Tag: ರಾಮಂದಿರ

  • ನನ್ನ ಮಗನಿಗೆ ಟಿಕೆಟ್ ಪಡೆಯೋಕೆ ಪ್ರಯತ್ನಿಸುತ್ತಿದ್ದೇನೆ – ಈಶ್ವರಪ್ಪ

    ನನ್ನ ಮಗನಿಗೆ ಟಿಕೆಟ್ ಪಡೆಯೋಕೆ ಪ್ರಯತ್ನಿಸುತ್ತಿದ್ದೇನೆ – ಈಶ್ವರಪ್ಪ

    ಬೆಳಗಾವಿ: ಮುಂದಿನ ಚುನಾವಣೆಗೆ ನನ್ನ ಮಗನಿಗೆ ಟಿಕೆಟ್ ಪಡೆಯೋಕೆ ಪ್ರಯತ್ನಿಸುತ್ತಿದ್ದೇನೆ. ಟಿಕೆಟ್ ಕೊಟ್ಟರೇ ಹಾವೇರಿಯಿಂದ ಸ್ಪರ್ಧಿಸುತ್ತಾನೆ ಎಂದು ಕೆ.ಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.

    ಬೆಳಗಾವಿ (Belagavi) ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಮುಂದಿನ ಚುನಾವಣೆಗೆ ನನ್ನ ಮಗ ಕಾಂತೇಶ್‌ಗೆ ಟಿಕೆಟ್ ಪಡೆಯಬೇಕು ಅಂತ ಪ್ರಯತ್ನಿಸುತ್ತಿದ್ದೇನೆ. ಟಿಕೆಟ್ ಕೊಟ್ಟರೆ ಚುನಾವಣೆಗೆ ನಿಲ್ಲಿಸುತ್ತೇನೆ. ಹಾವೇರಿಯಿಂದ ಕಾಂತೇಶ್ ಸ್ಪರ್ಧೆ ಮಾಡ್ತಾನೆ ಎಂದು ಹೇಳಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ (Siddaramaiah) ಅವರು ಅಹಿಂದ ಅಂತ ಹೋಗುತ್ತಿದ್ದರು. ಆದ್ರೆ ಹಿಂದುಳಿದವರು, ದಲಿತರು ಕೈಬಿಟ್ಟರು, ಇನ್ನು ಉಳಿದಿರೋದು ಅಲ್ಪಸಂಖ್ಯಾತರು (Muslims) ಮಾತ್ರ. ಅವರನ್ನೇ ಬಳಸಿಕೊಂಡು ರಾಜಕೀಯ ಮಾಡಬೇಕು ಅನ್ನೋದು ಸಿದ್ದರಾಮಯ್ಯರ ಲೆಕ್ಕ. ದೇಶದ್ರೋಹಿಗಳಿಗೆ ತೃಪ್ತಿ ಆಗುವ ರೀತಿಯಲ್ಲಿ ಸಿದ್ದರಾಮಯ್ಯ ಮಾತಾಡ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಹೊಸವರ್ಷಾಚರಣೆಗೆ ಕ್ಷಣಗಣನೆ – ಇಂದು ರಾತ್ರಿಯಿಂದಲೇ ಬೆಂಗ್ಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್‌!

    ರಾಮಮಂದಿರ ಆಗಬಾರದು ಅಂತಾ ಕೋರ್ಟಿಗೆ ಹೋದವರು ಮೋದಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪಾಕಿಸ್ತಾನದವರು ಮೋದಿಯಂತಹ ಪ್ರಧಾನಿ ನಮಗೆ ಇರಬೇಕಿತ್ತು ಅಂತಾರೆ. ಆದ್ರೆ ಹಿಂದೂ ಮುಸ್ಲಿಂ ಒಟ್ಟಾಗಬಾರದು ಅನ್ನೋದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ಉದ್ದೇಶ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತ್ನಿ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದಕ್ಕೆ ಕೆಂಡವಾದ ಪತಿ – ಕತ್ತು ಕೊಯ್ದು ಬರ್ಬರವಾಗಿ ಹತ್ಯೆ

    ರಾಮಮಂದಿರ ಉದ್ಘಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಒಂದೊಂದೇ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದಕ್ಕೂ ಸಾರ್ಥಕವಾಯಿತು. ಭಾರತೀಯ ಸಂಸ್ಕೃತಿ ಉಳಿಸಬೇಕು ಎಂದು ಸಾವಿರಾರು ಜನ ಬಲಿದಾನ ಮಾಡಿದ್ರು, ಇದೀಗ ಅದೆಲ್ಲವೂ ಸಾರ್ಥಕವಾಗುತ್ತಿದೆ ಎಂದು ತಿಳಿಸಿದ್ದಾರೆ.

    ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಸ್ಟಂಟ್ ಮಾಡ್ತಿದೆ. ಮೊದಲು ಬಿಜೆಪಿಯವರು ರಾಮಮಂದಿರ ಕಟ್ಟಿಲ್ಲ ಅನ್ನುತ್ತಿದ್ದರು. ಈಗ ಪ್ರಿಯಾಂಕ್ ಖರ್ಗೆಯವರು ರಾಮಮಂದಿರ ಕಟ್ಟಾಯಿತು, ರಾಮರಾಜ್ಯ ಯಾವಾಗ? ಅಂತಾರೆ. ಇಂತಹ ಚಿಲ್ಲರೆಗಳಿಗೆ ಉತ್ತರ ಕೊಡಬೇಕಿಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

  • ಅಯೋಧ್ಯೆ ಮೃತ್ತಿಕೆ ಇಟ್ಟುಕೊಂಡು 30 ವರ್ಷದಿಂದ ಪೂಜೆ

    ಅಯೋಧ್ಯೆ ಮೃತ್ತಿಕೆ ಇಟ್ಟುಕೊಂಡು 30 ವರ್ಷದಿಂದ ಪೂಜೆ

    -ಹೋರಾಟದಲ್ಲಿ ಭಾಗವಹಿಸಿದ್ದ ಕೊಡಗಿನ ಸೋಮೇಶ್

    ಮಡಿಕೇರಿ: ಅಯೋಧ್ಯೆಯಲ್ಲಿಯೇ ರಾಮ ಮಂದಿರ ನಿರ್ಮಾಣವಾಗಬೇಕೆಂದು ನಡೆದಿರುವ ಹೋರಾಟಕ್ಕೆ ಕರ್ನಾಟಕದ ಕೊಡುಗೆ ಆಪಾರ. ಇಡೀ ಹೋರಾಟಕ್ಕೆ ವೈಚಾರಿಕತೆಯ ಆಯಾಮ ನೀಡಿದ್ದು ಸಹ ಇಲ್ಲಿಂದ. ರಾಮ ಜನ್ಮಭೂಮಿಯ ಹೋರಾಟ ಇಡೀ ದೇಶಕ್ಕೆ ಸಂಬಂಧಿಸಿದ್ದಾದರೂ, ದಕ್ಷಿಣ ಭಾರತದ ಮಟ್ಟಿಗೆ ಕರ್ನಾಟಕದ ಕೊಡುಗೆ ಹೆಚ್ಚಿನದ್ದಾಗಿದೆ. 1960 ರಿಂದ 2019 ರ ತನಕ ವಿವಿಧ ಆಯಾಮಗಳಲ್ಲಿ ರಾಜ್ಯದಲ್ಲಿ ಹೋರಾಟ ನಡೆದಿದೆ.

    ಲಕ್ಷಾಂತರ ಜನ ವಿವಿಧ ಸಂಕಲ್ಪಗಳ ಮೂಲಕ ಬೆಂಬಲ ನೀಡಿದ್ರು. ಅದರಲ್ಲೂ ಕೊಡಗಿನಲ್ಲಿಯೂ ರಾಮ ಜನ್ಮ ಭೂಮಿ ನಿರ್ಮಾಣವಾಗಬೇಕೆಂದು ಇಂದಿಗೂ ಶಬರಿಯಂತೆ ರಾಮ ಜನ್ಮ ಭೂಮಿಯಿಂದ ತಂದ ಮೃತ್ತಿಕೆ(ಮಣ್ಣು)ಯನ್ನು ತಂದ ಸೋಮೇಸ್ ಸುಮಾರು 30 ವರ್ಷಗಳಿಂದ ನಿತ್ಯ ಪೂಜೆ ಮಾಡುತ್ತಿದ್ದಾರೆ.

