Tag: ರಾಧಿಕ ಪಂಡಿತ್

  • ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ Mr & Mrs ರಾಮಾಚಾರಿ -ಎಫ್‍ಬಿಯಲ್ಲಿ ಹೊಸ ಫೋಟೋ

    ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ Mr & Mrs ರಾಮಾಚಾರಿ -ಎಫ್‍ಬಿಯಲ್ಲಿ ಹೊಸ ಫೋಟೋ

    ಬೆಂಗಳೂರು: ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಒಂದು ವರ್ಷ ಪೂರೈಸಿದ್ದು, ರಾಕಿಂಗ್ ಜೋಡಿ ಸದ್ಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

    ಕಳೆದ ವರ್ಷ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ಧೂರಿಯಾಗಿ ಗುರು-ಹಿರಿಯರು, ಸ್ನೇಹಿತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಇಬ್ಬರು ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತೆರೆಯ ಮೇಲೆ ಹಿಟ್ ಆಗಿರುವ ಈ ಜೋಡಿ ನಿಜ ಜೀವನದಲ್ಲೂ ಅಷ್ಟೇ ಅನ್ಯೂನ್ಯವಾಗಿದ್ದಾರೆ. ಇಬ್ಬರೂ ಕೂಡ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

    ಮದುವೆಯಾಗಿ ಒಂದು ವರ್ಷ ಪೂರೈಸಿರುವ ಈ ರಾಂಕಿಗ್ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ. ರಾಧಿಕಾ ಮದುವೆ ವಾರ್ಷಿಕೋತ್ಸವದ ಸಂಭ್ರಮವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದು, ಪ್ರತಿದಿನ ಮದುವೆಯ ತಯಾರಿ, ಮದುವೆಯ ಎಕ್ಸ್ ಕ್ಲೂಸಿವ್ ಫೋಟೋ ಮತ್ತು ಸಣ್ಣ ವಿಡಿಯೋಗಳನ್ನು ಫೇಸ್‍ಬುಕ್ ನಲ್ಲಿ ಶೇರ್ ಮಾಡಿದ್ದಾರೆ.

    ಅದೇ ರೀತಿ ಇಂದು ತಮ್ಮ ಎಫ್‍ಬಿಯಲ್ಲಿ ಮೂರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ವಿವಾಹ ವಾರ್ಷಿಕೋತ್ಸದ ಸಂಭ್ರಮವನ್ನು ಆಚರಣೆ ಮಾಡಲು ಈ ಜೋಡಿ ವಿದೇಶಕ್ಕೆ ಹೋಗಿದ್ದು, ಕೆಲ ದಿನಗಳು ಸುತ್ತಾಡಿಕೊಂಡು ನಂತರ ತಮ್ಮ ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

    https://twitter.com/NimmaRPFC/status/939355206776635392

    https://twitter.com/YashFC/status/939354277683740673

  • ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

    ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

    ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ, ನಟ ಯಶ್‍ನ ಮುದ್ದಿನ ಮಡದಿ ರಾಧಿಕಾ ಪಂಡಿತ್ ಮದುವೆ ನಂತರ ಮೊದಲ ಬಾರಿಗೆ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಧಿಕಾ ಪಂಡಿತ್ ಜೊತೆ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ನಟನಾಗಿ ಅಭಿನಯಿಸುತ್ತಿದ್ದಾರೆ. ಇಂದು ಸಿನಿಮಾ ಮುಹೂರ್ತ ನಡೆಯಲಿದ್ದು, ವಿ. ಪ್ರಿಯಾ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಜೊತೆ ಸಹಾಯಕರಾಗಿ ಕೆಲಸ ಮಾಡಿರುವ ಪ್ರಿಯಾ ಈಗಾಗಲೇ ಮೂರು ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿ ಬಂದಿದ್ದಾರೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ತಾರಾ, ಸುಚೇಂದ್ರ ಪ್ರಸಾದ್ ಕೂಡ ನಟಿಸುತ್ತಿದ್ದು, ಸಿನಿಮಾದಲ್ಲಿ ಪ್ರೀತಂ ಜಯರಾಂ ಅವರ ಛಾಯಾಗ್ರಹಣ ಇರುತ್ತದೆ. ಡಿಸೆಂಬರ್ 11 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

