ಡಿಟೆಕ್ಟಿವ್ ಪಾತ್ರದಲ್ಲಿ ಬಣ್ಣಹಚ್ಚಿರೋದು ಈ ಚಿತ್ರದ ವಿಶೇಷ. ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ.

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.

  • ಫೆಬ್ರವರಿಗೆ 21ಕ್ಕೆ ತೆರೆಗೆ ಬರಲಿದೆ ‘ಶಿವಾಜಿ ಸುರತ್ಕಲ್’!

    ಫೆಬ್ರವರಿಗೆ 21ಕ್ಕೆ ತೆರೆಗೆ ಬರಲಿದೆ ‘ಶಿವಾಜಿ ಸುರತ್ಕಲ್’!

    ರಮೇಶ್ ಅರವಿಂದ್ ನಟಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಟೀಸರ್ ಹಾಗೂ ಟ್ರೈಲರ್ ನಿಂದ ಭಾರೀ ನಿರೀಕ್ಷೆ ಹಾಗೂ ಕುತೂಹಲ ಹುಟ್ಟಿಸಿದೆ. ಇದೊಂದು ಪತ್ತೇದಾರಿ ಸಿನಿಮಾವಾಗಿದ್ದು, ರಣಗಿರಿಯಲ್ಲಿ ನಡೆಯೋ ಅನುಮಾನಾಸ್ಪದ ಸಾವಿನ ಸುತ್ತ ಈ ಕತೆಯನ್ನು ಹೆಣೆಯಲಾಗಿದೆ. ಈ ಕೊಲೆಯ ರಹಸ್ಯ ಭೇಧಿಸುವ ಡಿಟೆಕ್ಟಿವ್ ಪಾತ್ರದಲ್ಲಿ ರಮೇಶ್ ಅರವಿಂದ್ ಬಣ್ಣಹಚ್ಚಿದ್ದಾರೆ.

    ಸಸ್ಪೆನ್ಸ್, ಹಾರಾರ್, ಥ್ರಿಲ್ಲಿಂಗ್ ಎಲಿಮೆಂಟ್‍ಗಳು ‘ಶಿವಾಜಿ ಸುರತ್ಕಲ್’ ಚಿತ್ರದಲ್ಲಿ ಮಿಶ್ರಣವಾಗಿದ್ದು, ನೋಡುಗರಿಗೆ ಥ್ರಿಲ್ ಕೊಡಲಿದೆ. ರಮೇಶ್ ಅರವಿಂದ್ ಮೊದಲ ಬಾರಿ ಪತ್ತೇದಾರಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರ ಮಹಾ ಶಿವರಾತ್ರಿಗೆ ಬಿಡುಗಡೆಗೆ ಸಿದ್ದವಾಗಿದೆ. ರಾಧಿಕಾ ನಾರಾಯಣ್, ಆರೋಹಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ನಿರೀಕ್ಷೆ ಹುಟ್ಟಿಹಾಕಿರುವ ಈ ಚಿತ್ರ ಫೆಬ್ರವರಿ 21ಕ್ಕೆ ತೆರೆಗೆ ಬರಲಿದೆ.

  • ‘ಶಿವಾಜಿ ಸುರತ್ಕಲ್’ ಟ್ರೈಲರ್ ಔಟ್!- ಫೆಬ್ರವರಿ 21ಕ್ಕೆ ಬಯಲಾಗಲಿದೆ ರಣಗಿರಿ ರಹಸ್ಯ!

    ‘ಶಿವಾಜಿ ಸುರತ್ಕಲ್’ ಟ್ರೈಲರ್ ಔಟ್!- ಫೆಬ್ರವರಿ 21ಕ್ಕೆ ಬಯಲಾಗಲಿದೆ ರಣಗಿರಿ ರಹಸ್ಯ!

    ಸ್ಯಾಂಡಲ್‍ವುಡ್‍ನ ವೆರಿ ಟ್ಯಾಲೆಂಟೆಡ್ ಹಾಗೂ ಸ್ಫುರದ್ರೂಪಿ ನಟ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಡಿಟೆಕ್ಟಿವ್ ಪಾತ್ರದಲ್ಲಿ ಎರಡು ವಿಭಿನ್ನ ಶೇಡ್‍ನಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಕುತೂಹಲಕಾರಿ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲರಿಗೂ ಸಖತ್ ಥ್ರಿಲ್ ಕೊಡುತ್ತಿದೆ.

    ‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್ ಮಿಂಚಿದ್ದಾರೆ. ಸಸ್ಪೆನ್ಸ್, ಥ್ರಿಲ್ಲಿಂಗ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ ಚಿತ್ರ ಮೂಡಿಬಂದಿದ್ದು, ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ, ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ. ಚಿತ್ರದ ಬಿಡುಗಡೆ ಡೇಟ್ ಕೂಡ ಅನೌನ್ಸ್ ಮಾಡಿರೋ ಟೀಂ ‘ಶಿವಾಜಿ ಸುರತ್ಕಲ್’. ಫೆಬ್ರವರಿ 21ಕ್ಕೆ ಚಿತ್ರ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ ಚಿತ್ರತಂಡ.

    ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ಚಿತ್ರಕ್ಕಿದೆ.

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ  ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.

  • ಚೇಸ್ ಟೀಸರ್ ರಿಲೀಸ್ ಮಾಡಿದ ದಿಗ್ಗಜರು

    ಚೇಸ್ ಟೀಸರ್ ರಿಲೀಸ್ ಮಾಡಿದ ದಿಗ್ಗಜರು

    ಬೆಂಗಳೂರು: ಮಹಿಳೆಯರು ರಾತ್ರಿ ಹೊತ್ತು ಕ್ಯಾಬ್‍ಗಳಲ್ಲಿ ಪ್ರಯಾಣಿಸುವುದು ಅದೆಷ್ಟು ಸೂಕ್ತ ಎಂಬ ವಿಷಯವನ್ನಿಟ್ಟುಕೊಂಡು ಒಂದು ಸಸ್ಪೆನ್ಸ್, ಥ್ರಿಲ್ಲರ್ ಕಥಾನಕ ಹೆಣೆದಿರುವ ಚಿತ್ರ ಚೇಸ್. ವಿಲೋಕ್ ಶೆಟ್ಟಿ ಅವರ ನಿರ್ದೇಶನದಲ್ಲಿ ತಯಾರಾಗಿರುವ ಈ ಚಿತ್ರದ ಟೀಸರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಎಸ್.ಕೆ. ಭಗವಾನ್, ಓಂ ಸಾಯಿಪ್ರಕಾಶ್ ಹಾಗೂ ಬರಗೂರು ರಾಮಚಂದ್ರಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಯುವ ಪ್ರತಿಭೆಗಳ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದ್ದು ವಿಶೇಷವಾಗಿತ್ತು. ಚೇಸ್ ಚಿತ್ರತಂಡ ಈ ಮೂವರು ದಿಗ್ಗಜರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿತು. ಈಗಿನ ಕಾಲದ ಜನರಿಗೆ ಹಿಡಿಸುವಂಥ ಹೊಸ ಶೈಲಿಯಲ್ಲಿ ಚಿತ್ರವನ್ನು ನಿರ್ಮಿಸಿರುವ ಈ ಯುವ ತಂಡಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರಲಿ ಎಂಬ ಶುಭ ಹಾರೈಕೆಯ ಮಾತುಗಳು ದಿಗ್ಗಜರಿಂದ ಕಾಣಿಕೆಯಾಗಿ ಸಿಕ್ಕಿತು.

    ಕ್ರೈಂ, ಥ್ರಿಲ್ಲರ್, ಮಿಸ್ಟ್ರಿ ಕಥಾನಕ ಒಳಗೊಂಡ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ರಾಧಿಕಾ ನಾರಾಯಣ್, ಅವಿನಾಶ್ ನರಸಿಂಹರಾಜು, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಅರವಿಂದರಾವ್, ಪ್ರಮೋದ್ ಶೆಟ್ಟಿ, ರಾಜೇಶ್ ನಟರಂಗ, ರೆಹಮಾನ್ ಹಾಗೂ ಬಾಲಿವುಡ್‍ನ ಎಬಿಸಿಡಿ ಚಿತ್ರದಲ್ಲಿ ನಟಿಸಿದ ಸುಶಾಂತ್ ಪೂಜಾರಿ ಸಹ ನಟಿಸಿದ್ದಾರೆ.

