Tag: ರಾಮಚಂದ್ರಾಪುರ ಮಠ

  • ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ಸರ್ಕಾರ ಆದೇಶ

    ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ಸರ್ಕಾರ ಆದೇಶ

    ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಮಹಾಬಲೇಶ್ವರ ದೇವಸ್ಥಾನದ ಆಡಳಿವನ್ನು ಮುಂದಿನ ಸೋಮವಾರದ ಒಳಗಾಗಿ ರಾಮಚಂದ್ರಪುರ ಮಠಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿತ್ತು. ಹೀಗಾಗಿ ರಾಜ್ಯ ಸರ್ಕಾವು ಮಹಾಬಲೇಶ್ವರ ದೇವಸ್ಥಾನದ ಚರ-ಸ್ಥಿರ ಆಸ್ತಿ, ದಾಖಲೆ ಹಾಗೂ ಆಭರಣಗಳು ರಾಮಚಂದ್ರಪುರ ಮಠಕ್ಕೆ ವರ್ಗಾವಣೆಗೆ ಅಧಿಕೃತ ಆದೇಶ ನೀಡಿದೆ.

    ಸುಪ್ರೀಂಕೋರ್ಟ್ ಹೇಳಿದ್ದೇನು?:
    ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಎ.ಎಂ.ಕನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯ ಪೀಠವು, ಕೋರ್ಟ್‍ನ ಈ ಹಿಂದಿನ ಆದೇಶಗಳಲ್ಲಿ ಯಾವುದೇ ಗೊಂದಲಗಳಿಲ್ಲ. ದೇವಸ್ಥಾನದ ಆಡಳಿತ ನಿರ್ವಹಣೆ ರಾಮಚಂದ್ರಾಪುರ ಮಠಕ್ಕೆ ಸೇರಬೇಕು ಎಂದು ಸ್ಪಷ್ಟವಾಗಿಯೇ ನಾವು ಹೇಳಿದ್ದೇವೆ. ಈಗಲೂ ಅದನ್ನೇ ಹೇಳುತ್ತಿದ್ದೇವೆ. ಸೋಮವಾರದೊಳಗೆ ಮಠಕ್ಕೆ ದೇವಸ್ಥಾನದ ಆಡಳಿತ ವಹಿಸಿಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

    ಏನಿದು ಪ್ರಕರಣ?
    2008ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಗೋಕರ್ಣದ ಐತಿಹಾಸಿಕ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ಬ್ರೇಕ್ ಹಾಕಿ, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಎಂದು ಆದೇಶ ಹೊರಡಿಸಿತ್ತು.

    ಹೈಕೋರ್ಟ್ ಆದೇಶ ಪ್ರಶ್ನಿಸಿ ಮಠದ ಪರವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು. ಕಳೆದ ಸೆಪ್ಟೆಂಬರ್ 7 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಆಗಸ್ಟ್ 10 ರಂದು ರಾಜ್ಯ ಹೈಕೋರ್ಟ್ ಹೊರಡಿಸಿದ್ದ ಅಂತಿಮ ಆದೇಶದ ನಂತರ ತಾನು ಹೊರಡಿಸಿರುವ ಮಧ್ಯಾಂತರ ತೀರ್ಪು ಮುಂದುವರಿಯಲಿದೆ ಎಂದು ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೋಕರ್ಣ ದೇಗುಲದ ಆಡಳಿತ ನಡೆಸ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಬ್ರೇಕ್

    ಗೋಕರ್ಣ ದೇಗುಲದ ಆಡಳಿತ ನಡೆಸ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಬ್ರೇಕ್

    ಬೆಂಗಳೂರು: ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಅಂತಾ ಆದೇಶ ಹೊರಡಿಸಿದೆ.

    ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅರವಿಂದ್ ಕುಮಾರ್ ಅವರ ಜಂಟಿ ಪೀಠವು, ಸರ್ಕಾರದ ದೇಗುಲ ಹಸ್ತಾಂತರದ ಆದೇಶವನ್ನು ರದ್ದು ಮಾಡಿದ್ದು, ದೇಗುಲದ ಸ್ಥಿರಾಸ್ಥಿ ಚರಾಸ್ಥಿ ಬ್ಯಾಂಕ್ ಅಕೌಂಟ್ ಸೇರಿದಂತೆ ಎಲ್ಲಾ ಆಸ್ತಿಯ ವಿವರವನ್ನು 2 ವಾರದೊಳಗೆ ಹೈಕೋರ್ಟ್ ಗೆ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಉತ್ತರ ಕನ್ನಡದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    2008ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಗೋಕರ್ಣದ ಐತಿಹಾಸಿಕ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಓದಿ: ಗೋಕರ್ಣ ದೇವಸ್ಥಾನ ವಿವಾದ: ಪೂಜಾ ಕಾರ್ಯಕ್ಕಾಗಿ 2 ಗುಂಪಿನ ಅರ್ಚಕರ ನಡುವೆ ವಾಗ್ವಾದ

    ಮಹಾಬಲೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಯ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಜಂಟಿ ಪೀಠವು ರದ್ದುಗೊಳಿಸಿದೆ. ಆದರೆ ಇತ್ತ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ರಾಮಚಂದ್ರಾಪುರ ಮಠದ ವಕೀಲರು ಕೋರಿಕೆ ವ್ಯಕ್ತಪಡಿಸಿದ್ದು, ಅದಕ್ಕೆ ಅರ್ಜಿದಾರರ ಪರ ವಕೀಲರಿಂದ ವಿರೋಧ ವ್ಯಕ್ತವಾಗಿದೆ.

    ಕಾರವಾರ ವರದಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಹಸ್ತಾಂತರ ಮಾಡಿದ ಹಿನ್ನಲೆಯಲ್ಲಿ ದೇವಸ್ಥಾನದ ಮುಂದೆ ಗೋಕರ್ಣ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಹಾಗೂ ಸ್ಥಳೀಯರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ಬಿ.ಎಸ್.ಯಡಿಯೂರಪ್ಪ ಸರ್ಕಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ರಾಮಚಂದ್ರಾಪುರ ಮಠಕ್ಕೆ ದೇವಸ್ಥಾನದ ಆಡಳಿತನ್ನು ಹಸ್ತಾಂತರಿಸಿತ್ತು. ಮಠದಿಂದ ಮುಜರಾಯಿ ಇಲಾಖೆಗೆ ಪುನಃ ಹಸ್ತಾಂತರಿಸಲು ಆದೇಶ ಬಂದಿದ್ದು ಸಂತಸ ತಂದಿದೆ. ಮಠದವರು ಅಪೀಲ್ ಹೋಗುವುದಾಗಿ ಹೇಳುತ್ತಿದ್ದಾರೆ. ಅವರು ಮುಂದೆ ಅಪೀಲ್ ಹೋದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ ಎಂದು ಬಾಲಚಂದ್ರ ದೀಕ್ಷಿತ್ ಪಬ್ಲಿಕ್ ಟಿ.ವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

  • ಶಾಸಕರನ್ನು ಸೆಳೆಯಲು ಸ್ವಾಮೀಜಿಗಳ ಮೊರೆ ಹೋದ ಬಿಎಸ್‍ವೈ!

    ಶಾಸಕರನ್ನು ಸೆಳೆಯಲು ಸ್ವಾಮೀಜಿಗಳ ಮೊರೆ ಹೋದ ಬಿಎಸ್‍ವೈ!

    ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರನ್ನು ಸೆಳೆಯಲು ಬಿ.ಎಸ್.ಯಡಿಯೂರಪ್ಪ ಅವರು ಸ್ವಾಮೀಜಿಗಳ ಮೊರೆ ಹೋಗಿದ್ದಾರೆ.