    ರಾಧಿಕಾ ಪಂಡಿತ್ ಅವರ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿಲ್ಲ. ಅವರ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಹೀರೋ ಪಾತ್ರಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆಯಂತೆ. ಚಿತ್ರದ ಟೈಟಲ್ ಇನ್ನು ಬಹಿರಂಗ ಆಗಿಲ್ಲ. ರಾಧಿಕಾ ಪಂಡಿತ್ ಮದುವೆಯ ಸಂದರ್ಭದಲ್ಲಿ `ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ವರ್ಷದ ಬಳಿಕ ಮತ್ತೆ ರಾಧಿಕಾ ಪಂಡಿತ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಥೆ ತುಂಬ ಇಷ್ಟ ಆಗಿದ್ದು, ರಾಧಿಕಾ ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

     

  • ಒಬ್ಬನಿಂದ ಕಾಯಕವಾಗುವುದಿಲ್ಲ, ಎಲ್ಲರೂ ಕೈ ಜೋಡಿಸಬೇಕು: ತಲ್ಲೂರು ಕೆರೆಗೆ ಯಶ್, ರಾಧಿಕಾ ಬಾಗಿನ ಅರ್ಪಣೆ

    ಒಬ್ಬನಿಂದ ಕಾಯಕವಾಗುವುದಿಲ್ಲ, ಎಲ್ಲರೂ ಕೈ ಜೋಡಿಸಬೇಕು: ತಲ್ಲೂರು ಕೆರೆಗೆ ಯಶ್, ರಾಧಿಕಾ ಬಾಗಿನ ಅರ್ಪಣೆ

    ಕೊಪ್ಪಳ: ತಲ್ಲೂರು ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಸೋಮವಾರ ಯಶ್-ರಾಧಿಕಾ ದಂಪತಿ ಬಾಗಿನ ಅರ್ಪಿಸಿದ್ದಾರೆ.

    ಇಂದು ಹೆಲಿಕಾಪ್ಟರ್ ಮೂಲಕ ಯಶ್ ದಂಪತಿ ಸುಮಾರು 11 ಗಂಟೆಗೆ ಕೊಪ್ಪಳಕ್ಕೆ ಬಂದಿಳಿದರು. ಅವರಿಗಾಗಿ ಶಾಮಿಯಾನ, ಬ್ಯಾನರ್ ಎಲ್ಲವನ್ನು ಹಾಕಿ ಸಿದ್ಧ ಮಾಡಿಕೊಂಡು ಅಭಿಮಾನಿಗಳು ಕೆರೆಯ ಬಳಿ ಕಾಯುತ್ತಿದ್ದರು. ಹೆಲಿಕಾಪ್ಟರ್ ಮೂಲಕ ಮೇಲಿಂದ ತಲ್ಲೂರು ಕೆರೆಯನ್ನು ಸಂಪೂರ್ಣವಾಗಿ ದಂಪತಿ ವೀಕ್ಷಿಸಿ ಆನಂದ ಪಟ್ಟರು.