    ನಿರ್ದೇಶಕ ವಿಲೋಕ್ ಶೆಟ್ಟಿ ಮಾತನಾಡಿ, ಈ ಚಿತ್ರ ನಮ್ಮ ತಂಡದ 2 ವರ್ಷಗಳ ಪ್ರಯತ್ನದ ಫಲ. ನಮ್ಮ ಚಿತ್ರದ ಟೀಸರನ್ನು ಹಿರಿಯ ನಿರ್ದೇಶಕರಿಂದಲೇ ಬಿಡುಗಡೆ ಮಾಡಿಸಿದರೆ ಅರ್ಥಪೂರ್ಣವಾಗಿರುತ್ತೆ ಎಂದು ಆಹ್ವಾನಿಸಿದಾಗ ಅವರೆಲ್ಲ ಪ್ರೀತಿಯಿಂದ ಬಂದು ಹರಸಿದ್ದಾರೆ. ಬಹಳಷ್ಟು ಕಲಾವಿರು ಈ ಚಿತ್ರದಲ್ಲಿ ಅಭಿನಯಿಸಿರುವುದರಿಂದ ಅವರೆಲ್ಲರ ಡೇಟ್ಸ್ ಹೊಂದಿಸಿಕೊಂಡು ಶೂಟ್ ಮಾಡುವುದು ಸ್ವಲ್ಪ ತಡವಾಯಿತು ಎಂದು ಹೇಳಿದರು.

    ನಾಯಕಿ ರಾಧಿಕಾ ನಾರಾಯಣ್ ಮಾತನಾಡಿ, ನನ್ನ ಕೆರಿಯರ್‍ನಲ್ಲೇ ಇಂಥ ಪಾತ್ರ ಮಾಡಿಲ್ಲ, ಇದು ನನಗೆ ತುಂಬಾ ವಿಶೇಷ ಪಾತ್ರ. ಪೊಲೀಸ್ ಇನ್‍ಸ್ಪೆಕ್ಟರ್ ಟ್ರೈನಿಂಗ್ ಪಡೆಯುತ್ತಿರುವ ಯುವತಿಯಾಗಿ ನಾನು ಅಭಿನಯಿಸಿದ್ದೇನೆ ಎಂದು ಹೇಳಿದರು. ನಂತರ ನಟ ಸುಶಾಂತ್ ಪೂಜಾರಿ ಮಾತನಾಡಿ ನನ್ನ ತಾಯಿ ಉಡುಪಿಯವರು, ನಾನು ಇಲ್ಲೇ ಹುಟ್ಟಿದ್ದರೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದೇನೆ. ನನಗೆ ತುಂಬಾ ಸ್ಪೆಷಲ್ ರೋಲ್ ಈ ಚಿತ್ರದಲ್ಲಿದೆ ಎಂದು ಹೇಳಿದರು.

    ನಟ ಅರವಿಂದರಾವ್ ಮಾತನಾಡಿ ಬರೀ ಇನ್‍ಸ್ಪೆಕ್ಟರ್ ಪಾತ್ರಗಳನ್ನೇ ಮಾಡಿ ಬೇಸತ್ತಿದ್ದ ನನಗೆ ಈ ಚಿತ್ರದಲ್ಲಿ ಒಬ್ಬ ಡಾಕ್ಟರ್ ಪಾತ್ರ ಕೊಟ್ಟಿದ್ದರು. ಕನ್ನಡದಲ್ಲಿ ಈ ಥರದ ಸಿನಿಮಾ ಬಂದಿಲ್ಲ ಎಂದು ಹೇಳಿದರು. ಈ ಚಿತ್ರಕ್ಕೆ ಕಾರ್ತಿಕ್ ಆಚಾರ್ಯ ಅವರ ಸಂಗೀತವಿದ್ದು, ಅನಂತರಾಜ ಅರಸ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಿಂಪ್ಲಿ ಫನ್ ಮೀಡಿಯಾ ನೆಟ್‍ವರ್ಕ್ ಮೂಲಕ ಮನೋಹರ್ ಸುವರ್ಣ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಅವರ ನಿರ್ಮಾಣದ ಚೇಸ್ ಚಿತ್ರ ರಿಲೀಸ್‍ಗೆ ರೆಡಿಯಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.