    ರಾಜ್ಯದ ಕೆಲವು ಲಿಂಗಾಯಿತ ಮಠದ ಸ್ವಾಮೀಜಿಗಳ ಜೊತೆ ಬಿಎಸ್‍ವೈ ಮಾತುಕತೆ ನಡೆಸಿದ್ದು, ಅವರ ಮೂಲಕ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ. ಹಿಂದೂ ಧರ್ಮದ ಉಳಿವಿಗೆ ಬಿಎಸ್‍ವೈ ಗೆ ಬೆಂಬಲ ನೀಡಬೇಕು ಎಂದು ಸ್ವಾಮೀಜಿಗಳು ಶಾಸಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

    ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್‍ಗೆ ಕರೆ ಮಾಡಿ ಬಿ.ಎಸ್.ಯಡಿಯೂರಪ್ಪಗೆ ಬೆಂಬಲ ಸೂಚಿಸಬೇಕೆಂದು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸ್ವಾಮೀಜಿಗಳು ತಮ್ಮ ಶಾಸಕರಿಗೆ ಕರೆ ಮಾಡಿ ಶನಿವಾರ ನಡೆಯಲಿರುವ ವಿಶ್ವಾಸ ಮತಯಾಚನೆಯ ವೇಳೆ ಬಿಎಸ್ ಯಡಿಯೂರಪ್ಪ ಅವರನ್ನು ಬೆಂಬಲಿಸಬೇಕು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

  • ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ: ತನಿಖೆಗೆ ಸಮಿತಿ ರಚಿಸಲು ಸರ್ಕಾರದ ಆದೇಶ

    ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ: ತನಿಖೆಗೆ ಸಮಿತಿ ರಚಿಸಲು ಸರ್ಕಾರದ ಆದೇಶ

    ಬೆಂಗಳೂರು: ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳ ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಸಿ. ಖುಂಟಿಆ ಮುಜುರಾಯಿ ಇಲಾಖೆಯ ಆಯುಕ್ತರಿಗೆ ಆದೇಶಿಸಿದ್ದಾರೆ.

    ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ಒಳಗೊಂಡಂತೆ ಮೂವರನ್ನು ನೇಮಕ ಮಾಡಿ ತನಿಖೆ ನಡೆಸಿ ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಅವರು ಸೂಚಿಸಿದ್ದಾರೆ.

    ರಾಮಚಂದ್ರಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು. 22 ಬ್ಯಾಂಕ್ ಅಕೌಂಟ್‍ಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರಕ್ಕೆ ತನಿಖೆ ನಡೆಸುವಂತೆ ಆದೇಶಿಸಿತ್ತು.

    ಮನವಿಯಲ್ಲಿ ಏನಿತ್ತು?
    ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಮತ್ತು ಸ್ವಾಮೀಜಿ ಮಠದಲ್ಲಿದ್ದು ಅಧಿಕಾರ ಚಲಾಯಿಸುವುದನ್ನು ತಡೆಯಬೇಕು ಎಂದು ಒತ್ತಾಯಿಸಿಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು 2016ರ ಏಪ್ರಿಲ್ 30 ರಂದು ಅಂದಿನ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೆ ಮನವಿ ಸಲ್ಲಿಸಿದ್ದರು.

    ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಶ್ರೀಗಳನ್ನು ಕೆಳಗಿಳಿಸಬೇಕು. ಮಠದ ಸ್ಥಿರ ಮತ್ತು ಚರಾಸ್ತಿ ಮೇಲೆ ನಿಯಂತ್ರಣ ಹೊಂದದಂತೆ ಸೂಚಿಸಬೇಕು. ಪೂಜಾ ಕಾರ್ಯವನ್ನು ಹೊರತು ಪಡಿಸಿ ಮಠದ ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳಲು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದರು.

  • ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

    ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

    – ರಾಮಚಂದ್ರಾಪುರ ಮಠದಿಂದ 24 ಲೋಡ್ ಮೇವು ಸರಬರಾಜು

    ಬೆಂಗಳೂರು: ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ. ರಾಜ್ಯದ ಜನುವಾರುಗಳಿಗೆ ಮೇವಿಲ್ಲ, ಅದ್ರೇ ಸರ್ಕಾರ ಮಾತ್ರ ಕಸಾಯಿಖಾನೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಗಿರಿನಗರದಲ್ಲಿರುವ ಶ್ರೀ ರಾಮಚಂದ್ರಾಪುರದ ಮಠದಲ್ಲಿ ಆಯೋಜನೆಗೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಗೋವುಗಳಿಗೆ ಮೇವಿನ ಸಮಸ್ಯೆ ಉಂಟಾಗಿದೆ. ಅಲ್ಲಿನ ಗೋಪಾಲಕರು ಯಾವುದೇ ವ್ಯಾಪಾರದ ದೃಷ್ಟಿ ಇಲ್ಲದೇ ಗೋವುಗಳನ್ನು ಸಾಕುತ್ತಿದ್ದಾರೆ. ಗೋವುಗಳ ಆಹಾರದ ಮೂಲ ಬೆಟ್ಟದ ಸಸ್ಯರಾಶಿಯಾಗಿದೆ. ಅದರೆ ಸರ್ಕಾರ ಬೆಟ್ಟಕ್ಕೆ ಬೇಲಿ ಹಾಕಿ ಗೋವುಗಳಿಗೆ ಮೇವಿಲ್ಲದಂತೆ ಮಾಡಿದೆ ಎಂದು ಆರೋಪಿಸಿದರು.

    ಮಲೆ ಮಹಾದೇಶ್ವರ ಬೆಟ್ಟದಲ್ಲಿ ದೇಶಿ ತಳಿಯ 4 ರಿಂದ 5 ಲಕ್ಷಕ್ಕೂ ಅಧಿಕ ಗೋವುಗಳಿದ್ದು ಇವುಗಳ ನಾಶಕ್ಕೆ ಸರ್ಕಾರ ಕಾರಣವಾಗುತ್ತಿದೆ. ಮೇವಿಲ್ಲದೆ ಗೋವುಗಳು ಕಸಾಯಿಖಾನೆಗೆ ಸೇರುವ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಆ ಕಾರಣದಿಂದ ಗೋವುಗಳ ರಕ್ಷಣೆಗೆ ಮಠ ಮುಂದಾಗಿದ್ದು 24ನೇ ಯೋಗ ಪಟ್ಟಾಭಿಷೇಕದ ಪ್ರಯುಕ್ತ 24 ಲಾರಿ ಲೋಡ್ ಮೇವನ್ನ ಸರಬರಾಜು ಮಾಡಲು ಮುಂದಾಗಿದ್ದು ಮಠದ ಭಕ್ತರು ಮತ್ತು ಶಿಷ್ಯರ ಸಹಕರದಿಂದ ಅಡಿಕೆ ಹಾಳೆಗಳನ್ನ ಪುಡಿ ಮಾಡಿ ಮೇವನ್ನ ಒದಗಿಸುವ ಕಾರ್ಯಕ್ಕೆ ಏಪ್ರಿಲ್ 2 ರಿಂದ ಚಾಲನೆ ನೀಡುತ್ತೇವೆ. ಜನರು ಇನ್ನೂ ಮೂರು ತಿಂಗಳು ಸರಳ ಜೀವನವನ್ನು ಅನುಸರಿಸಿ, ಉಳಿಸಿದ ಹಣವನ್ನ ಗೋವಿನ ರಕ್ಷಣೆಗೆ ನೀಡಿ ಎಂದು ರಾಘವೇಂದ್ರ ಶ್ರೀಗಳು ಕರೆಕೊಟ್ಟರು.