    ಕೆರೆ ಬಳಿ ಬಂದು ಇಬ್ಬರು ಪೂಜೆ ಸಲ್ಲಿಸಿ ನಂತರ ಬಾಗಿನವನ್ನು ಅರ್ಪಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶೋಮಾರ್ಗದ ಕಾರ್ಯದ ಬಗ್ಗೆ ರೈತರೊಂದಿಗೆ, ಗ್ರಾಮಸ್ಥರೊಂದಿಗೆ ಸಂತಸದಿಂದ ಮಾತನಾಡಿದ್ದಾರೆ. ರಾಜಕೀಯಕ್ಕೆ ಬರುತ್ತೀರಾ ಎಂದು ಅಭಿಮಾನಿಗಳು ಕೇಳಿದಕ್ಕೆ ಯಶ್, ನಾನು ರಾಜಕೀಯಕ್ಕೆ ಬರುವುದಿಲ್ಲ. ಒಂದು ವೇಳೆ ರಾಜಕೀಯಕ್ಕೆ ಬರಬೇಕಿದ್ದರೆ ಇಲ್ಲಿಗೆ ಬಂದು ಕೆರೆ ಕಾಯಕ ಮಾಡಬೇಕಿರಲಿಲ್ಲ. ನಮ್ಮ ಭಾಗದಲ್ಲಿಯೇ ಈ ಕಾರ್ಯವನ್ನು ಮಾಡಬಹುದಿತ್ತು ಎಂದು ಹೇಳಿದರು.

    ಬತ್ತಿಹೋಗಿದ್ದ ಕೆರೆ ಈಗ ನೀರಿನಿಂದ ತುಂಬಿ ಹೂಳೆಯುತ್ತಿದೆ. ಇದರಿಂದ ನನಗೆ ತುಂಬಾ ಖುಷಿಯಾಗುತ್ತಿದೆ. ಇದು ಕೇವಲ ಯಶ್ ಒಬ್ಬನಿಂದ ಇಂತಹ ಕೆರೆ ಕಾಯಕ ಆಗೋದಿಲ್ಲ. ಕೆರೆ ಅಭಿವೃದ್ಧಿಗೆ ಎಲ್ಲರೂ ಮುಂದೆ ಬರಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿದರು.

    ಸತತ ಮೂರ್ನಾಲ್ಕು ವರ್ಷಗಳ ಬರದಿಂದ ಸಂಪೂರ್ಣವಾಗಿ 96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಅಲ್ಲದೇ ಸಂಪೂರ್ಣವಾಗಿ ಹೂಳು ಕೂಡಾ ತುಂಬಿಕೊಂಡಿತ್ತು. ಕೆರೆಯಲ್ಲಿ ತುಂಬಿರೋ ಹೂಳು ತಗೆಯಲು ಕಳೆದ ಫೆಬ್ರವರಿ ತಿಂಗಳಲ್ಲಿ ಹೂಳು ತಗೆಯಲು ಯಶ್ ದಂಪತಿ ಚಾಲನೆ ನೀಡಿದ್ದರು. ಅಂದು ನೀಡಿದ್ದ ಕೆರೆ ಕಾಯಕಕ್ಕೆ ಈಗ ಸಾರ್ಥಕತೆ ಸಿಕ್ಕಿದೆ. ಇದರಿಂದ ಸುಮಾರು 10 ಕ್ಕೂ ಹೆಚ್ಚು ಗ್ರಾಮಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ.

    ನಟ ಯಶ್ ಮಾಡಿರುವ ಈ ಕಾರ್ಯವನ್ನ ರೈತರು ಕೊಂಡಾಡುತ್ತಿದ್ದು, ಬರದ ನಾಡಿನ ಭಗೀರಥ ಬಂದಂಗ ಬಂದು ನಮ್ಮೂರು ಕೆರೆ ಅಭಿವೃದ್ಧಿ ಪಡಿಸಿದ್ದಾರೆ. ಈ ಬಾರಿ ಮಳೆಯೂ ಚೆನ್ನಾಗಿ ಆಯ್ತು, ಕೆರೆನೂ ತುಂಬಿದೆ ಅಂತ ಗ್ರಾಮಸ್ಥರು ಸಂತಸವನ್ನು ಹಂಚಿಕೊಂಡಿದ್ದಾರೆ.

    ಯಶೋಮಾರ್ಗದ ಮೂಲಕ ತಲ್ಲೂರು ಕೆರೆಯನ್ನು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ.

    https://www.youtube.com/watch?v=hKy92VBhRAY

    https://www.youtube.com/watch?v=JRN6dKohV5k

    https://www.youtube.com/watch?v=n1r_Ui38aCI