  • ಸದ್ಗುರುವಿನೊಂದಿಗೆ ‘ಮುಂದಿನ ನಿಲ್ದಾಣ’ ತಂಡ

    ಸದ್ಗುರುವಿನೊಂದಿಗೆ ‘ಮುಂದಿನ ನಿಲ್ದಾಣ’ ತಂಡ

    ಬೆಂಗಳೂರು: ತೆರೆ ಕಾಣುವ ಮುನ್ನವೇ ಯುವ ನಿರ್ದೇಶಕ ವಿನಯ್ ಭಾರದ್ವಾಜ್ ಅವರ ಮುಂದಿನ ನಿಲ್ದಾಣ ಚಿತ್ರವು ಎಲ್ಲೆಡೆಯೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಲೇ ಇದೆ. ಮೊನ್ನೆಯಷ್ಟೇ ರಿಲೀಸ್ ಆದ ಈ ಚಿತ್ರದ ಮನಸೇ ಮಾಯ ಹಾಡು ಯೂಟ್ಯೂಬ್, ಟಿಕ್ ಟಾಕ್ ಗಳಲ್ಲಿ ವೈರಲ್ ಆಗಿದ್ದು ದಿನದಿಂದ ದಿನಕ್ಕೆ ಅದರ ಕಾವು ಏರುತ್ತಾ ಇದೆ. ಇದರ ಜೊತೆಯಲ್ಲಿಯೇ, ಕಾವೇರಿ ತಾಯಿಯ ಒಡಲಿನ ಕಾವನ್ನು ತಗ್ಗಿಸುವ ಪ್ರಯತ್ನಕ್ಕೂ ಚಿತ್ರ ತಂಡವು ಕೈಜೋಡಿಸಿದೆ!

    ಚಿತ್ರದ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿರುವ ರಾಧಿಕಾ ನಾರಾಯಣ್, ಪ್ರವೀಣ್ ತೇಜ್ ಹಾಗೂ ಅನನ್ಯಾ ಕಶ್ಯಪ್ ಅವರನ್ನೊಳಗೊಂಡ ತಂಡವು ಕಾವೇರಿ ಕೂಗು ಅಭಿಯಾನ ಮಾಡುತ್ತಿರುವ ಈಶಾ ಫೌಂಡೇಶನ್‍ನ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿತು.

    ಮುಂದಿನ ನಿಲ್ದಾಣ ಚಿತ್ರ ತಂಡವು ಸದಾ ಕಾವೇರಿಯ ಹಾಗೂ ಕನ್ನಡದ ನೆಲ, ಜಲ ಹಾಗೂ ಭಾಷೆಯ ಉಳಿವಿಗೆ ಬದ್ಧವಾಗಿದೆ ಎಂಬ ಮಾತನ್ನು ಸದ್ಗುರುವಿನ ಜೊತೆ ಹಂಚಿಕೊಳ್ಳುತ್ತಾ, ಚಿತ್ರ ತಂಡವು ಬೆಂಗಳೂರಿಗೆ ಮರಳಿತು.

  • ಮುಂದಿನ ನಿಲ್ದಾಣದಲ್ಲಿ ಮನಸು ಮಾಯವಾದಂಥಾ ಮೋಹಕ ಹಾಡು!

    ಮುಂದಿನ ನಿಲ್ದಾಣದಲ್ಲಿ ಮನಸು ಮಾಯವಾದಂಥಾ ಮೋಹಕ ಹಾಡು!