    ಮಂಜಿನ ನಗರಿ ಮಡಿಕೇರಿಯಲ್ಲಿ ನೆಲೆಸಿರುವ ಸೋಮೇಶ್ ರಾಮ ಜನ್ಮ ಭೂಮಿ ಹೋರಾಟದಲ್ಲಿ ಭಾಗವಹಿಸಿದ್ರು. 1990ರಲ್ಲಿ ಅಯೋಧ್ಯೆಕರಸೇವೆ ಸಮಯದಲ್ಲಿ ಉಂಟಾದ ಗಲಾಟೆ ವೇಳೆ ವಿಶ್ವ ಹಿಂದೂ ಪರಿಷತ್ತ್ ನ ಅಗಿನ ಪ್ರಧಾನ ಕಾರ್ಯದರ್ಶಿ ಅಶೋಕ್ ಸಿಂಘಾಲ್ ಅವರ ತಲೆಗೆ ಕಲ್ಲೇಟು ಬಿದ್ದಿತ್ತು. ರಕ್ತ ಹರಿಯುತ್ತಿರುವ ಸಂದರ್ಭದಲ್ಲಿ ಸಿಂಘಾಲ್ ಅವರ ತಲೆಗೆ ಬಟ್ಟೆಯನ್ನು ಒತ್ತಿ ಹಿಡಿದು ರಕ್ತವನ್ನು ತಡೆ ಹಿಡಿಯುವ ಕೆಲಸ ಅಂದಿನ ದಿನಗಳಲ್ಲಿ ಸೋಮೇಶ್ ಮಾಡಿದ್ದರು.

    1990 ಆಗಸ್ಟ್ 30: ಅಯೋಧ್ಯೆಯ ಹನುಮಾನ್ ಗಡಿಯಲ್ಲಿ ಗಲಾಟೆ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಸಿಂಘಾಲ್ ಅವರಿಗೆ ಕಲ್ಲೇಟು ಬಿದ್ದು ರಕ್ತಸ್ರಾವವಾಗುತ್ತಿತ್ತು. ಕೈನಲ್ಲಿದ್ದ ಟವೆಲ್ ತೆಗೆದು ಅವರ ತಲೆ ಹಿಡಿದು ಶ್ರೀರಾಮ ಅಸ್ಪತ್ರೆಗೆ ಕರೆದುಕೊಂಡು ಹೋದೆವು. ಒಂದು ದಿನ ಅಲ್ಲಿಯೇ ಉಳಿದು ಸ್ಥಳೀಯ ಸಂಘಟನೆಯ ಕಾರ್ಯಕರ್ತರ ಮನೆಗೆ ತೆರಳಿದೆವು. ಅಲ್ಲಿಯೇ ಒಂದು ದಿನ ಸಿಂಘಾಲ್ ಅವರಿಗೆ ಸಹಾಯಕನಾಗಿದ್ದೆ. ನವೆಂಬರ್ 5 ರವರೆಗೆ ಅಯೋಧ್ಯೆಯಲ್ಲಿದ್ದು, ನಂತರ ಶ್ರೀರಾಮನ ದರ್ಶನ ಪಡೆದು ಅಲ್ಲಿನ ಮೃತ್ತಿಕೆಯನ್ನು ಕರವಸ್ತ್ರದಲ್ಲಿ ಕಟ್ಟಿಕೊಂಡು ತಂದಿದೆ. ಈಗಲೂ ಈ ಮಣ್ಣಿಗೆ ದಿನ ನಿತ್ಯ ಪೂಜೆ ಸಲ್ಲಿಸುತ್ತಿದೇವೆ ಎಂದು ಸೋಮೇಶ್ ಹೇಳುತ್ತಾರೆ.

    ಈಗ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹಿಂದೂ ಧರ್ಮದ ಪ್ರತಿಯೊಬ್ಬರಿಗೂ ಖುಷಿಯಾಗುತ್ತಿದೆ. ಅದರಲ್ಲೂ ನಮ್ಮ ಹಿರಿಯರು ತ್ಯಾಗ ಬಲಿದಾನ ಮಾಡಿರುವುದು ಇಲ್ಲಿ ನಾವು ಸ್ಮರಿಸಬೇಕು ಎಂದು ಸೋಮೇಶ್ ತಿಳಿಸಿದ್ರು.

  • ಅಯೋಧ್ಯೆ ಭೂಮಿ ಪೂಜೆಗೆ ತಯಾರಾಗ್ತಿದೆ 1.25 ಲಕ್ಷ ಮಣ್ಣಿನ ಹಣತೆಗಳು!

    ಅಯೋಧ್ಯೆ ಭೂಮಿ ಪೂಜೆಗೆ ತಯಾರಾಗ್ತಿದೆ 1.25 ಲಕ್ಷ ಮಣ್ಣಿನ ಹಣತೆಗಳು!

    ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.

    ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

    ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್‍ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಭೂಮಿ ಪೂಜೆಯಂದು ದಯವಿಟ್ಟು ಅಯೋಧ್ಯೆಗೆ ಬರಬೇಡಿ- ಟ್ರಸ್ಟ್ ಮನವಿ

    ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್‍ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.  ಇದನ್ನೂ ಓದಿ: ಅಯೋಧ್ಯೆಗೆ ದಾಳಿ ಮಾಡಲು ಐಎಸ್‍ಐ ಸಂಚು – ಗುಪ್ತಚರ ಇಲಾಖೆ