    ಈಗಾಗಲೇ ಡಿಫರೆಂಟ್ ಆಗಿರೋ ಪೋಸ್ಟರ್‌ಗಳು ಮತ್ತು ಹಾಡುಗಳ ಮೂಲಕ ‘ಮುಂದಿನ ನಿಲ್ದಾಣ’ ಚಿತ್ರ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಈವರೆಗೂ ಪ್ರತೀ ಹಂತದಲ್ಲಿಯೂ ಹೊಸತನದೊಂದಿಗೆ ಸದ್ದು ಮಾಡುತ್ತಾ ಬಂದಿರೋ ಈ ಚಿತ್ರದ ಒಂದಷ್ಟು ಹಾಡುಗಳು ಬಿಡುಗಡೆಯಾಗಿ ಜನಪ್ರಿಯತೆ ಗಳಿಸಿಕೊಂಡಿವೆ. ಇದೀಗ ಮನಸೇ ಮಾಯ ಎಂಬ ಮೆಲೋಡಿ ವೀಡಿಯೋ ಸಾಂಗ್ ಒಂದು ಅನಾವರಣಗೊಂಡಿದೆ. ಒಂದೇ ಸಲಕ್ಕೆ ಮನಸಿಗಿಳಿಯುವಷ್ಟು ಮುದ್ದಾಗಿ ಮೂಡಿ ಬಂದಿರೋ ಈ ಹಾಡೂ ಸಹ ವ್ಯಾಪಕ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

    ಮನಸೇ ಮಾಯ ಎಂಬ ಈ ಹಾಡನ್ನು ಸೂರಜ್ ಸಂತೋಷ್ ಹಾಗೂ ವರುಣ್ ಸುನಿಲ್ ಹಾಡಿದ್ದಾರೆ. ಕಿರಣ್ ಕಾವೇರಪ್ಪ ಈ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ಈ ಹಾಡನ್ನು ಮಸಾಲಾ ಕಾಫಿ ಹೆಸರಿನ ತಂಡ ರೂಪಿಸಿದೆ. ಒಂದೇ ಕೇಳುವಿಕೆಯಲ್ಲಿ ಭಿನ್ನವಾದ ಸಂಗೀತದ ಪಟ್ಟುಗಳು ಮತ್ತು ಸೌಂಡಿಂಗ್‍ನಿಂದ ಗಮನ ಸೆಳೆಯುವಂಥಾ ಈ ಹಾಡು ವ್ಯಾಪಕ ಮೆಚ್ಚುಗೆ ಗಳಿಸಿಕೊಂಡು ಸದ್ಯ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡುತ್ತಿದೆ. ಈ ಮೂಲಕವೇ ಮುಂದಿನ ನಿಲ್ದಾಣ ಚಿತ್ರವೂ ಮತ್ತೆ ಪ್ರೇಕ್ಷಕರ ನಡುವೆ ಹರಿದಾಡಲಾರಂಭಿಸಿದೆ.

    ವಿನಯ್ ಭಾರದ್ವಾಜ್ ನಿರ್ದೇಶನ ಮಾಡಿರೋ ಈ ಚಿತ್ರದ ಟೀಸರ್ ಮತ್ತು ಪೋಸ್ಟರ್‍ಗಳೆಲ್ಲವೂ ಸೂಪರ್ ಹಿಟ್ ಆಗಿವೆ. ಈ ಮೂಲಕವೇ ಸದರಿ ಚಿತ್ರ ಬಹನಿರೀಕ್ಷಿತ ಸಿನಿಮಾವಾಗಿಯೂ ನೆಲೆ ಕಂಡುಕೊಂಡಿದೆ. ವಿಶಿಷ್ಟವಾದ ಪ್ರೇಮ ಕಥಾನಕದ ಜೊತೆ ಜೊತೆಗೇ ಗಹನವಾದುದ್ದೇನನ್ನೋ ಹೇಳಲು ಮುಂದಾಗಿರೋ ಈ ಚಿತ್ರದಲ್ಲಿ ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಮತ್ತು ಅನನ್ಯಾ ಕಶ್ಯಪ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಮನಸೇ ಮಾಯ ಎಂಬ ಹಾಡಿನ ಮೂಲಕ ಸೆಳೆದುಕೊಂಡಿರೋ ಮುಂದಿನ ನಿಲ್ದಾಣ ಇಷ್ಟರಲ್ಲಿಯೇ ತೆರೆಗಾಣಲಿದೆ.